ಟಿಪ್ಪು ಜಯಂತಿಗೆ ಕೊಡವರ ಭರ್ಜರಿ ಗಿಫ್ಟ್ “ಕಾಂಗ್ರೆಸ್ ಮುಕ್ತ ಕೊಡಗು”
– ಅನಿರುದ್ಧ ಎಸ್.ಆರ್ , ಭದ್ರಾವತಿ
ಕೋಮುವಾದಿ”ಗಳಿಗೆ ಕೊಡವರ ಗಿಫ್ಟ್ – ಓಲೈಕೆ ರಾಜಕಾರಣವೆಂಬ ರಕ್ತ ಬೀಜಾಸುರನ ಸಂಹಾರ ಆರಂಭ
ಓಲೈಕೆ ರಾಜಕಾರಣ ಎಂಬ ರಕ್ತಬೀಜಾಸುರನನ್ನು ಸ್ವಚ್ಛಂದವಾಗಿ ಬೆಳೆಸಿ, ಒಡೆದಾಳುವ ನೀತಿಯೇ ತಮ್ಮ ಧ್ಯೇಯವೆಂಬಂತೆ ನಡೆದುಕೊಂಡು ಬರುತ್ತಿರುವ ನೆಹರೂ ಕುಟುಂಬ ಅಂದರೆ ಸೋ ಕಾಲ್ಡ್ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ರಾಷ್ಟ್ರ ರಾಜಕಾರಣದಲ್ಲಿ ಎಬ್ಬಿಸಿರುವ ಹೊಲಸನ್ನು ತೊಳೆಯಲು ಇನ್ನೆಷ್ಟು ದಶಕಗಳು ಬೇಕೋ. ಆದರೆ, ತನ್ನ ಸ್ವಾರ್ಥಕ್ಕಾಗಿ ಅಮಾಯಕರನ್ನು ಬಲಿ ಕೊಡುವ, ಅಸಹಾಕಯಕರನ್ನೇ ಮೆಟ್ಟಿಲನ್ನಾಗಿ ಮಾಡಿಕೊಳ್ಳುವ ಇವರ ಪರಿಯಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರತ ಮಾನ ಮೂರಾಬಟ್ಟೆಯಾಗಿದೆ.
ಆರಂಭದಲ್ಲಿ ಹೇಳಿದ ರಕ್ತಬೀಜಾಸುರನ ಪ್ರಸ್ತಾಪಕ್ಕೆ ಉದಾಹರಣೆ ಟಿಪ್ಪು ಜಯಂತಿಯ ಅಂಗವಾಗಿ ಮಡಿಕೇರಿಯಲ್ಲಿ ನಡೆದ ಮೆರವಣಿಗೆ ಹಾಗೂ ಅದರ ಮೂರ್ತ ರೂಪ ಗಲಭೆ. ಹಿಂದೂ ಸಂಘಟನೆ ಹಾಗೂ ರಾಜ್ಯದ ನಾಗರಿಕರ ತೀವ್ಯ ವಿರೋಧದ ನಡೆವೆಯೂ ಅಲ್ಪಸಂಖ್ಯಾತರ ಓಲೈಕೆಗಾಗಿ ಟಿಪ್ಪು ಜಯಂತಿಗೆ ಅನುಮತಿ ನೀಡಿದ ಸಿದ್ಧರಾಮಯ್ಯ ಸರ್ಕಾರದ ನೀಚ ಕೃತ್ಯಕ್ಕೆ ವಿಎಚ್ ಪಿ ಮುಖಂಡ ದೇವದಂಡ ಕುಟ್ಟಪ್ಪ ಬಲಿಯಾಗಿದ್ದರು. ಅಂದು ನಡೆದ ಗಲಭೆಯಲ್ಲಿ ಎಲ್ಲಿಂದಲೋ ಬಂದವರು ಅಟ್ಟಹಾಸ ಮೆರೆದು, ತಮ್ಮ ವಿಕೃತ ಮನಸ್ಥಿತಿಯ ಸುಖಕ್ಕಾಗಿ ಅಮಾಯಕನನ್ನು ಕೊಂದರು. ಪ್ರಕರಣ ಕುರಿತಂತೆ ಇತ್ತೀಚಿಗೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದು, ಕುಟ್ಟಪ್ಪ ಸಾವು ಆಕಸ್ಮಿಕವಲ್ಲ ಕೊಲೆ ಎನ್ನುವುದನ್ನು ಸ್ಪಷ್ಟೀಕರಿಸಿದ್ದರು.
ಯೋಗದಿನಕ್ಕಾಗಿ ಮೋದಿ ಸರಕಾರದ ವಿಶೇಷ ಶವಾಸನ
– ರೋಹಿತ್ ಚಕ್ರತೀರ್ಥ
ನಮ್ಮ ದೇಶ ಜಾತ್ಯತೀತ ದೇಶ. ಆದರೆ ಹೆಜ್ಜೆಹೆಜ್ಜೆಗೂ ನಿಮಗಿಲ್ಲಿ ನಿಮ್ಮ ಜಾತಿಯ ನೆನಪು ಅಳಿಯದಂತೆ ನೋಡಿಕೊಳ್ಳಲಾಗುತ್ತದೆ. ಶಾಲೆಗೆ ಸೇರುವ ಮೊದಲ ದಿನ ಅಡ್ಮಿಷನ್ ಮಾಡಿಕೊಳ್ಳುವ ಮುಖ್ಯೋಪಾಧ್ಯಾಯರು ಹೆಸರು, ಅಪ್ಪನ ಹೆಸರು, ಜಾತಿ ಎಂದು ಬರೆದ ಅಪ್ಲಿಕೇಶನ್ನನ್ನು ಕಣ್ಣಮುಂದೆ ಹಿಡಿಯುತ್ತಾರೆ. ಪರೀಕ್ಷೆ ಬರೆಯಲು ಅರ್ಜಿ ತುಂಬುವಾಗ ಯಾವ ಜಾತಿ ಎಂದು ಕೆದಕಿ ವಿಚಾರಿಸಿಕೊಂಡು ನೀವು ಕಟ್ಟಬೇಕಾದ ಫೀಸು ನಿರ್ಧರಿಸುತ್ತಾರೆ. ಕೆಲಸಕ್ಕೆ ಹೋಗುವಾಗ ನಿಮ್ಮ ಪದವಿ ಸರ್ಟಿಫಿಕೇಟು ಯಾರಿಗೆ ಬೇಕು ಸ್ವಾಮಿ! ನಾಯಿಯೂ ಮೂಸುವುದಿಲ್ಲ ಅದನ್ನು! ನೀವು ಯಾವ ಜಾತಿ ಹೇಳಿ, ಅದರ ಆಧಾರದ ಮೇಲೆ ನಿಮಗೆ ಕೆಲಸ ಸಿಗುತ್ತದೋ ಇಲ್ಲವೋ ಎನ್ನುವುದು ನಿರ್ಧಾರಿತವಾಗುತ್ತದೆ. ಈ ದೇಶದಲ್ಲಿ ಶಿಕ್ಷಣ, ಉದ್ಯೋಗ, ಮದುವೆ, ಮುಂಜಿ, ಸಾವು, ತಿಥಿಗಳೆಲ್ಲ ನಿರ್ಧಾರವಾಗುವುದು ನಿಮ್ಮ ಜಾತಿಯ ಮೇಲೆ. ಯಾಕೆಂದರೆ ನಾವು ಬದುಕುತ್ತಿರುವುದು ಜಾತ್ಯತೀತ ದೇಶದಲ್ಲಿ ನೋಡಿ!
ಜೂನ್ 21ರಂದು ವಿಶ್ವ ಯೋಗದಿನ ಆಚರಿಸಬೇಕು ಎಂದು ನಮ್ಮ ದೇಶದ ಪ್ರಧಾನಿ ಕರೆಕೊಟ್ಟರು. ಅವರು ಅಲ್ಲಿ ಅದನ್ನು ಹೇಳಿ ಮುಗಿಸಿದ್ದರೋ ಇಲ್ಲವೋ ಇತ್ತ ಜಾತ್ಯತೀತ ಕೋಮುಸೌಹಾರ್ದ ಬಳಗದ ಬುಜೀಗಳಿಗೆ ಕಡಿತ ಶುರುವಾಯಿತು. ಈ ಮೋದಿ ಮಹಾ ಜಾತೀವಾದಿ. ಹಿಂದೂಗಳ ಯೋಗವನ್ನು ಸನಾತನಿಗಳಂತೆಯೇ ಜಾತಿಧರ್ಮಗಳಿಗೆ ಅತೀತರಾದ ಪ್ರಗತಿಪರ ಅಲ್ಪಸಂಖ್ಯಾಕ ಪಂಗಡಗಳಿಗೂ ವಿಸ್ತರಿಸುವ ಯೋಜನೆ ಹಾಕಿದ್ದಾರೆ ಎಂದು ಅವರಿಗೆ ಗುಮಾನಿ ಬಂತು. ಅಷ್ಟಲ್ಲದೆ ಜೂನ್ ಇಪ್ಪತ್ತೊಂದು – ಮುಸ್ಲಿಮರ ಹಬ್ಬ ಬೇರೆ. ಹೋಗಿಹೋಗಿ ಆ ದಿನ ಯೋಗ ಮಾಡುವುದೇ? ಸಾಧ್ಯವೇ ಇಲ್ಲ ಎಂದು ಈ ಅಲ್ಪಸಂಖ್ಯಾತ ಮತದ ನಾಯಕ ಓವೈಸಿ ಕೂಗಿದ. ಅವನ ಹಿಂದೆ ಅವನ ಇಡೀ ಗಾಂಪರ ಗುಂಪೇ ಎದ್ದುನಿಲ್ಲುವ ಸೂಚನೆ ಸಿಕ್ಕಿತು. ಕೇಂದ್ರ ಸರಕಾರ ಈಗ ನಿಜವಾಗಿಯೂ ಇಲ್ಲದ ಇಕ್ಕಳದಲ್ಲಿ ತಲೆ ಸಿಕ್ಕಿಸಿಕೊಂಡಿದ್ದೇನೆಂದು ಸುಳ್ಳೇ ಭಾವಿಸಿ ನಡುಗಿತು. ಯೋಗದಿನ ಮಾಡೋಣ, ಆದರೆ ಸೂರ್ಯನಮಸ್ಕಾರ ಕೈಬಿಡೋಣ ಎಂದು ಠರಾವು ಮಂಡಿಸಿತು. ಮೋದಿ ಹೇಳಿಕೊಟ್ಟಂತೆ ಅವರ ಸರಕಾರದ ಎಲ್ಲ ಮಂತ್ರಿಗಳೂ “ಸೂರ್ಯನಮಸ್ಕಾರ ಕಠಿಣ ಆಸನ. ಹಾಗಾಗಿ, ಅದನ್ನು ಬಿಟ್ಟು ಮಿಕ್ಕಿದ್ದನ್ನು ಮಾಡಲು ಚಿಂತನೆ ನಡೆಸಿದ್ದೇವೆ” ಎಂದು ತಿಪ್ಪೆ ಸಾರಿಸಿದರು.
ಮತ್ತಷ್ಟು ಓದು
ಜಾತೀಯತೆ: ಏನು? ಎತ್ತ?
– ಡಾ. ಶ್ರೀಪಾದ ಭಟ್
ಸೆಪ್ಟೆಂಬರ್ 13, 2007ರಂದು 11 ನೇ ಪಂಚವಾರ್ಷಿಕ ಯೋಜನೆ ಕುರಿತ ಯೋಜನಾ ಆಯೋಗದ ಸಮಾಲೋಚನಾ ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ “ಸ್ಪೆಶಲ್ ಅಟೆನ್ಷನ್ ವುಡ್ ನೀಡ್ ಟು ಬಿ ಪೇಯ್ಡ್ ಟು ಡಿಸ್ಟ್ರಿಕ್ಟ್ಸ್ ವಿತ್ ಎಸ್ಸಿ, ಎಸ್ಟಿ, ಒಬಿಸಿ ಆಂಡ್ ಮೈನಾರಿಟಿ ಕಾನ್ಸನ್ಟ್ರೇಶನ್’’ ಎಂದು ಭಾಷಣ ಮಾಡಿದ್ದರು. ಅಲ್ಪ ಸಂಖ್ಯಾತರಿಗೆ ಸರ್ಕಾರಿ ಯೋಜನೆಯಲ್ಲಿ ಸಿಂಹಪಾಲು ದೊರೆಯಬೇಕು ಎಂದೂ ಅವರು ಹೇಳಿದ್ದರು. ಸಿಂಗ್ ಮೂಲತಃ ಅರ್ಥಶಾಸ್ತ್ರಜ್ಞರು, ರಾಜಕಾರಣಿಯಲ್ಲ. ಆದರೆ ಅವರ ಧಾಟಿ ಮತಬ್ಯಾಂಕಿನ ಮೇಲೆ ಕಣ್ಣಿಟ್ಟ ಯಾವ ರಾಜಕಾರಣಿಗೂ ಕಡಿಮೆ ಇರಲಿಲ್ಲ. ಅಂದಿನ ಸಭೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಹಿರಿಯ ಅಧಿಕಾರಿಗಳು ಎಲ್ಲ ಹಾಜರಿದ್ದರು. ಸರ್ಕಾರದ ಯೋಜನೆಯ ಲಾಭ ಬಡವರಿಗೆ ದೊರೆಯಬೇಕು ಎಂದು ಹೇಳುವ ಬದಲು ಅಲ್ಪ ಸಂಖ್ಯಾತರಿಗೆ ದೊರೆಯಬೇಕು ಎಂದು ಅವರು ಹೇಳಿದ್ದರಲ್ಲಿ ಅಭಿವೃದ್ಧಿಗಿಂತಲೂ ಮತಗಳಿಕೆಯ ವಾಸನೆ ಢಾಳಾಗಿ ರಾಚಿದರೆ ಅದರಲ್ಲಿ ಅವರ ತಪ್ಪಿಲ್ಲ. ಕರ್ನಾಟಕದಲ್ಲಿ ಶಾದಿ ಭಾಗ್ಯ ಯೋಜನೆ ಕುರಿತ ಸರ್ಕಾರದ ನಿಲುವನ್ನು ಕೂಡ ಇದೇ ದೃಷ್ಟಿಯಲ್ಲಿ ನೋಡಬಹುದು. ಆ ಸರ್ಕಾರ, ಈ ಸರ್ಕಾರ ಎಂದಲ್ಲ ಎಲ್ಲ ಸರ್ಕಾರಗಳ ಯೋಜನೆಗಳೂ ಮತಗಳಿಕೆಯತ್ತ ನೆಟ್ಟಿರುವುದರಿಂದ ಅವರ ಘೋಷಣೆಗಳು ಹೀಗಾಗಿಬಿಡುತ್ತವೆ ಅಷ್ಟೆ.