ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕನ್ನಡಿಗ’

19
ಜನ

ಕನ್ನಡ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಪಾಲ್ಗೊಳ್ಳುವ ಆಸೆಯೇ?

ಓಂ ಶಿವಪ್ರಕಾಶ್

ಪ್ರತಿಯೊಬ್ಬ ಕನ್ನಡಿಗನಲ್ಲೂ ಕನ್ನಡಕ್ಕೆ ದುಡಿಯುವ ಬಲವಾದ ಆಸೆಯಿರುತ್ತದೆ. ಅಕ್ಷರ ಕಲಿಯುವ ದೆಸೆಯಿಂದ ಹಿಡಿದು, ದುಡಿದು ದೊಡ್ಡವನಾಗುವವರೆಗೂ ಹೇಗೆ ತನ್ನ ಆಸೆಯನ್ನು ಈಡೇರಿಸಿಕೊಳ್ಳುವುದೆಂಬ ಪ್ರಶ್ನೆ ಮನಸ್ಸಿನಲ್ಲಿ ಸುಳಿಯುತ್ತಲೇ ಇರುತ್ತದೆ. ಮಾಹಿತಿ ತಂತ್ರಜ್ಞಾನದ ಕ್ಷೇತ್ರದಲ್ಲಂತೂ, ಅದನ್ನು ಬಳಸುವ ಸಾಮಾನ್ಯನಿಂದ ಹಿಡಿದು, ತಂತ್ರಜ್ಞಾನದ ಜೊತೆಗೇ ದಿನದೂಡುವ ತಂತ್ರಜ್ಞನವರೆಗೂ ಎಲ್ಲರಿಗೂ ಕನ್ನಡ ಬಳಸುವ ಮತ್ತು ಬೆಳೆಸುವ ಆಸೆ ಖಂಡಿತ ಇರುತ್ತದೆ. ಅಂತಹ ಆಸೆಗಳನ್ನು ಮತ್ತೆ ಚಿಗುರಿಸಿ, ಮಾಹಿತಿ ತಂತ್ರಜ್ಞಾನದ ಬಳಕೆದಾರನ ದಿನನಿತ್ಯದ ಪ್ರಶ್ನೆಗಳನ್ನು ಉತ್ತರಿಸುತ್ತಾ, ಕನ್ನಡದ ತಾಂತ್ರಿಕ ಬೆಳವಣಿಗೆಗೆ ನಾಂದಿಯಾಗಲು ನಾವು ಇಡಬೇಕಾದ ‘ಹೆಜ್ಜೆಗಳು” ಅನೇಕ.

ದೈನಂದಿನ ಬದುಕಿನಲ್ಲಿ ತಂತ್ರಜ್ಞಾನದ ಮುಖೇನ ಕನ್ನಡದಲ್ಲೇ ವ್ಯವಹರಿಸಬಹುದೇ? ಕನ್ನಡದ ತಾಂತ್ರಿಕ ಬೆಳವಣಿಗೆ ಹೇಗೆ ಸಾಧ್ಯ? ಅದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಬಗೆ ಹೇಗೆ? ಕನ್ನಡ ಭಾಷಾ ತಂತ್ರಜ್ಞಾನ ಬೆಳವಣಿಗೆಯ ತೊಡಕುಗಳ ನಿವಾರಣೆ ಸಾಧ್ಯವೇ? ತಂತ್ರಾಂಶಗಳು ನಡೆಯಬೇಕಿರುವ ಹಾದಿಯ ಕಿರು ಪರಿಚಯ ಎಲ್ಲಿ ಸಿಗಬಹುದು? ಇದಕ್ಕೊಂದು ಸಮುದಾಯವಿದೆಯೇ? ಈ ಸಮುದಾಯ ಅಭಿವೃದ್ದಿಯ ಪರಿಕಲ್ಪನೆ ಏನು? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಸಲುವಾಗಿ ‘ಹೆಜ್ಜೆ’ ರೂಪಿತಗೊಂಡಿದೆ.

ಮಾಹಿತಿ ತಂತ್ರಜ್ಞಾನದ ವಿವಿಧ ಸ್ತರಗಳಲ್ಲಿ ಕನ್ನಡದ ಬೆಳವಣಿಗೆಗೆ ಬೇಕಾದ ವಿಷಯಗಳ ಬಗ್ಗೆ ಅನುಭವಿ ತಜ್ಞರು, ತಂತ್ರಜ್ಞರು ತಮ್ಮ ಅನುಭವವನ್ನು ಹಂಚಿಕೊಳ್ಳುವುದರ ಮೂಲಕ ಪ್ರಾರಂಭವಾಗುವ ಈ ಕಾರ್ಯಕ್ರಮ, ಮೇಲೆ ಹೇಳಿದ ಅನೇಕ ಪ್ರಶ್ನೆಗಳಿಗೆ ಉತ್ತರವನ್ನು ಪಡೆದುಕೊಳ್ಳುವ ‘ಹೆಜ್ಜೆ’ಗಳ ಹಾದಿಯನ್ನು ನಿಮ್ಮ ಮುಂದೆ ತೆರೆಯಲಿದೆ.

ಬನ್ನಿ ನಮ್ಮೊಡನೆ ಜೊತೆಜೊತೆಯಾಗಿ ಹೆಜ್ಜೆ ಹಾಕಿ, ನಿಮ್ಮ ಬರುವಿಕೆಯನ್ನು ಇಂದೇ ಕಾಯ್ದಿರಿಸಿ

* * * * * *

ಚಿತ್ರಕೃಪೆ : hejje.sanchaya.net

27
ಡಿಸೆ

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಉತ್ತಮ ಭವಿಷ್ಯ ಇಲ್ಲವೇ?

-ರಾವ್ ಎವಿಜಿ 

ಇಲ್ಲ ಎಂದು ಬಹುಮಂದಿ ನಂಬಿರುವುದರಿಂದ ತಮ್ಮ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಹಿಂಜರಿಯುವ ಜನ್ಮದಾತೃಗಳ ಸಂಖ್ಯೆ ಹೆಚ್ಚುತ್ತಿದೆ. ತತ್ಪರಿಣಾಮವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ಶಾಲೆಗಳು, ವಿಶೇಷತಃ ಸರ್ಕಾರೀ ಶಾಲೆಗಳು ದುಸ್ಥಿತಿಯಲ್ಲಿವೆ. ಈ ಪರಿಸ್ಥಿತಿಗೆ ಕಾರಣ?

ನಾನು ಎಸ್ ಎಸ್ ಎಲ್ ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಸರ್ಕಾರೀ ಶಾಲೆಯಲ್ಲಿ ಓದಿದವನು. ಪಿ ಯು ಸಿ ಮತ್ತು ಆನಂತರದ ಶಿಕ್ಷಣ ಪಡೆದದ್ದು ಇಂಗ್ಲಿಷ್ ಮಾಧ್ಯಮದಲ್ಲಿ. ಆಗ ಕೊಡಗಿನಲ್ಲಿ ಎಲ್ಲರೂ ಶಿಕ್ಷಣ ಪಡೆಯುತ್ತಿದ್ದದ್ದೇ ಹೀಗೆ. ತಮ್ಮ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕೆಂಬ ಹಂಬಲವೇ ಆಗಲಿ, ಖಾಸಗಿ ಶಾಲೆಗಳು ಸರ್ಕಾರೀ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತವೆ ಎಂಬ ನಂಬಿಕೆಯೇ ಆಗಲಿ ಅಂದಿನ ಜನ್ಮದಾತೃಗಳಿಗೆ ಇರಲಿಲ್ಲ. ವಾಸ್ತವವಾಗಿ, ಎಸ್ ಎಸ್ ಎಲ್ ಸಿ ವರೆಗೆ ಇಂಗ್ಲಿಷ್ ಮಾಧ್ಯಮ, ಪಿ ಯು ಸಿ ಮತ್ತು ಆನಂತರದ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಆಗ ಅಲ್ಲಿ ಇರಲೇ ಇಲ್ಲ. (ಎಸ್ ಎಸ್ ಎಲ್ ಸಿ ವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಮೈಸೂರು, ಮಂಗಳೂರು, ಬೆಂಗಳೂರುಗಳಂಥ ದೊಡ್ಡ ನಗರಗಳಲ್ಲಿ ಲಭ್ಯವಿತ್ತಂತೆ) ನನಗೆ ತಿಳಿದ ಮಟ್ಟಿಗೆ ಕೊಡಗಿನಲ್ಲಿ ಆಗ ಇದ್ದದ್ದು ಎರಡೋ ಮೂರೋ ಕ್ರಿಶ್ಚಿಯನ್ ಆಡಳಿತದ ಖಾಸಗಿ ಪ್ರೌಢಶಲೆಗಳು. ಖಾಸಗಿ ಕಾಲೇಜುಗಳು ಇರಲೇ ಇಲ್ಲ.  ಈ ಪದ್ಧತಿಯಲ್ಲಿ ಶಿಕ್ಷಣ ಪಡೆದ ನಾನು ಏನಾಗ ಬಯಸಿದ್ದೆನೋ ಅದೇ ಆದೆ. ಈ ಪದ್ಧತಿಯಲ್ಲಿ ಶಿಕ್ಷಣ ಪಡೆದವರು ಎಂಜಿನಿಯರುಗಳೂ ಡಾಕ್ಟರುಗಳೂ ಆಗುತ್ತಿದ್ದರು. ಎಂದೇ, ೧ ನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಆವಶ್ಯಕತೆ ಇದೆ ಎಂದು ಯಾರೂ ತಿಳಿದಿರಲಿಲ್ಲ. ಎಸ್ ಎಸ್ ಎಲ್ ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಸರ್ಕಾರೀ ಶಾಲೆಗಳಲ್ಲಿ ವ್ಯಾಸಂಗ ಮಾಡಿದ್ದರಿಂದ ಯಾರ ಭವಿಷ್ಯವೂ ಅಂದು ಹಾಳಾದದ್ದು ನನಗೆ ತಿಳಿದಿಲ್ಲ. ಆಗ ಏಕೆ ಹಾಗಿತ್ತು?

ಮತ್ತಷ್ಟು ಓದು »