ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕನ್ನಡ’

28
ಮೇ

ಸ್ವದೇಶ, ಸ್ವಧರ್ಮ, ಸ್ವಾತಂತ್ರ್ಯಗಳ ನೈಜದನಿ ವೀರ್ ಸಾವರ್ಕರ್

ಲೇಖಕರು : ಬಿ ಎಸ್‌ ಜಯಪ್ರಕಾಶ ನಾರಾಯಣ
ಪತ್ರಕರ್ತರು, ಖ್ಯಾತ ಅನುವಾದಕರು
ವೈಭವ್‌ ಪುರಂದರೆಯವರ ವೀರ್‌ ಸಾವರ್ಕರ್‌ ಪುಸ್ತಕವನ್ನು ಕನ್ನಡಕ್ಕೆ ತಂದಿದ್ದಾರೆ.

ಸಾವರ್ಕರ್ ಜನ್ಮದಿನ (ಮೇ 28)
ವಿನಾಯಕ ದಾಮೋದರ ಸಾವರ್ಕರ್ ಎನ್ನುವ ಹೆಸರೇ ಮೈಮನಗಳಲ್ಲಿ ದೇಶಹಿತದ ಸಂಕಲ್ಪವನ್ನು ತಾಳುವಂತೆ ಮಾಡುವಂಥದ್ದು! ಇಂದು ಅವರಿದ್ದಿದ್ದರೆ 140ನೇ ವಸಂತಕ್ಕೆ ಕಾಲಿಡುತ್ತಿದ್ದರು. ವ್ಯವಸ್ಥಿತ ಅಪಪ್ರಚಾರ ಮತ್ತು ಕ್ಷುಲ್ಲಕ ಶಕ್ತಿಗಳು ಸೃಷ್ಟಿಸಿರುವ ವಿಸ್ಮೃತಿಯಲ್ಲಿ ಸಾವರ್ಕರ್ ಅವರ ಕ್ಷಾತ್ರತೇಜಸ್ಸಿಗೆ ಅನ್ಯಾಯವೆಸಗಲಾಗಿದೆ. ಅವರ ಹುಟ್ಟುಹಬ್ಬದ ನೆಪದಲ್ಲಿ ಇಲ್ಲಿ ಅನಾವರಣಗೊಂಡಿದೆ, ಸಾವರ್ಕರ್ ಅವರ ಸಾಚಾ ಕಥನ!

ಸ್ವತಂತ್ರ ಭಾರತದ ಇತಿಹಾಸದಲ್ಲಿ ತುಂಬಾ ವ್ಯವಸ್ಥಿತವಾಗಿ ಹಲವು ವಿಸ್ಮೃತಿಗಳನ್ನೂ ಹೇವರಿಕೆಗಳನ್ನೂ ಸೃಷ್ಟಿಸಲಾಗಿದೆ. ಇದಕ್ಕಾಗಿ, ನಮ್ಮನ್ನು ಬಹುಕಾಲ ಆಳಿದ ಸರಕಾರಗಳು ಸೆಕ್ಯುಲರಿಸಂ, ಧರ್ಮನಿರಪೇಕ್ಷತೆ, ಮೈನಾರಿಟಿಯಿಸಂ ಇತ್ಯಾದಿ ವಿಭ್ರಮೆಗಳನ್ನು ಜನರ ಮನಸ್ಸಿನಲ್ಲಿ ಬಿತ್ತಿವೆ; ತಮ್ಮ ಹಿಡನ್ ಅಜೆಂಡಾ ಸಾಧಿಸಲು ಅವು ರಾಜಕೀಯ ಅಧಿಕಾರ, ಅಕಾಡೆಮಿಕ್ ಸೌಖ್ಯ, ತಾವೇ ಹುಟ್ಟುಹಾಕಿದ ನೂರಾರು ಸಂಘ ಸಂಸ್ಥೆಗಳು/ವಿಶ್ವವಿದ್ಯಾಲಯಗಳನ್ನು ನಿರ್ಲಜ್ಜವಾಗಿ ದುರ್ಬಳಕೆ ಮಾಡಿಕೊಂಡಿವೆ. ಇಷ್ಟೇ ಅಲ್ಲ, ಈ ಕುತಂತ್ರಗಳ ಮೂಲಕ ಸ್ವಧರ್ಮ ಮತ್ತು ಸ್ವದೇಶಗಳ ಬಗ್ಗೆ ಅಸಹ್ಯದ/ಕೀಳರಿಮೆಯ ಭಾವನೆ ಬರುವಂತೆ ಮಾಡುವಲ್ಲಿ ಈ ಶಕ್ತಿಗಳು ನಿರತವಾಗಿದ್ದವು. ಜತೆಯಲ್ಲೇ, ಭಾರತದ ಚರಿತ್ರೆಯ ಕ್ಷಾತ್ರ ತೇಜಸ್ಸಿನ ಉಜ್ಜ್ವಲ ಅಧ್ಯಾಯಗಳನ್ನು ಮರೆಮಾಚುವ ವಿಕೃತಿಯನ್ನು ಇವು ಮೈಗೂಡಿಸಿಕೊಂಡಿದ್ದವು. ದುರಂತವೆಂದರೆ, ನಾಲ್ಕೈದು ದಶಕಗಳ ಕಾಲ ಈ ʼಅತೀ ಬುದ್ಧಿವಂತಿಕೆ’ಯ ಮತ್ತು ಆತ್ಮನಾಶಕವಾದ ಕೆಲಸಗಳೆರಡೂ ಪ್ರಶ್ನಾತೀತವಾಗಿದ್ದವು! 

ಭಾರತದ ಇತಿಹಾಸದಲ್ಲಿ ಇಂತಹ ವ್ಯವಸ್ಥಿತ ಅನ್ಯಾಯಕ್ಕೊಳಗಾದವರಲ್ಲಿ `ಸ್ವಾತಂತ್ರ್ಯವೀರ’ ವಿನಾಯಕ ದಾಮೋದರ ಸಾವರ್ಕರ್ ಕೂಡ ಒಬ್ಬರು. ಮಹಾರಾಷ್ಟ್ರದ ನಾಸಿಕ್ ಬಳಿಯ ಭಾಗೂರಿನಲ್ಲಿ ತಮ್ಮ ಚಿಕ್ಕಂದಿನಲ್ಲೇ `ಮಿತ್ರಮೇಳ’ವನ್ನು ಕಟ್ಟುವ ಮೂಲಕ, ಸಾವರ್ಕರ್ ದೇಶಾಭಿಮಾನದ ಎರಕದಲ್ಲಿ ಬೆಳೆದು ಬಂದವರು. ವಯಸ್ಕರಾದ ಮೇಲೆ, ಆ ಕಾಲದ ಎಲ್ಲ ಪ್ರತಿಭಾವಂತರಂತೆಯೇ ಲಂಡನ್ನಿಗೆ ಹೋಗಿ ಬ್ಯಾರಿಸ್ಟರ್ ಪದವಿ ಪಡೆದ ಅವರು, ತಮ್ಮ ಹೆಚ್ಚಿನ ಸಮಕಾಲೀನರಂತೆ ಲೌಕಿಕ ಸುಖದ ಹಾದಿಯಲ್ಲಿ ಹೋಗಲಿಲ್ಲ. ಬದಲಿಗೆ, ಅದನ್ನು ಪ್ರಜ್ಞಾಪೂರ್ವಕವಾಗಿ ನಿರಾಕರಿಸಿ, ಬ್ಯಾರಿಸ್ಟರ್ ಪದವಿಗೆ ಓದುತ್ತಿದ್ದ ದಿನಗಳಲ್ಲೇ ದೇಶದ ಸ್ವಾತಂತ್ರ್ಯಪ್ರಾಪ್ತಿಗಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟದ ಮಾರ್ಗದಲ್ಲಿ ಹೊರಟರು. ತಮ್ಮ ಪ್ರಖರ ವಿಚಾರಗಳ ಮೂಲಕ ಮದನ್ ಲಾಲ್ ಧಿಂಗ್ರಾ ತರಹದ ಕ್ರಾಂತಿಕಾರಿಗಳನ್ನು ಅವರು ರೂಪಿಸಿದರು. ಲಂಡನ್ನಿನಲ್ಲಿದ್ದ `ಇಂಡಿಯಾ ಹೌಸ್’ ಅನ್ನು ತಮ್ಮ ಚಟುವಟಿಕೆಗಳ ಆಡುಂಬೊಲವನ್ನಾಗಿ ಮಾಡಿಕೊಂಡು, ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದರು. ಅದಕ್ಕೂ ಮೊದಲು, ಭಾರತದಲ್ಲಿ ಓದುತ್ತಿದ್ದಾಗ ಲೋಕಮಾನ್ಯ ಬಾಲಗಂಗಾಧರ ತಿಲಕರ ಅನುಯಾಯಿಯಾಗಿ ಸ್ವದೇಶಿ ಚಳವಳಿಯನ್ನು ಸಂಘಟಿಸಿ, ಸಂಚಲನ ಸೃಷ್ಟಿಸಿದ್ದರು. ಅವರು ಲಂಡನ್ನಿನಲ್ಲಿದ್ದ ದಿನಗಳಲ್ಲಿ ತಾಯಿ ಭಾರತಿಯ ಸ್ವಾತಂತ್ರ್ಯಕ್ಕಾಗಿ ನಡೆಸಿದ ಚಟುವಟಿಕೆಗಳ ವೃತ್ತಾಂತವೇ ರೋಮಾಂಚಕ! ದೇಶವಾಸಿಗಳು ಸ್ವಾತಂತ್ರ್ಯಕ್ಕಾಗಿ 1857ರಲ್ಲಿ ನಡೆಸಿದ ಹೋರಾಟವನ್ನು `ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟ’ ಎಂದು ಬಣ್ಣಿಸಿ, ಅದರ ಬಗ್ಗೆ ಸಮಗ್ರ ಗ್ರಂಥವನ್ನು ಬರೆದ ಹೆಗ್ಗಳಿಕೆ ಸಾವರ್ಕರ್ ಅವರದು. ವಾಸ್ತವವಾಗಿ, ಆ ದಿನಗಳಲ್ಲಿ ಲಂಡನ್ನಿನಲ್ಲಿ ಇವರಂತೆಯೇ ಬ್ಯಾರಿಸ್ಟರ್ ಪದವಿಗೆ ಓದುತ್ತಿದ್ದ ಜವಾಹರಲಾಲ್ ನೆಹರು ಕೂಡ ಈ ಗ್ರಂಥವನ್ನು ಅಪಾರವಾಗಿ ಮೆಚ್ಚಿಕೊಂಡು, ತಮ್ಮ ತಂದೆ ಮೋತಿಲಾಲ್ ನೆಹರು ಅವರಿಗೆ ಪತ್ರ ಬರೆದಿದ್ದಕ್ಕೆ ಪುರಾವೆಗಳಿವೆ. ವಿಷಾದದ ಸಂಗತಿಯೆಂದರೆ, ಲಂಡನ್ನಿನಿಂದ ಭಾರತಕ್ಕೆ ವಾಪಸ್ ಬಂದಮೇಲೆ, ನೆಹರು ಅವರು ಸಾವರ್ಕರ್ ಬಗ್ಗೆ ವಿರೋಧ ಬೆಳೆಸಿಕೊಂಡು ಬಿಟ್ಟರು. ಇದು ಕೊನೆಗೆ ಎಲ್ಲಿಯವರೆಗೆ ಹೋಯಿತೆಂದರೆ, ತುಷ್ಟೀಕರಣದ ರಾಜಕಾರಣ ಮತ್ತು ದೇಶವಿಭಜನಗಾಗಿ ಮುಸ್ಲಿಂ ಲೀಗ್ ಮಾಡುತ್ತಿದ್ದ ಆಗ್ರಹಗಳನ್ನು ವಿರೋಧಿಸುತ್ತಿದ್ದ ಸಾವರ್ಕರ್ ಅವರಿಗೆ ಕೋಮುವಾದಿ, ಮೂಲಭೂತವಾದಿ, ದೇಶ ವಿಭಜಕ, ಗಾಂಧಿಯವರ ಹತ್ಯೆಯ ಹಿಂದಿನ ಪಾತ್ರಧಾರಿ ಎನ್ನುವ ರೋಗಗ್ರಸ್ತ ಹಣೆಪಟ್ಟಿಗಳನ್ನು ಹಚ್ಚಲಾಯಿತು. ಹಾಗಾದರೆ, ಸಾವರ್ಕರ್  ನಿಜಕ್ಕೂ ಏನಾಗಿದ್ದರು?

ಸಾವರ್ಕರ್ ಬಗ್ಗೆ ರಾಜಕೀಯ ವಿರೋಧಿಗಳು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆಯೇನೂ ಇಲ್ಲ ಎನ್ನುತ್ತಿದ್ದಾರೆ. ಅಂಡಮಾನಿನ ಜೈಲಿನಲ್ಲಿ ಅವರು ಕರಾಳ `ಕಾಲಾಪಾನಿ’ ಶಿಕ್ಷೆ ಅನುಭವಿಸುತ್ತಿದ್ದಾಗ ಬ್ರಿಟಿಷರಿಗೆ ಬರೆದ  ಕ್ಷಮಾಪಣಾ ಧಾಟಿಯ  ಜಾಣ್ಮೆಯ ಪತ್ರಗಳನ್ನಿಟ್ಟುಕೊಂಡು ಅವರನ್ನು ದೇಶದ್ರೋಹಿಯೆಂದು ಬಿಂಬಿಸಿದ್ದಾರೆ. ಅವರೊಬ್ಬ ಬ್ರಾಹ್ಮಣವಾದಿಯಾಗಿದ್ದರು ಎಂದು ರಚ್ಚೆ ಮಾಡುತ್ತಿರುವವರ ಸಂತತಿಯೂ ಇದೆ. ಹಾಗಾದರೆ, ಇವುಗಳ ಸತ್ಯಾಸತ್ಯತೆ ಏನು? ಇಂತ ಮಿಥ್ಯೆಗಳನ್ನು ಸತ್ಯದ ಒರೆಗಲ್ಲಿಗೆ ಹಚ್ಚಿ, ಭಗ್ನಗೊಳಿಸಲು ಇದು ಸಕಾಲ. ಈ ದೃಷ್ಟಿಯಿಂದ ನೋಡಿದರೆ, ಇದು ಭಾರತದ ನೈಜ ಚರಿತ್ರೆಯು ವಿಕೃತಿ ಮತ್ತು ವಿಸ್ಮೃತಿಗಳ ಪೊರೆಯನ್ನು ಕಿತ್ತೆಸೆದು, ವಸ್ತುನಿಷ್ಠ ಆಕೃತಿಯನ್ನು ಪಡೆದುಕೊಳ್ಳುತ್ತಿರುವ ನಿರ್ಣಾಯಕ ಕಾಲಘಟ್ಟವಾಗಿದೆ. 

ದೇಶದಲ್ಲಿ ಇಂದು ʼಹಿಂದುತ್ವʼದ ಅಲೆ ಪ್ರಖರವಾಗಿದೆ. ಇದರ ಕೀರ್ತಿಯಲ್ಲಿ ಹೆಚ್ಚಿನ ಪಾಲು ಸಲ್ಲಬೇಕಾದ್ದು ಸಾವರ್ಕರ್ ಅವರಿಗೆ! ಏಕೆಂದರೆ, ಈ ಪರಿಕಲ್ಪನೆ ಮತ್ತು ಸಾಂಸ್ಕೃತಿಕ ಅಸ್ಮಿತೆಯನ್ನು ವ್ಯಾಪಕವಾಗಿ ಮುನ್ನೆಲೆಗೆ ತಂದವರೇ ಅವರು. ಇದರ ಜತೆಗೆ ಅವರು, ಹಿಂದೂ ಮಹಾಸಭಾದ ಅಧ್ಯಕ್ಷರಾಗಿ ದೇಶದಲ್ಲಿ ಎಬ್ಬಿಸಿದ ಹಿಂದೂ ಅಸ್ಮಿತೆಯ ನಂದಾದೀಪ ಈಗ ಜಾಜ್ವಲ್ಯಮಾನವಾಗಿ ಬೆಳಗುತ್ತಿದೆ. ಅದರ ಪ್ರಭೆಯ ಮುಂದೆ ಬಣ್ಣಬಣ್ಣದ ತರಹೇವಾರಿ ಸಿದ್ಧಾಂತಗಳ ವೇಷ ಕಳಚಿ ಬಿದ್ದಿದೆ. 

ಸಾವರ್ಕರ್ ಅವರ ಬಹುಮುಖಿ ಮತ್ತು ಸಮಾಜಪರ ವ್ಯಕ್ತಿತ್ವದ ಇನ್ನೊಂದಿಷ್ಟು ಆಯಾಮಗಳನ್ನು ಇಲ್ಲಿ ನೆನೆಯಬೇಕು. ನಮಗೆಲ್ಲ ಗೊತ್ತಿರುವಂತೆ, ದೇಶದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಪಕ್ಷ ಮತ್ತು ಅದರ ಬೆರಳೆಣಿಕೆಯಷ್ಟು ನಾಯಕರು ಮಾತ್ರ ಶ್ರಮಿಸಿದರು ಎನ್ನುವ ಚಿತ್ರಣ ಹಲವು ತಲೆಮಾರುಗಳ ಜನರಲ್ಲಿ ಬೇರೂರಿದೆ. ಅಂದಂತೆ, ಕಾಂಗ್ರೆಸ್ ಪಕ್ಷವು ಬ್ರಿಟಿಷರಿಂದ ಭಾರತಕ್ಕೆ ಪೂರ್ಣಸ್ವಾತಂತ್ರ್ಯಕ್ಕಾಗಿ ದನಿಯೆತ್ತಿದ್ದು 1929ರಷ್ಟು ತಡವಾಗಿ! ಅಲ್ಲಿಯವರೆಗೂ ಆ ಪಕ್ಷದ ನಾಯಕರೆಲ್ಲ ಭಾರತವು ಬ್ರಿಟಿಷರ ಅಧೀನದಲ್ಲೇ (ಡೊಮಿನಿಯನ್ ಸ್ಟೇಟ್) ಮುಂದುವರಿಯುವುದರ ಪರವಾಗಿದ್ದರು. ಆದರೆ, ಸಾವರ್ಕರ್ ಇದಕ್ಕೂ 20 ವರ್ಷಗಳ ಮುಂಚೆಯೇ -1909ರಲ್ಲೇ- `ಸಂಪೂರ್ಣ ಸ್ವಾತಂತ್ರ್ಯವು ನಮ್ಮ ಹಕ್ಕು! ಇದರಲ್ಲಿ ಗುಲಗಂಜಿಯಷ್ಟು ಕಡಿಮೆಯಾದರೂ ನಾವು ಅದನ್ನು ಒಪ್ಪುವುದಿಲ್ಲ!!’ ಎಂದು ಘರ್ಜಿಸಿದ್ದರು. ಇದನ್ನು ಸಹಿಸದ ಬ್ರಿಟಿಷರು, ಸಾವರ್ಕರ್ ಅವರನ್ನು ಅಂಡಮಾನ್ ಜೈಲಿಗೆ ತಳ್ಳಿ, 50 ವರ್ಷಗಳ ಜೀವಾವಧಿ ಶಿಕ್ಷೆಯನ್ನು ವಿಧಿಸಿದರು. ಅಲ್ಲಿ ಈ `ಸ್ವಾತಂತ್ರ್ಯವೀರ’ ಅನುಭವಿಸಿದ ಯಮಯಾತನೆ ವರ್ಣಿಸಲಸದಳ. 

ಅಂಡಮಾನಿನಿಂದ ಬಿಡುಗಡೆಯಾಗಿ ಬಂದಮೇಲೂ ಸಾವರ್ಕರ್ ಅವರಿಗೆ ಇತರರಂತೆ ಮುಕ್ತವಾಗಿ ಓಡಾಡಲು ಬ್ರಿಟಿಷರು ಅವಕಾಶ ಕೊಡಲಿಲ್ಲ. ಬದಲಿಗೆ, ಮಹಾರಾಷ್ಟ್ರದ ರತ್ನಗಿರಿಯಲ್ಲಿ ಅವರನ್ನು 14-15 ವರ್ಷಗಳ ಕಾಲ ನಿರ್ಬಂಧಿತ ವಾಸದಲ್ಲಿ ಇಡಲಾಗಿತ್ತು! ಆದರೂ ಭಾರತದ ಶ್ರೇಯಸ್ಸಿಗೆ ತುಡಿಯುತ್ತಿದ್ದ ಅವರು ಆ ಇತಿಮಿತಿಗಳನ್ನು ಮೆಟ್ಟಿ ನಿಂತು, ಹಲವು ಶ್ರೇಯಸ್ಕರವಾದ ಉಪಕ್ರಮಗಳನ್ನು ಕೈಗೊಂಡರು. ಈ ನಿಟ್ಟಿನಲ್ಲಿ ಮೊದಲು ಅವರು ಕೈಗೆತ್ತಿಕೊಂಡಿದ್ದು, ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯ ನಿವಾರಣೆಯ ಕೆಲಸ. ಇದಕ್ಕಾಗಿ ಅವರು ದಲಿತ ಸಮುದಾಯಕ್ಕೆ ಸೇರಿದ ಮಹಾಡ್ ದಂಪತಿಗಳ ಪಾದಪೂಜೆ ಮಾಡಿದರು. ದೇವಸ್ಥಾನದ ಗಣೇಶೋತ್ಸವಗಳಲ್ಲಿ ದಲಿತರಿಗೆ ಅಗ್ರಮನ್ನಣೆ ಕೊಡಿಸಿದರು. ಜಾತಿಪಂಥಗಳ ಭೇದವಿಲ್ಲದ ಭಜನಾ ಮಂಡಲಿಗಳನ್ನು ಏರ್ಪಡಿಸಿದರು. ಶಾಲೆಗಳನ್ನು ಕಟ್ಟಿಸಿದರು. ದಲಿತರ ಮಕ್ಕಳಿಗೆ ಪುಸ್ತಕಗಳನ್ನು ಹಂಚಿದರು. ಇವೆಲ್ಲಕ್ಕೂ ಕಲಶವಿಟ್ಟಂತೆ, ದಲಿತರಿಗೆ ದೇವಸ್ಥಾನ ಪ್ರವೇಶದ ಮುಕ್ತ ಹಕ್ಕು ಎಷ್ಟೊಂದು ಅಗತ್ಯವೆನ್ನುವುದನ್ನು ಮನಗಂಡಿದ್ದ ಅವರು, ಅವರಿಗೆಂದೇ `ಪತಿತ ಪಾವನ ಮಂದಿರ’ವನ್ನೇ ಕಟ್ಟಿಸಿದರು! 

ಎಲ್ಲವೂ ಅವರು ಅಂದುಕೊಂಡಂತೆಯೇ ನಡೆದಿದ್ದರೆ, ಬಾಬಾಸಾಹೇಬ್ ಅಂಬೇಡ್ಕರರೇ ಈ ಮಂದಿರವನ್ನು ಉದ್ಘಾಟಿಸಬೇಕಿತ್ತು. ಆದರೆ, ಪೂರ್ವನಿಗದಿತ ಕಾರ್ಯಕ್ರಮಗಳಿಂದಾಗಿ ಅವರು ಬರಲಾಗಲಿಲ್ಲ. ಆದರೇನಂತೆ, ಅಸ್ಪೃಶ್ಯತೆ ನಿವಾರಣೆಯ ನಿಟ್ಟಿನಲ್ಲಿ ಸಾವರ್ಕರರ ಪ್ರಾಮಾಣಿಕ ಕಳಕಳಿಯನ್ನು ಮನಗಂಡಿದ್ದ ಅವರು, `ಸಾವರ್ಕರರಂಥ ಹತ್ತು ಮಂದಿ ಇದ್ದರೆ, ಒಂದೆರಡು ದಶಕಗಳಲ್ಲಿ ಈ ದೇಶದಿಂದ ಅಸ್ಪೃಶ್ಯತೆ ನಾಮಾವಶೇಷವಾಗಿ ಹೋಗಲಿದೆ!’ ಎಂದು ಉದ್ಗರಿಸಿದ್ದರು.

ಈ ಉಪಕ್ರಮವನ್ನು ಮತ್ತಷ್ಟು ವಿಸ್ತರಿಸಿದ ಸಾವರ್ಕರ್, ಅಂತರ್ಜಾತೀಯ ಭೋಜನ ಕೂಟಗಳನ್ನು ಏರ್ಪಡಿಸಿದರು. ಅಂತರ ಜಾತೀಯ ವಿವಾಹಗಳ ಜತೆಗೆ ಅಂತರಪ್ರಾಂತೀಯ ವಿವಾಹಗಳನ್ನು ಪ್ರೋತ್ಸಾಹಿಸಿದರು. ನಿಜ ಹೇಳಬೇಕೆಂದರೆ, ಇವೆಲ್ಲವನ್ನೂ ಅವರು ಮಾಡಿದ್ದು ಗಾಂಧೀಜಿಯವರು ಅಸ್ಪೃಶ್ಯತೆ ನಿವಾರಣೆಗೆ ಕರೆ ಕೊಡುವುದಕ್ಕೂ ಎಷ್ಟೋ ವರ್ಷಗಳ ಮುಂಚೆಯೇ! ಆದರೆ, ಗಾಂಧೀಜಿಯವರು ದಲಿತರ ಕೇರಿಗೆ ಹೋಗಿ ಮಲ ಎತ್ತಿದ್ದನ್ನು ಮಾತ್ರ ಹೇಳುವ `ಅನುಕೂಲಸಿಂಧು ಶಕ್ತಿಗಳು’, ಸಾವರ್ಕರರ ಈ ಸೇವೆಯನ್ನು ಮತ್ತು ಅವರು ರವಾನಿಸಿದ ಪರಿವರ್ತನೆಯ ಸಂಕೇತಗಳನ್ನು ನೇಪಥ್ಯಕ್ಕೆ ಸರಿಸಿರುವುದು ನಮ್ಮ ದೇಶದಲ್ಲಿ ಬೇರೂರಿರುವ `ಬೌದ್ಧಿಕ ಅಪ್ರಾಮಾಣಿಕತೆ’ಗೊಂದು ನಿದರ್ಶನವಷ್ಟೆ. ಇದಿಷ್ಟೇ ಅಲ್ಲ, ಹಿಂದೂಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ನಗರೀಕರಣದ ಪ್ರಜ್ಞೆಗಳು ಹೆಚ್ಚುವುದರಿಂದ ಭಾರತ ಅಖಂಡವಾಗಿ ಉಳಿಯಲಿದೆ ಎಂದು ಅಚಲವಾಗಿ ನಂಬಿದ್ದ ಅವರು, ದಲಿತರ ಆಹಾರದ ಹಕ್ಕಿನ ವಿಚಾರದಲ್ಲಿ ಆ ಸಮುದಾಯದ ಪರವಾಗಿ ನಿಂತಿದ್ದರು! ಇದಕ್ಕಾಗಿ ಅವರು, ಮೇಲ್ಜಾತಿಗಳ ಮೇಲೆ ವೈಚಾರಿಕ ಪ್ರಹಾರವನ್ನೇ ನಡೆಸಿದರು. 

ಇನ್ನು, ಸಾವರ್ಕರ್ ಅವರೊಬ್ಬ `ಮುಸ್ಲಿಂ ವಿರೋಧಿ’ ಎನ್ನುವ ವಿಚಾರಕ್ಕೆ ಬರೋಣ. ಇಂಥವರಿಗೆ ಚರಿತ್ರೆಯ ಪ್ರಜ್ಞೆ ಎಷ್ಟೊಂದು ಅಳ್ಳಕವಾಗಿದೆ ಎನ್ನುವುದಕ್ಕೆ ಇದು ಇನ್ನೊಂದು ಉದಾಹರಣೆ. ಏಕೆಂದರೆ, ಸಾವರ್ಕರ್ ತಮ್ಮ ಬದುಕಿನ ಪೂರ್ವಾರ್ಧದಲ್ಲಿ ಪ್ರಾಮಾಣಿಕವಾಗಿ ಹಿಂದೂ-ಮುಸ್ಲಿಂ ಐಕ್ಯತೆಗೆ ಶ್ರಮಿಸಿದವರು. ಅವರ ಈ ಪ್ರತಿಪಾದನೆಯನ್ನು ಸ್ವತಃ ಗಾಂಧೀಜಿಯೇ ಮೆಚ್ಚಿಕೊಂಡಿದ್ದರು. ವಿಲಕ್ಷಣ ಸಂಗತಿಯೆಂದರೆ, ಇವತ್ತಿನ ಗಾಂಧೀವಾದಿಗಳಿಗೆ ಇದು ಗೊತ್ತಿಲ್ಲ! ಆದರೆ, ದೂರದ ಟರ್ಕಿಗೆ ಸಂಬಂಧಿಸಿದ ವಿದ್ಯಮಾನವಾಗಿದ್ದ ಖಿಲಾಫತ್ ಚಳವಳಿಯ ಬಗ್ಗೆ ಅತಾರ್ಕಿಕವಾದ ಸಹಾನುಭೂತಿಯನ್ನು ಹೊಂದಿದ್ದ ಒಂದು ವರ್ಗ/ಪಕ್ಷವು ಬಿತ್ತತೊಡಗಿದ ಪ್ರತ್ಯೇಕತೆಯ ಭಾವನೆಯನ್ನು ನೋಡಿದ ಮೇಲೆ ಸಾವರ್ಕರ್, ಮುಂದಿನ ಅಪಾಯವನ್ನು ಗ್ರಹಿಸಿ ನಿಷ್ಠುರವಾಗಿ ಮಾತನಾಡತೊಡಗಿದರು. ಅಲ್ಲಿಯವರೆಗೂ ಬ್ರಿಟಿಷರ ಸೇನೆಯಲ್ಲಿ ತೀರಾ ಅತ್ಯಲ್ಪ ಪ್ರಮಾಣದಲ್ಲಿದ್ದ ಹಿಂದೂಗಳು ಹೆಚ್ಚುಹೆಚ್ಚಾಗಿ ಸಂಖ್ಯೆಯಲ್ಲಿ ಸಶಸ್ತ್ರ ಪಡೆಗಳಿಗೆ ಸೇರುವ ಕೆಲಸವನ್ನು ಆಂದೋಲನದಂತೆ ನಡೆಸಿದರು. ಜಾಗತಿಕ ಮಟ್ಟದಲ್ಲಿ ಬೆಳಗುತ್ತಿರುವ ಭಾರತದ ಈ ಚರಿತ್ರೆಯನ್ನು ನಾವೆಲ್ಲರೂ ಅರಿಯಬೇಕು. 

ಸಾವರ್ಕರ್ ಎಂದರೆ ಇಷ್ಟೇ ಅಲ್ಲ, ಭಾರತದ ತ್ರಿವರ್ಣ ಧ್ವಜದಲ್ಲಿ ಇಂದು ಸಾರನಾಥದ ಧರ್ಮಚಕ್ರವಿದ್ದರೆ ಅದಕ್ಕೆ ಕಾರಣರಾದವರೂ ಇವರೇ! ಇಂತಹ ಉದಾತ್ತ ಚಿಂತನಗಳ ಜತೆಯಲ್ಲೇ ಅವರು, ತಮ್ಮ ಕಾಲದ ಜಾಗತಿಕ ನಾಯಕರೊಂದಿಗೆ ಭಾರತದ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಪತ್ರ ವ್ಯವಹಾರಗಳನ್ನು ನಡೆಸುತ್ತಿದ್ದರು. ಅಂಬೇಡ್ಕರ್, ನೆಹರು, ಶಾಮಪ್ರಸಾದ್ ಮುಖರ್ಜಿ ಅವರಷ್ಟೆ ಅಲ್ಲದೆ, ಕಮ್ಯುನಿಸ್ಟರು ಮತ್ತು ಸಮಾಜವಾದಿಗಳಂತೆಯೇ ಇವರು ಕೂಡ `ಕ್ವಿಟ್ ಇಂಡಿಯಾ’ ಚಳವಳಿಯನ್ನು ನಿರಾಕರಿಸಿದ್ದರು. ದೇಶ ವಿಭಜನೆಯ ಪ್ರಸ್ತಾಪವನ್ನು ಎಲ್ಲರಿಗಿಂತಲೂ ಮೊದಲೇ ವಿರೋಧಿಸಿದ್ದರು. ಹಾಗೆಯೇ, ಈ ದೇಶದ ಬಹುಸಂಖ್ಯಾತರನ್ನು ಮಾತ್ರ ಸದಾ ನೈತಿಕ ಬಿಕ್ಕಟ್ಟಿಗೆ ದೂಡುತ್ತಿದ್ದ ಕುಟಿಲ ರಾಜಕಾರಣವನ್ನು ಅವರು ತಿರಸ್ಕರಿಸುತ್ತ, `ಮಾತೃಭೂಮಿ’ ಮತ್ತು `ಪಿತೃಭೂಮಿ’ಗಳ ರಚನಾತ್ಮಕ ಪರಿಕಲ್ಪನೆಗಳನ್ನು ಮುಂಚೂಣಿಗೆ ತಂದರು. 

ಬಹುಸಂಖ್ಯಾತರ ಪರವಾಗಿ ಮಾತನಾಡುವುದೇ ಅಪರಾಧವೆನ್ನುವ ದುಷ್ಟಕಾಲ ನಮ್ಮಲ್ಲಿ ಇತ್ತೀಚಿನವರೆಗೂ ತಾಂಡವವಾಡುತ್ತಿತ್ತು. ಅದರ ಪಳೆಯುಳಿಕೆಗಳು ಈಗಲೂ ಇವೆ. ಆದರೆ, ದೇಶದ ಪುಣ್ಯಸಂಚಯ ದೊಡ್ಡದಿದೆ. ಹೀಗಾಗಿ, ಸಾವರ್ಕರ್ ಮತ್ತು ಅವರಂತಹ ಇನ್ನೂ ಅನೇಕರ ವಿಚಾರಗಳು ಈಗ ಪುನರುಜ್ಜೀವನಗೊಂಡು, ಪ್ರಖರವಾಗಿ ಗೊತ್ತಾಗುತ್ತಿವೆ. ಇಂತಹ ದ್ರಷ್ಟಾರರ ವಾರಸುದಾರರಾಗಿರುವುದಕ್ಕೆ ಭಾರತೀಯರೆಲ್ಲರೂ ಹೆಮ್ಮೆ ಪಡಬೇಕು! 

5
ಫೆಬ್ರ

ಕನ್ನಡ ಪರ ಹೋರಾಟವೆಂದರೆ ಕಾಂಗ್ರೆಸ್ ಪರ ಹೋರಾಟವೇ?

– ರಾಕೇಶ್ ಶೆಟ್ಟಿ

ಚಿತ್ರಕೃಪೆ  :- https://kannada.oneindia.com (ಕಲೆ : ಬಿ.ಜಿ. ಗುಜ್ಜಾರಪ್ಪ)

ಭಾವನಾತ್ಮಕವಾಗಿ ಜನರನ್ನು ಎತ್ತಿಕಟ್ಟುವುದು ರಾಜಕೀಯ ಪಕ್ಷಗಳಿಗೆ ಯಾವತ್ತಿಗೂ ಲಾಭದ ಬಾಬತ್ತು. ಈಗ ಮಹದಾಯಿ ವಿಷಯದಲ್ಲೂ ಆಗುತ್ತಿರುವುದೂ ಅದೇ. ಪ್ರಧಾನಿ ಮೋದಿಯವರ ಬಳಿ, ಗೋವಾ-ಮಹಾರಾಷ್ಟ್ರದ ಜೊತೆಗೆ ಸಂಧಾನದ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯದ ಸರ್ವಪಕ್ಷ ನಿಯೋಗ ಹೋಗಿ ಕೇಳಿಕೊಂಡಾಗ, ಈ ವಿವಾದದ ಇತಿಹಾಸದ ಅರಿವಿದ್ದ ಅವರು, ಮಧ್ಯಸ್ಥಿಕೆ ನಿರಾಕರಿಸಿ ಮೊದಲು ಆಯಾ ರಾಜ್ಯಗಳಲ್ಲಿರುವ ಪಕ್ಷಗಳನ್ನು ಒಪ್ಪಿಸಿ ಎಂದಿದ್ದರು. ನಂತರ ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ, ಗೋವಾದ ಬಿಜೆಪಿ ಸರ್ಕಾರವನ್ನು ಕರ್ನಾಟಕದ ಬಿಜೆಪಿಯವರು ಹಾಗೂ ಗೋವಾದ ವಿರೋಧ ಪಕ್ಷ ಕಾಂಗ್ರೆಸ್ಸನ್ನು ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ಸಿನವರು ಒಪ್ಪಿಸುವ ನಿರ್ಧಾರವಾಗಿತ್ತು. ಮತ್ತಷ್ಟು ಓದು »

3
ನವೆಂ

ಶಿಕ್ಷಣ: ಗುರಿ ಭೀಮ, ಸಾಧಕ ಕುಚೇಲ!

– ಕಲ್ಗುಂಡಿ ನವೀನ್‍

school-studentsಇಂದು ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಚರ್ಚೆಗಳು, ಪ್ರಯೋಗಗಳು ಇನ್ಯಾವುದೇ ಕ್ಷೇತ್ರದಲ್ಲಿ ನಡೆಯುತ್ತಿಲ್ಲ. ತೀರಾ ವಿರಳವಾಗಿದ್ದ ಓಪನ್ ಮಾದರಿ ಶಾಲೆಗಳು ಇಂದು ವಿಪುಲವಾಗಿವೆ. ಸರ್ಕಾರಿ ಶಾಲೆಗಳೂ ಅದರ ಕೆಲವು ಆಂಶಗಳನ್ನು “ಕಾಪಿ” ಮಾಡುತ್ತಿವೆ. ಇನ್ನು ಮಾಂಟೆಸ್ಸೊರಿ ಎಂಬ ಪದ್ಧತಿ (ಮಾರಿಯಾ ಮಾಂಟೆಸ್ಸೊರಿ ಎಂಬಾಕೆ ಚಾಲ್ತಿಗೆ ತಂದ ಶಿಕ್ಷಣ ಪದ್ಧತಿ) ಹೆಚ್ಚುಕಡಿಮೆ ಮನೆ ಮಾತಾಗಿದೆ. ಇದಲ್ಲದೆ, ಖಾಸಗಿ ನೆಲೆಯಲ್ಲಿ ಅನೇಕರು ತಾವೇ ಕಂಡರಿಸಿದ ಪದ್ಥತಿಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದಾರೆ. ಶಾಲೆ ಹೀಗೂ ಇರಬಲ್ಲುದೇ ಎಂದು ತಜ್ಞರೂ ಹುಬ್ಬೇರಿಸುವಂತೆ ಮಾಡಿದ್ದಾರೆ. “ಒಂದು ಇಡೀ ವರ್ಷ ನೀನು ಏನು ಬೇಕೋ ಮಾಡಿಕೋ, ನಿನಗಿಷ್ಟವಾದದ್ದನ್ನು ಕಲಿತುಕೋ” ಎಂದು ಶಾಲೆಯಲ್ಲಿ ಹೇಳುತ್ತಾರೆ ಎಂದರೆ ನಂಬುತ್ತೀರಾ? ಅದು ಆರೋಹಿ ಎಂಬ ಶಾಲೆ. ಶಿಕ್ಷಣದಲ್ಲಿ ಆಸಕ್ತಿ ಇರುವ ಎಲ್ಲರೂ ಒಮ್ಮೆ ಹೋಗಿ ನೋಡಿಯಾದರೂ ಬರಬೇಕಾದ ಶಾಲೆಯಿದು ( http://www.aarohilife.org ). ಪೂರ್ಣಪ್ರಮತಿ ಎಂಬ ವಿಶಿಷ್ಟ ಶಾಲೆಯಲ್ಲಿ ಪ್ರತಿ ವರ್ಷ ಶಿಕ್ಷಣ ಪದ್ಧತಿಗಳು ಹಾಗೂ ಕಲಿಕೆ ಹೇಗೆ ನಡೆಯುತ್ತದೆ ಎಂದು ವಿಶ್ಲೇಷಿಸಿ ಹೊಸ ಮಾರ್ಗಗಳನ್ನು ಕಂಡುಕೊಳ್ಳಲೆಂದೇ ಪೂರ್ಣಪ್ರಮತಿ ವ್ಯಾಖ್ಯಾ ಎಂಬ ಹೆಸರಿನಲ್ಲಿ ವಿಚಾರ ಸಂಕಿರಣಗಳನ್ನು ನಡೆಸುತ್ತಾರೆ. ಅನೇಕ ದೃಷ್ಟಿಕೋನಗಳಿಂದ ಹಾಗೂ ಪ್ರಯೋಗಗಳಿಂದಾಗಿ ಗಮನಿಸುತ್ತಿರಬೇಕಾದ ಶಾಲೆ, ಪೂರ್ಣಪ್ರಮತಿ (http://purnapramati.in/) ಹ್ಞಾ ಹಾಗೆ “ನೀವು ನೋಡಲೆಂದು ಬರಲೇಬೇಡಿ. ಮಕ್ಕಳು ತಮಗಿಷ್ಟವಾದದ್ದನ್ನು ಮಾಡುತ್ತಿರುತ್ತಾರೆ. ನಿಮ್ಮ ಭೇಟಿ ಅವರನ್ನು ಡಿಸ್ಟರ್ಬ್ ಮಾಡುತ್ತದೆ” ಎನ್ನುವ ಮಣಿವೆಣ್ಣನ್ ಅವರ ಶಾಲೆಯೂ ಇದೆ! ಅಷ್ಟೇ ಅಲ್ಲ ಅಲ್ಲಿನ ಪದ್ಧತಿಗಳು ನಿರಂತರ ಚರ್ಚೆ, ಮಂಥನದ ಆಧಾರದಿಂದ ಬದಲಾಗುತ್ತಿದೆ. ದೇಶದ ಶಿಕ್ಷಣ ವ್ಯವಸ್ಥೆ ನೀಡಿರುವ ಸ್ವಾತಂತ್ರ್ಯವನ್ನು ಚೆನ್ನಾಗಿಯೇ ಬಳಸಿಕೊಂಡು ಮೆಚ್ಚಿ ತಲೆದೂಗುವಂತಹ ಪ್ರಯತ್ನಗಳು ಖಾಸಗಿ ನೆಲೆಯಲ್ಲಿ ನಡೆದಿದೆ. ಇದರ ನಡುವೆ ನಮ್ಮ ಶಿಷ್ಟ ಪದ್ಧತಿಯನ್ನೇ ಮುಂದುವರೆಸುತ್ತಿರುವ, ಆದರೆ ಆದರ್ಶ ಪ್ರಾಯವಾದ ಖಾಸಗಿ ಶಾಲೆಗಳಿವೆ. ಇಲ್ಲಿಯೂ “ಅಂಕವಲ್ಲ, ಗುಣ ಮುಖ್ಯ” ಎಂದು ಯೋಚಿಸುತ್ತ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿರುವ ಶಾಲೆಗಳಿವೆ. ಇದರ ಜೊತೆ ತನ್ನಷ್ಟಕ್ಕೆ ತಾನು ಬೇರೆ ಯಾವ ಗೊಡವೆಗೂ ಹೋಗದೆ ಮುಂದುವರೆಯುತ್ತಿರುವ ಸಿ ಬಿ ಎಸ್ ಇ ಇತ್ಯಾದಿ ಕೇಂದ್ರದ ಪಠ್ಯಕ್ರಮವನ್ನು ಅಳವಡಿಸಿಕೊಂಡಿರುವ ಖಾಸಗಿ ಶಾಲೆಗಳಿವೆ. ಈ ಎಲ್ಲಕ್ಕಿಂತ ದೊಡ್ಡ, ಕೊರತೆ ಎಂಬ ಪದದ ಅರ್ಥವೇ ತಿಳಿಯದ ರಾಜವೈಭೋಗದ ಅಂತಾರಾಷ್ಟ್ರೀಯ ಶಾಲೆಗಳನ್ನು ಸದ್ಯದ ಚರ್ಚೆಯಿಂದ ದೂರ ಇಡೋಣ. ಮತ್ತಷ್ಟು ಓದು »

10
ಆಕ್ಟೋ

ಕಾವೇರಿ = ಕನ್ನಡ/ಕನ್ನಡಿಗ?

– ಚೇತನಾ ಹೆಗಡೆ

ಕಾವೇರಿ = ಕನ್ನಡ/ಕನ್ನಡಿಗ?

river_cauvery_enಈ ಪ್ರಶ್ನೆ ನನ್ನನ್ನು ಚಿಕ್ಕಂದಿನಿಂದಲೂ ಕಾಡಿದೆ. ಕಾರಣ ನಮ್ಮ ಸಿನಿಮಾಗಳು ಮತ್ತು ಅವುಗಳ ಹಾಡುಗಳು. ಕನ್ನಡ ಭಾಷೆ ಮತ್ತು ಕರ್ನಾಟಕಕ್ಕೆ ಸಂಬಂಧಿಸಿದ ಯಾವುದೇ ಹಾಡು ಇದ್ದರೂ ಅದರಲ್ಲಿ ಕಾವೇರಿಯ ಉಲ್ಲೇಖ ಪಕ್ಕಾ. ಯಾಕೆ ಕಾವೇರಿ ನದಿಗೆ ಇಷ್ಟೊಂದು ಪ್ರಾಮುಖ್ಯತೆ ಎಂಬುದು ದೇವರಾಣೆಗೂ ಅರ್ಥವಾಗಿರಲಿಲ್ಲ.

ಸತ್ಯ ಹೇಳುತ್ತೇನೆ, ಅಪ್ಪಟ ಮಲೆನಾಡಾದ ಶಿರಸಿಯಲ್ಲಿ ಹುಟ್ಟಿ ಬೆಳೆದ ನನಗೆ ನೀರಿನ ಕೊರತೆ ಎಂಬುದು ಅಷ್ಟಾಗಿ ಕಾಡಿರಲಿಲ್ಲ. ಪ್ರತೀ ಮನೆಯೂ ಒಂದೊಂದು ಸಿಹಿನೀರಿನ ಬಾವಿ ಹೊಂದಿರುವುದು ವಿಶೇಷವೇ ಅಲ್ಲ. ಹಳ್ಳಿಗಳಲ್ಲಿ ಮನೆಯ ಹಿಂದುಗಡೆಯೇ ಗುಡ್ಡದಿಂದ ಇಳಿದು ಬರುವ ನೀರಿನ ಝರಿಗಳು ಬಹು ಸಾಮಾನ್ಯವಾಗಿದ್ದ ಕಾಲ. ಹಾಗಾಗಿ ಉತ್ತರಕನ್ನಡ ಜಿಲ್ಲೆಯಲ್ಲಿ ಹುಟ್ಟಿದ/ಹರಿಯುವ ನದಿಗಳಾದ ಅಘನಾಶಿನಿ, ಶರಾವತಿ, ಬೇಡ್ತಿ, ಕಾಳಿ, ವರದಾ ಮುಂತಾದ ಯಾವ ನದಿಯ ನೀರನ್ನೂ ಕುಡಿದು ಬೆಳೆದವಳಲ್ಲ ನಾನು… ಮತ್ತಷ್ಟು ಓದು »

14
ಜುಲೈ

ಕವಲು ದಾರಿಯಲ್ಲಿ ಕನ್ನಡ

-ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ

kannada-gjನನ್ನ ಸ್ನೇಹಿತರ ಮನೆಯಲ್ಲಿ ನಡೆದ ಘಟನೆ ಇದು. ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಯಾದ ನನ್ನ ಸ್ನೇಹಿತರ ಮಗ ಕನ್ನಡ ಪಠ್ಯಪುಸ್ತಕದಲ್ಲಿನ ಪದವೊಂದರ ಅರ್ಥಕ್ಕಾಗಿ ತನ್ನ ತಂದೆಯಲ್ಲಿ ಕೇಳಿದ. ಅವರಿಬ್ಬರ ನಡುವಿನ ಸಂಭಾಷಣೆ ಹೀಗಿತ್ತು. ‘ಪಪ್ಪಾ ವ್ಹಾಟ್ ಈಜ್ ಬೇವಿನ ಮರ?’. ಆ ಮಗುವಿಗೆ ಅರ್ಥವಾಗಬೇಕೆಂದರೆ ಆತನದೇ ಧಾಟಿಯಲ್ಲಿ ಉತ್ತರಿಸುವುದು ಬಿಟ್ಟು ಆ ತಂದೆಗೆ ಬೇರೆ ದಾರಿಯೇ ಇರಲಿಲ್ಲ. ‘ಪಾಪು ಬೇವಿನಮರ ಮೀನ್ಸ್ ನೀಮ್ ಟ್ರೀ. ಎ ಟ್ರೀ ಆಫ್ ಬಿಟರ್ ಲೀವ್ಸ್. ಹ್ಯಾವ್ ಯು ಸೀನ್ ಎ ಬಿಗ್ ಟ್ರೀ ಇನ್ ಗ್ರ್ಯಾಂಡ್ ಪಾ ಹೌಸ್? ದಟ್ ಈಜ್ ಬೇವಿನ ಮರ’. ತಂದೆ ಇಂಗ್ಲಿಷ್ ಭಾಷೆಯಲ್ಲಿ ವಿವರಣೆ ನೀಡಿದ ನಂತರ ಆ ಮಗುವಿನ ಸಮಸ್ಯೆ ಸುಲಭವಾಗಿ ಬಗೆಹರಿಯಿತು. ತನ್ನದೇ ಪರಿಸರದಲ್ಲಿನ ವಸ್ತುವೊಂದರ ವಿವರಣೆಗಾಗಿ ಆ ಮಗು ತನ್ನದಲ್ಲದ ಅನ್ಯಭಾಷೆಯನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಸಹಜವಾಗಿಯೇ ಆತಂಕಪಡುವ ಸಂಗತಿ. ನಾವುಗಳೆಲ್ಲ ಚಿಕ್ಕವರಾಗಿದ್ದಾಗ ಇಂಗ್ಲಿಷ್ ಪಠ್ಯ ಪುಸ್ತಕದ ಜೊತೆಗೆ ಗೈಡ್‍ಗಳನ್ನು ಬಳಸುತ್ತಿದ್ದೇವು. ಆ ಗೈಡ್‍ಗಳಲ್ಲಿ ಇಂಗ್ಲಿಷ್ ಪಠ್ಯದ ಕನ್ನಡ ಭಾವಾರ್ಥದ ಜೊತೆಗೆ ಇಡೀ ಪಠ್ಯ ಕನ್ನಡ ಅಕ್ಷರಗಳಲ್ಲಿ ಪ್ರಕಟವಾಗಿರುತ್ತಿತ್ತು. ಹೀಗಾಗಿ ನಾವು ಇಂಗ್ಲಿಷ ಭಾಷೆಯನ್ನು ಕನ್ನಡ ಅಕ್ಷರಗಳ ಮೂಲಕವೇ ಕಲಿಯುತ್ತಿದ್ದೇವು. ಆದರೆ ಇವತ್ತು ನಮ್ಮದೇ ನೆಲದ ಮಕ್ಕಳು ಕನ್ನಡ ಭಾಷೆಯನ್ನು ಇಂಗ್ಲಿಷ್ ಮೂಲಕ ಕಲಿಯಲು ಪ್ರಯತ್ನಿಸುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ. ಇಂಗ್ಲಿಷ್ ಭಾಷೆಯನ್ನು ಕನ್ನಡದ ಮೂಲಕ ಕಲಿಯುವಂತಾಗಲಿ ಎನ್ನುವ ಸಲಹೆಯನ್ನು ಕೇಳದಷ್ಟು ಬಹುದೂರ ನಾವುಗಳೆಲ್ಲ ಸಾಗಿ ಬಂದಿದ್ದೇವೆ. ಮತ್ತಷ್ಟು ಓದು »

13
ಜುಲೈ

ನುಡಿ ಮರಣ ಭಾಷಾವಸಾನ

– ಸುದರ್ಶನ ಗುರುರಾಜರಾವ್

kannada (1)

ಮುನ್ನುಡಿ:

ಕೆಳಗಿನ  ಕವಿತಾ ಸಂಭಾಷಣೆಯ ಮೂಲಕ  – ಸಮಸ್ಯೆಯ ಪರಿಚಯ ಗಮನಿಸಿ

ಕನ್ನಡಿಗ
ಓ ತಾಯಿ ನೀನೇಕೆ ಬೇಡುತಿಹೆ ಭಿಕ್ಷೆ
ಎಲ್ಲಿ ಹೋಯಿತು ನಿನ್ನ ಮನೆ ಮಂದಿ ರಕ್ಷೆ
ಬಾಡಿ ನಲುಗಿಹುದಲ್ಲ ಈ ನಿನ್ನ ವದನ
ಏನಾಯ್ತು ಆ ನಿನ್ನ ಬಹು ಭವ್ಯ ಸದನ

ಭುವನೇಶ್ವರಿ ದೇವಿ (ಕನ್ನಡ ಮಾತೆ:)
ಮಗುವೆ ಮನೆಯಿದ್ದು ಪರದೇಶಿ ನಾನು
ದಿನವೂ ನಾ ಅರೆಹೊಟ್ಟೆ ನೀ ತಿಳಿಯೆಯೇನು
ನನ್ನ ಕೋರಿಕೆಗಿನಿತು ಕೊಡದೆ ಬೆಲೆಯನ್ನು
ಬೇಯಿಸುತ ಬಡಿಸಿಹರು ಕಲಬೆರೆಕೆಯನ್ನು ಮತ್ತಷ್ಟು ಓದು »

23
ಜೂನ್

ಕನ್ನಡದ ಕಲಿಗಳಾಗಿ ಆಂಗ್ಲವನ್ನು ಮಣಿಸಿ- ಖಾಸಗಿ ಶಾಲೆಗಳ ಕಡೆಗಣಿಸಿ.

– ಸುದರ್ಶನ ಗುರುರಾಜರಾವ್

ಕನ್ನಡ ಮಾಧ್ಯಮದಲ್ಲಿದ್ದು ಇಂಗ್ಲಿಷ್ ಕಲಿಯಲು/ಕಲಿಸಲು ಸುಲಭ ವಿಧಾನ

unnamed

೧.ಪರಿಚಯ
೨.ಕಲಿಕೆಯ ಕ್ರಮ (ಸ್ಥೂಲ ರೂಪು ರೇಷೆ )
೩.ಇಂಗ್ಲಿಷ್ ಭಾಷೆಯ ವ್ಯವಸ್ಥಿತ ಅಭ್ಯಾಸ ಮತ್ತು ಇಂಗ್ಲಿಷ್ ಕಲಿಕೆಯ ಪರಿಕರಗಳು- ಭಾಷಾಂತರ ಪಾಠಮಾಲೆ
೪.ಉಪಸಂಹಾರ ಮತ್ತು ಪರಿಸಮಾಪ್ತಿ.

ಪರಿಚಯ :
ಕನ್ನಡದಲ್ಲಿ ಕಲಿತರೆ ಭವಿಷ್ಯವಿಲ್ಲ, ಇಂಗ್ಲೀಷ್ ಮಾಧ್ಯಮ ಎಂದರೆ ಮಾತ್ರವೇ ಯಶಸ್ಸಿನ ಮಂತ್ರ ಎಂಬೊಂದು ನಂಬಿಕೆಯನ್ನು ಜನಮಾನಸದಲ್ಲಿ ಬಲವಾಗಿ ಬಿತ್ತಿ ಕಾಲಕ್ರಮದಲ್ಲಿ ನೀರೆರೆರ್ದು ಪೋಷಿಸಿಕೊಂಡು ಬಂದ ಖಾಸಗಿ ವ್ಯವಸ್ಥಾಪಕರು, ಅವರೊಡನೆ ಕೈಜೋಡಿಸಿ ತಮ್ಮ ನೆಲ-ಜಲ- ಭಾಷೆ ಸಂಸ್ಕೃತಿಗೆ ಚೂರಿ ಹಾಕಿದ ಭ್ರಷ್ಟ ರಾಜಕಾರಿಣಿಗಳು, ಧೃತರಾಷ್ಟ್ರನಂತೆ ತಿಳಿದು ಸುಮ್ಮನಿದ್ದ ಸರಕಾರವು ಜನರನ್ನು ಸುಲಿದು ಹಣದ ಹೊಳೆಯನ್ನು ತಮ್ಮ ಕಡೆಗೆ ಹರಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿವೆ. ಕ್ಲಿಷ್ಟ ಸಮಸ್ಯೆಗಳಿಗೆ ಪರಿಹಾರ ಬಹಳಷ್ಟು ಬಾರಿ ಸರಳವೇ ಇರುತ್ತದೆ. ಅದನ್ನು ಗುರುತಿಸಿ ಅಳವಡಿಸಿಕೊಳ್ಳುವ ಭಾರ ಪ್ರಜ್ಞಾವಂತ ಸಮಾಜದ್ದಾಗಿರಬೇಕು. ಅಂತಹ ಸರಳೋಪಾಯಗಳನ್ನು ಹುಡುಕಿಸಿ ಪಸರಿಸುವ ಕೆಲಸ ಶಿಕ್ಷಣ ಮತ್ತು ಸಾಹಿತ್ಯ-ಸಂಸ್ಕೃತಿ ಇಲಾಖೆಗಳದ್ದಾಗಿರಬೇಕು. ಆದರೆ ಎಲ್ಲರೂ ಕಳ್ಳರೇ! ಗೊಂದಲವನ್ನು ಹಬ್ಬಿಸಿ ಅದರ ಲಾಭ ಪಡೆಯಲು ನಿಂತ ಬೇಲಿಯೇ ಎದ್ದು ಹೊಲ ಮೇಯ್ದ ಪರಿಣಾಮವಾಗಿ ಇಂದು ಕನ್ನಡ ಶಾಲೆಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿವೆ. ಖಾಸಗಿಗೆ ಪೈಪೋಟಿ ಕೊಡುವಲ್ಲಿ ಸೋಲುತ್ತಿವೆ. ಅವುಗಳಲ್ಲಿ ಕೆಲವನ್ನು ನೋಡೋಣ ಮತ್ತಷ್ಟು ಓದು »

22
ಏಪ್ರಿಲ್

ಕನ್ನಡ ಎನೆ ಕಿವಿ ನಿಮಿರಬೇಕಿರುವುದು ಪರರದ್ದು!

-ಸಂಕೇತ್ ಡಿ ಹೆಗಡೆ, ಸಾಗರ

images (7)ಕೋರಾ ಅಂತ ಒಂದು ಸಾಮಾಜಿಕ ಜಾಲತಾಣವಿದೆ. ಮೊನ್ನೆ ಹೀಗೆ ಜಾಲಾಡುತ್ತಿದ್ದಾಗ ಒಂದು ಭಲೇ ಬುದ್ಧಿವಂತಿಕೆಯ ಪ್ರಶ್ನೆ ಎದುರಾಯಿತು. ಪುಣ್ಯಾತ್ಮನೊಬ್ಬ ಬೆಂಗಳೂರಿನ ರಸ್ತೆಯೊಂದರ ಮೇಲೆ ಕಾರಿನಲ್ಲಿ ಕುಳಿತು ಪೋಸ್ಟ್ ಮಾಡಿದ್ದು. “ನಾನೀಗ ಬೆಂಗಳೂರಿನಲ್ಲಿದ್ದೇನೆ. ಕರ್ನಾಟಕ ಇಲ್ಲಿಂದ ಎಷ್ಟು ಕಿಲೋಮೀಟರ್ ಪ್ರಯಾಣಿಸಿದರೆ ಸಿಗುತ್ತೆ” ಅಂತ! ಹಾಗೆ ಕೇಳಿದವನ ಕಂಡು ಮತ್ತೊಬ್ಬ ಉತ್ತರ ಬರೆದಿದ್ದ. “೧೦೮ಕ್ಕೆ ಕರೆಮಾಡಿ ’ನಾನು ಬೆಂಗಳೂರಿನಲ್ಲಿದ್ದೇನೆ, ನನಗೆ ಕರ್ನಾಟಕಕ್ಕೆ ಕರೆದುಕೊಂಡುಹೋಗಿ’ ಅಂತ ಹೇಳಿ. ಅವರು ವಿಲ್ಸನ್ ಗಾರ್ಡನ್ ಅನ್ನುವ ಸ್ಥಳದಲ್ಲಿರುವ ನಿಮ್ಹಾನ್ಸ್ ಅನ್ನುವ ಕಟ್ಟಡದ ಬಳಿ ಇಳಿಸುತ್ತಾರೆ” ಅಂತ. ಇವರ ಪ್ರಶ್ನೋತ್ತರಗಳ ನೋಡಿ ಉಕ್ಕಿಬಂದ ನಗು, “ತಪ್ಪು ಅವನದಲ್ಲ” ಎಂದು ಅನಿಸಿದಾಗ ಮುಚ್ಚಿಕೊಂಡು ಹಿಂದೆಹೋಗಿಬಿಟ್ಟಿತು. ಎಂತಹ ಸ್ಥಿತಿಗೆ ಬೆಂಗಳೂರನ್ನು ತಂದಿಟ್ಟುಬಿಟ್ಟಿದ್ದೇವೆ ಅನ್ನುವುದು ನೆನಪಾಗಿ ಹೃದಯದ ಒಂದು ಮೂಲೆಯಲ್ಲಿರುವ ಭಾಷಾಭಿಮಾನಕ್ಕೆ ಅತೀವ ವೇದನೆಯಾಯಿತು. ಪಾಪ ಆ ಕಾರಿನವನದೇನು ತಪ್ಪು? ಬೆಂಗಳೂರಿನ ಗಾಳಿಯನ್ನು ಪ್ರಥಮ ಬಾರಿಗೆ ಕುಡಿಯುತ್ತಿರುವ ಯಾವನಿಗೆ ಕರ್ನಾಟಕದ “ರಾಜಧಾನಿ”ಯ ಗಾಳಿ ಕುಡಿದ ಅನುಭವವಾಗುತ್ತೆ? ಅವನೋ ಕನ್ನಡಿಗರ ನಾಡಾಗಿರುವ, ಕನ್ನಡವನ್ನು ಉಸಿರಾಗಿಸಿಕೊಂಡಿರುವ, ಕನ್ನಡತನದ ಬೀಡಾಗಿರುವ ಪ್ರದೇಶವೊಂದು ಸಿಕ್ಕಾಗ ಇಳಿದುಕೊಂಡುಬಿಡೋಣ ಅಂದುಕೊಂಡಿದ್ದ. ಅವನಿಗೇನು ಗೊತ್ತು, “ದಿಸ್ ಇಸ್ ಕರ್ನಾಟಕಾಸ್ ಕ್ಯಾಪಿಟಲ್, ಫಾರ್ ಯು” ಅಂತ. ಬೆಂಗಳೂರು ಕರ್ನಾಟಕದಲ್ಲಿದೆ, ಅದೇ ಅದರ ರಾಜಧಾನಿ ಅಂತ ಅವನಿಗೆ ಗೊತ್ತಿಲ್ಲದಿರುವ ಅವನ ಸಾಮಾನ್ಯ ಜ್ನಾನಕ್ಕೆ ವಿಷಾದಿಸೋಣ. ಆದರೆ ಅವನಿಗೆ ಬೆಂಗಳೂರಿನಲ್ಲಿದ್ದರೂ ಇದು ಕರ್ನಾಟಕವೆನ್ನುವುದು ಗೊತ್ತಾಗದ ಮಟ್ಟದಲ್ಲಿ ನಾವು ಬೆಂಗಳೂರನ್ನು ಕಾಪಾಡಿಕೊಂಡಿದ್ದೇವೆ ಎಂಬ ಕಟುವಾಸ್ತವಕ್ಕೆ, ಕೇವಲ ವಿಷಾದಿಸಿದರೆ ಸಾಕೇನು? ಮತ್ತಷ್ಟು ಓದು »

8
ಫೆಬ್ರ

ಸಂಸ್ಕೃತ ಮತ್ತು ಕನ್ನಡಗಳ ಅಂತರ್ಜಾಲ ಸ್ಥಿತಿಗತಿ

– ನವೀನ್ ಗಂಗೋತ್ರಿ

ಸಂಸ್ಕೃತಸಂಸ್ಕೃತದ ಕುರಿತಾಗಿ ಭಾರೀ ಅನುಕಂಪದಿಂದ ಮಾತಾಡುವ ಬಲುದೂರದ ಮಿತ್ರವಲಯವೊಂದಿದೆ ನನ್ನ ಬಳಿ. ಸಂಸ್ಕೃತವನ್ನೋದಿಕೊಂಡ ನಾನು, ನನ್ನಂಥವರು, ನಮ್ಮ ಸಂಸ್ಕೃತ ಸಂಸ್ಥೆಗಳು, ಸಂಸ್ಕೃತ ಪ್ರಪಂಚ ಮತ್ತು ಸಂಸ್ಕೃತಭಾಷೆಯ ಕುರಿತಾದ ಆಳವಾದ ಅನುಕಂಪ ಮತ್ತು ಕರುಣವೊಂದು ಅವರ ದನಿಯಲ್ಲಿರುತ್ತದೆ. ಆದರೆ ನನಗೆಂದಿಗೂ ಈ ಅನುಕಂಪ ಸಮರ್ಪಕವೆಂದೆನಿಸಿಲ್ಲ. ಬಹುಶಃ ಎಪತ್ತು ಎಂಭತ್ತು ತೊಂಭತ್ತರ ದಶಕದ ಸಂಸ್ಕೃತದ ಸ್ಥಿತಿಯ ಕುರಿತಾದ ಅವರ ಗ್ರಹಿಕೆ ಇನ್ನೂ ಅಪ್ಡೇಟಾಗಿಲ್ಲವೆಂದು ಸುಮ್ಮನಾಗುತ್ತೇನೆ. ವಾಸ್ತವದಲ್ಲಿ ಸಂಸ್ಕೃತದ ಪ್ರಪಂಚ ಚಟುವಟಿಕೆಯಿಂದ ಕೂಡಿದೆಯಲ್ಲದೆ ಅದು ಪ್ರಪಂಚದ ಬಹುಪಾಲನ್ನು ತಲುಪುವ ದಿಕ್ಕಿನಲ್ಲಿ ಸಮರ್ಥ ಹೆಜ್ಜೆಯನ್ನಿಟ್ಟಿದೆ. ಸಂಸ್ಕೃತಕ್ಕಾಗಿ ಉಳಿದೆಲ್ಲವನ್ನೂ ತೊರೆದ ನಿಷ್ಠ ಕಾರ್ಯಕರ್ತರಿದ್ದಾರೆ, ವಿದ್ವಾಂಸರಿದ್ದಾರೆ, ಸಂಸ್ಥೆಗಳಿವೆ ಮತ್ತು ವಿವಿ ಗಳಿವೆ. ನಿಜವೆಂದರೆ ಸಂಸ್ಕೃತದ ಕಾರ್ಯ ಭಾರತದಲ್ಲಿ ಮಾತ್ರವಲ್ಲ, ಯೂರೋಪ್ ನಿಂದ ಕೂಡ ನಡೆಯುತ್ತಿದೆ. ಅದರ ಪರಿಣಾಮವೇ ಸಂಸ್ಕೃತದ ಲಭ್ಯತೆ ಎಲ್ಲಾ ಅರ್ಥದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿಮ್ಮಲ್ಲಿ ಅಂತರ್ಜಾಲದ ವ್ಯವಸ್ಥೆ ಇದೆಯೆಂದರೆ ಸಂಸ್ಕೃತ ವಿಶ್ವದ ಕ್ಲಾಸಿಕ್ ಕೃತಿಗಳೆಲ್ಲವೂ ನಿಮ್ಮಲ್ಲಿವೆ ಎಂದೇ ಅರ್ಥ. ಈ ಮಾತುಗಳಲ್ಲಿ ನಿಮಗೆ ನಂಬಿಕೆಯಿಲ್ಲವೆಂದಾದರೆ ಸುಮ್ಮನೇ ಒಮ್ಮೆ ಗೂಗಲಿನಲ್ಲಿ ಸಂಸ್ಕೃತದ ಕೃತಿಯೊಂದಕ್ಕಾಗಿ ಹುಡುಕಾಡಿ ನೋಡಿ.

ಸಂಸ್ಕೃತದ ಕೃತಿಗಳಿಗಾಗಿ ಹುಡುಕಿದಂತೆಯೇ ಕನ್ನಡದ ಕ್ಲಾಸಿಕ್ ಕೃತಿಗಳಿಗಾಗಿ ಹುಡುಕಿ ನೋಡಿದರೆ ನಿಮಗೆ ನಿಜಕ್ಕೂ ಖೇದವಾಗುತ್ತದೆ. ನಾವು ಆರೇಳು ಕೋಟಿ ಜನ ಕರ್ನಾಟಕದಲ್ಲಿ ಕುಳಿತು, ಬೆಂಗಳೂರಿನಂಥ ಸಿಲಿಕಾನ್ ಕಣಿವೆಯನ್ನು ನಮ್ಮ ರಾಜಧಾನಿಯನ್ನಾಗಿ ಇಟ್ಟುಕೊಂಡು, ಮಹಾ ಮಹಾ ವಿಶ್ವ ವಿದ್ಯಾಲಯಗಳನ್ನು ಕಟ್ಟಿಕೊಂಡು, ಕನ್ನಡಕ್ಕಾಗಿ ಕೈಯೆತ್ತುವ ಸಂಘ ಸಂಸ್ಥೆಗಳನ್ನೆಲ್ಲಾ ಇಟ್ಟುಕೊಂಡು ನಮ್ಮ ಮಹತ್ತರ ಕೃತಿಗಳನ್ನು ಇನ್ನೂ ಅಂತರ್ಜಾಲಕ್ಕೆ ಬಿಡುಗಡೆ ಮಾಡದೇ ಗೆಣಸು ಹೆರೆಯುತ್ತ ಕೂತಿದ್ದೇವೆ. ಕುಮಾರವ್ಯಾಸನ ಕರ್ಣಾಟಕ ಭಾರತ ಕಥಾಮಂಜರಿ (ಕೆಲಸ ಅರ್ಧವಾಗಿದೆ), ಕುವೆಂಪುರವರ ರಾಮಾಯಣ ದರ್ಶನಮ್ (ಕಣಜದಲ್ಲಿದೆ), ಇವನ್ನು ಹೊರತುಪಡಿಸಿದರೆ ಕನ್ನಡದ ಕ್ಲಾಸಿಕ್ ಅಂತರ್ಜಾಲದಲ್ಲಿ ಲಭ್ಯಯವಿಲ್ಲ. ಕಾರಂತರು, ತೇಜಸ್ವಿಯವರು, ಮತ್ತು ಕೆಲವು ಕಾದಂಬರಿಕಾರ್ತಿಯರ ಕೃತಿಗಳು ಪಿಡಿಎಫ್ ಆಗಿ ಲಭ್ಯವಿದ್ದರೂ ಓಸಿಆರ್ ತಂತ್ರಜ್ಞಾನ ಇಲ್ಲದ್ದರಿಂದ ರೆಫರೆನ್ಸ್ ಗೆ ಅಷ್ಟೇನೂ ಉಪಯೋಗವಿಲ್ಲ. ಬಹುಶಃ ನಮಗೆ ಹೋರಾಟಗಳೇ ಮುಗಿಯೋದಿಲ್ಲ, ದಿನಾ ಬೆಳಗಾದರೆ ಪಂಥಗಳ ಹೆಸರಿನಲ್ಲಿ ಟೌನ್ ಹಾಲ್ ಮುಂದೆ ಜಮಾಯಿಸೋದಷ್ಟೇ ಕನ್ನಡದ ಕೆಲಸ ಅಂದುಕೊಂಡು ಬಿಟ್ಟಿದ್ದೇವೆ. ಕೆಲವರಂತೂ ಮಾತೆತ್ತಿದರೆ ಸಂಸ್ಕೃತದ ವಿರುದ್ಧ ಹರಿಹಾಯುತ್ತಾರೆ. ಸಂಸ್ಕೃತ ಸತ್ತೋಗಿದೆ ಅನ್ನುತ್ತಾರೆ. ಆದರೆ ಆಧುನಿಕ ಜಗತ್ತಿನಲ್ಲಿ ಸಂಸ್ಕೃತವು ಕನ್ನಡಕ್ಕಿಂತ ವ್ಯಾಪಕವಾದ ಬದುಕನ್ನು ಬದುಕುವತ್ತ ಮುನ್ನುಗ್ಗುತ್ತಿದೆ. ನೆನಪಿಡಿ, ಸಂಸ್ಕೃತದಲ್ಲಿ ಓಸಿಆರ್ ಈಗಾಗಲೇ ಇದೆ. ಆರ್ಕೈವ್ ನಿಂದ ಅಥವ ಗೂಗಲ್ ಪುಸ್ತಕದಿಂದ ತೆರೆದುಕೊಂಡ ಸಂಸ್ಕೃತಪುಸ್ತಕದಲ್ಲಿ ಯಾವುದೇ ಶಬ್ದವನ್ನು ಆರಾಮವಾಗಿ ಹುಡುಕಬಹುದು. ಇದನ್ನೆಲ್ಲ ಭಾರತೀಯರೇ ಮಾಡಿದ್ದೆಂದು ನಾನು ಹೇಳುತ್ತಿಲ್ಲ, ಆದರೆ ಸಂಸ್ಕೃತ ನಿಷ್ಠೆಯ ಜನರಿಂದ ವಿಶ್ವದಾದ್ಯಂತ ಇದೆಲ್ಲ ಕೆಲಸ ನಡೆಯುತ್ತಿದೆ.  ಕನ್ನಡದಂಥಾ ಕನ್ನಡಕ್ಕೇನಾಗಿದೆ?

ಮತ್ತಷ್ಟು ಓದು »

25
ನವೆಂ

ನುಡಿಸಿರಿಯನ್ನು ವಿರೋಧಿಸುವ ನೈತಿಕತೆ ಇಂದಿನ ಸಾಹಿತಿಗಳಿಗಿದೆಯೇ?

– ಸಂತೋಷ್  ಕುಮಾರ್ ಪಿ.ಕೆ

ನುಡಿಸಿರಿಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನವಾದ ಆಳ್ವಾಸ್ ನುಡಿಸಿರಿ 2014 ನ್ನು ಅದ್ಧೂರಿಯಾಗಿ ಮತ್ತು ಅಚ್ಚುಕಟ್ಟಾಗಿ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನಡೆಸಲಾಯಿತು. ಕನ್ನಡ ಭಾಷೆ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಡಾ.ಮೋಹನ್ ಆಳ್ವರ ಶ್ರಮ ಶ್ಲಾಘನೀಯವಾದುದು. ನುಡಿಸಿರಿಯ ವೈಭವವು ಆಗಮಿಸಿದ ಎಲ್ಲಾ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪ್ರೇಮಿಗಳಿಗಳಿಗೆ ಮನತಣಿಸುವಷ್ಟು ವಿಷಯ, ಮನರಂಜನೆಗಳನ್ನು ನೀಡಿರುವುದು ಸುಳ್ಳಲ್ಲ. ಅತ್ಯದ್ಭುತ ಮೆರವಣಿಗೆಯ ಮೂಲಕ ಪ್ರಾರಂಭವಾಗುವ ನುಡಿಸಿರಿಯು ಪ್ರತಿಯೊಂದು ಹಂತದಲ್ಲಿಯೂ ಸಮಯ ಮತ್ತು ಶಿಸ್ತು ಪಾಲನೆಯ ಅಣತಿಯಂತೆ ಜರುಗುತ್ತಾ ಹೋಗುತ್ತದೆ.

ಕನ್ನಡವು ಕರ್ನಾಟಕದ ವ್ಯವಹಾರಿಕ ಮತ್ತು ಮುಖ್ಯವಾಹಿನಿಯ ಭಾಷೆಯಾಗಿದ್ದರೂ ಸಹ ಇತರ ಭಾಷೆಗಳಿರುವುದನ್ನು ಕಡೆಗಣಿಸಲು ಸಾಧ್ಯವಿಲ್ಲ. ಉದಾಹರಣೆಗೆ, ತುಳು, ಕೊಂಕಣಿ, ಬ್ಯಾರಿ, ಬಂಜಾರ, ಕೊಡವ ಇನ್ನೂ ಮುಂತಾದ ಭಾಷೆಗಳು ಅಸ್ತಿತ್ವದಲ್ಲಿವೆ. ಈ ಬಾರಿಯ ನುಡಿಸಿರಿಯಲ್ಲಿ ಇಂತಹ ಪ್ರಾದೇಶಿಕ ಭಾಷೆಗಳಿಗೂ ಸಹ ಮನ್ನಣೆ ನೀಡುವ ಮೂಲಕ ಅವುಗಳಿಗೆ ಸಂಬಂಧಿಸಿದ ಹಲವಾರು ಸಾಂಸ್ಕøತಿಕ ಕಾರ್ಯಕ್ರಮಗಳನ್ನೂ ಸಹ ಆಯೋಜಿಲಾಗಿತ್ತು. ಪ್ರತ್ಯೇಕವಾಗಿ ಒಂದೊಂದು ದಿನವೂ ತುಳು, ಕೊಂಕಣಿ ಹಾಗೂ ಬ್ಯಾರಿ ಭಾಷಾ ಸಮ್ಮೇಳನಗಳೂ ಪ್ರತಿದಿನ ಸಂಜೆ ಜರುಗಿದವು. ಹಾಗೂ ಕೃಷಿ ಸಲಕರಣೆಗಳ ಮೇಳ, ಆಹಾರ ತಿಂಡಿತಿನಿಸುಗಳ ಮೇಳ ಹಾಗೂ ಪುಸ್ತಕ ಮೇಳ ಇವೆಲ್ಲವೂ ನುಡಿಸಿರಿಯ ವಿಶೇಷ ರಂಗುಗಳು.

ಮತ್ತಷ್ಟು ಓದು »