ಕಾಂಗ್ರೆಸೀ – ಚೀನೀ ಭಾಯಿ ಭಾಯಿ, ದೇಶ ಬಡಿದುಕೊಳ್ಳಬೇಕಿದೆ ಬಾಯಿ ಬಾಯಿ!
– ಪ್ರೇಮಶೇಖರ
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಮತ್ತು ಚೈನೀಸ್ ಕಮ್ಯೂನಿಸ್ಟ್ ಪಾರ್ಟಿಗಳ ನಡುವೆ ಹನ್ನೆರಡು ವರ್ಷಗಳ ಹಿಂದೆ ಅಂದರೆ 2008ರಲ್ಲಿ ರಹಸ್ಯ ಒಪ್ಪಂದವೊಂದಾಗಿದೆಯಂತೆ. ವರದಿಗಳ ಪ್ರಕಾರ ಆ ಒಪ್ಪಂದಕ್ಕೆ ಸಹಿ ಹಾಕಿದ್ದು ಕಾಂಗ್ರೆಸ್ ಪರವಾಗಿ ಆಗಿನ ಜನರಲ್ ಸೆಕ್ರೆಟರಿ ಶ್ರೀ ರಾಹುಲ್ ಗಾಂಧಿ ಮತ್ತು ಸಿಸಿಪಿ ಪರವಾಗಿ ಆಗಿನ ಚೀನೀ ಉಪಾಧ್ಯಕ್ಷ ಷಿ ಜಿನ್ಪಿಂಗ್. ಈ ‘ರಹಸ್ಯೋತ್ಪಾಟನೆ’ ಇದುವರೆಗೆ ನಮ್ಮನ್ನು ಕಾಡುತ್ತಿದ್ದ ಹಲವಾರು ಪ್ರಶ್ನೆಗಳಿಗೆ ಉತ್ತರ ಒದಗಿಸುವಂತಿದೆ. ಈ ಪ್ರಶ್ನೆಗಳು ಮತ್ತು ಉತ್ತರಗಳು ಏನು ಎನ್ನುವ ಮೊದಲು ಇದನ್ನೊಮ್ಮೆ ಓದಿ-
“ಚೀನೀಯರ ಜತೆಗಿನ ನಿಮ್ಮ ಆತ್ಮೀಯ ಸ್ನೇಹಸಂಬಂಧಗಳನ್ನು ಉಪಯೋಗಿಸಿಕೊಂಡು, (ಮಸೂದ್ ಅಜ಼ರ್ ವಿಷಯದಲ್ಲಿ) ಭಾರತಕ್ಕೆ ಹಿತಕಾರಿಯಾಗಿ ನಡೆದುಕೊಳ್ಳುವಂತೆ ಚೀನಾವನ್ನು ನೀವು ಮನವೋಲಿಸಬಹುದಾಗಿತ್ತಲ್ಲ? ಹಾಗೇಕೆ ಮಾಡಲಿಲ್ಲ? ಬದಲಾಗಿ, ಇಂದು ಚೀನಾ ನಮ್ಮ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಗ್ಗೆ ನಿವು ಖುಷಿ ಪಡುತ್ತಿದ್ದೀರಲ್ಲ? ಚೀನೀ ನಡವಳಿಕೆಯನ್ನು ನಿಮ್ಮ ಮೋದಿ-ವಿರುದ್ಧದ ರಾಜಕೀಯ ಹಿತಾಸಕ್ತಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದೀರಲ್ಲ?” ಎಂದು ರವಿಶಂಕರ್ ಪ್ರಸಾದ್ ಮತ್ತು ಅರುಣ್ ಜೇಟ್ಲಿ ಕೇಳುವ ಪ್ರಶ್ನೆಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ಚೀನಾ ಕುರಿತಾಗಿ ರಾಹುಲ್ ಗಾಂಧಿವರ ನೀತಿಗಳನ್ನು ಅವಲೋಕಿಸೋಣ.
ಜೂನ್-ಆಗಸ್ಟ್ 2017ರ ದೊಕ್ಲಾಮ್ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಹುಲ್ ಗಾಂಧಿ ನವದೆಹಲಿಯಲ್ಲಿನ ಚೀನೀ ದೂತಾವಾಸಕ್ಕೆ ಭೇಟಿ ನೀಡಿ, ಚೀನೀ ರಾಯಭಾರಿಯ ಜತೆ ಮಾತುಕತೆ ನಡೆಸಿದ್ದರು. “ಈ ದೇಶದ ಒಬ್ಬ ನಾಯಕನಾಗಿ ದೊಕ್ಲಾಮ್ ಬಗ್ಗೆ ವಿವರಗಳನ್ನು ಪಡೆದುಕೊಳ್ಳಲು ನನಗೆ ಹಕ್ಕಿದೆ” ಎಂದವರು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದರು. ಆದರೆ ಆ ಭೇಟಿಯಲ್ಲಿ ದೊಕ್ಲಾಮ್ ಬಗ್ಗೆ ಯಾವುದೇ ಮಾತುಕತೆ ನಡೆಯಲಿಲ್ಲ ಎನ್ನುವ ಸೂಚನೆ ವರ್ಷದ ನಂತರ ರಾಹುಲ್ ಗಾಂಧಿಯವರಿಂದಲೇ ಬಂತು! ಸೆಪ್ಟೆಂಬರ್ 2018ರಲ್ಲಿ ಲಂಡನ್ನಲ್ಲಿ ಪತ್ರಕರ್ತರ ಸಮಾವೇಶದಲ್ಲಿ “…ನೀವು ಅಧಿಕಾರದಲ್ಲಿದ್ದರೆ ದೊಕ್ಲಾಮ್ ವಿವಾದವನ್ನು ಹೇಗೆ ನಿಭಾಯಿಸುತ್ತಿದ್ದಿರಿ?” ಎಂಬ ಪ್ರಶ್ನೆ ಬಂದಾಗ ರಾಹುಲ್ ಗಾಂಧಿ “ದೊಕ್ಲಾಮ್ ಬಗ್ಗೆ ನನ್ನಲ್ಲಿ ವಿವರಗಳಿಲ್ಲ. ಹೀಗಾಗಿ ಈ ಪ್ರಶ್ನೆಗೆ ಉತ್ತರಿಸಲು ನನ್ನಿಂದಾಗದು” ಎಂದುತ್ತರಿಸಿದರು. ಇದರರ್ಥ ವರ್ಷದ ಹಿಂದೆ ಅವರು ದೊಕ್ಲಾಮ್ ಬಗ್ಗೆ ಮಾತಾಡುವ ನೆಪದಲ್ಲಿ ಚೀನೀ ರಾಯಭಾರಿಯನ್ನು ಭೇಟಿಯಾದಾಗ ಅವರು ಮಾತಾಡಿರುವುದು ಬೇರೆಯೇ ವಿಷಯ! ಇದು ಸೂಚಿಸುವುದು ಚೀನೀಯರ ಜತೆ ರಾಹುಲ್ ಗಾಂಧಿ ಹೊಂದಿರಬಹುದಾದ, ಭಾರತ-ಚೀನಾ ಸಂಬಂಧಗಳಿಂದ ಬೇರೆಯಾದ, ಹೊಕ್ಕುಬಳಕೆಯ ಬಗ್ಗೆ. ಇದರ ಸೂಚನೆ ಮತ್ತೊಂದು ಪ್ರಕರಣದಲ್ಲೂ ದೊರೆಯುತ್ತದೆ. ಕಳೆದ ಸೆಪ್ಟೆಂಬರ್ನಲ್ಲಿ ರಾಹುಲ್ ಗಾಂಧಿ ಕೈಲಾಶ್ ಮಾನ್ಸರೋವರ್ ಯಾತ್ರೆಯ ಮೊದಲ ಹಂತವಾಗಿ ಕಾಠ್ಮಂಡುಗೆ ಹೊರಟಾಗ ಅವರನ್ನು ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಬೀಳ್ಕೊಡಲು ನವದೆಹಲಿಯಲ್ಲಿನ ಚೀನೀ ರಾಯಭಾರಿ ಬಯಸಿದ್ದರು. ಭಾರತ ಸರ್ಕಾರದ ಅನುಮತಿ ಸಿಗದೇಹೋದದ್ದರಿಂದ ಅದು ಸಾಧ್ಯವಾಗಲಿಲ್ಲ.
ಲಡಾಖ್ನಲ್ಲಿ ಚೀನೀ ಕಾಸೂ ಕೇಡು, ತಲೆಯೂ ಬೋಳು?
– ಪ್ರೇಮಶೇಖರ
ಭಾಗ – 2
ಜೂನ್ 15ರ ಘರ್ಷಣೆ ಮತ್ತು ಅದರಿಂದಾಗಿ ಎರಡೂ ಕಡೆ ಘಟಿಸಿದ ಪ್ರಾಣಹಾನಿಯಿಂದಾಗಿ ಉಂಟಾದ ವಿಷಮ ಪರಿಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ಭಾರತೀಯ ಮತ್ತು ಚೀನೀ ಸೇನೆಗಳ ನಡುವೆ ಜೂನ್ 22ರಂದು ಲೆಫ್ಥಿನೆಂಟ್ ಜನರಲ್ ಮಟ್ಟದ ಮಾತುಕತೆಗಳು ನಡೆದು, ಹತೋಟಿ ರೇಖೆಯಲ್ಲಿ ಮುಖ್ಯವಾಗಿ ಗಲ್ವಾನ್ ಕಣಿವೆಯಲ್ಲಿ ಶಾಂತಿ ಕಾಪಾಡಲು ಎರಡೂ ಪಕ್ಷಗಳು ಒಮ್ಮತಕ್ಕೆ ಬಂದವು. ಜೂನ್ 6ರ ಒಪ್ಪಂದವನ್ನು ಚೀನಾ ಉಲ್ಲಂಘಿಸಿ ಘರ್ಷಣೆಗಳಿಗೆ ಕಾರಣವಾಗಿದ್ದರ ಹಿನ್ನೆಲೆಯಲ್ಲಿ ಹೊಸ ಒಪ್ಪಂದದ ಬಾಳಿಕೆಯ ಬಗ್ಗೆ ಪ್ರಶ್ನೆಗಳೆದ್ದರೂ ಈ ಬಾರಿ ಚೀನಾದಿಂದ ಹಿಂದಿನ ವಿಶ್ವಾಸಘಾತಕತನ ಮರುಕಳಿಸಲಾರದು ಎಂಬ ಆಶಾಭಾವನೆಯನ್ನೂ ಮೂಡಿಸುವ ಕಾರಣಗಳು ನಮ್ಮೆದುರಿಗಿದ್ದವು.
ವಸ್ತುಸ್ಥಿತಿಯನ್ನು ಹೊರಜಗತ್ತಿನಿಂದ ಮುಚ್ಚಿಡಲು ಚೀನಾ ಅದೆಷ್ಟೇ ಹೆಣಗಿದರೂ ಜೂನ್ ತಿಂಗಳಲ್ಲಿ ದೇಶದ ಆಂತರಿಕ ಸಂಕಷ್ಟಗಳು ಮಿತಿಮೀರಿದ ಬಗೆಗಿನ ವಿವರಗಳು ನಮಗೆ ತಿಳಿಯತ್ತಲೇ ಇವೆ. ಜೂನ್ 11ರಂದು ಆರಂಭವಾದ ವಾರ್ಷಿಕ ಮಳೆ ದೇಶದ ಮೂರನೆಯ ಎರಡು ಭಾಗಗಳಲ್ಲಿ ಅಗಾಧ ಪ್ರಮಾಣದ ಪ್ರವಾಹ ಮತ್ತು ಭೂಕುಸಿತಗಳನ್ನುಂಟು ಮಾಡುತ್ತಿದೆ. ಇಂತಹ ಭಾರಿ ಮಳೆಯನ್ನು ಚೀನಾ ದೇಶ 1940ರ ನಂತರ ಕಂಡಿರಲಿಲ್ಲಂತೆ. ಈ ಪ್ರಾಕೃತಿಕ ವಿಕೋಪ ಬೆಳೆಗಳಿಗೆ ವ್ಯಾಪಕ ಹಾನಿ ಮಾಡುವುದರ ಜತೆಗೆ ಸಾರಿಗೆ ಸಂಪರ್ಕವ್ಯವಸ್ಥೆಯನ್ನೂ ಹಾಳುಗೆಡವಿದೆ. ಇದು ಈಗಾಗಲೇ ಕೆಟ್ಟಿರುವ ಆಹಾರಪೂರೈಕೆಯನ್ನು ಮತ್ತಷ್ಟು ಬಿಗಡಾಯಿಸಿದೆ. ಈ ನಡುವೆ ಯಾಂಗ್ಟ್ಝೆ ನದಿಗೆ ಕಟ್ಟಲಾಗಿರುವ ಬೃಹತ್ ಅಣೆಕಟ್ಟು ಕುಸಿಯುವ ಅಪಾಯ ಉಂಟಾಗಿದೆ. ಜಗತ್ತಿನ ಅತಿ ದೊಡ್ಡ ಅಣೆಕಟ್ಟುಗಳಲ್ಲೊಂದಾದ ಈ “ತ್ರೀ ಗಾರ್ಜಸ್ ಡ್ಯಾಮ್” ನಿಜಕ್ಕೂ ಕುಸಿದರೆ 24 ಪ್ರಾಂತ್ಯಗಳ ನಲವತ್ತು ಕೋಟಿ ಜನರ ಜೀವಗಳು ಅಪಾಯಕ್ಕೀಡಾಗುತ್ತವೆ. ಅಪಾಯವನ್ನು ತಡೆಯುವ ಕ್ರಮವಾಗಿ ಅಣೆಕಟ್ಟೆಯ ಮೇಲಿನ ನೀರಿನ ಒತ್ತಡವನ್ನು ಕಡಿಮೆಗೊಳಿಸಲೆಂದು ಸರ್ಕಾರ ಜೂನ್ 29ರಂದು ಏಕಾಏಕಿ ಗೇಟ್ಗಳನ್ನು ತೆರೆದಿದೆ. ಆದರೆ ಮುನ್ಸೂಚನೆ ನೀಡದೆ ಹಾಗೆ ಮಾಡಿದ್ದರಿಂದಾಗಿ ನದಿಯುದ್ದಕ್ಕೂ ಉಕ್ಕಿದ ಪ್ರವಾಹಕ್ಕೆ ಹಲವಾರು ಹಳ್ಳಿ ಪಟ್ಟಣಗಳ ಲಕ್ಷಾಂತರ ಜನ ಸಿಲುಕಿಹೋದರು. ಪ್ರವಾಹ ಮತ್ರು ವಿದ್ಯುದಾಘಾತದಿಂದ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ.
ಇದರ ಜತೆಗೆ ಕೊರೋನಾ ಸೋಂಕು ದೇಶದೆಲ್ಲೆಡೆ ಮತ್ತಷ್ಥು ಉಗ್ರವಾಗಿದೆ. ರಾಜಧಾನಿ ಬೀಜಿಂಗ್ ದೊಡ್ಡ ವೂಹಾನ್ ಆಗಿ ಬದಲಾಗಿಹೋಗಿದೆ. ದಿನೇ ದಿನೇ ಅಂಕೆಮೀರಿ ಹೆಚ್ಚುತ್ತಲೇ ಇರುವ ಸೋಂಕಿತರನ್ನು ಉಪಚರಿಸಲು ರಾಜಧಾನಿಯ ಆಸ್ಪತ್ರೆಗಳಿಗೆ ಸಾಧ್ಯವಾಗುತ್ತಿಲ್ಲ. ನಗರದ 70% ಜನತೆಗೆ ಆಹಾರಪದಾರ್ಥಗಳನ್ನು ಪೂರೈಸುವ ಮಾರುಕಟ್ಟೆಗಳು ಸೋಂಕಿನ ಪರಿಣಾಮವಾಗಿ ಜೂನ್ ಆರಂಭದಲ್ಲಿ ಮುಚ್ಚಲ್ಪಟ್ಟ ಕಾರಣ ಸಾಮಾನ್ಯ ಜನತೆ ಅತೀವ ಕಷ್ಥಕ್ಕೀಡಾಗಿದ್ದಾರೆ. ಈ ನಡುವೆ ಲಾಕ್ಡೌನ್ ಜಾರಿಗೊಳಿಸುವ ಅತ್ಯುತ್ಸಾಹದಲ್ಲಿಯೋ ಅಥವಾ ಸರ್ಕಾರೀ ಆದೇಶದ ಪಾಲನೆಯ ಮೇರೆಗೋ ಪೊಲೀಸರು ನಗರದ ಕೆಲವೆಡೆ ಜನರನ್ನು ಮನೆಗಳೊಳಗೆ ಕೂಡಿಹಾಕಿ ಅಪಾರ್ಟ್ಮೆಂಟ್ ಕಟ್ಟಡಗಳ ಪ್ರವೇಶದ್ವಾರಗಳನ್ನು ಕಬ್ಬಿಣದ ಪಟ್ಟಿಗಳಿಂದ ಬಂದ್ ಮಾಡಿದ ಕಾರಣ ಜನರ ಸಂಕಷ್ಟಗಳು ಇನ್ನಷ್ಟು ಹೆಚ್ಚಿವೆ. ಈ ನಡುವೆ ಕಮ್ಯೂನಿಸ್ಟ್ ಪಾರ್ಟಿಯ ನೇತಾರರಿಗಷ್ಟೇ ಮೀಸಲಾದ “ಮಿಲಿಟರಿ ಹಾಸ್ಪಿಟಲ್ 301”ಗೇ ಕೊರೋನಾ ಸೋಂಕು ಹರಡಿದ ಸುದ್ಹಿ ಬಂದಿದೆ.
ಹಿಟ್ಲರನ ಗೊಬೆಲ್ಸ್ ಮತ್ತು ನೆಹರೂವಿನ ಗಂಜಿಗಿರಾಕಿಗಳು
– ರಾಕೇಶ್ ಶೆಟ್ಟಿ
‘ಸುಳ್ಳನ್ನೇ ಪದೇ ಪದೇ ಜನರ ಕಿವಿಗೆ ಬೀಳುವಂತೆ ಬೊಬ್ಬೆ ಹೊಡೆಯುತ್ತಾ ಹೋದರೆ ಅದೇ ಸತ್ಯವಾಗುತ್ತ ಹೋಗುತ್ತದೆ’ ಹೀಗೊಂದು ಮಾತನ್ನು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಸರ್ಕಾರದಲ್ಲಿ Public Enlightenment & Propaganda ಸಚಿವನಾಗಿದ್ದ ಗೊಬೆಲ್ಸ್ ಹೇಳಿದ್ದನೆಂಬ ಮಾತಿದೆ.ಈ ಮಾತನ್ನು ಗೊಬೆಲ್ಸ್ ಹೇಳಿದ್ದನೋ ಇಲ್ಲವೋ,ಆದರೆ ಈ ಮಾತು ಪ್ರಾಕ್ಟಿಕಲಿ ಸತ್ಯವಂತೂ ಹೌದು.ಬೇಕಿದ್ದರೆ ಗೊಬೆಲ್ಸ್ ಹೇಳಿಕೊಟ್ಟ ಈ ಸೂತ್ರವನ್ನು ಬಳಸುತ್ತಿರುವ ಭಾರತದ ಗಂಜಿಗಿರಾಕಿಗಳನ್ನು ಈ ಬಗ್ಗೆ ಕೇಳಿ ನೋಡಿ. ಉದಾಹರಣೆಗೆ, ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ಸಮಾವೇಶವೊಂದರಲ್ಲಿ ನರೇಂದ್ರ ಮೋದಿಯವರು ಮಾತನಾಡುತ್ತ ‘ ಲೂಟಿಕೋರ-ಕಳ್ಳರು ವಿದೇಶದ ಬ್ಯಾಂಕುಗಳಲ್ಲಿ ಎಷ್ಟು ಪ್ರಮಾಣದ ಕಪ್ಪು ಹಣವಿಟ್ಟಿದ್ದಾರೆಂದರೆ,ಅದನ್ನು ವಾಪಸ್ ತಂದರೆ ಭಾರತದ ಪ್ರತಿ ಬಡವನಿಗೆ ೧೫ ಲಕ್ಷದಷ್ಟು ಹಣವನ್ನು ಉಚಿತವಾಗಿ ಕೊಡುವಷ್ಟಿದೆ’ ಎಂದಿದ್ದರು(ಈ ವಿಡಿಯೋ ಈಗಲೂ ಅಂತರ್ಜಾಲದಲ್ಲಿ ಲಭ್ಯವಿದೆ).ಇದೇ ಮಾತನ್ನು ಈಗ ಗಂಜಿಗಿರಾಕಿಗಳೆಂಬ ಗೊಬೆಲ್ಸ್ ಗಳು ‘ಮೋದಿ ಅಧಿಕಾರಕ್ಕೆ ಬಂದ ಮೇಲೆ ನಮ್ಮ ಅಕೌಂಟಿಗೆ ೧೫ ಲಕ್ಷ ಹಣ ಹಾಕ್ತಿನಿ ಅಂದಿದ್ರು.ಹಾಕಿಯೇ ಇಲ್ಲ’ ಎಂದು ಊರಿಡಿ ಬೊಬ್ಬೆ ಹೊಡೆಯಲು ಶುರುವಿಟ್ಟುಕೊಂಡರು. ಈಗ ಈ ಸುಳ್ಳು ಯಾವ ಪರಿ ಹರಡಿದೆಯೆಂದರೆ,ಮೋದಿಯನ್ನು ವಿರೋಧಿಸಲು ಕಾರಣವೇ ಸಿಗದವರು ಎಲ್ರಿ ನಮ್ಮ ೧೫ ಲಕ್ಷ ಎಂದು ಕೇಳುವಷ್ಟು. ವಿಚಿತ್ರವೆಂದರೆ,ಇದು ಗಂಜಿಗಿರಾಕಿಗಳ ಅಪಪ್ರಚಾರದ ಕ್ಯಾಮ್ಪೇನು ಎಂದು ಹೇಳಬೇಕಾದವರೇ ತಡಬಡಾಯಿಸುವಂತಾಗಿದೆ.ಇದೇ ನೋಡಿ GGG Lying Formula (ಗಂಜಿ ಗಿರಾಕಿ ಗೊಬೆಲ್ಸ್ ಸುಳ್ಳಿನ ಸೂತ್ರ)ದ ತಾಕತ್ತು.
ಭಾರತದ ಗಂಜಿಗಿರಾಕಿಗಳ ಗೊಬೆಲ್ಸ್ ಕಾರ್ಯಾಚರಣೆಯ ಬಗ್ಗೆ ಮಾತನಾಡುವ ಮುನ್ನ, ಜರ್ಮನಿಯ ಗೊಬೆಲ್ಸ್ ಪರಿಚಯ ಮಾಡಿಕೊಳ್ಳಬೇಕು,ಆಗ ಅವರಿಬ್ಬರ ಸಾಮ್ಯತೆ ಅರ್ಥವಾದೀತು. ಜರ್ಮನಿಯಲ್ಲಿ National Socialist German Workers’ (Nazi) Party ಹಿಟ್ಲರನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಾಗ, ಪ್ರಪೋಗ್ಯಾಂಡ ಸಚಿವನಾಗಿ ಬಂದವನು ಗೊಬೆಲ್ಸ್. ಹೈಡಲ್ ಬರ್ಗ್ ವಿವಿಯಿಂದ ಸಾಹಿತ್ಯದಲ್ಲಿ ಪಿಹೆಚ್ಡಿ ಪದವಿ ಪಡೆದಿದ್ದ ಚಾಣಾಕ್ಷ ಈತ. ಈತನಿಗೆ ಯಾವುದೇ ಸುಳ್ಳನ್ನು ಸತ್ಯವೆಂದು ಓದುಗರನ್ನು ಮರುಳು ಮಾಡುವ ಬರವಣಿಗೆ ಒಲಿದಿತ್ತು. ಇದರ ಜೊತೆಗೆ ಸಾಹಿತ್ಯ,ಸಿನಿಮಾ,ಕಲೆ ಇವನ ಆಸಕ್ತಿಕರ ಕ್ಷೇತ್ರಗಳು. ಇಷ್ಟೆಲ್ಲಾ ಆಸಕ್ತಿ ಮತ್ತು ಸಾಮರ್ಥ್ಯವಿದ್ದ ವ್ಯಕ್ತಿ ದೇಶದ ಸಾಂಸ್ಕೃತಿಕ ರಾಜಕಾರಣವನ್ನು ತನ್ನ ಕಪಿಮುಷ್ಟಿಯಲ್ಲಿಟ್ಟುಕೊಳ್ಳಲು ಸಮರ್ಥ ವ್ಯಕ್ತಿಯಾಗಿ ಹಿಟ್ಲರನಿಗೆ ಅನ್ನಿಸಿದ್ದು ಸಹಜವೇ. ಅಧಿಕಾರಕ್ಕೆ ಬಂದ ಗೊಬೆಲ್ಸ್ ಕೂಡ ಹಿಟ್ಲರ್ ಸುತ್ತ ನಕಲಿ ಪ್ರಭಾವಳಿಯನ್ನು ಸೃಷ್ಟಿಸುವಲ್ಲಿ ಸಫಲನಾಗಿದ್ದ, ಇವನಿಲ್ಲದಿದ್ದರೆ ಜರ್ಮನಿ ಮತ್ತೊಮ್ಮೆ ಗೌರವಯುತವಾಗಿ ತಲೆ ಎತ್ತಲಾರದು ಎಂದ, ಜನರು ನಂಬಿದರು.
ಕಾಂಗ್ರೆಸ್ಸಿನ ವೈಚಾರಿಕತೆಯು ಇಸ್ಲಾಮಿಕ್ ಐಡಿಯಾಲಜಿಯ ಸೆಕ್ಯುಲರ್ ರೂಪವೇ?
– ವಿನಾಯಕ ಹಂಪಿಹೊಳಿ
ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಪಕ್ಷಗಳ ಪರ ವಹಿಸುವ ಬುದ್ಧಿಜೀವಿಗಳು ಮತ್ತು ಜಾಕೀರ್ ನಾಯ್ಕ್ ಮುಂತಾದ ಇಸ್ಲಾಮಿಕ್ ಐಡಿಯಾಲಜಿಯ ಪ್ರಚಾರಕರು ವಾದಿಸುವ, ಪ್ರತಿಕ್ರಿಯಿಸುವ, ಸಮರ್ಥಿಸಿಕೊಳ್ಳುವ, ವಿರೋಧಿಸುವ ರೀತಿಗಳಲ್ಲಿ ಬಹಳ ಸಾಮ್ಯತೆಗಳಿವೆ ಎಂದು ನನಗೆ ಹಲವು ಸಲ ಅನಿಸಿದ್ದಿದೆ. ಈ ಎರಡೂ ಪಂಗಡಗಳು ಬೇರೆ ಬೇರೆ ಐಡಿಯಾಲಜಿಗಳನ್ನೇ ಹೊಂದಿದ್ದರೂ ಕೂಡ ಇವು ಮಂಡಿಸುವ ವಾದಗಳ ರೂಪರೇಷೆಗಳು ಒಂದೇ ತೆರನಾಗಿವೆ. ಇದನ್ನು ಅರಿಯಲು ಈ ಎರಡೂ ಗುಂಪುಗಳ ವಾದಸರಣಿಗಳನ್ನು ಹಾಗೂ ಪ್ರತಿಕ್ರಿಯೆಗಳನ್ನು ನೋಡೋಣ.
ಇಸ್ಲಾಮಿಕ್ ಸಂಘಟನೆಗಳಿಗೆ ಇಸ್ಲಾಮಿಕ್ ಐಡಿಯಾಲಜಿಯೇ ಸರ್ವಶ್ರೇಷ್ಠವಾಗಿದೆ. ಉಳಿದ ರಿಲಿಜನ್ನುಗಳು ಸುಳ್ಳು ರಿಲಿಜನ್ನುಗಳಾಗಿವೆ. ಸಂವಿಧಾನಕ್ಕಿಂತ ಕುರಾನೇ ಶ್ರೇಷ್ಠವಾಗಿದೆ. ಆದರೆ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಬುದ್ಧಿಜೀವಿಗಳು ತಾವು ಸೆಕ್ಯುಲರ್ ಆಗಿದ್ದು, ಮೂಲಭೂತವಾದಿಗಳಲ್ಲ ಎಂಬುದನ್ನು ಪದೇ ಪದೇ ಹೇಳುತ್ತಿರುತ್ತಾರೆ. ಭಾರತದಲ್ಲಿ ಸಂವಿಧಾನವೇ ಶ್ರೇಷ್ಠವಾಗಿದ್ದು, ರಿಲಿಜನ್ನುಗಳು ವೈಯಕ್ತಿಕವೆಂದು ಅವರು ಒಪ್ಪುತ್ತಾರೆ. ಇಸ್ಲಾಮಿಕ್ ಐಡಿಯಾಲಜಿಯ ಪ್ರಚಾರಕರಂತೆ ಕುರಾನೇ ಶ್ರೇಷ್ಠವೆಂಬ ಭಾವನೆ ಬುದ್ಧಿಜೀವಿಗಳಲ್ಲಿಲ್ಲ. ಅವರು ಕುರಾನ್ ಹಾಗೂ ಬೈಬಲ್ಲನ್ನು ಏಕರೀತಿಯಲ್ಲಿ ಗೌರವಿಸಬಲ್ಲರು ಹಾಗೂ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳಬಲ್ಲರು. ಆದರೆ ಹಿಂದೂಗಳ ಕುರಿತು, ಹಿಂದೂ ಧರ್ಮಗ್ರಂಥಗಳೆಂದು ಕರೆಯಲ್ಪಡುವ ಕೃತಿಗಳ ಕುರಿತು ಬುದ್ಧಿಜೀವಿಗಳ ಅಭಿಪ್ರಾಯವು ಇಸ್ಲಾಂ ಮುಂತಾದ ಐಡಿಯಾಲಜಿಯನ್ನು ಪ್ರತಿಪಾದಿಸುವವರ ಅಭಿಪ್ರಾಯಕ್ಕಿಂತ ಎಷ್ಟು ಭಿನ್ನವಾಗಿದೆ ಎನ್ನುವದು ಈಗಿನ ಪ್ರಶ್ನೆ.
ಮೊದಲು ಜಾಕೀರ್ ನಾಯ್ಕ್ ಮುಂತಾದ ಇಸ್ಲಾಮಿಕ ಪ್ರಚಾರಕರು ಕೆಲವು ಪ್ರಶ್ನೆಗಳನ್ನು ಹೇಗೆ ಉತ್ತರಿಸುತ್ತಾರೆ ಎಂಬುದನ್ನು ಗಮನಿಸಿ. ಉದಾಹರಣೆಗೆ, ಅಸ್ಪೃಶ್ಯತೆಗೂ ಹಾಗೂ ಮನುಸ್ಮೃತಿಗೂ ಸಂಬಂಧವಿದೆಯೇ ಎಂದು ಜಾಕೀರ್ ಮುಂತಾದವರಿಗೆ ಕೇಳಿದರೆ ಅವರು ನಿರ್ಭಿಡೆಯಿಂದ ಹೌದು ಎನ್ನುತ್ತಾರೆ. ಮನುಸ್ಮೃತಿಯಲ್ಲಿ ಶೂದ್ರರ ಮೇಲಿರುವ ನಿಬಂಧನೆಗಳನ್ನು ತಿಳಿಸುವ ಶ್ಲೋಕಗಳನ್ನೆಲ್ಲ ಉದಾಹರಿಸಿ ಅದನ್ನು ಸಾಧಿಸುತ್ತಾರೆ. ಆಗ ಅದೇ ಸ್ಮೃತಿಯಲ್ಲಿ ಬರುವ ಬ್ರಾಹ್ಮಣರ ಮೇಲಿರುವ ನಿಬಂಧನೆಗಳನ್ನು ಹಾಗೂ ಶೂದ್ರರಿಗಿರುವ ವಿನಾಯಿತಿಗಳನ್ನು ಬೇಕೆಂದೇ ಮರೆಮಾಚುತ್ತಾರೆ.
ದಲಿತರ ಹೆಗಲ ಮೇಲೆ ಬಂದೂಕಿಟ್ಟಿರುವ ಕೈಗಳು ಯಾರದ್ದು?
– ರಾಕೇಶ್ ಶೆಟ್ಟಿ
‘ಅಧಿಕಾರದಲ್ಲಿರುವ ಕಾಂಗ್ರೆಸ್ಸಿಗಿಂತಲೂ, ಅಧಿಕಾರದಲ್ಲಿರದ ಕಾಂಗ್ರೆಸ್ಸ್ ದೇಶಕ್ಕೆ ಅಪಾಯಕಾರಿ’ ಅಂತ ಗೆಳೆಯನೊಬ್ಬ ಆಗಾಗ್ಗೆ ಹೇಳ್ತಾ ಇರ್ತಾನೆ. 2014ರ ಮೇ 16 ರಂದು ಬಿಜೆಪಿ ಅಧಿಕಾರ ಹಿಡಿದ ದಿನದಿಂದ ಇವತ್ತಿನವರೆಗೂ ಕಾಂಗ್ರೆಸ್ಸ್ ಪಕ್ಷದವರ ಆರ್ಭಟಗಳನ್ನು ನೋಡಿದರೇ, ಗೆಳೆಯನ ಮಾತು ನಿಜವೆನಿಸುತ್ತದೆ. 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಹಿಂದಿನ ಯಾವುದೇ ಚುನಾವಣೆಗಳಂತಿರಲಿಲ್ಲ. ಕಾಂಗ್ರೆಸ್ ಎಂಬ ಪುರಾತನ ಪಕ್ಷ ಮಕಾಡೆ ಮಲಗಿದರೇ, ಉಳಿದ ಅವಕಾಶವಾದಿ ಪ್ರಾದೇಶಿಕ, ಕೌಟುಂಬಿಕ, ಸೆಕ್ಯುಲರ್, ಕಮ್ಯುನಿಸ್ಟ್ ಪಕ್ಷಗಳು ಹೇಳ ಹೆಸರಿಲ್ಲದಂತಾದವು. ಮತ್ತಷ್ಟು ಓದು
ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )
– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
ಕಾರ್ಲ್ ಮಾರ್ಕ್ಸ್ ನ ಒಟ್ಟು ಚಿಂತನೆಯನ್ನು ಹೀಗೆ ಸಂಗ್ರಹಿಸಬಹುದು: ಕೈಗಾರಿಕೆಗಳು ಬೆಳೆದು, ಯಂತ್ರ ಸಂಸ್ಕೃತಿಯ ಮೂಲಕ ಆಧುನಿಕತೆಯು ಸಮಾಜವನ್ನು ಪ್ರವೇಶಿಸಿರುವುದರಿಂದ ಮನುಷ್ಯ ಜಾಗೃತನಾಗಬೇಕು. ಯಂತ್ರಗಳು ಮನುಷ್ಯನ ಉದ್ಯೋಗವನ್ನು ಕಸಿಯುವುದು ಮಾತ್ರವಲ್ಲ; ಸಮಾಜದಲ್ಲಿ ಬಹು ದೊಡ್ಡ ಆರ್ಥಿಕ ಅಸಮತೋಲನವನ್ನು ಸೃಷ್ಟಿಸುತ್ತವೆ. ಯಂತ್ರಗಳಿಂದ ಮನುಷ್ಯ ತನ್ನ ಅಸ್ಮಿತೆಯನ್ನು ಕಳೆದುಕೊಳ್ಳುತ್ತಾನೆ. ಯಾವ ಕೆಲಸವನ್ನು ಯಾರೂ ಮಾಡಬಹುದೆಂಬ ಸನ್ನಿವೇಶ ಸೃಷ್ಟಿಯಾಗುತ್ತದೆ. ಇದರಿಂದಾಗಿ ಪ್ರತಿಯೊಬ್ಬರಿಗೂ ಕೆಲಸದಲ್ಲಿದ್ದ ಶ್ರದ್ಧೆ, ಪ್ರೀತಿ, ಆತ್ಮೀಯತೆಗಳು ಕಾಣೆಯಾಗುತ್ತವೆ. ತಾವು ಬಯಸಿದಂತೆ ಕೆಲಸಗಾರರನ್ನು ಬಳಸಿಕೊಳ್ಳುವ ಸ್ವಾತಂತ್ರ್ಯವನ್ನು ಬಂಡವಾಳಶಾಹಿಗಳು ಪಡೆಯುತ್ತಾರೆ. ಇದರಿಂದಾಗಿ ಕಾರ್ಮಿಕರನ್ನು ಅತಿ ಕಡಿಮೆ ಸಂಬಳಕ್ಕೆ ದುಡಿಸಿಕೊಂಡು ಹೊಸ ಬಗೆಯ ಗುಲಾಮಗಿರಿ ನಡೆಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಬಂಡವಾಳಶಾಹಿಗಳು ಲಾಭ ಎಂದು ಏನನ್ನು ಕರೆಯುತ್ತಾರೋ ಅದು ಶೋಷಣೆಯ ಮೂರ್ತ ಮೊತ್ತ. ಮತ್ತಷ್ಟು ಓದು
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
– ರೋಹಿತ್ ಚಕ್ರತೀರ್ಥ
ಹತ್ತೊಂಬತ್ತು ಮತ್ತು ಇಪ್ಪತ್ತನೇ ಶತಮಾನದ ಪ್ರಪಂಚವನ್ನು ಹೆಚ್ಚು ಪ್ರಭಾವಿಸಿದ, ಬದಲಾಯಿಸಿದ ಸಿದ್ಧಾಂತಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವುದು ಕಮ್ಯುನಿಸಂ. ಇಪ್ಪತ್ತನೇ ಶತಮಾನದಲ್ಲಿ ನಡೆದ ಹಲವು ಮಹತ್ವದ ರಾಜಕೀಯ ಚಳುವಳಿಗೆ ಕಮ್ಯುನಿಸಂ ಮೂಲದ್ರವ್ಯವಾಗಿ ಒದಗಿಬಂತು. ಕಮ್ಯುನಿಸಂ ಎಂದರೇನು, ಅದು ಜಗತ್ತನ್ನು ಪ್ರಭಾವಿಸಿದ ಬಗೆ ಹೇಗೆ, 1970ರ ನಂತರ ಅದು ಅವನತಿಯತ್ತ ಸಾಗಲು ಕಾರಣವಾದ ಸನ್ನಿವೇಶಗಳೇನು, ಇಂದಿನ ಯುಗಕ್ಕೆ ಕಮ್ಯುನಿಸಂ ಪ್ರಸ್ತುತವೇ ಎಂಬ ವಿಚಾರಗಳನ್ನು ತಿಳಿದುಕೊಳ್ಳಲು, ಮೊದಲಿಗೆ ನಾವು ಅದರ ಹುಟ್ಟಿನ ದಿನಗಳ ಅವಲೋಕನ ಮಾಡಬೇಕಾಗುತ್ತದೆ. ಮತ್ತಷ್ಟು ಓದು
ಕ್ಯೂಬಾದಂತೆ ಕಾಣುವ ಪಿಣರಾಯಿ
– ಸಂತೋಷ್ ತಮ್ಮಯ್ಯ
ನಾಳೆ ಸಮಸ್ತ ಕೇರಳಕ್ಕೂ ಇದೇ ಗತಿ
ಬಹುಶಃ ಇದುವರೆಗೆ ಇಷ್ಟೊಂದು ಕಡಿಮೆ ಅವಧಿಯಲ್ಲಿ ಯಾವ ಸರ್ಕಾರಗಳೂ ಇಷ್ಟೊಂದು ಸಾಧನೆಯನ್ನು ಮಾಡಿರಲಾರರು. ಅದೂ ಒಂದು ತಿಂಗಳೊಳಗಾಗಿ ತನ್ನ ಕೆಲಸವನ್ನು ಅಷ್ಟೊಂದು ಶೀಘ್ರವಾಗಿ, ಅಚ್ಚುಕಟ್ಟಾಗಿ ಮಾಡಲು ಸಾಧ್ಯವಾಗುವುದು ಕಮ್ಯುನಿಸ್ಟರಿಗೆ ಮಾತ್ರ. ಕೇರಳದಲ್ಲಿ ಅವರ ಈ ಒಂದು ತಿಂಗಳಿನ ಸಾಧನೆಯನ್ನು ನೋಡಿದರೆ ಮುಂದಿನ ಐದು ವರ್ಷಗಳ ‘ಸಾಧನೆ’ ಇನ್ನೆಷ್ಟಿರಬಹುದು ಎಂಬ ಅಂದಾಜು ಸಿಗುತ್ತದೆ. ಮುಂದಿನ ಐದು ವರ್ಷಗಳಲ್ಲಿ ಕೇರಳ ಕೇರಳವಾಗಿಯೇ ಉಳಿಯುತ್ತದೆಯೋ ಎಂಬ ಸಂಶಯವೂ ಬರುತ್ತದೆ.
ಕೇರಳದಲ್ಲಿ ಕಮ್ಯುನಿಸ್ಟರು ಅಡಳಿತ ಆರಂಭಿಸಿ ನಿನ್ನೆಗೆ ಒಂದು ತಿಂಗಳಾಯಿತು. ಈ ಒಂದು ತಿಂಗಳಿನಲ್ಲಿ ಎದೆ ನಡುಗಿಸುವ ಹಲವು ಘಟನೆಗಳು ನಡೆದವು. ಆದರೂ ಬಿಜೆಪಿ ಆಡಳಿತವನ್ನು ಎರಡೇ ದಿನಗಳಲ್ಲಿ ವಿಮರ್ಶೆಗೆ ಒಡ್ಡುವಂತೆ ಯಾರೂ ಕಮ್ಯುನಿಸ್ಟ್ ಅಡಳಿತವನ್ನು ವಿಮರ್ಶೆ ಮಾಡಲಿಲ್ಲ. ಅಚ್ಯುತಾನಂದರನ್ನು ಪಿಣರಾಯಿ ವಿಜಯನ್ ಮೂಲೆಗುಂಪು ಮಾಡಿದ ಎಂಬ ಎಂಬ ಒಂದು ಸಂಗತಿಯನ್ನು ಮಾಧ್ಯಮಗಳು ಇನ್ನೂ ಗುನುಗುತ್ತಿವೆ. ಈ ಒಂದು ತಿಂಗಳಲ್ಲಿ ನಡೆದ ಘಟನೆಗಳನ್ನು ಯಾವ ಚಿತ್ರನಟನೂ ಅಸಹಿಷ್ಣುತೆ ಎಂದು ಕರೆಯಲಿಲ್ಲ, ಯಾವ ಪತ್ರಕರ್ತನೂ ಅರಾಜಕತೆ ಎಂದು ಬಣ್ಣಿಸಲಿಲ್ಲ. ಹಾಗಾದರೆ ಕೇರಳ ಕಮ್ಯುನಿಸ್ಟರ ತಿಂಗಳ ಸಾಧನೆ ಏನು? ಮತ್ತಷ್ಟು ಓದು
“ಮಹಾನ್” ಇತಿಹಾಸಕಾರರೆಂಬ “ಮಹಾತ್ಮ”ರ ಸನ್ನಿಧಿಯಲ್ಲಿ….
– ರಾಘವೇಂದ್ರ ಅಡಿಗ ಎಚ್ಚೆನ್
ಕೆಲತಿಂಗಳ ಹಿಂದೆ ಬೆಂಗಳೂರಿನ ಟೀಚರ್ಸ್ ಕಾಲೇಜು ಸಭಾಂಗಣದಲ್ಲಿ ಒಂದು ಅಪರೂಪದ ಪುಸ್ತಕಗಳ ಬಿಡುಗಡೆ ಸಮಾರಂಭ ಏರ್ಪಾಡಾಗಿತ್ತು. ಕನ್ನಡದ ಖ್ಯಾತ ಲೇಖಕರಾದ ಡಾ. ಎಸ್.ಎಲ್. ಭೈರಪ್ಪನವರು ಭಾಗವಹಿಸಿದ್ದ ಆ ಕಾರ್ಯಕ್ರಾಮಕ್ಕೆ ಬಹಳ ನಿರೀಕ್ಷೆಗಳನ್ನಿಟ್ಟುಕೊಂಡು ನನ್ನಂತಹ ಸಾಕಷ್ಟು ಜನರು ಬಂದಿದ್ದರು. ಅಸಲಿಗೆ ಅಲ್ಲಿ ಬಿಡುಗಡೆಯಾಗುತ್ತಿದ್ದ ಪುಸ್ತಕಳು ಸಹ ಅಷ್ಟೇ ಕುತೂಹಲ ಹುಟ್ಟಿಸುವಂತಿದ್ದವು. ಸ್ವತಂತ್ರ ಭಾರತದ ಖ್ಯಾತ ಪತ್ರಿಕಾ ಬರಹಗಾರ, ಸಂಶೋಧಕ ಅರುಣ್ ಶೌರಿಯವರ ಪುಸ್ತಕದ ಬಿಡುಗಡೆ ಕಾರ್ಯಕ್ರಾಮವದಾಗಿತ್ತು.
ಅರುಣ್ ಶೌರಿ ಅವರೊಬ್ಬ ಪತ್ರಕರ್ತ, ಪತ್ರಿಕಾ ಸಂಪಾದಕ, ಧೀಮಂತ ರಾಜಕಾರಣಿ, ಸತ್ಯನಿಷ್ಟ ಬರಹಗಾರರಾಗಿ ಭಾರತದಾದ್ಯಂತ ಹೆಸರು ಮಾಡಿದವರು. ಕೇಂದ್ರದಲ್ಲಿ ಎನ್.ಡಿ.ಎ. ಸರ್ಕಾರವಿದ್ದ ಸಂದರ್ಭದಲ್ಲಿ ಸಮಾಚಾರ ಮತ್ತು ಪ್ರಸಾರ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಶೌರಿಯವರು ಸರ್ಕಾರಿ ಕೆಲಸ ಹಾಗೂ ಪತ್ರಿಕಾ ರಂಗ ಎರಡರಲ್ಲಿಯೂ ಒಳ್ಳೆಯ ಹೆಸರನ್ನು ಗಳಿಸಿಕೊಂಡಿರುವವರು.ಭಾರತದ ಪ್ರಸಿದ್ದ ಆಂಗ್ಲ ದೈನಿಕ “ಇಂಡಿಯನ್ ಎಕ್ಸ್ ಪ್ರೆಸ್”ನಲ್ಲಿ ಸಾಕಷ್ಟು ವರ್ಷ ಕೆಲಸ ಮಾಡಿದ್ದ ಶೌರಿಯವರು ಆ ಸಮಯದಲ್ಲಿ ಸಾಕಷ್ಟು ಭ್ರಷ್ಟಾಚರಗಳನ್ನು, ಹಗರಣಗಳನ್ನೂ ಬೆಳಕಿಗೆ ತಂದಿದ್ದರು. ಇವರ ಕೆಲಸ, ಸಮಾಜ ಸೇವೆಗೆ ಮೆಚ್ಚಿ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ, ದಾದಾಭಾಯಿ ನವರೋಜಿ ಪುರಸ್ಕಾರ, ಫ್ರೀಡಮ್ ಟು ಪಬ್ಲಿಷ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.
ಮೊದಲಿನಿಂದಲೂ ಅಧ್ಯಯನ, ಸಂಶೊಧನೆಗಳಲ್ಲಿ ಆಸಕ್ತಿ ತಳೆದಿದ್ದ ಅರುಣ್ ಶೌರಿಯವರು ತಾವೇ ಖುದ್ದಾಗಿ ಸಾಕಷ್ಟು ಪುಸ್ತಕಗಳನ್ನು ರಚಿಸಿದ್ದಾರೆ. “The Only Fatherland’’, “The World of Fatwas’’, “Eminent Historians’’, “ Does He know a Mother’s Heart?’’ ಇವೇ ಮೊದಲಾದ ಕೃತಿಗಳನ್ನು ರಚಿಸಿರುವ ಶೌರಿ ಈ ಒಂದೊಂದರಲ್ಲಿಯೂ ಸಾಕಷ್ಟು ಮಾಹಿತಿಯನ್ನು ಓದುಗರೊಡನೆ ಹಂಚಿಕೊಂಡಿದ್ದಾರೆ.ಅರುಣ್ ಶೌರಿಯವರ ಬರಹಗಳನ್ನು ಅರ್ಥ ಮಾಡಿಕೊಳ್ಳುವುದು ತುಸು ತ್ರಾಸದಾಯಕವದ ಕೆಲಸ.ಅವರಷ್ಟು ಚಿಂತನೆಗೆ ಹಚ್ಚುವ ಬರಹಗಾರರು ಮತ್ತೊಬ್ಬರು ಸಿಕ್ಕುವುದು ತೀರಾ ಅಪರೂಪವೆನ್ನಬೇಕು. ಅಂತಹಾ ಶೌರಿಯವರ ಪುಸ್ತಕವೊಂದು ಕನ್ನಡಕ್ಕೆ ಬಂದಿದೆ.ಅರುಣ್ ಶೌರಿಯವರ “Eminent Historians’’ಕೃತಿಯನ್ನು “ಮಹಾನ್” ಇತಿಹಾಸಕಾರರು ಎನ್ನುವ ಹೆಸರಿನಲ್ಲಿ ಮಂಜುನಾಥ ಅಜ್ಜಂಪುರರವರು ಕನ್ನದಕ್ಕೆ ಅನುವಾದಿಸಿ ನಮ್ಮ ಕೈಗಿತ್ತಿದ್ದಾರೆ. ಇತಿಹಾಸದ ಬಗ್ಗೆ ಆಸಕ್ತಿ ಇರುವ ಪ್ರತಿಯೊಬ್ಬರಿಗೂ ಇಷ್ಟವಾಗುವ ಕೃತಿ ಇದು ಎಂದರೆ ತಪ್ಪಾಗಲಾರದು.
ಪ್ರತ್ಯೇಕ ಪಂಕ್ತಿ ಭೋಜನ : “ಸಂಪ್ರದಾಯ”ದ ಮುಸುಕಿನ “ಅನಾಗರೀಕ” ವರ್ತನೆಯ ಸುತ್ತ
– ರಾಕೇಶ್ ಶೆಟ್ಟಿ
ಉಡುಪಿಯ ಮಠ ಸದಾಕಾಲ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತದೆ. ಅದರಲ್ಲೂ ಬಹುಪಾಲು ಅದು ಸುದ್ದಿಯಾಗುವುದು ವಿವಾದಗಳಿಂದಲೇ, ಹಲವು ಬಾರಿ ಅದು ಪೇಜಾವರ ಶ್ರೀಗಳ ಯಾವುದೋ ಹೇಳಿಕೆಯ ಮೂಲಕವೇ ಸುದ್ದಿಯಾದರೇ ಉಳಿದಂತೆ ಅದು ಮತ್ತೆ ಮತ್ತೆ ಸುದ್ದಿಯಾಗುವುದು ‘ಪ್ರತ್ಯೇಕ ಪಂಕ್ತಿ ಭೋಜನ’ದ ಕಾರಣಕ್ಕೆ.
ಏನಿದು ಮತ್ತೆ ಈ ವಿವಾದ ಅಂತ ನೋಡಲಿಕ್ಕೆ ಹೋದರೆ : ಕೃಷ್ಣ ಮಠದ ಭೋಜನ ಶಾಲೆಯಲ್ಲಿ ಶನಿವಾರ (ಏ 19) ಬಂಟ್ಸ್ ಸಮುದಾಯದ ಮಹಿಳೆಯೊಬ್ಬರು ತನ್ನ ಸ್ನೇಹಿತೆಯರ ಜೊತೆ ಊಟಕ್ಕೆ ಕುಳಿತಿದ್ದರು. ಮಹಿಳೆ ಊಟ ಮಾಡುತ್ತಿರುವ ಸಂದರ್ಭದಲ್ಲಿ ಮಠದ ಅಧಿಕಾರಿಗಳು ಬ್ರಾಹ್ಮಣರೇತರರಿಗೆ ಇಲ್ಲಿ ಊಟಕ್ಕೆ ಅವಕಾಶವಿಲ್ಲ ಎಂದು ಮಹಿಳೆಯನ್ನು ಊಟದ ಮಧ್ಯದಲ್ಲೇ ಎಬ್ಬಿಸಿದ್ದಾರೆ ಎನ್ನುವುದು ವಿವಾದ.
“ನಾನು ಉಡುಪಿ ಮೂಲದವಳು, ವೈದ್ಯಕೀಯ ಕ್ಷೇತ್ರದವಳು. ನಾನು ಚೌಕಿಯಲ್ಲಿ (ಬ್ರಾಹ್ಮಣರಿಗಾಗಿರುವಊಟದ ಹಾಲ್) ಊಟಕ್ಕೆ ಕುಳಿತಿಲ್ಲ.ಭೋಜನ ಶಾಲೆಯಲ್ಲಿ ಊಟಕ್ಕೆ ಕೂತೆ. ಅಲ್ಲಿ ಇತರ ಜಾತಿಯವರಿಗೆ ಊಟದ ವ್ಯವಸ್ಥೆ ಇಲ್ಲ ಎನ್ನುವುದಾದರೆ ಫಲಕ ಹಾಕಬೇಕಿತ್ತು. ತುಂಬಿದ ಊಟದ ಹಾಲಿನಲ್ಲಿ ಎಲ್ಲರ ಮುಂದೆ ನನ್ನನ್ನು ಊಟ ಮಾಡುತ್ತಿರಬೇಕಾದರೆ ಎಬ್ಬಿಸಿ ಹೊರಕ್ಕೆಕಳುಹಿಸಿದರು. ಸ್ನೇಹಿತೆಯರ ಮುಂದೆ ನನಗೆ ತುಂಬಾ ಅವಮಾನವಾಗಿದೆ.ನನಗಾದ ಪರಿಸ್ಥಿತಿ ಬೇರೆಯಾರಿಗೂ ಬರುವುದು ಬೇಡ “
ಇದು,ಉಡುಪಿಯ ಶ್ರೀಕೃಷ್ಣ ದೇವಸ್ಥಾನದ ಭೋಜನಶಾಲೆಯಿಂದ “ಅನಾಗರೀಕ”ರ ಕೈಯ್ಯಿಂದ ಹೊರಹಾಕಲ್ಪಟ್ಟ ಹೆಣ್ಣು ಮಗಳೊಬ್ಬಳ ನೋವಿನ ನುಡಿಗಳು.
ಈಗೀನ ಕಾಲದಲ್ಲೂ ಊಟಕ್ಕೆ ಕೂತವರನ್ನು ಅವರ ಚರ್ಮದ / ಜಾತಿಯ ಬಣ್ಣದಿಂದ ಗುರುತಿಸಿ ಎಬ್ಬಿಸುವ ಅನಾಗರೀಕರು ನಮ್ಮ ನಡುವೆ ಬದುಕುತಿದ್ದಾರೆ ಅನ್ನುವುದೇ ನಾಗರೀಕ ಸಮಾಜವೊಂದುತಲೆ ತಗ್ಗಿಸುವ ವಿಚಾರ. ಊಟದ ಸಮಯದಲ್ಲಿ ಮಾತ್ರ ಬೇರೆ ಜಾತಿಯವರು ಬೇಡ ಅನ್ನುವುದಾದರೇ,ಬೇರೆ ಜಾತಿಯವರು ಕೊಡುವ ದೇಣಿಗೆ,ಕಾಣಿಕೆಗಳೇಕೆ ಬೇಕು ಇವರಿಗೆ? ಪರಮಾತ್ಮ ಶ್ರೀ ಕೃಷ್ಣ ಇವರ ಖಾಸಗಿ ಸ್ವತ್ತಾದರೇ, ಹಾಗೆ ಹೇಳಿ ಬಿಡುವುದೊಳಿತು. ಆಗ ಯಾರು ಅಲ್ಲಿಗೆ ಹೋಗಿ ಹೀಗೆ ಅವಮಾನ ಮಾಡಿಸಿಕೊಂಡು ಬರಲಿಚ್ಛಿಸುವುದಿಲ್ಲ.
–*–*–*–