ಪುಣ್ಯಕೋಟಿಯ ವ್ಯಥೆ ಮತ್ತು ಕಾನೂನು ಅವ್ಯವಸ್ಥೆ
– ರಾಕೇಶ್ ಶೆಟ್ಟಿ
ಧರಣಿ ಮಂಡಲ ಮಧ್ಯದೊಳಗೆ
ಮೆರೆಯುತಿಹ ಕರ್ನಾಟ ದೇಶದೊಳಿರುವ
ಕಾಳಿಂಗನೆಂಬ ಗೊಲ್ಲನ ಪರಿಯನೆಂತು ಪೇಳ್ವೆನು
ಎಳೆಯ ಮಾವಿನ ಮರದ ಕೆಳಗೆ ಕೊಳಲನೂದುತ ಗೊಲ್ಲ ಗೌಡನು
ಬಳಸಿನಿಂದ ತುರುಗಳನ್ನು ಬಳಿಗೆ ಕರೆದನು ಹರುಷದಿ
ಗಂಗೆ ಬಾರೆ ಗೌರಿ ಬಾರೆ ತುಂಗ ಭದ್ರೆ ತಾಯಿ ಬಾರೆ …
ಪುಣ್ಯಕೋಟಿಯ ಕಥೆ ಅಚ್ಚಳಿಯದೇ ಮನದಲ್ಲಿ ಉಳಿಯುವಂತೆ ಮಾಡಿದ ಗೋವಿನ ಹಾಡನ್ನು ಕೇಳಿ ಬೆಳೆದವರು ನಾವು. ಆಗಿನ ಕಾಲದ ಗೊಲ್ಲಗೌಡನೇನೋ ತನ್ನ ಮುದ್ದಿನ ಗೋವುಗಳನ್ನು ಹರುಷದಿಂದ ಕರೆಯುವ ಪರಿಸ್ಥಿತಿ ಇತ್ತು. ಆದರೆ ಈಗಿನ ಕರಾವಳಿಯ ಗೋಪಾಲಕರ ಸ್ಥಿತಿ ಯಾವ ಶತ್ರುವಿಗೂ ಬೇಡವೆನಿಸುವಂತಿದೆ. ಕಣ್ಣೆದುರಿಗೆ ಆಡಿ ಬೆಳೆಯುತ್ತಿದ್ದ ಕರುಗಳು, ಲೀಟರ್ಗಟ್ಟಲೆ ಹಾಲು ಕೊಡುತ್ತ ಜೀವನಾಧಾರವಾಗಿರುವ ಗೋವುಗಳು ರಾತ್ರಿ ಬೆಳಗಾಗುವುದರೊಳಗೆ ಕೊಟ್ಟಿಗೆಯಿಂದ ಕಾಣೆಯಾಗಿರುತ್ತವೆ.ಹಾಗೆಂದು ಈ ಗೋವುಗಳು,ಎಳೆಗರುಗಳೇನೂ ಮಾಯವಾಗುವುದಿಲ್ಲ ಅಥವಾ ಭೂಮಿ ಬಾಯಿಬಿಟ್ಟು ಅವನ್ನು ನುಂಗಿಹಾಕುವುದಿಲ್ಲ. ನಟ್ಟ ನಡುರಾತ್ರಿ ತಲವಾರುಗಳನ್ನಿಡಿದು ನುಗ್ಗುವ ದನಗಳ್ಳರು ಮನೆಯವರನ್ನು ಬೆದರಿಸಿ ಅವರ ಕಣ್ಣೆದುರಿನಲ್ಲಿಯೇ ಸಾಕಿದ ಗೋವುಗಳನ್ನು ಕದ್ದೊಯ್ಯುತ್ತಾರೆ. ಕೇವಲ ಕದ್ದೊಯ್ಯುವುದು ಮಾತ್ರವಲ್ಲ,ಮತ್ತೆ ಬಂದು ಉಳಿದವನ್ನು ಕದ್ದೊಯ್ಯುತ್ತೇವೆ,ನಮ್ಮ ದಾರಿಗೆ ಅಡ್ಡ ಬಂದರೆ ನಿಮ್ಮನ್ನು ಉಳಿಸುವುದಿಲ್ಲವೆಂದು ಧಮಕಿ ಹಾಕಿ ಹೋಗುತ್ತಾರೆ.ಮಂಗಳೂರಿನ ಮೂಡುಶೆಡ್ಡೆಯೊಂದರಲ್ಲೇ ಕಳೆದ ಒಂದೆರಡು ತಿಂಗಳಲ್ಲಿ ೨೦ಕ್ಕೂ ಹೆಚ್ಚು ಹಸುಗಳನ್ನು ದನಗಳ್ಳರು ಕದ್ದೊಯ್ದಿದ್ದಾರೆ.ಮೂಡುಶೆಡ್ಡೆಯ ಜೊತೆಗೆ ಕಾವೂರು,ವಾಮಂಜೂರು,ಕುಳಾಯಿ,ಅತ್ತಾವರ,ಜಪ್ಪಿನಮೊಗರು ಹೀಗೆ ಕರಾವಳಿಯ ಹಲವು ಭಾಗಗಳ ಗೋಪಾಲಕರ,ಬಡರೈತರ ಜೀವನವನ್ನೇ ಹಾಳುಗೆಡವಿದ್ದಾರೆ ಈ ದನಗಳ್ಳರು.
ಇತ್ತಿಚೀಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ಒಂದು ಕರಾವಳಿಯ ಗೋಪಾಲಕರ ಸಂಕಟವನ್ನು ಬಿಚ್ಚಿಡುತ್ತದೆ. ದೈಜಿ ವರ್ಲ್ಡ್ ನವರು ಮಾಡಿದ್ದ ಈ ವಿಡಿಯೋದ ಕೇಂದ್ರ ಬಿಂದು ಕೊಣಾಜೆಯ ನಡುಪದವಿನ ಕಲ್ಯಾಣಿ ಅಮ್ಮ. ಒಂದು ಕಾಲದಲ್ಲಿ ಕಲ್ಯಾಣಿ ಅಮ್ಮನ ಕೊಟ್ಟಿಗೆಯಲ್ಲಿ ೫೦ ಗೋವುಗಳಿದ್ದವು.೪೦ ಲೀಟರಿನಷ್ಟು ಹಾಲನ್ನು ಡೈರಿಗೆ ಹಾಕುತ್ತಿದ್ದ ಕಲ್ಯಾಣಿ ಅಮ್ಮನವರು ಒಳ್ಳೆ ಆದಾಯವನ್ನು ಪಡೆಯುತ್ತಿದ್ದರು.ನೆಮ್ಮದಿಯಾಗಿದ್ದ ಕಲ್ಯಾಣಿಯವರ ಕೊಟ್ಟಿಗೆಯ ಮೇಲೆ ದನಗಳ್ಳರ ವಕ್ರದೃಷ್ಟಿ ಬಿದ್ದಿತ್ತು. ೨೦೧೦ರಿಂದ ಈಚೆಗೆ ಶುರುವಾದ ಕಳ್ಳತನದಿಂದಾಗಿ ಇವತ್ತಿಗೆ ಕಲ್ಯಾಣಿ ಅಮ್ಮನವರ ಕೊಟ್ಟಿಗೆ ಬರಿದಾಗಿದೆ.ಮಕ್ಕಳಂತೆ ಸಾಕಿ ಸಲಹುತ್ತಿದ್ದ ಗೋವುಗಳು ಕಾಣೆಯಾದಾಗಲೆಲ್ಲ ಊಟ-ನಿದ್ದೆ ಬಿಟ್ಟು ಕಲ್ಯಾಣಿ ಅಮ್ಮ ಕಣ್ಣೀರು ಹಾಕಿದ್ದಾರೆ.ಮೊದಲ ಬಾರಿ ಕಳ್ಳತನವಾದಾಗ ಪೋಲೀಸರ ಬಳಿ ಹೋಗಿದ್ದೆ,ಅವರು ನನಗೆ ಗದರಿಸಿ ಕಳುಹಿಸಿದರು ನಂತರ ಮತ್ತೆಂದೂ ನಾನು ಪೊಲೀಸ್ ಠಾಣೆಯ ಮೆಟ್ಟಿಲೇರಲಿಲ್ಲ ಎನ್ನುತ್ತಾರೆ ಕಲ್ಯಾಣಿ ಅಮ್ಮ.ಗೋವಿನೊಂದಿಗೆ ಅವಿನಾಭಾವ ಸಂಬಂಧವಿರುವ ಅವರಿಗೆ ಖಾಲಿ ಕೊಟ್ಟಿಗೆಯನ್ನು ನೋಡಲಾಗದೇ,ಈಗ ಮತ್ತೊಂದು ಗೋವನ್ನು ತಂದಿದ್ದಾರೆ.ಅದನ್ನೂ ದನಗಳ್ಳರು ಕದ್ದೊಯ್ಯಬಾರದೆಂದು ಪ್ರತಿರಾತ್ರಿ ಅದರ ಕಾವಲು ಕಾಯುತ್ತ ಕೊಟ್ಟಿಗೆಯ ಹೊರಗೆಯೇ ಮಲಗುತ್ತಿದ್ದಾರೆ ಎಂದರೆ ಕರಾವಳಿಯ ಕಾನೂನು ಅವ್ಯವಸ್ಥೆ ಯಾವ ಮಟ್ಟದಲ್ಲಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬಹುದು.
ಸಂಘಟನೆಯನ್ನು ನಿಷೇಧಿಸಬಹುದು.ಆದರೆ ಮನಸ್ಥಿತಿಯನ್ನು ಏನು ಮಾಡುವುದು?
– ರಾಕೇಶ್ ಶೆಟ್ಟಿ
ಸಂಘಟನೆಯನ್ನು ನಿಷೇಧಿಸಬಹುದು.ಆದರೆ,ಮನಸ್ಥಿತಿಯನ್ನು ಏನು ಮಾಡುವುದು? ಇಂತಹದ್ದೊಂದು ಪ್ರಶ್ನೆಯನ್ನು ಫೇಸ್ಬುಕ್ಕಿನಲ್ಲಿ ಗೆಳೆಯ ಸಂದೀಪ್ ಕೇಳಿದ್ದರು.ಅವರ ಪ್ರಶ್ನೆಯಿದ್ದಿದ್ದು Ban PFI ಎಂಬ ಹೋರಾಟದ ಕುರಿತು. ವಾಜಪೇಯಿಯವರ ಕಾಲದಲ್ಲಿ ಸಿಮಿ ಸಂಘಟನೆಯನ್ನು ನಿಷೇಧಿಸಲಾಯಿತು. ಆಮೇಲೇನಾಯ್ತು? ರಕ್ತಬೀಜಾಸುರರಂತೆ ನಾನಾ ಹೆಸರು,ಸಂಘಟನೆಗಳನ್ನು ಮಾಡಿಕೊಂಡು ಇಸ್ಲಾಮೀಕರಣದ ತಮ್ಮ ಅಜೇಂಡಾವನ್ನು ಇವರು ಒಂದಲ್ಲ ಒಂದು ರೀತಿಯಲ್ಲಿ ಮುಂದುವರೆಸಿಕೊಂಡು ಬಂದರು.ಮುಂಬೈ ಸರಣಿ ಬಾಂಬ್ ಬ್ಲಾಸ್ಟ್ ನಿಂದ ಹಿಡಿದು ಇತ್ತೀಚಿನ ದಿನಗಳವರೆಗೂ ದೇಶದಲ್ಲಿ ನಡೆದ ಬಾಂಬ್ ಸ್ಪೋಟದ ಆರೋಪಿಗಳು ಒಂದೋ ನಿಷೇಧಿತ ಸಿಮಿಯ ಕಾರ್ಯಕರ್ತರಾಗಿದ್ದವರು ಅಥವಾ ಹೊಸತೊಂದು ಸಂಘಟನೆಯ ಬ್ಯಾನರಿನಡಿಯಲ್ಲಿ ಸಿಮಿಯ ಕಾರ್ಯವನ್ನೇ ಮುಂದುವರೆಸಿದ್ದವರು.ಅಂದರೆ ಒಂದು ವಿಷಯ ಸ್ಪಷ್ಟವಾಗಿದೆ. ಸಂಘಟನೆ ನಿಷೇಧವಾದರೂ, ಹೆಸರು ಬದಲಾದರೂ ಅವರ “ಉದ್ದೇಶ” ಬದಲಾಗಲಿಲ್. ಏಕೆ? ಈ ಪ್ರಶ್ನೆಗೆ ಉತ್ತರ ಡಾ.ಬಿ.ಆರ್ ಅಂಬೇಡ್ಕರ್ ಅವರ “Pakistan or Partition of India” ಪುಸ್ತಕದಲ್ಲಿ ಸಿಗುತ್ತದೆ. ಆ ಪುಸ್ತಕದಲ್ಲಿ ಅಂಬೇಡ್ಕರ್ ಅವರು ಭಾರತದ ವಿಭಜನೆ ಮತ್ತು ಪಾಕಿಸ್ತಾನದ ಬಗ್ಗೆ ಮಾತ್ರ ಮಾತನಾಡಿಲ್ಲ,ಅವೆರಡರ ಜೊತೆಗೆ ಮುಖ್ಯವಾಗಿ,ಇಸ್ಲಾಮ್ ಹಾಗೂ ಭಾರತೀಯ ಮುಸ್ಲಿಂರ ಮನಸ್ಥಿತಿಯ ಬಗ್ಗೆಯೂ ವಿವರವಾಗಿ ಬರೆದಿದ್ದಾರೆ.
ಇಂತಹ ಸಂಘಟನೆಗಳ ಬಹುಮುಖ್ಯ ಉದ್ದೇಶ,ಒಂದು ದೇಶವನ್ನು ದಾರ್-ಉಲ್-ಅರ್ಬ್ ನಿಂದ ದಾರ್-ಉಲ್-ಇಸ್ಲಾಮ್ ಮಾಡುವುದೇ ಆಗಿರುತ್ತದೆ. ಏನಿದು ದಾರ್-ಉಲ್-ಅರ್ಬ್/ದಾರ್-ಉಲ್-ಇಸ್ಲಾಮ್? ಅಂಬೇಡ್ಕರ್ ಅವರ ಮಾತನ್ನೇ ಕೋಟ್ ಮಾಡುತ್ತೇನೆ. “… According to Muslim Canon Law the world is divided into two camps, Dar-ul-lslam (abode of Islam), and Dar-ul-Harb (abode of war). A country is Dar-ul-lslam when it is ruled by Muslims. A country is Dar-ul-Harb when Muslims only reside in it but are not rulers of it. That being the Canon Law of the Muslims, India cannot be the common motherland of the Hindus and the Musalmans. It can be the land of the Musalmans—but it cannot be the land of the ‘Hindus and the Musalmans living as equals…” ಅಂದರೆ, ಯಾವ ದೇಶವು ಸಂಪೂರ್ಣವಾಗಿ ಇಸ್ಲಾಮ್ ಅನ್ನು ಒಪ್ಪಿಕೊಂಡು ಮುಸ್ಲಿಮರಿಂದ ಆಳಲ್ಪಡುತ್ತಿದೆಯೋ ಅದು ದಾರ್-ಉಲ್-ಇಸ್ಲಾಮ್ ಎಂದು ಕರೆಸಿಕೊಳ್ಳುತ್ತದೆ. ಯಾವ ದೇಶವು ಮುಸ್ಲಿಮೇತರರಿಂದ ಆಳಲ್ಪಡುತ್ತಿದೆಯೋ ಅದು ದಾರ್-ಉಲ್-ಅರ್ಬ್ ಆಗಿರುತ್ತದೆ.
ಯಕ್ಷಗಾನ ಕರಾವಳಿಯ ಜನರ ತಲೆಕೆಡಿಸಿ ವಾತಾವರಣ ಕಲುಷಿತಗೊಳಿಸಿದೆಯೇ?
ದೀಕ್ಷಿತ್ ಶೆಟ್ಟಿಗಾರ್ ಕೊಣಾಜೆ
ಈ ಪ್ರಶ್ನೆ ಬಂದಿದ್ದು ತಮ್ಮನ್ನು ತಾವು ಮಹಾನ್ ಲೇಖಕ ಎಂದು ಬಿಂಬಿಸಿಕೊಂಡು ಪ್ರಚಾರಕ್ಕಾಗಿ ಹಾತೊರೆಯುವ ವ್ಯಕ್ತಿಯೊಬ್ಬನ ಪೇಸ್ಬುಕ್ ಗೋಡೆ ಬರಹದಿಂದಾಗಿ. ಕೆಲವರು ತಾನು ಬರೆದ ಕೆಲ ಪುಸ್ತಕಗಳಿಗೆ ಬಿಟ್ಟಿ ಪ್ರಚಾರಕೊಡಲು ಅಥವಾ ಅವಾರ್ಡು ಬಾಚಿಕೊಳ್ಳಲು ಮುಖ್ಯ ಅಸ್ತ್ರವಾಗಿ ಬಳಸುವುದು ಹಿಂದೂ ಧರ್ಮ ಅಥವಾ ಈ ನೆಲದ ಕಲೆ, ಸಂಸ್ಕೃತಿಯ ಅವಹೇಳನ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ ಅದೇ ರೀತಿ ಅದಕ್ಕೆ ಪೂರಕವಾದ ಧೋರಣೆ ಹೊಂದಿರುವ ಸರಕಾರವೂ ಇರುವುದರಿಂದ ಇದು ಅವರನ್ನು ಮೆಚ್ಚಿಸುತ್ತೆ . ಧಾರ್ಮಿಕ ಭಾವನೆಯನ್ನು ಕೆರಳಿಸಿ ಪ್ರಚಾರ ಪಡೆಯುವುದು ಬಹಳ ಸುಲಭದ ದಾರಿ .ಯಾಕೆಂದರೆ ಮೊನ್ನೆ ತಾನೆ ಪ್ರೊಫೆಸರ್ ಭಗವಾನರು ಮಾಡಿದ್ದು ಇದನ್ನೇ ,ಇಲ್ಲದೇ ಹೋದಲ್ಲಿ ಅತ್ಯಂತ ಕೆಟ್ಟದಾಗಿ ಅನುವಾದ ಮಾಡಿದ ಲೇಖಕನೊಬ್ಬನಿಗೆ ಪ್ರಶಸ್ತಿ ಬರುವುದು ಸಾಧ್ಯವಿತ್ತೇ? ಇರಲಿ ಬಿಡಿ ಇಲ್ಲಿ ಋಣಾತ್ಮಕ ವಿಚಾರಗಳಿಗೆ ಮಹತ್ವ ಜಾಸ್ತಿನೇ ಸಿಗೋದು ಆದರೆ ಕರಾವಳಿಯ ಗಂಡುಕಲೆ ಯಕ್ಷಗಾನದ ಬಗೆಗಿನ ಮೂರ್ಖತನದ ಹೇಳಿಕೆಗೆ ಪ್ರತಿಕ್ರಿಯೆ ಕೊಡಬೇಕೆನಿಸಿತು.ಯಾಕೆಂದರೆ ನಾನೊಬ್ಬ ಯಕ್ಷಗಾನದ ಅಭಿಮಾನಿ.
ನನ್ನ ಊರು ಕೊಣಾಜೆ, ನನ್ನ ಮನೆಯ ಪಕ್ಕದಲ್ಲಿ ವರ್ಷಂಪ್ರತಿ ಯಕ್ಷಗಾನ ನಡೆಯುತ್ತೆ. ಅದನ್ನು ನಡೆಸುವುದು ದುರ್ಗಾಪರಮೇಶ್ವರಿ ಸೇವಾ ಸಮಿತಿಯವರು ಅಲ್ಲಿರುವ ಸದಸ್ಯರು ಎಲ್ಲರೂ ಸೇರಿ ದುಡ್ಡು ಹಾಕಿ ಆ ಯಕ್ಷಗಾನ ನಡೆಸುವಂತದ್ದು. ಆ ಸಮಿತಿಯಲ್ಲಿ ೬೦ ಜನ ಹಿಂದೂಗಳ ಜೊತೆ ಮೂರು ಮಂದಿ ಮುಸ್ಲಿಂ ಸದಸ್ಯರು ಸೇರಿ, ನಮ್ಮ ಜೊತೆ ಕೂಡಿಕೊಂಡು ಕೆಲಸ ಮಾಡಿ ಯಕ್ಷಗಾನ ಮಾಡಿಸುವುದು ಹಲವು ವರ್ಷದಿಂದ ನಡೆದುಕೊಂಡು ಬಂದದ್ದು .ಇದೇ ರೀತಿ ಮಂಗಳೂರು ನಗರಭಾಗದಲ್ಲಿ ಕ್ರಿಶ್ಚನ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ವರು ಅತೀ ವೈಭವಯುತವಾಗಿ ನಡೆಸುವ ಯಕ್ಷಗಾನವು ಕೂಡಾ ಕರಾವಳಿಯ ಸೌಹಾರ್ದತೆಗೆ ಹಿಡಿದ ಕನ್ನಡಿ. ಆಟ ನಡೆಯುವ ಬಯಲಿನಲ್ಲಿ ವ್ಯಾಪಾರಿಗಳು ನಡೆಸುವ ಬುರ್ಜಿ ,ಸುಕುನಪ್ಪ ,ನೈಯಪ್ಪ ,ಸೋಜಿ ,ಕುರ್ಲಾರಿ ಮಾರಾಟದಲ್ಲಿ ಅನ್ಯಮತೀಯರೇ ಜಾಸ್ತಿ .ಇಲ್ಲಿ ಯಾವ ವಾತಾವರಣ ಹೇಗೆ ಕಲುಷಿತ ವಾಯಿತು ? ಎಂದು ಆ ‘ಲೇಖಕ’ರೇ ಹೇಳಬೇಕು
ಎತ್ತಿನ ಹೊಳೆ ಯೋಜನೆ: ವಿರೋಧಿಸುವುದಕ್ಕೂ ಕಾರಣಗಳಿವೆ!
– ಪ್ರಸಾದ್ ಕುಮಾರ್,ಮಾರ್ನಬೈಲ್
ಒಂದೆಡೆ ಕಳಸಾ ಬಂಡೂರಿ ಯೋಜನೆ. ಇನ್ನೊಂದೆಡೆ ಎತ್ತಿನಹೊಳೆ ನದಿ ತಿರುವು ಯೋಜನೆ. ಒಂದರಲ್ಲಿ ಉತ್ತರಕರ್ನಾಟಕದ ಜನರ ಆಕ್ರೋಶವಾದರೆ ಇನ್ನೊಂದರಲ್ಲಿ ಕರಾವಳಿಗರ ಆಕ್ರೋಶ. ವಿಚಿತ್ರವೆಂದರೆ ಅತ್ಯವಶ್ಯಕವಾಗಿರುವ ಕಳಸಾ ಬಂಡೂರಿ ವಿಚಾರದಲ್ಲಿ ಅಂಗೈ ಅಗಲದ ಗೋವಾದ ರಾಜಕಾರಣದ ಮುಂದೆ ನಮ್ಮ ಸರಕಾರ ಕುಬ್ಜವಾಗಿ ಕೂತಿದ್ದರೆ,ಸಂಶಯಾಸ್ಪದವಾಗಿರುವ ಎತ್ತಿನಹೊಳೆಯ ವಿಚಾರದಲ್ಲಿ ಮಾತ್ರ ಅನಾವಶ್ಯಕ ಪೌರುಷದ ಪ್ರದರ್ಶನ ನೀಡುತ್ತಿದೆ! ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ಕಳಸಾ ಬಂಡೂರಿ ಯೋಜನೆಯೇನಾದರೂ ಜಾರಿಯಾದರೆ ಅದರಿಂದ ರಾಜ್ಯಕ್ಕೆ ಲಾಭವಲ್ಲದೆ ಯಾವ ವಿಧದ ನಷ್ಟವೂ ಇಲ್ಲ. ಆದರೆ ಅದೇ ಎತ್ತಿನ ಹೊಳೆ ಯೋಜನೆಯೇನಾದರು ಕಾರ್ಯರೂಪಕ್ಕೆ ಬಂತು ಎಂದಾದರೆ ಅದರಿಂದ ರಾಜ್ಯವು ಗಳಿಸುವುದಕ್ಕಿಂತಲೂ ಕಳೆದುಕೊಳ್ಳುವುದೇ ಅಧಿಕ! ಕರಾವಳಿಗರ ಭಾವನೆಗಳಿಗೆ ಬೆಲೆ ನೀಡದೆ ಅತ್ತ ಬಯಲು ಸೀಮೆಗೂ ಸರಿಯಾಗಿ ನೀರು ದೊರೆಯದೆ ಎಲ್ಲಾ ರೀತಿಯಲ್ಲೂ ವಂಚನೆಗೈದಂತಾಗಲಿದೆ ಇಲ್ಲಿ! ಮೇಲಾಗಿ ಇದು ಸುಪ್ತವಾಗಿರುವ ಕರಾವಳಿಗರ ಪ್ರತ್ಯೇಕತೆಯ ಕೂಗಿಗೂ ಭವಿಷ್ಯದಲ್ಲಿ ಒಂದಷ್ಟು ಪುಷ್ಠಿ ನೀಡುವ ಸಾಧ್ಯತೆಯೂ ಇದೆ! ಮೇಲಾಗಿ ಇಲ್ಲಿ ಸಿಗುವ ನೀರಿನ ಬಗ್ಗೆಯೇ ದೊಡ್ಡ ಮಟ್ಟದ ಸಂಶಯವಿರುವುದರಿಂದ ಪೂರ್ಣ ಯೋಜನೆಯೇ ಅಂತಿಮವಾಗಿ ವಿಫಲವಾಗುವ ಸಾಧ್ಯತೆಯನ್ನೂ ಅಲ್ಲಗಳೆಯುವ ಹಾಗಿಲ್ಲ!
ಹಾಗಿದ್ದರೂ ಯಾಕಿಷ್ಟು ಆತುರ!?
ಮತ್ತಷ್ಟು ಓದು
ಕಾನೂನಿನ ಹೆಸರಲ್ಲಿ ಮರೆಯಾಗಲಿದೆಯೆ ಕರಾವಳಿಯ ಕಂಬಳ ಕ್ರೀಡೆ?
– ರಾಘವೇಂದ್ರ ಅಡಿಗ. ಹೆಚ್.ಎನ್
ಶತಮಾನಗಳ ಇತಿಹಾಸ ಹೊಂದಿರುವ ಕರ್ನಾಟಕದ ಕರಾವಳಿಯಲ್ಲಿನ ಕಂಬಳ ಕ್ರೀಡೆಗೆ ಇದೀಗ ಕಂಟಕವು ಎದುರಾಗಿದೆ. ಹೋರಿಗಳನ್ನು ಹಿಂಸಾತ್ಮಕವಾಗಿ ಬೆದರಿಸುವ ತಮಿಳುನಾಡಿನ ಜಲ್ಲಿಕಟ್ಟು ಸ್ಪರ್ಧೆ ಮತ್ತು ಮಹಾರಾಷ್ಟ್ರದ ಎತ್ತಿನ ಗಾಡಿ ಓಟದ ಸ್ಪರ್ಧೆಯನ್ನು ಸುಪ್ರೀಂ ಕೋರ್ಟ್ 2014ರ ಮೇ 7ರಂದು ನಿಷೇಧಿಸಿ ಆದೇಶ ಹೊರಡಿಸಿತ್ತು. ಪ್ರಾಣಿಗಳನ್ನು ಮನರಂಜನೆಗಾಗಿ ಹಿಂಸಾತ್ಮಕವಾಗಿ ನಡೆಸಿಕೊಳ್ಳಬಾರದು ಎಂಬುದು ನ್ಯಾಯಾಲಯದ ತೀರ್ಪಿನ ತಾತ್ಪರ್ಯವಾಗಿತ್ತು. ಇದೀಗ ಸುಪ್ರೀಂ ಕೊರ್ಟ್ ತೀರ್ಪಿನ ಹಿನ್ನೆಲೆಯನ್ನಿಟ್ಟುಕೊಂಡು ಭಾರತೀಯ ಪ್ರಾಣಿಗಳ ಕಲ್ಯಾಣ ಮಂಡಳಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕಂಬಳ ನಡೆಸದಂತೆ ಸೂಚಿಸಿದೆ. ಹೀಗಾಗಿ ದ.ಕ ಜಿಲ್ಲಾಡಳಿತದ ಕ್ರೀಡೆಗೆ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ಕಂಬಳದ ಆಚರಣೆ, ಇತಿಹಾಸ, ಹಿನ್ನೆಲೆಯ ಮೇಲೆಂದು ಇಣುಕು ನೋಟವಿಲ್ಲಿದೆ.
ಕರಾವಳಿ ಕರ್ನಾಟಕದ ಬೇಸಾಯ ವೃತ್ತಿಯೇ ಪ್ರಮುಖವಾಗಿರುವ ಸಮಾಜದಲ್ಲಿ ಕೋಣಗಳು ಅವರ ಬದುಕಿನ ಅವಿಭಾಜ್ಯ ಅಂಗವಾಗಿ ಹೋಗಿದೆ. ಬೇಸಾಯಗಾರರು ಭತ್ತದ ಗದ್ದೆಗಳಲ್ಲಿ ಉತ್ತಿದ ಬಳಿಕ ಕೋಣ ಎತ್ತುಗಳನ್ನು ಓಡಿಸುತ್ತಿದ್ದ ಆಚರಣೆ ಮತ್ತು ಆಟ ‘ಕಂಬಳ’. ಕಂಬಳ ಅತವಾ ತುಳು ಭಾಷೆಯಲ್ಲಿ ಹೇಳುವಂತೆ ‘ಕಂಬುಲ’ ಎಂದರೆ ಉಳುವುದಕ್ಕೆ ಮತ್ತು ಬೀಜಗಳ ಬಿತ್ತನೆಗೆ ಸಿದ್ದವಾಗಿರುವ ಕೆಸರುಗದ್ದೆ ಎಂದೇ ಹುರುಳು. ಕೆಸರುಗದ್ದೆಯಲ್ಲಿ, ಬಾಕಿಮಾರು ಗದ್ದೆಯಲ್ಲಿ, ಕಂಬಳ ಗದ್ದೆಯಲ್ಲಿ ದಪ್ಪನೆ ಮಯ್ಯ, ಸಾಕಿದ ಕೋಣಗಳನ್ನು ಓಡಿಸುವುದು ಒಂದು ಮನೋರಂಜನೆ ಆಟ. ಹೀಗೆಂದ ಮಾತ್ರಕ್ಕೆ ಕಂಬಳವು ಕೇವಲ ಕೋಣಗಳ ಓಟದ ಸ್ಪರ್ಧೆಯು ಮಾತ್ರವೇ ಎಂದು ತಿಳಿಯಬೇಕಿಲ್ಲ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿನ ರೈತರು ಭತ್ತದ ಕೊಯ್ಲಿನ ಬಳಿಕದಲ್ಲಿ ಮನರಂಜನೆಗಾಗಿ ಏರ್ಪಡಿಸುತ್ತಿದ್ದ ಆಟವಿದಾಗಿದ್ದು ಇಂತಹಾ ಆಚರಣೆಯ ಜತೆಗೆ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಧಾರ್ಮಿಕ ನಂಬಿಕೆಯೂ ಮಿಳಿತಗೊಂಡಿದೆ.