ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕರ್ನಾಟಕ ಸರಕಾರ’

15
ಜನ

ವೇಮುಲ ಸಾವಿನ ಬಗ್ಗೆ ಮಾತಾಡಿದವರು ಈಗೆಲ್ಲಿಹರು..?

– ಶಾರದ ಡೈಮಂಡ್

15966189_1689221931091685_622901462958428392_nನೂರಾರು ಕನಸುಗಳನ್ನು ಕಟ್ಟಿಕೊಂಡಿದ್ದ ಮುಗ್ದ ಜೀವಿಯೊಂದು ಕಾಣದ ಕೈಗಳ ಕೈವಾಡಕ್ಕೆ ಬಲಿಯಾಗಿದೆ. ಕಾಂಗ್ರೆಸ್ ಸರಕಾರದ ದುರಾಡಳಿತಕ್ಕೆ ಮತ್ತೊಂದು ಜೀವ ಮಣ್ಣಾಗಿಹೋಯಿತು. ಓದುವುದರಲ್ಲಿ ಬುದ್ಧಿವಂತನಾಗಿದ್ದ, ಸೌಮ್ಯ ಸ್ವಭಾವದವನಾದ ಅಭಿಷೇಕ್ ಮೂರು ಕುಟುಂಬಗಳಿಗೆ ಸ್ವಂತ ಮಗನಂತೆಯೇ ಇದ್ದ. ಸರ್ಕಾರಿ ಕೆಲಸವೊಂದಕ್ಕೆ ಸೇರಿ ತನ್ನನ್ನು ಕಷ್ಟಪಟ್ಟು ಸಾಕುತ್ತಿರುವ ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂಬುದೇ ಅವನ ಕನಸಾಗಿತ್ತು. ಶೃಂಗೇರಿಯ ಜೆಸಿಬಿಎಮ್ ಕಾಲೇಜಿನ ಬಿ.ಕಾಂ ಕೊನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಅಭಿಷೇಕ್ ಎಂ.ಕೆ ಎಂಬ ಹುಡುಗ ಪ್ರಸಕ್ತ ವರ್ಷದ ಕಾಲೇಜಿನ ವಾಣಿಜ್ಯ ಸಂಘದ ಅಧ್ಯಕ್ಷ! ಚೆನ್ನಾಗಿ ಓದುತ್ತಿರುವ ಆಲ್ ರೌಂಡರ್ ವಿದ್ಯಾರ್ಥಿಗಳನ್ನು ಕಾಲೇಜಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸಂಘಗಳಿಗೆ ಅಧ್ಯಕ್ಷ – ಉಪಾಧ್ಯಕ್ಷರನ್ನಾಗಿ ಕಾಲೇಜಿನವರೇ ನೇಮಿಸುತ್ತಾರೆ. ನೇಮಿಸುವಾಗ ಅವನು ಯಾವ ಸಂಘಟನೆಯವನೆಂದು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಇಂತಹ ಉತ್ತಮ ವಿದ್ಯಾರ್ಥಿಯಾದ ಅಭಿಷೇಕ್ ವಾಣಿಜ್ಯ ಸಂಘವನ್ನು ಹೊರತುಪಡಿಸಿ ತನ್ನನ್ನು ತಾನು ಎಬಿವಿಪಿ ಯಲ್ಲಿ ಗುರುತಿಸಿಕೊಂಡಿದ್ದೇ ಜೀವಕ್ಕೆ ಮುಳ್ಳಾಗುವ ಹಾಗಾಯಿತು. ಜನವರಿ ಏಳರಂದು ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಜಂಟಿಯಾಗಿ ಸೈನಿಕರಿಗೆ ಗೌರವ ಸಲ್ಲಿಸುವ “ಯೋಧನಮನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮತ್ತಷ್ಟು ಓದು »

9
ಮೇ

ರಾಜ್ಯ ಸರ್ಕಾರ ರಾಜ್ಯವನ್ನು ಏನು ಮಾಡಲು ಹೊರಟಿದೆ?

ಎಸ್.ಆರ್. ಅನಿರುದ್ಧ ವಸಿಷ್ಠ, ಭದ್ರಾವತಿ

sep1401siddaramaih1ಜಿಲ್ಲಾ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯಲ್ಲಿ ಇನ್ನಿಲ್ಲದ ತಂತ್ರಗಾರಿಕೆ ಮಾಡಿ, ತಮ್ಮ ಪಕ್ಷಕ್ಕೇ ಅಧಿಕಾರ ಬರುವಂತೆ ಮಾಡಿಕೊಂಡಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಈಗ್ಗೆ ಕೆಲವು ತಿಂಗಳ ಹಿಂದೆ ಪಂಚಾಯತ್‌ರಾಜ್ ಕಾಯ್ದೆಗೆ ತಿದ್ದುಪಡಿ ತಂದು ಜಿಪಂ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿದೆ.ಇದರ ಪರಿಣಾಮ ಈಗ ಅಧ್ಯಕ್ಷರಾಗುವವರಿಗೆ ಮಾಸಿಕ ೩೫ ಸಾವಿರ ವೇತನ, ಆತಿಥ್ಯ ಭತ್ಯೆ ೨ ಲಕ್ಷ, ಮನೆ ಬಾಡಿಗೆಗೆ ಮಾಸಿಕ ೮೦ ಸಾವಿರ, ಮನೆ ನಿರ್ವಹಣೆಗೆ ೨೦ ಸಾವಿರ, ತಿಂಗಳಿಗೆ ೧ ಸಾವಿರ ಲೀಟರ್ ಡೀಸೆಲ್, ರೈಲು ಹಾಗೂ ವಿಮಾನ ಪ್ರಯಾಣ ದರ, ದಿನ ಭತ್ಯೆ ೨ ಸಾವಿರ, ವಸತಿ ಗೃಹ ಭತ್ಯೆ ೫ ವರ್ಷಕ್ಕೆ ೧೦ ಲಕ್ಷ ದೊರೆಯುತ್ತಿದೆ. ಇದರೊಂದಿಗೆ ಅಧ್ಯಕ್ಷರಿಗೆ ಗೂಟದ ಕಾರು, ಚಾಲಕ, ಪೊಲೀಸ್ ಭದ್ರತೆ ಸಹ ಲಭ್ಯವಾಗಲಿದೆ. ಇದು ನೇರವಾಗಿ ಅವರಿಗಾಗಿ ವೆಚ್ಚ ಮಾಡುವ ಲೆಕ್ಕವಾದರೆ, ಪರೋಕ್ಷವಾಗಿ ಇನ್ನು ಲಕ್ಷಗಟ್ಟಲೆ ಇವರಿಗಾಗಿ ಸರ್ಕಾರ ವ್ಯಯ ಮಾಡುತ್ತದೆ. ಮತ್ತಷ್ಟು ಓದು »