ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕಾಂಗ್ರೆಸ್’

4
ಜುಲೈ

ಕಾಂಗ್ರೆಸೀ – ಚೀನೀ ಭಾಯಿ ಭಾಯಿ, ದೇಶ ಬಡಿದುಕೊಳ್ಳಬೇಕಿದೆ ಬಾಯಿ ಬಾಯಿ!

– ಪ್ರೇಮಶೇಖರ

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಮತ್ತು ಚೈನೀಸ್ ಕಮ್ಯೂನಿಸ್ಟ್ ಪಾರ್ಟಿಗಳ ನಡುವೆ ಹನ್ನೆರಡು ವರ್ಷಗಳ ಹಿಂದೆ ಅಂದರೆ 2008ರಲ್ಲಿ ರಹಸ್ಯ ಒಪ್ಪಂದವೊಂದಾಗಿದೆಯಂತೆ.  ವರದಿಗಳ ಪ್ರಕಾರ ಆ ಒಪ್ಪಂದಕ್ಕೆ ಸಹಿ ಹಾಕಿದ್ದು ಕಾಂಗ್ರೆಸ್ ಪರವಾಗಿ ಆಗಿನ ಜನರಲ್ ಸೆಕ್ರೆಟರಿ ಶ್ರೀ ರಾಹುಲ್ ಗಾಂಧಿ ಮತ್ತು ಸಿಸಿಪಿ ಪರವಾಗಿ ಆಗಿನ ಚೀನೀ ಉಪಾಧ್ಯಕ್ಷ ಷಿ ಜಿನ್‍ಪಿಂಗ್. ಈ ‘ರಹಸ್ಯೋತ್ಪಾಟನೆ’ ಇದುವರೆಗೆ ನಮ್ಮನ್ನು ಕಾಡುತ್ತಿದ್ದ ಹಲವಾರು ಪ್ರಶ್ನೆಗಳಿಗೆ ಉತ್ತರ ಒದಗಿಸುವಂತಿದೆ.  ಈ ಪ್ರಶ್ನೆಗಳು ಮತ್ತು ಉತ್ತರಗಳು ಏನು ಎನ್ನುವ ಮೊದಲು ಇದನ್ನೊಮ್ಮೆ ಓದಿ-

“ಚೀನೀಯರ ಜತೆಗಿನ ನಿಮ್ಮ ಆತ್ಮೀಯ ಸ್ನೇಹಸಂಬಂಧಗಳನ್ನು ಉಪಯೋಗಿಸಿಕೊಂಡು, (ಮಸೂದ್ ಅಜ಼ರ್ ವಿಷಯದಲ್ಲಿ) ಭಾರತಕ್ಕೆ ಹಿತಕಾರಿಯಾಗಿ ನಡೆದುಕೊಳ್ಳುವಂತೆ ಚೀನಾವನ್ನು ನೀವು ಮನವೋಲಿಸಬಹುದಾಗಿತ್ತಲ್ಲ?  ಹಾಗೇಕೆ ಮಾಡಲಿಲ್ಲ?  ಬದಲಾಗಿ, ಇಂದು ಚೀನಾ ನಮ್ಮ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಗ್ಗೆ ನಿವು ಖುಷಿ ಪಡುತ್ತಿದ್ದೀರಲ್ಲ?  ಚೀನೀ ನಡವಳಿಕೆಯನ್ನು ನಿಮ್ಮ ಮೋದಿ-ವಿರುದ್ಧದ ರಾಜಕೀಯ ಹಿತಾಸಕ್ತಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದೀರಲ್ಲ?” ಎಂದು ರವಿಶಂಕರ್ ಪ್ರಸಾದ್ ಮತ್ತು ಅರುಣ್ ಜೇಟ್ಲಿ ಕೇಳುವ ಪ್ರಶ್ನೆಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ಚೀನಾ ಕುರಿತಾಗಿ ರಾಹುಲ್ ಗಾಂಧಿವರ ನೀತಿಗಳನ್ನು ಅವಲೋಕಿಸೋಣ.

ಜೂನ್-ಆಗಸ್ಟ್ 2017ರ ದೊಕ್ಲಾಮ್ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಹುಲ್ ಗಾಂಧಿ ನವದೆಹಲಿಯಲ್ಲಿನ ಚೀನೀ ದೂತಾವಾಸಕ್ಕೆ ಭೇಟಿ ನೀಡಿ, ಚೀನೀ ರಾಯಭಾರಿಯ ಜತೆ ಮಾತುಕತೆ ನಡೆಸಿದ್ದರು.  “ಈ ದೇಶದ ಒಬ್ಬ ನಾಯಕನಾಗಿ ದೊಕ್ಲಾಮ್ ಬಗ್ಗೆ ವಿವರಗಳನ್ನು ಪಡೆದುಕೊಳ್ಳಲು ನನಗೆ ಹಕ್ಕಿದೆ” ಎಂದವರು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದರು.  ಆದರೆ ಆ ಭೇಟಿಯಲ್ಲಿ ದೊಕ್ಲಾಮ್ ಬಗ್ಗೆ  ಯಾವುದೇ ಮಾತುಕತೆ ನಡೆಯಲಿಲ್ಲ ಎನ್ನುವ ಸೂಚನೆ ವರ್ಷದ ನಂತರ ರಾಹುಲ್ ಗಾಂಧಿಯವರಿಂದಲೇ ಬಂತು!  ಸೆಪ್ಟೆಂಬರ್ 2018ರಲ್ಲಿ ಲಂಡನ್‌ನಲ್ಲಿ ಪತ್ರಕರ್ತರ ಸಮಾವೇಶದಲ್ಲಿ “…ನೀವು ಅಧಿಕಾರದಲ್ಲಿದ್ದರೆ ದೊಕ್ಲಾಮ್ ವಿವಾದವನ್ನು ಹೇಗೆ ನಿಭಾಯಿಸುತ್ತಿದ್ದಿರಿ?” ಎಂಬ ಪ್ರಶ್ನೆ ಬಂದಾಗ ರಾಹುಲ್ ಗಾಂಧಿ “ದೊಕ್ಲಾಮ್ ಬಗ್ಗೆ ನನ್ನಲ್ಲಿ ವಿವರಗಳಿಲ್ಲ.  ಹೀಗಾಗಿ ಈ ಪ್ರಶ್ನೆಗೆ ಉತ್ತರಿಸಲು ನನ್ನಿಂದಾಗದು” ಎಂದುತ್ತರಿಸಿದರು.  ಇದರರ್ಥ ವರ್ಷದ ಹಿಂದೆ ಅವರು ದೊಕ್ಲಾಮ್ ಬಗ್ಗೆ ಮಾತಾಡುವ ನೆಪದಲ್ಲಿ ಚೀನೀ ರಾಯಭಾರಿಯನ್ನು ಭೇಟಿಯಾದಾಗ ಅವರು ಮಾತಾಡಿರುವುದು ಬೇರೆಯೇ ವಿಷಯ!  ಇದು ಸೂಚಿಸುವುದು ಚೀನೀಯರ ಜತೆ ರಾಹುಲ್ ಗಾಂಧಿ ಹೊಂದಿರಬಹುದಾದ, ಭಾರತ-ಚೀನಾ ಸಂಬಂಧಗಳಿಂದ ಬೇರೆಯಾದ, ಹೊಕ್ಕುಬಳಕೆಯ ಬಗ್ಗೆ.  ಇದರ ಸೂಚನೆ ಮತ್ತೊಂದು ಪ್ರಕರಣದಲ್ಲೂ ದೊರೆಯುತ್ತದೆ.  ಕಳೆದ ಸೆಪ್ಟೆಂಬರ್‌ನಲ್ಲಿ ರಾಹುಲ್ ಗಾಂಧಿ ಕೈಲಾಶ್ ಮಾನ್‌ಸರೋವರ್ ಯಾತ್ರೆಯ ಮೊದಲ ಹಂತವಾಗಿ ಕಾಠ್ಮಂಡುಗೆ ಹೊರಟಾಗ ಅವರನ್ನು ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಬೀಳ್ಕೊಡಲು ನವದೆಹಲಿಯಲ್ಲಿನ ಚೀನೀ ರಾಯಭಾರಿ ಬಯಸಿದ್ದರು. ಭಾರತ ಸರ್ಕಾರದ ಅನುಮತಿ ಸಿಗದೇಹೋದದ್ದರಿಂದ ಅದು ಸಾಧ್ಯವಾಗಲಿಲ್ಲ.

ಮತ್ತಷ್ಟು ಓದು »

4
ಜುಲೈ

ಲಡಾಖ್‍ನಲ್ಲಿ ಚೀನೀ ಕಾಸೂ ಕೇಡು, ತಲೆಯೂ ಬೋಳು?

– ಪ್ರೇಮಶೇಖರ

ಭಾಗ – 2

ಜೂನ್ 15ರ ಘರ್ಷಣೆ ಮತ್ತು ಅದರಿಂದಾಗಿ ಎರಡೂ ಕಡೆ ಘಟಿಸಿದ ಪ್ರಾಣಹಾನಿಯಿಂದಾಗಿ ಉಂಟಾದ ವಿಷಮ ಪರಿಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ಭಾರತೀಯ ಮತ್ತು ಚೀನೀ ಸೇನೆಗಳ ನಡುವೆ ಜೂನ್ 22ರಂದು ಲೆಫ್ಥಿನೆಂಟ್ ಜನರಲ್ ಮಟ್ಟದ ಮಾತುಕತೆಗಳು ನಡೆದು, ಹತೋಟಿ ರೇಖೆಯಲ್ಲಿ ಮುಖ್ಯವಾಗಿ ಗಲ್ವಾನ್ ಕಣಿವೆಯಲ್ಲಿ ಶಾಂತಿ ಕಾಪಾಡಲು ಎರಡೂ ಪಕ್ಷಗಳು ಒಮ್ಮತಕ್ಕೆ ಬಂದವು.  ಜೂನ್ 6ರ ಒಪ್ಪಂದವನ್ನು ಚೀನಾ ಉಲ್ಲಂಘಿಸಿ ಘರ್ಷಣೆಗಳಿಗೆ ಕಾರಣವಾಗಿದ್ದರ ಹಿನ್ನೆಲೆಯಲ್ಲಿ ಹೊಸ ಒಪ್ಪಂದದ ಬಾಳಿಕೆಯ ಬಗ್ಗೆ ಪ್ರಶ್ನೆಗಳೆದ್ದರೂ ಈ ಬಾರಿ ಚೀನಾದಿಂದ ಹಿಂದಿನ ವಿಶ್ವಾಸಘಾತಕತನ ಮರುಕಳಿಸಲಾರದು ಎಂಬ ಆಶಾಭಾವನೆಯನ್ನೂ ಮೂಡಿಸುವ ಕಾರಣಗಳು ನಮ್ಮೆದುರಿಗಿದ್ದವು.

ವಸ್ತುಸ್ಥಿತಿಯನ್ನು ಹೊರಜಗತ್ತಿನಿಂದ ಮುಚ್ಚಿಡಲು ಚೀನಾ ಅದೆಷ್ಟೇ ಹೆಣಗಿದರೂ ಜೂನ್ ತಿಂಗಳಲ್ಲಿ ದೇಶದ ಆಂತರಿಕ ಸಂಕಷ್ಟಗಳು ಮಿತಿಮೀರಿದ ಬಗೆಗಿನ ವಿವರಗಳು ನಮಗೆ ತಿಳಿಯತ್ತಲೇ ಇವೆ. ಜೂನ್ 11ರಂದು ಆರಂಭವಾದ ವಾರ್ಷಿಕ ಮಳೆ ದೇಶದ ಮೂರನೆಯ ಎರಡು ಭಾಗಗಳಲ್ಲಿ ಅಗಾಧ ಪ್ರಮಾಣದ ಪ್ರವಾಹ ಮತ್ತು ಭೂಕುಸಿತಗಳನ್ನುಂಟು ಮಾಡುತ್ತಿದೆ.  ಇಂತಹ ಭಾರಿ ಮಳೆಯನ್ನು ಚೀನಾ ದೇಶ 1940ರ ನಂತರ ಕಂಡಿರಲಿಲ್ಲಂತೆ.  ಈ ಪ್ರಾಕೃತಿಕ ವಿಕೋಪ ಬೆಳೆಗಳಿಗೆ ವ್ಯಾಪಕ ಹಾನಿ ಮಾಡುವುದರ ಜತೆಗೆ ಸಾರಿಗೆ ಸಂಪರ್ಕವ್ಯವಸ್ಥೆಯನ್ನೂ ಹಾಳುಗೆಡವಿದೆ. ಇದು ಈಗಾಗಲೇ ಕೆಟ್ಟಿರುವ ಆಹಾರಪೂರೈಕೆಯನ್ನು ಮತ್ತಷ್ಟು ಬಿಗಡಾಯಿಸಿದೆ.  ಈ ನಡುವೆ ಯಾಂಗ್ಟ್‍ಝೆ ನದಿಗೆ ಕಟ್ಟಲಾಗಿರುವ ಬೃಹತ್ ಅಣೆಕಟ್ಟು ಕುಸಿಯುವ ಅಪಾಯ ಉಂಟಾಗಿದೆ. ಜಗತ್ತಿನ ಅತಿ ದೊಡ್ಡ ಅಣೆಕಟ್ಟುಗಳಲ್ಲೊಂದಾದ ಈ “ತ್ರೀ ಗಾರ್ಜಸ್ ಡ್ಯಾಮ್” ನಿಜಕ್ಕೂ ಕುಸಿದರೆ 24 ಪ್ರಾಂತ್ಯಗಳ ನಲವತ್ತು ಕೋಟಿ ಜನರ ಜೀವಗಳು ಅಪಾಯಕ್ಕೀಡಾಗುತ್ತವೆ.  ಅಪಾಯವನ್ನು ತಡೆಯುವ ಕ್ರಮವಾಗಿ ಅಣೆಕಟ್ಟೆಯ ಮೇಲಿನ ನೀರಿನ ಒತ್ತಡವನ್ನು ಕಡಿಮೆಗೊಳಿಸಲೆಂದು ಸರ್ಕಾರ ಜೂನ್ 29ರಂದು ಏಕಾಏಕಿ ಗೇಟ್‍ಗಳನ್ನು ತೆರೆದಿದೆ. ಆದರೆ ಮುನ್ಸೂಚನೆ ನೀಡದೆ ಹಾಗೆ ಮಾಡಿದ್ದರಿಂದಾಗಿ ನದಿಯುದ್ದಕ್ಕೂ ಉಕ್ಕಿದ ಪ್ರವಾಹಕ್ಕೆ ಹಲವಾರು ಹಳ್ಳಿ ಪಟ್ಟಣಗಳ ಲಕ್ಷಾಂತರ ಜನ ಸಿಲುಕಿಹೋದರು. ಪ್ರವಾಹ ಮತ್ರು ವಿದ್ಯುದಾಘಾತದಿಂದ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ.

ಇದರ ಜತೆಗೆ ಕೊರೋನಾ ಸೋಂಕು ದೇಶದೆಲ್ಲೆಡೆ ಮತ್ತಷ್ಥು ಉಗ್ರವಾಗಿದೆ. ರಾಜಧಾನಿ ಬೀಜಿಂಗ್ ದೊಡ್ಡ ವೂಹಾನ್ ಆಗಿ ಬದಲಾಗಿಹೋಗಿದೆ. ದಿನೇ ದಿನೇ ಅಂಕೆಮೀರಿ ಹೆಚ್ಚುತ್ತಲೇ ಇರುವ ಸೋಂಕಿತರನ್ನು ಉಪಚರಿಸಲು ರಾಜಧಾನಿಯ ಆಸ್ಪತ್ರೆಗಳಿಗೆ ಸಾಧ್ಯವಾಗುತ್ತಿಲ್ಲ.  ನಗರದ 70% ಜನತೆಗೆ ಆಹಾರಪದಾರ್ಥಗಳನ್ನು ಪೂರೈಸುವ ಮಾರುಕಟ್ಟೆಗಳು ಸೋಂಕಿನ ಪರಿಣಾಮವಾಗಿ ಜೂನ್ ಆರಂಭದಲ್ಲಿ ಮುಚ್ಚಲ್ಪಟ್ಟ ಕಾರಣ ಸಾಮಾನ್ಯ ಜನತೆ ಅತೀವ ಕಷ್ಥಕ್ಕೀಡಾಗಿದ್ದಾರೆ. ಈ ನಡುವೆ ಲಾಕ್‍ಡೌನ್ ಜಾರಿಗೊಳಿಸುವ ಅತ್ಯುತ್ಸಾಹದಲ್ಲಿಯೋ ಅಥವಾ ಸರ್ಕಾರೀ ಆದೇಶದ ಪಾಲನೆಯ ಮೇರೆಗೋ ಪೊಲೀಸರು ನಗರದ ಕೆಲವೆಡೆ ಜನರನ್ನು ಮನೆಗಳೊಳಗೆ ಕೂಡಿಹಾಕಿ ಅಪಾರ್ಟ್‍ಮೆಂಟ್ ಕಟ್ಟಡಗಳ ಪ್ರವೇಶದ್ವಾರಗಳನ್ನು ಕಬ್ಬಿಣದ ಪಟ್ಟಿಗಳಿಂದ ಬಂದ್ ಮಾಡಿದ ಕಾರಣ ಜನರ ಸಂಕಷ್ಟಗಳು ಇನ್ನಷ್ಟು ಹೆಚ್ಚಿವೆ. ಈ ನಡುವೆ ಕಮ್ಯೂನಿಸ್ಟ್ ಪಾರ್ಟಿಯ ನೇತಾರರಿಗಷ್ಟೇ ಮೀಸಲಾದ “ಮಿಲಿಟರಿ ಹಾಸ್ಪಿಟಲ್ 301”ಗೇ ಕೊರೋನಾ ಸೋಂಕು ಹರಡಿದ ಸುದ್ಹಿ ಬಂದಿದೆ.

ಮತ್ತಷ್ಟು ಓದು »

21
ಆಗಸ್ಟ್

ಅಜಾತ ಶತ್ರುವಿನ ನೆಪದಲ್ಲಿ ಆಂಧ್ರದ ಬೃಹಸ್ಪತಿಯ ನೆನೆಯುತ್ತ…

– ರಾಕೇಶ್ ಶೆಟ್ಟಿ

ಬದುಕಲಿಕ್ಕೆಂದೇ ದಿನ ಸಾಯುವವರು,ಬೇಗ ಸತ್ತರೆ ಸಾಕೆಂದು ಬದುಕುವವರ ನಡುವೆ, ಸತ್ತು ಬದುಕುವುದು ಹೇಗೆ ಎಂದು ತೋರಿಸಿಕೊಟ್ಟ ಪುಣ್ಯಾತ್ಮರಿಗೆ ಈ ದೇಶದಲ್ಲಿ ಕೊರತೆಯಿಲ್ಲ. ಅದು ಹದಿಹರೆಯದಲ್ಲೇ ನೇಣಿಗೆ ಕೊರಳೊಡ್ಡಿ ಬ್ರಿಟಿಷರ ನಿದ್ದೆಗೆಡಿಸಿದ ಭಗತನಿರಬಹುದು,ಮೈ ಆಜಾದ್ ಹೂಂ ,ಆಜಾದ್ ಹೀ ರಹೂಂಗ ಎಂದು ಬ್ರಿಟಿಷರ ಕೈಗೆ ಕಡೆಯವರೆಗೂ ಸಿಗದೇ ಹುತಾತ್ಮರಾದ ಚಂದ್ರ ಶೇಖರ್ ಆಜಾದ್ ಅವರಿರಬಹುದು,ದೇಶ ಬಿಟ್ಟು ಪರದೇಶದಲ್ಲೊಂದು ಸೈನ್ಯ ಕಟ್ಟಿ ಭಾರತವನ್ನು ದಾಸ್ಯ ಮುಕ್ತ ಮಾಡುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆಯಿರಬಹುದು (ಅವರು ವಿಮಾನಾಪಘಾತದಲ್ಲಿ ಸಾಯಲಿಲ್ಲವೆಂದೇ ಬಲವಾಗಿ ನಂಬುವವನು ನಾನು), ೬೫ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿ,ಗಾಂಧಿಯವ ಥಿಯರಿಗಳನ್ನೇ,ವಾಸ್ತವದಲ್ಲಿ ಪಾಲಿಸುವಂತೆ ಬದುಕಿದ ಸಂತ ಲಾಲ್ ಬಹಾದ್ದೂರ್ ಶಾಸ್ತ್ರಿಗಳಿರಬಹುದು,ನೆಹರೂ ಕಾಲದ ಅಡಾಲೆದ್ದು ಹೋದ ಭಾರತದ ಅರ್ಥ ವ್ಯವಸ್ಥೆಯನ್ನು ಬದಲಿಸಿ ಭಾರತದ ಆರ್ಥಿಕ ಪಥವನ್ನೇ ಬದಲಿಸಿ ನಿಲ್ಲಿಸಿದ ಪಿವಿ ನರಸಿಂಹರಾವ್ ಅವರಿರಬಹುದು,ಸ್ವಾತಂತ್ರ್ಯ ಬಂದಾಗಿನಿಂದ ಅದೇ ಕಿತ್ತು ಹೋದ,ಡಾಂಬರು ಕಾಣದ ರಸ್ತೆಗಳನ್ನು ಸುವರ್ಣ ಚತುಷ್ಪತ,ಪ್ರಧಾನ್ ಮಂತ್ರಿ ಗ್ರಾಮೀಣ್ ಸಡಕ್ ಯೋಜನೆಗಳ ಮೂಲಕ ರಾವ್ ಅವರು ಹಾಕಿಕೊಟ್ಟ ಆರ್ಥಿಕ ತಳಹದಿಯ ಮೇಲೆ ನವಭಾರತ ನಿರ್ಮಾಣಕ್ಕೆ ಶರವೇಗ ನೀಡಿದ ಕವಿಹೃದಯಿ ಅಟಲ್ ಬಿಹಾರಿ ವಾಜಪೇಯಿಯವರಿರಬಹುದು… ಹೀಗೆ ಸತ್ತು ಬದುಕುವುದು ಹೇಗೆಂದು ಹೇಳಿಕೊಟ್ಟವರ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.

ರಾಜಕಾರಣಿಯೊಬ್ಬ ಸತ್ತರೆ ಜನ ಸಾಮಾನ್ಯನೊಬ್ಬನಿಗೆ ತನ್ನದೇ ಕುಟುಂಬದ ಸದಸ್ಯನೊಬ್ಬ ಹೊರಟು ಬಿಟ್ಟನಲ್ಲ ಎನ್ನುವಷ್ಟು ದುಃಖವಾಗುತ್ತದೆಯೆಂದರೇ ಅದು ನಿಜಕ್ಕೂ ಬದುಕಿನ ಸಾರ್ಥಕತೆಯೇ ಸರಿ. ಕವಿ ಹೃದಯದ,ವಾಗ್ದೇವಿಯ ವರಪುತ್ರನಂತೆ ಮಂತ್ರಮುಗ್ಧ ವಾಗ್ಮಿಯಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಅಂತಹದ್ದೊಂದು ಬದುಕನ್ನು ಬದುಕಿ ಉದಾಹರಣೆಯಾಗಿ ಇಲ್ಲಿಂದ ಮುಂದಕ್ಕೆ ಹೊರಟಿದ್ದಾರೆ. ಆಗಸ್ಟ್ ೧೭ರ ಎಲ್ಲಾ ಪತ್ರಿಕೆ,ಚಾನೆಲ್ಲುಗಳ ತುಂಬಾ ವಾಜಪೇಯಿಯವರ ಜೀವನ ಚರಿತ್ರೆ, ಭಾಷಣಗಳು,ವ್ಯಕ್ತಿಚಿತ್ರಣ ತುಂಬಿ ಹೋಗಿತ್ತು.ಈಗಾಗಲೇ ವಾಜಪೇಯಿಯವರ ಬಗ್ಗೆ ಹಲವಾರು ಲೇಖನಗಳು ಬಂದಿವೆ,ಇನ್ನು ಅವರ ಬಗ್ಗೆ ಬರೆಯಲಿಕ್ಕೆ ಉಳಿದಿರುವುದಾದರೂ ಏನು ಅನ್ನಿಸುತ್ತದೆ.ಆದರೆ ಮಹಾನ್ ವ್ಯಕ್ತಿಗಳು ಬದುಕಿದ್ದಾಗ ಮಾತ್ರವಲ್ಲ,ಮರಣದಲ್ಲೂ ಸಂದೇಶಗಳನ್ನು ಬಿಟ್ಟು ಹೋಗುತ್ತಾರೆ ಅಥವಾ ಅವರ ಶಿಷ್ಯರು ಆ ಕೆಲಸವನ್ನು ಮಾಡುತ್ತಾರೆ. ವಾಜಪೇಯಿಯವರ ಅಂತಿಮ ಯಾತ್ರೆ ಅಂತಹದ್ದೊಂದು ಗಟ್ಟಿಯಾದ ಸಂದೇಶವನ್ನು ದೆಹಲಿ ರಾಜಕಾರಣದಲ್ಲಿ ಘಂಟಾಘೋಷವಾಗಿ ಮೊಳಗಿಸಿದೆ. ಅಂತಿಮ ಯಾತ್ರೆಯ ಐದು ಕಿಲೋಮಿಟರ್ರುಗಳನ್ನು ಪ್ರಧಾನಿ ನರೇಂದ್ರ ಮೋದಿ,ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ನಡೆದುಕೊಂಡೇ ಸಾಗಿದರು. ರಸ್ತೆಯ ತುಂಬೆಲ್ಲಾ ಜನಸಾಗರ ಸೇರಿತ್ತು. ರಾಜೀವ್ ಗಾಂಧೀಯವರ ಅವರ ಹತ್ಯೆಯಾಗಿ ಅಂತಿಮ ಯಾತ್ರೆ ನಡೆದಾಗ ಸೇರಿದ್ದು ಬಿಟ್ಟರೆ ದೆಹಲಿ ಮತ್ತೆ ಇಷ್ಟು ಜನರನ್ನು ನೋಡಿದ್ದು ಈಗಲೇ ಎನ್ನುವ ಮಾತುಗಳು ಕೇಳಿಬಂದವು.ನಿಜವಾಗಿಯೂ ದೆಹಲಿಗೆ ೧೪ ವರ್ಷಗಳ ಹಿಂದೆಯೇ ಅಂತಹದ್ದೊಂದು ದಿನ ಬಂದಿತ್ತು.ಅದು ಪಿ.ವಿ ನರಸಿಂಹರಾವ್ ಅವರು ಮರಣ ಹೊಂದಿದ್ದ ದಿನ. ನೆಹರೂ ಕಾಲದ ಹಳಿತಪ್ಪಿ ಅಡಾಲೆದ್ದು ಹೋಗಿದ್ದ ಅರ್ಥಿಕ ನೀತಿಯನ್ನೇ ೯೦ರ ದಶಕದವರೆಗೂ ನಡೆಸಿಕೊಂಡು ಭಾರತವನ್ನು ಜಗತ್ತಿನ ಬಲಾಢ್ಯ ರಾಷ್ಟ್ರಗಳ ಮುಂದೆ ಮಂಡಿಯೂರಿ ದೈನೇಸಿ ಸ್ಥಿಯಲ್ಲಿ ಕುಳಿತಿರುವಂತೆ ಮಾಡಲಾಗಿತ್ತಲ್ಲ,ಆ ಸ್ಥಿತಿಯನ್ನು ಬದಲಿಸಿ ಭಾರತದ ನವ ಆರ್ಥಿಕತೆಯಾ ರೂವಾರಿ,ಆಂಧ್ರದ ಜನರ ಪ್ರೀತಿಯ ಬೃಹಸ್ಪತಿ,ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ೨೦೦೪ರಲ್ಲಿ ತಮ್ಮ ದೇಹವನ್ನು ತ್ಯಜಿಸಿದರು. ಆದರೆ,ದೇಶದ ಜನರಿಗೆ ಅಂತಹದ್ದೇನೂ ನಡೆಯಲೇ ಇಲ್ಲ,ಅಸಲಿಗೆ ಆ ವ್ಯಕ್ತಿಯ ಸಾವು ಒಂದು ಸುದ್ದಿಯೇ ಅಲ್ಲವೆನ್ನುವಂತೆ ಮಾಡಿಸುವಲ್ಲಿ ನೆಹರೂ ಪರಿವಾರ ಮತ್ತು ಅವರ ಸಾಕು ನಾಯಿಗಳಂತೆ ವರ್ತಿಸುವವರು ಮಾಡಿದ್ದರು.

ಮತ್ತಷ್ಟು ಓದು »

17
ಜುಲೈ

ಕುಮಾರಸ್ವಾಮಿಯವರ ಕಣ್ಣೀರಿಗೆ ಕಾರಣ ಯಾರು?

-ರಾಕೇಶ್ ಶೆಟ್ಟಿ

‘ಈ ಮೊದಲು, ಕಂಡ ಕಂಡಲ್ಲಿ ನಿದ್ದೆ ಮಾಡುವ ಮುಖ್ಯಮಂತ್ರಿಯನ್ನು ಕರ್ನಾಟಕ ಕಂಡಿತ್ತು.ಈಗ ಖರ್ಚಿಫು ಒದ್ದೆ ಮಾಡುವ ಮುಖ್ಯಮಂತ್ರಿಯನ್ನು ಕಾಣುತ್ತಿದೆ.’ ಹೀಗೊಂದು ಜೋಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ನಾನೊಬ್ಬ ಸಾಂದರ್ಭಿಕ ಶಿಶು,ನಾನು ಕರ್ಣ,ನಾನು ವಿಷಕಂಠ… ಹೀಗೆ ಗಂಟೆಗೊಮ್ಮೆ- ಘಳಿಗೆಗೊಮ್ಮೆ ತಮ್ಮನ್ನು ಪೌರಾಣಿಕ ಪಾತ್ರಗಳೊಂದಿಗೆ ಹೋಲಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕುರಿತು ತರೇವಾರಿ ಜೋಕುಗಳು ಹರಿದಾಡುತ್ತಿವೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಧರ್ಮಸಿಂಗ್ ಅವರ ಗಾದಿಯನ್ನು ಪಲ್ಲಟಗೊಳಿಸಿ ಬಿಜೆಪಿಯ ಜೊತೆಗೂಡಿ ೨೦-೨೦ ಒಪ್ಪಂದದ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗುವ ಮೂಲಕ, ರಾಜ್ಯ ರಾಜಕೀಯದಲ್ಲಿ ಒಮ್ಮೆಲೇ ಸ್ಟಾರ್ ಆಗಿ ಹೊರಹೊಮ್ಮಿದವರು ಕುಮಾರಸ್ವಾಮಿಯವರು.ಆಗಿನ ಸಂದರ್ಭದಲ್ಲಿ ಅವರೆಂದೂ ತನ್ನನ್ನು ಹೀಗಿನಂತೆ ‘ಸಾಂದರ್ಭಿಕ ಶಿಶು,ಕರ್ಣ” ಅಂತೆಲ್ಲ ಹೋಲಿಸಿಕೊಂಡು ಕಣ್ಣೀರಿಟ್ಟಿರಲಿಲ್ಲ. ಕಣ್ಣೀರಿಡುವ ಸಂದರ್ಭವೂ ಬಂದಿರಲಿಲ್ಲ.ಯಾಕೆಂದರೆ ಅದು ಒಪ್ಪಿಕೊಂಡು ಆಗಿದ್ದ ಮದುವೆ.ಮದುವೆಯ ನಂತರ ಬರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಆಗಿನ ಸರ್ಕಾರದಲ್ಲಿ ಬಂದರೂ ತಮ್ಮ ೨೦ ತಿಂಗಳ ಅವಧಿಯನ್ನಂತೂ ಕುಮಾರಸ್ವಾಮಿ ಯಶಸ್ವಿಯಾಗಿಯೇ ದಾಟಿದ್ದರು. ಕೇವಲ ದಾಟಿದ್ದು ಮಾತ್ರವಲ್ಲ,ದಶಕಗಳ ಹಿಂದೆ ಅವರು ನೀಡಿದ ೨೦ ತಿಂಗಳ ಆಳ್ವಿಕೆಯನ್ನೇ ಮೊನ್ನೆ ಮೊನ್ನೆಯ ಚುನಾವಣೆಯಲ್ಲೂ ಅವರ ಪಕ್ಷ ಪ್ರಮುಖವಾಗಿ ಬಿಂಬಿಸಿಕೊಂಡಿತ್ತು. ಮಾತೆತ್ತಿದರೆ ಕುಮಾರಸ್ವಾಮಿಯವರ ೨೦ ತಿಂಗಳಲ್ಲಿ ನೀಡಿದ ಆಡಳಿತವನ್ನು ನೋಡಿ ಜನರು ನಮ್ಮ ಪಕ್ಷಕ್ಕೆ ಮತ ನೀಡಬೇಕು ಎನ್ನುತ್ತಿದ್ದರು. ಬಿಜೆಪಿಯೊಂದಿಗಿನ ಸಮ್ಮಿಶ್ರ ಸರ್ಕಾರದ ೨೦ ತಿಂಗಳ ಆಡಳಿತದಲ್ಲಿ ಗಳಿಸಿಕೊಂಡಿದ್ದ ಅಂತಹ ಹೆಸರನ್ನು, ಕಾಂಗ್ರೆಸ್ ಜೊತೆ ಸೇರಿ ೨ ತಿಂಗಳಲ್ಲೇ ಕಳೆದುಕೊಂಡಿದ್ದಾರೆ ಕುಮಾರಸ್ವಾಮಿಯವರು.ಕಳೆದುಕೊಂಡ ನಂತರ ಕಣ್ಣೀರಿಟ್ಟು ಮಾಧ್ಯಮವನ್ನು,ಜನರನ್ನು ದೂಷಿಸಿದರೆ ಏನು ಪ್ರಯೋಜನ? ಅಸಲಿಗೆ ಕುಮಾರಸ್ವಾಮಿಯವರ ಕಣ್ಣೀರಿಗೆ ಕಾರಣ ಯಾರು ಎಂದು ನೋಡಲಿಕ್ಕೆ ಹೋದರೆ ಖುದ್ದು ಅವರು ಹಾಗೂ ಅವರ ತಂದೆಯವರೇ ಎಂದು ಹೇಳಬೇಕಾಗುತ್ತದೆ.

ಮತ್ತಷ್ಟು ಓದು »

11
ಮೇ

ಮುಧೋಳ ನಾಯಿಯ ಜೊತೆಯ ಹೋಲಿಕೆಗೆ ಇವರು ಅರ್ಹರೇ?

– ಸಂತೋಷ್ ತಮ್ಮಯ್ಯ 
ಚುನಾವಣೆ ಸಮೀಪಿಸಿದಾಗಲೆಲ್ಲಾ ಕಾಂಗ್ರೆಸಿಗರು, “ನಮ್ಮ ಇತಿಹಾಸ ತೆರೆದ ಪುಸ್ತಕವಿದ್ದಂತೆ’,‘ದೇಶಕ್ಕೆ ಕಾಂಗ್ರೆಸಿನ ಕೊಡುಗೆಯೇನೆಂಬುದನ್ನು ಯಾರಿಗೂ ನಿರೂಪಿಸುವ ಆವಶ್ಯಕತೆಯಿಲ್ಲ’ಎಂದು ಆಲಾಪಿಸತೊಡಗುತ್ತಾರೆ. ಅವರ ತೆರೆದ ಪುಸ್ತಕದ ಕೆಲವೇ ಪುಟಗಳನ್ನು ನೋಡಿದರೆ ಅಲ್ಲಿ ವಿಚಿತ್ರಗಳೇ ಕಾಣಿಸುತ್ತವೆ. ಇದು ಅಂಥ ಒಂದು ಸ್ಯಾಂಪಲ್.
ಲಾಲ್ ಬಹೂದ್ದೂರ್ ಶಾಸ್ತ್ರಿಗಳ ಬಾಯಿಂದ ಭಾರತ್ ಕೀ ಆಯೂಬ್ ಎಂದು ಬೆನ್ನು ತಟ್ಟಿಸಿಕೊಂಡ ಒರ್ವ ಯೋಧ ಕ್ಯಾ.ಆಯೂಬ್ ಖಾನ್. ವೀರ ಚಕ್ರ ಪುರಷ್ಕೃತ ಕ್ಯಾ.ಖಾನ್‌ಗೆ ಶಾಸ್ತ್ರಿ ಮೇಲೆ ಅದೆಷ್ಟು ಅಭಿಮಾನವಿತ್ತೆಂದರೆ ನಿವೃತ್ತಿಯ ನಂತರ ಅವರು ಕಾಂಗ್ರೆಸ್‌ಗೆ ಸೇರಿದರು. ಎರಡು ಬಾರಿ ರಾಜಾಸ್ಥಾನದ ಜುಂಜುನು ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸಿ ಸಂಸದರೂ ಆದರು. ಆದರೆ ಆಯೂಬ್ ಖಾನರಿಗೆ ಶಾಸ್ತ್ರಿಗಳ ನಿಧನಾನಂತರ ಯಾಕೋ ತನ್ನ ಆಯ್ಕೆ ತಪ್ಪಿದೆ ಎನಿಸತೊಡಗಿತು. ಇಂದಿರಾ ಸರ್ವಾಧಿಕಾರ ಮತ್ತು ರಾಜೀವ್ ಗಾಂಧಿ ಪಟಾಲಮ್ಮಿನ ಸೈನಿಕ ವಿರೋಧಿ ನೀತಿಗಳನ್ನು ಸಹಿಸುವಷ್ಟು ದಿನ ಸಹಿಸಿದರು. ಕೊನೆಗೆ ಶಾಸ್ತ್ರಿಗಳಿಗಾದ ಸ್ಥಿತಿ ನರಸಿಂಹರಾಯರಿಗೂ ಬಂದಾಗ ಹಿಂದೆ ಮುಂದೆ ನೋಡದೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ರಾಜಕೀಯ ಸಂನ್ಯಾಸ ಸ್ವೀಕರಿಸಿದರು. ಕೊನೆ ಕಾಲದಲ್ಲಿ ಆಯೂಬ್ ಖಾನರಿಗೆ ಕಾಂಗ್ರೆಸ್ ಸೇರಿದ್ದ ಬಗ್ಗೆ ಎಷ್ಟು ಪಾಪಪ್ರಜ್ಞೆ ಕಾಡುತ್ತಿತ್ತೆಂದರೆ ಆರೋಗ್ಯ ವಿಚಾರಿಸಲು ಬಂದ ವಾಜಪೇಯಿಯವರ ಪಾದಸ್ಪರ್ಶಕ್ಕೆ ಅನುಮತಿಯನ್ನೂ ಆ ಯೋಧ ಕೇಳಿದ್ದರು. ಏಕೆಂದರೆ ಒಬ್ಬ ದೇಶಭಕ್ತ ಯೋಧ ಮತ್ತು ಕಾಂಗ್ರೆಸಿಗ ಏಕಕಾಲಕ್ಕೆ ಆಗಲು ಸಾಧ್ಯವಿಲ್ಲ ಎಂಬ ಸತ್ಯ ಆಯೂಬ್ ಖಾನರಿಗೆ ತಮ್ಮ ಕೊನೆಕಾಲದಲ್ಲಿ ಅರ್ಥವಾಗಿತ್ತು.
ಹಾಗಾಗಿಯೋ ಏನೋ ಸ್ವಾತಂತ್ರ್ಯಾನಂತರ ರಾಜಕಾರಣಕ್ಕೆ ಬಂದ ಶೇ.೯೯ರಷ್ಟು ಮಾಜಿ ಯೋಧರು ಕಾಂಗ್ರೆಸಿಗೆ ಸೇರಲಿಲ್ಲ. ಕ್ಯಾ.ಅಮರೀಂದರ್ ಸಿಂಗರನ್ನೇ ನೋಡಿ. ಅವರೋರ್ವ ಕಾಂಗ್ರೆಸಿಗ ಎಂಬುದಕ್ಕಿಂತ ಹೆಚ್ಚಾಗಿ ಸಿಕ್ಖ್ ನಾಯಕನಾಗೇ ದೇಶಕ್ಕೆ ಕಾಣುತ್ತಾರೆ. ಇತ್ತೀಚೆಗೆ ಕೆನಡಾದ ಪ್ರಧಾನಿ ಭಾರತಕ್ಕೆ ಬಂದಾಗ ಅವರು ನಡೆದುಕೊಂಡ ರೀತಿಯಿಂದ ಹಿಡಿದು ಕಾರ್ಗಿಲ್ ಯುದ್ಧ, ಉರಿ ಆಕ್ರಮಣ, ಪಟಾನ್‌ಕೋಟ್ ದಾಳಿಗಳ ಸಂದರ್ಭದಲ್ಲೆಲ್ಲಾ ಅವರು ಮುಖ್ಯಮಂತ್ರಿಯಾಗಿ ಕಂಡದ್ದಕ್ಕಿಂತಲೂ ಮಾಜಿ ಯೋಧನಾಗಿಯೇ ಕಂಡರು. ರಾಜೇಶ್ ಪೈಲೆಟ್ ಎಂಬ ಸೋನಿಯಾ ಮನೆಯ ನಿಯತ್ತಿನ ಪ್ರಾಣಿಯೊಂದನ್ನು ಬಿಟ್ಟರೆ ಅಣ್ಣಾ ಹಜಾರೆ, ರಾಜ್ಯವರ್ಧನ ಸಿಂಗ್ ರಾಥೋಡ್, ಜ. ವಿಕೆ ಸಿಂಗ್, ಬಿ.ಸಿ ಖಂಡೂರಿ, ಜೆಎಫ್‌ಆರ್ ಜೆಕಬ್, ಕುಂಜ್ಞಿರಾಮನ್ ಪಾಲಟ್ ಕಂಡೇತ್, ಜಸ್ವಂತ್ ಸಿಂಗ್, ಕ್ಯಾ.ಜಗತ್ ರ್ ಸಿಂಗ್ ದ್ರೋಣ, ಅಡ್ಮಿರಲ್ ವಿಷ್ಣು ಭಾಗ್ವತ್‌ರಂಥಾ ನೂರಾರು ಮಾಜಿ ಯೋಧರು ರಾಜಕಾರಣದಲ್ಲಿದ್ದರೂ ಅವರಾರೂ ಕಾಂಗ್ರೆಸಿದ್ದೆಡೆ ಮಗ್ಗುಲು ಕೂಡಾ ಬದಲಿಸಿಲ್ಲ!
ಯಾಕೆಂದರೆ ಸೈನಿಕನನ್ನ್ನು ಗೌರವಿಸಿದ ಒಂದೇ ಒಂದೇ ಒಂದು ಉದಾಹರಣೆ ಕಾಂಗ್ರೆಸಿನಲ್ಲಿ ಕಾಣಸಿಕ್ಕುವುದಿಲ್ಲ. ಕಾಂಗ್ರೆಸಿನ ಮನೆದೇವರು ನೆಹರೂ ಪ್ರತಿಷ್ಠಾಪನೆಯಾದಂದಿನಿಂದಲೂ ಆ ಗುಣ ಅವರ ‘ತೆರೆದ ಪುಸ್ತಕ ’ದಲ್ಲಿ ಕಂಡುಬರುತ್ತವೆ. ಏಕೆಂದರೆ ದೇಶ ಸ್ವಾತಂತ್ರ್ಯದ ಆನಂದದಲ್ಲಿ ತೇಲುತ್ತಿದ್ದರೆ ಅತ್ತ ಸೇನೆಗಿನ್ನೂ ಸ್ವಾತಂತ್ರ್ಯ ಸಿಕ್ಕಿರಲಿಲ್ಲ! ೧೯೪೭ರ ಆಗಸ್ಟ್ ೧೫ರಂದು ಮೌಂಟ್ ಬ್ಯಾಟನ್ ಜಾಗಕ್ಕೆ ನೆಹರೂ ಬಂದು ಕೂತಾಗ ನೆಹರೂಗೆ ಸೇನಾ ಮುಖ್ಯಸ್ಥ ಕೂಡಾ ಭಾರತೀಯನೇ ಆಗಿರಲಿ ಎಂಬ ಮನಸ್ಸು ಬಂದಿರಲಿಲ್ಲ. ಯಾವ ಹಿಂಜರಿಕೆಯೂ ಇಲ್ಲದೆ ನೆಹರೂ ಅದೇ ದಿನ ರಾಬ್ ಲೊಖಾರ್ಟ್ ಎಂಬವನನ್ನು ಸೇನಾ ದಂಡನಾಯಕನನ್ನಾಗಿ ನೇಮಿಸಿದರು. ಕೊನೆಗೆ ಈ ಲೊಖಾರ್ಟನಿಗೇ ನಾಚಿಕೆಯಾಗಿ ಇಂಗ್ಲೆಂಡಿಗೆ ಹೊರಟುಹೋದ. ನಂತರ ಕೂಡಾ ನೆಹರೂ ಸ್ವತಂತ್ರ ತೀರ್ಮಾನ ತೆಗೆದುಕೊಳ್ಳುವ ಗುಣ ಭಾರತೀಯರಿಗೆಲ್ಲಿದೆ ಎನ್ನುತ್ತಾ ಮತ್ತೊಬ್ಬ ಬಿಳಿಯ ರಾಯ್ ಬುಷರ್ ನನ್ನು ನೇಮಕ ಮಾಡಿದರು. ಒಂದು ವರ್ಷದವರೆಗೆ ಸೇನಾ ಮುಖ್ಯಸ್ಥನಾಗಿದ್ದ ಬುಷರ್ ಮತ್ತಷ್ಟು ವರ್ಷ ಮುಂದುವರಿಯುತ್ತಿದ್ದನೋ ಏನೋ. ಆದರೆ ದೇಶೀ ಸೇನಾ ನಾಯಕನ ಕೂಗು ಸೈನ್ಯದೊಳಗೆ ಗಟ್ಟಿಯಾಗುತ್ತಿತ್ತು. ಆಗ ನೆಹರೂ ಅಂದಿನ ರಕ್ಷಣಾ ಸಚಿವ ಬಲವಂತ್ ಸಿಂಗ್ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಒಲ್ಲದ ಮನಸ್ಸಿನಿಂದ ಕೆ.ಎಂ ಕಾರ್ಯಪ್ಪನವರನ್ನು ಸೇನಾ ಮಹಾದಂಡನಾಯಕನನ್ನಾಗಿ ನೇಮಕ ಮಾಡಿದರು. ಮತ್ತು ಕಾರ್ಯಪ್ಪರ ಮೇಲೆ ಒಂದು ಕಣ್ಣಿಡಲಾರಂಭಿಸಿದರು. ಸರಿಯಾಗಿ ಅದೇ ಹೊತ್ತಲ್ಲಿ ಪಾಕಿಸ್ಥಾನದ ಆಕ್ರಮಣದ ಸೂಚನೆಯೂ ಇದ್ದುದರಿಂದ ನೆಹರೂಗೆ ಹಾಗೆ ಮಾಡದೆ ಬೇರೆ ದಾರಿ ಇರಲಿಲ್ಲ. ಕಾಶ್ಮೀರ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕಾರ್ಯಪ್ಪ ಕಳುಹಿಸಿದ ಮತ್ತೊಬ್ಬ ಅಧಿಕಾರಿ ತಿಮ್ಮಯ್ಯ ಕೆಲವೇ ದಿನಗಳಲ್ಲಿ ಕಾಶ್ಮೀರಿಗಳ ಮನಸ್ಸು ಗೆದ್ದಿದ್ದು ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಜನರು ತಿಮ್ಮಯ್ಯ ಆಳಿದರೆ ನಾವು ಭಾರತ ಒಕ್ಕೂಟಕ್ಕೆ ಸೇರುವೆವು ಎಂದದ್ದೆಲ್ಲವೂ ನೆಹರೂಗೆ ನಡುಕ ಹುಟ್ಟಿಸಿ ಕಾರ್ಯಪ್ಪ ಮತ್ತು ತಿಮ್ಮಯ್ಯರಿಬ್ಬರನ್ನೂ ತಣ್ಣಗೆ ದ್ವೇಷಿಸತೊಡಗಿದರು. ಇವೆಲ್ಲವನ್ನೂ ಜಾರಿಗೆ ತರುತ್ತಿದ್ದವನು ಹಿಟ್ಲರನ ಹಿಂದಿದ್ದ ಹಿಮ್ಲರ್ ನಂಥ ಸರ್ದಾರ್ ಬಲವಂತ್ ಸಿಂಗ್. ಅಂದರೆ ‘ಕಾರ್ಯಪ್ಪ-ತಿಮ್ಮಯ್ಯರನ್ನು ನೆಹರೂ-ಮೆನನ್‌ಗಳು ಸರಿಯಾಗಿ ನಡೆಸಿಕೊಳ್ಳಲಿಲ್ಲ’ ಎಂಬ ಮೋದಿ ಹೇಳಿಕೆ ಕಾಂಗ್ರೆಸಿನ ‘ತೆರೆದ ಪುಸ್ತಕ’ದಲ್ಲೇ ಇವೆ ಎಂದಂತಾಯಿತು!

ಮತ್ತಷ್ಟು ಓದು »

11
ಮೇ

ದಲಿತರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಹುನ್ನಾರ ಇನ್ನೆಷ್ಟು ದಿನ ಮುಂದುವರೆಯುವುದು?

– ಶಿವಾನಂದ ಸೈದಾಪೂರ

ಪಿ.ಜಿ ಡಿಪ್ಲೊಮಾ ಇನ್ ಅಂಬೇಡ್ಕರ್ ಸ್ಟಡಿಸ್

ಬೆಳಗಾವಿ.

ಈಗಲೇ ಎರಡು ದಿನಗಳಲ್ಲಿ ನಡೆದ ಘಟನೆಗಳು; ನೂರಕ್ಕೆ ನೂರರಷ್ಟು ಮತದಾನದ ಜಾಗೃತಿಗಾಗಿ ಊರೂರುಗಳಿಗೆ ಸಂಪರ್ಕ ಮಾಡುತ್ತಿರುವ ಹೊತ್ತಲ್ಲಿ ಆದ ಸ್ವಂತ ಅನುಭವ. ದಲಿತರ ಓಣಿಗಳನ್ನು ಪ್ರವೇಸಿಸುವಾಗ ನಡೆದಂತದ್ದವುಗಳು. ಘಟನೆ  ಓಣಿಯ ಪ್ರವೇಶಕ್ಕೂ ಮೊದಲು ಗಮನಿಸಿದಾಗ ಕಣ್ಣಿಗೆ ರಾಚುವಂಥದ್ದು; ಈ ಕೇರಿಯಲ್ಲಿ ಕಾಂಗ್ರೆಸ್ ಒಂದನ್ನು ಬಿಟ್ಟು ಬಿಜೆಪಿಯವರಿಗೆ ಪ್ರವೇಶವಿಲ್ಲ! ಈ ರೀತಿ ಫಲಕ ನೇತಾಡುತಿತ್ತು. ಇಂತಹ ವಾತಾವರಣ ಇನ್ನೂ ಯಾಕೆ ಹೀಗಿದೆ? ಚುನಾವಣೆ ಸಂದರ್ಭದಲ್ಲಿಯೇ ಯಾಕೆ ಹೀಗೆ? ಇದನ್ನು ಏನು ಅಂತ ತರ್ಕಿಸಬಹುದು? ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಯಾಕೆ ಈ ವಾತಾವರಣ? ಅಸ್ಪೃಶ್ಯತೆ ನಿವಾರಣೆಗಾಗಿ ಒಂದು ಕಡೆ ಹೋರಾಟಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಅವರನ್ನು ಸ್ವೃಶ್ಯ ಸಮಾಜ ವಾಸಿಯಾಗಲು ಬಿಡದೆ ನಡೆಸುತ್ತಿರುವ ರಾಜಕೀಯ ಷಡ್ಯಂತ್ರವೇ ಬಹಳಷ್ಟಿವೆ.

ಘಟನೆ ಎರಡು; ರಾಯಬಾಗ ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದೇ ಹೆಸರಾದ ಹಿಡಕಲ್ ನಲ್ಲಿ ನಡೆದದ್ದು. ಇದೇ ಒಂದು ವಾರದಲ್ಲಿ ನಡೀದಿದೆ. ದಲಿತರ ಓಣಿಯಲ್ಲಿ ಮಹಿಳೆಯೊಬ್ಬಳು ಬೈಗುಳಗಳುಳ್ಳ ವಿಡಿಯೋವೊಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿರುವುದೇನು ಸಾಮಾನ್ಯ ಸಂಗತಿಯೇನಲ್ಲ. ಹಾಲಿ ಶಾಸಕ ಮತ್ತು ಈ ಸಲದ ಕುಡಚಿ ಮತ  ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ರಾಜು ಅವರನ್ನು ಅತ್ಯಂತ ಕೀಳು ಮಟ್ಟಕ್ಕಿಳಿದು ಬಾಯಿಗೆ ಬಂದಂತೆ ನಿಂದಿಸುತ್ತಿರುವುದು. ಸ್ವತಃ ತಾನು ಒಬ್ಬ ಹೆಣ್ಣು ಅನ್ನೋದನ್ನು ಮರೆತು ಪಿ.ರಾಜು ಅವರ ತಾಯಿಯನ್ನು ಬೈಯುತ್ತಿರುವುದು.  ಹೇಳುವುದಕ್ಕೆ ಸಾಧ್ಯವೇ ಇಲ್ಲದ ಕನಿಷ್ಠ ಮಟ್ಟದ ಶಬ್ದಗಳನ್ನು ಬಳಸಿ ಬೈಯುತ್ತಿರುವುದನ್ನು ನೋಡಿದರೆ ಎಂಥವರಿಗಾದರೂ ಮೈ ಬೆವರುತ್ತದೆ. ಆ ಕೀಳುಮಟ್ಟದ ಶಬ್ದಗಳನ್ನು ಕೇಳಿದರೆ ಯಾವ ಸ್ತ್ರೀ ಪುರುಷರು ಅಸಹ್ಯ ಪಡುವದರಲ್ಲಿ ಎರಡು ಮಾತಿಲ್ಲ. ಇಷ್ಟಕ್ಕೂ ಆ ವಿಡಿಯೋದಲ್ಲಿ ಮಹಿಳೆ ಮಾಡುತ್ತಿರುವುದಾದರೇನು ಗೊತ್ತೇ? ಈ ಸಲದ ಕುಡಚಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಅಮಿತ್ ಘಾಟಗೆ ಪರ ಪ್ರಚಾರ ಮಾಡುತ್ತಿದ್ದಾಳೆ. ಸ್ವತಃ ಅವಳೇ ಹೇಳುತ್ತಾಳೆ ದಲಿತಕೇರಿಗಳಲ್ಲಿ ಅಮಿತ್ ಘಾಟಗೆ ಮತ್ತು ಸಿದ್ದರಾಮಯ್ಯನವರನ್ನು ಬಿಟ್ಟರೆ ಬೇರೆ ಯಾರೂ ಬರಬಾರದಂತೆ!  ಉಳಿದವರ್ಯಾರು ದಲಿತ ಕೇರಿಯ ಸಮೀಪ ಕೂಡ ಸುಳಿಬಾರದಂತೆ! ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳಲ್ಲಿ ಐವತ್ತಕ್ಕೂ ಅಧಿಕ ವರ್ಷಗಳ ಕಾಲ ಈ ದೇಶವನ್ನು ಆಳಿದ್ದು ಕಾಂಗ್ರೆಸ್ ಸರ್ಕಾರವೇ. ಆದರೆ ಅಭಿವೃದ್ಧಿಗಿಂತ ಜನಸಾಮಾನ್ಯರಲ್ಲಿ ಯಾವ ರೀತಿ ಜಾತಿಯತೆಯನ್ನು ಬಿತ್ತಿ ಬೆಳೆಸಿದೆ ಎಂಬುವುದು ಇದರಿಂದಲೇ ಸ್ಪಷ್ಟವಾಗುತ್ತದೆ.

ಮತ್ತಷ್ಟು ಓದು »

18
ಏಪ್ರಿಲ್

‘ಕೈ’ ಪಕ್ಷಕ್ಕೆ ಈ ಸಲ ಜನತೆ ‘ಕೈ’ ಕೊಡಬೇಕಿದೆ !

– ಅಭಿಷೇಕ್ ಬಿ ಎಸ್
‘ಕರ್ನಾಟಕ ನಂಬರ್ 1 ರಾಜ್ಯ’ – ಮೇಲಿಂದಲೋ ಕೆಳಗಿಂದಲೋ ?

ಕರ್ನಾಟಕ ಮತ್ತೊಮ್ಮೆ ಚುನಾವಣೆಯ ಕಡೆ ಮುಖ ಮಾಡಿ ನಿಂತಿದೆ. ಒಂದು ಸರ್ಕಾರದ ಅಧಿಕಾರಾವಧಿ ಮುಗಿತಾ ಬರ್ತಾ ಇದೆ. ಹೊಸ ಸರ್ಕಾರವನ್ನ ನಿರ್ಧಾರ ಮಾಡುವ ಅಧಿಕಾರ ನೇರವಾಗಿ ಜನರ ಬಳಿಗೆ shift ಆಗತ್ತೆ. ಕಳೆದ ಮೂರು ಚುನಾವಣೆಗಳಲ್ಲಿ ಕರ್ನಾಟಕ ಮೂರೂ ಪಕ್ಷಗಳ ಅಧಿಕಾರವನ್ನ ನೋಡಾಗಿದೆ. ಹಾಗಿದ್ರೆ, ಈ ಸಲವೂ ಅದೇ ಮೂರು ಪಕ್ಷಗಳು, ಮತ್ತು ಅದೇ ಮೂರು ಪಕ್ಷಗಳ ನಾಯಕರು ಇದ್ದಾರಲ್ಲ, ಯಾರಿಗೆ ವೋಟ್ ಮಾಡಬೇಕು ಅನ್ನೋದನ್ನ ಕರ್ನಾಟಕದ ಸಾಮಾನ್ಯ ಮತದಾರ ಲೆಕ್ಕ ಹಾಕ್ತಾ ಇರ್ತಾನೆ.

ಯಶಸ್ವಿ ಐದು ವರ್ಷಗಳನ್ನ ಮುಗಿಸಿದ ಶ್ರೀಯುತ ಸಿದ್ದರಾಮಯ್ಯನವರ ಸರ್ಕಾರ ಜನರ ಆಶೋತ್ತರಗಳಿಗೆ ತಕ್ಕನಾಗಿ ಕೆಲಸ ಮಾಡಿದ್ಯಾ ? ನಾಡಿನ ಜನತೆ ಬಯಸಿದ್ದ ಆಡಳಿತದ ಗುರಿಯನ್ನ ತಲುಪಲಿಕ್ಕೆ ಸಾಧ್ಯ ಆಗಿದ್ಯಾ ? ಇದು ವಿಮರ್ಶೆಯ ಸಮಯ. ಮತ್ತಷ್ಟು ಓದು »

28
ಆಗಸ್ಟ್

ಕಾಂಗ್ರೆಸ್ಸಿನ ವೈಚಾರಿಕತೆಯು ಇಸ್ಲಾಮಿಕ್ ಐಡಿಯಾಲಜಿಯ ಸೆಕ್ಯುಲರ್ ರೂಪವೇ?

– ವಿನಾಯಕ ಹಂಪಿಹೊಳಿ

ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಪಕ್ಷಗಳ ಪರ ವಹಿಸುವ ಬುದ್ಧಿಜೀವಿಗಳು ಮತ್ತು ಜಾಕೀರ್ ನಾಯ್ಕ್ ಮುಂತಾದ ಇಸ್ಲಾಮಿಕ್ ಐಡಿಯಾಲಜಿಯ ಪ್ರಚಾರಕರು ವಾದಿಸುವ, ಪ್ರತಿಕ್ರಿಯಿಸುವ, ಸಮರ್ಥಿಸಿಕೊಳ್ಳುವ, ವಿರೋಧಿಸುವ ರೀತಿಗಳಲ್ಲಿ ಬಹಳ ಸಾಮ್ಯತೆಗಳಿವೆ ಎಂದು ನನಗೆ ಹಲವು ಸಲ ಅನಿಸಿದ್ದಿದೆ. ಈ ಎರಡೂ ಪಂಗಡಗಳು ಬೇರೆ ಬೇರೆ ಐಡಿಯಾಲಜಿಗಳನ್ನೇ ಹೊಂದಿದ್ದರೂ ಕೂಡ ಇವು ಮಂಡಿಸುವ ವಾದಗಳ ರೂಪರೇಷೆಗಳು ಒಂದೇ ತೆರನಾಗಿವೆ. ಇದನ್ನು ಅರಿಯಲು ಈ ಎರಡೂ ಗುಂಪುಗಳ ವಾದಸರಣಿಗಳನ್ನು ಹಾಗೂ ಪ್ರತಿಕ್ರಿಯೆಗಳನ್ನು ನೋಡೋಣ.

ಇಸ್ಲಾಮಿಕ್ ಸಂಘಟನೆಗಳಿಗೆ ಇಸ್ಲಾಮಿಕ್ ಐಡಿಯಾಲಜಿಯೇ ಸರ್ವಶ್ರೇಷ್ಠವಾಗಿದೆ. ಉಳಿದ ರಿಲಿಜನ್ನುಗಳು ಸುಳ್ಳು ರಿಲಿಜನ್ನುಗಳಾಗಿವೆ. ಸಂವಿಧಾನಕ್ಕಿಂತ ಕುರಾನೇ ಶ್ರೇಷ್ಠವಾಗಿದೆ. ಆದರೆ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಬುದ್ಧಿಜೀವಿಗಳು ತಾವು ಸೆಕ್ಯುಲರ್ ಆಗಿದ್ದು, ಮೂಲಭೂತವಾದಿಗಳಲ್ಲ ಎಂಬುದನ್ನು ಪದೇ ಪದೇ ಹೇಳುತ್ತಿರುತ್ತಾರೆ. ಭಾರತದಲ್ಲಿ ಸಂವಿಧಾನವೇ ಶ್ರೇಷ್ಠವಾಗಿದ್ದು, ರಿಲಿಜನ್ನುಗಳು ವೈಯಕ್ತಿಕವೆಂದು ಅವರು ಒಪ್ಪುತ್ತಾರೆ. ಇಸ್ಲಾಮಿಕ್ ಐಡಿಯಾಲಜಿಯ ಪ್ರಚಾರಕರಂತೆ ಕುರಾನೇ ಶ್ರೇಷ್ಠವೆಂಬ ಭಾವನೆ ಬುದ್ಧಿಜೀವಿಗಳಲ್ಲಿಲ್ಲ. ಅವರು ಕುರಾನ್ ಹಾಗೂ ಬೈಬಲ್ಲನ್ನು ಏಕರೀತಿಯಲ್ಲಿ ಗೌರವಿಸಬಲ್ಲರು ಹಾಗೂ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳಬಲ್ಲರು. ಆದರೆ ಹಿಂದೂಗಳ ಕುರಿತು, ಹಿಂದೂ ಧರ್ಮಗ್ರಂಥಗಳೆಂದು ಕರೆಯಲ್ಪಡುವ ಕೃತಿಗಳ ಕುರಿತು ಬುದ್ಧಿಜೀವಿಗಳ ಅಭಿಪ್ರಾಯವು ಇಸ್ಲಾಂ ಮುಂತಾದ ಐಡಿಯಾಲಜಿಯನ್ನು ಪ್ರತಿಪಾದಿಸುವವರ ಅಭಿಪ್ರಾಯಕ್ಕಿಂತ ಎಷ್ಟು ಭಿನ್ನವಾಗಿದೆ ಎನ್ನುವದು ಈಗಿನ ಪ್ರಶ್ನೆ.

ಮೊದಲು ಜಾಕೀರ್ ನಾಯ್ಕ್ ಮುಂತಾದ ಇಸ್ಲಾಮಿಕ ಪ್ರಚಾರಕರು ಕೆಲವು ಪ್ರಶ್ನೆಗಳನ್ನು ಹೇಗೆ ಉತ್ತರಿಸುತ್ತಾರೆ ಎಂಬುದನ್ನು ಗಮನಿಸಿ. ಉದಾಹರಣೆಗೆ, ಅಸ್ಪೃಶ್ಯತೆಗೂ ಹಾಗೂ ಮನುಸ್ಮೃತಿಗೂ ಸಂಬಂಧವಿದೆಯೇ ಎಂದು ಜಾಕೀರ್ ಮುಂತಾದವರಿಗೆ ಕೇಳಿದರೆ ಅವರು ನಿರ್ಭಿಡೆಯಿಂದ ಹೌದು ಎನ್ನುತ್ತಾರೆ. ಮನುಸ್ಮೃತಿಯಲ್ಲಿ ಶೂದ್ರರ ಮೇಲಿರುವ ನಿಬಂಧನೆಗಳನ್ನು ತಿಳಿಸುವ ಶ್ಲೋಕಗಳನ್ನೆಲ್ಲ ಉದಾಹರಿಸಿ ಅದನ್ನು ಸಾಧಿಸುತ್ತಾರೆ. ಆಗ ಅದೇ ಸ್ಮೃತಿಯಲ್ಲಿ ಬರುವ ಬ್ರಾಹ್ಮಣರ ಮೇಲಿರುವ ನಿಬಂಧನೆಗಳನ್ನು ಹಾಗೂ ಶೂದ್ರರಿಗಿರುವ ವಿನಾಯಿತಿಗಳನ್ನು ಬೇಕೆಂದೇ ಮರೆಮಾಚುತ್ತಾರೆ.

ಮತ್ತಷ್ಟು ಓದು »

4
ಫೆಬ್ರ

ರಾಹುಲ್ ಗಾಂಧಿಗೆ ಬಿ.ಪಿ.ಎಲ್ ಕಾರ್ಡ್ ನೀಡಲು ನಿರ್ಧಾರ: ಸಿಎಂ (ಸುಳ್ಸುದ್ದಿ)

– ಪ್ರವೀಣ್ ಕುಮಾರ್, ಮಾವಿನಕಾಡು

sulsuddiರಾಹುಲ್ ಗಾಂಧಿ ಅವರಿಗೆ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಮೂಲಕ ಬಿ.ಪಿ.ಎಲ್ ಕಾರ್ಡ್ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅವರು ಇಂದು ಮೂರನೇ ಮಹಡಿಯಲ್ಲಿ ನಡೆದ ತುರ್ತು ಸಚಿವ ಸಂಪುಟದ ಸಭೆಯ ನಂತರ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.ಈ ಬಗ್ಗೆ ಸಚಿವ ಸಂಪುಟ ಒಮ್ಮತದ ನಿರ್ಧಾರ ಕೈಗೊಂಡಿದ್ದು ಮುಂದಿನ ಶುಕ್ರವಾರ ನವದೆಹಲಿಯಲ್ಲಿ ಅವರನ್ನು ಭೇಟಿಯಾಗಿ ಅವರಿಗೆ ಬಿ.ಪಿ.ಎಲ್ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದರು. ಅದಕ್ಕಾಗಿ ಅಂದು ಅರ್ಧ ಗಂಟೆ ಭೇಟಿಯಾಗಲು ಅವರ ಬಳಿ ಸಮಯ ಕೇಳಿ ಪತ್ರ ಬರೆದಿದ್ದು ಪಕ್ಷಾಧ್ಯಕ್ಷರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರ ಅನುಮತಿಯ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಮತ್ತಷ್ಟು ಓದು »

28
ಆಕ್ಟೋ

ದಲಿತರ ಹೆಗಲ ಮೇಲೆ ಬಂದೂಕಿಟ್ಟಿರುವ ಕೈಗಳು ಯಾರದ್ದು?

ರಾಕೇಶ್ ಶೆಟ್ಟಿ

udupi‘ಅಧಿಕಾರದಲ್ಲಿರುವ ಕಾಂಗ್ರೆಸ್ಸಿಗಿಂತಲೂ, ಅಧಿಕಾರದಲ್ಲಿರದ ಕಾಂಗ್ರೆಸ್ಸ್ ದೇಶಕ್ಕೆ ಅಪಾಯಕಾರಿ’ ಅಂತ ಗೆಳೆಯನೊಬ್ಬ ಆಗಾಗ್ಗೆ ಹೇಳ್ತಾ ಇರ್ತಾನೆ. 2014ರ ಮೇ 16 ರಂದು ಬಿಜೆಪಿ ಅಧಿಕಾರ ಹಿಡಿದ ದಿನದಿಂದ ಇವತ್ತಿನವರೆಗೂ ಕಾಂಗ್ರೆಸ್ಸ್ ಪಕ್ಷದವರ ಆರ್ಭಟಗಳನ್ನು ನೋಡಿದರೇ, ಗೆಳೆಯನ ಮಾತು ನಿಜವೆನಿಸುತ್ತದೆ. 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಹಿಂದಿನ ಯಾವುದೇ ಚುನಾವಣೆಗಳಂತಿರಲಿಲ್ಲ. ಕಾಂಗ್ರೆಸ್ ಎಂಬ ಪುರಾತನ ಪಕ್ಷ ಮಕಾಡೆ ಮಲಗಿದರೇ, ಉಳಿದ ಅವಕಾಶವಾದಿ ಪ್ರಾದೇಶಿಕ, ಕೌಟುಂಬಿಕ, ಸೆಕ್ಯುಲರ್, ಕಮ್ಯುನಿಸ್ಟ್ ಪಕ್ಷಗಳು ಹೇಳ ಹೆಸರಿಲ್ಲದಂತಾದವು. ಮತ್ತಷ್ಟು ಓದು »