ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕಾದಂಬರಿ’

27
ಸೆಪ್ಟೆಂ

ವೇದನೆಯೂ ವ್ಯಸನವಾಗಿಬಿಟ್ಟರೇನು ಫಲ…?

– ಗುರುರಾಜ ಕೋಡ್ಕಣಿ. ಯಲ್ಲಾಪುರ

587666ಆಗಷ್ಟೇ ಮೊರೊಕ್ಕೊ ದೇಶದ ಮರಾಕ್ಕೇಶ್ ಪಟ್ಟಣಕ್ಕೆ ಬಂದಿಳಿದಿದ್ದ ಮತಪ್ರಚಾರಕನನ್ನು ತೀವ್ರವಾಗಿ ಆಕರ್ಷಿಸಿದ್ದು ಊರ ಹೊರಗಿನ ಮರುಭೂಮಿ. ತನ್ನನ್ನು ಸೂಜಿಗಲ್ಲಿನಂತೆ ಸೆಳೆದ ಮರಳುಗಾಡನ್ನು ಕಂಡ ಮರುಕ್ಷಣವೇ, ತನ್ನ ಪ್ರತಿನಿತ್ಯದ ಬೆಳಗಿನ ವಿಹಾರ ಆ ಮರಳುಗಾಡಿನಲ್ಲಿಯೇ ಎಂಬ ನಿರ್ಧಾರಕ್ಕೆ ಬಂದ ಪ್ರಚಾರಕ. ಹಾಗೊಂದು ನಿರ್ಧಾರದ ಮೊದಲ ದಿನವೇ ಮರುಭೂಮಿಯಲ್ಲಿ ಆತನಿಗೊಂದು ಅಚ್ಚರಿ ಕಾದಿತ್ತು. ಪ್ರಶಾಂತವಾದ ಮರಳುಗಾಡಿನ ನಡುವೆ ಮರಳಿನ ಮೇಲೆ ಅಡ್ಡವಾಗಿ ಮಲಗಿ ನೆಲಕ್ಕೆ ತನ್ನ ಕಿವಿಯಾನಿಸಿ, ಮರಳಿನ ಮೇಲೆ ಕೈಯಾಡಿಸುತ್ತ ಅಡ್ಡ ಮಲಗಿದ್ದ ವ್ಯಕ್ತಿಯೊಬ್ಬನ ವರ್ತನೆ ತನ್ನ ಪಾಡಿಗೆ ತಾನೆಂಬಂತೆ ನಡೆದು ಸಾಗುತ್ತಿದ್ದ ಪ್ರಚಾರಕನ ಗಮನ ಸೆಳೆದಿತ್ತು. ಮೊದಲ ದಿನ ಅದರೆಡೆಗೆ ತುಂಬ ಲಕ್ಷ್ಯ ಕೊಡದ ಪ್ರಚಾರಕ ‘ಹುಚ್ಚನಿರಬೇಕು ಪಾಪ..’ ಎಂದುಕೊಂಡು ಮುಂದೆ ಸಾಗಿದ. ಆದರೆ ಎರಡನೇ ದಿನವೂ ಘಟನೆಯ ಪುನರಾವರ್ತನೆ ಪ್ರಚಾರಕನ ಕುತೂಹಲವನ್ನು ಇನ್ನಷ್ಟು ಕೆರಳಿಸಿತ್ತು. ಅಷ್ಟಾಗಿಯೂ ಆ ವ್ಯಕ್ತಿಯನ್ನು ಮಾತನಾಡಿಸುವ ಗೋಜಿಗೆ ಹೋಗದ ಪ್ರಚಾರಕನ ಕುತೂಹಲ ಒಂದು ತಿಂಗಳ ನಂತರ ತನ್ನ ಸಹನೆಯ ಕಟ್ಟೆಯೊಡೆದಿತ್ತು. ಪ್ರತಿದಿನವೂ ನೆಲಕ್ಕೆ ಆತುಕೊಂಡು ವಿಚಿತ್ರವಾಗಿ ವರ್ತಿಸುವ ಆಗಂತುಕನ ಬಳಿ ತೆರಳಿದ ಪ್ರಚಾರಕ, ತನಗೆ ಬರುತ್ತಿದ್ದ ಅರೆಬರೆ ಅರೇಬಿಕ್ ಭಾಷೆಯಲ್ಲಿ, ‘ಗೆಳೆಯಾ, ನಾನು ಪ್ರತಿನಿತ್ಯವೂ ನೀನು ಹೀಗೆ ವರ್ತಿಸುವುದನ್ನು ಕಂಡಿದ್ದೇನೆ. ನೀನು ಹೀಗೆ ನೆಲಕ್ಕೆ ಆನಿಸಿಕೊಂಡು, ನೆಲವನ್ನು ಸವರುತ್ತ ಕುಳಿತುಕೊಳ್ಳಲು ಕಾರಣವೇನು ಎಂದು ತಿಳಿದುಕೊಳ್ಳಬಹುದೇ’? ಎಂದು ಪ್ರಶ್ನಿಸಿದ. ಮತ್ತಷ್ಟು ಓದು »

6
ಆಗಸ್ಟ್

ಶತಮಾನ ಕಂಡ ಕಾದಂಬರಿ: ಮಾಡಿದ್ದುಣ್ಣೋ ಮಹಾರಾಯ

– ರಾಘವೇಂದ್ರ ಅಡಿಗ ಎಚ್ಚೆನ್

ಮಾಡಿದ್ದುಣ್ಣೋ ಮಹಾರಾಯಸ್ನೇಹಿತರೇ ನಾನಿಲ್ಲಿ ಹೇಳ ಹೊರಟಿರುವ ಕಾದಂಬರಿ ಕನ್ನಡ ಕಾದಂಬರಿಗಳಲ್ಲೆಲ್ಲಾ ಅತ್ಯಂತ ಪ್ರಮುಖವಾದದ್ದು ಹಾಗೂ ಒಂದು ಶತಮಾನವನ್ನು ಕಂಡಂತದೂ ಆಗಿದೆ. ಕನ್ನಡದಲ್ಲಿ ಕಾದಂಬರಿ ಪ್ರಕಾರವನ್ನು ಜನಪ್ರಿಯಗೊಳಿಸಿದವರು ಕಾರಂತರು, ಅ.ನ.ಕೃ. ಮುಂತಾದವರಾದರೆ ಕಾದಂಬರಿ ಪ್ರಕಾರವನ್ನು ಹುಟ್ಟುಹಾಕಿದವರು ಗುಲ್ವಾಡಿ ವೆಂಕಟರಾವ್ (ಇಂದಿರಾಬಾಯಿ-ಕನ್ನಡದ ಮೊದಲ ಸಾಮಾಜಿಕ ಕಾದಂಬರಿ) ಮೈಸೂರು ಸೂರ್ಯನಾರಾಯಣ ಭಟ್ಟ ಪುಟ್ಟಣ್ಣ (ಎಂ.ಎಸ್. ಪುಟ್ಟಣ್ಣ) ನವರುಗಳು. ಇದರಲ್ಲಿ ಎಂ.ಎಸ್. ಪುಟ್ಟಣ್ಣನವರು ಬರೆದ ಪ್ರಥಮ ಕಾದಂಬರಿ-ಮಾಡಿದ್ದುಣ್ಣೋ ಮಹಾರಾಯ (1915) ಗೆ ಇದೀಗ ಶತಮಾನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಕೃತಿಕಾರರಾದ ಪುಟ್ಟಣ್ಣ ಹಾಗೂ ಕೃತಿಯ ಕುರಿತಂತೆ ನಾಲ್ಕು ಮಾತುಗಳನ್ನು ನಿಮ್ಮೊಡನೆ ಹಂಚಿಕೊಳ್ಳುವ ಇರಾದೆ ನನ್ನದು.

ಅನೇಕರಿಗೆ ಇದಾಗಲೇ ಪುಟ್ಟಣ್ಣನವರ ಬಗೆಗೆ ತಿಳಿದಿರಬಹುದು ಆದರೂ ಇಲ್ಲಿ ಅವರ ಜೀವನದ ಕುರಿತಂತೆ ಸ್ವಲ್ಪ ತಿಳಿದುಕೊಂಡು ಬಳಿಕ ಕಾದಂಬರಿಯ ಕುರಿತು ವಿಚಾರ ಮಾಡೋಣ

ಪುಟ್ಟಣ್ಣ (ಲಕ್ಷ್ಮೀನರಸಿಂಹ ಶಾಸ್ತ್ರಿ)ನವರು ಹುಟ್ಟಿದ್ದು ಮೈಸೂರಿನಲ್ಲಿ (21-11-1854). ತಂದೆ ಸೂರ್ಯನಾರಾಯಣ ಭಟ್ಟ, ತಾಯಿ ಲಕ್ಷ್ಮಮ್ಮ. ಹುಟ್ಟಿದ ಹತ್ತು ದಿವಸದಲ್ಲೇ ತಾಯಿಯನ್ನು ಕಳೆದುಕೊಂಡು ಬೆಳದದ್ದು ಸೋದರ ಮಾವನ ಮನೆಯಲ್ಲಿ. ಪ್ರಾರಂಭಿಕ ವಿದ್ಯಾಭ್ಯಾಸ ಖಾಸಗಿ ಮಠಗಳಲ್ಲಿ ಪೂರೈಸಿದ ಪುಟ್ಟಣ್ಣನವರು ಬಳಿಕ ರಾಜಾ ಸ್ಕೂಲಿನಲ್ಲಿ (ಇಂದಿನದ ಮಹಾರಾಜಾ ಕಾಲೇಜು) ಎಫ್. ಎ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಕೋಲಾರದ ಪ್ರೌಢಶಾಲೆಯಲ್ಲಿ ಸಹ ಅಧ್ಯಾಪಕರಾಗಿ ನೇಮಕಗೊಂಡರು.ಮದರಾಸಿನಲ್ಲಿ ಬಿ.ಎ. ಪದವಿ ವ್ಯಾಸಂಗವನ್ನು ಮುಗಿಸಿದ ಇವರು ಅಧ್ಯಾಪಕ ಪದವಿ ಬಿಟ್ಟು ಬೆಂಗಳೂರಿನ ಚೀಫ್ ಕೋರ್ಟಿನಲ್ಲಿ (ಈಗಿನ ಹೈಕೋರ್ಟಿನಲ್ಲಿ) ಭಾಷಾಂತರಕಾರರಾಗಿ ದುಡಿದರು. 1867 ರಲ್ಲಿ ಅವರನ್ನು ಚಿತ್ರದುರ್ಗದ ಅಮಲ್ದಾರನ್ನಾಗಿ ನೇಮಿಸಲಾಯಿತು. ಮುಂದೆ ನೆಲಮಂಗಲ, ಚಾಮರಾಜನಗರ, ಬಾಗೇಪಲ್ಲಿ, ಮುಳಬಾಗಿಲು, ಹೊಸದುರ್ಗಗಳಲ್ಲಿ  ಅಮಲ್ದಾರರಾಗಿ  ಕಾರ್ಯ ನಿರ್ವಹಿಸಿದರು. ಬೆಂಗಳೂರಿನ ತೆರಿಗೆದಾರರ ಸಂಘಟಕರಾಗಿದ್ದ ಅವರು ಆ ದಿನಗಳಲ್ಲಿಯೇ ದಾಖಲೆಗಳನ್ನು ಕನ್ನಡದಲ್ಲಿ ಮೂಡಿಸಲು ಕಾರಣರಾದರು. ಮತ್ತಷ್ಟು ಓದು »

19
ಮೇ

ವಿವೇಕ ಶಾನಭಾಗರ ಹೊಸ ಕಾದಂಬರಿ – ‘ಊರು ಭಂಗ’

– ರಾಘವೇಂದ್ರ ಅಡಿಗ ಹೆಚ್.ಎನ್

ಊರು ಭಂಗ‘ಎಲ್ಲವನ್ನೂ ಹೇಳುತ್ತೇನೆ…’

ಭಾಸ್ಕರರಾವ್ ಆಡಿದ್ದೆನ್ನಲಾದ ಈ ಮಾತಿನ ಕುರಿತು ನಮ್ಮೊಳಗೆ ತೀವ್ರ ಚರ್ಚೆ ಶುರುವಾಗಿತ್ತು. ಈ ಎರಡು ಶಬ್ದಗಳು ಒಂದು ಕಂಪನಿಯ ಕಾರ್ಪೊರೇಟ್ ಆಫೀಸಿನಲ್ಲಿ ಎಷ್ಟು ಕ್ರಾಂತಿಕಾರಿಯಾದ, ಭೀಕರ ಘೋಷಣೆಯಾಗಿ ಕೇಳಬಹುದೆನ್ನುವುದು ಇಂಥ ಜಗತ್ತಿನ ಬಗ್ಗೆ ಗೊತ್ತಿದ್ದವರಿಗೇ ಗೊತ್ತು. ಅಲ್ಲಿ ಮಾತ್ರ ಯಾಕೆ, ಕುಟುಂಬ ಅಥವಾ ರಾಜಕೀಯದಂಥ ಯಾವುದೇ ವ್ಯವಸ್ಥೆಯೂ ಅಂಜುವ ಶಬ್ದಗಳಿವು.

ಎಲ್ಲವನ್ನೂ ಹೇಳುತ್ತೇನೆಂಬುದೇ ಭಿನ್ನಮತದ ಅತ್ಯಂತ ಶಕ್ತಿಶಾಲಿ ಅಸ್ತ್ರ ತಾನೇ? ಪಕ್ಷ ತೊರೆದ ಧುರೀಣರು, ತಂಡದಿಂದ ಕೈಬಿಟ್ಟ ಆಟಗಾರರು, ಹೊಡೆದಾಡಿದ ವ್ಯಾಪಾರದ ಪಾಲುದಾರರು, ಜಗಳಾಡಿದ ಪ್ರೇಮಿಗಳು, ಬೇರೆಯಾದ ದಂಪತಿಗಳು – ಎಲ್ಲರೂ ಒಂದಲ್ಲ ಒಂದು ವಿಧದಲ್ಲಿ, ಒಂದಲ್ಲ ಒಂದು ರೂಪದಲ್ಲಿ ಈ ಅಸ್ತ್ರ ಎತ್ತಿಕೊಂಡವರೇ. ಈ ಎರಡು ಮಾತಿನಲ್ಲಿ ಎದೆಗಾರಿಕೆ, ಇಷ್ಟು ದಿನ ಸಾಧ್ಯವಾಗದ್ದನ್ನು ಈಗಲಾದರೂ ಮಾಡುತ್ತಿದ್ದೇನೆನ್ನುವ ಆತ್ಮಸಮಾಧಾನ, ತುಸು ಹುತಾತ್ಮತೆ ಇರುವಂತೆಯೇ ಸ್ವಲ್ಪ ವಿಶ್ವಾಸಘಾತುಕತನವೂ ಇದೆ.

ಕಂಪನಿಯ ವೈಸ್ ಪ್ರೆಸಿಡೆಂಟ್ ಆಗಿರುವ ಭಾಸ್ಕರರಾವ್ ಅವಧಿಗಿಂತ ಮುನ್ನ ನಿವೃತ್ತಿ ಪಡೆಯುತ್ತಾರೆ ಎಂಬುದು ಬೆಳಗಿನ ಮುಖ್ಯ ಸುದ್ದಿಯಾಗಿತ್ತು. ಅದು ಜೀರ್ಣವಾಗುವ ಮೊದಲೇ ಅವರು ಹೇಳಿದ್ದಾರೆನ್ನಲಾದ ‘ಎಲ್ಲವನ್ನೂ ಹೇಳುತ್ತೇನೆ…’ ಎಂಬ ಶಬ್ದಗಳು ನಮ್ಮ ಆಫೀಸಿನಾದ್ಯಂತ ಕಂಪನಗಳನ್ನು ಎಬ್ಬಿಸಿದವು…

***

ಇದು ವಿವೇಕ್ ಶಾನಭಾಗ ಅವರ ಮೂರನೆಯ ಕಾದಂಬರಿ.“ಊರು ಭಂಗ” ದ ಮೊದಲ ಸಾಲುಗಳು ಸುಮಾರು ಇನ್ನೂರೈವತ್ತು ಪುಟಗಳ “ಊರು ಭಂಗ” ಕಾದಂಬರಿ ಆರಂಭದ ಪುಟಗಳಿಂದಲೇ  ಆವರಿಸಿಕೊಳ್ಳುವ ಧಾಟಿಯದು ಕಾರ್ಪೊರೇಟ್ ರಂಗದ ಒಳಸುಳಿಗಳನ್ನು ನಿಧಾನವಾಗಿ ಹೇಳುತ್ತಾ ಹೋದಂತೆ ತೆಂಕಣಕೇರಿ ಎಂಬ ಊರಿನ ಭೂತ ಜಗತ್ತು ಬಿಚ್ಚಿಕೊಳ್ಳತೊಡಗುತ್ತದೆ. ಕಾದಂಬರಿಯ ಮೊದಲ ಎರಡು ಅಧ್ಯಾಯಗಳು ಕಾರ್ಪೊರೇಟ್ ಜಗತ್ತಿನ ಕಿರು ಪರಿಚಯ ಮಾಡುವುದರೊಂದಿಗೆ, ಬರವಣಿಗೆಯ ನಿಖರ, ಆಕರ್ಷಕ ಶೈಲಿಯ ಪರಿಚಯವನ್ನೂ ಮಾಡುತ್ತವೆ. ಕಾದಂಬರಿಯುದ್ದಕ್ಕೂ  ಸಂಭಾಷಣೆಗಳು , ಸನ್ನಿವೇಶಗಳ ವಿವರಣೆಗಳು , ಎಲ್ಲವೂ ತುಂಬಾ ನೈಜವಾಗಿ ಮೂಡಿ ಬಂದಿವೆ. .
ಮತ್ತಷ್ಟು ಓದು »

12
ನವೆಂ

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧೦

– ಮು. ಅ. ಶ್ರೀರಂಗ ಬೆಂಗಳೂರು

SL Bhairappa Vimarshe - Nilumeಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೬
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೭
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೮
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೯

ಕವಲು 

ಆವರಣ ಕಾದಂಬರಿಗೆ ಬಂದಷ್ಟು ಪ್ರತಿರೋಧ, ಪ್ರತಿಭಟನೆಗಳು ಮತ್ತು ವಿಮರ್ಶಾ ಸಂಕಲನಗಳು  ಕವಲು ಕಾದಂಬರಿಗೆ ಬರದೇ ಇದ್ದರೂ ಸಹ ಪತ್ರಿಕೆಗಳಲ್ಲಿ ಸಾಕಷ್ಟು ಚರ್ಚೆಯಾಯಿತು. ಆವರಣಕ್ಕೆ ಕೋಮುವಾದಿ ಕೃತಿ ಎಂದು  ಹೆಸರಿಟ್ಟಹಾಗೆ ಕವಲು ಕಾದಂಬರಿಗೆ  ಸ್ತ್ರೀವಾದದ ವಿರೋಧಿ ಎಂಬ ಲೇಬಲ್ ಹಚ್ಚಲಾಯಿತು.   ಖ್ಯಾತ ಕತೆಗಾರ, ಪ್ರಭಂಧಕಾರ ಮತ್ತು ಪ್ರಕಾಶಕರಾದ (ಛಂದ ಪುಸ್ತಕ ಪ್ರಕಾಶನ ಬೆಂಗಳೂರು) ವಸುಧೇಂದ್ರ ಅವರು ಕನ್ನಡ ಪ್ರಭ ಪತ್ರಿಕೆಯ ಭಾನುವಾರದ ಸಾಪ್ತಾಹಿಕ ಪ್ರಭದಲ್ಲಿ ಮಾಡಿದ  ಕವಲು ಕಾದಂಬರಿಯ ವಿಮರ್ಶೆಗೆ ಪ್ರತಿಕ್ರಿಯೆಯಾಗಿ   ನಾನು ಬರೆದದ್ದು ಈ  ಪತ್ರ. .

 

ಶ್ರೀ ವಸುಧೇಂದ್ರ ಅವರಿಗೆ ನಮಸ್ಕಾರಗಳು,                                                                                                                                                                                                    ದಿನಾಂಕ:  ೧೩ ಜೂನ್ ೨೦೧೨

ಭೈರಪ್ಪನವರ ಕವಲು ಕಾದಂಬರಿಯ ಬಗ್ಗೆ ಸುಮಾರು ಎರಡು ವರ್ಷಗಳ ಹಿಂದೆ (೨೯–೮–೨೦೧೦) ಕನ್ನಡಪ್ರಭದ ಸಾಪ್ತಾಹಿಕ ಪ್ರಭದಲ್ಲಿ   ಪ್ರಕಟವಾದ ತಮ್ಮ  ವಿಮರ್ಶೆಯ ಬಗ್ಗೆ  ನನ್ನ ಅನಿಸಿಕೆಗಳನ್ನು ಈಗ ತಿಳಿಸುತ್ತಿದ್ದೇನೆ. ಇದನ್ನು ಬರೆದಿಟ್ಟುಕೊಂಡು ಎರಡು ವರ್ಷಗಳಾಗಿದ್ದರೂ ಈಗ ಕಳಿಸುತ್ತಿರುವುದಕ್ಕೆ ಕಾರಣ ನಿಮ್ಮ ಅಂಚೆ ವಿಳಾಸ/ ಇ ಮೇಲ್ ಐಡಿ ಸಿಗದೇ ಇದ್ದದ್ದು. ಇತ್ತೀಚಿಗೆ ‘ಸಂಚಯ’ ಸಾಹಿತ್ಯಿಕ ಪತ್ರಿಕೆಯ ಪ್ರತಿಗಳನ್ನು ಒಂದೆಡೆ ನೀಟಾಗಿ ಜೋಡಿಸಿಡುತ್ತಾ ಹಾಗೆ ಅದರ ಪುಟಗಳ ಮೇಲೆ ಕಣ್ಣಾಡಿಸುತ್ತಿದ್ದಾಗ ಒಂದು ಸಂಚಿಕೆಯಲ್ಲಿ ನಿಮ್ಮ ವಿಳಾಸ ಸಿಕ್ಕಿತು. ಸಾಪ್ತಾಹಿಕ ಪ್ರಭದಲ್ಲಿ ಪ್ರಕಟವಾಗಿದ್ದ ನಿಮ್ಮ ಆ ವಿಮರ್ಶೆಯ ಜೆರಾಕ್ಸ್ ಪ್ರತಿಯನ್ನೂ ಇದರ ಜತೆ ಇಟ್ಟಿದ್ದೇನೆ.

ತಮಗೆ ತಿಳಿದಿರುವಂತೆ ಭೈರಪ್ಪನವರ ಕಾದಂಬರಿಗಳ ಬಗ್ಗೆ ನಮ್ಮ ವಿಮರ್ಶಾವಲಯದಲ್ಲಿ ಪರಸ್ಪರ ವಿರುದ್ಧವಾದ ಅಭಿಪ್ರಾಯಗಳು ಅವರ ಧರ್ಮಶ್ರೀ ಕಾಲದಿಂದ ಇಂದಿನ ಕವಲು ಕಾದಂಬರಿಯ ತನಕ ಇದ್ದೇ ಇದೆ. ಇದನ್ನು ನಾನು ಪುನಃ ವಿವರಿಸುವುದು ಅನವಶ್ಯ ಎಂದು ಭಾವಿಸಿದ್ದೇನೆ. ಈಗ ನೇರವಾಗಿ ಕವಲು ಕಾದಂಬರಿಯನ್ನು ಕುರಿತ ತಮ್ಮ ವಿಮರ್ಶೆಯ ಬಗ್ಗೆ ಹೋಗೋಣ. ನಾಲ್ಕು ಕಾಲಂಗಳ ಆ ವಿಮರ್ಶೆಯಲ್ಲಿ ಎರಡು ಕಾಲಂಗಳು ಆ ಕಾದಂಬರಿಯ ಕಥಾಸಾರಾಂಶವನ್ನು ಹೇಳುವುದಕ್ಕೆ ವಿನಿಯೋಗವಾಗಿದೆ. ಉಳಿದ ಎರಡು ಕಾಲಂಗಳ ಬಗ್ಗೆ ಹೇಳುವುದಾದರೆ—

(೧) ಭೈರಪ್ಪನವರು ಎಲ್ಲಾ ಸ್ತ್ರೀವಾದಿಗಳೂ ಕೆಟ್ಟ ಹೆಂಗಸರೆಂದು  ಆ ಕಾದಂಬರಿಯಲ್ಲಿ  ಎಲ್ಲಿ ಹೇಳಿದ್ದಾರೆ? ಕವಲು ಕಾದಂಬರಿಯಲ್ಲಿ ಚಿತ್ರಿತವಾಗಿರುವ ಇಬ್ಬರು ಹೆಂಗಸರ ಬಗ್ಗೆ, ಅವರ ನಡತೆಯ ಬಗ್ಗೆ ಬರೆದಿದ್ದಾರೆ. ಅವರಿಬ್ಬರು  ಎಲ್ಲಾ ಸ್ತ್ರೀ ವಾದಿಗಳನ್ನು  ಪ್ರತಿನಿಧಿಸುತ್ತಾರೆ ಎಂದು ಭಾವಿಸುವುದು ಸರಿಯೇ? ಓದು ಬರಹ ಬಲ್ಲ ಹೆಂಗಸರಿಂದ, ಸ್ತ್ರೀವಾದಿಗಳಿಂದ ಮಾತ್ರ ವರದಕ್ಷಿಣೆ ವಿರೋಧಿ ಕಾನೂನು, ವಿವಾಹ ವಿಚ್ಛೇದನದ ಕಾನೂನು ದುರುಪಯೋಗವಾಗುತ್ತಿಲ್ಲ: ಅದನ್ನು ಇತರರೂ ಮಾಡುತ್ತಿದ್ದಾರೆ ಎಂಬುದಕ್ಕೆ ಕವಲು ಕಾದಂಬರಿಯಲ್ಲೇ ಒಂದು ನಿದರ್ಶನವಿದೆ. ಜಯಕುಮಾರನ ಅಣ್ಣ ಕೇಶವಮೂರ್ತಿಯ ಹೆಂಡತಿ ಇಂದಿರಾ ತನ್ನ ಅತ್ತೆಯನ್ನು ವರದಕ್ಷಿಣೆ ಕಾನೂನಿನ ಅಡಿಯಲ್ಲಿ ಜೈಲಿಗೆ ಹಾಕಿಸಲಿಲ್ಲವೇ?  (ಪುಟ ೨೬೧ ಕವಲು) ತಾವೇ ಹೇಳಿರುವಂತೆ  ಕಾನೂನಿನ ಲೂಪ್ ಹೋಲ್ ಗಳನ್ನು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಂಡವರ ಕಥೆ ಕವಲುವಿನದು. ಅಂತಹ ಒಂದು ಕಥೆಯನ್ನು ಹೇಳುವುದಕ್ಕೆ ಒಂದಷ್ಟು ಪಾತ್ರಗಳು ಬೇಕೇ ಬೇಕಲ್ಲವೇ?  ಅಂತಹ ಪಾತ್ರಗಳು ಇಡೀ ಸಮಾಜದ ಪ್ರತಿಬಿಂಬವಾಗಲು ಹೇಗೆ ತಾನೇ ಸಾಧ್ಯ? ಜತೆಗೆ ಮರೆಯಬಾರದ ಸಂಗತಿ ಎಂದರೆ ಪ್ರಗತಿಪರ ,ಬಂಡಾಯ, ದಲಿತ ಸ್ತ್ರೀ ವಾದಿ ಇತ್ಯಾದಿ ಪ್ರಣಾಳಿಕೆಗಳು, ಇವುಗಳ ಬಗ್ಗೆ ಒಲವುಳ್ಳ ಅಷ್ಟನ್ನೇ high light ಮಾಡುವಂತಹ ಸಾಹಿತ್ಯ,ವಿಮರ್ಶೆಗಳು ಏಕಮುಖೀ ಧೋರಣೆ ಉದ್ದೇಶವಿಟ್ಟುಕೊಂಡು ರಚಿತವಾಗಿ ಜೀವನದ ಇತರೆ ಮಗ್ಗುಲುಗಳ ಬಗ್ಗೆ ಗಮನಹರಿಸದೇ ಇರುವುದು ತಿಳಿದ ವಿಷಯವೇ.  ಒಬ್ಬ ಲೇಖಕ/ಸಾಹಿತಿ ಆಯಾ ಕಾಲದಲ್ಲಿ ಚಾಲ್ತಿಯಲ್ಲಿರುವಂತಹ ಸಾಮಾಜಿಕ/ರಾಜಕೀಯ ಸಿದ್ಧಾಂತ,ವಾದ ಇತ್ಯಾದಿಗಳ ಪರವಾಗಿ ಮತ್ತು ಅದರ ಚೌಕ್ಕಟ್ಟಿನೊಳಗೇ ಬರೆಯಬೇಕು ಎಂದು ನಿರೀಕ್ಷಿಸುವುದು/ಒತ್ತಾಯಿಸುವುದು  ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆಯನ್ನೂ ಸಹ ನಾವು ಗಣನೆಗೆ ತೆಗೆದುಕೊಳ್ಳಬೇಕಲ್ಲವೇ?  ಸಾಹಿತಿಗೆ ಆ  ವಾದಗಳ ಸಾಧಕ  ಬಾಧಕಗಳನ್ನು ತನ್ನ ಕೃತಿಯಲ್ಲಿ ಚರ್ಚಿಸುವ ಸೃಜನಶೀಲತೆಗೆ ಅವಕಾಶವಿರಬಾರದೆ?

ಮತ್ತಷ್ಟು ಓದು »

25
ಸೆಪ್ಟೆಂ

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೯

– ಮು. ಅ. ಶ್ರೀರಂಗ ಬೆಂಗಳೂರು

SL Bhairappa Vimarshe - Nilumeಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೬
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೭
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೮

ಆವರಣಎಂಬ ವಿಕೃತಿ (ವಿಮರ್ಶಾ ಸಂಕಲನ) ಸಂಗ್ರಹ: ಗೌರಿ ಲಂಕೇಶ್ – ಭಾಗ ೪ : ಆವರಣ ಮಾಧ್ಯಮ-ಮಂಥನ ಮತ್ತು ಬುದ್ಧಿಜೀವಿ ವರ್ಸಸ್ ಬೌದ್ಧಿಕ ಸ್ವಾತಂತ್ರ್ಯ 

ಆವರಣಎಂಬ ವಿಕೃತಿ:-ಮುಖಾಮುಖಿ -೮ (೩೦-೬-೧೪) ರಲ್ಲಿ ಹೇಳಿದಂತೆ ಈ ಭಾಗದಲ್ಲಿ ‘ಆವರಣ’ ಕಾದಂಬರಿಯನ್ನು ನೆಪಮಾತ್ರಕ್ಕೆ ಇಟ್ಟುಕೊಂಡು ಬರೆದಿರುವಂತಹ ಲೇಖನಗಳ ಬಗ್ಗೆ ನಮ್ಮ ಚರ್ಚೆಯನ್ನು ಮುಂದುವರಿಸೋಣ. ಇದು ‘ಆವರಣ’ ಎಂಬ ವಿಕೃತಿ ವಿಮರ್ಶಾಸಂಕಲನವನ್ನು ಕುರಿತ ಮುಖಾಮುಖಿಯ ಕೊನೆಯ ಭಾಗ.

ಬೊಳುವಾರು ಮಹಮದ್ ಕುಂಞ ಅವರ ‘ಅವರವರ ದೇವರುಗಳು’ … ಲೇಖನದಲ್ಲಿ ‘ಆವರಣ’ ಕಾದಂಬರಿಯ ಕಥಾವಸ್ತುವನ್ನು ಅವರ ಮಾವನವರನ್ನು(ಬೊಳುವಾರು ಅವರ ಹೆಂಡತಿಯ ತಂದೆ) ಕಾಡುತ್ತಿದ್ದ ಕ್ಯಾನ್ಸರ್ ಗೆ ಹೋಲಿಸಿದ್ದಾರೆ. ಆಪರೇಷನ್ ಆದ ನಂತರ ಅವರ ಮಾವನವರು ಗುಣಮುಖರಾಗಿ ಗೆಲುವಿನ ನಗೆ ಬೀರುತ್ತಿದ್ದಾರೆ. ಅದೇ ರೀತಿ ‘ಆವರಣ’ ಕಾದಂಬರಿ ಬರೆದ ನಂತರ ಭೈರಪ್ಪನವರೂ ಸಹ ಹತ್ತಾರು ವರ್ಷಗಳಿಂದ ತಮ್ಮನ್ನು ಹಿಂಸಿಸುತ್ತಿದ್ದ,ಕಾಡುತ್ತಿದ್ದ  ಚಿಂತನೆಗಳಿಂದ  ಮುಕ್ತರಾಗಿದ್ದಾರೆ. ಅವರವರು ನಂಬುವ ಅವರವರ ದೇವರುಗಳು ಅವರವರನ್ನು ಕಾಪಾದುತ್ತಿರಲಿ. ಆಮೆನ್ ……… ಎಂಬ ಹಿತೋಕ್ತಿಯಿಂದ ತಮ್ಮ ಲೇಖನವನ್ನು ಮುಗಿಸಿದ್ದಾರೆ.

ಇಬ್ರಾಹಿಂ ಸಾಹೇಬರ ಬಗ್ಗೆ ಭೈರಪ್ಪನ ಸುಳ್ಳು …  ಪೀರ್ ಬಾಷಾ ಅವರು ಸುಳ್ಳು ಹೇಳುತ್ತಿದ್ದಾರೋ ಅಥವಾ ತಮ್ಮ ಜನಾಂಗದವರ ಅಸಮಾಧಾನಕ್ಕೆ ಏಕೆ ಕಾರಣಕರ್ತನಾಗಬೇಕೆಂದು ಇಬ್ರಾಹಿಂ ಸಾಹೇಬರೇ ಸುಳ್ಳು ಹೇಳುತ್ತಿದ್ದಾರೋ ತಿಳಿಯದಾಗಿದೆ. (ತಮ್ಮ ಜನಾಂಗದ ಅಸಮಾಧಾನಕ್ಕೆ ಕಾರಣವಾಗುವ ಮಾತುಗಳನ್ನು ಆಡಲು, ಬರೆಯಲು ಹಿಂದೇಟು ಹಾಕುವ ಪ್ರವೃತ್ತಿಗೆ ಇತ್ತೀಚಿನ ಉದಾಹರಣೆಯಾಗಿ   ಕನ್ನಡದ  ‘ವರ್ತಮಾನ’ , ‘ಗುಜರಿ ಅಂಗಡಿ’ ಮತ್ತು ‘ಭೂತಗನ್ನಡಿ’ ಎಂಬ ಬ್ಲಾಗುಗಳಲ್ಲಿ ಪ್ರಕಟವಾದ ‘ಬುರ್ಖಾ’ ಕುರಿತ ಲೇಖನ ಮತ್ತು ಅದರ ಬಗ್ಗೆ ನಡೆದ ಚರ್ಚೆಯನ್ನು ಆಸಕ್ತರು ಗಮನಿಸಬಹುದು). ‘ಆವರಣ’ ಕಾದಂಬರಿಯ ಪ್ರವೇಶ ಎಂಬ ಭಾಗದಲ್ಲಿ ಭೈರಪ್ಪನವರು ಆ ಕಾದಂಬರಿ ಬರೆಯುವಾಗ ತಮಗೆ ಸಹಾಯ ಮಾಡಿದವರನ್ನು ಸ್ಮರಿಸಿಕೊಳ್ಳುವಾಗ  ‘ಶಿವಮೊಗ್ಗದ ಎಚ್ ಇಬ್ರಾಹಿಂ ಸಾಹೇಬರು ಎಷ್ಟೋ ಸೂಕ್ಷ್ಮಾಂಶಗಳನ್ನು ಹೇಳಿ ನನ್ನ ಮನಸ್ಸಿನ ಚಿತ್ರಗಳು ಸ್ಫುಟವಾಗಲು ಸಹಾಯಮಾಡಿದರು’ ಎಂದು ಹೇಳಿರುವ ಒಂದು ವಾಕ್ಯ ಪೀರ್ ಬಾಷಾ ಅವರ ಕೆಂಗಣ್ಣಿಗೆ,ಆಕ್ರೋಶಕ್ಕೆ ತುತ್ತಾಗಿದೆ. ಇದರ ಫಲವಾಗಿ ಆವೇಶದ,ನಾಲ್ಕನೇ ದರ್ಜೆಯ ಕೀಳು ಮಾತುಗಳು ಅವರ ಲೇಖನದಲ್ಲಿದೆ. ಜತೆಗೆ ತಮ್ಮ ಮಾತಿಗೆ ಸತ್ಯದ ಲೇಪ ಹಚ್ಚಲು ‘ಪಿ ಲಂಕೇಶರ ಮಿತ್ರರೂ,ಆಗಿದ್ದ ‘ಲಂಕೇಶ್’  ವಾರಪತ್ರಿಕೆಯ ಹಿತೈಷಿಯೂ ಆಗಿರುವ ಇಬ್ರಾಹಿಂ ಸಾಹೆಬರನ್ನೇ ಇದರ ಬಗ್ಗೆ ಕೇಳಿದೆ ‘ ಎಂದು  ಬರೆದಿರುವುದು  ಬಾಷಾ ಅವರ ಬಗ್ಗೆ ಮರುಕ ಹುಟ್ಟಿಸುತ್ತದೆ. ಏಕೆಂದರೆ ಇಲ್ಲಿ ಸಮಸ್ಯೆಯಿರುವುದು ಭೈರಪ್ಪನವರು ಮತ್ತು ಇಬ್ರಾಹಿಂ ಸಾಹೇಬರ ನಡುವೆ ಅಷ್ಟೇ. ಅದಕ್ಕೆ ಮೂರನೇ ವ್ಯಕ್ತಿ ಮತ್ತು ಅವರ ವಾರಪತ್ರಿಕೆಯ ಆಸರೆ ಏಕೆ ಬೇಕಾಗಿತ್ತು?  . ಇಬ್ರಾಹಿಂ ಸಾಹೇಬರಿಗೆ ಇನ್ನೂ ಕಾಲ ಮಿಂಚಿಲ್ಲ. ಈಗ ಬೇಕಾದರೂ ಸತ್ಯ ಹೇಳಬಹುದು. ತಾವು ಮುಸ್ಲಿಂ ಜನಾಂಗದ ರೀತಿ-ರಿವಾಜು,ನಂಬಿಕೆ, ಆಚರಣೆಗಳ ಬಗ್ಗೆ ಭೈರಪ್ಪನವರ ಜತೆ ಮಾತಾಡಿಲ್ಲ ಎಂದು ಪತ್ರಿಕೆಗಳಿಗೆ ಹೇಳಿಕೆ ಕೊಡಬಹುದು. ನಮ್ಮ  ಕನ್ನಡದ 24X7 ಸುದ್ದಿವಾಹಿನಿಗಳಿಗೆ ತಿಳಿಸಿದರೆ ಸಾಕು. ಅವರು ಒಂದಿಡೀ ದಿನ ಅದರ ಬಗ್ಗೆ ಕಾರ್ಯಕ್ರಮ ನಡೆಸುತ್ತಾರೆ. ಪೀರ್ ಬಾಷಾ ಅವರೂ  ಈ ನಿಟ್ಟಿನಲ್ಲಿ ಸಹಾಯ ಮಾಡಬಹುದು.

ಪಿ. ಲಂಕೇಶರ ಬರಡು ಮನಸ್ಸಿನ ತಡೆರಹಿತ ಅಶ್ಲೀಲತೆ  ಲೇಖನ ಭೈರಪ್ಪನವರ  ‘ಸಾರ್ಥ’  ಕಾದಂಬರಿಗೆ ಸಂಬಂಧಿಸಿದ್ದು. ತಮ್ಮ ತಂದೆಯವರ ಹೆಸರಿನ ಪ್ರಕಾಶನ ಸಂಸ್ಥೆಯಿಂದ ‘……….. ವಿಕೃತಿ’ ವಿಮರ್ಶಾ ಸಂಕಲನ ಪ್ರಕಟಿಸಿರುವುದರಿಂದ ಭೈರಪ್ಪನವರ ಬಗ್ಗೆ, ಅವರ  ಯಾವುದೇ ಕಾದಂಬರಿಯ ಬಗ್ಗೆ ಲಂಕೇಶ್ ಅವರು ಬರೆದ ಯಾವುದೇ ಲೇಖನ ಸೇರಿಸಲು, ಪ್ರಕಟಿಸಲು ಗೌರಿ ಲಂಕೇಶರು ಸ್ವತಂತ್ರರು. ಅದು ಅವರ ವಿವೇಚನೆಗೆ ಬಿಟ್ಟ ವಿಷಯ.  ಮತ್ತಷ್ಟು ಓದು »

30
ಜೂನ್

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೮

– ಮು. ಅ. ಶ್ರೀರಂಗ ಬೆಂಗಳೂರು

SL Bhairappa Vimarshe - Nilumeಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೬
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೭

‘ಆವರಣ’ ಎಂಬ ವಿ-ಕೃತಿ  —   ಸಂಗ್ರಹ : ಗೌರಿ ಲಂಕೇಶ್   (ಭಾಗ–೩)
————————————————————————
‘ಆವರಣ’ ಎಂಬ ವಿಕೃತಿ ವಿಮರ್ಶಾಸಂಕಲನದಲ್ಲಿ ಒಟ್ಟು ಇಪ್ಪತ್ತೊಂದು ಲೇಖನಗಳಿವೆ. ಇವುಗಳಲ್ಲಿ ಎಂಟು ಲೇಖನಗಳ ಬಗ್ಗೆ ಈಗಾಗಲೇ ಎರಡು ಭಾಗಗಳಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದಾಗಿದೆ. ಇನ್ನು ಉಳಿದಿರುವ ಹದಿಮೂರು ಲೇಖನಗಳು ಎರಡು ರೀತಿಯವು. (೧) ‘ಆವರಣ’ ಕಾದಂಬರಿಗೆ ನೇರವಾಗಿ ಸಂಬಂಧಿಸಿರುವಂತಹವು. (೨) ‘ಆವರಣ’ ಕಾದಂಬರಿಯನ್ನು ನೆಪ ಮಾತ್ರಕ್ಕೆ ಇಟ್ಟುಕೊಂಡು ಭೈರಪ್ಪನವರ ನಡೆ-ನುಡಿಗಳನ್ನು ಹೇಳುವಂತಹವುಗಳು.

‘ಆವರಣ’ ಕಾದಂಬರಿಗೆ ಸಂಬಂಧಿಸಿರುವಂತಹ ಲೇಖನಗಳಲ್ಲಿ ಸಹ ಈ ಹಿಂದಿನ ಎರಡು ಭಾಗಗಳಲ್ಲಿ ಚರ್ಚಿತವಾದ ವಿಷಯಗಳನ್ನು ಬಿಟ್ಟು ವಿಶೇಷವಾದ,ಹೊಸದಾದ ಅಂಶಗಳು ಇಲ್ಲ. ಆದ್ದರಿಂದ ಅವುಗಳ ಬಗ್ಗೆ ವಿವರವಾದ ಚರ್ಚೆ ಪುನರುಕ್ತಿಯಾಗುತ್ತದೆ. ಪುನರುಕ್ತಿಯಾಗದಂತಹ ಕೆಲವು ಅಂಶಗಳ ಬಗ್ಗೆ ಮಾತ್ರ ಈ ಭಾಗದಲ್ಲಿ ಒತ್ತು ನೀಡಲಾಗಿದೆ.

ಹಿಂದಿನದನ್ನೆಲ್ಲ ‘ಆವರಣ’ದಲ್ಲಿ ಪೇರಿಸುವ ಪ್ರಯತ್ನ ಲೇಖನ ಬರೆದಿರುವ ಬಿ. ಎಸ್. ವೆಂಕಟಲಕ್ಷ್ಮಿಯವರಿಗೆ  ‘…… ಕಾದಂಬರಿಯೊಂದನ್ನು ಉಲ್ಲಾಸಕ್ಕಾಗಿಯೋ ಅಥವಾ ತಮ್ಮ ವೈಚಾರಿಕತೆಯನ್ನು ಹಿಗ್ಗಿಸಿಕೊಳ್ಳುವ ಸಲುವಾಗಿಯೋ ಕೈಗೆತ್ತಿಕೊಳ್ಳುವ ಸಾಮಾನ್ಯ ಓದುಗರಿಗೆ ಕಾದಂಬರಿಯೊಂದು ಸಹಜವಾಗಿ ಓದಿಸಿಕೊಂಡಾಗ ಮಾತ್ರ ಒಂದು ಬಗೆಯ ತೃಪ್ತಿ …….. ಸಾರ್ಥಕ ಭಾವನೆ ಮೂಡುತ್ತದೆ……… ‘ಆವರಣ’ದಲ್ಲಿ ಯಾವೊಂದು ಕಥೆಯನ್ನೂ ಸುಸೂತ್ರವಾಗಿ ಹೇಳದೆ ಅಹಿತಕರ ಘಟನೆಗಳಿಗೆ ಮಾತ್ರ ಒತ್ತುಕೊಟ್ಟಿದೆ ‘ ಎಂಬ ಅಸಮಾಧಾನ. ಉಲ್ಲಾಸ, ಸುಸೂತ್ರವಾದ ಕಥೆ ಇವುಗಳ ಜತೆ ವೈಚಾರಿಕತೆಯನ್ನೂ ಬಯಸುವುದು ತೀರಾ ದುಬಾರಿಯಾಗುತ್ತದೆ. ಕಾದಂಬರಿಯೊಂದರಲ್ಲಿ ‘ವೈಚಾರಿಕತೆ’ ಎಂಬುದು ವಿಶಾಲ ವ್ಯಾಪ್ತಿಯ ಚರ್ಚೆಯನ್ನು ಬೇಡುವಂತಹುದು. ಈಗಾಗಲೇ ಭೈರಪ್ಪನವರ ಮೇಲೆ  ಅವರು  ತಮ್ಮ’ ವೈಚಾರಿಕತೆ ‘ಯನ್ನು ಓದುಗರಿಗೆ ಹೇಳುವುದುಕ್ಕೊಸ್ಕರ  ಕಾದಂಬರಿಯನ್ನು ಒಂದು ಸಾಧನವನ್ನಾಗಿ ಮಾಡಿಕೊಂಡಿದ್ದಾರೆ ಎಂಬ ಆರೋಪ ನಮ್ಮ ಸಾಹಿತ್ಯವಲಯದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಓದುಗ ಬಯಸುವ ‘ವೈಚಾರಿಕತೆ’ ಯಾವ ರೀತಿಯದು ಎಂಬುದು ಸ್ಪಷ್ಟವಾಗಿಲ್ಲ. ‘ಆವರಣ’ದಮಟ್ಟಿಗೆ ಹೇಳುವುದಾದರೆ ವೆಂಕಟಲಕ್ಷ್ಮಿ ಅವರ ದೃಷ್ಟಿಯಲ್ಲಿ ಅಹಿತಕರ ಘಟನೆಗಳನ್ನು ಹೇಳುವುದು ವೈಚಾರಿಕತೆ ಅಲ್ಲ ಎಂಬುದು ಸ್ಪಷ್ಟವಾಗಿದೆ. ಕಾದಂಬರಿಯೊಂದರ ಓದು ಕಾಲ ಕಳೆಯಲು ಅಲ್ಲ ಎಂದು ಭಾವಿಸಿರುವವರಿಗೆ ವೆಂಕಟಲಕ್ಷ್ಮಿ ಅವರ ವಿಚಾರಗಳು ತೀರಾ ತೆಳುವಾದವುಗಳು ಎಂದು ಅನಿಸುತ್ತದೆ.

ಮತ್ತಷ್ಟು ಓದು »

21
ಮೇ

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೭

— ಮು. ಅ. ಶ್ರೀರಂಗ ಬೆಂಗಳೂರು

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧SL Bhairappa Vimarshe - Nilume

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೬

 ಆವರಣ’ ಎಂಬ  ವಿ-ಕೃತಿ   ಸಂಗ್ರಹ:   ಗೌರಿ ಲಂಕೇಶ್

 (‘ನಿಲುಮೆ’ಯಲ್ಲಿ  ೧-೪-೧೪ರಂದು  ಪ್ರಕಟವಾದ  ಲೇಖನದ  ಮುಂದುವರೆದ  ಭಾಗ)
 
ಕೋ. ಚೆನ್ನಬಸಪ್ಪನವರು  (ಕೋ.ಚೆ)  ತಮ್ಮ  “ ಆವರಣ “ದಲ್ಲಿ  ಆವರಣ, ವಿಕ್ಷಿಪ್ತ  ಎಂಬ ಲೇಖನದಲ್ಲಿ (…… ವಿಕೃತಿ ಪುಟ ೪೮)  ಔರಂಗಜೇಬ ಮತ್ತು ಟಿಪ್ಪು ಸುಲ್ತಾನನ  ಆಳ್ವಿಕೆಯಲ್ಲಿನ ಕೆಲವು ಅಂಶಗಳನ್ನು  ಪಟ್ಟಿಮಾಡಿ  (ಅವುಗಳ ಅಂತರ್ಯವನ್ನು ಪೂರ್ತಿ ತಿಳಿಯುವ ಕೆಲಸಕ್ಕೆ ಕೈ ಹಾಕದೆ)  ‘ನೋಡಿ ಅವರಿಬ್ಬರೂ ಇಷ್ಟು ಒಳ್ಳೆಯ ಕೆಲಸಮಾಡಿದ್ದಾರೆ’ ಎಂದು ತೃಪ್ತಿಪಟ್ಟುಕೊಂಡಿದ್ದಾರೆ. ‘ಆವರಣ’ ಕಾದಂಬರಿ ಪ್ರಕಟವಾಗಿದ್ದು ಫೆಬ್ರವರಿ ೨೦೦೭ರಲ್ಲಿ. ಟಿಪ್ಪು ಬಗ್ಗೆ ೨೦೦೬ರ ಸೆಪ್ಟೆಂಬರ್ ತಿಂಗಳಿನಲ್ಲಿ ಒಂದು ದೊಡ್ಡ ವಿವಾದವೆದ್ದು ಕರ್ನಾಟಕದ ಸಾಹಿತಿಗಳ,ಬುದ್ಧಿಜೀವಿಗಳ,ಚಿಂತಕರ ಜತೆಗೆ ಸಾಮಾನ್ಯ ಓದುಗರ ಲೇಖನ-ಪತ್ರಗಳಿಂದ ಪತ್ರಿಕೆಗಳ ಪುಟಗಳು ತುಂಬಿಹೋಗಿತ್ತು. ಆ ಸಮಯದಲ್ಲಿ ಭೈರಪ್ಪನವರು ‘ವಿಜಯಕರ್ನಾಟಕ’ ಪತ್ರಿಕೆಯಲ್ಲಿ ಸೆಪ್ಟೆಂಬರ್ ೨೪, ೨೦೦೬ರಂದು ಬರೆದ ಲೇಖನದಲ್ಲಿನ ಕೆಲವು ಅಂಶಗಳು ಕೋ.ಚೆ ಅವರಿಗೆ ಟಿಪ್ಪುವಿನ ಮೇಲೆ ಇರುವ ಪ್ರೇಮ,ಅಭಿಮಾನಕ್ಕೆ ಉತ್ತರ ನೀಡಬಲ್ಲವು ಎಂದು ಭಾವಿಸಿದ್ದೇನೆ. 
(೧) ಟಿಪ್ಪುವು ಮಕ್ಕಳನ್ನು ಯುದ್ಧಬಂಧಿಗಳಾಗಿ ಇಟ್ಟ ಕರಾರು ಯಾವುದು? ಯುದ್ಧದಲ್ಲಿ ಸೋತ ನಂತರ ಇಂತಿಷ್ಟು ಹಣವನ್ನು ಬ್ರಿಟಿಷರಿಗೆ ಕೊಡುವುದಾಗಿ ಅವನು ಒಪ್ಪಿಕೊಂಡ. ಸದ್ಯದಲ್ಲಿ ಕೈಲಿ ಹಣವಿರಲಿಲ್ಲ ……… ಒತ್ತೆ ಇಡಲು ಬೇರೇನೂ ಇರಲಿಲ್ಲ. ಟಿಪ್ಪುವಿನ ಬರೀ ಮಾತನ್ನು,ಆಣೆ  ಪ್ರಮಾಣಗಳನ್ನು ಬ್ರಿಟಿಷರು ನಂಬಿಹೋಗಬಹುದಿತ್ತೆ? ….. ಒತ್ತೆ ಇರಿಸಿಕೊಂಡ ಮಕ್ಕಳ ಯೋಗಕ್ಷೇಮವನ್ನು ಬ್ರಿಟಿಷರು ಚೆನ್ನಾಗಿಯೇ ನೋಡಿಕೊಂಡರು. 

ಮತ್ತಷ್ಟು ಓದು »

1
ಏಪ್ರಿಲ್

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೬

– ಮು. ಅ. ಶ್ರೀರಂಗ ಬೆಂಗಳೂರು

SL Bhairappa Vimarshe - Nilumeಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫

 

‘ಆವರಣ ‘ ಎಂಬ ವಿ-ಕೃತಿ  –  ಸಂಗ್ರಹ : ಗೌರಿ ಲಂಕೇಶ್

ಗೌರಿ ಲಂಕೇಶ್ ಅವರು ಸಂಗ್ರಹಿಸಿರುವ ‘ಆವರಣ’ ಎಂಬ ವಿಕೃತಿ’ (ಲಂಕೇಶ್ ಪ್ರಕಾಶನ ಬೆಂಗಳೂರು–೪, ೨೦೦೭) ವಿಮರ್ಶಾ ಸಂಕಲನದಲ್ಲಿ ಯು ಅರ್ ಅನಂತಮೂರ್ತಿ, ಕೆ ಮರುಳಸಿದ್ದಪ್ಪ, ರಹಮತ್ ತರೀಕೆರೆ, ಜಿ ರಾಜಶೇಖರ್, ಜಿ ಕೆ ಗೋವಿಂದರಾವ್, ಕೆ. ಫಣಿರಾಜ್ ಮುಂತಾದ ಪ್ರಸಿದ್ಧ ಲೇಖಕರು,ವಿಮರ್ಶಕರು ಹಾಗು ಚಿಂತಕರ ಲೇಖನಗಳಿವೆ. ‘ಆವರಣ’ದಲ್ಲಿ ಚಿತ್ರಿತಗೊಂಡಿರುವ ಚರಿತ್ರೆಯ ಅಂಶಗಳು ಎಷ್ಟರಮಟ್ಟಿಗೆ ನಂಬಲರ್ಹ/ಅದಷ್ಟೇ ನಿಜವೇ ಬೇರೆ ಮುಖಗಳು ಇಲ್ಲವೇ ಎಂಬುದರ ಜತೆಗೆ ಕಾದಂಬರಿಯ ತಾತ್ವಿಕತೆ, ರೂಪ,ವಿನ್ಯಾಸಗಳ ಬಗ್ಗೆ ಇಲ್ಲಿನ ಲೇಖನಗಳಲ್ಲಿ ಒತ್ತು ಜಾಸ್ತಿ. ಹಿಂದೆ ಏನೇನೋ ನಡೆದುಹೋಗಿದೆ;ಅದನ್ನೆಲ್ಲಾ ಮತ್ತೆ ಕೆದಕುವುದ್ಯಾಕೆ ಎಂಬ ಮಾತೂ ಆಗೀಗ ಬರುತ್ತದೆ. ಹೀಗಾಗಿ ಈ ವಿಮರ್ಶಾ ಸಂಕಲನದ ಲೇಖನಗಳನ್ನು ಸ್ವಲ್ಪ ವಿವರವಾಗಿ ಚರ್ಚಿಸಬೇಕಾಗಿದೆ.

ಮತ್ತಷ್ಟು ಓದು »

16
ಫೆಬ್ರ

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫

– ಮು. ಅ. ಶ್ರೀರಂಗ ಬೆಂಗಳೂರು

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ SL Bhairappa Vimarshe - Nilume
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪

                                                                                
                                                                                         ಆವರಣ —- ಅನಾವರಣ
                                                                                 
ಹೊಸ ಕನ್ನಡ ಸಾಹಿತ್ಯದ ಇತ್ತೀಚಿನ ಮೂವತ್ತು ನಲವತ್ತು ವರ್ಷಗಳಲ್ಲಿ ಎಸ್ ಎಲ್ ಭೈರಪ್ಪನವರ “ಆವರಣ” ಕಾದಂಬರಿಯಷ್ಟು ವಿವಾದಿತ ಕೃತಿ ಬಹುಶಃ ಬೇರೊಂದು ಇರಲಾರದೆನಿಸುತ್ತದೆ. “ಧರ್ಮ ಕಾರಣ” ಮತ್ತು”ಅನುದೇವ ಹೊರಗಣವನು” ಎಂಬ ಎರಡು ಕೃತಿಗಳ ಬಗ್ಗೆ ವಿವಾದವಾಗಿತ್ತು. ಆದರೆ ಇಷ್ಟೊಂದು ವ್ಯಾಪಕವಾಗಿರಲಿಲ್ಲ. ನಂತರದಲ್ಲಿ “ಧರ್ಮಕಾರಣ”ವನ್ನು ಬ್ಯಾನ್ ಮಾಡಲಾಯಿತು. “ಆವರಣದ ವಾದ-ವಿವಾದಗಳಲ್ಲಿ”ಸಾಹಿತ್ಯ ಮತ್ತು ಸಾಹಿತ್ಯೇತರ ಕಾರಣಗಳು ಸೇರಕೊಂಡಿದ್ದವು. ಕನ್ನಡದ ನಾಲ್ಕೈದು ಪ್ರಮುಖ ದಿನ ಪತ್ರಿಕೆಗಳಲ್ಲಿ ಈ ಚರ್ಚೆ ಸುಮಾರು ಆರು ತಿಂಗಳುಗಳ ಕಾಲ ನಡೆಯಿತು. Front line ಮತ್ತು The pioneer ಎಂಬ ಇಂಗ್ಲಿಷ್ ಪತ್ರಿಕೆಗಳಲ್ಲಿ ಆವರಣ ಕುರಿತಂತೆ ವಿಮರ್ಶೆ ಪ್ರಕಟವಾಯ್ತು . ಜತೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ನಾಲ್ಕೈದು ಪ್ರಮುಖ ನಗರಗಳಲ್ಲಿ ಆವರಣದ ಬಗ್ಗೆ ಸಭೆಗಳು,ವಿಚಾರಗೋಷ್ಠಿಗಳು ನಡೆದವು.

ಮತ್ತಷ್ಟು ಓದು »

10
ಜನ

ಸಂಸ್ಕಾರ ಮತ್ತು ದಾಟು ಕಾದಂಬರಿಗಳಲ್ಲಿ ಜಾತಿ ಸಮಸ್ಯೆಗಳು

– ಮು ಅ ಶ್ರೀರಂಗ ಬೆಂಗಳೂರು

ದಾಟು - ಭೈರಪ್ಪಈ ಲೇಖನವನ್ನು ನಾನು ಭೈರಪ್ಪನವರ ಕಾದಂಬರಿಗಳನ್ನು ಕುರಿತ ವಿಮರ್ಶೆಗಳ ಲೇಖನಮಾಲೆ ಮುಗಿದ ನಂತರ ಬರೆಯೋಣವೆಂದುಕೊಂಡಿದ್ದೆ. ಆದರೆ ಆ ಲೇಖನಗಳ ಸರಣಿಯಲ್ಲಿ ಇನ್ನು ಚರ್ಚಿಸಬೇಕಾದ ಕಾದಂಬರಿಗಳು “ಆವರಣ” ಮತ್ತು “ಕವಲು” ಮಾತ್ರ. ಇವುಗಳಲ್ಲಿ ಜಾತಿಯ ಸಮಸ್ಯೆಗಳ ಪ್ರಸ್ತಾಪವಿಲ್ಲದಿರುವುದರಿಂದ ಈಗಲೇ ಬರೆಯುವುದು ಸೂಕ್ತವೆನಿಸಿದೆ.

ಸಂಸ್ಕಾರ ಮತ್ತು ದಾಟು ಕಾದಂಬರಿಗಳನ್ನು ಕುರಿತಂತೆ ನಡೆದ ಚರ್ಚೆಗಳು ಪ್ರಾರಂಭದಲ್ಲಿ ವಿಚಾರಗಳ ವಿನಿಮಯದಂತೆ ಕಂಡರೂ ನಂತರದಲ್ಲಿ ಕವಲು ದಾರಿ ಹಿಡಿದವು. ಇದಕ್ಕೆ ನನಗನಿಸುವಂತೆ ಬಹುಶಃ ಜಾತಿ ಸಮಸ್ಯೆಯನ್ನು ಸಾಹಿತ್ಯವು ಅರಿಯಲು ನಡೆಸುವ ಪ್ರಯತ್ನಕ್ಕೂ ಅದೇ ಸಮಸ್ಯೆಯನ್ನು ಆಧಾರ,ಸಿದ್ಧಾಂತ,ಊಹೆ,ತರ್ಕ ಇತ್ಯಾದಿಗಳ ಮೂಲಕ ಬಿಡಿಸಲು ಪ್ರಯತ್ನಿಸುವ ಮಾನವಿಕ ಶಾಸ್ತ್ರಗಳಿಗೂ ಇರುವ ಮೂಲಭೂತ ವ್ಯತ್ಯಾಸವನ್ನು ಮನಗಾಣಿಸುವುದರಲ್ಲಿ ಆ ಚರ್ಚೆಗಳು ನಡೆಯದೇ ಹೋದದ್ದು. ಇದುವರೆಗೆ ಮಾನವಿಕ ಶಾಸ್ತ್ರಗಳು ತಮ್ಮ ಅಧ್ಯಯನದ ಮೂಲಕ ಕಂಡುಕೊಂಡಿರುವ ನಮ್ಮ ಸಮಾಜದ ಬಗೆಗಿನ ತಿಳುವಳಿಕೆಗಳನ್ನು ಆಧರಿಸಿ ಆ ಚೌಕಟ್ಟಿಗೆ ಈ ಸಾಹಿತ್ಯ ಕೃತಿಗಳು ಹೊಂದುವುದಿಲ್ಲ ಎಂದು ಒಂದೇ ಏಟಿಗೆ ಪಕ್ಕಕ್ಕೆ ಸರಿಸುವುದನ್ನು ಸಾಹಿತ್ಯದ ಒಬ್ಬ ಓದುಗನಾಗಿ ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಮತ್ತಷ್ಟು ಓದು »