ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕಾನೂನು’

30
ಜನ

ಜಲ್ಲಿಕಟ್ಟು ಹೆಸರಿನಲ್ಲಿ ಹೊಸದೊಂದು ಸಂಸ್ಕೃತಿ ಸಾಧ್ಯವಿಲ್ಲ ಅಂತೀರಾ?

– ನರೇಂದ್ರ ಎಸ್ ಗಂಗೊಳ್ಳಿ

08ma_jallikattu_dg_1748590fನಾಡು ನುಡಿ ಸಂಸ್ಕೃತಿ ಸಂಪ್ರದಾಯದ ಅಭಿಮಾನದ ವಿಚಾರಕ್ಕೆ ಬಂದಾಗ ತಮಿಳುನಾಡಿನ ಜನರು ಯಾವತ್ತಿಗೂ ಒಂದು ಹೆಜ್ಜೆ ಮುಂದೆ ನಿಲ್ಲುತ್ತಾರೆ. ಇದು ಹೊಗಳಿಕೆ ಅಂತೇನೂ ಅಲ್ಲ. ನಮ್ಮ ಜನರ ಅಭಿಮಾನದ ನೆಲೆಯಲ್ಲಿ ನೋಡಿದಾಗ ಹಾಗನ್ನಿಸುವುದು ಸಹಜ. ಮೊನ್ನೆ ಮೊನ್ನೆ ಪ್ರಸ್ತುತ ಜಲ್ಲಿಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ನಡೆದ ಹೋರಾಟದ ಪರಿ ಇದೆಯಲ್ಲಾ ಅದು ನಿಜಕ್ಕೂ ಪ್ರತಿಯೊಬ್ಬರಿಗೂ ಪ್ರೇರಣೆಯನ್ನು ನೀಡುವಂತಾದ್ದು. ಅವರಿಗೊಂದು ಮೆಚ್ಚುಗೆಯಿರಲಿ. ಆದರೆ ಈ ಜಲ್ಲಿಕಟ್ಟು ವಿಚಾರವನ್ನು ತೀರಾ ಭ್ರಮೆಗಳಿಗೆ ಕಟ್ಟುಬೀಳದೆ ವಾಸ್ತವದ ನೆಲೆಗಟ್ಟಿನಲ್ಲಿ ವಿಶ್ಲೇಷಿಸಿ ತೀರ್ಮಾನಕ್ಕೆ ಬರುವ ಅವಶ್ಯಕತೆ ಇಲ್ಲ ಎನ್ನುತ್ತೀರಾ? ಮತ್ತಷ್ಟು ಓದು »

23
ಮೇ

ಅರುಣಾ ಶಾನಭಾಗ: ಸ್ತ್ರೀ ಶೋಷಣೆಯ ಇನ್ನೊಂದು ಮುಖ

-ರಾಜಕುಮಾರ.ವ್ಹಿ.ಕುಲಕರ್ಣಿ,
ಮುಖ್ಯಗ್ರಂಥಪಾಲಕರು
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ

18_05_2015-aruna18(ಅರುಣಾ ಶಾನಭಾಗ ನಿಧನಹೊಂದಿ  ಮೇ 18 ಕ್ಕೆ ಒಂದು ವರ್ಷವಾಯಿತು. ಅವರ ನೆನಪಿನಲ್ಲಿ ಈ ಲೇಖನ)
ಆಕಾಶದ ನೀಲಿಯಲ್ಲಿ
ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ
ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಅಂದರೆ ಅಷ್ಟೆ ಸಾಕೇ?
-ಜಿ.ಎಸ್.ಶಿವರುದ್ರಪ್ಪ

ಸ್ತ್ರೀ ಶೋಷಿತಳು ಎನ್ನುವುದಕ್ಕೆ ಇತಿಹಾಸವೇ ಬಹುದೊಡ್ಡ ಸಾಕ್ಷಿ. ಇಲ್ಲಿ ಕಾನೂನಿನ ನಿಯಮಗಳು ಎಷ್ಟೇ ಕಠಿಣವಾಗಿದ್ದರೂ ಮಹಿಳೆಯನ್ನು ಶೊಷಣೆಯ ಪರಧಿಯಿಂದ ಹೊರತರಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಶೋಷಣೆಗೆ ಒಳಗಾಗುವ ಮಹಿಳೆ ಮಾನ ಮತ್ತು ಗೌರವಕ್ಕೆ ಹೆದರಿ ಕಾನೂನಿನ ನೆರವು ಪಡೆಯಲು ಮುಂದಾಗುತ್ತಿಲ್ಲವಾದ್ದರಿಂದ ಮಹಿಳಾ ಶೋಷಣೆ ಎನ್ನುವುದು ಅನೂಚಾನವಾಗಿ ಮುಂದುವರೆಯುತ್ತಿದೆ. ಈ ಸಂದರ್ಭ ಮಾಧ್ಯಮಗಳ ಪಾತ್ರವನ್ನು ನಾವು ಒಂದಿಷ್ಟು ಶ್ಲಾಘಿಸಲೇ ಬೇಕು. ಸ್ತ್ರೀ ದೌರ್ಜನ್ಯದ ಸಂದರ್ಭಗಳಲ್ಲೆಲ್ಲ ಪತ್ರಿಕಾ ಮಾಧ್ಯಮ ಕಾನೂನಿಗೆ ತನ್ನ ನೆರವನ್ನು ನೀಡುತ್ತ ಬಂದಿದೆ. ಅದರಲ್ಲೂ ವಿಶೇಷವಾಗಿ ಇತ್ತೀಚಿನ ದಿನಗಳಲ್ಲಿ ಪತ್ರಿಕಾ ಮಾಧ್ಯಮದಲ್ಲಿ ತಂತ್ರಜ್ಞಾನದ ಬಳಕೆಯ ಪರಿಣಾಮ ಮಹಿಳೆಯರ ಮೇಲಿನ ದೌರ್ಜನ್ಯ ಬಹುಬೇಗ ಜನರನ್ನು ಹೋಗಿ ತಲುಪುತ್ತಿದೆ. ಹೀಗೆ ಸುದ್ಧಿ ವಾಹಿನಿಗಳು ಮಹಿಳೆಯ ಮೇಲಾಗುತ್ತಿರುವ ದೌರ್ಜನ್ಯ ಹಾಗೂ ಶೋಷಣೆಯನ್ನು ಜನರಿಗೆ ಒಯ್ದು ತಲುಪಿಸುತ್ತಿರುವ ಸಂದರ್ಭ ನನಗೆ ಅರುಣಾ ಶಾನಭಾಗ ಎನ್ನುವ ನತದೃಷ್ಟ ಹೆಣ್ಣುಮಗಳು ನೆನಪಾಗುತ್ತಾಳೆ. ಒಂದು ವೇಳೆ 1970 ರ ದಶಕದಲ್ಲಿ ಸುದ್ದಿವಾಹಿನಿಗಳು ಈಗಿನಂತೆ ಕಾರ್ಯನಿರ್ವಹಿಸುತ್ತಿದ್ದರೆ ಆ ಹತಭಾಗ್ಯಳಿಗೆ ನಿಜಕ್ಕೂ ನ್ಯಾಯ ದೊರೆಯುತ್ತಿತ್ತು. ಮತ್ತಷ್ಟು ಓದು »

30
ಆಕ್ಟೋ

ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೩

– ಷಣ್ಮುಖ ಎ

ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಚಿತ್ರಣಕಾಯಿದೆ ಮತ್ತು ವಾಸ್ತವ ಸ್ಥಿತಿಗಳು

The Scheduled Castes and Scheduled Tribes (Prevention of Atrocities) Act, 1989ಈ ವರದಿಯಲ್ಲಿ ಸಂಗ್ರಹಿಸಿರುವ ಅಂಕಿ-ಅಂಶ ಮತ್ತು ಉಲ್ಲೇಖಿತವಾಗಿರುವ ವಿವರಣೆಗಳನ್ನೇ ಗಮನಿಸಿದರೂ ದಲಿತರ ಮೇಲಿನ ದೌರ್ಜನ್ಯ ಕಾಯ್ದೆಯು ಏಕೆ ವಿಫಲವಾಗುತ್ತಿದೆ ಎನ್ನುವುದು ಅರಿವಿಗೆ ಬರುತ್ತದೆ. ಈ ವರದಿಯಲ್ಲಿನ ಅಂಶಗಳು ಸ್ಪಷ್ಟಪಡಿಸುವ ಹಾಗೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಜಾತಿವ್ಯವಸ್ಥೆಯ ಚೌಕಟ್ಟಿನಡಿಯಲ್ಲಿ ನಿರೂಪಿಸಲಾದ ಸಾಮಾಜಿಕ ತಾರತಮ್ಯದ ಅಥವಾ ಅಸ್ಪೃಷ್ಯತೆಯ ಆಚರಣೆಯ ಹೆಸರಿನಲ್ಲಿ ದಾಖಲಾಗುತ್ತಿರುವುದು ಕೆಲವೇ ಪ್ರಕರಣಗಳು. ಅದರಲ್ಲೂ ನೇರವಾಗಿ ಈ ರೀತಿಯ ಪ್ರಕರಣಗಳಲ್ಲಿ ನಿಂದನೆ ಮತ್ತು ಹಲ್ಲೆಗಳನ್ನೊಳಗೊಂಡ ಪ್ರಕರಣಗಳೇ ಹೆಚ್ಚಿನವು. ಉಳಿದಂತೆ ಈ ವರದಿಯು ನಿಜಕ್ಕೂ ಸಾಮಾಜಿಕ ತಾರತಮ್ಯ, ಅಸ್ಪೃಷ್ಯತಾಚರಣೆ ಎನ್ನುವುಂತಹ ಪ್ರಕರಣಗಳನ್ನು ವಿರಳವಾಗಿ ಹೆಸರಿಸುತ್ತದೆ. ಉಳಿದಂತೆ ನಿಂದನೆ, ಹಲ್ಲೆ, ಭೂ ವಿವಾದ, ಗೋಮಾಳ, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಸಾಮಾನ್ಯ ಪ್ರಕರಣಗಳೇ ಹೆಚ್ಚಾಗಿವೆ.

ಈ ರೀತಿಯ ವ್ಯಾಜ್ಯಗಳು ಸಾಮಾನ್ಯವಾಗಿ ಜನರ ನಡುವೆ ದಲಿತರೆನಿಸಿಕೊಂಡಿರುವವರ ನಡುವೆ, ದಲಿತರಲ್ಲದವರ ನಡುವೆ ಮತ್ತು ದಲಿತರೆನಿಸಿಕೊಂಡವರು ಮತ್ತು ಅಲ್ಲದವರ ನಡುವೆ ನಡೆಯುತ್ತಲೇ ಇರುತ್ತವೆ. ಪ್ರಕರಣಗಳು ದಾಖಲಾಗುತ್ತಲೇ ಇರುತ್ತವೆ ಇದು ಸಾಮಾನ್ಯ ಸಂಗತಿ. ಆದರೆ,ಈ ರೀತಿಯಲ್ಲಿ ಸಾಮಾನ್ಯವಾಗಿ ದಾಖಲಾಗುವ ಪ್ರಕರಣಗಳಲ್ಲಿ ವಾದಿ ಪ್ರತಿವಾದಿಗಳು ದಲಿತರು ಮತ್ತು ದಲಿತೇತರರು ಆಗಿದ್ದರೆ, ಅದು ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯ್ದೆಯ ಅಡಿಯಲ್ಲಿ ದಾಖಲಾಗುತ್ತದೆ ಅಷ್ಟೇ. ಉಳಿದ ಸಂದರ್ಭದಲ್ಲಿ ಸಾಮಾನ್ಯ ಪ್ರಕರಣವೆಂದು ದಾಖಲಾಗುತ್ತದೆಯಷ್ಟೆ.

ಸಾಮಾನ್ಯವಾಗಿ ಯಾವುದೇ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗುವರೆಗೆ ಅದರಲ್ಲಿ ತಪ್ಪಿತಸ್ಥರು ಮತ್ತು ಮುಗ್ದರ ತೀರ್ಮಾನ ಸಾಧ್ಯವಿಲ್ಲ. ಅದರೆ ಅದೇ ದಲಿತರ ಮೇಲಿನ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣವು ದಾಖಲಾದ ತಕ್ಷಣ ಅಲ್ಲಿ ಅಪರಾಧಿ ಮತ್ತು ಮುಗ್ದರ ತೀರ್ಮಾನವಾಗಿರುತ್ತದೆ. ಹಾಗಾಗಿಯೇ ಅಲ್ಲವೇ? ಇಲ್ಲಿ ಕೇವಲ ಪ್ರಕರಣ ದಾಖಲಾಗಿ ಕನ್ವಿಕ್ಷನ್ ಆಗದಿದ್ದರೂ, ಪೆಂಡಿಂಗ್ ಇದ್ದರೂ, ರಾಜಿಮಾಡಿಕೊಂಡಿದ್ದರೂ ಸಹ ಸರ್ಕಾರದ ಹಣಕಾಸಿನ ಪರಿಹಾರ ನೀಡಲಾಗಿರುತ್ತದೆ. ಅಲ್ಲದೆ ದೂರದಾರರೆನಿಸಕೊಂಡ ಮತ್ತು ದೌರ್ಜನ್ಯಕ್ಕೆ ಒಳಗಾದವರೆನಿಸಿಕೊಂಡ ದಲಿತರೂ ಸಹ ಪ್ರಕರಣಗಳನ್ನು ದಾಖಲು ಮಾಡಿ ಪರಿಹಾರ ಪಡೆದನಂತರ ಇಡೀ ಪ್ರಕರಣದ ಬಗ್ಗೆ ಆಸಕ್ತಿಯನ್ನೇ ತೋರದೆ ಕೆಲಸ ಮುಗಿಯಿತೆಂದು ಸುಮ್ಮನಿದ್ದುಬಿಡುತ್ತಿರುತ್ತಾರೆ.

ಈ ಕಾಯ್ದೆಯಡಿಯಲ್ಲಿ ದಲಿತರ ದೌರ್ಜನ್ಯ ಪ್ರಕರಣಗಳನ್ನು ಪರಿಭಾವಿಸುವುದರಲ್ಲಿಯೇ ಸಮಸ್ಯೆಗಳಿವೆ ಎನ್ನುವುದು ಒಂದೆಡೆಯಾದರೆ, ಮತ್ತೊಂದೆಡೆ ಹಳ್ಳಿಯ ದೀನರ ನಿಜವಾದ ಜಾತಿ ತಾರತಮ್ಯ ಅಥವಾ ಅಸ್ಪೃಷ್ಯತೆಯ ಆಚರಣೆಗಳ ಸಮಸ್ಯೆಗಳನ್ನು ಇದು ಹೇಗೆ ಪರಿಹರಿಸುತ್ತದೆ? ಎನ್ನುವ ಪ್ರಶ್ನೆ ಏಳುತ್ತದೆ. ಹೇಳಬೇಕೆಂದರೆ ಅಸ್ಪೃಷ್ಯತೆಯ ಆಚರಣೆಗಳ ಸಂದರ್ಭಕ್ಕಿಂತ ಅತಿಹೆಚ್ಚಾಗಿ ಈ ಕಾಯ್ದೆಯು ಬಳಕೆಯಾಗಿರುವುದೇ ಬೇರೆ ಸಂದರ್ಭಗಳಲ್ಲಿ. ಹಾಗಿದ್ದಪಕ್ಷದಲ್ಲಿ ಮಂತ್ರಿಗಳು ಮತ್ತು ಬುದ್ಧಿಜೀವಿ ವರ್ಗಗಳು ಈ ಕಾಯ್ದೆಯು ಪರಿಣಾಮಕಾರಿಯಾಗಿ ಅನುಷ್ಟಾನಗೊಳ್ಳುತ್ತಿಲ್ಲ, ಈ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿಯಾಗುವವರ ಪ್ರಮಾಣ ಅತ್ಯಂತ ಕಡಿಮೆ ಇದೆಯೆಂದು ಕಳವಳ ಪಡುವುದರ ಹಿಂದೆ ಯಾವ ವಾಸ್ತವ ಸಮಸ್ಯೆಯ ಕಾಳಜಿ ಇದೆ?

ಮತ್ತಷ್ಟು ಓದು »

29
ಆಕ್ಟೋ

ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೨

– ಷಣ್ಮುಖ ಎ

ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ

ಕ್ಷೇತ್ರಾಧ್ಯಯನ ಆಧಾರಿತ ಮಾಹಿತಿಗಳು ಮತ್ತು ವಿಶ್ಲೇಷಣೆ:

The Scheduled Castes and Scheduled Tribes (Prevention of Atrocities) Act, 1989ಈ ಮೇಲಿನ ಪ್ರಶ್ನೆಯನ್ನು ಪರಿಶೀಲಿಸಲು ಒಂದು ಕ್ಷೇತ್ರಾಧಾರಿತ ಸಂಶೋಧನಾ ಪ್ರಾಜೆಕ್ಟ್‍ನ ಮಾಹಿತಿಗಳು ಕೆಲವು ವಿಶೇಷವಾದ ಆಸಕ್ತಿಕರ ಅಂಕಿ-ಅಂಶಗಳನ್ನು ಕೊಡುತ್ತವೆ. ಈ ಕ್ಷೇತ್ರಾಧ್ಯಯನದ ಮಾಹಿತಿಗಳು, ದಾಖಲಾಗುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಅವುಗಳು ಶಿಕ್ಷೆಯಾಗುವ ಪ್ರಕರಣಗಳ ಪ್ರಮಾಣದ ನಡುವಿನ ಅಂತರಕ್ಕೆ ಕಾರಣಗಳ ಬಗ್ಗೆ ಬೇರೆಯದೇ ರೀತಿಯಲ್ಲಿ ಯೋಚಿಸಲು ದಾರಿ ಮಾಡಿಕೊಡುತ್ತದೆ.

ಮೈಸೂರು ವಿಶ್ವವಿದ್ಯಾನಿಲಯದ ಆಂತ್ರೋಪಾಲಜಿ ವಿಭಾಗದ ಅಧ್ಯಾಪಕರೊಬ್ಬರು ತಮ್ಮ ಏಳುಜನ ಸಂಶೋದನಾ ಸಹಾಯಕರೊಂದಿಗೆ ಕರ್ನಾಟಕ ಸರ್ಕಾರದ ಪರವಾಗಿ ಬೆಂಗಳೂರಿನ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನ ಕೇಂದ್ರದ ವತಿಯಿಂದ ಒಂದು ಸಂಶೋಧನಾ ಅಧ್ಯಯನ ಕೈಗೊಂಡಿದ್ದರು. ಇದು ‘ಕರ್ನಾಟಕದಲ್ಲಿನ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯ ಮತ್ತು ದೌರ್ಜನ್ಯಕ್ಕೆ ಬಲಿಯಾದವರಿಗೆ ನೀಡಲಾಗಿರುವ ಪರಿಹಾರಗಳ’ ಬಗ್ಗೆ ಮಾಡಲಾದ ಒಂದು ಮೌಲ್ಯಮಾಪನ ಅಧ್ಯಯನವಾಗಿದೆ. ಇದು ಬಾಗಲಕೋಟೆಯೊಂದನ್ನುಳಿದು ಉಳಿದ ಕರ್ನಾಟಕದ ಎಲ್ಲಾ 26 ಜಿಲ್ಲೆಗಳಿಂದ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿ ಪರಿಹಾರಗಳನ್ನು ಪಡೆದ ಫಲಾನುಭವಿ ದಲಿತರನ್ನು ಮತ್ತು ಅಪರಾಧಿಗಳನ್ನು ಗುರುತಿಸಿ ಅವರುಗಳಲ್ಲಿ ಪ್ರತಿಜಿಲ್ಲೆಯಿಂದ ಶೇ. 10ರಷ್ಟು ಜನರನ್ನು ಸಂದರ್ಶನ ನಡೆಸಿದ್ದಾರೆ.

ಮೊದಲಿಗೆ ಅವರ ಅಧ್ಯಯನದಲ್ಲಿ ದಲಿತರ ಮೇಲಿನ ದೌರ್ಜನ್ಯಗಳಿಗೆ ಮೂಲಕಾರಣ (Root Cause) ವಾದ ಅಂಶಗಳಾವುವು ಮತ್ತು ಅವುಗಳಲ್ಲಿ ಯಾವ ಯಾವ ರೀತಿಯ ನಡವಳಿಕೆಗಳು ಬರುತ್ತವೆ ಎಂಬುದನ್ನು ಯಾವ ರೀತಿ ಗುರುತಿಸುತ್ತಾರೆ ಎನ್ನುವುದನ್ನು ನೋಡೋಣ.

ದಲಿತರ ಮೇಲಿನ ದೌರ್ಜನ್ಯಕ್ಕೆ ಮೂಲಕಾರಣಗಳು: ಈ ವರದಿಯಲ್ಲಿ ನಮೂದಿಸಿರುವಂತೆ ಪೋಲೀಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸಿರುವ ಕಾರಣಗಳು ಮತ್ತು ಅಧ್ಯಯನದ ಸಂದರ್ರ್ಭದಲ್ಲಿ ಸಂದರ್ಶಿತ ಮಾಹಿತಿದಾರರು ನೀಡಿದ ಕಾರಣಗಳನ್ನು ತುಲನೆ ಮಾಡಿ ಅವುಗಳನ್ನು ವರ್ಗೀಕರಿಸಿದ್ದಾರೆ. ಅವುಗಳೆಂದರೆ: ಸಾಮಾಜಿಕ ತಾರತಮ್ಯ, ಭೂವಿವಾದ, ರಾಜಕೀಯ ವೈಷಮ್ಯ, ಹಿಂದಿನ ವೈರತ್ವ, ಆರ್ಥಿಕ ವ್ಯವಹಾರಗಳು, ಕಾರ್ಮಿಕ ವ್ಯಾಜ್ಯಗಳು, ಮತ್ತು ಇತರೆ. ಅವುಗಳ ಕುರಿತು ಸಂಕ್ಷಿಪ್ರವಾಗಿ ನೋಡುವುದಾದರೆ,

  • ಸಾಮಾಜಿಕ ತಾರತಮ್ಯ (Social Discrimination): ಈ ವರ್ಗೀಕರಣದಡಿಯಲ್ಲಿ ಅಸ್ಪೃಷ್ಯತೆ ಆಚರಣೆಗಳು ಎನ್ನಬಹುದಾಂತಹ ಅಂಶಗಳನ್ನು ಪಟ್ಟಿಮಾಡಲಾಗಿದೆ ಎನ್ನುತ್ತದೆ ವರದಿ. ಮುಖ್ಯವಾಗಿ, ಸಮಾಜದ ಪ್ರತಿಯೊಂದು ಜಾತಿಗಳು ಪರಸ್ಪರ ವ್ಯವಹರಿಸುವಂತಹ ಪ್ರದೇಶಗಳಾದ ಶಾಲೆಗಳು, ಆಸ್ಪತ್ರೆಗಳು, ಗ್ರಾಮ ಅಥವಾ ಪಟ್ಟಣ ಪಂಚಾಯಿತಿಗಳು, ಮತ್ತಿತರೆ ಕಾರ್ಯಕ್ಷೇತ್ರಗಳಲ್ಲಿ ಮೇಲ್ಜಾತಿಗಳ ಸದಸ್ಯರಿಂದ ಅಸ್ಪೃಷ್ಯತೆಯ ಆಚರಣೆಗಳೆಂದು ಕಂಡುಬಂದ ಅಂಶಗಳು. ಅವುಗಳೆಂದರೆ:
  1. ಶಾಲೆಗಳಲ್ಲಿ ಪರಿಶಿಷ್ಟಜಾತಿಯ ಮಕ್ಕಳನ್ನು ಪ್ರತ್ಯೇಕ ಬೆಂಚ್‍ಗಳಲ್ಲಿ ಕುಳಿತುಕೊಳ್ಳುವಂತೆ ಮಾಡಿರುವುದು.
  2. ವಿಶೇಷ ಸಮಾರಂಭಗಳು, ವಿಧಿ ಆಚರಣೆಗಳು ಹಬ್ಬಗಳ ಸಂದರ್ಭಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರನ್ನು ಊಟಕ್ಕೆ ಪ್ರತ್ಯೇಕ ಸಾಲಿನಲ್ಲಿ ಕೂರಿಸುವುದು.
  3. ಸಂಘ-ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನಗಳನ್ನು ಪಡೆಯದಂತೆ ಪರಿಶಿಷ್ಟ ಜಾತಿಯ ಸದಸ್ಯರನ್ನು ತಡೆಯುವುದು.
  4. ಗ್ರಾಮೀಣ ಪ್ರದೇಶಗಳ ಕೆಲವು ಹೊಟೇಲುಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರುಗಳಿಗೆ ಪ್ರತ್ಯೇಕ ಲೋಟ ಮತ್ತು ತಟ್ಟೆಗಳಲ್ಲಿ ಉಪಾಹಾರ ಪಾನಿಯಗಳನ್ನು ನೀಡಿರುವುದು.
  5. ಹಲವು ಹಳ್ಳಿಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರನ್ನು ದೇವಾಲಯ ಪ್ರವೇಶಕ್ಕೆ ನಿರಾಕರಿಸುವುದು.
  6. ಸಾರ್ವಜನಿಕ ಕೊಳವೆಗಳಿಂದ ನೀರು ಪಡೆಯುವಾಗ ಉನ್ನತ ಜಾತಿಯ ಸದಸ್ಯರು ಪರಿಶಿಷ್ಟ ಜಾತಿಯ ಸದಸ್ಯರೊಂದಿಗೆ ಜಗಳವಾಡುವುದು ಕಂಡುಬರುತ್ತದೆ. ಮೇಲ್ಜಾತಿಯವರು ಕೆಳಜಾತಿಯವರಿಗೆ ಕೆಲವು ಪ್ರದೇಶಗಳಲ್ಲಿ ನೀರು ಹಿಡಿದುಕೊಳ್ಳಲು ಬಿಡುವುದಿಲ್ಲ.

ಮತ್ತಷ್ಟು ಓದು »

28
ಆಕ್ಟೋ

ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೧

– ಷಣ್ಮುಖ ಎ

ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ-577451

The Scheduled Castes and Scheduled Tribes (Prevention of Atrocities) Act, 1989ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಅಸ್ಪೃಷ್ಯತೆಯ ಆಚರಣೆಯ ಮೂಲಕ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಾ ಇವೆ. ಈ ರೀತಿಯ ದೌರ್ಜನ್ಯಗಳಿಂದ ದಲಿತರನ್ನು ರಕ್ಷಿಸಿ ಅವರನ್ನು ಅಸ್ಪೃಷ್ಯತೆಯ ಆಚರಣೆಗಳಿಂದ ಮುಕ್ತಿಗೊಳಿಸುವ ಒಂದು ಮಹಾಅಸ್ತ್ರವೆಂಬಂತೆ ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆಯನ್ನು ಭಾರತ ಸರ್ಕಾರ 1989ರಲ್ಲಿ ಜಾರಿಗೆ ತಂದಿದೆ. ಈ ಕಾಯಿದೆಯ ಜಾರಿಯಾದ ಎರಡು ದಶಕಗಳ ತರುವಾಯ ಈ ಕಾಯಿದೆಯ ಜಾರಿ ಮತ್ತು ಅದರ ಪರಿಣಾಮದ ಕುರಿತು ಚರ್ಚೆಗಳು ಮತ್ತು ಅಧ್ಯಯನಗಳು ನಡೆಯುತ್ತಿವೆ. ಬಹುತೇಕ ಈ ಚರ್ಚೆಗಳಲ್ಲಿನ ಸಾಮಾನ್ಯ ನಿಲುವೆಂದರೆ ಅಸ್ಪೃಷ್ಯತೆ ಆಚರಣೆಯ ವಿರುದ್ದ ಪ್ರಬಲವಾದ ಕಾಯಿದೆ ಇದ್ದರೂ ಇದರ ಪರಿಣಾಮಕಾರಿ ಜಾರಿಯಲ್ಲಿ ಅಧಿಕಾರಿಗಳು ಆಸಕ್ತಿವಹಿಸದಿರುವುದರಿಂದ ಈ ಕಾಯಿದೆಯಿಂದ ದಲಿತರಿಗೆ ಸಿಗಬೇಕಾದ ನ್ಯಾಯ ದೊರೆಯುತ್ತಿಲ್ಲ ಎನ್ನುವ ಸಾಮಾನ್ಯ ಆತಂಕ-ಕಾಳಜಿಗಳು ವ್ಯಕ್ತವಾಗುತ್ತಿವೆ.

ಪ್ರಸ್ತುತ ಲೇಖನವು ಈ ಆತಂಕಗಳ ವಾಸ್ತವತೆಯನ್ನು ಪರೀಕ್ಷಿಸಲು ಪ್ರಯತ್ನಿಸಿದೆ.ಸರ್ಕಾರವೇ ನಡೆಸಿರುವ ಈ ಕಾಯಿದೆಯ ಮೌಲ್ಯಮಾಪನ ಅಧ್ಯಯನ ವರಧಿಯ ಅಂಕಿಅಂಶಗಳು ಮತ್ತು ಅದರಲ್ಲಿನ ವಿವರಣೆಗಳನ್ನು ಆದರಿಸಿ ಈ ಕಾನೂನಿನಡಿಯಲ್ಲಿ ದಾಖಲಾಗಿರುವವ ಪ್ರಕರಣಗಳ ವಾಸ್ತವ ಸ್ಥಿತಿಯನ್ನು ಇಲ್ಲಿ ಪರೀಕ್ಷಿಸಲಾಗಿದೆ.

ಈ ವರದಿಯಲ್ಲಿ ಉಲ್ಲೇಖವಾಗಿರುವಂತೆ, ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿದ ದಲಿತರು ಈ ಕಾನೂನಿನಿಂದ ದೊರೆಯುವ ಪರಿಹಾರ ಪಡೆದ ನಂತರ ಪ್ರಕರಣದ ಕುರಿತು ಆಸಕ್ತಿಯನ್ನು ಕಳೆದುಕೊಳ್ಳುವುದೇ ಪ್ರಕರಣಗಳು ಇತ್ಯರ್ಥಗೊಳ್ಳದಿರಲು ಮುಖ್ಯ ಕಾರಣವೆಂದು ಗುರುತಿಸುತ್ತದೆ. ಜೊತೆಗೆ, ಈ ಕಾನೂನಿನಡಿಯಲ್ಲಿ ಅಸ್ಪೃಷ್ಯತೆಯ ಆಚರಣೆಯ ಕಾರಣಕ್ಕೆ ದಾಖಲಾಗುವ ಪ್ರಕರಣಗಳು ಅತಿಕಡಿಮೆ ಇದ್ದು ಇತರೇ ಜಗಳ-ವ್ಯಾಜ್ಯಗಗಳೇ ಈ ಕಾಯಿದೆಯಡಿಯಲ್ಲಿ ದಾಖಲಾಗುತ್ತಿರುವ ಅಂಶವನ್ನು ಎತ್ತಿ ತೋರಿಸುತ್ತವೆ.ಈ ರೀತಿಯಲ್ಲಿ ಈ ಕಾಯಿದೆಯು ಅಸ್ಪೃಷ್ಯತೆಯ ಆಚರಣೆಯಲ್ಲದ ವಿಚಾರಗಳಿಗೆ (ದುರು)ಉಪಯೋಗವಾಗುತ್ತಿರುವುದಕ್ಕೆ ಈ ಕಾಯಿದೆ ರೂಪುಗೊಂಡಿರುವ ಸೈದ್ಧಾಂತಿಕ ಚೌಕಟ್ಟಿನಲ್ಲಿಯೆ ಸಮಸ್ಯೆ ಇರಬೇಕೆಂದು ಈ ಲೇಖನವು ತರ್ಕಿಸುತ್ತದೆ.

ಮುಖ್ಯವಾಗಿ, ಭಾರತೀಯ ಸಮಾಜದ ಕುರಿತ ಜಾತಿವ್ಯವಸ್ಥೆಯ ಚೌಕಟ್ಟಿನ ಹಿನ್ನೆಲೆಯಲ್ಲಿ ಕೆಳಜಾತಿ-ಮೇಲ್ಜಾತಿಗಳ ಕುರಿತು ವಸಾಹತುಶಾಹಿ ಸ್ಟೀರಿಯೋಟೈಪುಗಳು ಸಮಾಜವಿಜ್ಞಾನದಲ್ಲಿ ಹರಡಿಕೊಂಡಿದೆ. ಜಾತಿಗಳ ಕುರಿತ ಈ ರೀತಿಯ ಸ್ಟೀರಿಯೋಟೈಪುಗಳನ್ನು ಆಧರಿಸಿದ ನಿರೂಪಣೆಗಳಿಂದ ಹುಟ್ಟಿಕೊಂಡಿರುವ ಬೌದ್ಧಿಕ ವಲಯದಲ್ಲಿನ ಸಾಮಾನ್ಯ ಗ್ರಹಿಕೆಗಳು ಈ ಕಾಯಿದೆ ರೂಪಿತಗೊಳ್ಳಲು ಕಾರಣವಾಗಿದೆ. ಈ ಸಾಮಾನ್ಯಗ್ರಹಿಕೆಗಳು ಇಲ್ಲಿಯ ವಾಸ್ತವ ಸ್ಥಿತಿಯಾಗಿರದೇ ಇರುವುದರಿಂದ ಈ ಕಾಯಿದೆಯಿಂದ ತಮ್ಮ ಸಮಸ್ಯೆಗಳನ್ನು ಪರಿಹಾರ ಮಾಡಿಕೊಂಡು ನ್ಯಾಯಪಡೆಯುವುದಕ್ಕಿಂತ ಹೆಚ್ಚಾಗಿ ಲಾಭ ಪಡೆಯುವ ಕಡೆಗಷ್ಟೇ ಒಲವಿದೆ. ಅಲ್ಲದೆ ದಲಿತರ ಸಮಸ್ಯೆಗಳನ್ನು ಪರಿಹರಿಸುವುದಕ್ಕಿಂತ ಹೆಚ್ಚಾಗಿ ಈ ಕಾಯಿದೆಯು ಹಲವು ಹೊಸ ರೀತಿಯ ಸಮಸ್ಯೆಗಳನ್ನು ಹುಟ್ಟುಹಾಕುತ್ತಿದೆ ಎಂದು ಈ ಲೇಖನವು ವಾದಿಸುತ್ತದೆ. ಮತ್ತಷ್ಟು ಓದು »

15
ಮಾರ್ಚ್

ಧರ್ಮ ಅನಿವಾರ್ಯವೇ?

– ಪ್ರಸನ್ನ ಬೆಂಗಳೂರು

ಧರ್ಮಅಯ್ಯೋ! ನಮ್ಮ ದೇಶದಲ್ಲಿ ಕಾನೂನಿಗೆ ಬೆಲೆ ಇಲ್ಲ ಕಣ್ರೀ ಎಂದು ನಿರಾಶದಾಯಕ ಮಾತುಗಳನ್ನು ನಾವು ಕೇಳಿರುತ್ತೇವೆ.
ಅದಕ್ಕೆ ಕಾರಣವೇನು ಎಂಬುದನ್ನು ನಾವು ಎಂದಾದರೂ ಮನಗಾಣಲು ಪ್ರಯತ್ನಿಸಿದ್ದೇವೆಯೆ?

ಕಾನೂನು (ಧರ್ಮ) ಎನ್ನುವುದು ನಿರ್ಬಂಧ, (ಇಲ್ಲಿ ನಾನು ಧರ್ಮ ಎನ್ನುವುದನ್ನು ಕಾನೂನು ಎಂದೆ ಕರೆಯುತ್ತಿದ್ದೇನೆ ಕಾರಣ ಬಹುತೇಕರಿಗೆ ನಮ್ಮಲ್ಲಿ ಧರ್ಮವೆಂದಾಕ್ಷಣ ಒಂದು ತೆರನಾದ ಅಸಡ್ಡೆ ಅಥವ ಯಾವುದಕ್ಕೂ ಬೇಡದ ಅಥವ ನಾನು ಅದರಿಂದ ದೂರವಿದ್ದು ಎಲ್ಲ ಧರ್ಮೀಯರಿಗೂ ಒಳ್ಳೆಯವನು ಸಮಾನ ಎನಿಸಿಕೊಳ್ಳಬೇಕೆನ್ನುವ ಚಟವಿರುತ್ತದೆ ಹಾಗಾಗಿ ಧರ್ಮ ಎಂಬುದನ್ನು ಕಾನೂನೆಂದೆ ನಾನು ಸಂಬೋಧಿಸುತ್ತೇನೆ.ಅದು ಹೌದೂ ಕೂಡ) ಸಂಕೋಲೆ ಅದನ್ನು ಮುರಿಯುವುದು ಧಿಕ್ಕರಿಸುವುದು ಹದಿಹರೆಯದಲ್ಲಿ ಸಾಹಸದ ಕೆಲಸ ಎನಿಸಿಕೊಳ್ಳುತ್ತದೆ. ಅಂತಹ ಕಾರ್ಯವನ್ನು ಕೆಲವರು ಆಸ್ವಾದಿಸುತ್ತಾರೆ. ಭಾರತೀಯ ಸಂಪ್ರದಾಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲೇಬೇಕೆಂಬ ನಿಯಮವಿಲ್ಲ. ಆದ್ದರಿಂದಲೇ ಇಲ್ಲಿ ಕಾನೂನು ಮುರಿಯುವುದು ತಪ್ಪಿನ ಕೆಲಸ ಎನಿಸಿಕೊಳ್ಳುವುದೇ ಇಲ್ಲ. ಎಲ್ಲವೂ ಸ್ವಯಂ ನಿಯಂತ್ರಣದ ನೈತಿಕತೆಯ ಮೇಲೆ ನಿಂತಿರುತ್ತದೆ. ಉದಾಹರಣೆಗೆ ರಾತ್ರಿ ಹನ್ನೆರಡು ಗಂಟೆಯಲ್ಲಿ ನಿರ್ಜನ ಪರಿಸ್ಥಿತಿಯಲ್ಲಿ ಹಸಿರು ದೀಪಕ್ಕಾಗಿ ಕಾಯುವುದಿಲ್ಲ. ಕಾರಣ ನನ್ನಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂಬ ನೈತಿಕತೆಯಷ್ಟೇ ಇಲ್ಲಿ ಕೆಲಸ ಮಾಡುತ್ತದೆ.

ಮತ್ತಷ್ಟು ಓದು »

19
ಫೆಬ್ರ

ಕಾನೂನಿನ ಶಂಖದಿಂದ ಪರಿಹಾರದ ತೀರ್ಥ ಬರುತ್ತದೆಯೇ?

– ರಾಕೇಶ್ ಶೆಟ್ಟಿ

Mala Horuvuduಇತ್ತೀಚೆಗೆ ಪ್ರಕಟವಾದ ಸುದ್ದಿಗಳಲ್ಲಿ ಬಹುವಾಗಿ ಕಾಡಿದ್ದು,ವಿಜಯವಾಣಿಯಲ್ಲಿ ಜನವರಿ ೨೯ರಂದು ಮತ್ತೆ ಫೆಬ್ರವರಿ ೫ರಂದು ಪ್ರಕಟವಾದ ೨ ಸುದ್ದಿಗಳು.ಒಂದು ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲೇ ಇರುವ ಆನೇಕಲ್ ಪುರಸಭೆ ವ್ಯಾಪ್ತಿಯಲ್ಲಿ ವರದಿಯಾದ ಮಲಹೊರುವ ಪ್ರಕರಣ ಮತ್ತು ಇನ್ನೊಂದು ಮಂಡ್ಯದ ಕಾಂಗ್ರೆಸ್ಸ್ ಕಛೇರಿಗೆ ಸಂಬಂಧಿಸಿದ ಮ್ಯಾನ್ ಹೋಲ್ ಅನ್ನು ಪೌರಕಾರ್ಮಿಕನೊಬ್ಬ ಬರಿಗೈಯಿಂದ ಸ್ವಚ್ಚ ಮಾಡುತಿದ್ದ ವರದಿ.

ಆನೇಕಲ್ಲಿನ ಪ್ರಕರಣ ವರದಿಯಾದ ಮೇಲೆ ಸರ್ಕಾರ ಎಚ್ಚೆತ್ತುಕೊಂಡು, ‘ಮಲಹೊರುವಂತೆ ಪ್ರೇರೆಪಿಸಿದ’ ಮತ್ತು ‘ಜಾತಿನಿಂದನೆ’ಯ (ಇದರಲ್ಲಿ ಜಾತಿ ನಿಂದನೆಯಾಗಿದ್ದು ಹೇಗೆ ಅನ್ನುವುದು ತಿಳಿಯಲಿಲ್ಲ) ಆರೋಪದ ಮೇಲೆ ಒಬ್ಬರನ್ನು ಬಂಧಿಸಿದ ಫಾಲೋ-ಅಪ್ ಸುದ್ದಿಯೂ ಪತ್ರಿಕೆಯಲ್ಲಿ ಬಂದಿತ್ತು. ಆದರೆ,ಸರಿಯಾದ ಒಳಚರಂಡಿ ವ್ಯವಸ್ಥೆಯನ್ನು ರೂಪಿಸದ ಸರ್ಕಾರ ಇಂತ ಪ್ರಕರಣದಲ್ಲಿ ಮೊದಲ ಆರೋಪಿಯಾಗಬೇಕೆ ಅಥವಾ ವ್ಯವಸ್ಥೆಯ ನಿರ್ಲಕ್ಷ್ಯದ ಅನಿವಾರ್ಯತೆಗೆ ಬಿದ್ದು,ಕಾರ್ಮಿಕರಿಂದ ಮಲಹೊರಿಸುವ ಸ್ಥಿತಿಗೆ ಬಂದು ನಿಲ್ಲುವವರು ಆರೋಪಿಗಳಾಗಬೇಕೆ?

ಅತ್ಯಾಧುನಿಕ ಉಪಕರಣಗಳು ಆಯಾ ಪಾಲಿಕೆ/ನಗರಸಭೆ/ಪುರಸಭೆ/ಗ್ರಾಮಪಂಚಾಯಿತಿ ಗಳಲ್ಲಿ ಲಭ್ಯವಿದ್ದೂ ಮತ್ತು ಅವುಗಳನ್ನು ಬಳಸುವ ಬಗ್ಗೆ ಜನರಿಗೆ ಅರಿವು ಮೂಡಿಸಿ,ಅವು ಸುಲಭವಾಗಿ ದಕ್ಕುವಂತೆ ಸರ್ಕಾರ ಮಾಡಿದ್ದರೆ,ಒಬ್ಬರು ಜೈಲಿಗೆ ಹೋಗುವುದನ್ನು ತಪ್ಪಿಸಬಹುದಿತ್ತಲ್ಲವೇ?

ಮತ್ತಷ್ಟು ಓದು »

26
ಏಪ್ರಿಲ್

ಕಾನೂನಿನಂಗಳ ೨ : ಸಂಸ್ಕೃತಿಯೇ ಪ್ರಾಚೀನ ಭಾರತೀಯ ಕಾನೂನು

– ಉಷಾ ಐನಕೈ  ಶಿರಸಿ

ಮನುಷ್ಯ ಆದಿಯಲ್ಲಿ ಯಾವಾಗ ಸಾಂಘಿಕಜೀವನವನ್ನು ಪ್ರಾರಂಭಿಸಿದನೋ ಆಗಿನಿಂದಲೇ ಹಲವಾರು ಅವ್ಯಕ್ತವಾದ ಕಾನೂನುಗಳನ್ನು ಕಟ್ಟಿ ಕೊಳ್ಳುತ್ತಾಬಂದ. ಶಿಲಾಯುಗದ ಮನುಷ್ಯ ಒಬ್ಬನೇ ಬೇಟೆಯಾಡುವುದನ್ನು ನಿಲ್ಲಿಸಿ ಹಲವಾರು ಜನರೊಂದಿಗೆ ಪ್ರಾಣಿಗಳ ಬೇಟೆಗೆ ಹೋಗತೊಡಗಿದ. ಬೇಟೆಯಾಡಿ ಬಂದನಂತರ ತಾವು ಬೇಟೆ ಯಾಡಿದ ರೀತಿಯನ್ನು ಈ ಗುಂಪು ಅಭಿನಯದ ಮೂಲಕ ತೋರಿಸುವ ಪ್ರಯತ್ನ ನಡೆಯಿತು. ಇದೇ ಮುಂದೆ ವಿಧಿ, ಆಚರಣೆಯಾಗಿ ಖಾಯಂ ಗೊಂಡಿತು. ಈ ಸಂದರ್ಭದಲ್ಲಿ ವಿಧಿಯಾಚರಣೆಗಳಿಗೆ ಕೆಲವು ನಿಯಮಾವಳಿಗಳನ್ನು ಹೆಣೆದುಕೊಳ್ಳುತ್ತ ಬಂದರು. ಅದನ್ನೇ ಆ ಕಾಲದ ಕಾನೂನಿನ ಸ್ವರೂಪ ಎಂದು ಗುರುತಿಸಬಹುದು. ಮನುಷ್ಯ ಗುಂಪು ಕಟ್ಟಿ ಸಮಾಜಜೀವನ ನಡೆಸತೊಡಗಿದಾಗ ಗುಂಪು-ಗುಂಪುಗಳ ನಡುವೆ ಗುಂಪು ಹಾಗೂ ವ್ಯಕ್ತಿಯ ನಡುವಿನ ವ್ಯವಹಾರಕ್ಕೆ ಹಲವು ನಿಯಮಾವಳಿಗಳು ಹುಟ್ಟಿಕೊಂಡವು. ಇದನ್ನು  ಕಾನೂನು ಎಂದು ಕರೆಯುತ್ತೇವೆ. ಹೀಗೆ ಮನುಷ್ಯ ನಾಗರಿಕತೆಯುದ್ದಕ್ಕೆ ಒಂದಲ್ಲಒಂದು ರೀತಿಯ ಕಾನೂನು ರೂಪಗೊಳ್ಳುತ್ತ ಪರಿವರ್ತನೆಯಾಗುತ್ತ ಸಮಾಜವನ್ನು ಸುಸ್ಥಿತಿಯಲ್ಲಿಟ್ಟುಕೊಂಡು ಬಂದದ್ದನ್ನು ನಾವು ಕಾಣುತ್ತೇವೆ.

ನಮ್ಮ ಭಾರತ ದೇಶದ ಮಟ್ಟಿಗೆ ನೋಡುವುದಾದರೆ ಇಲ್ಲೂ ಕೂಡ ಕಾನೂನಿನ ಇತಿಹಾಸ ಬಹು ದೀರ್ಘವಾಗಿದೆ. ಸಾವಿರಾರು ವರ್ಷಗಳ ಪರಂಪರೆಯನ್ನು ಹೊಂದಿದ ಭಾರತೀಯ ಸಂಸ್ಕೃತಿ ಇಡೀ ಜಗತ್ತಿನ ಗಮನ ಸೆಳೆದಿದೆ. ಸಮೃದ್ಧಿಯಿಂದ ಮರೆದಿದೆ. ಹೀಗಿದ್ದಾಗ ಈ ಸಂಸ್ಕೃತಿಯ ಜನ ನೆಮ್ಮದಿಯಿಂದ ಬಾಳಿ ಬದುಕಿ ಬಂದಿದ್ದಾರೆಂಬು ದಂತೂ ನಿಜ. ಅಂದರೆ ಅಂತಹ  ಒಂದು ಸುಸಂಬದ್ಧವಾದ ವ್ಯವಸ್ಥೆ ಈ ಸಂಸ್ಕೃತಿಯಲ್ಲಿ ಇತ್ತು ಅಂತಾಯಿತು. ಅದು ಯಾವ ವ್ಯವಸ್ಥೆ? ಹೇಗೆ ನಡೆಯುತ್ತಿತ್ತು? ಯಾವ ಪ್ರೇರಣೆಯಿಂದ ಹಾಗೂ ಹಿನ್ನೆಲೆಯಿಂದ ನಡೆಯುತ್ತಿತ್ತು ಎಂಬಿವೇ ಮುಂತಾದ ಪ್ರಶ್ನೆಗಳು ಎದುರಾಗುತ್ತವೆ. ಇದಕ್ಕೆಲ್ಲ ಒಂದೇ ಒಂದು ಸರಳವಾದ ಉತ್ತರ ಎಂದರೆ ‘ಪ್ರಾಚೀನ ಭಾರತದ ಕಾನೂನುಗಳು’.

ಮತ್ತಷ್ಟು ಓದು »