ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕಾಶ್ಮೀರಿ ಪಂಡಿತರು’

30
ಜನ

ಮರೆತರೆ ಕ್ಷಮಿಸಿದಂತೆ ಆದೀತು,ಎಚ್ಚರ!

– ಭರತ್ ಶಾಸ್ತ್ರೀ

ಈ ವರ್ಷದ ಗಣರಾಜ್ಯೋತ್ಸವಕ್ಕೆ ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಪೋಲಿಸರ ಸರ್ಪಕಾವಲಿನಲ್ಲಿ ಧ್ವಜಾರೋಹಣ ನಡೆಸಲಾಯಿತು, ಜತೆಗೆ ಶ್ರೀನಗರದ ಲಾಲ್ ಚೌಕ್ ದಲ್ಲಿ ಧ್ವಜ ಹಾರಿಸಲಿಲ್ಲ ಎಂಬ ಕಳವಳಕಾರಿ ಸುದ್ದಿಯೂ ಬಂತು. ಈ ಹಿನ್ನೆಲೆಯಲ್ಲಿ ಜನವರಿ 24, 2010 ರ “ದಿ ಪಯೊನೀರ್” ಪತ್ರಿಕೆಯಲ್ಲಿ ಖ್ಯಾತ ಅಂಕಣಕಾರ ಕಾಂಚನ್ ಗುಪ್ತಾ ಅವರ To forget would be to forgive ಎಂಬ ಮನಕಲಕುವ ಲೇಖನದ ಸಾರಾಂಶವನ್ನು ಓದುಗರಿಗೆ ಕೊಡುವ ಪ್ರಯತ್ನವನ್ನು ಮಾಡುತ್ತಿದ್ದೇನೆ. 60 ವರ್ಷ ತುಂಬಿದ ನಮ್ಮ ಗಣರಾಜ್ಯದಲ್ಲಿ ಇಂತಹ ದೌರ್ಜನ್ಯ ನಮ್ಮ ಮಾಧ್ಯಮಗಳ ಕಣ್ಣಿಗೆ ಏಕೆ ಕಾಣುವುದಿಲ್ಲ ಎಂಬ ನನ್ನ ಹತಾಶೆಯನ್ನು ಓದುಗರೊಂದಿಗೆ ಹಂಚಿಕೊಳ್ಳಲು ಇಚ್ಚಿಸುತ್ತೇನೆ. ಮತ್ತಷ್ಟು ಓದು »

19
ಮೇ

ಕೈ ಜಾರುತ್ತಿರುವ ಜಮ್ಮುಕಾಶ್ಮೀರ ; ನೆನಪಾಗುವ ಜಗಮೋಹನ್

– ರಾಕೇಶ್ ಶೆಟ್ಟಿ

ಕಳೆದ 5 ತಿಂಗಳಿನಲ್ಲಿ ಸೇನೆಯ ಮೇಲೆ 7 ದಾಳಿಗಳು ; ಮೇ 2ನೇ ತಾರೀಖು ಇಬ್ಬರು ಭಾರತೀಯ ಯೋಧರ ತಲೆಕಡಿಯಲಾಯಿತು;2 ಬ್ಯಾಂಕುಗಳ ದರೋಡೆ,ಹತ್ಯೆಗಳು; ರಾಜ್ಯ ಸರ್ಕಾರವೇ ಭದ್ರತಾ ದೃಷ್ಟಿಯಿಂದ 40 ಬ್ಯಾಂಕುಗಳಲ್ಲಿ ನಗದು ವ್ಯವಹಾರ ಮಾಡದಂತೆ ಸೂಚಿಸಿದ್ದು; ಸಹೋದರಿಯ ಮದುವೆಗೆಂದು ರಜೆಯಲ್ಲಿ ಮನೆಗೆ ಬಂದಿದ್ದ ಯೋಧನನ್ನು ಅಪಹರಿಸಿ,ಚಿತ್ರಹಿಂಸೆ ನೀಡಿ ಹತ್ಯೆ;ಹುತಾತ್ಮ ಯೋಧನ ಶವಯಾತ್ರೆಯಲ್ಲಿ ಕಲ್ಲು ತೂರಾಟ;ಎನ್ಕೌಂಟರಿನಲ್ಲಿ ಸತ್ತ ಉಗ್ರನ ಶವಯಾತ್ರೆಯಲ್ಲಿ ಪ್ರತ್ಯಕ್ಷವಾದ ಉಗ್ರರಿಂದ ಗಾಳಿಯಲ್ಲಿ ಗುಂಡು,ಪ್ರತೀಕಾರದ ಕೂಗು;ಆಡಳಿತಾರೂಢ ಪಿಡಿಪಿ ಪಕ್ಷದ ಪುಲ್ವಾಮ ಜಿಲ್ಲಾಧ್ಯಕ್ಷನನ್ನು ಗುಂಡಿಕ್ಕಿ ಕೊಲ್ಲಲಾಯಿತು.

ಇವೆಲ್ಲ ಘನಂಧಾರಿ ಸಾಧನೆಗಳಾಗಿರುವುದು ಆಗುತ್ತಿರುವುದು ಜಮ್ಮುಕಾಶ್ಮೀರ ರಾಜ್ಯದಲ್ಲಿ.ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಉಗ್ರ ಬರ್ಹಾನ್ ವನಿಯ ಹತ್ಯೆಯ ನಂತರ ಭುಗಿಲೆದ್ದ ಹಿಂಸಾಚಾರ, Demonetization ಮತ್ತು ಸರ್ಜಿಕಲ್ ಸ್ಟ್ರೈಕ್ ನಂತರ ತಾತ್ಕಾಲಿಕವಾಗಿ ತಣ್ಣಗಾಗಿತ್ತಾದರೂ ಈಗ ಭೀಕರ ಹಂತಕ್ಕೆ ಹೊರಟಿರುವಂತೆ ತೋರುತ್ತಿದೆ.ಜಮ್ಮುಕಾಶ್ಮೀರ ರಾಜ್ಯದಿಂದ ಈಗ ಬರುತ್ತಿರುವ ಸುದ್ದಿಗಳು 90ರ ದಶಕವನ್ನು ಮತ್ತೊಮ್ಮೆ ನೆನಪಿಸುತ್ತಿರುವುದು ಸುಳ್ಳಲ್ಲ. 90ರ ದಶಕದಲ್ಲೂ ಹೀಗೆ ಕಾನೂನು-ಸುವ್ಯವಸ್ಥೆಯೆನ್ನುವುದು ಹಾಳು ಬಿದ್ದು ಹೋಗಿತ್ತು.ಆಗಲೂ ಹೀಗೆ ಉಗ್ರಗಾಮಿಗಳು ಕಾಶ್ಮೀರಿಗಳ ಮನೆಬಾಗಿಲು ತಟ್ಟುತ್ತಿದ್ದರು,ಅನಾಮತ್ತಾಗಿ ಮನೆಯಿಂದ ಎತ್ತಾಕಿಕೊಂಡು ಹೋಗಿ ಚಿತ್ರಹಿಂಸೆ ಕೊಟ್ಟು ಕೊಲ್ಲುತ್ತಿದ್ದರು.ಈಗ ಹೊತ್ತಿ ಉರಿಯುತ್ತಿರುವ ದಕ್ಷಿಣ ಕಾಶ್ಮೀರದ ಸ್ಥಿತಿ ಮತ್ತೆ 90ರ ದಶಕಕ್ಕೆ ಹೊರಳಿ ನಿಂತಂತಿದೆ.

ಮತ್ತಷ್ಟು ಓದು »

25
ಮಾರ್ಚ್

ಕಾಂಗ್ರೆಸ್-ಕಮ್ಯುನಿಷ್ಟರ ಮೈತ್ರಿ, ಬಂಗಾಳಕ್ಕೆ ಸಿಕ್ಕಿದ್ದು ಕರಾಳ ರಾತ್ರಿ

-ಶ್ರೀನಿವಾಸ ರಾವ್

bengalಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಕೊಲೆ, ದಾಳಿ – ಭಯೋತ್ಪಾದನೆಗೆ ಧರ್ಮವಿಲ್ಲ- ಕಮ್ಯುನಿಷ್ಟರು
26/11ರ ಮುಂಬೈ ದಾಳಿ, ದಾಳಿ ಮಾಡಿದ್ದು ಇಸ್ಲಾಮ್ ನ ಭಯೋತ್ಪಾದಕರು -ಭಯೋತ್ಪಾದನೆಗೆ ಧರ್ಮವಿಲ್ಲ- ಬುದ್ಧಿಜೀವಿಗಳು, ಕಮ್ಯುನಿಷ್ಟರು. ಉಗ್ರ ಯಾಕೂಬ್ ಮೆಮನ್ ಗೆ ಗಲ್ಲು ಶಿಕ್ಷೆ – ಭಯೋತ್ಪಾದನೆಗೆ ಧರ್ಮವಿಲ್ಲ!

ಭಾರತದಲ್ಲಾಗಲೀ ಅಥವಾ ವಿದೇಶಗಳಲ್ಲಿ ಇಸ್ಲಾಂ ನ ಮೂಲಭೂತವಾದಿಗಳು, ಮತಾಂಧ ಉಗ್ರರು ದಾಳಿ ನಡೆಸಿದಾಗಲೆಲ್ಲಾ ’ಭಯೋತ್ಪಾದನೆಗೆ ಧರ್ಮವಿಲ್ಲ’ವೆಂಬ ಹೇಳಿಕೆ (ready made statement) ಸಿದ್ಧವಾಗಿರುತ್ತದೆ. ಇಂಥದ್ದೊಂದು ಹೇಳಿಕೆಯನ್ನು coin(ಪರಿಚಯಿಸಿದ್ದೇ)ಮಾಡಿದ್ದೇ ಈ ಕಮ್ಯುನಿಷ್ಟರು ಹಾಗೂ ಕಮ್ಯುನಿಷ್ಟರ ಕೃಪಾಪೋಷಿತ ಬುದ್ಧಿಜೀವಿಗಳು. ಭಯೋತ್ಪಾದಕರ ದಾಳಿ ನಡೆದಾಗಲೆಲ್ಲಾ ಇವರಿಂದ ಇಂಥಹ ಹೇಳಿಕೆ ಬರುವುದಾದರೂ ಯಾಕೆ ಅಂದುಕೊಂಡಿದ್ದೀರಿ? ಇಸ್ಲಾಮ್ ಗೆ ಪರ್ಯಾಯವಾದ, ಅಂಥಹದ್ದೇ ಒಂದು ಭಯೋತ್ಪಾದನೆಯನ್ನು ಇವರೂ ಪರಿಚಯಿಸಿದ್ದಾರೆ ಆದ್ದರಿಂದ…
ಮತ್ತಷ್ಟು ಓದು »

20
ಜನ

ಮಾಲ್ಡಾ ಗಲಭೆ ಮತ್ತು ಬಾಂಗ್ಲಾ ನುಸುಳುಕೋರರೆಂಬ ಟೈಂ ಬಾಂಬ್

– ರಾಕೇಶ್ ಶೆಟ್ಟಿ

ಮಾಲ್ಡಾನಾಲಗೆಯನ್ನು ಎಕ್ಕಡದಂತೆ ಬಳಸುವ ರಾಜಕಾರಣಿಗಳ ಸಾಲಿನಲ್ಲಿ ಅಗ್ರಗಣ್ಯರಾಗಿ ನಿಲ್ಲುವುದು ಸಮಾಜವಾದಿ ಪಕ್ಷದ ಅಜಂ ಖಾನ್. ಇತ್ತೀಚೆಗೆ ಆರೆಸ್ಸಿನ ನಾಯಕರ ಲೈಂಗಿಕತೆಯ ಬಗ್ಗೆ ಈತ ಕೆಟ್ಟದಾಗಿ ಮಾತನಾಡಿದ್ದರು. ಈತನಿಗಿಂತ ನಾನೇನೂ ಕಮ್ಮಿಯೆಂಬಂತೆ ಕಮಲೇಶ್ ತಿವಾರಿಯೆಂಬ ಹಿಂದೂ ಮಹಾಸಭದ ವ್ಯಕ್ತಿ ಪ್ರವಾದಿ ಮಹಮ್ಮದ್ ಅವರ ಬಗ್ಗೆ ಟೀಕೆ ಮಾಡಿದ್ದರು. ಮುಸ್ಲಿಮರು ಬೀದಿಗಿಳಿದರು,ತಿವಾರಿಯನ್ನು ಗಲ್ಲಿಗೇರಿಸಿ ಎಂದರು. ತಿವಾರಿಯ ಬಂಧನವಾಯಿತು.ಇದೆಲ್ಲಾ ನಡೆದಿದ್ದು ಕಳೆದ ಡಿಸೆಂಬರ್ ತಿಂಗಳಿನಲ್ಲಿ.

ಆದರೆ ಕಳೆದ ವಾರ ಜನವರಿ ೩ನೇ ತಾರೀಖು,ಬಂಗಾಳದ ಮಾಲ್ಡಾ ಜಿಲ್ಲೆಯ ಕಾಲಿಯಾ ಚಕ್ ಪ್ರದೇಶದಲ್ಲಿ ಈದ್ರಾ-ಈ-ಶರಿಯಾ ಎಂಬ ಸಂಘಟನೆ ಕಮಲೇಶನ ಹೇಳಿಕೆಯನ್ನು ಖಂಡಿಸಲೆಂದು ಪ್ರಚೋದನಕಾರಿ ಕರಪತ್ರವೊಂದನ್ನು ಹಂಚಿದೆ ಹಾಗೂ 3ನೇ ತಾರೀಖಿನ ಭಾನುವಾರ ಸುಮಾರು ಎರಡೂವರೆ ಲಕ್ಷದಷ್ಟು ಸಂಖ್ಯೆಯಲ್ಲಿದ್ದ ಗುಂಪು ಪ್ರತಿಭಟನೆಯಲ್ಲಿ ಹೊರಟಿದೆ.ಹಾಗೇ ಹೊರಡುವ ಮುನ್ನ ಪ್ರಚೋದನಕಾರಿ ಭಾಷಣವನ್ನು ಅವರ ತಲೆಗೆ ತುಂಬಲಾಗಿದೆ.ಮಾರಕಾಸ್ತ್ರಗಳನ್ನು ಹಿಡಿದು ಹೊರಟ ಉದ್ರಿಕ್ತ ಗುಂಪು ಕಾಲಿಯಾ ಚಕ್ ಪ್ರದೇಶದಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿಯಿಡುತ್ತ,ಮನೆಗಳಿಗೆ ದಾಳಿಯಿಡುತ್ತ,ಪೋಲಿಸ್ ಠಾಣೆಗೆ ನುಗ್ಗಿ ಅಲ್ಲಿದ್ದ ದಾಖಲೆಗಳು, ಪೋಲಿಸ್ ವಾಹನಗಳಿಗೂ ಬೆಂಕಿಯಿಟ್ಟು ದಾಂಧಲೆ ಮಾಡಿದ್ದರೆ.ಖುದ್ದು ಪೋಲಿಸರೇ ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗಿದ್ದಾರೆ.ಮತಾಂಧರು ದಾಳಿಯೆಬ್ಬಿಸಿ ಹೋದ ಎರಡು ದಿನಗಳ ನಂತರ ಪೋಲಿಸರು ಬೀದಿಗಿಳಿರುವುದಾಗಿ ಅಲ್ಲಿನ ಜನರು ಮೀಡಿಯಾಗಳಲ್ಲಿ ಹೇಳಿಕೊಂಡಿದ್ದಾರೆ.

ದಾದ್ರಿಯಲ್ಲಿ ನಡೆದ ಹತ್ಯೆಯೊಂದನ್ನು ಹಿಡಿದುಕೊಂಡು ದೇಶದ ಹೆಸರಿಗೆ ಮಸಿಬಳಿಸುವಲ್ಲಿ ಪ್ರಧಾನ ಪಾತ್ರವಹಿಸಿದ್ದ ಬುದ್ಧಿಜೀವಿಗಳು,ಸೆಕ್ಯುಲರ್ ಮೀಡಿಯಾಗಳು ಮಾಲ್ಡಾದ ಘಟನೆಯ ಬಗ್ಗೆ ತುಟಿಕ್ ಪಿಟಿಕ್ ಎನ್ನಲಿಲ್ಲ.ಮೊದಲಿಗೆ ಬಾಯಿಬಿಟ್ಟಿದ್ದು ಜೀ ನ್ಯೂಸಿನ ಸುಧೀರ್ ಚೌದರಿ,ಆ ನಂತರವೇ ಉಳಿದ ಚಾನೆಲ್ಲುಗಳು ಅನಿವಾರ್ಯವಾಗಿ ಬಾಯಿ ತೆರೆದವು.ಇಷ್ಟಾದರೂ ಬುದ್ಧಿಜೀವಿಗಳು ಬಾಯಿ ತೆಗೆಯಲಿಲ್ಲ.

ಮತ್ತಷ್ಟು ಓದು »