ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕಿಷ್ಕಿಂಧೆ’

20
ನವೆಂ

ವಾಲ್ಮೀಕಿ ಯಾರು?

– ಡಾ| ಜಿ. ಭಾಸ್ಕರ ಮಯ್ಯ

ವಾಲ್ಮೀಕಿ ಯಾರುಇಂದು ಕನ್ನಡ ಸಾಹಿತ್ಯದ ಅದಮ್ಯ ಚೇತನಗಳಾದ ಮಹಾಕವಿಗಳನ್ನು ಜಾತಿಯ ಗೂಟಕ್ಕೆ ಕಟ್ಟಿ ಬಲಿ ಕೊಡುತ್ತಿರುವ ಪದ್ಧತಿ ಈಗ ಸರಿಸುಮಾರು ನಾಲ್ಕು-ಐದು ದಶಕಗಳಿಂದ ನಡೆಯುತ್ತಿದೆ. ಇದರ ಐತಿಹಾಸಿಕ ದುರಂತವೆಂದರೆ ನವೋದಯದ ನಂತರ ಎಡವುತ್ತಾ ಬಂದ ಅರೆಬರೆ ಪ್ರಕಾರವಾದ ನವ್ಯ ಸಾಹಿತ್ಯ. ಅದು ಬೆಳೆಯುವ ಮುಂಚೆಯೇ ಕಮರಿ ಹೋಯ್ತು. ಅಡಿಗ, ಲಂಕೇಶ್ ಅದಕ್ಕೊಂದು ಅಪವಾದ. ನವೋದಯದ ಪತನಶೀಲ ಕಾಲದ ಕೆಲವು ಜಾತೀಯ ವಿಷಬೀಜಗಳು ಬಂಡಾಯದ ಕಾಲದಲ್ಲಿ ಅಲ್ಲಲ್ಲಿ ಮೊಳಕೆಯೊಡೆದವು. ಈ ಬಂಡಾಯದ ರೂವಾರಿಗಳಲ್ಲಿ ಅನೇಕ ಪ್ರಮುಖರು ಅಲ್ಪವಿದ್ಯಾ ಅಪ್ರಬುದ್ಧ ಹುಸಿ ಕ್ರಾಂತಿಕಾರರು. ಇವರು ನವೋದಯದ ಪತನಶೀಲ ಮತ್ತು ನವ್ಯದ ಗೊಬ್ಬರದಿಂದಲೇ ಬೆಳೆದವರು. ಭಾರತದಾದ್ಯಂತ ಹಿಂದಿ, ಬಂಗಾಳಿ ಮೊದಲಾದ ಭಾಷೆಗಳಲ್ಲಿ ಸರಿಸುಮಾರು ಪ್ರಗತಿಶೀಲ ಜನವಾದಿ ಸಾಹಿತ್ಯಪ್ರಕಾರವು ಆರೋಗ್ಯಕರವಾಗಿ ಬೆಳೆದು ಬಂದರೆ ಕರ್ನಾಟಕದಲ್ಲಿ ಮುಖ್ಯವಾಗಿ ರೂಲಿಂಗ್ ಐಡಿಯಾಗಳನ್ನು ಬಿಂಬಿಸುವ ಹುಸಿ ಬಂಡಾಯಗಾರರೇ ‘ರೂಲಿಂಗ್’ ಆದರು. ರೂಲಿಂಗ್ ಕ್ಲಾಸಿನ ಉತ್ಪನ್ನವಾದ ಈ ‘ರೂಲಿಂಗ್’ ಐಡಿಯಾದವರು ಇಂದು ಕೂಡಾ ರೂಲಿಂಗ್ ಪಕ್ಷದ ಬಹುದೊಡ್ಡ ಪರಾಕುದಾರರು.

ಇದರ ಪರಿಣಾಮವಾಗಿ ಇಂದು ಕನಕದಾಸರು ಕುರುಬನಾಗಿದ್ದಾರೆ.ಬಸವಣ್ಣ ಲಿಂಗಾಯತನಾಗಿದ್ದಾರೆ.ಕುವೆಂಪು ಗೌಡರಾಗಿದ್ದಾರೆ.ಅಂತೆಯೇ ಹಲವಾರು ಶ್ರೇಷ್ಠಲೇಖಕರು ಬ್ರಾಹ್ಮಣ-ಶೂದ್ರ ಇತ್ಯಾದಿ ವಿಧ ವಿಧ ಜೈಲುಗಳಲ್ಲಿ ಬಂಧಿತರಾಗಿದ್ದಾರೆ. ಹಿಂದೆಂದೂ ಇಲ್ಲದ ಜಾತಿವಾದ ಇಂದು ಸಾಹಿತ್ಯ ಮತ್ತು ಸಂಸ್ಕೃತಿಯ ವಲಯದಲ್ಲಿ ವ್ಯಾಪಿಸಿದೆ. ಈ ದುರಂತಕ್ಕೆ ಇತ್ತೀಚೆಗಿನ ಸೇರ್ಪಡೆ ವಾಲ್ಮೀಕಿ.

ವಾಲ್ಮೀಕಿ ಜನಾಂಗದ ವ್ಯಕ್ತಿಯೊಬ್ಬರು ಸರ್ಕಾರದಲ್ಲಿ ಪ್ರಭಾವಶಾಲಿಯಾಗಿದ್ದ ಕಾಲದಲ್ಲಿ ಆದಿಕವಿ ವಾಲ್ಮೀಕಿಗೆ ಹಠಾತ್ ಲಾಟರಿ ಹಾರಿತು.ವಾಲ್ಮೀಕಿ ಜಯಂತಿ ಆಚರಿಸಲು ಸರ್ಕಾರ ಅಧಿಸೂಚನೆ ಹೊರಡಿಸಿತು.ಆ ದಿನ ಕರ್ನಾಟಕದಲ್ಲಿ ರಜಾದಿನವೆಂದು ಘೋಷಿಸಲಾಯಿತು. ಹೀಗೆ ಭಾರತದ ರಾಷ್ಟ್ರೀಯ ಮಹಾಕವಿಯೊಬ್ಬನಿಗೆ ಕರ್ನಾಟಕದಲ್ಲಿ ಈ ಪರಿ ಮರಣೋತ್ತರ ಗೌರವ ಸಂದಿತು. ಕರ್ನಾಟಕದಾದ್ಯಂತ ಸಭೆಸಮಾರಂಭಗಳು, ವಾಲ್ಮೀಕಿ ಭವನ ನಿರ್ಮಾಣದ ಯೋಜನೆ – ಇತ್ಯಾದಿಗಳು ವಿಜ್ರಂಭಿಸಿದವು.

ಮತ್ತಷ್ಟು ಓದು »