ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೩ )
– ಡಾ. ಮಾಧವ ಪೆರಾಜೆ
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೧ )
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )
ಎರಡು ಭಿನ್ನ ಶಾಸನಗಳು:
ಆದರೆ ಈ ಮಾತಿಗೆ ಅಪವಾದಗಳಾಗಿ ಭಿನ್ನ ರಾಗವನ್ನು ಹಾಡುವ ಶಾಸಗಳೂ ಇಲ್ಲದಿಲ್ಲ. ಸದ್ಯಕ್ಕೆ ಅಂತಹ ಎರಡು ಶಾಸನಗಳು ನನ್ನ ಗಮನಕ್ಕೆ ಬಂದಿದೆ. ಮೊದಲನೆಯದು ಸಿರಗುಪ್ಪದ ಶಾಸನ, ಎರಡನೆಯದು ಹರಪನಹಳ್ಳಿಯ ಶಾಸನ. ಸಿರಗುಪ್ಪದ ಶಾಸನವು ಶಂಭುಲಿಂಗೇಶ್ವರ ದೇವಾಲಯದಲ್ಲಿರುವುದಾಗಿ ಅದರ ಕಾಲವು ಕ್ರಿ.ಶ. 1199 ಎಂದು ತಿಳಿದು ಬರುತ್ತದೆ. ಈ ಶಾಸನದ ಕೊನೆಯಲ್ಲಿ …… ಮತ್ತಷ್ಟು ಓದು
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )
– ಡಾ. ಮಾಧವ ಪೆರಾಜೆ
ಮಧ್ಯಕಾಲದಲ್ಲಿ ಗುಡಿಗಳು:
ದೇವಾಲಯಗಳಿಗೆ ಇದ್ದಕ್ಕಿದ್ದಂತೆ ಪ್ರಸಿದ್ಧಿ ಬಂದಿರುವುದೇ ಮಧ್ಯಯುಗದಲ್ಲಿ ಎನ್ನುವುದು ಇನ್ನೊಂದು ಗಮನಾರ್ಹ ಅಂಶವಾಗಿದೆ. ಪುರಾಣಗಳು ಕಾವ್ಯಗಳು ದೇವಾಲಯಗಳ ಕುರಿತು ಹಾಡಿಹೊಗಳುವುದಕ್ಕೆ ಈ ಕಾಲದಲ್ಲಿ ಪ್ರಾರಂಭ ಮಾಡುತ್ತವೆ. ಅಗ್ನಿಪುರಾಣದ ಪ್ರಕಾರ ದೇವಾಲಯಗಳನ್ನು ಕಟ್ಟಿಸುವ ಬಯಕೆ ಬಂತೆಂದರೆ ಸಾಕು – ಅವರ ಪಾಪ ಪರಿಹಾರವಾಗುತ್ತದೆಯಂತೆ. ದೇವಾಲಯಕ್ಕೆ ಒಂದು ಇಟ್ಟಿಗೆಯನ್ನು ಇಟ್ಟರೆ ಅದು ಅವನಿಗೆ ಸಾಯುವಾಗ ಒಂದು ಯಜ್ಞವನ್ನು ಮಾಡಿದ ಪುಣ್ಯವನ್ನು ಕೊಡುತ್ತದೆಯಂತೆ – ಹಾಗೆಂದು ಹಯಶೀರ್ಷ ಸಂಹಿತೆ ಹೇಳುತ್ತದೆ. ಯಾವುದಾದರೊಂದು ಮಗು ಆಟದ ನೆಪದಲ್ಲಿ ಮರಳಿನಲ್ಲಿ ಗುಡಿ ಕಟ್ಟಿದರೂ ಆ ಮಗುವಿಗೆ ಸ್ವರ್ಗ ಲಭಿಸುತ್ತದೆ ಎಂದು ವಿಷ್ಣು ರಹಸ್ಯವು ತಿಳಿಸುತ್ತದೆ. ಹೀಗೆ ಇಲ್ಲಿಂದ ದೇವಾಲಯಗಳಿಗೆ ಮಹತ್ವವೂ ಪ್ರಸಿದ್ಧಿಯೂ ದೊರೆಯುತ್ತದೆ. ಶ್ರೀಮಂತರು,ಚಕ್ರವರ್ತಿಗಳು, ದಂಡನಾಯಕರು ದೇವಾಲಯಗಳನ್ನು ಕಟ್ಟಿಸುತ್ತಾರೆ. ದೇವಾಲಯಗಳನ್ನು ಕಟ್ಟಿಸುವುದು, ಅಂತಹ ದೇವಾಲಯಗಳಿಗೆ ಪೂಜಾರಿಗಳನ್ನು ನೇಮಕ ಮಾಡುವುದು, ದೇವಾಲಯಗಳ ಸಂದರ್ಶನಕ್ಕಾಗಿ ಹೋಗುವುದು, ಅಲ್ಲಿ ಪ್ರಾರ್ಥನೆ ಮಾಡುವುದು, ಯಾರು ಪೂಜೆ ಮಾಡಬಹುದು, ಮಾಡಬಾರದು ಎನ್ನುವುದು ಮೊದಲಾದವುಗಳೆಲ್ಲ ಈ ಕಾಲದಿಂದಲೇ ಆರಂಭವಾಗುತ್ತವೆ. ನಮ್ಮ ಕನಕದಾಸರು ಈ ಕಾಲದವರೆಂಬುದನ್ನು ಇಲ್ಲಿ ನೆನಪಿಸಿಕೊಳ್ಳೋಣ. ಹೀಗಾಗಿ ಮಧ್ಯಕಾಲೀನ ವಿಷಯಗಳಿಗೆ ಸಂಬಂಧಿಸಿದ ಈಗ ನಾವು ನಿರ್ದಿಷ್ಟವಾಗಿ ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿರುವುದರಿಂದ, ಈ ವಿವರಗಳು ಇನ್ನಷ್ಟು ಸ್ಪಷ್ಟವಾಗಬಲ್ಲವು. ಹಾಗಾದುದರಿಂದ ನಿರ್ದಿಷ್ಟವಾಗಿ ದೇವಾಲಯಕ್ಕೆ ಸಂಬಂಧಿಸಿದಂತೆ ಕರ್ನಾಟಕವನ್ನೇ ಲಕ್ಷಿಸಿ ಇನ್ನು ಮುಂದೆ ಈ ವಿಷಯವನ್ನು ಇನ್ನಷ್ಟು ವಿಸ್ತರಿಸೋಣ. ಮತ್ತಷ್ಟು ಓದು
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೧ )
– ಡಾ. ಮಾಧವ ಪೆರಾಜೆ
‘ದೇವಾಲಯ ಪ್ರವೇಶ’ ಎನ್ನುವ ಸಂಗತಿಯು ಈಗ ಒಂದು ಜ್ವಲಂತ ಸಮಸ್ಯೆ ಎನ್ನುವ ಹಾಗೆ ಪ್ರತಿಬಿಂಬಿತವಾಗುತ್ತಿದೆ. ಕನ್ನಡದ ಜನಪ್ರಿಯ ದಿನಪತ್ರಿಕೆಯಾದ ಪ್ರಜಾವಾಣಿಯಲ್ಲಿ ‘ದೇಗುಲ ಪ್ರವೇಶವೂ ಶುದ್ಧೀಕರಣವೂ’ ಎನ್ನುವ ಲೇಖನ (ಲೇ: ಹೊಸಕೆರೆ ನಂಜುಂಡೇಗೌಡ, ದಿ.6.10.14) ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಇದು ಅತ್ಯಂತ ಸಮಕಾಲೀನ ಸಂಗತಿಯಾಗಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಈ ಉಪನ್ಯಾಸಕ್ಕೆ ಸಂಬಂಧಿಸಿದ ಹಾಗೆ ಶೀರ್ಷಿಕೆಯ ಹಾಗಿರುವ ‘ಬಾಗಿಲನು ತೆರೆದು’ ಎನ್ನುವ ಕೀರ್ತನೆಯ ಸಾಲೊಂದು, ಈ ಉಪನ್ಯಾಸಕ್ಕೆ ಬಾಗಿಲೇ ಆಗುತ್ತದೆ ಎನ್ನುವ ಹಿನ್ನೆಲೆಯಲ್ಲಿ ಆ ಕೀರ್ತನೆಯನ್ನು ಪೂರ್ಣವಾಗಿ ಇಲ್ಲಿ ಉದ್ಧರಿಸಲಾಗಿದೆ. ಮತ್ತಷ್ಟು ಓದು
ನಾಡು- ನುಡಿ:ಮರುಚಿಂತನೆ :– “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ 5
– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ
ಕುರುಬರ ಮೂಲವನ್ನು ಕುರಿತಾದ ವಿಶ್ಲೇಷಣೆಗಳನ್ನು ನೋಡವುದಾದರೆ ಪ್ರಸ್ತುತ ಲಭ್ಯವಿರುವ ಸಾಹಿತ್ಯವು ಕುರುಬರ ಮೂಲಕ್ಕೆ ಕೆಲವು ಕಥೆ ಮತ್ತು ಪುರಾಣಗಳನ್ನು ಆಧಾರವಾಗಿರಿಸಿರುವುದನ್ನು ಕಾಣಬಹುದಾಗಿದೆ. ಉದಾಹರಣೆಗೆ ಹಾಲುಮತ ಪುರಾಣ ಮತ್ತು ಉಂಡಾಡು ಪದ್ಮಣ್ಣನ ಕಥೆಗಳು ಕುರುಬರ ಮೂಲದ ಕುರಿತಾದ ವಿಶ್ಲೇಷಣೆಗಳನ್ನು ಬಹಳವಾಗಿ ಪ್ರಭಾವಿಸಿದೆ. ಇದನ್ನು ನಾವು ಕುರುಬರ ಕುರಿತಾಗಿ ಅಧ್ಯಯನ ನಡೆಸಿರುವ ಪಾಶ್ಚಾತ್ಯ ಚಿಂತಕರಾದ ಎಡ್ಗರ್ ಥಸ್ರ್ಟನ್ ರವರ ದಿ ಟ್ರೈಬ್ಸ್ ಅಂಡ್ ಕ್ಯಾಸ್ಟ್ ಆಫ್ ಸೌಥ ಇಂಡಿಯಾ (1987) ಮತ್ತು ಎಂಥೋವೆನ್ ರವರ ದಿ ಕ್ಯಾಸ್ಟ್ ಅಂಡ್ ಟ್ರೈಬ್ಸ್ ಆಫ್ ಬಾಂಬೆ, (1990) ಪುಸ್ತಕಗಳ ವಿವರಗಳಲ್ಲಿಯೇ ಗುರುತಿಸಬಹುದಾಗಿದೆ. ಕುರುಬರ ಮೂಲವನ್ನು ಕುರಿತಾಗಿ ಹಲವಾರು ಕಥೆಗಳು ಚಾಲಿಯಲ್ಲಿವೆ. ಇಲ್ಲಿ ಗಮನಿಸಬೇಕಾದ ಪ್ರಮುಖ ಅಂಶವೆಂದರೆ ಕುರುಬರು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಭಿನ್ನವಾದಂತಹ ಕಥೆಗಳನ್ನು ಹೇಳುವುದು ಅಲ್ಲದೇ, ಈ ಎಲ್ಲಾ ಕಥೆಗಳು ಅಂದಿನ ಅಥವಾ ಆ ಪ್ರದೇಶದ ಜಾನಪದ ಹಿನ್ನೆಲೆಯಲ್ಲಿ ರೂಪ ಪಡೆದಿದ್ದು, ಮೌಖಿಕವಾಗಿ ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ಬದಲಾವಣೆಗಳೊಂದಿಗೆ ಉಳಿದು ಬಂದಿವೆ ಎಂಬುದು ಸ್ಪಷ್ಟವಾಗುತ್ತದೆ. ಮತ್ತು ಈ ಎಲ್ಲಾ ಕಥೆಗಳು ಕುರುಬರ ಮೂಲವನ್ನೇ ವಿವರಿಸುತ್ತವೆ ಎಂಬುದನ್ನು ನಂಬಲು ಸಾಧ್ಯವಿಲ್ಲ. ಅಲ್ಲದೇ ಬಹುಪಾಲು ಉಪಜಾತಿಗಳು (ಅವುಗಳನ್ನು ಉಪಜಾತಿಗಳು ಎಂದು ಹೇಗೆ ಗುರುತಿಸುವುದು ಎನ್ನುವುದು ಬೇರೆಯದೇ ಪ್ರಶ್ನೆ) ತಮ್ಮದೇ ಆದಂತಹ ಬೇರೆ ಬೇರೆ ಕಥೆಗಳನ್ನು ಹೇಳುವುದು ಕಂಡುಬರುತ್ತದೆ. ಕುರುಬ ಸಮುದಾಯದಲ್ಲಿನ ಆಚರಣೆ ಮತ್ತು ಉಪಜಾತಿಗಳ ಕುರಿತಾದ ವಿವರವನ್ನು ನೋಡಿದರೆ ಇದು ಇನ್ನಷ್ಟು ಸ್ಪಷ್ಟವಾಗಲಿದೆ.