ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕೇರಳ’

25
ಮಾರ್ಚ್

ಕೇರಳ ವರ್ಮ ಪಳಸಿ ರಾಜ.

– ವರುಣ್ ಕುಮಾರ್

(ವಾರಕ್ಕೊಂದು ವೀರರು)

220px-Veera_Kerala_Varma_Pazhassi_Raja೧೭೯೭, ಕೇರಳದ ವಯನಾಡಿನ ಪೆರಿಯಪಾಸ್ ಎಂಬ ಪ್ರದೇಶವನ್ನು ಬ್ರಿಟೀಷ್ ಕರ್ನಲ್ ಡೋ ಮತ್ತು ತುಕಡಿಯು ಹತೋಟಿಗೆ ತೆಗೆದುಕೊಳ್ಳುವ ಉದ್ದೇಶದಿಂದ ಕಾಡಿನ ಮಧ್ಯೆ ಪಯಣವನ್ನು ಮುಂದುವರೆಸಿದರು. ಆದರೆ ಅಂತಹ ದಟ್ಟ ಅರಣ್ಯವಾದಲ್ಲಿ ಒಂದು ಸಣ್ಣ ಶಬ್ದ ಕೇಳಿ ಬಂದರೂ ಎಂತಹವರ ಎದೆಯನ್ನು ಒಂದು ಕ್ಷಣ ನಡುಗಿಸದೇ ಬಿಡದು. ಅಂತಹ ಭಯ ಕರ್ನಲ್ ಡೋ ಅವನಲ್ಲಿಯೂ ಇತ್ತು. ಆದರೆ ಅದಕ್ಕಿಂತ ಹೆಚ್ಚಾಗಿ ಕೇರಳದ ಸಿಂಹದ ಬಗ್ಗೆ ಭಯವಿತ್ತು. ಇಂತಹ ಭಯದಲ್ಲಿ ಮುಂದುವರೆಯುತ್ತಿರುವಾಗ ಅನಿರೀಕ್ಷಿತವಾದ ದಾಳಿ ತನ್ನ ತಂಡದ ಮೇಲೆ ಶುರುವಾಯಿತು. ನೋಡನೋಡುತ್ತಿದ್ದಂತೆಯೇ ನೂರಕ್ಕೂ ಅಧಿಕ ತನ್ನ ಸೈನಿಕರನ್ನು ಕರ್ನಲ್ ಕಳೆದುಕೊಂಡನು. ‌ಈ ಭಯಂಕರ ಕಾದಾಟದಲ್ಲಿ ೩೦೦ಕ್ಕೂ ಮಿಕ್ಕಿ ಸೈನಿಕರು ಗಾಯಾಳಾದರು. ದಾಳಿ ನಡೆಸಿದ ತಂಡ ಬ್ರಿಟೀಷರಿಗೆ ದಾಳಿ ಎಲ್ಲಿಂದ ನಡೆಯುತ್ತಿದೆ ಎಂಬ ಸಣ್ಣ ಊಹೆಯೂ ಸಿಗದ ರೀತಿಯಲ್ಲಿ ವ್ಯವಸ್ಥಿತವಾಗಿ ಯೋಜನೆಯನ್ನು ರೂಪಿಸಿದ್ದರು. ದೇಶಾದ್ಯಂತ ಆನೆ ನಡೆದಿದ್ದೇ ಹಾದಿ ಎಂಬಂತೆ ಮೆರೆಯುತ್ತಿದ್ದ ಬ್ರಿಟೀಷ್ ಸಾಮ್ರಾಜ್ಯಕ್ಕೆ ದೊರೆತ ದೊಡ್ಡ ಮರ್ಮಾಘಾತವಾಗಿತ್ತು. ಈ ರೀತಿ ಗೆರಿಲ್ಲಾ ಮಾದರಿ ದಾಳಿಯನ್ನು ರೂಪಿಸಿ ಬ್ರಿಟೀಷರ ಬೆನ್ನೆಲುಬಲ್ಲಿ ಚಳುಕು ಹುಟ್ಟಿಸಿದ ವೀರ ಕೇರಳದ ಸಿಂಹ ಕೇರಳ ವರ್ಮ ಪಳಸಿ ರಾಜ. ಮತ್ತಷ್ಟು ಓದು »

18
ಸೆಪ್ಟೆಂ

ಕೇರಳದ ಸಿಸ್ಟರ್ ಗೋಳು ಕೇಳುವವರು ಯಾರು?

-ರಾಕೇಶ್ ಶೆಟ್ಟಿ

ದೆಹಲಿಯ ನಿರ್ಭಯ ಕೇಸ್ ಎಲ್ಲರಿಗೂ ಗೊತ್ತಿರುವಂತದ್ದು. ಬಾಳಿ ಬದುಕಬೇಕಾದ ಹೆಣ್ಣುಮಗಳು ರಕ್ಕಸರ ಕೈಗೆ ಸಿಕ್ಕಿ ಜೀವನ್ಮರಣದ ಹೋರಾಟದ ನಂತರ ಕೊನೆಯುಸಿರೆಳೆದು ಹೋದಳು. ಆದರೆ ಹೋಗುವ ಮುನ್ನ ಇಡೀ ದೇಶವನ್ನೇ ಬಡಿದೆಬ್ಬಿಸಿ ಹೋದಳು ನಿರ್ಭಯಾ.ಅಂತಹದ್ದೇ ಕೇಸೊಂದು ೯೦ರ ದಶಕದಲ್ಲಿ ಸುದ್ದಿಯಾಗಿತ್ತು. ಇಡೀ ದೇಶವನ್ನು ಅದು ಆವರಿಸಲಿಲ್ಲವಾದರೂ ಕೇರಳ ರಾಜ್ಯವನ್ನಂತೂ ಸಂಪೂರ್ಣವಾಗಿ ಆವರಿಸಿತ್ತು,ಸಂಸತ್ತಿನಲ್ಲೂ ದನಿಯೆದ್ದಿತ್ತು. ಅದು ಸಿಸ್ಟರ್ ಅಭಯಾ ಹತ್ಯೆಯ ಕೇಸ್. ಕೇಸಿನ ತನಿಖೆಗಿಳಿದ ತನಿಖಾಧಿಕಾರಿಗಳ ಜೀವನವನ್ನೇ ಬದಲಿಸಿ  ಕೇಸ್ ಇದು.

ಬಡ ಕುಟುಂಬದಿಂದ ಬಂದ ಹುಡುಗಿಗೆ ಓದುವ ಆಸೆಯಿತ್ತು,ಜೀವನದಲ್ಲೇನಾದರೂ ಸಾಧಿಸುವ ಹಂಬಲವಿತ್ತು.೧೯ ರ ಹರೆಯದ ಸಿಸ್ಟರ್ ಅಭಯ ಕೇರಳದ ಕೊಟ್ಟಾಯಂನಲ್ಲಿರುವ St. Pius Xth Convent ಎಂಬ ಸೆಮಿನರಿಯಲ್ಲಿದ್ದರು.ಸೆಮಿನರಿಯಲ್ಲಿ ಓದಿಕೊಂಡು ಓಡಾಡಿಕೊಂಡಿದ್ದ ಹುಡುಗಿ ಮಾರ್ಚ್ ೨೭,೧೯೯೨ರ ಬೆಳಗಿನ ಜಾವ St. Pius Xth Conventನ ಬಾವಿಯೊಳಗೆ ಹೆಣವಾಗಿ ತೇಲುತ್ತಿದ್ದರು.ತನಿಖೆ ಆರಂಭವಾಗುವ ಮುನ್ನವೇ ಇದು ಆತ್ಮಹತ್ಯೆ ಎಂದು ಸುದ್ದಿ ಹರಿಬಿಡಲಾಯಿತು. ಮೊದಲು ತನಿಖೆಗಿಳಿದ ಎ.ಎಸ್.ಐ ಅಗಸ್ಟಿನ್ ಅವರ ಕೇಸ್ ಡೈರಿಯಲ್ಲಿ ಹತ್ಯೆಯ ಗುಮಾನಿಯಿದ್ದರೂ ಇದೊಂದು ಆತ್ಮಹತ್ಯೆ ಎಂದೇ ಬಿಂಬಿಸುವ ರೀತಿಯಲ್ಲಿ ತನಿಖೆ ನಡೆದಿತ್ತು.ಇತ್ತ ರೊಚ್ಚಿಗೆದ್ದ ಸ್ಥಳೀಯರು ‘ಕ್ರಿಯಾ ಸಮಿತಿ’ ರಚಿಸಿಕೊಂಡು,ಅಭಯಾ ಕೊಲೆಗೆ ಕಾರಣರಾಗಿರುವವರನ್ನು ಪತ್ತೆಹಚ್ಚಿ ಶಿಕ್ಷಿಸಬೇಕೆಂದು ಪ್ರಧಾನಮಂತ್ರಿ, ಕೇರಳ ಮುಖ್ಯಮಂತ್ರಿ, ಕೇರಳ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಡೈರೆಕ್ಟರ್ ಜನರಲ್ ಆಫ್ ಪೊಲೀಸ್‌ಗೆ(ಡಿಜಿಪಿ) ಮನವಿ ಮಾಡಿಕೊಂಡಿತು,ಜನರ ಹೋರಾಟ ತೀವ್ರವಾದಾಗ,ಒತ್ತಡಕ್ಕೆ ಮಣಿದ ಡಿಜಿಪಿ, ೧೯೯೨, ಏಪ್ರಿಲ್ ೭ರಂದು ಪೊಲೀಸರಿಂದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಕ್ರೈಮ್ ಬ್ರ್ಯಾಂಚ್ ಗೆ ಸೂಚಿಸಿದರು.ಸಿಸ್ಟರ್ ಅಭಯ ದೇಹದ ಮೇಲಿದ್ದ ಬಟ್ಟೆ, ಫೋಟೋಗಳು,ಖಾಸಗಿ ಡೈರಿ ಹೀಗೆ ಪ್ರಮುಖ ಸಾಕ್ಷ್ಯಗಳೆಲ್ಲ ಕೇರಳ ಕ್ರೈಮ್ ಬ್ರ್ಯಾಂಚಿನ SPಯಾಗಿದ್ದ ಕೆ.ಟಿ ಮೈಕೆಲ್ ಅವರ ಸುಪರ್ದಿಗೆ ಬಂದು ನಂತರ ಇದ್ದಕಿದ್ದಂತೆ ಕಾಣೆಯಾಗಿ ಹೋದವು. ಯಾವ ಡೆವಿಲ್ ಬಂದು ಕೊಂಡು ಹೋಯಿತೋ ಏನೋ? ೩೦ ಜನವರಿ ೧೯೯೩ರಂದು ಉಪವಿಭಾಗೀಯ ನ್ಯಾಯಾಧೀಶರೆದುರು ತನ್ನ ವರದಿಯನ್ನಿಟ್ಟ ಕ್ರೈಮ್ ಬ್ರ್ಯಾಂಚ್, ತನಿಖೆ ಮಾಡುವುದನ್ನು ಬಿಟ್ಟು ಚರ್ಚ್‌ನ ನನ್ ಗಳ ಅಭಿಪ್ರಾಯವನ್ನು ಸಂಗ್ರಹಿಸಿ, ‘ಆತ್ಮಹತ್ಯೆ’ ಎಂದು ಷರಾ ಬರೆದಿತ್ತು!

ಮತ್ತಷ್ಟು ಓದು »

23
ಆಗಸ್ಟ್

ಸೃಷ್ಟಿಯ ಅಗಾಧತೆಗೆ ಸವಾಲೆಸೆಯುವ ಮುನ್ನ…!

– ಸುಜಿತ್ ಕುಮಾರ್

ಇಡೀ ಭೂಖಂಡವೇ ತನ್ನದೆಂದುಕೊಂಡು ಒಂತಿಷ್ಟು ತಂತ್ರಜ್ಞಾನದ ಉನ್ನತಿಯ ಶಿಖರದ ಹಿನ್ನಲೆಯಲ್ಲಿ ಬೀಗುವ ಮಾನವ ನಿಸರ್ಗದ ಅಗಾಧತೆಯ ಮುಂದೆ ತಾನು ಅದೆಷ್ಟು ಕುಬ್ಜ ಕನಿಷ್ಠ ಎಂಬುದು ಇತ್ತೀಚಿಗೆ ಜರುಗುತ್ತಿರುವ ಪ್ರವಾಹ ಪ್ರಳಯಗಳ ಹಿನ್ನಲೆಯಲ್ಲಿ ಗಮನಿಸಿದರೆ ಬಹಳ ಸವಿವರವಾಗಿ ತಿಳಿಯುತ್ತದೆ. 4ಜಿ ಸ್ಪೀಡಿನ ಇಂಟೆರ್ನೆಟ್ಟು, ಜಗತ್ತನೇ ತನ್ನ ಮುಷ್ಠಿಯೊಳಗೆ ಭದ್ರವಾಗಿಸಿರುವ ಸ್ಮಾರ್ಟ್ ಫೋನುಗಳು, ಜನರೇಟರ್ ಗಳು, ಯುಪಿಎಸ್ಗಳು, ದೇಶದ ಮೂಲೆ ಮೂಲೆಯನ್ನು ಜೋಡಿಸುವ ಹೈ ಸ್ಪೀಡ್ ಟ್ರೈನುಗಳು, ಸಾಗರದ ಆಳೆತ್ತರಕ್ಕೆ ಹತ್ತಿಳಿಯುವ ಹಡಗುಗಳು ಹೀಗೆ ಪ್ರಸ್ತುತ ತಂತ್ರಜ್ಞಾನದ ಲೋಕದಲ್ಲಿ ಇರದಿರುವ ವಸ್ತುಗಳ್ಯಾವುವು? ಇಷ್ಟೆಲ್ಲಾ ಆಧುನಿಕ ಪರಿಕರಗಳ ನಡುವೆ ಅಮೃತವಿಲ್ಲದೆಯೇ ಸಕಾಲಕ್ಕೂ ಅಮರನಾಗಿಬಿಡುವ ಮಾನವ ಇಂದು ಆಗಿರುವುದಾದರೂ ಏನು ಸ್ವಾಮಿ. ಕೇವಲ ನಾಲ್ಕೇ ನಾಲ್ಕು ದಿನದ ಮಳೆಗೆ ಆತ  ಗುಡಿ ಗೋಪುರಾದಿಗಳನ್ನು ತರಗಲೆಗಳಂತೆ  ಕಳೆದುಕೊಂಡು ಅಕ್ಷರಸಹ ಅನಾಥನಾಗುತ್ತಿರುವ ದೃಶ್ಯಾವಳಿಗಳನ್ನು ನೋಡಿದರೆ ದುಃಖ ಹಾಗು ಎದೆನಡುಕಗಳು ಒಟ್ಟೊಟ್ಟಿಗೆ ಮೂಡುತ್ತವೆ. ಪ್ರಸ್ತುತ ಜರುಗತ್ತಿರುವ ಪ್ರಕೃತಿ ವಿಕೋಪಗಳಿಗೆ ಕೇವಲ ಮಳೆಯೊಂದೇ ಕಾರಣವಲ್ಲದಾದರೂ ಇತರೆ ಮತ್ಯಾವುದೇ ಕಾರಣಗಳಾದರೂ ಅದಕ್ಕೆ ಮಾನವನೊಬ್ಬನೇ ನೇರ ಹೊಣೆಗಾರನಾಗುತ್ತಾನೆ ಎಂಬುದರಲ್ಲಿ ಸಂಶಯವೇ ಬೇಡ. ಸೃಷ್ಟಿಯ ಸಮಷ್ಟಿಯಲ್ಲಿ ನಾನೂ ಒಬ್ಬನೇ ಹೊರತು ನಾನೇ ಬೇರೆ, ಪ್ರಕೃತಿಯೇ ಬೇರೆ, ಇಡೀ ಭೂಮಿಯೇ ನನ್ನ ಅನುಭೋಕಕ್ಕೆ ಮಾತ್ರ ಎಂಬ ಭ್ರಮೆಯಲ್ಲಿ ಬದುಕುತ್ತಿರುವ ನಾವುಗಳಿಗೆ ನೇಸರ ಆಗೊಮ್ಮೆ ಹೀಗೊಮ್ಮೆ ಹೀಗೆ ಚಾಟಿ ಏಟನ್ನು ಬೀಸುತ್ತಿರುತ್ತದೆ. ಎಚ್ಚರಿಸುತ್ತಿರುತ್ತದೆ. ಏಟಿನಿಂದ  ಕಲಿಯುತ್ತೇವೆಯೋ ಅಥವಾ ಮತ್ತದೇ ನನ್ನದೇ ಎಲ್ಲವೆಂಬ ಅಮಲಿನಲ್ಲಿ ಕುಣಿಯುತ್ತೇವೆಯೋ ಅದು ನಮ್ಮ್ ನಮ್ಮ ನಾಗರೀಕತೆಯ ವಿವೇಕಕ್ಕೆ ಬಿಟ್ಟ ವಿಚಾರ.

ಮತ್ತಷ್ಟು ಓದು »

31
ಆಕ್ಟೋ

ದೇವರ ನಾಡಿನಲ್ಲಿ ನಾ ಕಂಡ ಮನುಷ್ಯರು

– ಅನಿಲ್ ಚಳಗೇರಿ

ದೇವರ ನಾಡಿನಲ್ಲಿ ನಾ ಕಂಡ ಮನುಷ್ಯರು – 1

ಕೈಯಲ್ಲಿ ಉದ್ದನೇಯ ಕೋಲು, ಹೆಗಲಿಗೊಂದು ಚೀಲ, ಕಾಲಲ್ಲಿ ಸ್ಪೋರ್ಟ್ಸ್ ಶೂಸ್ ಹಾಕಿಕೊಂಡ ಹಿರಿಯರೊಬ್ಬರು ಆಗಲೇ ನಮ್ಮ ಜೊತೆ 23 ಕಿಲೋ ಮೀಟರಿನಿಂದ ನಡೆದುಕೊಂಡು ಬಂದಿದ್ದರು (ಹತ್ತಾರು ಸಾವಿರ ಕಾರ್ಯಕರ್ತರ ಮಧ್ಯೆ ಅದೆಲ್ಲೋ ಹತ್ತಿಪತ್ತನೇ ಸಾಲಿನಲ್ಲಿ ಯಾರಿಗೂ ಕಾಣದೆ), ನಾವು ಅವರನ್ನು ಕುತೂಹಲದಿಂದ ನೋಡುತ್ತಿರುವದನ್ನು ಗಮನಿಸಿದ ಅವರು, ತಮ್ಮನ್ನು ತಾವು ಪರಿಚಯಿಸಿಕೊಂಡರು. ” I am captain Pillai, retired army officer, I am 71 years young and I have been walking from the day one and covered 150 kms today” ಅಂತ ಹೇಳಿದರು. ನಿಮಗೆ ಪ್ರೇರಣೆಯೇನು ? ನಿಮ್ಮ ಅಥವಾ ಮೇಲೆ ಏನಾದ್ರೂ ಅಟ್ಯಾಕ್ ಆಗಿತ್ತಾ?, ಅಂತ ಕೇಳಿದರೆ, “ನಾನು ದೇಶಕ್ಕೋಸ್ಕರ ದುಡಿದವನು, ನನಗೆ ಕಳ್ಳ ಕಮ್ಯುನಿಸ್ಟರ ನರಿ ಬುದ್ಧಿಯ ಬಗ್ಗೆ ತುಂಬಾ ಚೆನ್ನಾಗಿ ಗೊತ್ತು, ” ನನ್ನ ಕೊನೆಯ ಉಸಿರಿರುವವರೆಗೆ ಅವರನ್ನು ವಿರೋಧಿಸುವೆ” ಅಂದಾಗಲೇ ನೆನಪಾಗಿದ್ದು ಅಕ್ಷಯ್ ಕುಮಾರ್ ನಟಿಸಿದ ” ಹಾಲಿಡೇ” ಚಿತ್ರ. “a soldier never takes rest” ಶೀರ್ಷಿಕೆ…. ಮುಂದೆರಡು ದಿನ ಎಪ್ಪತ್ತರ ಹರೆಯದ ಆ ಮಾಜಿ ಸೈನಿಕನ ದಿಟ್ಟ ಹೆಜ್ಜೆಗಳೇ ನಮ್ಮೆಲ್ಲರ ನಡಿಗೆಗೆ ಪ್ರೇರಣೆಯಾಯಿತು … ಮತ್ತಷ್ಟು ಓದು »

27
ಆಕ್ಟೋ

ಜನರಕ್ಷಾಯಾತ್ರೆ : ಕಮ್ಯುನಿಸ್ಟ್ ರಕ್ತಚರಿತ್ರೆಯ ಅಂತ್ಯದ ಆರಂಭ

– ರಾಕೇಶ್ ಶೆಟ್ಟಿ

True Strength is in the Soul and Spirit. Not in Muscles ಅಂತೊಂದು ಮಾತಿದೆ. ಕೇರಳದ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಮತ್ತು ಸಂಘಟನೆಗೆ ಅನ್ವಯವಾಗುವ ಮಾತಿದು. ಕಮ್ಯುನಿಸ್ಟರ 48 ವರ್ಷಗಳ ನಿರಂತರ ರಕ್ತಪಾತ,300ಕ್ಕೂ ಹೆಚ್ಚು ಸ್ವಯಂ ಸೇವಕರ ಹತ್ಯೆಗಳು,ಮಾರಣಾಂತಿಕ ಹಲ್ಲೆಗಳ ನಂತರವೂ, ಪ್ರಸ್ತುತ ನಡೆಯುತ್ತಿರುವ ಜನರಕ್ಷಾಯಾತ್ರೆಯಲ್ಲಿ ಸಾವಿರಾರು ಜನರು ಸ್ವಯಂ ಸ್ಫೂರ್ತಿ, ಮತ್ತು ಧೈರ್ಯದಿಂದ ಪಾಲ್ಗೊಳ್ಳುವುದನ್ನು ನೋಡಿದರೆ, ಕೇರಳದ ಜನತೆ, ಅನ್ಯಾಯ,ಹಿಂಸಾಚಾರವನ್ನು ಪ್ರತಿಪಾದಿಸುವ ಸರ್ವಾಧಿಕಾರಿ ಕಮ್ಯುನಿಸ್ಟ್ ಪಕ್ಷದ ಆಡಳಿತ ಕೊನೆಯಾಗಲೇಬೇಕೆಂದು ಆಶಿಸುತ್ತಿರುವ ಸ್ಪಷ್ಟ ಸಂದೇಶದಂತಿದೆ.

ಅಕ್ಟೊಬರ್ 3ಕ್ಕೆ ಪಯ್ಯನೂರಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರಿಂದ ಆರಂಭವಾಗಿ, 15 ದಿನಗಳ ಕಾಲ ಕೇರಳಾದಾದ್ಯಂತ ಸಂಚರಿಸಿ, ಅಕ್ಟೊಬರ್ 17ಕ್ಕೆ ಅಮಿತ್ ಷಾ ಅವರಿಂದಲೇ ತಿರುವನಂತಪುರಂನಲ್ಲಿ ಯಾತ್ರೆ ಕೊನೆಗೊಂಡಿದೆ.ಯಾತ್ರೆ ಆರಂಭವಾದ ದಿನ ಕಮ್ಯುನಿಸ್ಟರ ರಾಜಕೀಯ ಹಿಂಸಾಚಾರದ ಮೂಲಸ್ಥಾನ (ಕೇರಳದ ಇಂದಿನ ಮುಖ್ಯಮಂತ್ರಿಯ ತವರು) ಕಣ್ಣೂರಿನ 84 ಬಲಿದಾನಿಗಳ ಕುಟುಂಬದವರು ಪಾಲ್ಗೊಳ್ಳುವ ಮೂಲಕ ಶುರುವಾದ ಯಾತ್ರೆ, ಕಣ್ಣೂರು ಅದರಲ್ಲೂ ಮುಖ್ಯವಾಗಿ ಪಿಣರಾಯಿಯಂತಹ ಕಮ್ಯುನಿಸ್ಟ್ ನಟೋರಿಯಸ್ ಪಾರ್ಟಿ ವಿಲೇಜುಗಳನ್ನು ಹಾದು ಹೋಗಿದೆ. ಮುಖ್ಯಮಂತ್ರಿಯ ಪಿಣರಾಯಿಯನ್ನೇಕೆ ನಟೋರಿಯಸ್ ಎನ್ನುತ್ತಿದ್ದೇನೆ ಎಂದು ತಿಳಿದುಕೊಳ್ಳಬೇಕೆಂದರೆ ಕಮ್ಯುನಿಸ್ಟ್ ಪಾರ್ಟಿ ವಿಲೇಜುಗಳ ಬಗ್ಗೆ ತಿಳಿದುಕೊಳ್ಳಬೇಕು.

ಮತ್ತಷ್ಟು ಓದು »

17
ಆಕ್ಟೋ

Jana Raksha Yatra : The milestone in the ideological landscape of Kerala

– Aparna Patwardhan

Across the world, Communism has been synonymous with a dictatorial regime, bloodshed and extermination of opponents. But today, Communism is almost dead. In Russia, there is no Communism left and in China, it has metamorphosed into something else altogether. Yet, Communism still exists in Kerala and the Communist party (CPM) has been democratically elected to form the government.

The party first formed a government in 1957 in Kerala and held sway for five decades. It gave the party time and influence to establish its cadre and territorially declare party gramams (villages), party booths and party streets. These Communist colonies cruelly eliminate every ideological and political opponent that dares enter their vicinity. In fact, the methods adopted to eliminate are extremely violent so as to deter opponents. It is ensured that the local administration is subservient to the party command and that the police take orders only from local Communist leaders. ಮತ್ತಷ್ಟು ಓದು »

13
ಆಕ್ಟೋ

ತಡೆವವರು ಬನ್ನಿರೋ ಹೊಡೆವವರು ಬನ್ನಿರೋ ಎನ್ನುತ್ತಾ ಸಾಗುತ್ತಿದೆ #ಜನರಕ್ಷಾಯಾತ್ರೆ

– ಸಂತೋಷ್ ತಮ್ಮಯ್ಯ

೨೯ ವರ್ಷದ ಹಿಂದೆ ಅವರು ಪಾಲಕ್ಕಾಡಿನಲ್ಲಿ ಸಂಘದ ಶಾರೀರಿಕ್ ಪ್ರಮುಖ್ ಆಗಿದ್ದ ವಿ.ಸುಧಾಕರನ್‌ರನ್ನು ಬಸ್ಸಿನಿಂದೆಳೆದು ಬರ್ಬರವಾಗಿ ಕೊಲೆಮಾಡಿದ್ದರು. ಸುಧಾಕರನ್ ಕೋಯಿಕ್ಕೋಡಿನ ಬಿಜೆಪಿಯ ಕಾರ್ಯಕರ್ತನೆಂಬುದೊಂದೇ ಕಾರಣ. ೨೧ ವರ್ಷದ ಹಿಂದೆ ತ್ರಿಶೂರಿನಲ್ಲಿ ಟಿ.ಎಸ್ ಸಂತೋಷ್ ಎಂಬ ಸಣ್ಣ ವ್ಯಾಪಾರಿಯನ್ನೂ ಕೊಂದರು. ಅದಕ್ಕೂ ಕಾರಣ ಬಿಜೆಪಿ ಕಾರ್ಯಕರ್ತ ಎಂಬುದೊಂದೇ. ೩೯ ವರ್ಷದ ಹಿಂದೆ ಕಣ್ಣೂರು ಜಿಲ್ಲೆಯ ಪನ್ನನೂರ್ ಚಂದ್ರನ್ ಎಂಬವರನ್ನು ಸಂಘ ಸ್ಥಾನದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಅದಕ್ಕೆ ಕಾರಣ ಕಮ್ಯುನಿಸ್ಟ್ ಗ್ರಾಮದಲ್ಲಿ ಶಾಖೆ ನಡೆಸಿದ ಎಂಬ ಒಂದೇ ಕಾರಣ. ೩೦ ವರ್ಷದ ಹಿಂದೆ ಕೋಯಿಕ್ಕೋಡಿನ ಬಿಎಂಎಸ್ ಕಾರ್ಯಕರ್ತ ಸಿ.ಕೆ ರಾಮಚಂದ್ರನ್ ಅವರನ್ನು ಮುಖದ ಗುರುತು ಕೂಡಾ ಸಿಗದಂತೆ ಕಮ್ಯುನಿಸ್ಟರು ಕೊಂದಿದ್ದರು. ಕಾರಣ, ಕಾರ್ಮಿಕ ಯೂನಿಯನ್ನುಗಳು ಕೇವಲ ಕಮ್ಯುನಿಸ್ಟರ ಸ್ವತ್ತು ಎಂಬ ಮತಾಂಧತೆ. ೧೫ ವರ್ಷದ ಹಿಂದೆ ವೃತ್ತಿಯಲ್ಲಿ ಡ್ರೈವರ್ ಅಗಿದ್ದ ಆರೆಸ್ಸೆಸ್ ಕಾರ್ಯಕರ್ತ ಉತ್ತಮನ್‌ರನ್ನೂ ಕಮ್ಯುನಿಸ್ಟರು ಹೀಗೇ ಕೊಂದಿದ್ದರು. ೧೨ ವರ್ಷಗಳ ಹಿಂದೆ ಕಣ್ಣೂರಿನ ಆರೆಸ್ಸೆಸ್ ಜಿಲ್ಲಾ ಬೌದ್ಧಿಕ್ ಪ್ರಮುಖ್ ಅಶ್ವಿನ್ ಕುಮಾರ್‌ರನ್ನೂ ಕಮ್ಯುನಿಸ್ಟರು ಧಾರುಣವಾಗಿ ಕೊಚ್ಚಿಹಾಕಿದ್ದರು.

೧೯೬೯ರಿಂದ ಕಮ್ಯುನಿಸ್ಟರು ಹೀಗೆ ಕೊಂದ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಸಂಖ್ಯೆ ೨೮೪. ಈಗಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಕಾರಕ್ಕೆ ಬಂದ ನಂತರ ನಡೆದ ಕೊಲೆಗಳ ಸಂಖ್ಯೆಯೇ ೧೪! ಎಲ್ಲಾ ಕೊಲೆಗಳಿಗೆ ಕಾರಣ ಕೇರಳದಲ್ಲಿ ಕಮ್ಯುನಿಸಮ್ಮಿಗೆ ಹೊರತಾದ ಯಾವುದೂ ಅಸ್ತಿತ್ವದಲ್ಲಿರಬಾರದು ಎಂಬ ಅಸಹನೆ, ರಾಷ್ಟ್ರೀಯತೆಯೆಂಬುದು ಅಳಿಯಬೇಕು, ಸಂಘರ್ಷ ಉಂಟಾಗಬೇಕು, ಮತೀಯ ದಾಹ. ಒಟ್ಟಾರೆ ಬಲಪಂಥೀಯರು ಹೆದರಿ ಮೂಲೆಸೇರಬೇಕು ಎಂಬುದು. ವಿಶೇಷವೆಂದರೆ ಕೇರಳದಲ್ಲಿ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಕೊಲೆಗಳಾದಷ್ಟೂ ಅವೆರಡೂ ಬೆಳೆಯುತ್ತಲೇ ಇವೆ. ಹರಿದ ರಕ್ತವನ್ನೇ ಕಾರ್ಯಕರ್ತರು ಗಂಧದಂತೆ ಹಣೆಗೆ ಹಚ್ಚಿಕೊಂಡಿದ್ದಾರೆ. ವ್ಯಕ್ತಿಗಳ ಕೊಲೆಯಿಂದ ವಿಚಾರವಂತಿಕೆ ಸಾಯುವುದಿಲ್ಲ ಎಂಬುದಕ್ಕೆ ಕೇರಳ ಸಾಕ್ಷಿಯೆಂಬಂತೆ ಕಳೆದ ಹನ್ನೊಂದು ದಿನಗಳಿಂದ ನಡೆಯುತ್ತಿರುವ ಜನರಕ್ಷಾ ಯಾತ್ರೆಯಲ್ಲಿ ರಾಮಚಂದ್ರನ್ ಮಗಳು ದೇವಾಂಗನಾ ವಂದೇ ಮಾತರಂ ಹಾಡುತ್ತಾಳೆ, ತಲಶೇರಿ ಸಂತೋಷ್ ಮಗಳು ವಿಸ್ಮಯಾ ಕಣ್ಣೀರು ಹಾಕುತ್ತಾ ಪಾದಯಾತ್ರೆ ಮಾಡುತ್ತಿದ್ದಾಳೆ, ರಾಧಾಕೃಷ್ಣನ್ ಪತ್ನಿ ವಿಮಲಾ ಮೂಕವಾಗಿ ಪಾದಾಯಾತ್ರೆ ಸಾಗುತ್ತಿದ್ದಾರೆ, ಪಾನೂರು ಚಂದ್ರನ್ ಪತ್ನಿ ಅರುಂಧತಿ ನನ್ನಂಥ ದುಖಃ ಮತ್ತಾರಿಗೂ ಬರಬಾರದೆಂದು ಬಂದಿದ್ದೇನೆ ಎಂದು ಗುಡುಗುತ್ತಾರೆ, ದಿವಂಗತ ಉತ್ತಮನ್ ಅಪ್ಪನೂ, ಮಕ್ಕಳೂ ಯಾತ್ರೆಯಲ್ಲಿ ಪಾಲ್ಗೊಂಡು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಅಶ್ವಿನ್ ಕುಮಾರರ ವೃದ್ದ ತಾಯಿಯ ಮುಖದಲ್ಲಿ ಪುತ್ರಶೋಕಕ್ಕಿಂತಲೂ ಕಮ್ಯುನಿಸ್ಟರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತದೆ. ಅಂದರೆ ಯಾವುದನ್ನು ಸಮೂಲ ನಿರ್ನಾಮ ಮಾಡಬೇಂದು ಕಮ್ಯುನಿಸ್ಟರು ಮತ್ತು ಜಿಹಾದಿಗಳು ರಕ್ತ ಚೆಲ್ಲಿದ್ದರೋ ಆ ಉದ್ದೇಶವಿನ್ನೂ ಕೇರಳದಲ್ಲಿ ಈಡೇರಿಲ್ಲ. ಈಡೇರುವುದೂ ಇಲ್ಲ ಎಂಬುದು ಯಾತ್ರೆಯ ಪ್ರತೀಹೆಜ್ಜೆಯೂ ಸಾರುತ್ತಿದೆ. ಜನರಕ್ಷಾ ಯಾತ್ರೆ ವಿಶೇಷವೆನಿಸುವುದು ಇಷ್ಟಕ್ಕೇ ಮಾತ್ರವಲ್ಲ. ಅದು ರಾಜಕೀಯ ನಡೆಯೂ ಅಲ್ಲ, ಕೇವಲ ಆಕ್ರೋಶದ ಉದ್ದೇಶವೂ ಅಲ್ಲ. ನಿಜಕ್ಕೂ ಅದೊಂದು ವೈಚಾರಿಕ ಸಂಘರ್ಷ.

ಮತ್ತಷ್ಟು ಓದು »

12
ಆಕ್ಟೋ

ಜನರಕ್ಷಾ ಯಾತ್ರೆ : ಕಮ್ಯುನಿಸ್ಟರ ಭದ್ರಕೋಟೆಯಲ್ಲಿ ಕಂಪನ

ಅಂಜಲಿ ಜಾರ್ಜ್ ಮತ್ತು ಜಯಶಂಕರ್

ಮೂಲ ಲೇಖನ : https://swarajyamag.com/politics/kannurs-jana-raksha-yatra-turning-the-tide-on-the-communists

ಪಿಣರಾಯಿ, ಕೇರಳದ ಮಾರ್ಕ್ಸಿಸ್ಟರಿಗೆ ಬಹಳ ಪ್ರಮುಖವಾಗಿರುವ ಒಂದು ಸಣ್ಣ ಗ್ರಾಮ. ೧೯೩೯ರಲ್ಲಿ ಪಿಣರಾಯಿಗೆ ಸಮೀಪವಿರುವ ಪರಪ್ಪುರಂ ಎಂಬ ಸ್ಥಳದಲ್ಲಿ ಕಮ್ಯುನಿಸ್ಟರು ತಮ್ಮ ಕಾರ್ಯಚಟುವಟಿಕೆಯನ್ನು ಮೊದಲ ಬಾರಿಗೆ ಆರಂಭಿಸಿದರು. ಅಂದಿನಿಂದ ಇಂದಿನವರೆಗೆ ಪಿಣರಾಯಿ ಕೇರಳದ ಕಮ್ಯುನಿಸ್ಟರ ಭದ್ರಕೋಟೆ ಎಂದೇ ಕರೆಯಲ್ಪಡುತ್ತದೆ. ಒಂದು ಕಾಲದಲ್ಲಿ ಕೇವಲ ಕೆಂಪುದ್ವಜಗಳಷ್ಟೇ ಹಾರಾಡುತ್ತಿದ್ದ ಪ್ರದೇಶ ಇದಾಗಿತ್ತು. ಕಮ್ಯುನಿಸ್ಟ್ ಪಾರ್ಟಿಯ ಹತೋಟಿಯಲಿದ್ದ ಈ ಗ್ರಾಮದಲ್ಲಿ ವಿರೋಧಕ್ಕೆ ಆಸ್ಪದವೇ ಇರಲಿಲ್ಲ. ವಿರೋಧಿ ಧ್ವನಿಗಳನ್ನು ಯಾವುದೇ ಕರುಣೆಯಿಲ್ಲದೆ ಮೆಟ್ಟಿಹಾಕಲಾಗುತ್ತಿತ್ತು. ಬಿಜೆಪಿ ಹಾಗು ಸಂಘದ ಕಾರ್ಯಕರ್ತರಾದ ಹುತಾತ್ಮ ಉತ್ತಮನ್ ಹಾಗು ಅವರ ಮಗ ಹುತಾತ್ಮ ರೆಮಿತ್ ರನ್ನು ಇದೇ ಕಮ್ಯುನಿಸ್ಟರು ಕೊಂದದ್ದು ೧೪ ದಿನಗಳ ಜನರಕ್ಷಾಯಾತ್ರೆಗೆ ಮುನ್ನುಡಿ ಬರೆಯಿತು. ಕಮ್ಯುನಿಸ್ಟರು ಮಾಡಿರುವ ರಾಜಕೀಯ ಹತ್ಯೆಗಳನ್ನು ಎತ್ತಿ ತೋರಿಸುತ್ತಿರುವ ಈ ಯಾತ್ರೆ ಕೆಲವು ದಿನದ ಹಿಂದೆ ಪಿಣರಾಯಿ ಗ್ರಾಮವನ್ನು ಪ್ರವೇಶಿಸಿ ಮುಂದುವರೆಯಿತು. ಕೇರಳದ ರಾಜಕೀಯ ಚರಿತ್ರೆಯಲ್ಲಿ ಇದೊಂದು ಮಹತ್ತರ ತಿರುವು

೧೯೭೭ರ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದ ಸಂಧರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕತ್ವವನ್ನು ಕಂಡ ಬಹಳಷ್ಟು ಮಾರ್ಕ್ಸಿಸ್ಟ್ ನಾಯಕರು ಮತ್ತು ಕಾರ್ಯಕರ್ತರು ಸಂಘವನ್ನು ಸೇರಿಕೊಂಡರು. ಇದಕ್ಕೆ ಬಹುಮುಖ್ಯವಾಗಿ ಎರಡು ಕಾರಣಗಳಿದ್ದವು. ಮೊದಲನೆಯದ್ದು, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಭಾರತೀಯ ಕಮ್ಯುನಿಸ್ಟ್ ಪಾರ್ಟಿ (ಸಿಪಿಐಎಂ) ಕುಯುಕ್ತಿಯಿಂದ ಕಾಂಗ್ರೆಸ್ಸಿನ ಜೊತೆ ಸೇರಿಕೊಂಡು ಸರಕಾರ ರಚಿಸಿತ್ತು ಹಾಗು ಎರಡನೆಯದಾಗಿ, ಸಂಘ ಈ ಹೋರಾಟದ ಮುಂಚೂಣಿಯಲ್ಲಿದ್ದು,ಇಂದಿರಾ ಗಾಂಧಿಯನ್ನು ಎದುರಿಸುವ ಸಾಹಸ ಮಾಡಿತ್ತು, ಇದರ ಫಲ ಸ್ವರೂಪವಾಗಿ ಸಾವಿರಾರು ಸ್ವಯಂಸೇವಕರು ಬಂಧನಕ್ಕೆ ಒಳಗಾಗಿದ್ದರು.. ತಮ್ಮ ನಾಯಕರ ಹೊಣೆಗೇಡಿತನ ಹಾಗು ಕಪಟತನದಿಂದ ಬೇಸತ್ತ ಜನರನ್ನು ಸ್ವಯಂಸೇವಕ ಸಂಘದ ಸನ್ನದ್ಧತೆ ಹಾಗೂ ಜವಾಬ್ದಾರಿಯುತ ನಡವಳಿಕೆ ಆಕರ್ಷಿಸಿತು.

ಮತ್ತಷ್ಟು ಓದು »

22
ಫೆಬ್ರ

ದೇವರ ನಾಡಿನಲ್ಲಿ ಮರಣ ಮೃದಂಗ

– ಮಲ್ಲಿ ಶರ್ಮ

dna_illusಬೋಟ್ ಹೌಸ್, ಸರೋವರಗಳು, ಅರಬೀ ಸಮುದ್ರ, ತೆಂಗು ಅಡಿಕೆ ಕೃಷಿ, ಆಹಾ ಈ “GOD’S OWN COUNTRY” ಇದೆಯಲ್ಲಾ, ಅಲ್ಲಿಯ ಟೂರಿಸಂ ಕುರಿತ HD ವಿಡಿಯೋ ಯೂಟ್ಯೂಬಲ್ಲಿ ನೋಡೋವಾಗ ಆಹಾ!!! ಇದಪ್ಪಾ ಸ್ವರ್ಗ ಅಂದ್ರೆ, ಅಂತ ಉದ್ಘಾರ ತೆಗೆದುಬಿಡ್ತಾರೆ ಪ್ರತಿಯೊಬ್ಬರೂ. ಆದರೆ ದೇವರ ಸ್ವಂತ ನಾಡಾದ ಕೇರಳದಲ್ಲಿ ಭಯಾನಕ ರಾಕ್ಷಸರು ಬೀಡು ಬಿಟ್ಟಿರೋ ಸಂಗತಿ ನಿಮಗೆಷ್ಟು ಗೊತ್ತು? ಮತ್ತಷ್ಟು ಓದು »

7
ನವೆಂ

ಭವಿಷ್ಯತ್ತಿನಲ್ಲಿ ಯಾವ ಹಬ್ಬ ಕೈಬಿಡಲಿದೆಯೋ…?

– ಸಂತೋಷಕುಮಾರ ಮೆಹೆಂದಳೆ. ಕೈಗಾ 

dsc8476_tipu_sultan_m
( ನಾನು ನನ್ನ ಸಮಾಜ ಮತ್ತು ಧರ್ಮಾಧಾರಿತ ವೃತ್ತದಲ್ಲಿ ನನ್ನ ಹಿರಿಮೆಯನ್ನು ಸ್ಥಾಪಿಸಿಕೊಳ್ಳುವುದು ಹೇಗೆ..? ಇನ್ನೊಂದು ಧರ್ಮವನ್ನು ಮುಗಿಸಿ ಹಾಕುವುದರ ಮೂಲಕ. ಇದು ಸುಲಭದ ದಾರಿ ಮತ್ತು ಸರಿಯಾಗಿ ಇನ್ನೂರು ವರ್ಷಗಳ ಹಿಂದೆ ಟಿಪ್ಪು ಮಾಡಿದ್ದೂ ಅದೇ. ಅನಾಮತ್ತಾಗಿ ಲಕ್ಷಗಟ್ಟಲೇ ಹಿಂದೂಗಳನ್ನು ವರ್ಷವಧಿಯೊಳಗೆ ಮುಗಿಸಿ ಹಾಕಿ, ಕೊಡವರ ಒಂದು ತಲೆಮಾರನ್ನೇ ನಿರ್ನಾಮ ಮಾಡಿ, ಅದನ್ನು ಸಾಧನೆ ಎಂಬಂತೆ ಪತ್ರಗಳ ಮೂಲಕ ಪ್ರಚುರಪಡಿಸಿದ ಕೂಡಾ. ಆದರೆ ಇವತ್ತಿಗೂ ಅವನ ಭಜನೆ ಮಾಡುತ್ತಿರುವ ಭಟ್ಟಂಗಿಗಳಿಗೆ ತಾವೂ ಮುಂದೊಮ್ಮೆ ಇಂತಹದ್ದೇ ಪರಿಸ್ಥಿತಿಗೆ ಈಡಾಗಲಿದ್ದೇವೆ ಎನ್ನುವ ಅರಿವಾದರೂ ಬೇಡವಾ…? )   ಮತ್ತಷ್ಟು ಓದು »