ಸೃಷ್ಟಿಯ ಅಗಾಧತೆಗೆ ಸವಾಲೆಸೆಯುವ ಮುನ್ನ…!
– ಸುಜಿತ್ ಕುಮಾರ್
ಇಡೀ ಭೂಖಂಡವೇ ತನ್ನದೆಂದುಕೊಂಡು ಒಂತಿಷ್ಟು ತಂತ್ರಜ್ಞಾನದ ಉನ್ನತಿಯ ಶಿಖರದ ಹಿನ್ನಲೆಯಲ್ಲಿ ಬೀಗುವ ಮಾನವ ನಿಸರ್ಗದ ಅಗಾಧತೆಯ ಮುಂದೆ ತಾನು ಅದೆಷ್ಟು ಕುಬ್ಜ ಕನಿಷ್ಠ ಎಂಬುದು ಇತ್ತೀಚಿಗೆ ಜರುಗುತ್ತಿರುವ ಪ್ರವಾಹ ಪ್ರಳಯಗಳ ಹಿನ್ನಲೆಯಲ್ಲಿ ಗಮನಿಸಿದರೆ ಬಹಳ ಸವಿವರವಾಗಿ ತಿಳಿಯುತ್ತದೆ. 4ಜಿ ಸ್ಪೀಡಿನ ಇಂಟೆರ್ನೆಟ್ಟು, ಜಗತ್ತನೇ ತನ್ನ ಮುಷ್ಠಿಯೊಳಗೆ ಭದ್ರವಾಗಿಸಿರುವ ಸ್ಮಾರ್ಟ್ ಫೋನುಗಳು, ಜನರೇಟರ್ ಗಳು, ಯುಪಿಎಸ್ಗಳು, ದೇಶದ ಮೂಲೆ ಮೂಲೆಯನ್ನು ಜೋಡಿಸುವ ಹೈ ಸ್ಪೀಡ್ ಟ್ರೈನುಗಳು, ಸಾಗರದ ಆಳೆತ್ತರಕ್ಕೆ ಹತ್ತಿಳಿಯುವ ಹಡಗುಗಳು ಹೀಗೆ ಪ್ರಸ್ತುತ ತಂತ್ರಜ್ಞಾನದ ಲೋಕದಲ್ಲಿ ಇರದಿರುವ ವಸ್ತುಗಳ್ಯಾವುವು? ಇಷ್ಟೆಲ್ಲಾ ಆಧುನಿಕ ಪರಿಕರಗಳ ನಡುವೆ ಅಮೃತವಿಲ್ಲದೆಯೇ ಸಕಾಲಕ್ಕೂ ಅಮರನಾಗಿಬಿಡುವ ಮಾನವ ಇಂದು ಆಗಿರುವುದಾದರೂ ಏನು ಸ್ವಾಮಿ. ಕೇವಲ ನಾಲ್ಕೇ ನಾಲ್ಕು ದಿನದ ಮಳೆಗೆ ಆತ ಗುಡಿ ಗೋಪುರಾದಿಗಳನ್ನು ತರಗಲೆಗಳಂತೆ ಕಳೆದುಕೊಂಡು ಅಕ್ಷರಸಹ ಅನಾಥನಾಗುತ್ತಿರುವ ದೃಶ್ಯಾವಳಿಗಳನ್ನು ನೋಡಿದರೆ ದುಃಖ ಹಾಗು ಎದೆನಡುಕಗಳು ಒಟ್ಟೊಟ್ಟಿಗೆ ಮೂಡುತ್ತವೆ. ಪ್ರಸ್ತುತ ಜರುಗತ್ತಿರುವ ಪ್ರಕೃತಿ ವಿಕೋಪಗಳಿಗೆ ಕೇವಲ ಮಳೆಯೊಂದೇ ಕಾರಣವಲ್ಲದಾದರೂ ಇತರೆ ಮತ್ಯಾವುದೇ ಕಾರಣಗಳಾದರೂ ಅದಕ್ಕೆ ಮಾನವನೊಬ್ಬನೇ ನೇರ ಹೊಣೆಗಾರನಾಗುತ್ತಾನೆ ಎಂಬುದರಲ್ಲಿ ಸಂಶಯವೇ ಬೇಡ. ಸೃಷ್ಟಿಯ ಸಮಷ್ಟಿಯಲ್ಲಿ ನಾನೂ ಒಬ್ಬನೇ ಹೊರತು ನಾನೇ ಬೇರೆ, ಪ್ರಕೃತಿಯೇ ಬೇರೆ, ಇಡೀ ಭೂಮಿಯೇ ನನ್ನ ಅನುಭೋಕಕ್ಕೆ ಮಾತ್ರ ಎಂಬ ಭ್ರಮೆಯಲ್ಲಿ ಬದುಕುತ್ತಿರುವ ನಾವುಗಳಿಗೆ ನೇಸರ ಆಗೊಮ್ಮೆ ಹೀಗೊಮ್ಮೆ ಹೀಗೆ ಚಾಟಿ ಏಟನ್ನು ಬೀಸುತ್ತಿರುತ್ತದೆ. ಎಚ್ಚರಿಸುತ್ತಿರುತ್ತದೆ. ಏಟಿನಿಂದ ಕಲಿಯುತ್ತೇವೆಯೋ ಅಥವಾ ಮತ್ತದೇ ನನ್ನದೇ ಎಲ್ಲವೆಂಬ ಅಮಲಿನಲ್ಲಿ ಕುಣಿಯುತ್ತೇವೆಯೋ ಅದು ನಮ್ಮ್ ನಮ್ಮ ನಾಗರೀಕತೆಯ ವಿವೇಕಕ್ಕೆ ಬಿಟ್ಟ ವಿಚಾರ.
ಅರಮನೆ ಕಡತಗಳಲ್ಲೇ ಇದೆ ಟಿಪ್ಪು ದೌರ್ಜನ್ಯಕ್ಕೆ ಸಾಕ್ಷಿ
– ಸಂತೋಷ್ ತಮ್ಮಯ್ಯ
ಸರಕಾರ ಹೊರಡಿಸುವ ಕೆಲವು ಗಜೆಟಿಯರುಗಳ ಪುಟ ತೆರೆದರೆ ಇವೆಷ್ಟು ಕೆಜಿ ತೂಗಬಹುದು ಎಂಬ ಭಾವನೆ ಬೇಡಬೇಡವೆಂದರೂ ಬಂದುಬಿಡುತ್ತದೆ. ಏಕೆಂದರೆ ಪ್ರಯೋಜನಕ್ಕಿಲ್ಲದ ಅವೇ ಹಳಹಳಿಕೆಗಳು, ಅಧಿಕೃತತೆಯಿಲ್ಲದ ಮಾಹಿತಿಗಳು, ವಿಕೃತಿಗೊಂಡ ಇತಿಹಾಸಗಳು ಆರಂಭವಾಗುವುದೇ ಈ ಗಜೆಟಿಯರುಗಳಿಂದ. ಸ್ವಾತಂತ್ರ್ಯಾ ನಂತರ ಪ್ರಕಟಗೊಂಡ ಯಾವುದೇ ಜಿಲ್ಲೆಯ ಗಜೆಟಿಯರುಗಳನ್ನು ಗಮನಿಸಿದರೂ ಸೆಕ್ಯುಲರ್ ವಾಸನೆ ಅವುಗಳ ಪುಟಗಳ ಒಳಗಳೊಳಗಿಂದ ರಪ್ಪನೆ ಬಡಿಯುತ್ತದೆ. ಕೊಡಗು ಗಜೆಟಿಯರುಗಳಲ್ಲಿ ಹಾಲೇರಿ ರಾಜರ ಉಲ್ಲೇಖಗಳಿರುತ್ತವೆ. ಆದರೆ ಟಿಪ್ಪುದಾಳಿಯ ಉಲ್ಲೇಖಗಳಿರುವುದಿಲ್ಲ. ಮೈಸೂರು ಗಜೆಟಿಯರುಗಳಲ್ಲಿ ಟಿಪ್ಪು ಗುಣಗಾನವಿರುತ್ತವೆಯೇ ಹೊರತು ಲಕ್ಷ್ಮಮ್ಮಣ್ಣಿಯ ಪ್ರಸ್ಥಾಪವಿರುವುದಿಲ್ಲ. ಮಂಡ್ಯ ಜಿಲ್ಲಾ ಗಜೆಟಿಯರುಗಳು ಇನ್ನೂ ಭಯಾನಕ. ಇತಿಹಾಸದ ಘಟನೆಗಳನ್ನು ವಿವರಿಸುತ್ತಾ ಅಲ್ಲಿ ಇಸವಿಗಳೇ ಮಾಯವಾಗುವ ಚಮತ್ಕಾರಗಳಿವೆ. ಅಂದರೆ ೧೭೫೦ರಿಂದ ೧೮೦೦ರವರೆಗಿನ ಯಾವ ಘಟನೆಗಳೂ ಮಂಡ್ಯ ಜಿಲ್ಲಾ ಗಜೆಟಿಯರುಗಳಲ್ಲಿಲ್ಲ. ಅಂದರೆ ೪ನೇ ಮೈಸೂರು ಯುದ್ಧದ ಪ್ರಮುಖ ಘಟನಾವಳಿಯಾಗಿ ದಾಖಲಾಗುವ ಮಳವಳ್ಳಿ ಯುದ್ಧದ ಬಗ್ಗೆ ಒಂದೇ ಒಂದು ಸಾಲೂ ಇಲ್ಲ. ಒಕ್ಕಲಿಗ ಪರಾಕ್ರಮದ ದಾಖಲೆಯನ್ನು ಅಳಿಸಿಹಾಕಲು ಗಜೆಟ್ ಪಂಡಿತರು ಒಂದು ಕಾಲಘಟ್ಟವನ್ನೇ ಎಗರಿಸಿಬಿಟ್ಟಿದ್ದಾರೆ! ಹಾಗಾಗಿ ಮಳವಳ್ಳಿ ಯುದ್ಧದ ಕುರುಹುಗಳಿದ್ದರೂ, ಇತಿಹಾಸ ಮೈಚೆಲ್ಲಿ ಬಿದ್ದಿದ್ದರೂ ಉರಿಗೌಡ ಮತ್ತು ದೊಡ್ಡನಂಜೇಗೌಡರ ಹೋರಾಟಗಳ ಉಲ್ಲೇಖಗಳು ಸಿಗುತ್ತಿಲ್ಲ. ಮಳವಳ್ಳಿ ಯುದ್ಧವನ್ನೇ ಹೇಳದ ಇಂಥ ಗಜೆಟಿಯರುಗಳನ್ನಿಟ್ಟುಕೊಂಡು ಮಂಡ್ಯ ಜಿಲ್ಲೆಗೇನು ಪ್ರಯೋಜನ? ಹಾಗಾಗಿ ಹಿಂದೆ ಮುಂದೆ ನೋಡದೆ ಸ್ವಾತಂತ್ರ್ಯಾ ನಂತರದ ಮಂಡ್ಯ ಜಿಲ್ಲಾ ಗಜೆಟಿಯರುಗಳನ್ನು ತೂಕಕ್ಕೆ ಹಾಕಬಹುದು. ಅಷ್ಟೇ ಅಲ್ಲ ಟಿಪ್ಪುಸುಲ್ತಾನ್ ಸಮರ್ಥಕರಿಗೆ ದೊಡ್ಡ ಬಲವನ್ನು ಈ ಗಜೆಟಿಯರುಗಳು ಒದಗಿಸುತ್ತಿವೆ. ಟಿಪ್ಪು ಕ್ರೂರತೆಯನ್ನು ಹುಡುಕುವವರಿಗೆ ಇವು ತೊಡಕಾಗುತ್ತಿವೆ. ಮತ್ತಷ್ಟು ಓದು
ರಸಪ್ರಶ್ನೆಯಲ್ಲಿ ರೈಲು ಹಳಿಗಳಿಲ್ಲದ ಜಿಲ್ಲೆ ಯಾವುದು ಎಂದು ಕೇಳುತಿದ್ದಾಗಲೇ ಧೂರ್ತರಲ್ಲಿ ತಂತ್ರಗಾರಿಕೆಯೊಂದು ಹುಟ್ಟುತ್ತಿತ್ತು..
– ಶಿಲ್ಪಾ ನೂರೆರ
ಅಭಿವೃದ್ಧಿಗೆ ಮಾನದಂಡಗಳೇನು? ಅಷ್ಟಕ್ಕೂ ಅಭಿವೃದ್ಧಿ ಎಂದರೇನು? ಇರುವುದನ್ನೆಲ್ಲಾ ಗುಡಿಸಿ ಎಸೆದು ಮತ್ತೊಂದನ್ನು ಕಟ್ಟುವುದು ಅಭಿವೃದ್ಧಿಯೇ? ಸಹಜವಾದುದನ್ನು ನಾಶಮಾಡಿ ಕೃತಕವಾದದ್ದನ್ನು ಸೃಷ್ಟಿಸುವುದು ಅಭಿವೃದ್ಧಿ ಎನಿಸಿಕೊಳ್ಳುತ್ತದೆಯೇ? ಹಾಗಾದರೆ ಸಹಜವಾದುದನ್ನು, ಈ ಮೊದಲೇ ನೆಲೆಯಾದವುಗಳಿಗೆ ನಾನಾ ಕಿರೀಟಗಳನ್ನು ಕೊಟ್ಟು ಹೊಗಳಿ ಹೊನ್ನಶೂಲಕ್ಕೇಕೆ ಏರಿಸುವಿರಿ?- ಇಂಥ ಅನೇಕ ಪ್ರಶ್ನೆಗಳು ಹುಟ್ಟುವುದು ವ್ಯಾಖ್ಯಾನಕಾರರಿಗೆ, ವಿಶ್ಲೇಷಕರಿಗೆ, ಸಮಾಜಶಾಸ್ತ್ರಜ್ಞರಿಗೆ ಮತ್ತು ಅಭಿವೃದ್ಧಿ ನಿರೀಕ್ಷಿಸುವವರಿಗೆ ಹೊರತು ಅಭಿವೃದ್ಧಿಯನ್ನು ಕೈಗೊಳ್ಳುವವರಿಗಲ್ಲ! ಅಭಿವೃದ್ಧಿಗೆ ಸುಸ್ಥಿರ, ಸಮಗ್ರ ಇತ್ಯಾದಿ ವಿಶೇಷಣಗಳನ್ನು ಕೊಟ್ಟುಕೊಂಡವರೂ ಕೂಡ ಅವರೇ. ಹಾಗಾಗಿ ಅಭಿವೃದ್ಧಿ ಎಂಬುದು ತನ್ನ ಗುರಿಯನ್ನು ಇನ್ನೂ ಮುಟ್ಟದೆ ಅಡ್ಡಾದಿಡ್ಡಿ ಓಡುತ್ತಲೇ ಇದೆ. ಇಂದಿಗೂ ಅಭಿವೃದ್ಧಿ ರಾಜಕೀಯದ ಪ್ರಮುಖ ದಾಳವಾಗಿ ಬಳಕೆಯಾಗುತ್ತಲೇ ಇದೆ. ಹೊರನೋಟಕ್ಕೆ ಆಕರ್ಷಕವಾಗಿ, ಜನರ ಆಶಾಕಿರಣವಾಗಿ ನರ್ತನ ಮಾಡುತ್ತ ಬರುವ ಅಭಿವೃದ್ಧಿ ಯೋಜನೆಗಳು ಇನ್ನೂ ಏಕೆ ತನ್ನ ಉದ್ದೇಶವನ್ನು ಪೂರ್ಣಗೊಳಿಸಿಲ್ಲ ಎನ್ನುವುದರ ಹಿಂದೆ ಇಂಥಾ ವ್ಯಾಖ್ಯಾನಗಳ ಕ್ಲೀಷೆಗಳಿವೆ. ಮತ್ತಷ್ಟು ಓದು
ಟಿಪ್ಪು ಜಯಂತಿ ಬೇಕಿರುವುದು ಯಾರಿಗೆ ?
– ರೋಹಿತ್ ಚಕ್ರತೀರ್ಥ
ಟಿಪ್ಪು ಜಯಂತಿಯಿಂದ ಯಾರಿಗೆ ಉಪಕಾರ ಎಂದು ಕೆಲವರು ಕೇಳುತ್ತಿದ್ದಾರೆ. ಕಳೆದ ವರ್ಷ ಸರಕಾರ ಪ್ರತಿ ಜಿಲ್ಲಾಡಳಿತಕ್ಕೆ 50,000 ರುಪಾಯಿ, ಪ್ರತಿ ತಾಲೂಕು ಕಚೇರಿಗೆ 25,000 ರುಪಾಯಿ ಕೊಟ್ಟು “ಟಿಪ್ಪು ಸುಲ್ತಾನ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸತಕ್ಕದ್ದು” ಎಂಬ ಖಡಕ್ ಸುತ್ತೋಲೆ ಕಳಿಸಿತ್ತು. ನಮ್ಮೂರ ಕಡೆ ಒಂದು ತಾಲೂಕು ಪಂಚಾಯಿತಿಗೂ 25,000 ರುಪಾಯಿಗಳು ಸಂದಾಯವಾಗಿದ್ದವು. ಆ ಕಚೇರಿಯಲ್ಲಿ ನೀರಿನ ವ್ಯವಸ್ಥೆ ಇಲ್ಲ; ಇದ್ದೊಂದು ಕೊಳ ಒಡೆದುಹೋಗಿ ಆರು ತಿಂಗಳ ಮೇಲಾಯಿತು; ಗೋಡೆಗೆ ಸುಣ್ಣಬಣ್ಣ ಹೊಡೆಸದೆ ನಾಲ್ಕು ವರ್ಷಗಳಾಗುತ್ತ ಬಂತು; ಊರಿನಲ್ಲೊಂದು ಸಣ್ಣ ಸಂಕ ಕಟ್ಟಿಸಬೇಕೆಂದು ಬೇಡಿಕೆ ಇಟ್ಟೂ ಇಟ್ಟೂ ಅರ್ಜಿ ಕೊಟ್ಟೂ ಕೊಟ್ಟೂ ಬೇಸತ್ತು ಕೊನೆಗೆ ಊರವರೇ ಒಂದಷ್ಟು ದುಡ್ಡು ಹಾಕಿ ಏನೋ ತಮ್ಮ ಸಂಕ ತಾವೇ ಕಟ್ಟಿಕೊಂಡಿದ್ದಾರೆ. ಆ ತಾಲೂಕಿನ ಕೆಲವು ರಸ್ತೆಗಳಿಗೆ ಒಂದೊಮ್ಮೆ ಓಬೀರಾಯನ ಕಾಲದಲ್ಲಿ ಜಲ್ಲಿ ಹೊಡೆಸಿದ್ದು, ಅದೀಗ ಡಾಂಬರಿಗೆ ಅನುದಾನ ಸಿಗದೆ ಮತ್ತೆ ಮಣ್ಣಿನ ರಸ್ತೆಯಾಗುವ ಸ್ಥಿತಿಗೆ ಬಂದಿದೆ. ಮತ್ತಷ್ಟು ಓದು
ಭವಿಷ್ಯತ್ತಿನಲ್ಲಿ ಯಾವ ಹಬ್ಬ ಕೈಬಿಡಲಿದೆಯೋ…?
– ಸಂತೋಷಕುಮಾರ ಮೆಹೆಂದಳೆ. ಕೈಗಾ
( ನಾನು ನನ್ನ ಸಮಾಜ ಮತ್ತು ಧರ್ಮಾಧಾರಿತ ವೃತ್ತದಲ್ಲಿ ನನ್ನ ಹಿರಿಮೆಯನ್ನು ಸ್ಥಾಪಿಸಿಕೊಳ್ಳುವುದು ಹೇಗೆ..? ಇನ್ನೊಂದು ಧರ್ಮವನ್ನು ಮುಗಿಸಿ ಹಾಕುವುದರ ಮೂಲಕ. ಇದು ಸುಲಭದ ದಾರಿ ಮತ್ತು ಸರಿಯಾಗಿ ಇನ್ನೂರು ವರ್ಷಗಳ ಹಿಂದೆ ಟಿಪ್ಪು ಮಾಡಿದ್ದೂ ಅದೇ. ಅನಾಮತ್ತಾಗಿ ಲಕ್ಷಗಟ್ಟಲೇ ಹಿಂದೂಗಳನ್ನು ವರ್ಷವಧಿಯೊಳಗೆ ಮುಗಿಸಿ ಹಾಕಿ, ಕೊಡವರ ಒಂದು ತಲೆಮಾರನ್ನೇ ನಿರ್ನಾಮ ಮಾಡಿ, ಅದನ್ನು ಸಾಧನೆ ಎಂಬಂತೆ ಪತ್ರಗಳ ಮೂಲಕ ಪ್ರಚುರಪಡಿಸಿದ ಕೂಡಾ. ಆದರೆ ಇವತ್ತಿಗೂ ಅವನ ಭಜನೆ ಮಾಡುತ್ತಿರುವ ಭಟ್ಟಂಗಿಗಳಿಗೆ ತಾವೂ ಮುಂದೊಮ್ಮೆ ಇಂತಹದ್ದೇ ಪರಿಸ್ಥಿತಿಗೆ ಈಡಾಗಲಿದ್ದೇವೆ ಎನ್ನುವ ಅರಿವಾದರೂ ಬೇಡವಾ…? ) ಮತ್ತಷ್ಟು ಓದು
ಟಿಪ್ಪು: ಸುಲ್ತಾನನೋ.. ಸೈತಾನನೋ?
– ರೋಹಿತ್ ಚಕ್ರತೀರ್ಥ
ಕರ್ನಾಟಕ ಸರಕಾರ 2015ನೇ ಇಸವಿಯ ನವೆಂಬರ್ 10ರಂದು ಟಿಪ್ಪು ಸುಲ್ತಾನನ ಜಯಂತಿಯನ್ನು ಆಚರಿಸಿತು. ಈ ಸರಕಾರೀ ಕಾರ್ಯಕ್ರಮವನ್ನು ನಡೆಸಲು ಪ್ರತಿ ಜಿಲ್ಲೆಗೆ 50 ಸಾವಿರ ಮತ್ತು ಪ್ರತಿ ತಾಲೂಕಿಗೆ 25 ಸಾವಿರ ರುಪಾಯಿಗಳಂತೆ ಒಟ್ಟು 80 ಲಕ್ಷವನ್ನು ವ್ಯಯಿಸಲಾಯಿತು. ನಾಡಹಬ್ಬ ದಸರಾ ಆಚರಿಸಲು ದುಡ್ಡಿಲ್ಲದೆ ಪರದಾಡುತ್ತಿದ್ದ ಸರಕಾರಕ್ಕೆ ಟಿಪ್ಪು ಜಯಂತಿ ಎಂಬ ಹೊಸ ಸಂಪ್ರದಾಯವನ್ನು ಹುಟ್ಟುಹಾಕಲು ಇಷ್ಟೊಂದು ದುಡ್ಡು ಎಲ್ಲಿಂದ ಸಿಕ್ಕಿತು ಎನ್ನುವುದು ಯಕ್ಷಪ್ರಶ್ನೆ! ಇರಲಿ, ಈ ಜಯಂತಿಯಾದರೂ ಸುಸೂತ್ರವಾಗಿ ನಡೆದಿದ್ದರೆ; ಒಂದಷ್ಟು ಒಳ್ಳೆಯ ಕೆಲಸಗಳು ಆ ಮೂಲಕವಾದರೂ ಆಗಿದ್ದರೆ ರಾಜ್ಯದ ಜನ ನೆಮ್ಮದಿ ಕಾಣುತ್ತಿದ್ದರೋ ಏನೋ. ಆದರೆ, ಈ ಜಯಂತಿ ಜನರ ಕಾರ್ಯಕ್ರಮವಾಗದೆ ಕೇವಲ “ಸರಕಾರಿ ಆಚರಣೆ” ಮಾತ್ರವೇ ಆಗಿ ಉಳಿಯಿತು. ತನ್ನ ಸಮಸ್ತ ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರಿಗೆ ಮೆಚ್ಚಿಕೆಯಾಗುವ ಕೆಲಸ ಮಾಡುವ ಅವಕಾಶವನ್ನು ತಾನಾಗಿ ಕೈಚೆಲ್ಲಿ ಸರಕಾರ ಒಂದು ಗುಂಪಿನ ಮನಮೆಚ್ಚಿಸಲು ಹೋಗುವುದು ಅಗತ್ಯವಿತ್ತೆ ಎಂಬ ಪ್ರಶ್ನೆ ಎದ್ದಿತು. ಸರಕಾರದ ನಡೆಯನ್ನು ಸಮರ್ಥಿಸಿಕೊಳ್ಳುತ್ತ ಒಬ್ಬ ಬುದ್ಧಿಜೀವಿ, “ಈಗಾಗಲೇ ಹಲವು ಜಾತಿ-ಕೋಮುಗಳ ಜನರಿಗೆ ಬೇಕಾದ ಜಯಂತಿಗಳಿವೆ. ಆದರೆ ಮುಸ್ಲಿಮರಿಗೆ ಹೇಳಿಕೊಳ್ಳುವಂಥ ಯಾವುದೇ ಸರಕಾರೀ ಕಾರ್ಯಕ್ರಮ ಇರಲಿಲ್ಲ. ಈಗ ಶುರುಮಾಡಿರುವ ಜಯಂತಿಯನ್ನು ಆ ನಿಟ್ಟಿನಲ್ಲಿ ಯೋಚಿಸಿ ಸ್ವಾಗತಿಸಬೇಕು” ಎಂಬ ಮಾತುಗಳನ್ನು ಆಡಿದರು. ಜಯಂತಿಗಳನ್ನು ರಾಜ್ಯದಲ್ಲಿರುವ ವಿವಿಧ ಜಾತಿ-ಪಂಗಡಗಳನ್ನು ಮೆಚ್ಚಿಸಲಿಕ್ಕಾಗಿ ಆಚರಿಸಲಾಗುತ್ತದೆ ಎಂಬ ಸತ್ಯ ಅವರ ಈ ಮಾತುಗಳ ಮೂಲಕ ಹೊರಬಿದ್ದಿದೆ. ಟಿಪ್ಪು ಜಯಂತಿಯನ್ನು ಆಚರಿಸಿರುವುದು ಕೇವಲ ಮುಸ್ಲಿಮ್ ಸಮುದಾಯವನ್ನು ಮೆಚ್ಚಿಸಲಿಕ್ಕಾಗಿ ಎಂಬ ಸರಕಾರದ ಅಜೆಂಡವನ್ನು ಸರಕಾರೀ ಸಾಹಿತಿ ಬಾಯಿತಪ್ಪಿ ಹೇಳಿಬಿಟ್ಟಿದ್ದಾರೆ! ಮತ್ತಷ್ಟು ಓದು
ಎಲ್ಲಿಯ ಹವಾಲ್ದಾರ್ ಜಪ್ಪು? ಎಲ್ಲಿಯ ಸದ್ದಾಂ ಹುಸೇನ್?
– ಸಂತೋಷ್ ತಮ್ಮಯ್ಯ
ಮೂರು ವರ್ಷದ ಹಿಂದೆ ಇಂಥದ್ದೇ ಒಂದು ಮಳೆಗಾಲದಲ್ಲಿ ಹವಾಲ್ದಾರ್ ಜಪ್ಪು ಬೆಂಗಳೂರಿನಲ್ಲಿ ಸಿಕ್ಕಿದ್ದರು. ಅಂದು ಜಪ್ಪು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲು ತಮ್ಮ ಮೆಡಲುಗಳ ಸಮೇತ ಬೆಂಗಳೂರಿಗೆ ಬಂದುಬಿಟ್ಟಿದ್ದರು. ಅದಾದ ನಂತರ ಮತ್ತೆ ಮೊನ್ನೆ ಸಿಕ್ಕಿದ್ದರು. ಸಿಕ್ಕವರು ಈಗ ತಾನು ಊರಲ್ಲಿಲ್ಲವೆಂದೂ ದಕ್ಷಿಣ ಕೊಡಗಿನ ತಾವಳಗೇರಿ ಶೆಟ್ಟಿಗೇರಿ ಎಂಬ ಊರಲ್ಲಿರುವುದಾಗಿಯೂ ಬಾಡಿಗೆ ಮನೆಯೊಂದನ್ನು ಹಿಡಿದು ಮಗಳನ್ನು ಪ್ರೈಮರಿ ಓದಿಸುತ್ತಿದ್ದೇನೆಂದು ಹೇಳಿದ್ದರು. ಪುರುಸೋತ್ತಾದಾಗ ಒಮ್ಮೆ ಮನೆಗೆ ಬರಬೇಕೆಂದೂ ಹೇಳಿದ್ದರು. ಮೂರು ವರ್ಷಗಳ ಹಿಂದೆ ಇದ್ದ ಆ ದೊಡ್ಡ ಸ್ವರದ ರಭಸ ಕಿಂಚಿತ್ತೂ ಮಾಸಿರಲಿಲ್ಲ. ಗಡಸುತನ ಮಾಯವಾಗಿರಲಿಲ್ಲ. ಆದರೆ ಮಾತುಮಾತಿಗೆ ಆಕ್ರೋಶಗೊಳ್ಳುವ ಅವರ ಜಾಯಮಾನ ಮೂರು ವರ್ಷಗಳಲ್ಲಿ ಮೂರುಪಟ್ಟು ಹೆಚ್ಚಿದಂತೆ ಕಂಡುಬಂತು. ಮತ್ತಷ್ಟು ಓದು
ಈ ಯೋಧರು ತಮ್ಮ ಆಳುಗಳಿಗೆ ಕೊಟ್ಟ ಕೂಲಿ ಮುಖ್ಯಮಂತ್ರಿಯೂ ಕೊಡಲಾರ !
– ಸಂತೋಷ್ ತಮ್ಮಯ್ಯ
೧೯೯೯ರ ಜುಲೈ ತಿಂಗಳು. ದೇಶಾದ್ಯಂತ ಕಾರ್ಗಿಲ್ ಯುದ್ಧದ ಬಿಸಿ ವ್ಯಾಪಿಸುತ್ತಿತ್ತು. ಎಲ್ಲೆಲ್ಲೂ ಆಕ್ರೋಶ, ಯೋಧರ ಸ್ಥೈರ್ಯ ಹೆಚ್ಚಿಸುವ ಕಾರ್ಯಕ್ರಮಗಳು ನಡೆಯುತ್ತಿದ್ದವು. ದೇಶದ ಮೂಲೆ ಮೂಲೆಗಳಿಂದ ನಿಧಿಸಂಗ್ರಹ, ಪಾಕ್ ಖಂಡನೆ, ಪ್ರತಿಭಟನೆ, ಬಲಿದಾನಿಗಳಿಗೆ ನಮನ ಕಾರ್ಯಕ್ರಮಗಳು ನಡೆಯುತ್ತಿದ್ದವು. ಅಂಥ ಒಂದು ದಿನ ಕೊಡಗಿನ ಗೋಣಿಕೊಪ್ಪದಲ್ಲಿ ಕಾರ್ಗಿಲ್ ನಮನದ ಮೆರವಣಿಗೆ ನಡೆಯುತ್ತಿತ್ತು, ಜನ ಕಿಕ್ಕಿರಿದು ಸೇರಿದ್ದರು. ನಾಗರಿಕರು, ಮಾಜಿ ಯೋಧರು, ವರ್ತಕರು, ಸಂತೆಗೆ ಬಂದವರು, ವಿದ್ಯಾರ್ಥಿಗಳು ಸೇರಿದ್ದರು. ಮಾಜಿ ಮಿಲಿಟರಿ ಅಧಿಕಾರಿಯೊಬ್ಬರು ಪಾಕ್ ವಿರುದ್ಧ ಕೆಂಡಾಮಂಡಲವಾಗಿ ಮಾತಾಡಿದರು. ಜಯಘೋಷಗಳೊಂದಿಗೆ ಮೆರವಣಿಗೆ ಹೊರಟಿತು. ಮುಶ್ರಫನ ಪ್ರತಿಕೃತಿ ದಹಿಸುವುದರೊಂದಿಗೆ ಮೆರವಣಿಗೆ ಮುಕ್ತಾಯವಾಗುತ್ತದೆ ಎಂದು ಘೋಷಿಸಲಾಯಿತು. ಹೀಗೆ ಮೆರವಣಿಗೆ ಸಾಗಿ ಬಸ್ ಸ್ಟಾಂಡಿಗೆ ಮುಟ್ಟಿ ಮುಶ್ರಫನ ಪ್ರತಿಕೃತಿಗೆ ಇನ್ನೇನು ಬೆಂಕಿ ಹಚ್ಚಬೇಕು, ಅಷ್ಟರಲ್ಲಿ ಪೊನ್ನಂಪೇಟೆ ಕಡೆಯಿಂದ ಅತಿ ವೇಗವಾಗಿ ಬಂದ ಕಾರೊಂದು ಮೆರವಣಿಗೆಯ ಮುಂದೆ ಬಂದು ಜಕ್ಕೆಂದು ನಿಂತಿತು. ಜನರು ಬೆಂಕಿ ಹಚ್ಚುವುದನ್ನು ಬಿಟ್ಟು ಆ ಕಾರನ್ನು ನೋಡತೊಡಗಿದರು. ನೋಡುತ್ತಿದ್ದಂತೆ ಆ ಕಾರಿಂದ ಬಿಳಿಯಾದ ಸುರುಳಿ ಮೀಸೆಯ ಮುದುಕರೊಬ್ಬರು ಇಳಿದರು. ಅವರ ಕೈ ನಡುಗುತ್ತಿತ್ತು. ಡಬಲ್ ಬ್ಯಾರಲ್ ಬಂದೂಕನ್ನು ಬೇರೆ ಹಿಡಿದಿದ್ದರು. ಒಂದು ಕ್ಷಣ ಆ ಸಾವಿರಾರು ಜನರು ಸ್ತಬ್ದರಾದರು. ಈ ಅಜ್ಜ ನೋಡನೋಡುತ್ತಲೇ ಕೋವಿಗೆ ಕಾಡತೂಸುಗಳನ್ನು ತುಂಬಿಸಿದರು. ಜೈ ಮಾಕಾಳಿ ಎನ್ನುತ್ತಲೇ ಮುಶರಫನ ಪ್ರತಿಕೃತಿಗೆ ಎರಡು ಗುಂಡುಗಳನ್ನು ಹಾರಿಸಿಯೇಬಿಟ್ಟರು! ಸಾವಿರಾರು ಜನ ಸೇರಿದ್ದ ಮೆರವಣಿಗೆ ಸನ್ನಿ ಹಿಡಿದವರಂತೆ ಜಯಘೋಷ ಮೊಳಗಿಸಿತು. ನಂತರ ಆ ಅಜ್ಜನನ್ನು ಪತ್ರಿಕೆಗಳು ಮಾತಾಡಿಸಿದವು. ಆ ಅಜ್ಜ ಹವಾಲ್ದಾರ್ ಮುದ್ದಪ್ಪ. ಬ್ರಿಟೀಷ್ ಕಾಲದಲ್ಲೇ ಆರ್ಮಿ ಸೇರಿ ಎರಡನೆ ಮಹಾಯುದ್ಧದಲ್ಲಿ ಪಾಲ್ಗೊಂಡಿದ್ದ ಯೋಧ. ಅರವತ್ತೆರಡರ ಯುದ್ದದಲ್ಲಿ ಪಾಲ್ಗೊಂಡು ಚೀನಾದಲ್ಲಿ ಸೆರೆಯಾಳಗಿದ್ದ ವ್ಯಕ್ತಿ. ತಮ್ಮ ೮೫ನೇ ವಯಸ್ಸಿನಲ್ಲೂ ಅವರು “ನಾನು ಈಗಲೂ ಕಾರ್ಗಿಲ್ ಗೆ ಹೋಗಲು ಸಿದ್ಧ” ಎಂದು ಮೀಸೆ ತಿರುವಿ ವರದಿಗಾರರಿಗೆ ಹೇಳಿದ್ದರು. ಮತ್ತಷ್ಟು ಕೆದಕಿ ನೋಡಿದರೆ ಆ ಅಜ್ಜ ದಕ್ಷಿಣ ಕೊಡಗಿನಲ್ಲಿ ಅತಿ ದೊಡ್ಡ ಕಾಫಿ ತೋಟವನ್ನು ಹೊಂದಿದ್ದ ಟಾಪ್ ಹತ್ತು ಜನರಲ್ಲಿ ಒಬ್ಬರು. ಆ ಕಾಲದಲ್ಲೇ ಅವರ ಮಕ್ಕಳು ಹೆಲಿಕಾಫ್ಟರನ್ನು ಖರೀದಿಸಲು ಓಡಾಡುತ್ತಿದ್ದರು.
ಟಿಪ್ಪು ಹೊಗಳಿದ ಮೇಲೆ ಕೋವಿದನೂ ಅಲ್ಲ ಕೋದಂಡನೂ ಅಲ್ಲ
– ಸಂತೋಶ್ ತಮ್ಮಯ್ಯ
ಕೊಡವರಿಗೆ ಕಾವೇರಮ್ಮನ ಶಾಪವಿದೆಯಂತೆ, ಬ್ರಹ್ಮಹತ್ಯಾದೋಷವೂ, ನಾಗದೋಷವೂ ಕಾಡುತ್ತಿದೆಯಂತೆ. ಹಾಗಾಗಿ ಕೊಡವರಿಗೆ ಶಾಂತಿ ನೆಮ್ಮದಿ ಇಲ್ಲವಂತೆ, ಅಷ್ಟಮಂಗಲ ಪ್ರಶ್ನೆಯಲ್ಲಿ ಅದು ಕಂಡುಬಂದಿದೆಯಂತೆ. ಇದು ಸದ್ಯ ಕೊಡಗಿನಲ್ಲಿ ಚರ್ಚೆಯಾಗುತ್ತಿರುವ ವಿಷಯ. ಈ ದೋಷ, ಶಾಪ, ಪ್ರಶ್ನೆ, ಅದಕ್ಕಿರುವ ಪರಿಹಾರಗಳು ಏನೇನಿವೆಯೋ ಗೊತ್ತಿಲ್ಲ. ಆದರೆ ಒಂದು ಶಾಪವಂತೂ ಅಷ್ಟಮಂಗಲ ಪ್ರಶ್ನೆಯ ಹೊರತಾಗಿಯೂ ಪ್ರಜ್ನಾವಂತ ಕೊಡವರಿಗೆ ತಿಳಿದೇ ಇದೆ.
ಅದೆಂದರೆ ಕರ್ನಾಟಕದ ಎಲ್ಲರಿಗೂ ಕೊಡಗಿಗೆ ಹೋದಾಗ ಅಲ್ಲಿನ ಯೋಧರು, ಧೀರರು, ಶೂರರು ಎಲ್ಲರೂ ನೆನಪಾಗಿಬಿಡುತ್ತಾರೆ. ಮಡಿಕೇರಿಗೆ ಬಂದ ರಾಜಕಾರಣಿಗಳು, ಸಾಹಿತಿಗಳಿಗೆ ಯೋಧರನ್ನು ಹೊರತಾಗಿಸಿ ಮಾತು ಹೊರಬರುವುದೇ ಇಲ್ಲ. ಅವರೆಲ್ಲರಿಗೂ ಭಾಷಣಕ್ಕೆ, ಸಾಹಿತ್ಯಕ್ಕೆ, ಸಿನಿಮಾಕ್ಕೆ ಕೊಡಗಿನ ಯೋಧರು, ಬ್ರಹ್ಮಗಿರಿ, ಕಾವೇರಮ್ಮೆ, ಇಗ್ಗುತ್ತಪ್ಪರು ಬೇಕು. ಆದರೆ ಅವರೆಲ್ಲರೂ ಟಿಪ್ಪು ವಿಷಯಕ್ಕೆ ಬಂದರೆ ಟಿಪ್ಪು ಆ ಯೋಧರನ್ನೆಲ್ಲಾ ಮೀರಿ ನಿಂತುಬಿಡುತ್ತಾನೆ! ಅಂದರೇ ಧರ್ಮಕ್ಕಾಗಿ ಹೋರಾಡಿದ ಕೊಡಗಿನ ಯೋಧರು ಸಾಹಿತಿಗಳ ಪ್ರಕಾರ ಸೆಕ್ಯುಲರ್ ಆಗಿಬಿಡುತ್ತಾರೆ. ಈ ಸೆಕ್ಯುಲರ್ ವ್ಯಾದಿ ಸಾಹಿತಿಗಳ ಪ್ರಾರಬ್ಧವಾದರೂ ಕೊಡವರ ಪಾಲಿಗೆ ಅದು ಶಾಪ. ಅವರ ಭಾವನೆಗಳ ಮೇಲಿನ ಚೆಲ್ಲಾಟ. ಏಕೆಂದರೆ ಈ ಸೆಕ್ಯುಲರ್ ವ್ಯಾದಿ ಟಿಪ್ಪುವನ್ನು ಹೊಗಳಲು ಕೊಡವರ ಬಲಿದಾನವನ್ನೂ ತಿರುಚಲೂ ಹಿಂಜರಿಯುವುದಿಲ್ಲ. ಹೀಗೆ ಟಿಪ್ಪುವನ್ನು ಹೊಗಳುತ್ತಾ ಕೊಡವರ ಯೋಧತನವನ್ನು ವರ್ಣಿಸಲು ಹೇಗೆ ತಾನೇ ಸಾಧ್ಯ? ಸಾಧ್ಯವಿಲ್ಲ ನಿಜ. ಆದರೆ ಅದು ನಿರಂತರ ನಡೆಯುತ್ತಲೇ ಇದೆ. ಕೊಡಗಲ್ಲೇ ಕೆಲವರು ಭಂಡರಿದ್ದಾರೆ. ಅಂಥವರಿಗೆ ಅಷ್ಟು ಮಾತುಗಳು ಸಾಕಾಗುತ್ತವೆ. ಸಾಹಿತಿ-ರಾಜಕಾರಣಿಗಳಿಗೆ ಚಪ್ಪಾಳೆಗಳು ಭರಪೂರ ಗಿಟ್ಟುತ್ತವೆ. ಹಾಗಾಗಿ ಕಾರ್ನಾಡರೂ “ಟಿಪ್ಪು ಸುಲ್ತಾನ ಕಂಡ ಕನಸು” ಎಂದು ಬರೆಯುತ್ತಾರೆ. ಕೆಲವರು “ಟಿಪ್ಪು ಜನ್ಮದಿನವನ್ನು ಆಚರಿಸಲು ಶಾಲೆಗಳಿಗೆ ರಜಾ ಘೋಷಿಸಲಾಗುವುದು” ಎನ್ನುತ್ತಾರೆ. ಇನ್ನೊಬ್ಬರು ” ಟಿಪ್ಪು ಓರ್ವ ಸಂತ” ಎಂದುಬಿಡುತ್ತಾರೆ. ವಿಚಿತ್ರವೆಂದರೆ ಇವರೆಲ್ಲರೂ ಹೀಗೆ ಹೇಳುವ ಮೊದಲು ಮಡಿಕೇರಿಯ ಯುದ್ಧ ಸ್ಮಾರಕಗಳಿಗೆ ಹಾರ ಹಾಕಿ ಬಂದಿರುತ್ತಾರೆ. ಇವನ್ನೆಲ್ಲಾ ಕೇಳುವುದು, ನೋಡುವುದೇ ಕೊಡಗಿನವರ ಪಾಲಿನ ಶಾಪ. ಏಕೆಂದರೆ ಕೊಡಗಲ್ಲಿ ಬಂದು ಟಿಪ್ಪುವನ್ನು ಹೊಗಳುವುದೆಂದರೆ ಕೊಡಗಿನ ಪೂರ್ವಜರನ್ನು ನಿಂದಿಸಿದಂತೆಯೇ.