ವಿಷಯದ ವಿವರಗಳಿಗೆ ದಾಟಿರಿ

Posts tagged ‘ಗಂಜಿ ಗಿರಾಕಿ’

6
ಜುಲೈ

ಅಂಬೇಡ್ಕರ್ ಅವರಿಗೂ ಬೇಡವಾಗಿತ್ತು ಆರ್ಟಿಕಲ್ 370

– ರಾಕೇಶ್ ಶೆಟ್ಟಿ

“ಮಿ.ಅಬ್ದುಲ್ಲಾ, ಭಾರತ ಕಾಶ್ಮೀರವನ್ನು ರಕ್ಷಿಸಬೇಕು, ಅಭಿವೃದ್ಧಿಗೊಳಿಸಬೇಕು ಮತ್ತು ಕಶ್ಮೀರಿಗಳಿಗೆ ಭಾರತದ ಇತರ ಪ್ರಜೆಗಳಂತೆಯೇ ಸಮಾನ ಹಕ್ಕುಗಳಿರಬೇಕೆಂದು ನೀವು ಬಯಸುತ್ತೀರ. ಆದರೆ, ಭಾರತ ಮತ್ತು ಭಾರತೀಯರಿಗೆ ಕಾಶ್ಮೀರ ರಾಜ್ಯದಲ್ಲಿ ಯಾವುದೇ ಹಕ್ಕುಗಳು ಇರಬಾರದು ಎನ್ನುತ್ತೀರ. ನಾನು ಭಾರತದ ಕಾನೂನು ಮಂತ್ರಿ, ನನ್ನ ದೇಶದ ಹಿತಾಸಕ್ತಿಯನ್ನು ನಾನು ಕಡೆಗಣಿಸಲಾರೆ… “, ಆರ್ಟಿಕಲ್ 370ರನ್ನು ಸಂವಿಧಾನದಲ್ಲಿ ಸೇರಿಸಿ ಜಮ್ಮು ಕಾಶ್ಮೀರದಲ್ಲಿ ಜಾರಿಗೊಳಿಸುವ ವಿಷಯದಲ್ಲಿ ಅಂಬೇಡ್ಕರ್ ಅವರನ್ನು ಒಪ್ಪಿಸಲು ನೆಹರೂ ಸಲಹೆ ಮೇರೆಗೆ ಬಂದಿದ್ದ ಶೇಖ್ ಅಬ್ದುಲ್ಲಾನ ಮುಖಕ್ಕೆ ಹೊಡೆದಂತೆ ಡಾ.ಅಂಬೇಡ್ಕರ್ ಅವರು ಹೇಳಿ ಕಳುಹಿಸಿದ್ದು ಹೀಗೆ. ಖುದ್ಧು  ಸಂವಿಧಾನ  ಶಿಲ್ಪಿಯೇ ವಿರೋಧಿಸಿದ್ದ ಈ ಆರ್ಟಿಕಲ್ 370ಯನ್ನು ಅಂದು ಅವರ ಬಾಯಿ  ಮುಚ್ಚಿಸಲು  “ತಾತ್ಕಾಲಿಕ” ಎಂಬ ಪದ ಬಳಸಲಾಯಿತು. ಹೆಂಡ ಕುಡಿದ ಮರ್ಕಟದಂತಾಡುತ್ತಿದ್ದ  ನೆಹರೂ  ಸಾಹೇಬರು, ತಮ್ಮ ಬಾಲವನ್ನು ಶೇಖ್ ಅಬ್ದುಲ್ಲಾನ ಕೈಗೆ ಇಟ್ಟಾಗಿತ್ತು. ಆರ್ಟಿಕಲ್  370  ಜಾರಿಯಾಗುತ್ತಿದಂತೆ ಹಿಂಬಾಗಿಲ ಮೂಲಕ ಅದಕ್ಕಿಂತಲೂ ಘೋರವಾದ ವಿಧಿ 35A ಅನ್ನು  ಜಮ್ಮು ಕಾಶ್ಮೀರಕ್ಕೆ ಅನ್ವಯಿಸಲಾಯಿತು. ಅಂದು ಅಂಬೇಡ್ಕರ್ ಅವರು ವಿರೋಧಿಸಿದ್ದ ಆರ್ಟಿಕಲ್ 370 ರದ್ಧತಿ ಬಗ್ಗೆ ಮಾತನಾಡುತ್ತಿರುವುದು ಕೇವಲ ಬಿಜೆಪಿ ಮಾತ್ರವೇ. ಹಾಗೂ ಇದನ್ನು ವಿರೋಧಿಸುವವರು ಕಾಂಗ್ರೆಸ್ ಇತ್ಯಾದಿ ಸೆಕ್ಯುಲರ್ ಪಕ್ಷಗಳು ಹಾಗೂ ಸೋ-ಕಾಲ್ಡ್ ಸಂವಿಧಾನ ರಕ್ಷಕರು…! ಮತ್ತಷ್ಟು ಓದು »

4
ನವೆಂ

ಕಲೆಕ್ಷನ್ ಹಣ ಹಂಚಿಕೆ ವಿಚಾರಕ್ಕೆ ಗಂಜಿ ಚಲೋ ನಾಯಕರ ಮಾರಾಮಾರಿ: ಐವರಿಗೆ ಗಾಯ (ಸುಳ್ಸುದ್ದಿ)

– ಪ್ರವೀಣ್ ಕುಮಾರ್, ಮಾವಿನಕಾಡು

%e0%b2%ae%e0%b2%be%e0%b2%b0%e0%b2%be%e0%b2%ae%e0%b2%be%e0%b2%b0%e0%b2%bfಕೆಲವು ದಿನಗಳ ಹಿಂದೆ “ಗಂಜಿಗಾಗಿ ಚಲೋ” ಎನ್ನುವ ಕಾರ್ಯಕ್ರಮ ಮಾಡಿದ್ದ ತಂಡವೊಂದು ಆ ಕಾರ್ಯಕ್ರಮಕ್ಕೆಂದು ಕಲೆಕ್ಷನ್ ಮಾಡಿದ್ದ ಹಣವನ್ನು ಹಂಚಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕ್ ಮಾಡಿಕೊಂಡು ಪರಸ್ಪರ ಬಡಿದಾಡಿ ಆಸ್ಪತ್ರೆ ಸೇರಿದ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನೆಲೆ: ಕೆಲವು ದಿನಗಳ ಹಿಂದೆ ನಕ್ಸಲ್ ಹೋರಾಟಗಾರರು, ಅನ್ಯ ಕೋಮಿನ ಕೆಲವರ ಬೆಂಬಲದೊಂದಿಗೆ ಕೆಲ ದಪಹೋಗಾರರ ಜೊತೆ ಸೇರಿ ಗಂಜಿಗಾಗಿ ಚಲೋ ಎನ್ನುವ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರನ್ನು ಸೇರಿಸುವುದಾಗಿ ಹೇಳಿಕೊಂಡಿದ್ದ ಆ ಹೋರಾಟಗಾರರು ತಳಮಟ್ಟದ ಶೋಷಿತರಷ್ಟೇ ಅಲ್ಲದೇ ರಾಜಕಾರಣಿಗಳೂ ಸೇರಿದಂತೆ ಹಲವಾರು ಜನರಿಂದ ರೂ.500 ರಿಂದ ಐವತ್ತು ಸಾವಿರದವರೆಗೆ ಹಣವನ್ನು ಕಲೆಕ್ಷನ್ ಮಾಡಿದ್ದರು. ಕಲೆಕ್ಷನ್ ಆದ ಆ ಹಣದ ಒಟ್ಟು ಮೊತ್ತ ಸುಮಾರು ಎರಡು ಕೋಟಿಗೂ ಮೀರಿತ್ತು. ಆದರೆ ಒಂದು ಲಕ್ಷ ಜನರು ಸೇರುತ್ತಾರೆ ಎಂದು ಬಿಂಬಿತವಾಗಿದ್ದ ಆ ಕಾರ್ಯಕ್ರಮಕ್ಕೆ ಸೇರಿದ್ದು ಕೇವಲ 632 ಜನ ಮಾತ್ರ! ಕಾರ್ಯಕ್ರಮಕ್ಕೆ ಖರ್ಚಾಗಿದ್ದು ಕೇವಲ ನಾಲ್ಕೂವರೆ ಲಕ್ಷಗಳು! ಇದರಿಂದಾಗಿ ಬರೋಬ್ಬರಿ ಎರಡು ಕೋಟಿ ರೂಪಾಯಿಗಳಷ್ಟು ಹಣ ಹೋರಾಟಗಾರರ ಬಳಿಯೇ ಉಳಿಯಿತು. ಇದನ್ನು ಮೊದಲೇ ಯೋಚಿಸಿದ್ದ ಕಾರ್ಯಕ್ರಮದ ಆಯೋಜಕರಾದ ಹೋರಾಟಗಾರರು ಮುಂದಿನ ವಾರ ಎಲ್ಲರೂ ತುಮಕೂರು ರಸ್ತೆಯ “ಫಿಶ್ ಲ್ಯಾಂಡ್ ಢಾಬಾ” ದಲ್ಲಿ ಕೂತು ಹಂಚಿಕೊಳ್ಳುವುದೆಂದು ತೀರ್ಮಾನಿಸಿ ಕಾರ್ಯಕ್ರಮಕ್ಕೆ ತಮ್ಮ ತನು-ಮನವನ್ನು ಅರ್ಪಿಸಿದ್ದ ರಾಜಕಾರಣಿಯೊಬ್ಬರ ಸಲಹೆಗಾರರ ಕೈಲಿ ಆ ಹಣವನ್ನು ಕೊಟ್ಟು ತಮ್ಮ ತಮ್ಮ ಮನೆಗಳನ್ನು ತಲುಪಿದ್ದರು. ಮತ್ತಷ್ಟು ಓದು »