ಹಿಟ್ಲರನ ಗೊಬೆಲ್ಸ್ ಮತ್ತು ನೆಹರೂವಿನ ಗಂಜಿಗಿರಾಕಿಗಳು
– ರಾಕೇಶ್ ಶೆಟ್ಟಿ
‘ಸುಳ್ಳನ್ನೇ ಪದೇ ಪದೇ ಜನರ ಕಿವಿಗೆ ಬೀಳುವಂತೆ ಬೊಬ್ಬೆ ಹೊಡೆಯುತ್ತಾ ಹೋದರೆ ಅದೇ ಸತ್ಯವಾಗುತ್ತ ಹೋಗುತ್ತದೆ’ ಹೀಗೊಂದು ಮಾತನ್ನು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಸರ್ಕಾರದಲ್ಲಿ Public Enlightenment & Propaganda ಸಚಿವನಾಗಿದ್ದ ಗೊಬೆಲ್ಸ್ ಹೇಳಿದ್ದನೆಂಬ ಮಾತಿದೆ.ಈ ಮಾತನ್ನು ಗೊಬೆಲ್ಸ್ ಹೇಳಿದ್ದನೋ ಇಲ್ಲವೋ,ಆದರೆ ಈ ಮಾತು ಪ್ರಾಕ್ಟಿಕಲಿ ಸತ್ಯವಂತೂ ಹೌದು.ಬೇಕಿದ್ದರೆ ಗೊಬೆಲ್ಸ್ ಹೇಳಿಕೊಟ್ಟ ಈ ಸೂತ್ರವನ್ನು ಬಳಸುತ್ತಿರುವ ಭಾರತದ ಗಂಜಿಗಿರಾಕಿಗಳನ್ನು ಈ ಬಗ್ಗೆ ಕೇಳಿ ನೋಡಿ. ಉದಾಹರಣೆಗೆ, ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ಸಮಾವೇಶವೊಂದರಲ್ಲಿ ನರೇಂದ್ರ ಮೋದಿಯವರು ಮಾತನಾಡುತ್ತ ‘ ಲೂಟಿಕೋರ-ಕಳ್ಳರು ವಿದೇಶದ ಬ್ಯಾಂಕುಗಳಲ್ಲಿ ಎಷ್ಟು ಪ್ರಮಾಣದ ಕಪ್ಪು ಹಣವಿಟ್ಟಿದ್ದಾರೆಂದರೆ,ಅದನ್ನು ವಾಪಸ್ ತಂದರೆ ಭಾರತದ ಪ್ರತಿ ಬಡವನಿಗೆ ೧೫ ಲಕ್ಷದಷ್ಟು ಹಣವನ್ನು ಉಚಿತವಾಗಿ ಕೊಡುವಷ್ಟಿದೆ’ ಎಂದಿದ್ದರು(ಈ ವಿಡಿಯೋ ಈಗಲೂ ಅಂತರ್ಜಾಲದಲ್ಲಿ ಲಭ್ಯವಿದೆ).ಇದೇ ಮಾತನ್ನು ಈಗ ಗಂಜಿಗಿರಾಕಿಗಳೆಂಬ ಗೊಬೆಲ್ಸ್ ಗಳು ‘ಮೋದಿ ಅಧಿಕಾರಕ್ಕೆ ಬಂದ ಮೇಲೆ ನಮ್ಮ ಅಕೌಂಟಿಗೆ ೧೫ ಲಕ್ಷ ಹಣ ಹಾಕ್ತಿನಿ ಅಂದಿದ್ರು.ಹಾಕಿಯೇ ಇಲ್ಲ’ ಎಂದು ಊರಿಡಿ ಬೊಬ್ಬೆ ಹೊಡೆಯಲು ಶುರುವಿಟ್ಟುಕೊಂಡರು. ಈಗ ಈ ಸುಳ್ಳು ಯಾವ ಪರಿ ಹರಡಿದೆಯೆಂದರೆ,ಮೋದಿಯನ್ನು ವಿರೋಧಿಸಲು ಕಾರಣವೇ ಸಿಗದವರು ಎಲ್ರಿ ನಮ್ಮ ೧೫ ಲಕ್ಷ ಎಂದು ಕೇಳುವಷ್ಟು. ವಿಚಿತ್ರವೆಂದರೆ,ಇದು ಗಂಜಿಗಿರಾಕಿಗಳ ಅಪಪ್ರಚಾರದ ಕ್ಯಾಮ್ಪೇನು ಎಂದು ಹೇಳಬೇಕಾದವರೇ ತಡಬಡಾಯಿಸುವಂತಾಗಿದೆ.ಇದೇ ನೋಡಿ GGG Lying Formula (ಗಂಜಿ ಗಿರಾಕಿ ಗೊಬೆಲ್ಸ್ ಸುಳ್ಳಿನ ಸೂತ್ರ)ದ ತಾಕತ್ತು.
ಭಾರತದ ಗಂಜಿಗಿರಾಕಿಗಳ ಗೊಬೆಲ್ಸ್ ಕಾರ್ಯಾಚರಣೆಯ ಬಗ್ಗೆ ಮಾತನಾಡುವ ಮುನ್ನ, ಜರ್ಮನಿಯ ಗೊಬೆಲ್ಸ್ ಪರಿಚಯ ಮಾಡಿಕೊಳ್ಳಬೇಕು,ಆಗ ಅವರಿಬ್ಬರ ಸಾಮ್ಯತೆ ಅರ್ಥವಾದೀತು. ಜರ್ಮನಿಯಲ್ಲಿ National Socialist German Workers’ (Nazi) Party ಹಿಟ್ಲರನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಾಗ, ಪ್ರಪೋಗ್ಯಾಂಡ ಸಚಿವನಾಗಿ ಬಂದವನು ಗೊಬೆಲ್ಸ್. ಹೈಡಲ್ ಬರ್ಗ್ ವಿವಿಯಿಂದ ಸಾಹಿತ್ಯದಲ್ಲಿ ಪಿಹೆಚ್ಡಿ ಪದವಿ ಪಡೆದಿದ್ದ ಚಾಣಾಕ್ಷ ಈತ. ಈತನಿಗೆ ಯಾವುದೇ ಸುಳ್ಳನ್ನು ಸತ್ಯವೆಂದು ಓದುಗರನ್ನು ಮರುಳು ಮಾಡುವ ಬರವಣಿಗೆ ಒಲಿದಿತ್ತು. ಇದರ ಜೊತೆಗೆ ಸಾಹಿತ್ಯ,ಸಿನಿಮಾ,ಕಲೆ ಇವನ ಆಸಕ್ತಿಕರ ಕ್ಷೇತ್ರಗಳು. ಇಷ್ಟೆಲ್ಲಾ ಆಸಕ್ತಿ ಮತ್ತು ಸಾಮರ್ಥ್ಯವಿದ್ದ ವ್ಯಕ್ತಿ ದೇಶದ ಸಾಂಸ್ಕೃತಿಕ ರಾಜಕಾರಣವನ್ನು ತನ್ನ ಕಪಿಮುಷ್ಟಿಯಲ್ಲಿಟ್ಟುಕೊಳ್ಳಲು ಸಮರ್ಥ ವ್ಯಕ್ತಿಯಾಗಿ ಹಿಟ್ಲರನಿಗೆ ಅನ್ನಿಸಿದ್ದು ಸಹಜವೇ. ಅಧಿಕಾರಕ್ಕೆ ಬಂದ ಗೊಬೆಲ್ಸ್ ಕೂಡ ಹಿಟ್ಲರ್ ಸುತ್ತ ನಕಲಿ ಪ್ರಭಾವಳಿಯನ್ನು ಸೃಷ್ಟಿಸುವಲ್ಲಿ ಸಫಲನಾಗಿದ್ದ, ಇವನಿಲ್ಲದಿದ್ದರೆ ಜರ್ಮನಿ ಮತ್ತೊಮ್ಮೆ ಗೌರವಯುತವಾಗಿ ತಲೆ ಎತ್ತಲಾರದು ಎಂದ, ಜನರು ನಂಬಿದರು.
ಉಕ್ಕಿನ ಮನುಷ್ಯನಿಗೆ ಸಿಗಲಿ ತಕ್ಕ ಗೌರವ
– ರೋಹಿತ್ ಚಕ್ರತೀರ್ಥ
1909ರ ಒಂದು ದಿನ. ನ್ಯಾಯಾಲಯದಲ್ಲಿ ಕ್ರಾಸ್ ಎಕ್ಸಾಮಿನೇಶನ್ ನಡೆಯುತ್ತಿದೆ. ನಿರಪರಾಧಿಯೊಬ್ಬ ಅಪರಾಧಿ ಸ್ಥಾನದಲ್ಲಿ ನಿಂತಿದ್ದಾನೆ. ವಕೀಲರು ಪಾಟೀಸವಾಲು ಹಾಕುತ್ತಿರುವಾಗಲೇ ಮಧ್ಯದಲ್ಲಿ ಅವರಿಗೊಂದು ಟೆಲಿಗ್ರಾಂ ಬಂತು. ಆ ಕಾಲದಲ್ಲಿ ಯಾರಿಗಾದರೂ ತಂತಿ ಸಂದೇಶ ಬಂತೆಂದರೆ ಅದು ಸಾವಿನ ಸುದ್ದಿಯೆಂದೇ ಲೆಕ್ಕ. ಚೀಟಿಯತ್ತ ಒಮ್ಮೆ ಕಣ್ಣುಹಾಯಿಸಿ, ಕ್ಷಣಕಾಲ ಕಣ್ಣುಮುಚ್ಚಿ ದೀರ್ಘವಾಗಿ ಉಸಿರೆಳೆದು, ಅವರು ಆ ಚೀಟಿಯನ್ನು ತನ್ನ ಕೋಟಿನ ಜೇಬಿನೊಳಗಿಳಿಸಿ ವಾದ ಮುಂದುವರಿಸಿದರು. ಕೊನೆಗೆ ಕಟಕಟೆಯಲ್ಲಿ ನಿಂತಿದ್ದ ವ್ಯಕ್ತಿ ನಿರಪರಾಧಿಯೆಂದು ಸಾಬೀತಾಯಿತು. ಕೋರ್ಟಿನ ಕಲಾಪಗಳು ಮುಗಿದ ನಂತರ ನ್ಯಾಯಮೂರ್ತಿಗಳು ಟೆಲಿಗ್ರಾಂ ವಿಷಯ ಪ್ರಸ್ತಾಪಿಸಿದಾಗ ವಕೀಲರು, “ಅದು ನನ್ನ ಪತ್ನಿಯ ಸಾವಿನ ಸುದ್ದಿ. ನಾನು ಆ ಕೂಡಲೇ ನ್ಯಾಯಾಲಯದಿಂದ ಹೊರಟುಬಿಡುತ್ತಿದ್ದರೆ ಇಲ್ಲಿ ನಿರಪರಾಧಿಯ ಪರವಾಗಿ ವಾದಿಸುವವರು ಯಾರೂ ಇಲ್ಲದೆ ಅವನು ಶಿಕ್ಷೆಗೆ ಗುರಿಯಾಗುತ್ತಿದ್ದನೇನೋ. ಒಂದು ಪ್ರಾಣ ಹೇಗೂ ಹೋಗಿಯಾಗಿದೆ. ಇಲ್ಲಿಂದ ಹೊರನಡೆದಿದ್ದರೆ ಈ ದಿನ ನಾನು ಎರಡನೇ ಸಾವನ್ನೂ ನೋಡಬೇಕಾಗಿತ್ತಲ್ಲ” ಎಂದರು. ಸರ್ದಾರ್ ವಲ್ಲಭಭಾಯಿ ಪಟೇಲರನ್ನು ಉಕ್ಕಿನ ಮನುಷ್ಯ ಎಂದು ಕರೆಯುವುದು ಸುಮ್ಮನೇ ಅಲ್ಲ ಎನ್ನುವುದಕ್ಕೆ ಇದೊಂದು ದೃಷ್ಟಾಂತ ಸಾಕು.
ಪಟೇಲರು 1875ನೇ ಇಸವಿ ಅಕ್ಟೋಬರ್ 31ರಂದು ಗುಜರಾತ್ನಲ್ಲಿ ಜನಿಸಿದರು. ಪಟೇಲ್ ಸಮುದಾಯದ ಸಂಪ್ರದಾಯದಂತೆ ಹುಡುಗನಿಗೆ 18ರ ಹರೆಯದಲ್ಲೇ ಮದುವೆಯಾಯಿತು. ಕುಟುಂಬ ದೊಡ್ಡದು. ಜೀವನ ನಿರ್ವಹಣೆಗೆ ಶಕ್ತಿಮೀರಿ ದುಡಿಯುವುದು ಅನಿವಾರ್ಯ ಕರ್ಮವಾಗಿದ್ದ ಕಾಲ. ಪಟೇಲರು ಸ್ವಂತ ಪರಿಶ್ರಮದಿಂದ ಓದಿ, ಪದವಿ ಪಡೆದು, ಉನ್ನತ ವ್ಯಾಸಂಗಕ್ಕೆ ಇಂಗ್ಲೆಂಡಿಗೆ ಹೋಗುವ ಕನಸು ಕಂಡಿದ್ದರು. ಅವರ ಕನಸಿಗೆ ನೀರೆರೆಯುವಂತೆ ಇಂಗ್ಲೆಂಡಿನಿಂದ ವಕೀಲಿ ವ್ಯಾಸಂಗದ ಪ್ರವೇಶಾತಿಯ ಕಾಗದಪತ್ರಗಳೂ ಪ್ರಯಾಣದ ಟಿಕೇಟೂ ಬಂದವು. ಆ ಎಲ್ಲ ದಾಖಲೆಗಳಲ್ಲೂ ಪಟೇಲರ ಹೆಸರನ್ನು ವಿ.ಜೆ. ಪಟೇಲ್ ಎಂದು ನಮೂದಿಸಲಾಗಿತ್ತು. ಆಗ, ಇಂಗ್ಲೆಂಡಿಗೆ ಹೋಗಿ ಕಲಿಯಲು ತನಗೂ ಆಸೆಯಿದೆ ಎಂದು ಸೋದರ ವಿಠಲಭಾಯಿ ಝಾವೆರ್ಬಾಯಿ ಪಟೇಲ್ ಮುಂದೆ ಬಂದು ಅಣ್ಣನ ಬಳಿ ಹೇಳಿಕೊಂಡ. ಅಣ್ಣ ವಲ್ಲಭಭಾಯಿ ತಮ್ಮನ ಆಸೆ ಮನ್ನಿಸಿ ಆತನಿಗೆ ವಿದೇಶಕ್ಕೆ ಹೋಗಲು ಅವಕಾಶ ಮಾಡಿಕೊಟ್ಟು ತಾನು ಭಾರತದಲ್ಲೆ ಉಳಿದರು. ವಜ್ರದಂಥ ವ್ಯಕ್ತಿಯ ಮನಸ್ಸು ಹೂವಿನಷ್ಟು ಮೃದುವೂ ಆಗಿತ್ತೆನುವುದಕ್ಕೆ ಈ ಘಟನೆ ಸಾಕ್ಷಿ.
ಅಂಬೇಡ್ಕರ್ ಮತ್ತು ಮಾರ್ಕ್ ವಾದ
– ಡಾ. ಜಿ. ಭಾಸ್ಕರ ಮಯ್ಯ
ಬಹಳ ಕಾಲದಿಂದಲೂ ಬುದ್ಧಿಜೀವಿಗಳ ವಲಯದಲ್ಲಿ ಅಂಬೇಡ್ಕರ್ ಮತ್ತು ಮಾರ್ಕ್ಸ್ ವಾದದ ಬಗೆಗೆ ಚರ್ಚೆಯಿದೆ. ಮಾರ್ಕ್ಸ್ ವಾದಿ ಕಮ್ಯೂನಿಸ್ಟ್ ಪಕ್ಷದ ಬುದ್ಧಿಜೀವಿಗಳು ಅಂಬೇಡ್ಕರರ ಕೊಡುಗೆ ಮತ್ತು ಭಾರತದ ಇತಿಹಾಸದಲ್ಲಿ ಅವರ ಸ್ಥಾನಮಾನಗಳ ಕುರಿತು ಸ್ಪಷ್ಟವಾಗಿ ಚರ್ಚಿಸಿದ್ದಾರೆ. ಈ ಕುರಿತು ಬಿ.ಟಿ. ರಣದಿವೆಯವರ “ಜಾತಿ ಮತ್ತು ವರ್ಗ” ಕೃತಿಯನ್ನು ನೋಡಬಹುದು. ಆದರೆ, ಬಹಳಷ್ಟು ಇತರೇ ಬುದ್ಧಿಜೀವಿಗಳಿಗೆ ಅಂಬೇಡ್ಕರ್ ಅವರು ಮಾರ್ಕ್ಸ್ ವಾದಕ್ಕೆ ಅತಿನಿಕಟ ಎಂತಲೊ ಅಥವಾ ಅಂಬೇಡ್ಕರ್ರದ್ದೇ ನಿಜವಾದ ಮಾರ್ಕ್ಸ್ ವಾದ ಎಂತಲೊ ಭ್ರಮೆಯಿದೆ.
ಇತ್ತೀಚೆಗೆ ವಿಜಯಕರ್ನಾಟಕದಲ್ಲಿ ಬರಗೂರು ರಾಮಚಂದ್ರಪ್ಪನವರ “ಕೆರಳಿದ ಕರುಳ ಧ್ವನಿ ಅಂಬೇಡ್ಕರ್” ಎಂಬ ಲೇಖನ ಪ್ರಕಟವಾಗಿದೆ. ಇಲ್ಲಿಯೂ ಅಂತಹ ಒಂದು ವಿಲಕ್ಷಣ ಭ್ರಮಾಪ್ರಯತ್ನವನ್ನು ನೋಡಬಹುದು. ಈ ಕುರಿತು ಒಂದು ಚರ್ಚೆ ಪ್ರಸ್ತುತ ಲೇಖನದ ಉದ್ದೇಶ. ಮೊದಲಿಗೆ ಬರಗೂರರು ಅಂಬೇಡ್ಕರರ ಮೂರು ಹೇಳಿಕೆಗಳನ್ನು (ಅವುಗಳಲ್ಲಿ 2, 3 ಮಾರ್ಕ್ಸ್ ವಾದವನ್ನು ಎತ್ತಿ ಹಿಡಿಯುತ್ತವೆ) ಉಲ್ಲೇಖಿಸಿ ಅದರ ಮೇಲೆ ತಮ್ಮ ಚರ್ಚೆಯನ್ನು ಆರಂಭಿಸುತ್ತಾರೆ.
ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರಲ್ಲ
ಗಾಂಧೀಜಿಯವರ ಕುರಿತು ಬರಗೂರು “ಆರಂಭದಲ್ಲಿ ಜಾತಿವರ್ಣಗಳನ್ನು ತಮ್ಮದೇ ವ್ಯಾಖ್ಯಾನದ ಮೂಲಕ ಸಮರ್ಥಿಸುತ್ತಿದ್ದ ಗಾಂಧೀಜಿ ಆನಂತರ ಜಾತಿ ಮತ್ತು ವರ್ಗರಹಿತ ಸಮಾಜದ ನಿರ್ಮಾಣವನ್ನು ಪ್ರತಿಪಾದಿಸಿದರು” ಎಂದಿದ್ದಾರೆ. ಜಗತ್ತಿನ ಯಾವ ಮಾರ್ಕ್ಸ್ ವಾದಿಯೂ ಮೈಮರೆತು ಕೂಡಾ ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರು ಎಂದು ಹೇಳಿಲ್ಲ. ಏಕೆಂದರೆ ಗಾಂಧೀಜಿ ಎಂದೂ ವರ್ಗರಹಿತ ಸಮಾಜ ನಿರ್ಮಾಣದ ಕನಸು ಕಂಡಿಲ್ಲ. ಭಾರತದ ಅತ್ಯುನ್ನತ ಮಟ್ಟದ ಮಾರ್ಕ್ಸ್ ವಾದಿಗಳಾದ ಡಾಂಗೆ, ಯಶ್ಪಾಲ್,ಇಎಂಎಸ್ ನಂಬೂದಿರಿ ಪಾಡ್-ಎಲ್ಲರೂ ಗಾಂಧೀಜಿಯ ಒಟ್ಟು ಐತಿಹಾಸಿಕ ಪಾತ್ರ ಬಂಡವಾಳಿಗರ ವರ್ಗವನ್ನು ಹೇಗೆ ಪ್ರತಿನಿಧಿಸುತ್ತಿತ್ತು ಎಂಬುದನ್ನೇ ವಿಶದೀಕರಿಸಿದ್ದಾರೆ. ಗಾಂಧೀಜಿಯವರ ಅತ್ಯಂತ ಯಥಾರ್ಥ
ಮೌಲ್ಯಮಾಪನವನ್ನು ಇಎಂಎಸ್ ತಮ್ಮ “ಗಾಂಧಿ ಎಂಡ್ ಹಿಸ್ ಇಸಮ್” ಕೃತಿಯಲ್ಲಿ ವಿವರವಾಗಿ ದಾಖಲಿಸಿದ್ದಾರೆ. ನನಗನ್ನಿಸುವಂತೆ ಬಹಳಷ್ಟು ಬುದ್ಧಿಜೀವಿಗಳಿಗೆ “ವರ್ಗ” ಎಂಬ ವಿಶೇಷ ಪದದ ಅರ್ಥವೇ ತಿಳಿದಿಲ್ಲ! ಅದರಿಂದಾಗಿಯೇ ಇಂತಹ ಅವಾಂತರಗಳು ಉಂಟಾಗುತ್ತವೆ.
ಕುವೆಂಪು ಮತ್ತು ಅಧ್ಯಾತ್ಮ
– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಕುವೆಂಪು ಮೂಲತಃ ಒಬ್ಬ ಕವಿ, ಶ್ರೇಷ್ಠ ಕವಿ. “ನಾನೃಷಿಃ ಕುರುತೇ ಕಾವ್ಯಂ” ಎಂಬ ಮಾತಿದೆ. ಋಷಿ ಎಂಬುದಕ್ಕೆ ದ್ರಷ್ಟಾರ ಎಂಬ ಅರ್ಥವಿದೆ. ಅಧ್ಯಾತ್ಮದ ಒಂದು ಮಜಲನ್ನು ದಾಟದಿದ್ದರೆ ದ್ರಷ್ಟಾರನಾಗುವುದು ಸಾಧ್ಯವಿಲ್ಲ. ಅಧ್ಯಾತ್ಮ ಎಂದರೆ ‘Immediate feeling of unity of the self with God’ ಎಂಬ ವ್ಯಾಖ್ಯೆಯನ್ನು ನೀಡಲಾಗಿದೆ. ದೇವರದೊಂದಿಗಿನ ಆತ್ಮದ ಐಕ್ಯವೇ ಅಧ್ಯಾತ್ಮ. ಕಾಯಕ, ನಿಸರ್ಗ, ಅಣುಜೀವ ಪ್ರೇಮ, ಹೀಗೆ ಯಾವುದೇ ಶಾಶ್ವತ ಮೌಲ್ಯವೂ ದೇವರಾಗಬಹುದು. ಇವು ವ್ಯಕ್ತಿಯಲ್ಲಿ ಲೀನವಾಗುವ ಬಗೆ ಅಧ್ಯಾತ್ಮದ ಹಂತಕ್ಕೆ ಒಯ್ಯುತ್ತದೆ.
ತೀವ್ರ ವಿಚಾರವಾದಿ, ಅಧ್ಯಾತ್ಮವಾದಿ, ಅಧ್ಯಾತ್ಮ ಜೀವಿಯಾದ ಕುವೆಂಪು ಸುಲಭಗ್ರಾಹ್ಯರಲ್ಲ. ಅವರು ವಿಚಾರವಾದಿ ನಿಜ, ಆದರೆ ಕೇವಲ ಭೌತವಾದಿಯಲ್ಲ. ಅಧ್ಯಾತ್ಮವಾದಿ ನಿಜ, ಆದರೆ ಕರ್ಮಠರಲ್ಲ. ಅಧ್ಯಾತ್ಮ ಜೀವಿ ನಿಜ, ಆದರೆ ಸಂನ್ಯಾಸಿಯಲ್ಲ. ನಿರಂಕುಶಮತಿಗಾಗಿ ಅವರು ನೀಡುವ ಕರೆ,ಆತ್ಮಶ್ರೀಗಾಗಿಯೇ ವಿನಾ ಭೌತಿಕ ರುಚಿಗಳ ಆರೈಕೆ, ಪೂರೈಕೆಗಳಿಗಾಗಿ ಅಲ್ಲ.
ಯಾವುದೇ ಅಧ್ಯಾತ್ಮ ತತ್ತ್ವದ ಅಂತಿಮ ಬಿಂದು ವ್ಯಕ್ತಿ ನಿಷ್ಠತೆ, ವ್ಯಕ್ತಿ ಉದ್ಧಾರ. ಸಮೂಹವನ್ನು ಇಡಿಯಾಗಿ ಉದ್ಧರಿಸುವ ಆಧ್ಯಾತ್ಮಿಕ ಸೂತ್ರ ಇಲ್ಲವೇ ಇಲ್ಲ. ಭಗವದ್ಗೀತೆಯಲ್ಲಿ ಹೇಳುವ “ಉದ್ಧರೇದಾತ್ಮನಾತ್ಮನಂ” ಎಂಬ ಮಾತು ಅಕ್ಷರಶಃ ನಿಜ. ವ್ಯಕ್ತಿ ಸ್ವತಃ ಉದ್ಧಾರವಾಗಬೇಕು. ವ್ಯಕ್ತಿ ವ್ಯಕ್ತಿಗಳು ಕೂಡಿ ಒಂದು ಸಮಾಜ. ವ್ಯಕ್ತಿಗಳ ಉದ್ಧಾರವೇ ಸಮಾಜದ ಉದ್ಧಾರ. ಕುವೆಂಪು ಅವರ ಕಾವ್ಯ, ಸಾಹಿತ್ಯ ಸೃಷ್ಟಿಯ ಮುಖ್ಯ ಸೂತ್ರವೂ ವ್ಯಕ್ತಿಯ ಆತ್ಮ ಸ್ವಾತಂತ್ರ್ಯಕ್ಕಾಗಿ ತುಡಿಯುವುದೇ ಆಗಿದೆ. ನಮ್ಮ ಉದ್ಧಾರಕ್ಕಾಗಿ ಯಾರೋ ಒಬ್ಬರು ದುಡಿಯುತ್ತಾರೆ ಎಂದು ಬಯಸುವಂತಿಲ್ಲ. ಎಲ್ಲರೂ ದುಡಿಯುತ್ತಲೇ ಅವರವರ ಹಾದಿಯಲ್ಲಿ ನಡೆದು, ಉದ್ಧಾರ ಕಂಡುಕೊಳ್ಳಬೇಕೆಂಬುದು ಅವರ ಕಾಣ್ಕೆ. ಹಾಗಾಗಿಯೇ ಅವರ ಸಾಹಿತ್ಯ ಸರ್ವಸ್ವದ ಸಾರವೇ ಆಗಿರುವ ಸಪ್ತ ಸೂತ್ರಗಳಲ್ಲಿ, “ಮತ ತೊಲಗಿ ಅಧ್ಯಾತ್ಮ ಮಾತ್ರ ವೈಜ್ಞಾನಿಕ ತತ್ತ್ವವಾಗಿ ಮಾನ್ಯತೆ ಪಡೆಯಬೇಕು ಹಾಗೂ ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು, ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾಗುವ ಎಲ್ಲವನ್ನೂ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ಪಡೆಯಬೇಕು” ಎಂದಿದ್ದಾರೆ.
ನೆಹರೂ ಎಂಬ ಸ್ವಾರ್ಥ ರಾಜಕಾರಣಿ ಮತ್ತು ನೇತಾಜಿ ಎಂಬ ಸ್ವಾತಂತ್ರ್ಯ ಸೇನಾನಿ
– ರಾಕೇಶ್ ಶೆಟ್ಟಿ
“ಸುಭಾಷ್ ಸೈನ್ಯವೇನಾದರೂ ಭಾರತಕ್ಕೆ ಬಂದರೆ ನಾನು ಕತ್ತಿ ಹಿಡಿದು ಹೋರಾಡುತ್ತೇನೆ”. ಹೀಗೆ ಹೇಳಿದ ಕಠಾರಿವೀರ ಯಾವುದೋ ಬ್ರಿಟಿಷನಲ್ಲ.ಗಾಂಧಿ ಪಕ್ಷದೊಳಗಿನ ಬ್ರಿಟಿಷ್ ಶ್ರೀಮಾನ್ ಚಾಚಾ ನೆಹರೂ.ಅಷ್ಟಕ್ಕೂ ನೆಹರೂವನ್ನು “ಗಾಂಧಿ ಪಕ್ಷದೊಳಗಿನ ಬ್ರಿಟಿಷ್” ಎಂದು ನಾನು ಕರೆಯುತ್ತಿಲ್ಲ.ಖುದ್ದು ನೆಹರೂ ಅವರ ಅಮೇರಿಕಾದ ಗೆಳೆಯನಾಗಿದ್ದ ಜಾನ್ ಕೆನೆತ್ ಗಾಲ್ಬ್ರೈತ್ ಬಳಿ “ಭಾರತವನ್ನು ಆಳುವ ಕಡೆಯ ಬ್ರಿಟಿಷ್ ನಾನೇ” ಎಂದು ಹೇಳಿಕೊಂಡಿದ್ದರು. (ಈ ಜಾನ್ ಎಂತ ಮಹಾನುಭಾವನೆಂದರೆ, ಭಾರತವು ಬ್ರಿಟಿಷ್ ಆಳ್ವಿಕೆಗೆ ಒಳಪಟ್ಟಿದ್ದು ಪುಣ್ಯ ಎನ್ನುವಂತ ಮನಸ್ಥಿತಿಯವ)
ಗಾಂಧಿ ಪಕ್ಷದೊಳಗಿನ ಬ್ರಿಟಿಷ್ ಎನ್ನಲಿಕ್ಕೆ ಇನ್ನೊಂದು ಸತ್ಯವೂ ಈಗ ಬಹಿರಂಗವಾಗಿದೆ.ಭಾರತವು ಸ್ವತಂತ್ರವಾಗಿ, ಸುಮಾರು ೨೦ ವರ್ಷಗಳ ಕಾಲ ನೇತಾಜಿ ಕುಟುಂಬದ ಮೇಲೆ ಶ್ರೀಮಾನ್ ನೆಹರೂ ಅವರ ಘನ ಸರ್ಕಾರ “ಗೂಢಚಾರಿಕೆ”ಯನ್ನು ಮಾಡಿದೇ ಎಂಬುದೇ ಆ ಸತ್ಯ.ಅದೂ ಬ್ರಿಟಿಷರ MI15 ಎಂಬ ಗೂಢಚಾರ ಸಂಸ್ಥೆಯೊಂದಿಗೆ ಸೇರಿಕೊಂಡು! ಹೀಗಿರುವಾಗ ನೆಹರೂ ತನ್ನನ್ನು ತಾನು “I am the last Englishman to rule in India.” ಎಂದಿದ್ದು ಸರಿಯಾಗಿಯೇ ಇದೆ ಅಲ್ಲವೇ? ಅಷ್ಟಕ್ಕೂ ಬ್ರಿಟಿಷರಿಗೆ ನೇತಾಜಿಯವರ ಮೇಲೆ ಗೂಢಚಾರಿಕೆ ಮಾಡಲಿಕ್ಕೆ ಕಾರಣಗಳಿದ್ದವು.ಆದರೆ ನೆಹರೂ ಮಹಾಶಯರಿಗೇನಿತ್ತು ಅಂತ ಕಾರಣ? “ಅಭದ್ರತೆ” ಭಾವವೇ?ನೇತಾಜಿಯವರು ತೈಪೆಯ ವಿಮಾನಾಪಘಾತದಲ್ಲಿ ಮರಣಹೊಂದಿದರು ಎಂದು ಸೃಷ್ಟಿಸಲಾಗಿದ್ದ ಸುದ್ದಿಯನ್ನು ಇತರರಂತೆ ನೆಹರೂ ಸಹ ನಂಬಿರಲಿಲ್ಲ.ಒಂದು ವೇಳೆ ಸ್ವತಂತ್ರ ಭಾರತಕ್ಕೆ ನೇತಾಜಿ ಕಾಲಿಟ್ಟರೆ,ಗಾಂಧೀಜಿಯ ಮರಣದ ನಂತರ ಏಕಮೇವಾದ್ವೀತಿಯನಂತಿರುವ ತನ್ನ ಕುರ್ಚಿ ಉಳಿಯುವುದಿಲ್ಲವೆಂಬ ಘೋರ ಸತ್ಯ ತಿಳಿದಿದ್ದರಿಂದಲೇ? ನೆಹರೂವಿಗೆ,ನೇತಾಜಿಯವರ ಮೇಲೆ ಅಂತದ್ದೊಂದು ಅಭದ್ರತೆ,ಈರ್ಷ್ಯೆ ಇರಲಿಲ್ಲವೆಂದಾದರೇ, ಬ್ರಿಟನ್ ಪ್ರಧಾನಿಯಾಗಿದ್ದ ಕ್ಲೆಮೆಂಟ್ ಆಟ್ಲಿಯವರಿಗೆ,ಸುಭಾಷ್ ರಷ್ಯಾದಲ್ಲಿ ಇರುವ ಬಗ್ಗೆ ಮತ್ತು ರಷ್ಯಾ ಮಿತ್ರಪಡೆಗಳಿಗೆ ನಂಬಿಕೆ ದ್ರೋಹ ಮಾಡಿದಂತೆ ಎಂಬಂತ ಸಾಲುಗಳಿರುವ ಪತ್ರವೊಂದನ್ನು ಬರೆದಿದ್ದರು ಎನ್ನುವುದು ಸುಳ್ಳೇ? ಅದೆಲ್ಲಾ ಬಿಡಿ.ಸ್ವಾತಂತ್ರ್ಯ ಸಿಕ್ಕ ನಂತರ ಐ.ಎನ್.ಎ ಸೈನಿಕರನ್ನು ನೆಹರೂ ನಡೆಸಿಕೊಂಡ ರೀತಿ ನೋಡಿ.ಆ ಸೈನಿಕರಿಗೆ ಭಾರತೀಯ ಸೈನ್ಯದಲ್ಲಿ ಕಾಲಿಡಲು ಬಿಡಲಿಲ್ಲ.ಪಿಂಚಣಿಗಾಗಿ ಆ ಸೈನಿಕರು ೧೯೭೭ರವರೆಗೂ ಕಾಯಬೇಕಾಯಿತು! ಆಜಾದ್ ಹಿಂದ್ ಸೈನಿಕರು ಭಾರತೀಯ ಸೇನೆ ಸೇರಿಕೊಂಡ ಮೇಲೆ ನೇತಾಜಿ ಪ್ರತ್ಯಕ್ಷವಾದರೇ,ಸೈನ್ಯ ಅವರ ಪರ ನಿಂತೀತೂ ಎಂಬ ಭಯವಿತ್ತೇ? ನೆಹರೂ ಅವರ ಈ ನಡೆಗಳನ್ನೆಲ್ಲ ಹೇಗೆ ಅರ್ಥೈಸಿಕೊಳ್ಳಬೇಕು?
ಪ್ರಸ್ಥಾನ: ಕಲ್ಕತ್ತಾದಿಂದ ಬರ್ಲಿನ್ನಿನ ವರೆಗೆ; ದಾಸ್ಯದಿಂದ ಮುಕ್ತಿಯವರೆಗೆ
– ಎಸ್.ಎನ್.ಭಾಸ್ಕರ್
ಕಲ್ಕತ್ತಾ ನಗರದ ಎಲ್ಗಿನ್ ರಸ್ತೆಯ ಮನೆಯೊಂದರಲ್ಲಿನ ಪ್ರತ್ಯೇಕ ಕೋಣೆ. ದಿನಾಂಕ ೧೬ ನೇ ಜನವರಿ, ಇಸವಿ ೧೯೪೧.
“ರಾಷ್ಟ್ರಂ ಧಾರಯತಾಂ ಧ್ರೃವಂ”
“ರಾಷ್ಟ್ರಂ ಅಶ್ವಮೇಧಃ”
ಇದು ಸಂಕಲ್ಪ. ಈ ಧೀರ ಸಂಕಲ್ಪ ಮನೆಮಾಡಿದ್ದ ಆ ವ್ಯಕ್ತಿ ಪದ್ಮಾಸನ ಹಾಕಿ ಕುಳಿತಿದ್ದಾರೆ. ಎಡಗೈನಲ್ಲಿ ಜಪಮಾಲೆ ಮನದಲ್ಲಿ ಪ್ರಣವಮಂತ್ರ. ಮುಚ್ಚಿದ ಕಣ್ಗಳ ಹಿಂದೆ ಅದೆಂತಹ ಉಜ್ವಲ ಭವಿತವ್ಯದ ನೋಟವಿತ್ತೋ..! ಅರಿಯಬಲ್ಲವರು ತಾನೇ ಯಾರಿದ್ದರು ?
ಮಂದಸ್ಮಿತ ಅಂತರ್ಮುಖಿಯಾದ ಮುಖಾರವಿಂದದ ನೆರಳಿನಲ್ಲಿ ಸ್ಪಷ್ಟ ನಿಲುವು ಅಪ್ರಯತ್ನಪೂರ್ವಕವಾಗಿ ನಳನಳಿಸುತಲಿತ್ತು. ಆಳವಾದ ಧ್ಯಾನ. ಜಪಮಾಲೆಯನ್ನು ಹಿಡಿದಿದ್ದ ಕೈ ಬೆರಳುಗಳನ್ನು ಹೊರತು ಪಡಿಸಿ ಇಡೀ ದೇಹ ನಿರ್ಲಿಪ್ತ. ಮನದಲ್ಲಿ ಜ್ವಾಲಾಮುಖಿಯೇ ಇದ್ದರೂ, ಹಿಮಾಲಯದ ಪರ್ವತದಂತೆ ಶಾಂತಸ್ಮಿತ. ಮುಂಜಾನೆಯ ಮೊಗ್ಗರಳುವಂತೆ ನಿಧಾನವಾಗಿ ಕಣ್ಣಗಳನ್ನು ತೆರೆಯುತ್ತಾರೆ. ಎದುರಿಗೆ ಗೋಡೆಯ ಮೇಲೆ ಸ್ವಾಮಿ ವಿವೇಕಾನಂದರ ಭಾವಚಿತ್ರ ಅದರ ಎಡಗಡೆಗೆ ರಾಮಕೃಷ್ಣ ಪರಮಹಂಸರು, ಬಲಗಡೆಗೆ ಮಹರ್ಷಿ ಅರವಿಂದರು. ತನ್ನೆರಡೂ ಕೈಗಳನ್ನೂ ಕಟ್ಟಿ ನಸುನಗುತ್ತಾ ನಿಂತಿದ್ದ ವಿವೇಕಾನಂದರ ಭಾವಚಿತ್ರವನ್ನೇ ನೋಡುತ್ತಾ ನಿಶ್ಚಲರಾಗಿ ಕುಳಿತೇ ಇದ್ದರು. ಅದೆಂತಹ ದಿವ್ಯ ಚೈತನ್ಯ, ದೇದೀಪ್ಯಮಾನವಾದ ಪ್ರಾಂಜ್ವಲ ಕಣ್ಗಳಲ್ಲಿ ಹೊಳೆಯುತ್ತಿದ್ದ ಅಚಲ ವಿಶ್ವಾಸ. ನೋಡುತ್ತಿದ್ದರೇ ಆ ಕಣ್ಗಳೆಂಬ ಸಾಗರದಲ್ಲಿ ಮುಳುಗೇ ಹೋಗುತ್ತೇವೆ. ಸೂಜಿಗಲ್ಲಿಗೆ ಸೆಳೆಯಲ್ಪಡುವ ಕಬ್ಬಿಣದ ಚೂರುಗಳಂತೆ ಸೆಳೆದು ಬಂಧಿಯಾಗುತ್ತೇವೆ. ಎಂತಹ ಆಕರ್ಷಣೀಯ ವ್ಯಕ್ತಿತ್ವ…!! ಕಣ್ತುಂಬಿ ಬಂತು ಮೂಡಿದ ಹನಿಗಳು ಧಳ ಧಳನೇ ಇಳಿಯತೊಡಗಿದವು ನೋಟ ಮಾತ್ರ ನಿಶ್ಚಲ..ನಿರ್ಲಿಪ್ತ. ರೋಮ ರೋಮಗಳಲ್ಲೂ ವಿದ್ಯುತ್ ಸಂಚಾರ. ಅವರ ನಿರ್ಧಾರ ಸಂಪೂರ್ಣವಾಗಿತ್ತು. ರೂಪುರೇಷೆಗಳು ಸಿದ್ದವಾಗಿದ್ದವು. ಇಟ್ಟ ಹೆಜ್ಜೆ ಹಿಂತೆಗೆದ ನಿದರ್ಶನ ಜಾಯಮಾನದಲ್ಲೇ ಇಲ್ಲವಲ್ಲ. “ರಾಷ್ಟ್ರಂ ಧಾರಯತಾಂ ದ್ರೃವಂ: ರಾಷ್ಟ್ರಂ ಅಶ್ವಮೇಧಃ:”.
ಚಾಚಾ… Oh My God… !!!
– ಅಶ್ವಿನ್ ಅಮೀನ್
ನವೆಂಬರ್ 14. ನೆಹರೂ ಜನ್ಮ ದಿನ. ನಾವು ಶಾಲಾ ದಿನಗಳಲ್ಲಿರುವಾಗ ನಮಗೆಲ್ಲ ಖುಷಿಯ ದಿನ.. ಕಾರಣ ಅಂದು ನಮ್ಮ ದಿನ.. ಮಕ್ಕಳ ದಿನ.. ಮನೋರಂಜನಾ ಕಾರ್ಯಕ್ರಮಗಳು, ಆಟೋಟ, ಸಿಹಿ ತಿಂಡಿ, ಅರ್ಧ ದಿವಸ ರಜಾ ಬೇರೆ.. !! ಆಹಾ ಮಕ್ಕಳಿಗೆ ಅದೇ ಚಂದ.. ಅಂದು ನಾವೆಲ್ಲಾ ‘ಚಾಚಾ…’ ಎನ್ನುತ್ತಾ ಶಿಕ್ಷಕರು ಕೊಟ್ಟ ಸಿಹಿ ತಿನ್ನುತ್ತಾ ಖುಷಿಪಡುತ್ತಿದ್ದೆವು.
ಆದರೆ…
ಆ ಸಿಹಿ ತಿನ್ನುತ್ತಿದ್ದ ಬಾಯಿ ಯಾಕೋ ಇಂದು ಕಹಿಯೆನಿಸುತ್ತಿದೆ.ಮತ್ತೆ ‘ಚಾಚಾ…’ ಎಂದು ಕೂಗಲು ಮನಸ್ಸೇ ಬರುತ್ತಿಲ್ಲ. ನೆಹರೂ ಹೆಸರು ಕೇಳಿದರೇನೇ ಏನೋ ಒಂದು ಆಕ್ರೋಶ, ಅಸಹ್ಯತನ…!ಅಂತಹ ಒಬ್ಬ ದುರ್ಬಲ ಪ್ರಧಾನಿಯನ್ನು ಭಾರತ ಹೊಂದಿತ್ತಾ ಎಂಬ ಬಗ್ಗೆ ಅನುಮಾನ.ಖಂಡಿತಾ ನಾನು ಬದಲಾಗಿಲ್ಲ.ನಾನು ಈಗಲೂ ಅದೇ ದೇಶ ಪ್ರೇಮಿ.ಆದರೆ ನನ್ನ ಜ್ಞಾನ ಬದಲಾಯಿತು.ನನ್ನ ಮುಂದಿದ್ದ ಸುಳ್ಳಿನ ಇತಿಹಾಸ ಕರಗುತ್ತಾ ಹೋದಂತೆ ನೆಹರೂ ಬಗೆಗಿನ ತೆರೆಮರೆಯ ರಹಸ್ಯಗಳು ಒಂದೊಂದಾಗಿ ಗೋಚರಿಸತೊಡಗಿದವು.ಆ ತೆರೆಯ ಹಿಂದೆ ಕಂಡದ್ದೆಲ್ಲ ಸ್ವಾರ್ಥದ,ನಾಚಿಕೆಗೇಡಿನ,ಅಸಹ್ಯಕರ,ಹೇಡಿ ಹಾಗೂ ಮೂರ್ಖತನದ ಪರಮಾವಧಿ…!
ಕಾಂಗ್ರೆಸ್ಸಿನ ಆಗಿನ ಅಧ್ಯಕ್ಷ ಮೋತಿಲಾಲರು ತನ್ನ ಮಗ ನೆಹರೂರವರನ್ನು ತನ್ನ ನಂತರ ಕಾಂಗ್ರೆಸ್ಸ್ ಅಧ್ಯಕ್ಷ ಪಟ್ಟಕ್ಕೇರಿಸಲು ಗಾಂಧೀಯ ಬೆನ್ನು ಬಿದ್ದಿದ್ದ ಕಾಲವದು.ಹಲವು ವರ್ಷಗಳ ಒತ್ತಡದ ನಂತರ ಗಾಂಧೀ ಮೊತಿಲಾಲರ ಹಠಕ್ಕೆ ಬಗ್ಗಲೇಬೇಕಾಯಿತು. ಉಕ್ಕಿನ ಮನುಷ್ಯ ವಲ್ಲಭ ಭಾಯಿ ಪಟೇಲರಿಗೆ ಬಹುಮತ ಇದ್ದ ಹೊರತಾಗಿಯೂ ಪಟೇಲ್ ಅವರನ್ನು ತಣ್ಣಗಾಗಿಸಿ ನೆಹರೂರವರನ್ನು ಕಾಂಗ್ರೆಸ್ಸ್ ಅಧ್ಯಕ್ಷ ಗಾದಿಯಲ್ಲಿ ಕೂರಿಸಿಯೇ ಬಿಟ್ಟರು.
ದಲಿತ ನಾಯಕರಿಗೆ ದಲಿತರ ಮೇಲೇಕಿಲ್ಲ ಕಾಳಜಿ?
– ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿಯ ಮುನ್ನಾ ಎರಡು ದಿನಗಳಲ್ಲಿ ದೇಶದ ಗೃಹ ಮಂತ್ರಿಗಳು, ಕರ್ನಾಟಕದ ಮುಖ್ಯಮಂತ್ರಿಗಳು ಸೇರಿ ನಾಲ್ವರು ರಾಜಕಾರಣಿಗಳು ಇದ್ದಕ್ಕಿದ್ದಂತೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ, ಕಾಳಜಿ ರಕ್ಷಣೆಯ ಮಾತುಗಳನ್ನಾಡಿದ್ದಾರೆ. ಪ್ರಮುಖವಾಗಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಮಾಯಕ ಮುಸ್ಲಿಂ ಯುವಕರನ್ನು ಬಂಧಿಸಬೇಡಿ ಎಂದಿದ್ದಾರೆ.
ಸಮಾಜವಾದಿ ಪಕ್ಷದ ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಪೊಲೀಸ್ನ ಹಾಲಿ ನಿರ್ದೇಶಕರಿಗೆ ಪತ್ರ ಬರೆದು ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲಿ 2 ರಿಂದ 3 ಮಂದಿ ಮುಸ್ಲಿಂ ಸಿಬ್ಬಂದಿಗಳನ್ನು ನೇಮಿಸುವಂತೆ ಆದೇಶಿಸಿದ್ದಾರೆ. ಅದೇ ರೀತಿ ಅಲ್ಪಸಂಖ್ಯಾತ ಸಮುದಾಯದ ಖಾತೆ ಪಡೆದಿರುವ ಕೆ. ರೆಹಮಾನ್ ಖಾನ್ ಕೂಡ ಮುಸ್ಲಿಂ ಯುವಕರನ್ನು ಬಂಧಿಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಇನ್ನು ಅಹಿಂದ ಹೋರಾಟದ ಹಿನ್ನೆಲೆಯಲ್ಲಿ ಬಂದಿರುವ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಮೇಲೆ ‘ಎಲ್ಲೋ’ ದೌರ್ಜನ್ಯ ನಡೆಸಿದರೆ ಪರಿಣಾಮ ನೆಟ್ಟಗೆ ಇರುವುದಿಲ್ಲವೆಂಬ ಕಠೋರ ಸಂದೇಶ ಕೊಟ್ಟಿದ್ದಾರೆ. ಹೀಗೆ ಒಂದು ಸಮುದಾಯದ ಬಗೆಗಿನ ಕಾಳಜಿ ವ್ಯಕ್ತಪಡಿಸುವ ಮೂಲಕ ಭಾರತದಲ್ಲಿ ದಲಿತರು ಕೂಡ ನಿತ್ಯವೂ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂಬುದನ್ನು ಮರೆತಿರುವ ಈ ನಾಯಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸುವುದು ಅನಿವಾರ್ಯವೆನಿಸುತ್ತಿದೆ.
ನನ್ನ ಗಾಂಧೀಜಿ
-ಬಿಂಧು ಮಾಧವಿ,ಹೈದರಾಬಾದ್
ಗಾಂಧೀಜಿ ನಮ್ಮೆಲ್ಲರಿಗೂ ಸೇರಿದವರು, ಹಾಗಿದ್ದರೂ ಏಕೆ ಈ ಶಿರೋನಾಮೆ ಎಂದು ಕೇಳುವಿರಾ? ಏಕೆಂದರೆ ಗಾಂಧೀಜಿ ಎನ್ನುತ್ತಿದ್ದಂತೆ ಒಬ್ಬೊಬ್ಬೊರಗೂ ಅವರದೇ ಆದ ಒಂದು ರೂಪು ಮನಸ್ಸಿನಲ್ಲಿ ಮೂಡುವುದು. ಗಾಂಧೀಜಿ ಎಂದರೆ ನನ್ನ ಮನಸ್ಸಿನಲ್ಲಿ ಬರುವ ಚಿತ್ರಗಳ ಬಗ್ಗೆ ಈ ಲೇಖನ, ಹಾಗಾಗಿ ಇದು, ನನ್ನ ಗಾಂಧೀಜಿ.
ಮಹಾತ್ಮಾ ಗಾಂಧಿ ಎನ್ನುತ್ತಿದ್ದಂತೆ ಒಂದೇ ಎರಡೇ ಹಲವಾರು ಚಿತ್ರಗಳು, ವಿಷಯಗಳು, ಕವಿತೆಗಳು ಮತ್ತು ಪುಸ್ತಕಗಳು ನನ್ನ ಮುಂದೆ ಬಂದು ನಿಲ್ಲುತ್ತವೆ. ಎಲ್ಲಿಂದ ಪ್ರಾರಂಭಿಸಲಿ? ಬಹುಶಃ ಕಣ್ಣಮುಂದೆ ಬಂದು ನಿಲ್ಲುವ ಮೊಟ್ಟಮೊದಲ ಚಿತ್ರ ರಿಚರ್ಡ್ ಅಟೆನ್ ಬರೋ ತೆಗೆದೆ ಆಂಗ್ಲ ಚಲನ ಚಿತ್ರ ’ಗಾಂಧಿ’ . ಅದರಲ್ಲಿನ ಗಾಂಧಿ ಪಾತ್ರಧಾರಿ ಬೆನ್ ಕಿಂಗ್ಸ್ಲೇ. ಅವರು ಯಾವತ್ತಿದ್ದರೂ ನಮ್ಮ ಪಾಲಿಗೆ ಗಾಂಧಿಯೇ ಹೊರತು ಬೆನ್ ಕಿಂಗ್ಸ್ ಲೇ ಅಲ್ಲ. ಅದರಲ್ಲಿನ ಚಾರ್ಲ್ಸ್ ನ ಪಾತ್ರ, ಕಸ್ತೂರಿ ಬಾ ಪಾತ್ರ, ಜಿನ್ನಾ ಎಲ್ಲರೂ ಪಾತ್ರಗಳಾಗಿ ಕಾಣುವರೇ ಹೊರತು, ಪಾತ್ರಧಾರಿಗಳು ಎಂದು ಎನಿಸುವುದಿಲ್ಲ. ಚಿಕ್ಕಂದಿನಿಂದಲೇ ನಮಗೆ ಈ ರೀತಿಯ ಚಿತ್ರಗಳನ್ನು ತೋರಿಸಿ ನಮಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ, ದೇಶಭಕ್ತಿಯ ಬಗ್ಗೆ, ಸಮಾನತೆಯ ಬಗ್ಗೆ ಅರಿವು ಮೂಡಿಸಿದ ನನ್ನ ತಂದೆ ತಾಯಿಗೆ ನಾನು ಎಂದೂ ಚಿರ ಋಣಿ. ಗಾಂಧೀಜಿ ಬ್ರಿಟಿಷರ ವಿರುದ್ಧ ಹೋರಾಡಿದರು, ಆ ಬ್ರಿಟಿಷರೇ ಏಕೆ ಇಡೀ ವಿಶ್ವವೇ ಗಾಂಧೀಜಿಯ ಮುಂದೆ ತಲೆಬಾಗಿತು. ನೋಡು ಒಬ್ಬ ಆಂಗ್ಲ ನಿರ್ದೇಶಕನು ಗಾಂಧಿ ಚಿತ್ರವನ್ನು ಎಷ್ಟರಮಟ್ಟಿಗೆ ತೆಗೆದಿದ್ದಾನೆ, ಅದನ್ನು ಆಂಗ್ಲ ಕಲಾವಿದ ಬೆನ್ ಕಿಂಗ್ಸ್ ಲೇ ಎಷ್ಟು ಸಮಂಜಸವಾಗಿ ಮಾಡಿದ್ದಾನೆ ಎಂದು ನನ್ನ ಅಮ್ಮ ಹೇಳಿದ ನುಡಿಗಳು ಇಂದಿಗೂ ನೆನಪಿದೆ. ಹಾಗಾಗಿ ನಾನೂ ಕೂಡ ನನ್ನ ಐದು ವರ್ಷದ ಮಗಳಿಗೆ ಇಂದು ಬೆಳಿಗ್ಗೆ youtube ನಲ್ಲಿ ಗಾಂಧಿ ಚಿತ್ರವನ್ನು ಹಾಗಿ ತೋರಿಸುತ್ತಿದ್ದೆ. ಅವಳೂ ಆಸಕ್ತಿಯಿಂದ ನೋಡುತ್ತಿದ್ದಳು, ಗೆಳೆಯರು ಬಂದು ಆಡಲು ಕರೆಯುವವರೆಗೆ!! ಒಂದು ವೇಳೆ ಅವಳು ಚಿತ್ರವನ್ನು ಕಡೆಯವರೆಗೆ ನೋಡಿದರೆ, ಅವಳು ಗಾಂಧೀಜಿಯನ್ನು ಏಕೆ ಕೊಂದರು ಎಂದು ಕೇಳುತ್ತಾಳೆ. ಐದು ವರ್ಷದ ಅವಳಿಗೆ ಸತ್ಯಕ್ಕಾಗಿ ಹೋರಾಡಿದವರಿಗೆ, ನ್ಯಾಯಕ್ಕಾಗಿ ಹೋರಾಡಿದ ಗಾಂಧಿತಾತನಿಗೆ ಈ ರೀತಿಯ ಅಂತ್ಯ ಎಂದು ತಿಳಿದರೆ, ಅವಳಿಗೆ ಸತ್ಯಕ್ಕೇ ಜಯ, ಎಂಬ ಮಾತಿನ ಮೇಲೆ ನಂಬಿಕೆಯೇ ಬರುವುದಿಲ್ಲ. ಹಾಗಾಗಿ ಚಿತ್ರವನ್ನು ಕೊನೆಯ ತನಕ ತೋರಿಸಬೇಕೇ ಬೇಡವೇ ಎಂಬ ಪ್ರಶ್ನೆ ನನ್ನ ಮುಂದೆ!
ಮುಸ್ಲಿಂ ಸಮುದಾಯದ ಉತ್ಪ್ರೇಕ್ಷಿತ ಕೊರಗುಗಳು
– ಪ್ರೇಮ ಶೇಖರ
“ಇಂದು ಈ ದೇಶದಲ್ಲಿ ಹಿಂಸೆ, ಹತ್ಯಾಕಾಂಡಗಳು ನಡೆದಿರುವುದು ಜಾತಿ ಸಮಾವೇಶ, ರ್ಯಾಲಿಗಳಿಂದಲ್ಲ. ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ಏರ್ಪಡಿಸಿಕೊಂಡು ಬಂದ ಹಿಂದೂ ಸಮಾಜೋತ್ಸವದಂತಹ ಸಮಾವೇಶಗಳು, ರ್ಯಾಲಿಗಳು ದೇಶವನ್ನು ಕಂಗೆಡಿಸಿದ್ದವು. ಹಲವು ಕೋಮುಗಲಭೆಗಳಿಗೆ, ಹಿಂಸೆಗಳಿಗೆ ಬಿಜೆಪಿ ಮತ್ತು ಆರೆಸ್ಸೆಸ್ನ ರ್ಯಾಲಿಗಳು ಕಾರಣವಾಗಿವೆ. ಅವು ಸಮಾಜವನ್ನು, ದೇಶವನ್ನು ಒಡೆದಿವೆ.”
ಉತ್ತರ ಪ್ರದೇಶದಲ್ಲಿ ಜಾತಿಯಾಧಾರಿತ ರ್ಯಾಲಿಗಳನ್ನು ನಿರ್ಬಂಧಿಸಿ ಕಳೆದ ಗುರುವಾರ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಮರುದಿನವೇ ಅಂದರೆ ಶುಕ್ರವಾರ ಪ್ರಕಟವಾದ ಕನ್ನಡ ದೈನಿಕವೊಂದರ ಸಂಪಾದಕೀಯದಲ್ಲಿ ಕಂಡುಬಂದ ಸಾಲುಗಳಿವು. ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ನಡೆಸಿಕೊಂಡು ಬಂದ ರ್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಹೇಳುವ ಈ ಸಂಪಾದಕೀಯ ಅಕ್ಬರುದ್ದೀನ್ ಒವೈಸಿಯಂತಹ ಮಂದಿಗಳು ಹದಿನೈದು ನಿಮಿಷಗಳಲ್ಲಿ ಹಿಂದೂಗಳನ್ನು ಮಟ್ಟಹಾಕುತ್ತೇವೆಂದು ಘೋಷಿಸುವ ರ್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಮೌನವಾಗಿದೆ.
ನನ್ನ ಅರಿವಿನ ಪ್ರಕಾರ ಈ ದೇಶ “ಒಡೆದದ್ದು” ೧೯೪೭ರಲ್ಲಿ ಮತ್ತು ಅದಕ್ಕೆ ಆರೆಸ್ಸೆಸ್ ಆಗಲೀ, ಬಿಜೆಪಿಯಾಗಲೀ ಏರ್ಪಡಿಸಿದ ರ್ಯಾಲಿಗಳು ಕಾರಣವಾಗಿರಲಿಲ್ಲ. ಬ್ರಿಟಿಷ್ ವಸಾಹತುಶಾಹಿ ಆಳರಸರ ಕೈಗೊಂಬೆಯಾಗಿ, ಅವರ ಸಕ್ರಿಯ ಸಹಕಾರದಿಂದ ಮುಸ್ಲಿಂ ಲೀಗ್ ನಡೆಸಿದ ರ್ಯಾಲಿಗಳು ಸಮಾಜವನ್ನು ಒಡೆದವು ಮತ್ತು ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಮುಸ್ಲಿಂ ಲೀಗ್ ಆಗಸ್ಟ್ ೧೬, ೧೯೪೬ರಂದು ಕಲ್ಕತ್ತಾ ನಗರದಲ್ಲಿ ಆಯೋಜಿಸಿದ “ಡೈರೆಕ್ಟ್ ಆಕ್ಷನ್ ಡೇ” ಎಂಬ ಕೋಮುವಾದಿ ರ್ಯಾಲಿ ಮತ್ತದು ಬಲಿತೆಗೆದುಕೊಂಡ ಸುಮಾರು ನಾಲ್ಕುಸಾವಿರ ಜೀವಗಳು ದೇಶದ ಐಕ್ಯತೆಗೆ ಅಂತಿಮ ಹೊಡೆತ ನೀಡಿ ಭಾರತ ಇಬ್ಬಾಗವಾಗಲು ಕಾರಣವಾದವು. ಭಾರತವಷ್ಟೇ ಇಬ್ಬಾಗವಾಗಲಿಲ್ಲ, ಮುಸ್ಲಿಂ ಲೀಗ್ನ ಮೂರ್ಖತನದಿಂದಾಗಿ ಉಪಖಂಡದ ಬಲಿಷ್ಟ ಮುಸ್ಲಿಂ ಸಮುದಾಯವೂ ಇಬ್ಬಾಗವಾಯಿತು. ೧೯೭೧ರಲ್ಲಿ ಅದು ಮೂರು ಭಾಗಗಳಾಗಿ ಹೋಳಾಗಿ ಮತ್ತಷ್ಟು ಕೃಶವಾಯಿತು. ಈ ಒಡೆಯುವಿಕೆಗೂ ಬಿಜೆಪಿಯಾಗಲೀ, ಆರೆಸ್ಸೆಸ್ ಆಗಲೀ ಕಾರಣವಾಗಿರಲಿಲ್ಲ.
ಮತ್ತಷ್ಟು ಓದು