ಗುಲ್ಬರ್ಗ ಜಿಲ್ಲೆ ಯಾವುದೇ ಕಲೆ/ಕಲಾವಿದರೂ ಇಲ್ಲದಂತಹಾ ಮರುಭೂಮಿಯೇ?
– ಅರುಣ್ ಜಾವಗಲ್
ಕಳೆದ ಕೆಲವು ದಿನಗಳಿಂದ ಕರ್ನಾಟಕ ಸರಕಾರ ಹಲವಾರು ಜಿಲ್ಲೆಗಳಲ್ಲಿ ಉತ್ಸವಗಳನ್ನ ನಡೆಸುತ್ತಿದೆ.ಈ ಕಾರ್ಯಕ್ರಮಗಳು ಕರ್ನಾಟಕದ ಜನರ ತೆರಿಗೆ ಹಣದಲ್ಲಿ ನಡೆಯುತ್ತವೆ. ಈ ಕಾರ್ಯಕ್ರಮಗಳಲ್ಲಿ ಮುಖ್ಯವಾಗಿ ಆಯಾ ಜಿಲ್ಲೆಯ ಮತ್ತು ನಮ್ಮ ನಾಡಿನ ಕಲಾವಿದರ ಕಾರ್ಯಕ್ರಮಗಳಿಗೆ ಅವಕಾಶವಿರಬೇಕು.ಆದರೆ ಆ ಪ್ರದೇಶದ ಮತ್ತು ನಮ್ಮ ನಾಡಿನ ಇತರೇ ಕಲಾವಿದರನ್ನ ಮರೆತಿರುವ ಸರಕಾರ ಹೊರ ರಾಜ್ಯದಿಂದ ಕಲಾವಿದರನ್ನ ಕರೆಸಿ ಉತ್ಸವಗಳನ್ನ ನಡೆಸುತ್ತಿದೆ.
ಕೆಲವು ದಿನಗಳ ಹಿಂದೆ ನಡೆದ ಬೀದರ್ ಉತ್ಸವದಲ್ಲಿ ಶೇಕಡಾ 90% ರಷ್ಟು ಕಾರ್ಯಕ್ರಮ ನಡೆಸಿಕೊಟ್ಟವರು ಬೀದರ್ ಜಿಲ್ಲೆಗಾಗಲೀ ಅಥವಾ ನಮ್ಮ ನಾಡಿಗೆ ಯಾವುದೇ ಸಂಭಂದವಿಲ್ಲದವರು.ಇದೀಗ ಇದೇ ತಿಂಗಳ 15 ರಿಂದ 17 ರ ವರೆಗೆ ಕರ್ನಾಟಕ ಸರಕಾರ ಗುಲ್ಬರ್ಗ ಉತ್ಸವವನ್ನ ಆಯೋಜಿಸಿದೆ.ಯಾವುದೇ ಅನುಮಾನವಿಲ್ಲದಂತೆ ಈ ಕಾರ್ಯಕ್ರಮಕ್ಕೂ ಸಹ ಪರಭಾಷಿಕರಿಗೆ ಬಹುಪರಾಕ್ ಹೇಳಲಾಗಿದೆ.