ವಿಷಯದ ವಿವರಗಳಿಗೆ ದಾಟಿರಿ

Posts tagged ‘ಚೀನಾ’

4
ಜುಲೈ

ಲಡಾಖ್‍ನಲ್ಲಿ ಚೀನೀ ಕಾಸೂ ಕೇಡು, ತಲೆಯೂ ಬೋಳು?

– ಪ್ರೇಮಶೇಖರ

ಭಾಗ – 2

ಜೂನ್ 15ರ ಘರ್ಷಣೆ ಮತ್ತು ಅದರಿಂದಾಗಿ ಎರಡೂ ಕಡೆ ಘಟಿಸಿದ ಪ್ರಾಣಹಾನಿಯಿಂದಾಗಿ ಉಂಟಾದ ವಿಷಮ ಪರಿಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ಭಾರತೀಯ ಮತ್ತು ಚೀನೀ ಸೇನೆಗಳ ನಡುವೆ ಜೂನ್ 22ರಂದು ಲೆಫ್ಥಿನೆಂಟ್ ಜನರಲ್ ಮಟ್ಟದ ಮಾತುಕತೆಗಳು ನಡೆದು, ಹತೋಟಿ ರೇಖೆಯಲ್ಲಿ ಮುಖ್ಯವಾಗಿ ಗಲ್ವಾನ್ ಕಣಿವೆಯಲ್ಲಿ ಶಾಂತಿ ಕಾಪಾಡಲು ಎರಡೂ ಪಕ್ಷಗಳು ಒಮ್ಮತಕ್ಕೆ ಬಂದವು.  ಜೂನ್ 6ರ ಒಪ್ಪಂದವನ್ನು ಚೀನಾ ಉಲ್ಲಂಘಿಸಿ ಘರ್ಷಣೆಗಳಿಗೆ ಕಾರಣವಾಗಿದ್ದರ ಹಿನ್ನೆಲೆಯಲ್ಲಿ ಹೊಸ ಒಪ್ಪಂದದ ಬಾಳಿಕೆಯ ಬಗ್ಗೆ ಪ್ರಶ್ನೆಗಳೆದ್ದರೂ ಈ ಬಾರಿ ಚೀನಾದಿಂದ ಹಿಂದಿನ ವಿಶ್ವಾಸಘಾತಕತನ ಮರುಕಳಿಸಲಾರದು ಎಂಬ ಆಶಾಭಾವನೆಯನ್ನೂ ಮೂಡಿಸುವ ಕಾರಣಗಳು ನಮ್ಮೆದುರಿಗಿದ್ದವು.

ವಸ್ತುಸ್ಥಿತಿಯನ್ನು ಹೊರಜಗತ್ತಿನಿಂದ ಮುಚ್ಚಿಡಲು ಚೀನಾ ಅದೆಷ್ಟೇ ಹೆಣಗಿದರೂ ಜೂನ್ ತಿಂಗಳಲ್ಲಿ ದೇಶದ ಆಂತರಿಕ ಸಂಕಷ್ಟಗಳು ಮಿತಿಮೀರಿದ ಬಗೆಗಿನ ವಿವರಗಳು ನಮಗೆ ತಿಳಿಯತ್ತಲೇ ಇವೆ. ಜೂನ್ 11ರಂದು ಆರಂಭವಾದ ವಾರ್ಷಿಕ ಮಳೆ ದೇಶದ ಮೂರನೆಯ ಎರಡು ಭಾಗಗಳಲ್ಲಿ ಅಗಾಧ ಪ್ರಮಾಣದ ಪ್ರವಾಹ ಮತ್ತು ಭೂಕುಸಿತಗಳನ್ನುಂಟು ಮಾಡುತ್ತಿದೆ.  ಇಂತಹ ಭಾರಿ ಮಳೆಯನ್ನು ಚೀನಾ ದೇಶ 1940ರ ನಂತರ ಕಂಡಿರಲಿಲ್ಲಂತೆ.  ಈ ಪ್ರಾಕೃತಿಕ ವಿಕೋಪ ಬೆಳೆಗಳಿಗೆ ವ್ಯಾಪಕ ಹಾನಿ ಮಾಡುವುದರ ಜತೆಗೆ ಸಾರಿಗೆ ಸಂಪರ್ಕವ್ಯವಸ್ಥೆಯನ್ನೂ ಹಾಳುಗೆಡವಿದೆ. ಇದು ಈಗಾಗಲೇ ಕೆಟ್ಟಿರುವ ಆಹಾರಪೂರೈಕೆಯನ್ನು ಮತ್ತಷ್ಟು ಬಿಗಡಾಯಿಸಿದೆ.  ಈ ನಡುವೆ ಯಾಂಗ್ಟ್‍ಝೆ ನದಿಗೆ ಕಟ್ಟಲಾಗಿರುವ ಬೃಹತ್ ಅಣೆಕಟ್ಟು ಕುಸಿಯುವ ಅಪಾಯ ಉಂಟಾಗಿದೆ. ಜಗತ್ತಿನ ಅತಿ ದೊಡ್ಡ ಅಣೆಕಟ್ಟುಗಳಲ್ಲೊಂದಾದ ಈ “ತ್ರೀ ಗಾರ್ಜಸ್ ಡ್ಯಾಮ್” ನಿಜಕ್ಕೂ ಕುಸಿದರೆ 24 ಪ್ರಾಂತ್ಯಗಳ ನಲವತ್ತು ಕೋಟಿ ಜನರ ಜೀವಗಳು ಅಪಾಯಕ್ಕೀಡಾಗುತ್ತವೆ.  ಅಪಾಯವನ್ನು ತಡೆಯುವ ಕ್ರಮವಾಗಿ ಅಣೆಕಟ್ಟೆಯ ಮೇಲಿನ ನೀರಿನ ಒತ್ತಡವನ್ನು ಕಡಿಮೆಗೊಳಿಸಲೆಂದು ಸರ್ಕಾರ ಜೂನ್ 29ರಂದು ಏಕಾಏಕಿ ಗೇಟ್‍ಗಳನ್ನು ತೆರೆದಿದೆ. ಆದರೆ ಮುನ್ಸೂಚನೆ ನೀಡದೆ ಹಾಗೆ ಮಾಡಿದ್ದರಿಂದಾಗಿ ನದಿಯುದ್ದಕ್ಕೂ ಉಕ್ಕಿದ ಪ್ರವಾಹಕ್ಕೆ ಹಲವಾರು ಹಳ್ಳಿ ಪಟ್ಟಣಗಳ ಲಕ್ಷಾಂತರ ಜನ ಸಿಲುಕಿಹೋದರು. ಪ್ರವಾಹ ಮತ್ರು ವಿದ್ಯುದಾಘಾತದಿಂದ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ.

ಇದರ ಜತೆಗೆ ಕೊರೋನಾ ಸೋಂಕು ದೇಶದೆಲ್ಲೆಡೆ ಮತ್ತಷ್ಥು ಉಗ್ರವಾಗಿದೆ. ರಾಜಧಾನಿ ಬೀಜಿಂಗ್ ದೊಡ್ಡ ವೂಹಾನ್ ಆಗಿ ಬದಲಾಗಿಹೋಗಿದೆ. ದಿನೇ ದಿನೇ ಅಂಕೆಮೀರಿ ಹೆಚ್ಚುತ್ತಲೇ ಇರುವ ಸೋಂಕಿತರನ್ನು ಉಪಚರಿಸಲು ರಾಜಧಾನಿಯ ಆಸ್ಪತ್ರೆಗಳಿಗೆ ಸಾಧ್ಯವಾಗುತ್ತಿಲ್ಲ.  ನಗರದ 70% ಜನತೆಗೆ ಆಹಾರಪದಾರ್ಥಗಳನ್ನು ಪೂರೈಸುವ ಮಾರುಕಟ್ಟೆಗಳು ಸೋಂಕಿನ ಪರಿಣಾಮವಾಗಿ ಜೂನ್ ಆರಂಭದಲ್ಲಿ ಮುಚ್ಚಲ್ಪಟ್ಟ ಕಾರಣ ಸಾಮಾನ್ಯ ಜನತೆ ಅತೀವ ಕಷ್ಥಕ್ಕೀಡಾಗಿದ್ದಾರೆ. ಈ ನಡುವೆ ಲಾಕ್‍ಡೌನ್ ಜಾರಿಗೊಳಿಸುವ ಅತ್ಯುತ್ಸಾಹದಲ್ಲಿಯೋ ಅಥವಾ ಸರ್ಕಾರೀ ಆದೇಶದ ಪಾಲನೆಯ ಮೇರೆಗೋ ಪೊಲೀಸರು ನಗರದ ಕೆಲವೆಡೆ ಜನರನ್ನು ಮನೆಗಳೊಳಗೆ ಕೂಡಿಹಾಕಿ ಅಪಾರ್ಟ್‍ಮೆಂಟ್ ಕಟ್ಟಡಗಳ ಪ್ರವೇಶದ್ವಾರಗಳನ್ನು ಕಬ್ಬಿಣದ ಪಟ್ಟಿಗಳಿಂದ ಬಂದ್ ಮಾಡಿದ ಕಾರಣ ಜನರ ಸಂಕಷ್ಟಗಳು ಇನ್ನಷ್ಟು ಹೆಚ್ಚಿವೆ. ಈ ನಡುವೆ ಕಮ್ಯೂನಿಸ್ಟ್ ಪಾರ್ಟಿಯ ನೇತಾರರಿಗಷ್ಟೇ ಮೀಸಲಾದ “ಮಿಲಿಟರಿ ಹಾಸ್ಪಿಟಲ್ 301”ಗೇ ಕೊರೋನಾ ಸೋಂಕು ಹರಡಿದ ಸುದ್ಹಿ ಬಂದಿದೆ.

ಮತ್ತಷ್ಟು ಓದು »

3
ಜುಲೈ

ಕಮ್ಯುನಿಸಂನ ಅಭದ್ರತೆ ಮತ್ತು ಅಸಹನೆಯೇ ಚೀನಾ ಆಕ್ರಮಣದ ಮೂಲ

– ಅಜಿತ್ ಶೆಟ್ಟಿ ಹೆರಂಜೆ

ಯಾವುದೇ ದೇಶ ಅಂತರರಾಷ್ಟ್ರೀಯ ವ್ಯಾಪಾರದಲ್ಲಿ ಪ್ರಭುತ್ವ ಸ್ಥಾಪಿಸಬೇಕಾದರೆ ಅದು ವ್ಯಾಪಾರ ನಡೆಸುವ ಮಾರ್ಗ ಸುರಕ್ಷಿತವಾಗಿರಬೇಕು ಮತ್ತು ಬಹುತೇಕ ಅದು ಆ ದೇಶದ ನಿಯಂತ್ರಣದಲ್ಲಿ ಇರಬೇಕು. ಈ ಭೂಮಿಯ ಮೇಲೆ ಶತಮಾನಗಳಿಂದಲೂ ಅಂತಾರಾಷ್ಟ್ರೀಯ ವ್ಯಾಪಾರ ಬಹುತೇಕ ಸಮುದ್ರ ಮಾರ್ಗದ ಮುಖಾಂತರವೇ ನೆಡೆದಿದ್ದು. ಇದರ ನಿಯಂತ್ರಣ ಯಾರ ಕೈಯಲ್ಲಿ ಇರುತ್ತದೆಯೋ ಅವರು ಜಗತ್ತಿನ ರಾಜಕೀಯವನ್ನು ನಿಯಂತ್ರಿಸುತ್ತಾರೆ. ಇದಕ್ಕೆ ಇತಿಹಾಸದಲ್ಲಿ ಅನೇಕ ಉದಾಹರಣೆಗಳು ಸಿಗುತ್ತವೆ. ನೆಪೋಲಿಯನ್ ಬೊನಪಾರ್ಟೆ ಇಂಗ್ಲೆಂಡನ್ನು ಸಾಮರಿಕವಾಗಿ ಬಗ್ಗುಬಡಿಯಲು ಆಗದ ಸಂದರ್ಭದಲ್ಲಿ ಅದರ ಆರ್ಥಿಕತೆಯ ನರಮಂಡಲವಾಗಿದ್ದ ಸಮುದ್ರ ವ್ಯಾಪಾರ ಮಾರ್ಗದ ಮೇಲೆ ದಿಗ್ಭಂಧನವನ್ನು ಹಾಕುತ್ತಾನೆ. ಇದು ಆ ಕಾಲದಲ್ಲಿ ಇಂಗ್ಲೆಂಡಿಗೆ ಬಲವಾದ ಹೊಡತವನ್ನೇ ಕೊಟ್ಟಿತ್ತು. ಯೂರೋಪ್ ಮತ್ತು ಪೂರ್ವ ರಾಷ್ಟ್ರಗಳ ನಡುವೆ ವಾಣಿಜ್ಯ ವ್ಯವಹಾರಗಳ ಸಂಪರ್ಕದ ಕೊಂಡಿಯಾಗಿದ್ದ ಕಾಂನ್‌ಸ್ಟಾಂಟಿನೋಪಲನ್ನು ಒಟ್ಟೋಮನ್ ತುರ್ಕರು ವಶಪಡಿಸಿಕೊಂಡಾಗ ಯುರೋಪಿಯನ್ನರಿಗೆ ಪೂರ್ವದ ಜೊತೆಗೆ ವ್ಯವಹಾರ ಮಾಡಲು ಹೊಸ ಮಾರ್ಗದ ಅನ್ವೇಷಣೆ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಯಿತು. ಹಾಗೆಯೆ ಇವತ್ತು ಚೀನಾ ಇಂತಹುದೇ ಒಂದು ಕೃತ್ಯಕ್ಕೆ ಕೈ ಹಾಕಿ ಕೈ ಸುಟ್ಟುಕೊಳ್ಳುತ್ತಿದೆ.

ಕಳೆದ ಕೆಲವು ದಿನಗಳಿಂದ ಲಡಾಕಿನ ಗಲ್ವಾನ್ ಸರೋವರದ ತೀರದಲ್ಲಿ ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಉಪದ್ರವ ಚೀನಾ ಇಡೀ ಜಗತ್ತಿನಲ್ಲಿ ತಾನು ವಿಶ್ವದ ಆರ್ಥಿಕ ಜಗತ್ತಿನ ಅನಭಿಶಕ್ತ ದೊರೆಯಾಗಬೇಕು ಎನ್ನುವ ಕೂಟ ನೀತಿಯ ಒಂದು ಚಿಕ್ಕ ಭಾಗ. ಇದು ಭಾರತ ಮತ್ತು ಚೀನಾದ ಒಂದು ಸಣ್ಣ ಗಡಿ ವಿವಾದ ಎಂದು ಭಾವಿಸಿದರೆ ಖಂಡಿತ ತಪ್ಪಾಗುತ್ತದೆ.

ಮತ್ತಷ್ಟು ಓದು »

6
ಜೂನ್

ಕಮ್ಯೂನಿಸ್ಟರು ಕಮ್ಯೂನಿಸಂನನ್ನು ಕೊಂದದ್ದು ಹೀಗೆ (ಭಾಗ – ೨)

– ಪ್ರೇಮಶೇಖರ

ಸುಂದರ ಕನಸೊಂದು ಹಳವಂಡವಾದ ದುರಂತಕ್ಕೆ ಮರುಗುತ್ತಾ…

ಥಾಮಸ್ ಹಾಬ್ಸ್, ಜಾನ್ ಲಾಕ್, ಜೀನ್ ಯಾಕ್ಸ್ ರೂಸೂ ಮುಂತಾದ ಸಾಮಾಜಿಕ ಒಪ್ಪಂದ ಸಿದ್ಧಾಂತದ ಪ್ರತಿಪಾದಕರ ಪ್ರಕಾರ ‘ಬಲವೇ ಹಕ್ಕು’ ಎಂಬ ಮಾನವತಾವಿರೋಧಿ ಅರಣ್ಯ ಕಾನೂನಿನಿಂದ ಅಶಕ್ತರನ್ನು ರಕ್ಷಿಸಿ, ಸಮಾಜದ ಎಲ್ಲರ ನಡುವೆ ಸಮಾನ ನ್ಯಾಯಹಂಚಿಕೆಗಾಗಿ ರಾಜ್ಯ ಸ್ಥಾಪನೆಗೊಂಡಿತಂತೆ. ಆದರೆ ಮಾನವಜನಾಂಗ ಮುಂದೆ ಹಿಡಿದ ದಾರಿಯಲ್ಲಿ ರಾಜ್ಯವೇ ಶೋಷಕನಾಗಿ ಬದಲಾದದ್ದನ್ನು ಇತಿಹಾಸ ಹೇಳುತ್ತದೆ. ಸಾಮಾಜಿಕ ಒಪ್ಪಂದಗಳ ಮೂಲಕ ಸಮಾನನ್ಯಾಯ ಹಂಚಿಕಾವ್ಯವಸ್ಥೆ ಸಾಧ್ಯವಾಗದೇ ಹೋದಾಗ, ಬಲವಂತದ ಮೂಲಕ, ರಕ್ತಪಾತದ ಮೂಲಕ ಅದು ಅಸ್ತಿತ್ವಕ್ಕೆ ಬರುತ್ತದೆಂದು ಭವಿಷ್ಯ ನುಡಿದ ಕಾರ್ಲ್ ಮಾರ್ಕ್ಸ್ ಒಬ್ಬ ವಾಸ್ತವವಾದಿ. ಅಂತಹ ವ್ಯವಸ್ಥೆಯನ್ನು ಚಿತ್ರಿಸಿದ ಕಮ್ಯೂನಿಸಂ ಒಂದು ಉದಾತ್ತ ಮಾನವಪರ ಚಿಂತನೆ. ಆದರೆ ವಾಸ್ತವವಾದಿ ರೂಪಿಸಿದ ಉದಾತ್ತ ಮಾನವಪರ ಸಿದ್ಧಾಂತ ತನ್ನ ಅವಾಸ್ತವವಾದಿ ಹಾಗೂ ಮಾನವವಿರೋಧಿ ಹಿಂಬಾಲಕರಿಂದಲೇ ಕಳಂಕ ಹಚ್ಚಿಸಿಕೊಂಡದ್ದೊಂದು ದುರಂತ. ಈ ಪ್ರಕ್ರಿಯೆ ಭಾರತದಲ್ಲಿ ಅನಾವರಣಗೊಂಡ ಬಗೆಯನ್ನು ಸಂಕ್ಷಿಪ್ತವಾಗಿ ಈಗಿಲ್ಲಿ ಹೇಳುತ್ತೇನೆ. ಮತ್ತಷ್ಟು ಓದು »

12
ಸೆಪ್ಟೆಂ

ಲಡಾಖ್ ಹಾಗು ಭಾರತೀಯ ಸೇನೆ

– ಪಲ್ಲವಿ ಭಟ್
ಬೆಂಗಳೂರು

ಇದೀಗಷ್ಟೇ ಸ್ವಾತಂತ್ರ್ಯ ದಿನ ಕಳೆದು ಹೋಗಿದೆ. ಪ್ರತಿ ವರುಷದಂತೆ ಈ ಬಾರಿಯೂ ಅದೇ ಸಂಭ್ರಮ ಸಡಗರದಿಂದ ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂಭ್ರಮಗಳೆಲ್ಲಾ ಮುಗಿಯುತ್ತಿದ್ದಂತೆ ಅದೊಂದು ವಾರ್ತೆ ನಮ್ಮ ವಾರ್ತಾಪತ್ರಿಕೆಗಳ ಮುಖಪುಟ ಸೇರಿಕೊಂಡಿತ್ತು. ಇನ್ನೂ ಮಾಸದ ನನ್ನ ಕೆಲ ಹೊಸ ನೆನಪುಗಳನ್ನು ಅದು ಕೆದಕತೊಡಗಿತು. “ಲಡಾಖ್‌’ನಲ್ಲಿ ಭಾರತ, ಚೀನಾ ಯೋಧರ ಸಂಘರ್ಷ: ಭಾರತದೊಳಗೆ ನುಗ್ಗಲು ಚೀನಾ ಸೈನಿಕರ ಯತ್ನ” ಎಂಬುದಾಗಿತ್ತು ಶೀರ್ಷಿಕೆ. ಲಡಾಖ್ ಪ್ರವಾಸ ಮುಗಿಸಿ ಇನ್ನೂ ೧೦ ದಿನಗಳಾಗಿಲ್ಲ. ಅಷ್ಟರಲ್ಲೇ ಇಂತಹ ವಾರ್ತೆಯನ್ನು ಓದಬೇಕಾಗಿ ಬಂತು. ಮತ್ತಷ್ಟು ಓದು »

18
ಆಗಸ್ಟ್

ಭಾರತದ ಮುಂದಿರುವ ಡೊಕ್ಲಮ್ ಸವಾಲು…

– ಶ್ರೇಯಾಂಕ ಎಸ್ ರಾನಡೆ

ಡೊಕ್ಲಮ್, ಭಾರತ-ಭೂತಾನ್-ಚೀನಾ ಮೂರು ದೇಶಗಳ ನಡುವಿನ ಬಹು ಆಯಕಟ್ಟಿನ 89 ಚದರ ಕಿಲೋಮೀಟರ್‍ಗಳ ವ್ಯಾಪ್ತಿಯಲ್ಲಿರುವ ಸಂಕೀರ್ಣ ಪ್ರದೇಶ. ಇದು ಭೂತಾನ್‍ನ ಪಶ್ಚಿಮ ಗಡಿ ಭಾಗದಲ್ಲಿದೆ. ಅಂದರೆ ಟಿಬೆಟ್‍ನ ಆಗ್ನೇಯ ದಿಕ್ಕಿನಲ್ಲಿದೆ. ಮುಖ್ಯವಾಗಿ ಇದು ಭಾರತಕ್ಕೆ ಮುಖ್ಯವಾಗಿರುವ ಚುಂಬಿ ಕಣಿವೆಯ ಸಂಯೋಗ ಸ್ಥಾನದಲ್ಲಿದೆ. ಅದು ಅಧಿಕೃತವಾಗಿ ಭೂತಾನ್‍ನ ಭೂಭಾಗ. ಅನೇಕ ಕಾರಣಗಳಿಂದ ಮೂರು ದೇಶಗಳಿಗೂ ಬಹುಮುಖ್ಯ ಭೂಪ್ರದೇಶ. ಈ ಪ್ರದೇಶದ ಮೇಲೆ ಹಿಡಿತ ಸಾಧಿಸುವುದೆಂದರೆ ಸಿಕ್ಕಿಂನ ಬಹು ಮೌಲ್ಯಯುತ ಚುಂಬಿ ಕಣಿವೆ, ಭೂತಾನ್ ಹಾಗೂ ಇನ್ನೂ ಮುಖ್ಯವಾಗಿ ಸಿಲಿಗುರಿ ಕಾರಿಡಾರ್ ಮುಖೇನ ಈಶಾನ್ಯ ಭಾರತದ ಎಲ್ಲಾ ಚಟುವಟಿಕೆಗಳ ಪ್ರತ್ಯಕ್ಷ ನಿಗಾ ಹಾಗೂ ಪರೋಕ್ಷವಾಗಿ ತಮ್ಮ ಹಿತಾಸಕ್ತಿಗಳಿಂದ ಪ್ರಾದೇಶಿಕ ಪ್ರಾಬಲ್ಯ ಪಡೆದಂತಾಗುತ್ತದೆ. ಹಾಗಾಗಿಯೇ ಇದು ಕೇವಲ ಮೇವು ಬೆಳೆಯುವ ಖಾಲಿ ಗುಡ್ಡದ ನಿಸ್ತೇಜ ಜಾಗವಲ್ಲ. ಮೂರು ದೇಶಗಳ ಮೇಲೆ ಪ್ರಾಬಲ್ಯ ಸಾಧಿಸಬಲ್ಲ ಶಕ್ತಿಯುಳ್ಳ ಆರ್ಥಿಕ, ರಾಜಕೀಯ, ರಾಜತಾಂತ್ರಿಕ ಮತ್ತು ಮಿಲಿಟರಿ ಕಾರಣಗಳಿಂದ ಶಕ್ತಿಸಂಪನ್ನವಾಗಿರುವ ಸುರಕ್ಷಿತ, ಅನುಕೂಲಕರ ತಾಣ. ಈ ಮೂಲಭೂತ ಉದ್ದೇಶದಿಂದ ಇದರ ಮೇಲೆ ಚೀನಾ ಹಾಗೂ ಭಾರತ ಅಪಾರ ಆಸಕ್ತಿ ವಹಿಸಿವೆ. ಮತ್ತಷ್ಟು ಓದು »

17
ಆಗಸ್ಟ್

ಚೀನಾದೊಂದಿಗೆ ಭಾರತಕ್ಕೆ ಯುದ್ಧ ಬೇಕೆ?

– ಶ್ರೇಯಾಂಕ ಎಸ್ ರಾನಡೆ

ಯುದ್ಧವಾಗಲಿದೆ. ಯುದ್ಧಕ್ಕೆ ಸನ್ನದ್ಧ. ಇನ್ನೇನು ಯುದ್ಧ ಆಗೇ ಬಿಟ್ಟಿತು. ನಾಳೆಯೇ ಯುದ್ಧ ಎಂಬಂತಹ ಪರಿಸ್ಥಿತಿಗಳು ಭಾರತ-ಚೀನಾದ ಮಧ್ಯೆ ಉದ್ಭವವಾಗಿರುವುದು ಇದೇ ಮೊದಲೇನಲ್ಲ. ಜನರ ಗಮನಕ್ಕಾಗಿ ಹಾತೊರೆಯುವ ಎರಡೂ ಕಡೆಯ ಆಕ್ರಮಣಕಾರಿ ಮಾಧ್ಯಮಗಳು, ಅವನ್ನೇ ನೆಚ್ಚಿಕೊಂಡು ವಾಸ್ತವತೆಯ ಕನಿಷ್ಟ ಮಾಹಿತಿಯೂ ಇಲ್ಲದ ದೇಶಭಕ್ತರು ಅದಾಗಲೇ ಯುದ್ಧಕ್ಕೆ ರಣಕಹಳೆಯನ್ನು ಮೊಳಗಿಸಿಯಾಗಿದೆ. ಇನ್ನು ಬಾಕಿಯಿರುವುದು ಕೇವಲ ಸೇನೆಗಳ ಗುಂಡಿನ ದಾಳಿಯಷ್ಟೇ! ಮತ್ತು ಭಾರತದ ಗೆಲುವಷ್ಟೇ. ಹೀಗೆ ಆಗಬೇಕೆನ್ನುವುದು ಎಲ್ಲಾ ಭಾರತೀಯರ ಆಸೆಯೂ ಕೂಡ. ಮತ್ತಷ್ಟು ಓದು »

15
ಡಿಸೆ

ಚೀನಿಯರ ಹೊಸ ಅವಿಷ್ಕಾರ.. ಬ್ರಹ್ಮಪುತ್ರ ಎಂಬ ವರುಣಾಸ್ತ್ರ..!

– ಸಂತೋಷಕುಮಾರ ಮೆಹೆಂದಳೆ.

image5(ನಮ್ಮಲ್ಲಿ ಯಾವೊಂದು ವಿಷಯವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ನೋಡುವ ಅಭ್ಯಾಸವೇ ಇದ್ದಂತಿಲ್ಲ. ಕಳೆದ ಒಂದೂವರೆ ದಶಕದ ಅವಧಿಯಲ್ಲಿ ಹಿಮಾಚಲ, ಅರುಣಾಚಲ, ಬಾಂಗ್ಲಾದೇಶ ಮತ್ತು ಅಸ್ಸಾಂ ವಲಯದಲ್ಲಿ ನಡೆದ ಆಕಸ್ಮಿಕ ಪ್ರವಾಹದ ಹಿನ್ನೆಲೆಯನ್ನು ಇಲ್ಲಿವರೆಗೂ ಕೆಲವೇ ಕೆಲವು ತಜ್ಞರು ಅದೊಂದು ವ್ಯವಸ್ಥಿತ ಸ್ಯಾಂಪಲ್ ದಾಳಿ ಎಂದು ಕಂಡುಕೊಂಡಿದ್ದಾರೆ. ಚುಕ್ಕೆಗೆ ಚುಕ್ಕೆ ಸರಿಯಾಗಿ ಸೇರಿಸಿದ್ದರೆ ಆಗಲೇ ವೃತ್ತ ಸಿದ್ಧವಾಗುತ್ತಿತ್ತು. ಅದಾಗಲೇ ಇಲ್ಲ. ಇಂತಹದ್ದೊಂದು ಕೃತಕ ಪ್ರಾಕೃತಿಕ ವಿಕೋಪ ಸೃಷ್ಠಿಸಿ ಅದಕ್ಕೆ ಪ್ರತಿಕ್ರಿಯೆ ತಿಳಿಯುವುದಷ್ಟೆ ಆಗ ಚೀನಾದ ಉದ್ದೇಶವಾಗಿತ್ತು. ಈಗ ಅದರ ನಿಜವಾದ `ವಾಟರ್‍ವಾರ್ ಸ್ಟ್ರಾಟಜಿ’ ಮುನ್ನೆಲೆಗೆ ಬರುತ್ತಿದೆ. ಅತಿ ಬುದ್ಧಿವಂತಿಕೆಯ ಈ ಯೋಜನೆ ಭವಿಷ್ಯದಲ್ಲಿ ಅನಾಹುತಕಾರಿಯಾದ ಆಯುಧವಾಗಿ ಬಳಕೆಯಾಗಲಿದೆ. ಅದೇ `ವಾಟರ್ ವಾರ್’ ಅರ್ಥಾತ್ ವರುಣಾಸ್ತ್ರ. ಇದನ್ನು ತಡೆಯಲು ನಮ್ಮ ಪ್ರಧಾನಿ ಮೋದಿ ಉಸಿರುಕಟ್ಟಿ ಕಾದುತ್ತಿದ್ದರೆ, ಇದಾವುದರ ಅರಿವೂ ಇಲ್ಲದ ಎಬುಜೀಗಳು ಸಾಕ್ಷಿಗಾಗಿ ತೂಬು ಕಿತ್ತುಕೊಳ್ಳುತ್ತಿದ್ದಾರೆ.) ಮತ್ತಷ್ಟು ಓದು »

18
ಮೇ

ಜಗತ್ತಿನ ಪ್ರಶ್ನೆಗಳಿಗೆ ನಿರುತ್ತರ ಕೊರಿಯ

– ರೋಹಿತ್ ಚಕ್ರತೀರ್ಥ

ಉತ್ತರ ಕೊರಿಯಾಫೆಬ್ರವರಿ 12, 2013. ಮಂಗಳವಾರ. ದೊಡ್ಡಣ್ಣ ಅಮೆರಿಕದ ಅಧ್ಯಕ್ಷ ಒಬಾಮ ಟಿವಿಗಳಲ್ಲಿ ಕಾಣಿಸಿಕೊಂಡು, “ಈ ಪ್ರಯತ್ನ ಕೂಡಲೇ ನಿಲ್ಲಬೇಕು. ಇಲ್ಲವಾದರೆ ತಕ್ಕ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ” ಅಂತ ಘೋಷಿಸಿದ್ದೇ ತಡ, ಒಂದರ ಹಿಂದೊಂದರಂತೆ ಘೋಷಣೆ, ಬೆದರಿಕೆಗಳ ಸುರಿಮಳೆ. ಜಪಾನ್, ದಕ್ಷಿಣ ಕೊರಿಯ, ರಷ್ಯ, ಇಂಗ್ಲೆಂಡ್, ಫ್ರಾನ್ಸ್, ಸಿಂಗಪುರ, ಮಲೇಷಿಯಾದಂತಹ ಹತ್ತುಹಲವಾರು ದೇಶಗಳ ಅಧ್ಯಕ್ಷರುಗಳು ತಮ್ಮ ಹೇಳಿಕೆಗಳನ್ನು ತಾರಕಸ್ವರದಲ್ಲಿ ಕೂಗಿ ಹೇಳಲು ಕ್ಯೂ ನಿಂತುಬಿಟ್ಟರು. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾ ಕಿ ಮೂನ್ ಕೂಡ, “ನಿಮ್ಮ ಪ್ರಯೋಗಗಳನ್ನು ಕೂಡಲೇ ಸ್ಥಗಿತಗೊಳಿಸಿ. ಇಲ್ಲವಾದರೆ ಪ್ರತಿರೋಧ ಎದುರಿಸಿ” ಅಂತ ಘಂಟಾಘೋಷವಾಗಿ ಹೇಳಿದರು. ಹೆಗಲಿಗೆ ಕೈಹಾಕಿ ಕುಶಲ ಕೇಳುವ ಗೆಳೆಯ ಚೀನಾ ಕೂಡ (ಒಳಗೊಳಗೆ ಬೆಂಬಲಿಸಿದರೂ), ಈ ಪರೀಕ್ಷೆಗಳನ್ನೆಲ್ಲ ಕೈಬಿಟ್ಟು ಸುಮ್ಮನಿದ್ದರೆ ಏನು ನಷ್ಟ? ಅಂತ ಆಪ್ತಸಲಹೆ ಕೊಟ್ಟು ಕೈತೊಳೆದುಕೊಂಡಿತು.

ಇಷ್ಟೆಲ್ಲ ಅಧ್ವಾನಕ್ಕೆ ಕಾರಣವಾಗಿದ್ದು ಉತ್ತರ ಕೊರಿಯ ಎಂಬ ದೇಶ, ತಾನೇ ಹೇಳಿಕೊಂಡಂತೆ – ಬಹಳ ಸಣ್ಣಪ್ರಮಾಣದಲ್ಲಿ ನಡೆಸಿದ, ಮಾಪಕಗಳಲ್ಲಿ 4.9ರಷ್ಟು ದಾಖಲಾದ ನ್ಯೂಕ್ಲಿಯರ್ ಪರೀಕ್ಷೆ. 2006ರ ಪರೀಕ್ಷೆಯ ಹತ್ತುಪಟ್ಟು, 2009ರ ಪರೀಕ್ಷೆಯ ಎರಡು ಪಟ್ಟು ಶಕ್ತಿಶಾಲಿಯಾಗಿದ್ದ ಈ ಪರೀಕ್ಷೆಯಿಂದ ಉತ್ತರ ಕೊರಿಯ ಅಮೆರಿಕೆಗೆ ತನ್ನ ತಾಕತ್ತು ತೋರಿಸಲು ಹೊರಟಿತ್ತು. ಗಾಯದ ಮೇಲೆ ಗೀರೆಳೆದಂತೆ, ಪರೀಕ್ಷೆ ನಡೆಸಿದ ಮೇಲೆ, “ನಮ್ಮ ವ್ಯವಹಾರಗಳಲ್ಲಿ ಪದೇಪದೇ ಮೂಗು ತೂರಿಸುವ ಅಮೆರಿಕಕ್ಕೆ ನಾವು ಕೊಡುತ್ತಿರುವ ಎಚ್ಚರಿಕೆ ಇದು. ಅದರ ಹಸ್ತಕ್ಷೇಪ ನಿಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಪರೀಕ್ಷೆಗಳನ್ನು ನಡೆಸುತ್ತ ಹೋಗುತ್ತೇವೆ” ಅಂತ ಹೇಳಿಕೆ ಕೂಡ ಬಿಡುಗಡೆ ಮಾಡಿತು. ಅಚ್ಚರಿಯ ಮಾತೆಂದರೆ “ಜಗತ್ತಿನ ಸೂಪರ್ ಪವರ್ ನಾಯಕನಾಗಿ ಹೊರಹೊಮ್ಮುತ್ತಿರುವ ನಮ್ಮ ದೇಶದ ಯುದ್ಧ ಸಿದ್ಧತೆಗೆ ಹೆದರಿ ಬಾಲಮುದುರಿ ಕುಂಯ್‍ಗುಡುತ್ತಿರುವ ಅಮೆರಿಕ” ಅಂತ ರಾಷ್ಟ್ರೀಯ ಚಾನೆಲ್‍ನಲ್ಲಿ ಬಂದ ಸುದ್ದಿಯನ್ನು ನೋಡಿ ಪ್ಯೊಂಗ್‍ಯಾಂಗಿನ ಬೀದಿಗಳಲ್ಲಿ ಜನ ಸಂಭ್ರಮಿಸಿ ಕುಣಿದರು! ದೇಶಪ್ರೇಮ ಎನ್ನುತ್ತೀರೋ, ಹಿಸ್ಟೀರಿಯ ಎನ್ನುತ್ತೀರೋ!

ಈ ಎಲ್ಲ ರಾಜಕೀಯ ಪ್ರೇರಿತ ರಾದ್ಧಾಂತ, ಗೊಂದಲಗಳನ್ನು ಬದಿಗಿಟ್ಟು ಈ ಕತೆಯ ಸುತ್ತ ಹಬ್ಬಿಬೆಳೆದ ಹುತ್ತವನ್ನು ತಡವುತ್ತ ಹೋದರೆ, ಕೊನೆಗೆ ನಮಗೆ ಹಾವು ಗೋಚರಿಸಬಹುದೋ ಏನೋ! ಹಾಗಾಗಿ, ಉತ್ತರ ಕೊರಿಯದ ಸುತ್ತ ಸುಮ್ಮನೆ ನಿಷ್ಪಕ್ಷಪಾತವಾಗಿ ಒಂದು ಸುತ್ತು ಹಾಕ್ಕೊಂಡು ಬರೋಣ, ಬನ್ನಿ. ಮತ್ತಷ್ಟು ಓದು »

5
ಜೂನ್

ಸಾರ್ಕ್ ಮಾತುಕತೆಯಡಿಯಲ್ಲಿ ಚೀನಾಕ್ಕೆ ಬೆವರಿಳಿಸಿದ ಮೋದಿ

– ರಾಘವೇಂದ್ರ ಎಂ.ಸುಬ್ರಮಣ್ಯ

ಮೋದಿವ್ಯವಹಾರವಲಯದಲ್ಲಿ ಒಂದು ಪದವಿದೆ “ಪರ್ಸ್ಟ್ಮೂವರ್ಸ್ಅಡ್ವಾಂಟೇಜ್” ಎಂದು. ಕನ್ನಡದಲ್ಲಿ ಸಡಿಲವಾಗಿ ‘ಮೊದಲ ನಡೆ ನಡೆಸುವವನಿಗಾಗುವ ಲಾಭ’ ಎಂದು ಅನುವಾದಿಸಬಹುದು. ಅಂದರೆ ಯಾರು ಮೊದಲ ಹೆಜ್ಜೆ ಇಡ್ತಾನೋ ಅವನಿಗೆ ಕೆಲವು ಅನುಕೂಲಗಳು/ಹೆಚ್ಚು ಅವಕಾಶಗಳು ಒದಗಿಬರುತ್ತದೆ. ಚೆಸ್ ಆಟದಲ್ಲಿ ಬಿಳಿಕಾಯಿ ನಡೆಸುವವನಿಗೆ ಮೊದಲ ತಂತ್ರವನ್ನು ಹೂಡಲು ಅವಕಾಶಸಿಗುವುದಿಲ್ಲವೇ? ಹಾಗೆ. ಕಪ್ಪುಕಾಯಿ ನಡೆಸುವವನಿಗೂ ತನ್ನದೇ ಆದ ತಂತ್ರ ಹೂಡುವ ಅವಕಾಶವಿದ್ದರೂ,ಅದು ಬಿಳಿಕಾಯಿಯವನ ನಡೆಗಳ ಮೇಲೆಯೇ ಅವಲಂಬಿತವಾಗುವ ಸಾಧ್ಯತೆಗಳೂ ಹೆಚ್ಚು. ಆ ಆಟಗಾರ ಬಿಳಿಕಾಯಿಗಳ ನಡೆಯನ್ನು ಅನುಸರಿಸುತ್ತಾ, ತನ್ನ ಕಾಯಿಗಳನ್ನು ರಕ್ಷಿಸುವ ಕಾರ್ಯದಲ್ಲಿ ನಿರತನಾಗುತ್ತಾನೆ. ಹಾಗೆಯೇ ವ್ಯವಹಾರ ಕ್ಷೇತ್ರದಲ್ಲಿ,ಮೊದಲ ನಡೆ ನಡೆಸುವವನಿಗೆ ಬಹಳಷ್ಟು ಅನುಕೂಲಗಳು ಒದಗಿಬರುತ್ತವೆ. ಮೊತ್ತ ಮೊದಲನೆಯದಾಗಿ, ಆತನಿಗೆ ಸ್ಪರ್ದಿಗಳೇ ಇರುವುದಿಲ್ಲ. ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಸುಲಭ ಅವಕಾಶ. ಒಮ್ಮೆ ಪ್ರಾಬಲ್ಯ ಸಾಧಿಸಿದರೆ,ಆತನ ಉತ್ಪನ್ನ ಉತ್ಕೃಷ್ಟಮಟ್ಟದ್ದಾಗಿದ್ದರೆ, ಬೇರೆ ಏನೂ ಮಾಡದೆ ವರ್ಷಾನುಗಟ್ಟಲೇ ಲಾಭವನ್ನು ಆನಂದಿಸಬಹುದು.

ಆದರೆ, ಖಂಡಿತವಾಗಿಯೂ ಲಾಭವಿದ್ದ ಮೇಲೆ ನಷ್ಟವಿದ್ದೇ ಇರುತ್ತದೆ. ಮೊದಲ ನಡೆ ನಡೆಸುವವನಿಗೆ ಅಗಾಧ ಧೈರ್ಯ ಬೇಕಾಗುತ್ತದೆ. ಅ ನಿಯಂತ್ರಿತ ಅಪಾಯ (ರಿಸ್ಕ್) ತೆಗೆದುಕೊಳ್ಳಬೇಕಾಗುತ್ತದೆ. ನಡೆಯಲ್ಲಿ ಸ್ವಲ್ಪವೇ ಎಡವಿದರೂ, ಅಪಾರ ನಷ್ಟಕ್ಕೀಡಾಗುತ್ತಾನೆ. ಇನ್ನೊಮ್ಮೆ ಎದ್ದು ನಿಲ್ಲಲೂ ಸಾಧ್ಯವಾಗದಷ್ಟು ವ್ಯವಹಾರ ಕುಸಿಯಬಹುದು. ನಿಯಂತ್ರಿತ ರಿಸ್ಕ್ ತೆಗೆದುಕೊಂಡು ಸಮಯಕ್ಕೆ ಸರಿಯಾಗಿ ನಡೆ ನಡೆಸುವವನೇ ಚಾಣಾಕ್ಷ ಮತಿ. ಮೋದಿ ತನ್ನ ಮೊದಲ ನಡೆಯಲ್ಲಿ ಎಷ್ಟೊಂದು ಹಕ್ಕಿಗಳನ್ನು ಬುಟ್ಟಿಗೆ ಹಾಕಿಕೊಂಡಿದ್ದಾರೆ ಎಂದು ಇನ್ನೂ ಅರಿತಿಲ್ಲದವರಿಗಾಗಿ ಇದೊಂದು ಸಣ್ಣಪ್ರಯತ್ನ:

ಭಾರತ ದಕ್ಷಿಣ-ಪೂರ್ವ ಏಷ್ಯಾದಲ್ಲಿ ಭಾರೀ ತೂಕದರಾಷ್ಟ್ರ (regional heavyweight). ಸುತ್ತಮುತ್ತಲಿನ ರಾಷ್ಟ್ರಗಳಲ್ಲಿ ಚೀನಾವನ್ನು ಬದಿಗಿಟ್ಟರೆ ತನ್ನ ಆರ್ಥಿಕ, ವೈಜ್ನಾನಿಕ ಹಾಗೂ ಸೈನಿಕ ಬಲದಿಂದ ಉಳಿದವರನ್ನು ಅಲುಗಿಸಬಲ್ಲದಷ್ಟು ಪ್ರಭಾವಿ. ಭಾರತ ತನ್ನ ಭಾರವನ್ನು ಉಳಿದವರ ಮೇಲೆ ಹೇರಿ ಯಾರನ್ನೂ ಹೆದರಿಸಲು ಪ್ರಯತ್ನಿಸಿಲ್ಲವಷ್ಟೆ. ಅದನ್ನು ಮಾಡಿದಲ್ಲಿ ನೆರೆಯ ರಾಷ್ಟ್ರಗಳನ್ನು ತನ್ನ ಮುಷ್ಟಿಯಲ್ಲಿಟ್ಟುಕೊಳ್ಳುವುದು ಕಷ್ಟದ ಕೆಲಸವೇನಲ್ಲ. ಆದರೆ ಭಾರತದ ಯಾವ ಸರ್ಕಾರವೂ ನೆರೆಯವರನ್ನು ಎಂದೂ ಹೆದರಿಸಿಲ್ಲ ಅಥವಾ ಅಕ್ರಮಣ ಮಾಡಿಲ್ಲ.ಬದಲಿಗೆ ಅದು ಎಲ್ಲರನ್ನೂ ಸ್ನೇಹಿತರೆಂದು ಪರಿಗಣಿಸಿ ಅವರಿಗೆ ಸಹಾಯ ಮಾಡಿದೆ.ಬೇರೆ ದೇಶಗಳು ನಮ್ಮ ಸಹಾಯವನ್ನು ಅದೇ ರೂಪದಲ್ಲಿ ಹಿಂದೆ ಕೊಟ್ಟಿಲ್ಲ, ಅದು ಬೇರೆ ಮಾತು ಬಿಡಿ. ಆದರೆ ಮೋದಿ ತನ್ನೆಲ್ಲಾ ನೆರೆರಾಷ್ಟ್ರಗಳನ್ನು ತನ್ನ ಮೊದಲ ದಿನದ ಕಾರ್ಯಕ್ರಮಕ್ಕೇ ಆಹ್ವಾನಿಸುವ ಮೂಲಕ, ಸ್ನೇಹ ಹಸ್ತವನ್ನು ಚಾಚಿದ್ದಾರೆ. ಮೇಲ್ನೋಟಕ್ಕೆ ಇದು ಬರೀ ಸ್ನೇಹ ಹಸ್ತದಂತೆ ಕಂಡರೂ,ಒಂದು ಮಟ್ಟಕ್ಕೆ ಕೆಳಗಿಳಿದು ನೋಡಿದಾಗ, ಮೋದಿ ಸತ್ತು ಹೋಗಿರುವ ಸಾರ್ಕ್ ಒಕ್ಕೂಟದಲ್ಲಿ ಒಂದು ಸಂಚಲನ ಮೂಡಿಸಿದ್ದಾರೆ ಎಂದು ತಿಳಿಯುತ್ತದೆ. ಅದರೊಂದಿಗೇ ‘ಈ ಏರಿಯಾದಲ್ಲಿ ಬಾಸ್ಯಾರು!?’ ಎಂದು ತೋರಿಸಿದ್ದಾರೆ. ಪ್ರಮಾಣ ವಚನ ಸಮಾರಂಭದ ನಂತರ ನಡೆದ ಹಲವಾರು ಚರ್ಚೆಗಳಲ್ಲಿ,ಅಧ್ಯಕ್ಷರ ಮಾತುಗಳಲ್ಲಿ ಈ ವಿಷಯ ಸ್ಪಷ್ಟವಾಗಿ ಎದ್ದುಕಾಣುತ್ತಿತ್ತು. ತಮಿಳರ ವಿರೋಧದ ನಡುವೆಯೂ ಶ್ರೀಲಂಕಾದ ಅಧ್ಯಕ್ಷನನ್ನು,ಹಲವಾರು ಬುದ್ದಿ(ಇರದ)ಜೀವಿಗಳ ಗೊಣಗಾಟದ ನಡುವೆಯೂ ಪಾಕಿಸ್ತಾನವನ್ನು ಆಹ್ವಾನಿಸುವ ಮೂಲಕ ಮೋದಿ ತನ್ನ ವಿದೇಶಾಂಗ ನೀತಿಯ ರೂಪು ರೇಷೆಯನ್ನು ಎತ್ತಿ ತೋರಿಸಿದ್ದಾರೆ.

ಮತ್ತಷ್ಟು ಓದು »

9
ಆಕ್ಟೋ

ಇತಿಹಾಸಕಾರರಿ೦ದ ಮರೆಯಾದ ಸಸ್ಯಶಾಸ್ತ್ರದ ಪಿತಾಮಹ, ನಮ್ಮೀ ಭೋಧಿಧರ್ಮ……

– ಶಂಕರ್ ನಾರಾಯಣ್

Bodhi Dharma N Oshoಸ್ವಾಮೀ ವಿವೇಕಾನ೦ದರು, ಚಿಕಾಗೋದಲ್ಲಿದ್ದ ಸಮಯ. ಅವರನ್ನು ಹಣಿಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿತ್ತು. ಮೇಲಿ೦ದ ಮೇಲೆ, ಪ್ರಶ್ನೆಗಳು ತೂರಿಬರುತ್ತಿದ್ದವು. ಅದೊ೦ದು ದಿನ ಒಬ್ಬ ಅಮೇರಿಕಾದ ಪ್ರಜೆಯೊಬ್ಬ, “ಬುದ್ಧನೇಕೆ ಧರ್ಮ ಪ್ರಸರಣೆಗಾಗಿ ಯುರೋಪು, ಅಮೇರಿಕಾಗಳಿಗೆ ಬರಲಿಲ್ಲ..!?” ಎ೦ದು ಕೇಳುತ್ತಾನೆ. ಅದಕ್ಕೆ, ವಿವೇಕಾನ೦ದರು, “ಬುದ್ಧನ ಕಾಲದಲ್ಲಿ ಯುರೋಪ್ ಎಲ್ಲಿತ್ತು..? ನಿನ್ನ ಅಮೇರಿಕಾ ಎಲ್ಲಿತ್ತು..? ಎನ್ನುತ್ತಾರೆ. ಹೌದು. ಚೀನಾವೂ ಸೇರಿ, ಪಾಶ್ಚಿಮಾತ್ಯ ದೇಶಗಳು ಕಣ್ಣುಬಿಡುವ ಮೊದಲೇ ಭಾರತ ಸುಸ೦ಸ್ಕೃತ ದೇಶವಾಗಿತ್ತು. ಭಾರತೀಯರಿಗೆ, ಚಿನ್ನ-ಬೆಳ್ಳಿಗಳ ಪರಿಚಯವಿತ್ತು. ಚಿನ್ನದ ಆಭರಣಗಳನ್ನು ಇಲ್ಲಿನ ಮಹಿಳೆಯರು ತೊಡುತ್ತಿದ್ದರು. ಇದಕ್ಕೆ ಉದಾಹರಣೆ ಎ೦ದರೆ, ಹರಪ್ಪ ಮತ್ತು ಮೊಹೆ೦ಜದಾರೋ ನಗರಗಳು. ನಾಗರೀಕತೆಗಳು. ಪಾಶ್ಚಿಮಾತ್ಯ ದೇಶೀಯರು, ಮರದಲ್ಲಿ ವಾಸಿಸುವ ಸ೦ಧರ್ಭದಲ್ಲಿ, ಒ೦ದು ವ್ಯವಸ್ಥಿತ ನಗರ ಭಾರತದಲ್ಲಿತ್ತು. ಖಗೋಳ ವಿಜ್ನಾನದಲ್ಲಿ ಆರ್ಯಭಟನೂ, ಆಯುರ್ವೇದದಲ್ಲಿ ಚರಕನೂ, ಶಸ್ತ್ರಚಿಕಿತ್ಸೆಯಲ್ಲಿ ಸುಶ್ರುತನೂ, ಅರ್ಥಶಾಸ್ತ್ರದಲ್ಲಿ ಚಾಣಕ್ಯನೂ ಹೀಗೆ ಒ೦ದೊ೦ದು ವಿಭಾಗದಲ್ಲಿ ಒಬ್ಬೊಬ್ಬರು ಪ್ರಖ೦ಡ ಜ್ನಾನಿಗಳಾಗಿದ್ದರು. ಭಾರತ ಬಿಟ್ಟರೆ, ಚೀನಾದಲ್ಲೂ ನಾಗರೀಕತೆಗಳು ಹುಟ್ಟಿಕೊ೦ಡಿದ್ದವು. ಆದರೆ, ಅವುಗಳನ್ನು ಹರಪ್ಪ, ಮೊಹೆ೦ಜದಾರೋಗಳೊ೦ದೆಗೆ ಹೋಲಿಸಲಾಗದು..

ಆದರೆ,

ಮತ್ತಷ್ಟು ಓದು »