ವಿಷಯದ ವಿವರಗಳಿಗೆ ದಾಟಿರಿ

Posts tagged ‘ಜಮ್ಮು ಕಾಶ್ಮೀರ’

6
ಜುಲೈ

ಅಂಬೇಡ್ಕರ್ ಅವರಿಗೂ ಬೇಡವಾಗಿತ್ತು ಆರ್ಟಿಕಲ್ 370

– ರಾಕೇಶ್ ಶೆಟ್ಟಿ

“ಮಿ.ಅಬ್ದುಲ್ಲಾ, ಭಾರತ ಕಾಶ್ಮೀರವನ್ನು ರಕ್ಷಿಸಬೇಕು, ಅಭಿವೃದ್ಧಿಗೊಳಿಸಬೇಕು ಮತ್ತು ಕಶ್ಮೀರಿಗಳಿಗೆ ಭಾರತದ ಇತರ ಪ್ರಜೆಗಳಂತೆಯೇ ಸಮಾನ ಹಕ್ಕುಗಳಿರಬೇಕೆಂದು ನೀವು ಬಯಸುತ್ತೀರ. ಆದರೆ, ಭಾರತ ಮತ್ತು ಭಾರತೀಯರಿಗೆ ಕಾಶ್ಮೀರ ರಾಜ್ಯದಲ್ಲಿ ಯಾವುದೇ ಹಕ್ಕುಗಳು ಇರಬಾರದು ಎನ್ನುತ್ತೀರ. ನಾನು ಭಾರತದ ಕಾನೂನು ಮಂತ್ರಿ, ನನ್ನ ದೇಶದ ಹಿತಾಸಕ್ತಿಯನ್ನು ನಾನು ಕಡೆಗಣಿಸಲಾರೆ… “, ಆರ್ಟಿಕಲ್ 370ರನ್ನು ಸಂವಿಧಾನದಲ್ಲಿ ಸೇರಿಸಿ ಜಮ್ಮು ಕಾಶ್ಮೀರದಲ್ಲಿ ಜಾರಿಗೊಳಿಸುವ ವಿಷಯದಲ್ಲಿ ಅಂಬೇಡ್ಕರ್ ಅವರನ್ನು ಒಪ್ಪಿಸಲು ನೆಹರೂ ಸಲಹೆ ಮೇರೆಗೆ ಬಂದಿದ್ದ ಶೇಖ್ ಅಬ್ದುಲ್ಲಾನ ಮುಖಕ್ಕೆ ಹೊಡೆದಂತೆ ಡಾ.ಅಂಬೇಡ್ಕರ್ ಅವರು ಹೇಳಿ ಕಳುಹಿಸಿದ್ದು ಹೀಗೆ. ಖುದ್ಧು  ಸಂವಿಧಾನ  ಶಿಲ್ಪಿಯೇ ವಿರೋಧಿಸಿದ್ದ ಈ ಆರ್ಟಿಕಲ್ 370ಯನ್ನು ಅಂದು ಅವರ ಬಾಯಿ  ಮುಚ್ಚಿಸಲು  “ತಾತ್ಕಾಲಿಕ” ಎಂಬ ಪದ ಬಳಸಲಾಯಿತು. ಹೆಂಡ ಕುಡಿದ ಮರ್ಕಟದಂತಾಡುತ್ತಿದ್ದ  ನೆಹರೂ  ಸಾಹೇಬರು, ತಮ್ಮ ಬಾಲವನ್ನು ಶೇಖ್ ಅಬ್ದುಲ್ಲಾನ ಕೈಗೆ ಇಟ್ಟಾಗಿತ್ತು. ಆರ್ಟಿಕಲ್  370  ಜಾರಿಯಾಗುತ್ತಿದಂತೆ ಹಿಂಬಾಗಿಲ ಮೂಲಕ ಅದಕ್ಕಿಂತಲೂ ಘೋರವಾದ ವಿಧಿ 35A ಅನ್ನು  ಜಮ್ಮು ಕಾಶ್ಮೀರಕ್ಕೆ ಅನ್ವಯಿಸಲಾಯಿತು. ಅಂದು ಅಂಬೇಡ್ಕರ್ ಅವರು ವಿರೋಧಿಸಿದ್ದ ಆರ್ಟಿಕಲ್ 370 ರದ್ಧತಿ ಬಗ್ಗೆ ಮಾತನಾಡುತ್ತಿರುವುದು ಕೇವಲ ಬಿಜೆಪಿ ಮಾತ್ರವೇ. ಹಾಗೂ ಇದನ್ನು ವಿರೋಧಿಸುವವರು ಕಾಂಗ್ರೆಸ್ ಇತ್ಯಾದಿ ಸೆಕ್ಯುಲರ್ ಪಕ್ಷಗಳು ಹಾಗೂ ಸೋ-ಕಾಲ್ಡ್ ಸಂವಿಧಾನ ರಕ್ಷಕರು…! ಮತ್ತಷ್ಟು ಓದು »

19
ಜೂನ್

ಮತಾಂಧರ ಮುಂದೆ ಸಧ್ಭಾವನೆಯ ಕನಸೇ?

-ರಾಕೇಶ್ ಶೆಟ್ಟಿ

images (1)ದಿನಾ ಸಾಯೋರಿಗೆ ಅಳೋರು ಯಾರು ಅನ್ನೋ ಗಾದೆ ಜಮ್ಮುಕಾಶ್ಮೀರ ರಾಜ್ಯದ ದಿನನಿತ್ಯದ ಹಿಂಸಾಚಾರಕ್ಕೆ ಹೇಳಿ ಮಾಡಿಸಿದಂತಿದೆ. ಆದರೆ ಈ ಗಾದೆಗೆ ಅಪವಾದವೆಂಬಂತೆ ಉಗ್ರರು, ಉಗ್ರರ ಸಿಂಪಥೈಸರ್ ಗಳು ಸತ್ತಾಗ ಅಳಲಿಕ್ಕೆ ದೇಶದಾದ್ಯಂತ ಗಂಜಿಗಿರಾಕಿಗಳು, ಸೆಕ್ಯುಲರ್ ಮಾಧ್ಯಮಗಳು ತಯಾರಾಗುತ್ತವೆ. ಆದರೆ ಕಣಿವೆಯಲ್ಲಿ ಪಾಕಿಗಳು ಗಡಿಯಾಚೆಯಿಂದ ನಡೆಸುವ ಅಪ್ರಚೋದಿತ ಗುಂಡಿನ ದಾಳಿಗೆ, ಉಗ್ರರ ದಾಳಿಗೆ ಬಲಿಯಾಗುವ ಭಾರತೀಯ ಯೋಧರಿಗೆ ಮಾತ್ರ ಈ ಭಾಗ್ಯವಿಲ್ಲ. ಇವರ ಸಾವಿನ ಸುದ್ದಿಗಳು ದಿನಪತ್ರಿಕೆಗಳಲ್ಲಿ ಕಾರ್ನರ್ ಸುದ್ದಿಯಾಗಿರುತ್ತದೆ. ಓದುವ ಜನರಿಗೂ ಇದೆಲ್ಲಾ ಅಲ್ಲಿ ಮಾಮೂಲು ಎನಿಸಿಬಿಡುತ್ತದೆ. ಆದರೆ, ಭುಜದೆತ್ತರಕ್ಕೆ ಬೆಳೆದು ನಿಂತ ಮಗನನ್ನು ಕಳೆದುಕೊಂಡ ಹೆತ್ತವರಿಗಷ್ಟೇ ಆ ನೋವಿನ ತೀವ್ರತೆ ತಟ್ಟುವುದು. ಅದೇ ನೋವಿನಲ್ಲಿ ಮಾತನಾಡಿದವರು ಹುತಾತ್ಮ ಯೋಧ ಔರಂಗಜೇಬ್ ತಂದೆ. ದೇಶಕ್ಕಾಗಿ ಪ್ರಾಣ ಕೊಡುತ್ತೇನೆಂದಿದ್ದ ನನ್ನ ಮಗ ತನ್ನ ಮಾತನ್ನು ಉಳಿಸಿಕೊಂಡಿದ್ದಾನೆ, ಅವನ ಸಾವಿಗೆ ತಕ್ಕ ಉತ್ತರವನ್ನು 72 ಗಂಟೆಗಳೊಳಗೇ ನೀಡಿ ಎಂದು ಪ್ರಧಾನಿ ಮೋದಿಯವರನ್ನು ಅವರು ಆಗ್ರಹಿಸಿದ್ದಾರೆ. ಮೊನ್ನೆ ರಂಜಾನ್ ಹಬ್ಬಕ್ಕೆಂದು ರಜೆಯಲ್ಲಿ ಮನೆಗೆ ತೆರಳುತ್ತಿದ್ದ ಯೋಧ ಔರಂಗಜೇಬ್ ರನ್ನು ಅಪಹರಿಸಿದ ಉಗ್ರಗ್ರಾಮಿಗಳು ತಲೆ, ಕತ್ತಿನ ಭಾಗಕ್ಕೆ ಗುಂಡಿಟ್ಟು ಕೊಂದಿದ್ದಾರೆ. ಅದೇ ದಿನ ರೈಸಿಂಗ್ ಕಾಶ್ಮೀರ್ ಎಂಬ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಮತ್ತವರ ಖಾಸಗಿ ಅಂಗರಕ್ಷಕರನ್ನು ಉಗ್ರರು ಕೊಂದಿದ್ದಾರೆ. ಇವೆಲ್ಲಾ ಕೇಂದ್ರ ಸರ್ಕಾರದ ತಲೆಕೆಟ್ಟ ನಿರ್ಧಾರವಾಗಿದ್ದ ಪವಿತ್ರ ತಿಂಗಳಲ್ಲಿ ಭದ್ರತಾಪಡೆಗಳ ಮೇಲೆ ಏಕಪಕ್ಷೀಯ ಕದನವಿರಾಮ ಹೇರಿಕೆಯ ಫಲ. ಮತ್ತಷ್ಟು ಓದು »

17
ಏಪ್ರಿಲ್

ಜಮ್ಮುವಿನ ಹಿಂದೂಗಳ ಮೇಲೆ ಕಣ್ಣಿಟ್ಟಿರುವ ಮಾಫಿಯಾಗಳು ಯಾವುವು?

– ರಾಕೇಶ್ ಶೆಟ್ಟಿ

೬ ವರ್ಷಗಳ ಹಿಂದೆ ದೆಹಲಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣವೊಂದು ಇಡೀ ದೇಶದ ಅಂತಃಕರಣವನ್ನೇ ಕಲುಕಿಹಾಕಿತ್ತು.ಸಾರ್ವಜನಿಕರು, ಭಿನ್ನ ಭಿನ್ನ ನಿಲುವುಳ್ಳ ಸಂಘಟನೆಗಳೆಲ್ಲ ಅಪರೂಪದ ಒಗ್ಗಟ್ಟು ಪ್ರದರ್ಶಿಸಿದ್ದ ಕೇಸು ಅದು.ದೆಹಲಿಯ ವಿದ್ಯಾರ್ಥಿಗಳು,ಸಾರ್ವಜನಿಕರು ನೋಡು ನೋಡುತ್ತಿದಂತೆಯೇ ರಾಷ್ಟ್ರಪತಿಭವನದ ರಸ್ತೆಗೆ ಮುತ್ತಿಗೆ ಹಾಕಿಬಿಟ್ಟಿದ್ದರು. ಹಾಗೆ ರಾಷ್ಟ್ರಪತಿ ಭವನದ ಮುಂದೆ ನಿಂತು ನ್ಯಾಯ ಕೇಳಿದ ಯುವಕ-ಯುವತಿಯರ ಮೇಲೆಯೇ ಲಾಠಿ ಚಾರ್ಜ್,ಜಲಫಿರಂಗಿ,ಅಶ್ರು ವಾಯು ಪ್ರಯೋಗವನ್ನು ಆಗಿನ ಯುಪಿಎ ಸರ್ಕಾರ ನಡೆಸಿ ಉರಿಯುವ ಬೆಂಕಿಗೆ ತುಪ್ಪ ಸುರಿದಿತ್ತು.ದೆಹಲಿಯಲ್ಲಿ ಹೊತ್ತಿಕೊಂಡ ಕಿಡಿ ದೇಶದ ಮೂಲೆಯಲ್ಲೂ ಪ್ರತಿಧ್ವನಿಸಿತ್ತು.ಮೊದಲು ಮೊದಲು ಮೊಂಡತನ ತೋರಿದ್ದ ದೆಹಲಿಯ ಶೀಲಾ ದೀಕ್ಷಿತ್ ಸರ್ಕಾರ ಆ ನಂತರ ತಲೆಬಾಗಿ,ಅತ್ಯಾಚಾರ ಪ್ರಕರಣಗಳ ಕುರಿತ ಕಾನೂನುಗಳ ಸುಧಾರಣೆಗೆ ನ್ಯಾ.ವರ್ಮಾ ಅವರ ನೇತೃತ್ವದ ಸಮಿತಿಯನ್ನು ನೇಮಿಸಿತ್ತು,ಅಂತಿಮವಾಗಿ Criminal Amendment Bill, 2013 ಹೊರಬಂದಿತ್ತು.

ಆ ಭೀಕರ ಅತ್ಯಾಚಾರ ಪ್ರಕರಣದ ಮುಖ್ಯ ಆರೋಪಿಗಳೆಲ್ಲ ಆತ್ಮಹತ್ಯೆ ಮಾಡಿಕೊಂಡು ತೊಲಗಿದ್ದಾರಾದರೂ,ಅತ್ಯಾಚಾರಿಗಳ ಅತಿಕ್ರೂರಿ ಎನಿಸಿಕೊಂಡಿದ್ದವ ಮಾತ್ರ ‘ಅಪ್ರಾಪ್ತ’ ಎಂಬ ಸ್ಲೇಟು ಹಿಡಿದು ಇಂದಿಗೂ ಎಲ್ಲೋ ಬದುಕಿಕೊಂಡಿದ್ದಾನೆ. ಜೈಲಿನಿಂದ ಬಿಡುಗಡೆಯಾಗಿ ಬಂದವನಿಗೆ ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಸರ್ಕಾರವೇ ಜೀವನಕ್ಕೆ ವ್ಯವಸ್ಥೆ ಮಾಡಿಕೊಟ್ಟಿತ್ತು. ಇಡೀ ದೇಶದಲ್ಲಿ ಕಿಚ್ಚು ಹಚ್ಚಿಹೋದ ಆ ಹೆಣ್ಣುಮಗಳ ನಿಜವಾದ ಹೆಸರು ಬಿಬಿಸಿ ಸುದ್ದಿ ಸಂಸ್ಥೆ ಹೇಳುವ ತನಕ ಜನಸಾಮಾನ್ಯರಿಗೆ ಗೊತ್ತಿರಲಿಲ್ಲ. ದೇಶ ಆ ಹೆಣ್ಣುಮಗಳಿಗೆ ‘ನಿರ್ಭಯ’ ಎಂಬ ಹೆಸರಿಟ್ಟಿತ್ತು. ಈ ದೇಶದ ಎಷ್ಟೋ ತಾಯಂದಿರು ಆಕೆಗಾದ ಅನ್ಯಾಯ ತಮ್ಮದೇ ಕುಟುಂಬದವರ ಮೇಲಾದ ಅನ್ಯಾಯವೆಂಬಂತೆ ಮರುಗಿದರು,ಬೀದಿಗಿಳಿದರು.ಹಾಗೆ ಬೀದಿಗಿಳಿದವರಿಗೆ ನಿರ್ಭಯಳ ಜಾತಿ ಯಾವುದು,ರಿಲಿಜನ್ ಯಾವುದು? ಆಕೆಯ ಹಿಂದುವೋ?ಮುಸ್ಲಿಮೋ?ಕ್ರಿಶ್ಚಿಯನ್ನೋ?ಇದ್ಯಾವುದರೋ ಪರಿವೆಯೂ ಇರಲಿಲ್ಲ. ಮುಖ್ಯವಾಗಿ ಅದರ ಅವಶ್ಯಕತೆಯೂ ಇರಲಿಲ್ಲ. ಇಡೀ ದೇಶ ಆ ಹೆಣ್ಣುಮಗಳ ನೋವಿಗೆ ಜೊತೆಯಾಗಿ ನಿಂತಿದ್ದು ಆಕೆಯ ಮೇಲಾದ ದೌರ್ಜ್ಯನ್ಯಕ್ಕಾಗಿ,ಆಕೆಯ ಪ್ರಾಣ ತೆಗೆದ ರಾಕ್ಷಸರಿಗೆ ಶಿಕ್ಷೆಯಾಗಲೇ ಬೇಕೆಂಬ ಏಕೈಕ ಕಾರಣಕ್ಕಾಗಿ!

ಮತ್ತಷ್ಟು ಓದು »

30
ಜನ

ಮರೆತರೆ ಕ್ಷಮಿಸಿದಂತೆ ಆದೀತು,ಎಚ್ಚರ!

– ಭರತ್ ಶಾಸ್ತ್ರೀ

ಈ ವರ್ಷದ ಗಣರಾಜ್ಯೋತ್ಸವಕ್ಕೆ ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಪೋಲಿಸರ ಸರ್ಪಕಾವಲಿನಲ್ಲಿ ಧ್ವಜಾರೋಹಣ ನಡೆಸಲಾಯಿತು, ಜತೆಗೆ ಶ್ರೀನಗರದ ಲಾಲ್ ಚೌಕ್ ದಲ್ಲಿ ಧ್ವಜ ಹಾರಿಸಲಿಲ್ಲ ಎಂಬ ಕಳವಳಕಾರಿ ಸುದ್ದಿಯೂ ಬಂತು. ಈ ಹಿನ್ನೆಲೆಯಲ್ಲಿ ಜನವರಿ 24, 2010 ರ “ದಿ ಪಯೊನೀರ್” ಪತ್ರಿಕೆಯಲ್ಲಿ ಖ್ಯಾತ ಅಂಕಣಕಾರ ಕಾಂಚನ್ ಗುಪ್ತಾ ಅವರ To forget would be to forgive ಎಂಬ ಮನಕಲಕುವ ಲೇಖನದ ಸಾರಾಂಶವನ್ನು ಓದುಗರಿಗೆ ಕೊಡುವ ಪ್ರಯತ್ನವನ್ನು ಮಾಡುತ್ತಿದ್ದೇನೆ. 60 ವರ್ಷ ತುಂಬಿದ ನಮ್ಮ ಗಣರಾಜ್ಯದಲ್ಲಿ ಇಂತಹ ದೌರ್ಜನ್ಯ ನಮ್ಮ ಮಾಧ್ಯಮಗಳ ಕಣ್ಣಿಗೆ ಏಕೆ ಕಾಣುವುದಿಲ್ಲ ಎಂಬ ನನ್ನ ಹತಾಶೆಯನ್ನು ಓದುಗರೊಂದಿಗೆ ಹಂಚಿಕೊಳ್ಳಲು ಇಚ್ಚಿಸುತ್ತೇನೆ. ಮತ್ತಷ್ಟು ಓದು »

9
ಆಕ್ಟೋ

ಪಾಕಿಸ್ತಾನ್, ಹುರಿಯತ್ ಮತ್ತು ನಮ್ಮ ಬುದ್ಧಿಜೀವಿಗಳು!!

– ಪ್ರದೀಪ್ ತ್ಯಾಗರಾಜ

ಎನ್.ಎಸ್.ಎಬಹುಶಃ ಭಾರತದ ಜನ ಸಾಮಾನ್ಯರೆಲ್ಲರೂ ಒಕ್ಕೊರಲಿನಿಂದ ಹೇಳುವ ಮಾತೊಂದೇ, ಅದೇ ಪಾಕಿಸ್ತಾನ್ ಎನ್ನುವುದು ಒಂದು ದೊಡ್ಡ ದುರಂತ. ಈ ಪಾಕಿಸ್ತಾನ ಎಂಬುದು ಒಂದು ಭಿಕ್ಷುಕರ ದೇಶ ಅಂದರೂ ತಪ್ಪಲ್ಲ. ಯಾವುದೇ ದೇಶ ಕೂಡ ಪಾಕಿಸ್ತಾನದೊಂದಿಗೆ ಸಂಬಂಧ ಹೊಂದಿ ಉದ್ಧಾರ ಆದ ಉದಾಹರಣೆಗಳಿಲ್ಲ. ಇಷ್ಟಕ್ಕೂ ಭಯೋತ್ಪಾದನೆಯೊಂದನ್ನು ಬಿಟ್ಟರೆ, ಆ ದೇಶಕ್ಕೆ ತಮ್ಮನ್ನು ಮಾರ್ಕೆಟ್ ಮಾಡಿಕೊಳ್ಳುವಂಥ ಇನ್ನೊಂದು ವಸ್ತುವಿಲ್ಲ. ಈ ದೇಶದ ಪರಿಸ್ಥಿತಿ ಹೇಗಿದೆಯಂದರೆ, ಪ್ರಜಾಪ್ರಭುತ್ವವನ್ನು ಹೇರಿಕೆಯೆಂಬ ರೀತಿ ಒಪ್ಪಿಕೊಳ್ಳುವ ವಿಷಮ ಸ್ಥಿತಿ ತಲುಪಿದ್ದಾರೆ. ಮಾತು ಮಾತಿಗೂ, ಪಶ್ಚಿಮ ರಾಷ್ಟ್ರಗಳ ಬಳಿಹೋಗಿ, ತಮ್ಮ ದೇಶಕ್ಕೆ ಸಹಾಯ ಹಸ್ತ ಚಾಚಿ ಎಂದು ಅಂಗಲಾಚುವುದರಲ್ಲೇ ಇವರು ಬರೋಬ್ಬರಿ ೬೫ ವರ್ಷಗಳನ್ನು ನಮ್ಮ ಭಾರತ ದೇಶದೊಂದಿಗೆ ಸವೆಸಿದ್ದಾರೆ. ನಮ್ಮ ದೇಶದಲ್ಲಿ ರಾಹುಲ್ ಗಾಂಧಿ ಎಂಬೋ ಮಹಾನ್ ಬುದ್ಧಿವಂತನಿಗೆ ಎಷ್ಟು ಮರ್ಯಾದೆ ಇದೆಯೋ, ಅಷ್ಟೇ ಮರ್ಯಾದೆ ಆ ನವಾಜ್ ಷರೀಫ್ ಎಂಬ ವ್ಯಕ್ತಿಗೆ ಪಾಕಿಸ್ತಾನದಲ್ಲಿ ಇದೆ. ಆ ದೇಶದ ನಿಜವಾದ ಆಡಳಿತವಿರುವುದೇ ಅವರ ಸೈನ್ಯಕ್ಕೆ. ೧೯೪೭ ರಿಂದಲೂ ಇದೆ ರೀತಿ ನಡೆದು ಬರುತ್ತಿದೆ. ಈ ಸಂಧರ್ಭದಲ್ಲಿ, ಈ ಹುರಿಯತ್ ಎನ್ನುವ ಸಂಘಟನೆ ಕೂಡ, ತನ್ನ ಬೇಳೆ ಬೇಯಿಸಿಕೊಳ್ಳಲು ಶುರು ಮಾಡಿದೆ. ಇದರ ಪರಿಣಾಮ ಭಾರತ ದೇಶದ ಹಲವಾರು ಬುದ್ಧಿಜೀವಿಗಳು ತಮ್ಮ ಅತಿ-ಬುದ್ಧಿವಂತಿಕೆಯನ್ನು ಪ್ರದರ್ಶಿಸಲು ಮುಂದಾಗಿರುವುದೇ ನಮ್ಮ ದೇಶದ ದುರಂತ.

ಇಷ್ಟೆಲ್ಲಾ ಹುಳುಕು ತುಂಬಿರುವ ಪಾಕಿಸ್ತಾನ ಎಂಬ ದೇಶದ ಬಗ್ಗೆ, ನಮ್ಮ ಬುಜೀಗಳ ಕಲ್ಪನೆ ನಿಜಕ್ಕೂ ಅದ್ಭುತ. ನಿಜಕ್ಕೂ ಆ ದೇಶದೊಂದಿಗೆ ಮಾತುಕತೆ ನಡೆಸಬೇಕಂಬ ಇವರ ಆಲೋಚನೆ ನಿಜಕ್ಕೂ ಆಘಾತಕಾರಿ. ಇಷ್ಟಕ್ಕೂ ಏನೂ ಸರಿಯಿಲ್ಲದ ಆ ದೇಶದ ಜೊತೆ ಮಾತನಾಡಲು ಏನಿದೆ? ಒಂದು ಪ್ರಜಾಪ್ರಭುತ್ವ ಸರ್ಕಾರದ ಮಾತನ್ನು ಕೇಳುವ ತಾಳ್ಮೆಯಾಗಲಿ, ಅಥವಾ ಸಂಯಮವಾಗಲಿ ಇಲ್ಲ. ಒಂದು ಸರ್ಕಾರ ಕೊಟ್ಟ ನಿರ್ಧಿಷ್ಟ ಅಂಶಗಳ ಬಗ್ಗೆ ಮಾತುಕತೆ ನಡೆಸುವಲ್ಲಿ ತಯಾರಿಲ್ಲ.

ಮತ್ತಷ್ಟು ಓದು »

15
ಜನ

ವಿಧಿ 370 – ಚರ್ಚೆ

– ಪ್ರವೀಣ್ ಪಟವರ್ಧನ್

Jammu Kashmir- Debate on Article 370ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರು ಜಮ್ಮುವಿನಲ್ಲಿ ನಡೆದ ಇತ್ತೀಚೆಗಿನ ಸಮಾವೇಶದಲ್ಲಿ ನಮ್ಮ ದೇಶದ ಮೊದಲ ಪ್ರಧಾನ ಮಂತ್ರಿಯವರ ನಿಲುವನ್ನು ಪ್ರಶ್ನಿಸಿದ್ದಾರೆ. ಡಾ|| ಶ್ಯಾಮಾ ಪ್ರಸಾದ್ ಮುಖರ್ಜೀ ಯವರ ಜಮ್ಮು ಕಾಶ್ಮೀರದಲ್ಲಿನ ಹೋರಾಟವನ್ನು, ಬಲಿದಾನವನ್ನು (ನಿಗೂಢ ಸಾವು ಎಂದರೆ ತಪ್ಪಾಗಲಾರದು) ನೆನಪಿಸಿಕೊಂಡಿದ್ದಾರೆ. ಭಾರತ ಸಂವಿಧಾನದ ವಿಧಿ 370 (Article 370) ಯನ್ನು ಚರ್ಚಿಸಬೇಕೆಂದು ಕೇಳಿಕೊಂಡಿದ್ದಾರೆ. ಸಹಜವಾಗಿಯೇ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬೆಂಬಲಿಸುವ ಕೆಲ ಮಾಧ್ಯಮ ವರ್ಗದವರು ಮೋದಿಯ ಭಾಷಣವನ್ನು ಆಕ್ಷೇಪಿಸಿದ್ದಾರೆ.ಕಾರಣ ಮಾಜಿ ಪ್ರಧಾನಿ ನೆಹರೂರಿಗೆ ಅವಮಾನವಾಯ್ತೆಂದೋ, ಅಥವಾ ನೆಹರೂರವರು ಕಾಶ್ಮೀರದಲ್ಲಿ ಗೊಂದಲ ಸೃಷ್ಟಿಸಿದ್ದನ್ನು ಒಪ್ಪಿಕೊಳ್ಳಲಾಗದೆಂದೋ ಗೊತ್ತಿಲ್ಲ. ಹಿಂದೊಮ್ಮೆ ಸರ್ದಾರ್ ವಲ್ಲಭ ಭಾಯಿ ಪಟೇಲ್, ನೆಹರೂರ ತುಲನೆ ಮಾಡಿದ್ದ ಮೋದಿಯನ್ನು ಆಕ್ಷೇಪಿಸಿದ್ದು ಸ್ಮರಿಸಬಹುದು. ನೆಹರೂ ರವರು ಅಪ್ರತಿಮ ದೇಶಭಕ್ತ, ದ್ರಷ್ಟಾರ; ಅವರ ಬಗ್ಗೆ ಲಘುವಾಗಿ ಮಾತನಾಡಿದ್ದು  ಮೋದಿಯವರ ತಪ್ಪು ಎಂದು ಅವರು ಸಮರ್ಥಿಸಿಕೊಂಡರೆ ಅದಕ್ಕಿಂತ ದೊಡ್ಡ ಹಾಸ್ಯ ಮತ್ತೊಂದಿರಲಿಕ್ಕಿಲ್ಲ.

ಮೊದಲನೆಯದಾಗಿ ನೆಹರೂ ಭಾರತದ ಜೊತೆಗಿನ ಕಾಶ್ಮೀರದ ವಿಲೀನವನ್ನು ಗೊಂದಲಕ್ಕೆ ಮಾರ್ಪಾಟು ಮಾಡಿದ್ದರು ಎಂಬುದಕ್ಕೆ ಸಾಕಷ್ಟು ಪುರಾವೆಗಳು ಈಗಾಗಲೇ ಹಲವಾರು ಲೇಖಕರು, ಚಿಂತಕರು ತೋರಿಸಿಕೊಟ್ಟಿದ್ದಾರೆ. ಇನ್ನು ನೆಹರೂ ದೇಶಭಕ್ತರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಕ್ಕೆ ಬ್ರಿಟಿಷರಿಂದ ಬಿಡುಗಡೆ ತಂದುಕೊಟ್ಟವರಲ್ಲಿ ಅಗ್ರಗಣ್ಯರು – ಹಾಗಾಗಿ ನೆಹರೂ ರವರನ್ನು ದೂಷಿಸಬಾರದು ಎಂದಾದರೆ – ಅದೂ ಒಪ್ಪಿಕೊಳ್ಳುವ ಮಾತಲ್ಲವೇ ಅಲ್ಲ. ಒಬ್ಬರ ನಿಲುವನ್ನು ಪ್ರಶ್ನಿಸುವ, ತೆಗೆದುಕೊಂಡ ನಿಷ್ಕರ್ಷೆಯಿಂದ ದೇಶಕ್ಕೇ ಮಾರಕವಾದಾಗಲೂ ನಿಲುವನ್ನು ಪ್ರಷ್ನಿಸಬಾರದು ಎನ್ನುವುದು ಮೂರ್ಖತನದ ಪರಮಾವಧಿ. ಈ ದೇಶದ ಸಾಮಾನ್ಯ ಪ್ರಜೆಗೂ ಆ ಹಕ್ಕು ಇದ್ದೇ ಇರುತ್ತದೆ. ಅದೇ ರೀತಿಯಲ್ಲಿ, ಕೆಲ ವರ್ಷಗಳ ನಂತರ ಮೋದಿಯವರು ತೆಗೆದುಕೊಂಡ ಯವುದೋ ನಿಲುವು ತಪ್ಪೆಂದು ಜನರು ಮೋದಿಯವರ ನಿರ್ಧಾರವನ್ನು ಟೀಕಿಸಬಹುದಲ್ಲವೇ?

ಮತ್ತಷ್ಟು ಓದು »

18
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೩

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨

ಭಾಗ ೧ ಮತ್ತು ೨ ರಲ್ಲಿ ‘370ನೇ ವಿಧಿಯ ಸಾಂವಿಧಾನಿಕ ಸಿಂಧುತ್ವ’ ಮತ್ತು ‘370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ’ಯ ಬಗ್ಗೆ ಮಾತನಾಡಿದೆವು. ಭಾಗ ೩ ರಲ್ಲಿ ಮುಂದಿನ ಹಾದಿಯ ಬಗ್ಗೆ ಚಿಂತಿಸೋಣ

ಮುಂದಿನ ಹಾದಿ

ಮೇಲೆ ನೀಡಿದ ಎಲ್ಲ ಉದಾಹರಣೆಗಳು ಸಾಬೀತುಪಡಿಸುವುದಿಷ್ಟೇ, ಸಂವಿಧಾನದ 370ನೇ ವಿಧಿ ಪ್ರಜಾಪ್ರಭುತ್ವದ ಆದರ್ಶಗಳು ಮತ್ತು ನಾಗರಿಕತೆ, ಮಾನವ ಹಕ್ಕುಗಳ ಕುರಿತ ಅಂತರಾಷ್ಟ್ರೀಯ ಕಾನೂನುಗಳ ಕಲ್ಪನೆಗಳ ಮೇಲೆ ನಡೆಯತ್ತಿರುವ ಅತಿಯಾದ ಅಣಕ. ಇದು ಭಾರತದ ಜನಸಂಖ್ಯೆ ಗಣನೀಯ ಪ್ರಮಾಣದ ಭಾಗವೊಂದನ್ನು ದ್ವತೀಯ ದರ್ಜೆಯ ಮತ್ತು ನಾಗರಿಕರೇ ಅಲ್ಲದ ಸ್ಥಿತಿಗೆ ಇಳಿಸುತ್ತದೆ. ವಿಪುಲ್ ಕೌಲನ ಪ್ರಕರಣವನ್ನು ಮತ್ತೆ ನೋಡುವುದಾದರೆ, ಅಂದಿನ ಮುಖ್ಯಮಂತ್ರಿ ಗುಲಾಮ್ ನಬೀ ಆಜಾದ್ರ ಕಾರ್ಯದರ್ಶಿ ನೀಡಿದ “ರಾಜ್ಯಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿಯ ಅಡಿಯಲ್ಲಿ ಭಾರತ ಸರ್ಕಾರದ ಗೃಹ ಇಲಾಖೆ ನೀಡುವ ಯಾವುದೇ ಸೂಚನೆಯನ್ನು ಪಾಲಿಸಲು ಜಮ್ಮು ಕಾಶ್ಮೀರ ರಾಜ್ಯ ಸರ್ಕಾರ ಬಾಧ್ಯವಲ್ಲ. ಆದ್ದರಿಂದ ನಿಮ್ಮ ಮಗುವಿನ ವೈದ್ಯಕೀಯ ವೆಚ್ಚವನ್ನು ಪಾವತಿಸಲು ಸಾಧ್ಯವಿಲ್ಲ” ಎನ್ನುವ ನಿರ್ದಯ ಉತ್ತರ ಕೌಲ್ ಕುಟುಂಬದಲ್ಲಿ ಅಣುಮಾತ್ರವಷ್ಟಾದರೂ ಜೀವಂತವಾಗಿದ್ದ ಭರವಸೆಯನ್ನು ತುಂಡರಿಸಿ ಅಡಗಿಸಿತು. ಜಮ್ಮು ಕಾಶ್ಮೀರ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ ಹದಿಮೂರು ವರ್ಷದ ಅದೃಷ್ಟಹೀನ ಬಾಲಕನ ಬವಿಷ್ಯವನ್ನು ಅಂಧಕಾರಕ್ಕೆ ನೂಕಿತು.

ಮತ್ತಷ್ಟು ಓದು »

12
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370Artilce 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ

370ನೇ ವಿಧಿಯ ನಿಂದನೆ ಮತ್ತು ಪ್ರಜ್ಞಾಪೂರ್ವಕ ದುರುಪಯೋಗಗಳ ಮೇಲೆ ಗಮನಹರಿಸಿದರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸಂಭಂಧಿಸಿದಂತೆ ಸಂಘಾತ್ಮಕ ವಿಷಯಗಳ ಯಾದಿಯಲ್ಲಿ 99ರಲ್ಲಿ 6  ಮತ್ತು ಸಹವರ್ತಿ ಪಟ್ಟಿಯ 52ರಲ್ಲಿ 21 ವಿಷಯಗಳು ಇನ್ನೂ ಹೊರಪಟ್ಟಿರುವುದು ಗೋಚರವಾಗುತ್ತದೆ. ಜಮ್ಮು ಕಾಶ್ಮೀರದ ಪ್ರಮಾಣ ವಚನದ ಪಠ್ಯ ಉಳಿದವುಗಿಳಿಗಿಂತ ಭಿನ್ನವಾಗಿದೆ. ರಾಜ್ಯದ ಶಾಸನಸಭೆಯ ಕಾಲಾವಧಿ ಅರು ವರ್ಷ. ಜಮ್ಮು ಕಾಶ್ಮೀರ ರಾಜ್ಯದ ಸಂವಿಧಾನದ ಪ್ರಸ್ತಾವನೆಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಶಬ್ದಗಳಿಗೆ ಜಾಗವಿಲ್ಲ. ಬ್ರಷ್ಟಾಚಾರ ನಿಯಂತ್ರಣ ಕಾಯಿದೆ (Prevention of Corruption) 1988,  ಭಾರತೀಯ ದಂಡಸಂಹಿತೆ (Indian Penal Code), ಗೃಹೀಯ ಹಿಂಸಾ ಕಾಯಿದೆ(Domestic Violence Act), ಧಾರ್ಮಿಕ ಸಂಸ್ಥೆ (ದುರುಪಯೋಗ ನಿಯಂತ್ರಣ) ಕಾಯಿದೆ 1988, ಅರಣ್ಯ ಹಕ್ಕು ಕಾಯಿದೆ,ವನ್ಯಜೀವಿ ಸಂರಕ್ಷಣಾ ಕಾನೂನು, ನಗರ ಭೂ ಮಿತಿ ಕಾನೂನು ಇತ್ಯಾದಿಗಳು ಜಮ್ಮು ಕಾಶ್ಮೀರ ರಾಜ್ಯಕ್ಕೆ ಅನ್ವಯವಾಗುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐನ ಅಧಿಕಾರ ಸೀಮಿತವಾಗಿದೆ, ಅಂದರೆ ಜಮ್ಮು ಕಾಶ್ಮೀರ ರಾಜ್ಯದಲ್ಲಿ ದಾಖಲಾದ ದೂರಿನ ಮೇಲೆ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ. ರಾಜ್ಯಕ್ಕೆ ಸಂಭಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಕಾನೂನು ವ್ಯಾಪ್ತಿ ಅಪೀಲಿಗೆ ಮಾತ್ರ ಸೀಮಿತವಾಗಿದೆ ಮತ್ತು ಫೆಡರಲ್ ಕೋರ್ಟ ಆಗಿ ಕಾರ್ಯನಿರ್ವಹಿಸುವ ಅಧಿಕಾರ ಮೊಟಕುಗೊಂಡಿದೆ.

ಕಡೆಯಪಕ್ಷ ರಾಜ್ಯದ ಜನತೆಗೆ 370ನೇ ವಿಧಿಯು ನಿಜವಾಗಿ ಹಿತಕಾರಿಯಾಗಿದೆಯೇ? ಎನ್ನುವುದನ್ನು ವಿಶ್ಲೇಷಿಸಿದರೆ, ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಜನ ಪ್ರತಿನಿಧಿ ಕಾಯಿದೆ (People representation act 1950) ರಾಜ್ಯಕ್ಕೆ ಅನ್ವಯವಾಗದೇ ಇರುವುದರಿಂದ ಚುನಾವಣಾ ಕ್ಷೇತ್ರಗಳ ಮರುವಿಂಗಡನೆಯನ್ನು ಜಾರಿಗೆ ತರುವ ಯಾವುದೇ ಅಧಿಕಾರ ಕೇಂದ್ರಕ್ಕೆ ಇರುವುದಿಲ್ಲ. 2002ರಲ್ಲಿ ಜಮ್ಮು ಕಾಶ್ಮೀರವನ್ನು ಹೊರತುಪಡಿಸಿ ಇಡೀ ದೇಶದಲ್ಲಿ ಕ್ಷೇತ್ರ ಪುನರ್ವಿಂಗಡನೆಯನ್ನು ಕೈಗೊಳ್ಳಲಾಯಿತು. ಕೆಲವು ಆಯ್ದ ಪ್ರದೇಶಗಳ ಹಿತಾಸಕ್ತಿಗನುಗುಣವಾಗಿ 370ನೇ ವಿಧಿಯ ದುರುಪಯೋಗ ನಡೆದಿದೆ.

ಮತ್ತಷ್ಟು ಓದು »

4
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370ಹದಿಮೂರು ವರ್ಷದ ವಿಪುಲ್ ಕೌಲ್ ಜಮ್ಮು ಕಾಶ್ಮೀರ ರಾಜ್ಯದ ಲೋಕೋಪಯೋಗಿ ಇಲಾಖೆಯ ನಾಲ್ಕನೇ ವರ್ಗದ ನೌಕರರೊಬ್ಬರ ಮಗ. ಹಲವು ವ್ಯಾಧಿಗಳಿಂದ ಬಳಲುತ್ತಿರುವ ವಿಪುಲ ಅವನ ಕುಟುಂಬ ತನ್ನ ಭವಿಷ್ಯವನ್ನೇ ಬಲಿಕೊಟ್ಟು ಕೊಡಿಸುತ್ತಿರುವ ಚಿಕಿತ್ಸೆಯ ಕಾರಣದಿಂದಾಗಿ ಇಂದು ಬದುಕಿದ್ದಾನೆ. 2001ರಲ್ಲಿ ಆತನ ಕುಟುಂಬದವರು ಸಹಾಯಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು, ಅಂತೆಯೇ ಅವರಿಗೆ 20ಲಕ್ಷ ರೂ ಸಹಾಯ ಧನದ ಭರವಸೆಯನ್ನು ನೀಡಲಾಗಿತ್ತು. ಆದರೆ ಸರ್ಕಾರ ಬದಲಾದ ನಂತರ ಸಹಾಯ ನಿಂತುಹೋಯಿತು. ತತ್ಕಾಲಕ್ಕೆ ಗೃಹ ಮಂತ್ರಾಲಯ ಮಧ್ಯಪ್ರವೇಶಿಸಿ ನೆರವನ್ನು ಮುಂದುವರಿಸುವಂತೆ ಸೂಚಿಸಿತು. ಇಷ್ಟಾದ ಮೇಲೂ ಅವರಿಗೆ ದೊರಕಿದ್ದು ದಿ 24 ಜುಲೈ 2007ರ ಒಂದು ಪತ್ರ, ಪತ್ರದ ಒಕ್ಕಣೆಯಲ್ಲಿ “ಸಂವಿಧಾನದ ವಿಧಿ 370ರ ಅನ್ವಯ ಜಮ್ಮು ಕಾಶ್ಮೀರ ಸರ್ಕಾರ ಗೃಹ ಮಂತ್ರಾಲಯದ ಸೂಚನೆಯನ್ನು ಪಾಲಿಸುವ ಬಾಧ್ಯತೆಯನ್ನು ಹೊಂದಿರುವುದಿಲ್ಲ.” ಎಂದು ಉಲ್ಲೇಖಿಸಲಾಗಿತ್ತು !

ಇದೊಂದು 370ನೇ ವಿಧಿಯ ದುರುಪಯೋಗದ ಪ್ರತ್ಯೇಕ ಪ್ರಕರಣವಲ್ಲ. 1950ರಲ್ಲಿ ಸಂವಿಧಾನ ಜಾರಿಗೆ ಬಂದಾಗಿನಿಂದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವ್ಯತಿರಿಕ್ತವಾದ ಸ್ವಾರ್ಥ ಉದ್ಧೇಶಗಳ ಪೂರ್ತಿಗಾಗಿ 370ನೇ ವಿಧಿಯ ನಿಂದನೆ ಮತ್ತು ದುರುಪಯೋಗ ಮತ್ತೆ ಮತ್ತೆ ನಡೆಯಲ್ಪಟ್ಟಿದೆ.

ಆಗಿನ ತುರ್ತು ಸನ್ನಿವೇಶಕ್ಕೆ ಹಂಗಾಮಿ ಏರ್ಪಾಡಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಲಾಗಿತ್ತು. ಜಮ್ಮು ಕಾಶ್ಮೀರದ ಮೇಲೆ ಆಕ್ರಮಣವೆಸಗಿದ್ದ ಪಾಕಿಸ್ತಾನ ರಾಜ್ಯದ ಭೂಭಾಗವನ್ನು ನ್ಯಾಯಬಾಹಿರವಾಗಿ ತನ್ನ ವಶಕ್ಕೆ ತೆಗೆದುಕೊಂಡಿತ್ತು. ವಿಷಯವನ್ನು ವಿಶ್ವಸಂಸ್ಥೆಗೆ ಒಯ್ಯಲಾಗಿ ವಿಶ್ವಸಂಸ್ಥೆಯ ಭದ್ರತಾ ಮಂಢಳಿಯು ಕೆಲವು ಪೂರ್ವಾನ್ವಯ ಷರತ್ತುಗಳೊಂದಿಗೆ ಜನಮತಗಣನೆಯನ್ನು ನಡೆಸುವ ಗೊತ್ತುವಳಿಯನ್ನು ಅಂಗೀಕರಿಸಿತು. ಆ ಷರತ್ತುಗಳೆಂದರೆ ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ತನ್ನ ಸೈನ್ಯವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಮತ್ತು ತಾನು ಸ್ಥಾಪಿಸಿದ ಆಡಳಿತ ವ್ಯವಸ್ಥೆಯನ್ನು ತಗೆದುಹಾಕಬೇಕು. ಹಾಗೆಯೇ ಭಾರತದ ಸಂವಿಧಾನವನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ನಿರಾಕರಿಸಲ್ಪಡುವುದು.

ಮತ್ತಷ್ಟು ಓದು »