ವಿಷಯದ ವಿವರಗಳಿಗೆ ದಾಟಿರಿ

Posts tagged ‘ಜವಾಹರಲಾಲ್ ನೆಹರು’

6
ಜುಲೈ

ಅಂಬೇಡ್ಕರ್ ಅವರಿಗೂ ಬೇಡವಾಗಿತ್ತು ಆರ್ಟಿಕಲ್ 370

– ರಾಕೇಶ್ ಶೆಟ್ಟಿ

“ಮಿ.ಅಬ್ದುಲ್ಲಾ, ಭಾರತ ಕಾಶ್ಮೀರವನ್ನು ರಕ್ಷಿಸಬೇಕು, ಅಭಿವೃದ್ಧಿಗೊಳಿಸಬೇಕು ಮತ್ತು ಕಶ್ಮೀರಿಗಳಿಗೆ ಭಾರತದ ಇತರ ಪ್ರಜೆಗಳಂತೆಯೇ ಸಮಾನ ಹಕ್ಕುಗಳಿರಬೇಕೆಂದು ನೀವು ಬಯಸುತ್ತೀರ. ಆದರೆ, ಭಾರತ ಮತ್ತು ಭಾರತೀಯರಿಗೆ ಕಾಶ್ಮೀರ ರಾಜ್ಯದಲ್ಲಿ ಯಾವುದೇ ಹಕ್ಕುಗಳು ಇರಬಾರದು ಎನ್ನುತ್ತೀರ. ನಾನು ಭಾರತದ ಕಾನೂನು ಮಂತ್ರಿ, ನನ್ನ ದೇಶದ ಹಿತಾಸಕ್ತಿಯನ್ನು ನಾನು ಕಡೆಗಣಿಸಲಾರೆ… “, ಆರ್ಟಿಕಲ್ 370ರನ್ನು ಸಂವಿಧಾನದಲ್ಲಿ ಸೇರಿಸಿ ಜಮ್ಮು ಕಾಶ್ಮೀರದಲ್ಲಿ ಜಾರಿಗೊಳಿಸುವ ವಿಷಯದಲ್ಲಿ ಅಂಬೇಡ್ಕರ್ ಅವರನ್ನು ಒಪ್ಪಿಸಲು ನೆಹರೂ ಸಲಹೆ ಮೇರೆಗೆ ಬಂದಿದ್ದ ಶೇಖ್ ಅಬ್ದುಲ್ಲಾನ ಮುಖಕ್ಕೆ ಹೊಡೆದಂತೆ ಡಾ.ಅಂಬೇಡ್ಕರ್ ಅವರು ಹೇಳಿ ಕಳುಹಿಸಿದ್ದು ಹೀಗೆ. ಖುದ್ಧು  ಸಂವಿಧಾನ  ಶಿಲ್ಪಿಯೇ ವಿರೋಧಿಸಿದ್ದ ಈ ಆರ್ಟಿಕಲ್ 370ಯನ್ನು ಅಂದು ಅವರ ಬಾಯಿ  ಮುಚ್ಚಿಸಲು  “ತಾತ್ಕಾಲಿಕ” ಎಂಬ ಪದ ಬಳಸಲಾಯಿತು. ಹೆಂಡ ಕುಡಿದ ಮರ್ಕಟದಂತಾಡುತ್ತಿದ್ದ  ನೆಹರೂ  ಸಾಹೇಬರು, ತಮ್ಮ ಬಾಲವನ್ನು ಶೇಖ್ ಅಬ್ದುಲ್ಲಾನ ಕೈಗೆ ಇಟ್ಟಾಗಿತ್ತು. ಆರ್ಟಿಕಲ್  370  ಜಾರಿಯಾಗುತ್ತಿದಂತೆ ಹಿಂಬಾಗಿಲ ಮೂಲಕ ಅದಕ್ಕಿಂತಲೂ ಘೋರವಾದ ವಿಧಿ 35A ಅನ್ನು  ಜಮ್ಮು ಕಾಶ್ಮೀರಕ್ಕೆ ಅನ್ವಯಿಸಲಾಯಿತು. ಅಂದು ಅಂಬೇಡ್ಕರ್ ಅವರು ವಿರೋಧಿಸಿದ್ದ ಆರ್ಟಿಕಲ್ 370 ರದ್ಧತಿ ಬಗ್ಗೆ ಮಾತನಾಡುತ್ತಿರುವುದು ಕೇವಲ ಬಿಜೆಪಿ ಮಾತ್ರವೇ. ಹಾಗೂ ಇದನ್ನು ವಿರೋಧಿಸುವವರು ಕಾಂಗ್ರೆಸ್ ಇತ್ಯಾದಿ ಸೆಕ್ಯುಲರ್ ಪಕ್ಷಗಳು ಹಾಗೂ ಸೋ-ಕಾಲ್ಡ್ ಸಂವಿಧಾನ ರಕ್ಷಕರು…! ಮತ್ತಷ್ಟು ಓದು »

2
ಜನ

ಸಂಸ್ಕೃತಿ ಸಂಕಥನ – 16 ನೆಹರೂ ಸೆಕ್ಯುಲರಿಸಂ

 -ರಮಾನಂದ ಐನಕೈ

ನೆಹರೂರವರು ಸಂಪೂರ್ಣ ಪಾಶ್ಚಾತ್ಯ ಶಿಕ್ಷಣ ಹಾಗೂ ಪ್ರಭಾವದಿಂದ ರೂಪಗೊಂಡವರು. ಹಾಗಾಗಿ ಅವರು ಭಾರತದ ಕುರಿತು ಚಿಂತಿಸುವಾಗ ಪಶ್ಚಿಮದಿಂದ  ಪ್ರವೇಶಿಸುತ್ತಾರೆ. ಮೂಲಭೂತವಾಗಿ ನೆಹರೂರವರಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಅಸಡ್ಡೆಯ ಭಾವನೆ ಇದೆ. ಈ ಭಾವನೆ ಪ್ರೊಟೆಸ್ಟಾಂಟ್ ಕ್ರಿಶ್ಚಿಯಾನಿಟಿಯಿಂದ ಬಂದಿದ್ದು. ಹಾಗಾಗಿ ನೆಹರೂ ಸೆಕ್ಯುಲರಿಸಂನಲ್ಲಿ  ಪ್ರಭುತ್ವ ಈ ಮೌಢ್ಯವನ್ನು ನಿವಾರಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ. ಅಂದರೆ ಪ್ರಭುತ್ವ ಹೇಗೆ ‘ತಟಸ್ಥ’ ಇದ್ದಂತಾಯಿತು?

ನೆಹರೂ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ. ಸ್ವಾತಂತ್ರ್ಯ ಹಾಗೂ ಸಮಾನತೆಯ ಬಗ್ಗೆ ಕಸನು ಕಂಡವರು. ಪಂಚವಾರ್ಷಿಕ ಯೋಜನೆಗಳ ಮೂಲಕ ಭಾರತವನ್ನು ಹಂತಹಂತವಾಗಿ ಪ್ರಗತಿಗೆ ತರಲು ಹೆಗಲು ಕೊಟ್ಟವರು. ಭಾರತ ಲಿಬರಲ್ ಸೆಕ್ಯುಲರ್ ರಾಷ್ಟ್ರವಾಗಿ ಪ್ರಗತಿ ಮತ್ತು ಸಮಾ ನತೆಯ ತುತ್ತತುದಿಗೆ ಹೋಗಬೇಕೆಂಬ ದೃಢವಾದ ಸಂಕಲ್ಪ ಹೊಂದಿದವರು. ಹಾಗಾದರೆ ನೆಹರೂರವರ ಪ್ರಕಾರ ಲಿಬರಲ್ ಸೆಕ್ಯುಲರ್ ನೀತಿಯೆಂದರೆ ಏನು? ಅದನ್ನೇ ನೆಹರೂ ಸೆಕ್ಯುಲರ್ ಎನ್ನುವುದು.

ಪ್ರಭುತ್ವ ಎಲ್ಲಾ ರಿಲಿಜನ್ಗಳಿಂದ ತಟಸ್ಥವಾಗಿರ ಬೇಕು ಹಾಗೂ ರಿಲಿಜನ್ನನ್ನು ತನ್ನ ಎಲ್ಲಾ ವ್ಯವಹಾರ ಗಳಿಂದ ಹೊರಗಿಡಬೇಕೆಂದು ನೆಹರೂ ಅಭಿ ಪ್ರಾಯಪಡುತ್ತಾರೆ. ಪ್ರಭುತ್ವ ರಿಲಿಜನ್ನನ್ನು ಪುರಸ್ಕರಿ ಸಿದರೆ ಆ ರಾಷ್ಟ್ರ ಒಂದು ಪ್ರಗತಿಹೀನ ರಾಷ್ಟ್ರವಾಗು ತ್ತದೆ ಎಂಬುದು ಅವರ ದೃಢವಾದ ನಂಬಿಕೆ. ನೆಹರೂ ಸೆಕ್ಯುರಿಸಂನ್ನು ವೈಜ್ಞಾನಿಕ ಸೆಕ್ಯುಲರಿಸಂ ಅಂತಲೂ ಕರೆಯುತ್ತಾರೆ. ಹಾಗಾದರೆ ಈ ವೈಜ್ಞಾನಿಕ ಸೆಕ್ಯುಲರಿಸಂ ಅಂದರೆ ಏನು?

ಮತ್ತಷ್ಟು ಓದು »