ಒಂದು ಪ್ರೇತದ ಕತೆ! (ಭಾಗ 6)
– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಪ್ರೇತದ ಆತ್ಮ ಚರಿತೆ! (ಭಾಗ 3)
ಪ್ರೇತದ ಆತ್ಮ ಚರಿತೆ! (ಭಾಗ ೪)
ಪ್ರೇತದ ಆತ್ಮ ಚರಿತೆ! (ಭಾಗ ೫)
ಒಂದೆಡೆ ಕುಸಿಯುತ್ತಿರುವ ಆಡಳಿತ ವ್ಯವಸ್ಥೆ, ಬಂಡೇಳುತ್ತಿರುವ ಪಾಳೇಗಾರರು, ಪ್ರಧಾನರ ಒಳಜಗಳ… ನಾಲ್ದಿಕ್ಕುಗಳಲ್ಲೂ ಮರಾಠಾ ಸಾಮ್ರಾಜ್ಯವನ್ನು ಕುಟಿಲನೀತಿಯ ಮೂಲಕ ಆಕ್ರಮಿಸಿಕೊಳ್ಳಲು ಹವಣಿಸುತ್ತಿರುವ ಕೆಂಪು ಮುಸುಡಿಗಳ ಈಸ್ಟ್ ಇಂಡಿಯಾ ಕಂಪನಿ. ಅದರಿಂದ ಬಿಡಿಸಿಕೊಳ್ಳಲು ಬಾಜಿರಾವ್ ಪಂಡರಾಪುರದಲ್ಲಿ ಸಾಕಷ್ಟು ಧರ್ಮ ಕಾರ್ಯಗಳನ್ನು ನಡೆಸಿದ. ಭೀಮಾ ನದಿಯ ತೀರದಲ್ಲಿ ಭಾರಿ ಹೋಮಗಳನ್ನಿಟ್ಟು ನಾರಾಯಣನ ಪ್ರೇತವನ್ನು ಉಚ್ಛಾಟನೆ ಮಾಡಲಾಯಿತು. ಆದರೆ ಯಾವುದೂ ಉಪಯೋಗವಾಗಲಿಲ್ಲ. ಕೇವಲ ಪೇಶ್ವಾಗಳ ಸಾಮ್ರಾಜ್ಯ ನಾಶವಾಗಲಿ… ಪೇಶ್ವಾಗಳಿಗೆ ಸಂತಾನವಿಲ್ಲದೆ ಹೋಗಲಿ… ಪೇಶ್ವಾಗಳು ಕೈ ಹಿಡಿದ ಮಡದಿಯರನ್ನು ಮುಟ್ಟಿದರೆ ಸಾಕು ಅವರು ಸತ್ತು ಹೋಗುವಂತಾಗಲಿ… ಪೇಶ್ವಾಗಳ ಅರಮನೆಗೆ ಬೆಂಕಿ ಬೀಳಲಿ. ಇದು ನಾರಾಯಣನ ಪ್ರೇತ ಬಾಜಿರಾಯನ ಕಿವಿಯಲ್ಲಿ ಪ್ರತೀ ದಿನ ಉಸುರುತ್ತಿದ್ದ ಮಾತುಗಳು.. ಬಾಜಿರಾಯ ಮದುವೆಯಾದ. ಮಕ್ಕಳನ್ನು ಪಡೆಯಬೇಕು ಎಂದು ಪ್ರಯತ್ನ ಪಟ್ಟ ಕೆಲವೇ ದಿನದಲ್ಲಿ ಪತ್ನಿ ನಿಗೂಡವಾಗಿ ಸಾವನ್ನಪ್ಪಿದಳು.!! ಮತ್ತೊಬ್ಬಳನ್ನು ಮದುವೆಯಾದ ಅವಳೂ ಇದೇ ರೀತಿ ನಿಗೂಢವಾಗಿ ಸತ್ತು ಹೋದಳು. ಹೀಗೆ ನಾಲ್ಕು ಜನರನ್ನು, ನಾರಾಯಣ ಪೇಶ್ವೆಯ ಪ್ರೇತ ಬಲಿ ಪಡೆದುಕೊಂಡಿತು. ಬಾಜಿರಾಯನಿಗೆ ಹೆಣ್ಣು ಕೊಡಲು ಜನ ಹಿಂದೇಟು ಹಾಕತೊಡಗಿದರು. ಮತ್ತಷ್ಟು ಓದು