ವಿಷಯದ ವಿವರಗಳಿಗೆ ದಾಟಿರಿ

Posts tagged ‘ಟಿಪ್ಪು ಸುಲ್ತಾನ್’

13
ನವೆಂ

ಇಸ್ಲಾಮ್ ವಿಮರ್ಶೆ ಮಾಡಬಾರದಮ್ಮ,ಹಿಂದೂಗಳನ್ನು ಟೀಕಿಸುವುದು ಕರ್ಮ: ಮೈತ್ರಿ ಸರ್ಕಾರದ್ದು ಧೃತರಾಷ್ಟ್ರ ಪ್ರೇಮ!

– ಶ್ರೀನಿವಾಸ್ ರಾವ್

ಘಟನೆ-1
ಬ್ರಿಟೀಶ್ ವಿರುದ್ಧದ ಹೋರಾಟದಲ್ಲಿ ಕೆಂಪೇಗೌಡರ ಪಾತ್ರವೇನು? ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಮರುನಾಮಕರಣ ಮಾಡಬೇಕು – ಗಿರೀಶ್ ಕಾರ್ನಾಡ್
ಗಿರೀಶ್ ಕಾರ್ನಾಡ್ ಗೆ ಇತಿಹಾಸ ಗೊತ್ತಿಲ್ಲ, ಸರ್ಕಾರಿ ಪ್ರಾಯೋಜಿತ ಸಾಹಿತಿ- ಹೆಚ್ ಡಿ ಕುಮಾರಸ್ವಾಮಿ

2015 ರ ಟಿಪ್ಪು ಜಯಂತಿ ಕಾರ್ಯಕ್ರಮ, ರಕ್ತಪಾತವಾದರೂ ಸರಿಯೇ ಟಿಪ್ಪು ಜಯಂತಿಯನ್ನು ನಡೆಸಲೇಬೇಕೆಂಬ ಜಿದ್ದಿಗೆ ಬಿದ್ದಿದ್ದ ಸಿದ್ದರಾಮಯ್ಯ ಸರ್ಕಾರ, ಟಿಪ್ಪು ಸುಲ್ತಾನನನ್ನು ಬಣ್ಣಿಸಲು “ಟಿಪ್ಪುವಿನ ಕನಸುಗಳು”ನ್ನು ಕಟ್ಟಿಕೊಟ್ಟಿದ್ದ ಸಾಹಿತಿ ಗಿರೀಶ್ ಕಾರ್ನಾಡ್ ಅವರನ್ನು ಆಹ್ವಾನಿಸಿತ್ತು. ತಮ್ಮ ಧಣಿಯ ಎದುರು ಅವರ ಕುಲದೈವವನ್ನು ಹೊಗಳಲು ನಿಂತ ಸರ್ಕಾರಿ ಪ್ರಾಯೋಜಿತ ಸಾಹಿತಿ ಗಿರೀಶ್ ಕಾರ್ನಾಡ್ ಮಾತಿನ ಓಘದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರೇಕೆಬೇಕು? ಟಿಪ್ಪು ಹೆಸರಿಡಬೇಕು, ಟಿಪ್ಪು ಬ್ರಿಟೀಷರ ವಿರುದ್ಧ ಹೋರಾಡಿದ್ದ, ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಕೆಂಪೇಗೌಡರ ಪಾತ್ರ ಇರಲಿಲ್ಲ ಎಂದುಬಿಟ್ಟಿದ್ದರು.

ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಕೆಂಪೇಗೌಡರ ಪಾತ್ರ ಏನು? ಮಹಾಭಾರತದ ಯುದ್ಧದಲ್ಲಿ ಅರ್ಜುನ ಕೌರವರ ವಿರುದ್ಧ ಏಕೆ ಬ್ಯಾಲಿಸ್ಟಿಕ್ ಮಿಸೈಲ್ ಪ್ರಯೋಗ ಮಾಡಲಿಲ್ಲ? ದನ್ಯಾಂಗ್-ಕುನ್ಶಾನ್ ಗ್ರ್ಯಾಂಡ್ ಬ್ರಿಡ್ಜ್ ನಿರ್ಮಾಣಕ್ಕೆ ಶ್ರೀರಾಮನ ಕೊಡುಗೆ ಏನು
ಎಂಬಂಥಹ ಸೆನ್ಸಿಬಲ್ ಪ್ರಶ್ನೆಗಳು ಸೆಕ್ಯುಲರ್ ಸರ್ಕಾರಿ ಪ್ರಾಯೋಜಿತ ಬುದ್ಧಿಜೀವಿಗಳಿಗಷ್ಟೇ ಹೊಳೆಯುವುದಕ್ಕೆ ಸಾಧ್ಯ. ಇರಲಿ…

ಮತ್ತಷ್ಟು ಓದು »

4
ನವೆಂ

ಶೃಂಗೇರಿ ಮಠದ ಮೇಲೆ ಮರಾಠರು ದಾಳಿ ಮಾಡಿದ್ದರೇ?

ಮೂಲ ಲೇಖಕ : ಉದಯ್ ಕುಲಕರ್ಣಿ

ಅನುವಾದ : ರಾಕೇಶ್ ಶೆಟ್ಟಿ

ಹೈದರಾಲಿ,ಟಿಪ್ಪು ಸುಲ್ತಾನನಿಂದ ದೇವಾಲಯಗಳ ನಾಶದ ಬಗ್ಗೆ ಮಾತನಾಡಿದ ತಕ್ಷಣ ಶೃಂಗೇರಿ ಮಠದ ಮೇಲೆ ಮರಾಠರು ದಾಳಿ ಮಾಡಿದ್ದರು, ಟಿಪ್ಪು ಸ್ವಾಮೀಜಿಯವರ ಸಹಾಯಕ್ಕೆ ಬಂದಿದ್ದ ಎಂದು ಕಮ್ಯುನಿಸ್ಟರು ಮುಂದೆ ನಿಲ್ಲುತ್ತಾರೆ.ಹಾಗಿದ್ದರೆ ಈ ದುರ್ಘಟನೆಯ ಸತ್ಯವೇನು? ಈ ಘಟನೆಯ ಇನ್ನೊಂದು ಮಗ್ಗುಲನ್ನು ತಿಳಿಸುವ ಇತಿಹಾಸ ತಜ್ಞ ಉದಯ್ ಕುಲಕರ್ಣಿಯವರು ಸ್ವರಾಜ್ಯ ಮ್ಯಾಗಜಿನ್ನಿನಲ್ಲಿ ಬರೆದ ಲೇಖನ ನಿಲುಮಿಗರಿಗಾಗಿ – ನಿಲುಮೆ

ಟಿಪ್ಪುವಿನ ಮತಾಂಧತೆಯನ್ನು ತಮ್ಮ ರೆಡ್ ಕಾರ್ಪೆಟಿನ ಅಡಿಯಲ್ಲಿ ತೂರಿಸುವ ಅಭ್ಯಾಸವುಳ್ಳ ಕಮ್ಯುನಿಸ್ಟ್ ಇತಿಹಾಸಕಾರರು ಆತ ಸೆಕ್ಯುಲರ್ ಆಗಿದ್ದ ಎಂದು ತೋರಿಸಲು ಪದೇ ಪದೇ ಬಳಸುವದು ಮರಾಠರ ಸೈನ್ಯ ಶೃಂಗೇರಿ ಮಠದ ಮೇಲೆ ದಾಳಿ ಮಾಡಿ ಕೊಳ್ಳೆ ಹೊಡೆದ ನಂತರ ಟಿಪ್ಪು ಅದರ ಜೀರ್ಣೋದ್ಧಾರಕ್ಕೆ ಸಹಾಯ ಮಾಡಿದ ಎನ್ನುವುದಾಗಿದೆ. ಆದರೆ ಆ ದಿನ ನಿಜವಾಗಿಯೂ ನಡೆದಿದ್ದೇನು ಎನ್ನುವುದನ್ನು ‘Solstice at Panipat’ ಪುಸ್ತಕ ಲೇಖಕರು ಮತ್ತು ಇತಿಹಾಸಕಾರರಾದ ಉದಯ್ ಕುಲಕರ್ಣಿಯವರು ಲಭ್ಯವಿರುವ ಪುರಾವೆಗಳ ಸಹಿತ ವಿವರಿಸುತ್ತಾರೆ. 

“ಟಿಪ್ಪುವಿನ ನಡೆಗಳು ಸರಿಯಿಲ್ಲ. ಅಹಂಕಾರವೇ ತುಂಬಿರುವ ಆತ ಇತ್ತೀಚಿಗೆ ನೂರ್ ಮುಹಮ್ಮದನಿಗೆ ಬರೆದ ಪಾತ್ರದಲ್ಲಿ ತಾನು 50,000 ಹಿಂದುಗಳನ್ನು, ಮಹಿಳೆಯರು ಮಕ್ಕಳನ್ನು ಒಳಗೊಂಡಂತೆ ಇಸ್ಲಾಮ್ ಗೆ ಮತಾಂತರಿಸಿದ್ದೇನೆ. ಹಿಂದಿನ ಯಾವುದೇ ಪಡಿಶಾಹ್ ಅಥವಾ ವಜೀರ್ ಮಾಡಲಾಗದ್ದನ್ನು ನಾನು ಅಲ್ಲಾಹ್ ಕೃಪೆಯಿಂದ ಮಾಡಿದ್ದೇನೆ . ಹಳ್ಳಿಗೆ ಹಳ್ಳಿಯನ್ನೇ ಮತಾಂತರಿಸಿದ್ದೇನೆ ಎನ್ನುತ್ತಾನೆ” – ನಾನಾ ಫಡ್ನವಿಸ್ ಅವರು ಮಹಾಡ್ಜಿ ಸಿಂಧಿಯಾಗೇ ಬರೆದ ಪತ್ರ 5 September 1784.

ಥಾಮಸ್ ಡೇನಿಯಲ್ ಮತ್ತು  ಜೇಮ್ಸ್ ವೇಲ್ಸ್ ಅವರು ಬಿಡಿಸಿರುವ ಚಿತ್ರವೊಂದು ಪುಣೆಯ ಶನಿವಾರ್ ವಾಡದಲ್ಲಿ ಗಮನ ಸೆಳೆಯುತ್ತದೆ.ಬ್ರಿಟಿಷರ ಚಾರ್ಲ್ಸ್ ಎಂ ಮಾಲೆಟ್  ಮತ್ತು ಮರಾಠರ ನಡುವಿನ ಒಪ್ಪಂದದ ಚಿತ್ರವದು.  ಮಾಲೆಟ್ ವಿಶೇಷ ಆಸಕ್ತಿಯಿಂದ ಮಾಡಿಸಿದ ಈ ಚಿತ್ರವು, ಮರಾಠರು,ನಿಜಾಮರನ್ನು ಬ್ರಿಟಿಷ್ ಪಡೆಯೊಂದಿಗೆ ಸೇರಿಕೊಳ್ಳುವಂತೆ ಆತ ನಡೆಸಿದ ರಾಜತಾಂತ್ರಿಕತೆಯ ಪ್ರಾಮುಖ್ಯತೆಯನ್ನು ಹತ್ತು ವರ್ಷಗಳ ಹಿಂದೆ ಬ್ರಿಟಿಷರು ಹೊಂದಿದ್ದ ಮಿತ್ರ ಪಡೆಯನ್ನು ನೋಡುವ ಮೂಲಕ ಗಮನಿಸಬೇಕು. ಆ ಸಮಯದಲ್ಲಿ ಹೈದರಾಲಿಯ ಮರಾಠರ ಮಿತ್ರನಾಗಿದ್ದ. 1790 ರ ಸಮಯಕ್ಕಾಗಲೇ ಟಿಪ್ಪು ತನ್ನ ತಂದೆಯ ಹಳೆಯ ಮಿತ್ರಪಡೆಗಳಲ್ಲಿ ಅದೆಷ್ಟು ಆಕ್ರೋಶ ಮೂಡಿಸಿದ್ದನೆಂದರೆ ಅವರು ಬ್ರಿಟಿಷರೊಂದಿಗೆ ಕೈ ಜೋಡಿಸಿಬಿಟ್ಟಿದ್ದರು.

1790-1792ರ ನಡುವೆ ಟಿಪ್ಪುವಿನ ಮೇಲೆ ನಡೆದ ಯುದ್ಧದ ಸಮಯದಲ್ಲಿ, ಮರಾಠರ ಸೇನಾ ಮುಖ್ಯಸ್ಥ ರಘುನಾಥ ರಾವ್ ‘ದಾದಾ’ ಕುರುಂದ್ವಾಡ್ಕರ್ ಅವರ ಮೇಲ್ವಿಚಾರಣೆಯಲ್ಲಿದ್ದ ಸೇನೆಯ ತುಕಡಿಯೊಂದು ಶೃಂಗೇರಿಯ ಶಂಕರಾಚಾರ್ಯ ಮಠದ ಮೇಲೆ ದಾಳಿ ಮಾಡಿ, ಲೂಟಿಗೈದು ಹಾಳುಗೆಡವಿತ್ತು. ಇಂದಿಗೂ ಮಾಗದ ಗಾಯದಂತಿರುವ ಈ ದಾಳಿಯ ಹೊಣೆಯನ್ನು ಮರಾಠರು ಮತ್ತು ಪರಶುರಾಮ್ ಭಾವ್ ಪಟವರ್ಧನ್ ಅವರ ಮೇಲೆಯೇ ಹೊರಿಸಲಾಗಿದೆ.1791ರ ಸಮಯದಲ್ಲಿ ಮರಾಠರ ನಡುವೆ ಈ  ಅನಾಹುತದ ಸುತ್ತ  ನಡೆದಿರುವ ಪತ್ರ ವಿನಿಮಯಗಳ ಮೇಲೆ ಭಾಷಾ ಸಮಸ್ಯೆಯಿಂದಲೋ ಅಥವಾ ಉದ್ದೇಶಪೂರ್ವಕವಾಗಿಯೋ ಬೆಳಕು ಚೆಲ್ಲಲಾಗಿಲ್ಲ.

ಮತ್ತಷ್ಟು ಓದು »

9
ಜನ

ಮೈಸೂರು ಹುಲಿಯ ವಿರುದ್ಧ ಸೆಟೆದು ನಿಂತ ಸಹ್ಯಾದ್ರಿಯ ಹುಲಿ

 – ಕ.ವೆಂ.ನಾಗರಾಜ್

Dhondiya Waghಟಿಪ್ಪು ಸುಲ್ತಾನನ ಪರವಾಗಿ ಮತ್ತು ವಿರುದ್ಧವಾಗಿ ಬರುತ್ತಿರುವ ಲೇಖನಗಳು ಮತ್ತು ಹೇಳಿಕೆಗಳನ್ನು ಗಮನಿಸಿದಾಗ ಹೆಚ್ಚಿನವು ಉತ್ಪ್ರೇಕ್ಷೆಯಿಂದ ಕೂಡಿದುದೆಂದು ಮೇಲ್ನೋಟಕ್ಕೆ ಕಾಣುತ್ತವೆ. ಇದರಲ್ಲಿ ಜಾತಿ, ಧರ್ಮಗಳೂ ಥಳಕು ಹಾಕಿಕೊಂಡು ವಿಷಯವನ್ನು ಜಟಿಲಗೊಳಿಸುತ್ತವೆ. ಟಿಪ್ಪು ಪರಮತ ಸಹಿಷ್ಣುವೋ ಅಲ್ಲವೋ, ಕ್ರೂರಿಯೋ ಅಲ್ಲವೋ ಎಂಬ ಬಗ್ಗೆ ಪ್ರಖರವಾದ ವಾದ, ಪ್ರತಿವಾದಗಳನ್ನು ಕಂಡಿದ್ದೇವೆ. ಟಿಪ್ಪು ಹೆಸರಿನಲ್ಲಿ ಮುಸ್ಲಿಮ್ ವಿಶ್ವವಿದ್ಯಾಲಯದ ಸ್ಥಾಪನೆಗೆ ನಡೆಯುತ್ತಿರುವ ಪ್ರಯತ್ನ ಇಂತಹ ಚರ್ಚೆಗಳಿಗೆ ಮತ್ತಷ್ಟು ಒತ್ತು ಕೊಟ್ಟಿದೆ. ಇತಿಹಾಸವನ್ನು ಇತಿಹಾಸವಾಗಿಯೇ ಆಧ್ಯಯನ ಮಾಡಬೇಕು, ಅದಕ್ಕೆ ಜಾತ್ಯಾತೀತತೆಯ ಲೇಪ ಕೊಡುವ ಸಲುವಾಗಿ ವಾಸ್ತವತೆಯನ್ನು ಮರೆಮಾಚುವ ಕೆಲಸ ಇತಿಹಾಸಕ್ಕೆ ಮಾಡುವ ಅಪಚಾರವಾಗುತ್ತದೆ ಎಂಬುದನ್ನು ಎಷ್ಟು ಬೇಗ ಮನಗಾಣುತ್ತೇವೋ ಅಷ್ಟೂ ದೇಶಕ್ಕೆ ಒಳ್ಳೆಯದು. ಈಗಾಗಲೇ ಬಹಳಷ್ಟು ಚರ್ಚಿತವಾಗಿರುವ ವಿಷಯಗಳನ್ನು ಪುನಃ ಇಲ್ಲಿ ಪ್ರಸ್ತಾಪಿಸಹೋಗದೆ ಟಿಪ್ಪುವಿನ ಕಾಲದಲ್ಲಿ ಬಂದಿಗಳಾಗಿದ್ದವರ ಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಪ್ರಸ್ತಾಪಿಸಿ, ಟಿಪ್ಪುವಿನ ವಿರುದ್ಧ ಸೆಟೆದು ನಿಂತಿದ್ದ ಒಬ್ಬ ಧೀರ ಕನ್ನಡಿಗನ ಬಗ್ಗೆ ನನಗೆ ತಿಳಿದಿರುವ ಸಂಗತಿಗಳನ್ನು ಹಂಚಿಕೊಳ್ಳುತ್ತೇನೆ.

ಮೂಲ ವಿಷಯಕ್ಕೆ ಬರುವ ಮುನ್ನ ಮೊದಲೇ ಹೇಳಿದ್ದಂತೆ ಹೈದರ್ ಮತ್ತು ಟಿಪ್ಪೂರ ಕಾಲದಲ್ಲಿ ಬಂದಿಗಳ ಸ್ಥಿತಿಯನ್ನು ತಿಳಿಸುವ ಸಲುವಾಗಿ ಜೇಮ್ಸ್ ಸ್ಕರಿ ಎಂಬ ಬ್ರಿಟಿಷ್ ಕೈದಿಯೊಬ್ಬನ ಬಗ್ಗೆ ಸಂಕ್ಷಿಪ್ತವಾಗಿ ತಿಳಿಯೋಣ. ಜೇಮ್ಸ್ ಸ್ಕರಿಯ ತಂದೆ ಒಬ್ಬ ಬ್ರಿಟಿಷ್ ಸೈನಿಕನಾಗಿದ್ದು, ಸ್ಕರಿ ಚಿಕ್ಕಂದಿನಲ್ಲೇ ಗನ್ ಪೌಡರ್ ಸಾಗಾಟದ ಕೆಲಸ ಮಾಡುತ್ತಿದ್ದು ಅದಕ್ಕಾಗಿ ಸಮುದ್ರಯಾನ ಮಾಡಬೇಕಾಗುತ್ತಿತ್ತು. ಹೀಗೆ ಪ್ರಯಾಣ ಮಾಡುತ್ತಿದ್ದ ಸಮಯದಲ್ಲಿ ತನ್ನ ೧೪ನೆಯ ವಯಸ್ಸಿನಲ್ಲೇ ಸೈಂಟ್ ಹೆಲೆನಾ ಎಂಬ ದ್ವೀಪದಲ್ಲಿ ಫ್ರೆಂಚರಿಂದ ಹಡಗಿನಲ್ಲಿದ್ದ ಇತರ ೧೪ ಸಿಬ್ಬಂದಿಗಳೊಂದಿಗೆ ಕ್ರಿ.ಶ. ೧೭೮೦ರಲ್ಲಿ ಬಂಧಿಸಲ್ಪಟ್ಟ. ಈ ೧೫ ಜನರನ್ನು ಫ್ರೆಂಚ್ ಅಡ್ಮಿರಲ್ ಸಫ್ರೆನ್ ಹೈದರಾಲಿಯ ವಶಕ್ಕೆ ಒಪ್ಪಿಸಿದ. ಇವರುಗಳನ್ನು ಮೊದಲು ಬೆಂಗಳೂರಿನ ಜೈಲಿಗೆ, ನಂತರ ಶ್ರೀರಂಗಪಟ್ಟಣದ ಸೆರೆಮನೆಗೆ ಸಾಗಿಸಲಾಯಿತು. ಸೆರೆಯಾದ ಕೂಡಲೇ ಕಾಲುಗಳಿಗೆ ಬಲವಾದ ಕಬ್ಬಿಣದ ಸರಪಳಿಗಳನ್ನು ಹಾಕಿ, ಕೈಗಳಿಗೂ ಕಬ್ಬಿಣದ ಕೋಳಗಳನ್ನು ಹಾಕಿ ಸೆರೆಮನೆ ತಲುಪುವವರಗೆ ಹಲವಾರು ದಿನಗಳ ಕಾಲ ನಡೆಸಿಕೊಂಡೇ ಹೋಗಲಾಗಿತ್ತು. ಟಿಪ್ಪು ಇವರೆಲ್ಲರನ್ನೂ ಬಲವಂತವಾಗಿ ಇಸ್ಲಾಮ್ ಮತಕ್ಕೆ ಮತಾಂತರಿಸಿ, ಜೇಮ್ಸ್ ಸ್ಕರಿಗೆ ಮುಸ್ಲಿಮ್ ಹೆಸರಾದ ಶಂಶೇರ್ ಖಾನ್ ಎಂದು ಹೊಸ ಹೆಸರು ಕೊಟ್ಟು ಬಲವಂತವಾಗಿ ತನ್ನ ಸೇನೆಯಲ್ಲಿ ಕೆಲಸ ಮಾಡಿಸಿದ್ದ.

ಮತ್ತಷ್ಟು ಓದು »

19
ಜನ

ಕರ್ನಾಟಕದಲ್ಲಿ ಅಶಾಂತಿಯ ಗಾಳಿ ಬೀಸಬೇಕೆಂದು ಕಾಂಗ್ರೆಸ್ಸ್ ನಿರ್ಧರಿಸಿದೆಯೇ?

– ರಾಕೇಶ್ ಶೆಟ್ಟಿ

CTಪ್ರಶಾಂತವಾಗಿರುವ ಕರ್ನಾಟಕದಲ್ಲಿ ಅಶಾಂತಿಯ ಗಾಳಿ ಬೀಸಬೇಕೆಂದು ಕಾಂಗ್ರೆಸ್ಸ್ ನಿರ್ಧರಿಸಿದೆಯೇ? ಬಹುಶಃ ಹೌದು ಅನ್ನಿಸುತ್ತಿದೆ. ಶ್ರೀರಂಗ ಪಟ್ಟಣದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 50 ಪ್ರತಿಶತ ಮೀಸಲು ನೀಡುವಂತ ವಿವಿಯೊಂದನ್ನು ಸ್ಥಾಪಿಸುವ ಯೋಜನೆ ಕೇಂದ್ರ ಸರ್ಕಾರದ ಮುಂದಿದೆ ಮತ್ತು ಆ ವಿವಿಗೆ ‘ಟಿಪ್ಪು ವಿಶ್ವವಿದ್ಯಾಲಯ’ ಅಂತ ನಾಮಕರಣ ಮಾಡುತ್ತೇವೆ ಅನ್ನುವ ಹೇಳಿಕೆಯನ್ನು ಕೇಂದ್ರ ಸಚಿವರು ಕೊಟ್ಟ ದಿನದಿಂದಲೇ,’ಟಿಪ್ಪು’ ಬಗ್ಗೆ ಚರ್ಚೆ ಶುರುವಾಗಿದೆ.ಚಿದಾನಂದ ಮೂರ್ತಿ,ಎಸ್.ಎಲ್ ಭೈರಪ್ಪ ಮತ್ತು ಇತರರು, ಟಿಪ್ಪು ಕಾಲದಲ್ಲಿ ನಡೆದ ಮತಾಂತರ,ಪರ್ಷಿಯಾ ಭಾಷೆಯ ಹೇರಿಕೆ ಮತ್ತು ಮಲಬಾರಿನ ಸೇನಾಧಿಪತಿಗಳಿಗೆ ಮತ್ತು ಇತರರಿಗೆ ಟಿಪ್ಪು ಬರೆದ ಪತ್ರವನ್ನು ಮುಂದಿಟ್ಟು ‘ಟಿಪ್ಪು ಹೆಸರಿನ ವಿವಿ’ಯನ್ನು ವಿರೋಧಿಸುತಿದ್ದರೆ, ಇನ್ನೊಂದು ಕಡೆ ಟಿಪ್ಪು ಪರ ನಿಂತವರು, ಟಿಪ್ಪು ಒಬ್ಬ ದೇಶ ಭಕ್ತ, ಮಕ್ಕಳನ್ನು ದೇಶಕ್ಕಾಗಿ ಅಡ ಇಟ್ಟವನು ಅನ್ನುತಿದ್ದಾರೆ. ಟಿಪ್ಪು ಕುರಿತ ಈ ಚರ್ಚೆ ನಡೆಯುತ್ತಿರುವುದೂ ಇದೇ ಮೊದಲೇನಲ್ಲ.ಟಿಪ್ಪು ಕಾಲದ ಇತಿಹಾಸದ ಬಗ್ಗೆ ಅನೇಕ ಸಾಕ್ಷಿಗಳು ಸಿಗುವುದರಿಂದ ಟಿಪ್ಪು ಏನು ಅಂತ ನಿರ್ಧರಿಸುವುದು ಬೇರೆಯದೇ ವಿಷಯ.ಹಾಗಾಗಿ ಈ ಲೇಖನದಲ್ಲಿ ಟಿಪ್ಪು ಬಗ್ಗೆ ಗಮನ ಹರಿಸುವುದಕ್ಕಿಂತ,’ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವಿವಿ (ಅಥವಾ 50% ಮೀಸಲು ನೀಡುವ ವಿವಿ) ಅಗತ್ಯವಿದೆಯೇ?’ ಅನ್ನುವ ಪ್ರಶ್ನೆಯನ್ನು ಕೇಂದ್ರ ಸರ್ಕಾರಕ್ಕೆ ಮತ್ತು ಟಿಪ್ಪು ವಿವಿ ಬೆಂಬಲಿಸುತ್ತಿರುವವರಿಗೆ ಕೇಳ ಬಯಸುತ್ತೇನೆ?

ರಾಜ್ಯದಲ್ಲಿ ಈಗಾಗಲೇ ಇರುವ 20ಕ್ಕೂ ಹೆಚ್ಚು ರಾಜ್ಯದ ವಿವಿ ಮತ್ತು ಡೀಮ್ದ್ ವಿವಿಗಳಲ್ಲಿ ಇಲ್ಲದಿರುವ ಹೊಸತನವೇನಾದರೂ, ಶ್ರೀರಂಗ ಪಟ್ಟಣದಲ್ಲಿ ನಿರ್ಮಿಸ ಬಯಸಿರುವ ವಿವಿಯಲ್ಲಿ ಇರಲಿದೆಯೇ? ಮೈಸೂರಿನಲ್ಲೇ 2 ವಿವಿ ಇರುವಾಗ ಶ್ರೀರಂಗಪಟ್ಟಣದಲ್ಲಿ ಇನ್ನೊಂದ್ಯಾಕೆ ಅನ್ನುವುದು ಒಂದು ಪ್ರಶ್ನೆಯಾದರೆ,  ಜ್ಞಾನರ್ಜನೆಗಾಗಿಯೇ ವಿವಿಯನ್ನು ಸ್ಥಾಪಿಸುವ ಉದ್ದೇಶವಿದ್ದರೆ,ಅದರಲ್ಲಿ ಅಲ್ಪಸಂಖ್ಯಾತರಿಗೆ 50 ಪ್ರತಿಶತ ಮೀಸಲು ಯಾತಕ್ಕಾಗಿ? ಜ್ಞಾನಕ್ಯಾವ ಧರ್ಮ? ವಿದ್ಯೆ ಕಲಿಯಲು  ಬರುವವರು ಪದವಿಯ ವಿಷಯಗಳ ಮೇಲೆ ನಿರ್ಧರಿಸಿ ಒಂದು ವಿವಿಗೆ ಹೋಗುತ್ತಾರೋ? ಅಥವಾ ಅವರ ಧರ್ಮಕ್ಕೆ ಅನುಗುಣವಾಗಿ ವಿವಿಗಳನ್ನು ಆಯ್ಕೆ ಮಾಡಿಕೊಳ್ಳುತಾರೆಯೋ?

ಮತ್ತಷ್ಟು ಓದು »