ವಿಷಯದ ವಿವರಗಳಿಗೆ ದಾಟಿರಿ

Posts tagged ‘ದೀನ್ ದಯಾಳ್ ಉಪಾಧ್ಯಾಯ’

13
ಜೂನ್

ಭಾರತದ ನಾಯಕರ ಹತ್ಯೆಯ ಹಿಂದಿನ ಕಾಣದ ಕೈಗಳು

– ರಾಕೇಶ್ ಶೆಟ್ಟಿ

ಆ ಮನುಷ್ಯ ಮನಸ್ಸು ಮಾಡಿದ್ದರೆ, ಬ್ರಿಟಿಷ್ ಸರ್ಕಾರದಲ್ಲಿ ‘ಐ.ಸಿ.ಎಸ್’ ಅಧಿಕಾರಿಯಾಗಿ ನೆಮ್ಮದಿಯ ಬದುಕು ಬದುಕಬಹುದಿತ್ತು, ಆದರೆ ಚಿನ್ನದ ಮೊಟ್ಟೆಯಿಡುವ ಐ.ಸಿ.ಎಸ್ ಅನ್ನು ಎಡಗಾಲಲ್ಲಿ ಒದ್ದು, ಸರ್ಕಾರಿ ಪದವಿ ನಿರಾಕರಿಸಿ ಇಂಗ್ಲೆಂಡ್ನಿಂದ ಸೀದಾ ಭಾರತಕ್ಕೆ ಬಂದ ಸುಭಾಷ್ ರವರು ಮೊದಲಿಗೆ ಕಾಂಗ್ರೆಸ್ ಪಕ್ಷ ಸೇರಿಕೊಂಡರು. ತಮ್ಮ ಸಾಮರ್ಥ್ಯದಿಂದಲೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೂ ಏರಿದ್ದರು. ಆಗಲಾದರೂ ಅವರು ಸುಮ್ಮನೇ ಇದ್ದಿದ್ದರೂ ಸ್ವತಂತ್ರ ಭಾರತದಲ್ಲಿ ಯಾವುದಾದರೊಂದು ಸಚಿವ ಸ್ಥಾನ ಪಡೆದು ಇರುತ್ತಿದ್ದರೋ ಏನೋ. ಆದರೆ ಹುಟ್ಟಾ ಸ್ವಾಭಿಮಾನಿ ಮತ್ತು ಹೋರಾಟಗಾರರಾಗಿದ್ದ ನೇತಾಜಿಯವರು ಕಾಂಗ್ರೆಸ್ಸನ್ನೇ ಬದಲಿಸ ಹೊರಟರು. ಈಗ ಕಾಂಗ್ರೆಸ್ ಎಂಬ ಪುರಾತನ ಪಕ್ಷ ಹೇಗೆ ನೆಹರೂ ಮನೆತನದ ಅಡಿಯಾಳಾಗಿದೆಯೋ, ಆಗ ಗಾಂಧೀಜಿಯವರ ಕೈಯಲ್ಲೇ ಇತ್ತು. ಅದನ್ನು ಧಿಕ್ಕರಿಸಿ ನಿಂತ ಸುಭಾಷರನ್ನು ಗಾಂಧೀ ಬೆಂಬಲಿಗರು ಬಿಟ್ಟಾರೇನು? ಬೆಂಬಲಿಗರು ಬಿಟ್ಟರೂ, ಗಾಂಧೀಜಿ ಪಕ್ಷದ ಮೇಲಿನ ತನ್ನ ಪಾರುಪತ್ತೇದಾರಿಕೆಯನ್ನು ಬಿಡಲು ಸಿದ್ಧರಿದ್ದರಿರಲಿಲ್ಲ. ಹಾಗೆಯೇ, ಭಾರತದ ಸ್ವಾತಂತ್ರ್ಯವೊಂದೇ ಅಂತಿಮ ಗಮ್ಯವಾಗಿದ್ದ ಸುಭಾಷರಿಗೆ ಗಾಂಧೀಜಿಯವರ ಚಿಲ್ಲರೆ ರಾಜಕೀಯದ ಜಂಜಾಟಗಳು ಬೇಕಿರಲಿಲ್ಲ. ಕಾಂಗ್ರೆಸ್ಸಿನಿಂದ ಹೊರ ಬಂದ ಅವರು ಫಾರ್ವರ್ಡ್ ಬ್ಲಾಕ್ ಸ್ಥಾಪಿಸಿದರು. ಬ್ರಿಟಿಷರಿಗೆ ಸುಭಾಷ್ Potential Threat ಎನ್ನುವುದು ಅರಿವಾಗಿತ್ತು. ಅವರನ್ನು ಗೃಹಬಂಧನದಲ್ಲಿರಿಸಿದ್ದರು, ಈ ಪುಣ್ಯಾತ್ಮ ಅಲ್ಲಿಂದ ತಪ್ಪಿಸಿಕೊಂಡರು. ನಂತರದ್ದು ಭಾರತ ಸ್ವಾತಂತ್ರ್ಯ ಇತಿಹಾಸದ ರೋಚಕ ಅಧ್ಯಾಯ, ಬರಿಗೈಯಲ್ಲಿ ದೇಶಬಿಟ್ಟ ಸುಭಾಷ್, ೪೫ ಸಾವಿರ ಜನರ ಆಜಾದ್ ಹಿಂದ್ ಫೌಜ್ ಸ್ಥಾಪಿಸಿ ಬ್ರಿಟಿಷರ ನಿದ್ದೆಗೆಡಿಸಿದ್ದರು. ಎರಡನೇ ವಿಶ್ವ ಯುದ್ಧದಲ್ಲಿ ಜಪಾನ್ ಜೊತೆ ಸೇರಿಕೊಂಡು ೪೪ರಲ್ಲೇ ಅಂಡಮಾನ್-ನಿಕೋಬಾರ್ ದ್ವೀಪಗಳನ್ನು ಬ್ರಿಟಿಷರಿಂದ ಮುಕ್ತಿಗೊಳಿಸಿದರು, ಅಂತಿಮವಾಗಿ ಜಪಾನ್ ಹಾಗೂ ಆಜಾದ್ ಹಿಂದ್ ಫೌಜಿಗೆ ಈಶಾನ್ಯ ಭಾರತದಲ್ಲಿ ಹಿನ್ನಡೆಯಾಯಿತಾದರೂ, ಸುಭಾಷರು ಹೊತ್ತಿಸಿದ್ದ ಕ್ರಾಂತಿಯ ಕಿಡಿ ಸರ್ವವ್ಯಾಪಿಯಾಗಿತ್ತು. ಆಜಾದ್ ಹಿಂದ್ ಫೌಜಿನ ರುದ್ರನರ್ತನ ಬ್ರಿಟಿಷ್ ಭಾರತೀಯ ಆರ್ಮಿಯನ್ನು ಆವರಿಸಿಕೊಂಡಿತ್ತು. ಅದೇ ಸಮಯಕ್ಕೆ ಸರಿಯಾಗಿ ಅತ್ತ ಜಪಾನ್ ಶರಣಾಗಾತಿಯಾಗುವುದರಲ್ಲಿತ್ತು, ಇತ್ತ ಬ್ರಿಟಿಷರಿಗೆ ಭಾರತದಲ್ಲಿ ಉಳಿಗಾಲವಿರಲಿಲ್ಲವಾಗಿತ್ತು, ಆಗಲೇ ಶುರುವಾಗಿದ್ದು ಸುಭಾಷರ ನಿಗೂಢ ವಿಮಾನಾಪಘಾತದ ಕತೆ. ಅಪಘಾತದಲ್ಲಿ ಸುಭಾಷರು ಅಸುನೀಗಿದರು ಎನ್ನುವುದನ್ನು ಯಾರೆಂದರೇ ಯಾರೂ ನಂಬುವ ಸ್ಥಿತಿಯಲ್ಲಿರಲಿಲ್ಲ. ಅಮೇರಿಕನ್/ಬ್ರಿಟಿಷ್ ಗುಪ್ತಚರರು ವರ್ಷಗಟ್ಟಲೆ ಸುಭಾಷರ ಇರುವಿಕೆಯ ಪತ್ತೆ ಹಚ್ಚಲೆಂದೇ ಹಿಂದೆ ಬಿದ್ದಿದ್ದರು. ಇತ್ತ ಭಾರತದಲ್ಲಿ ಬ್ರಿಟಿಷರ ಹೈಫೈ ಆತಿಥ್ಯದ ಜೈಲಿನಲ್ಲಿದ್ದುಕೊಂಡೇ ಆಜಾದ್ ಹಿಂದ್ ಫೌಜಿನವರು ಭಾರತಕ್ಕೆ ಬಂದರೆ ಕತ್ತಿ ಹಿಡಿದು ಹೋರಾಡುತ್ತೇನೆಂದಿದ್ದ ಕಠಾರಿ ವೀರ ನೆಹರೂ ಸಾಹೇಬರಿಗೆ, ಸುಭಾಷ್ ವಾಪಸ್ ಬಂದರೆ ತನ್ನ ಖುರ್ಚಿಯ ಗತಿಯೇನು ಎಂದು ಚಿಂತೆ ಹತ್ತಿತ್ತು. ಅದೇ ಕಾರಣಕ್ಕೆ, ಬ್ರಿಟನ್ ಪ್ರಧಾನಿ ಆಟ್ಲಿಯವರಿಗೆ ಬರೆದ ಪತ್ರದಲ್ಲಿ, ನಿಮ್ಮ ಯುದ್ಧ ಖೈದಿ ಸುಭಾಷ್ ಗೆ ರಷ್ಯಾ ಆಶ್ರಯ ಕೊಟ್ಟಿದೆ ಎಂದು ಚಿಲ್ಲರೆ ದೂರು ನೀಡಿದ್ದರು. ಅಂದು ತೈಪೆಯಲ್ಲಿ ಯಾವುದೇ ವಿಮಾನ ಹಾರಾಟ ನಡೆದಿಲ್ಲವೆನ್ನುವುದು ಈಗ ಅಧಿಕೃತವಾಗಿದೆ. ವಿಮಾನವೇ ಹಾರದೇ, ಅಪಘಾತವಾಗಿದ್ದು ಎಲ್ಲಿಂದ? ಅಪಘಾತವೇ ನಡೆಯದಿದ್ದ ಮೇಲೆ ಸುಭಾಷರು ಹೋದರೆಲ್ಲಿ? ಹಾಗೆ ನಾಪತ್ತೆಯಾದವರನ್ನು ಹುಡುಕಿ ಕೊಲ್ಲಲಾಯಿತೇ? ಈ ನಿಗೂಢತೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಸ್ವತಂತ್ರ ಭಾರತದ ಮೊದಲ ನಿಗೂಢ ರಾಜಕೀಯ ಕಣ್ಮರೆ/ಹತ್ಯೆಯ ಸಾಲಿಗೆ ಸೇರುವುದು ಸುಭಾಷರ ಹೆಸರು. ಸುಭಾಷರು ಮಾಡಿದ ತಪ್ಪೆಂದರೆ ಸ್ವತಂತ್ರ-ಸ್ವಾಭಿಮಾನಿ-ಸಶಕ್ತ ಭಾರತದ ಕನಸು ಕಂಡಿದ್ದು. ಸುಭಾಷರಿಂದ ಶುರುವಾದ ಈ ನಿಗೂಢ ರಾಜಕೀಯ ಹತ್ಯೆ/ಕಣ್ಮರೆಯ ಸರಣಿ ಸ್ವತಂತ್ರ ಭಾರತದಲ್ಲೂ ಮುಂದುವರೆಯುತ್ತಲೇ ಹೋಯಿತು. ಮತ್ತಷ್ಟು ಓದು »

25
ಡಿಸೆ

ಪ್ರಶ್ನೆ ರಾಹುಲ್ ಪಟ್ಟಾಭಿಷೇಕದ್ದಲ್ಲ; ಕಾಂಗ್ರೆಸ್ಸಿನ ನಿಗೂಢ ನಡೆಗಳದ್ದು

– ರಾಕೇಶ್ ಶೆಟ್ಟಿ

ಸೋನಿಯಾ ಗಾಂಧಿಯವರನ್ನು ಅಧ್ಯಕ್ಷೆಯನ್ನಾಗಿಸುವಾಗ,ವಯೋವೃದ್ಧ ಕೇಸರಿಯವರನ್ನು ಹೇಗೆ ನಡೆಸಿಕೊಳ್ಳಲಾಗಿತ್ತು ಎನ್ನುವುದು ಈಗ ಇತಿಹಾಸ. ಆದರೆ ಕೇಸರಿಯವರ ರಾಜಕೀಯ ಅಧ್ಯಾಯ ತೀರಾ,ಇಂದಿರಾ ಗಾಂಧಿಯವರ ಕಾಲದಲ್ಲಿ ದಲಿತ ನಾಯಕ ಜಗಜೀವನ್ ರಾಮ್ ಅವರ ರಾಜಕೀಯ ಜೀವನವನ್ನು ಮುಗಿಸಿದಷ್ಟು ಕ್ರೂರವಾಗಿರಲಿಲ್ಲವೆಂಬುದೇ ಸಮಾಧಾನ!

ದೇವೇಗೌಡರ ನೇತೃತ್ವದ ಸರ್ಕಾರವನ್ನು ವಿನಾಕಾರಣ ಬೀಳಿಸಿದ್ದ ಕಾಂಗ್ರೆಸ್ಸಿಗೆ ಮುಂದಿನ ಚುನಾವಣೆ ಗೆಲ್ಲಲು ನಾಯಕರೇ ಇರಲಿಲ್ಲವೆಂಬ ನೆಪವೊಡ್ಡಿ ಸೋನಿಯಾ ಅವರನ್ನು ಮುನ್ನೆಲೆಗೆ ತರಲಾಯಿತು. ರಾಜೀವ್ ಗಾಂಧಿಯವರ ಕೊಲೆಯ ನಂತರ ದೇಶವನ್ನು,ಪಕ್ಷವನ್ನು ಸಮರ್ಥವಾಗಿ ಮುಂದುವರೆಸಿದ್ದ ಪಿವಿ ನರಸಿಂಹರಾವ್ ಕಾಂಗ್ರೆಸ್ಸಿನಲ್ಲಿ ಯಾರಿಗೂ ಆಗ ಬೇಡವಾಗಿದ್ದರು. ಕಾರಣ ಸ್ಪಷ್ಟ, ನೆಹರೂ ಕುಟುಂಬದ ಸುತ್ತ ಸುತ್ತುವ ಕ್ಷುದ್ರ ಗ್ರಹಗಳಿಗೆ, ನಕಲಿ ಗಾಂಧಿ ಕುಟುಂಬದ ಮುಖ ಸ್ತುತಿ ಮಾಡುವ ಗುಲಾಮರು ಇಷ್ಟವಾಗುತ್ತಾರೆಯೇ ಹೊರತು ಸ್ವಂತ ಬುದ್ಧಿಶಕ್ತಿ,ಚಿಂತನೆಯುಳ್ಳ ನಾಯಕರಲ್ಲ. ಇಂದಿರಾ ಕಾಲದಲ್ಲಿ ಜಗಜೀವನ್ ರಾಮ್,ಮೊರಾರ್ಜಿ ದೇಸಾಯಿಯಂತವರನ್ನು ಹಣಿಯಲಾಗಿತ್ತು. ಸೋನಿಯಾ ಕಾಲಕ್ಕೆ ನರಸಿಂಹರಾವ್,ಕೇಸರಿಯವರು ನೆಹರೂ ಕುಟುಂಬದ ರಾಜಕೀಯ ಬೇಟೆಗೆ ಬಲಿಯಾದರು.ಕೇಸರಿಯವರನ್ನು ಕಾಂಗ್ರೆಸ್ ಪಕ್ಷದ ಸಂವಿಧಾನಕ್ಕೆ ವ್ಯತಿರಿಕ್ತವಾಗಿ ಅಧ್ಯಕ್ಷ  ಹುದ್ದೆಯಿಂದ ಇಳಿಸಿ, ಸೋನಿಯಾ ಅವರಿಗೆ ಪಟ್ಟ ಕಟ್ಟಲು,ಸೋನಿಯಾರ ಟೀಮು ಸೇರಿಕೊಂಡಿದ್ದ ಪ್ರಣಬ್ ಮುಖರ್ಜಿ,ಶರದ್ ಪವಾರ್ ಅವರಂತವರಿಗೂ ಮುಂದೊಂದು ದಿನ ಕೇಸರಿಯವರಿಗೆ ಸಿಕ್ಕ ಅದೇ ರುಚಿಯ ಸ್ವಾದವೂ ಸಿಕ್ಕಿತು. ಶರದ್ ಪವಾರ್, ಸಂಗ್ಮಾ, ತಾರೀಖ್ ಅನ್ವರ್ ಅವರನ್ನು ಪಕ್ಷದಿಂದ ಹೊರಹಾಕಿದರು. ಮುಂದೊಂದು ದಿನ ಅಡ್ಡಿಯಾಗಬಹುದಾಗಿದ್ದ ರಾಜೇಶ್ ಪೈಲಟ್,ಮಾಧರಾವ್ ಸಿಂಧಿಯಾ ರಸ್ತೆ ಮತ್ತು ವಿಮಾನಾಪಘಾತಗಳಲ್ಲಿ ಸತ್ತರು.ಈ ರೀತಿ ವಿಮಾನಾಪಘಾತ/ರಸ್ತೆ ಅಪಘಾತಗಳಲ್ಲಿ ಸಾಯುವವರ ಪಟ್ಟಿ ಭಾರತದ ರಾಜಕೀಯ ಇತಿಹಾಸದಲ್ಲಿ ಅಲ್ಲಲ್ಲಿ ಸಿಗುತ್ತದೆ.ಆದರೆ ಹಾಗೆ ಸಿಗುವ ಪಟ್ಟಿ ಇದೇ ನೆಹರು ಕುಟುಂಬದ ಆಸುಪಾಸಿನಲ್ಲಿ ಸುತ್ತುತ್ತದೆ. ನಿಗೂಢತೆ ಮತ್ತು ನೆಹರೂ ಕುಟುಂಬಕ್ಕೂ ಅದೇನೋ ಒಂದು ನಂಟು.

ಮತ್ತಷ್ಟು ಓದು »

5
ಆಕ್ಟೋ

ಆಧ್ಯಾತ್ಮಿಕ ಪ್ರಗತಿ ಮತ್ತು ಭಾರತೀಯ ಸಂಸ್ಕೃತಿ

ಡಾ. ಸಂತೋಷ್ ಕುಮಾರ್ ಪಿ.ಕೆ
ಶಿವಮೊಗ್ಗ.

ದೀನ್ ದಯಾಳ್ ಉಪಾಧ್ಯಾಯ, ಪ್ರಾಯಶಃ ಇವರ ಹೆಸರನ್ನು ನಮ್ಮ ಪೀಳಿಗೆ ಹೆಚ್ಚಾಗಿ ಕೇಳಿಲ್ಲ ಎಂದರೂ ತಪ್ಪಾಗಲಾರದು. ಇಂದಿನ ಭಾರತೀಯ ಜನತಾ ಪಕ್ಷದ ಮೂಲ ಪಕ್ಷವಾದ ಜನಸಂಘವನ್ನು ಸ್ಥಾಪಿಸಿದ ಮಹಾ ನಾಯಕ ದೀನ್ ದಯಾಳ್ ರವರು. ಯಾವುದೋ ರಾಜಕೀಯ ಲಾಭ ಅಥವಾ ವೈಯುಕ್ತಿಕ ಹಿತಾಸಕ್ತಿಗೋಸ್ಕರ ರಾಜಕೀಯ ಪಕ್ಷವನ್ನು ಅವರು ಹುಟ್ಟುಹಾಕಲಿಲ್ಲ. ಬದಲಾಗಿ, ಅವರಲ್ಲಿದ್ದ ಅಧಮ್ಯ ರಾಷ್ಟ್ರಪ್ರೇಮ ಹಾಗೂ ರಾಜಕೀಯ ಸ್ಥಿತ್ಯಂತರಗಳನ್ನು ಸಕಾರಾತ್ಮಕ ದಿಕ್ಕಿಗೆ ತೆಗೆದುಕೊಂಡು ಹೋಗುವ ಇರಾದೆಯಿಂದ ರಾಜಕೀಯ ಪಕ್ಷವನ್ನು ಕಟ್ಟಿದರು. ಇಂದಿನ ಬಹುತೇಕ ರಾಜಕಾರಣಿಗಳಿಗೆ ರಾಜಕಾರಣ ಮಾಡುವುದರಲ್ಲಿ ಕೌಶಲ್ಯವಿದೆಯೇ ಹೊರತು, ರಾಜಕೀಯವನ್ನು ಏಕೆ ಮಾಡಬೇಕು, ಅದರ ಫಲಿತಾಂಶಗಳೇನು ಎನ್ನುವ ಸಮಗ್ರ ಜ್ಞಾನ ಇರುವುದು ಅಪರೂಪ. ಆದರೆ ಇದಕ್ಕೆ ವ್ಯತಿರಿಕ್ತ ಎನ್ನುವಂತೆ, ಬಹಳ ಸ್ಪಷ್ಟವಾಗಿ ಸಂಸ್ಕೃತಿ ಹಾಗೂ ರಾಜಕಾರಣದ ಕುರಿತು ಅಪಾರ ಜ್ಞಾನವನ್ನು ಹೊಂದಿದ್ದ ವ್ಯಕ್ತಿ ಎಂದರೆ ಉಪಾಧ್ಯಾಯರು. ಸಂಸ್ಕೃತಿಯ ಆಳ ಅಗಲಗಳನ್ನು ಅಮೂಲಾಗ್ರವಾಗಿ ಬಲ್ಲಂತಹ ಹಾಗೂ ನಿರ್ಧಿಷ್ಟವಾಗಿ ರಾಜಕೀಯ ವ್ಯವಸ್ಥೆಯ ಉದ್ದೇಶ ಹಾಗೂ ಅದು ತಲುಪಬೇಕಾದ ಗುರಿಗಳನ್ನು ಸ್ಪಷ್ಟೀಕರಿಸಿದ ಮೊದಲ ಭಾರತೀಯ ವ್ಯಕ್ತಿ ಎಂದರೂ ಅತಿಶಯೋಕ್ತಿಯಾಗಲಾರದು. ಈ ಪುಟ್ಟ ಬರವಣಿಗೆಯಲ್ಲಿ ಅವರ ಕೆಲವು ವಿಚಾರಧಾರೆಗಳನ್ನು ಪರಿಚಯಿಸುವ ಮೂಲಕ ನಮ್ಮ ರಾಜಕೀಯ ವ್ಯವಸ್ಥೆಯನ್ನು ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಲಾಗುತ್ತದೆ. ಮತ್ತಷ್ಟು ಓದು »

31
ಜುಲೈ

ಹಣ್ಣಾದ ಬದುಕು; ಸಾಂಸ್ಕೃತಿಕ ರಾಜಕಾರಣದ ಬೆಳಕು

– ಸಂತೋಷ್ ತಮ್ಮಯ್ಯ

ನಾಡಿನ ಖ್ಯಾತ ತತ್ವಶಾಸ್ತ್ರಜ್ಞರೊಬ್ಬರು ಕಲಾವಿಮರ್ಶಕ ಅನಂದ ಕೆಂಟಿಶ್ ಕುಮಾರಸ್ವಾಮಿಯವರನ್ನು ವಿವರಿಸುವುದು ಹೀಗೆ ; ಅಯೋಧ್ಯೆ ಕ್ಷೋಭೆಗೊಂಡಿತ್ತು. ಕೈಕೆಯಿಯ ಕೋಪ ಅರಮನೆಯ ಶಾಂತಿಯನ್ನು ತಿಂದು, ಪಟ್ಟಾಭಿಷೇಕದ ಹರ್ಷ ಕ್ಷಣಮಾತ್ರದಲ್ಲಿ ನೀರುಪಾಲಾಗಿ, ದಶರಥನಿಗೆ ಸಂದಿಗ್ದತೆ ಉಂಟಾಗಿ. ರಾಮನಿಗೆ ಕಾಡಿಗೆ ತೆರಳಲು ಸೂಚಿಸಿ ಆತ ಕುಸಿದು ಬಿದ್ದಿದ್ದ. ರಾಮ ಪಿತೃವಾಕ್ಯಪರಿಪಾಲನೆಗಾಗಿ ಕಾಡಿಗೆ ತೆರಳಿದ. ಇತ್ತ ಕುಸಿದಿದ್ದ ದಶರಥ ಅದೇ ಕೊರಗಿನಿಂದ ಕೊನೆಯುಸಿರೆಳದಿದ್ದ. ಅದೇ ಹೊತ್ತಿಗೆ ಕೈಕೆಯ ಮಗ ಭರತ ಸೋದರ ಶತ್ರುಘ್ನನೊಡನೆ ಕೇಕೆಯ ದೇಶಕ್ಕೆ ಹೋಗಿದ್ದನಲ್ಲ. ಅವರಿಗೆ ತುರ್ತು ಕರೆ ಹೋಯಿತು. ರಾಜಧಾನಿಗೆ ಕೂಡಲೇ ಮರಳಬೇಕೆಂಬ ಕರೆಗೆ ಸೋದರರಿಬ್ಬರೂ ಕುದುರೆಯೇರಿ ಅಯೋಧ್ಯೆಗೆ ದೌಢಾಯಿಸಿ ಬರುತ್ತಿದ್ದರು. ಇನ್ನೇನು ಕತ್ತಲಾಗುತ್ತಿದೆ ಎಂಬಷ್ಟರಲ್ಲಿ ಅವರು ಅಯೋಧ್ಯೆ ಹೊರವಲಯಕ್ಕೆ ಬಂದು ಮುಟ್ಟಿದ್ದರು. ಹೊರವಲಯದಲ್ಲೊಂದು ಭವನ. ಆ ಭವನಕ್ಕೊಬ್ಬ ಕಾವಲುಗಾರ. ಭವನದಲ್ಲಿ ಇದುವರೆಗೆ ಆಗಿಹೋದ ಇಕ್ಷ್ವಾಕು ವಂಶದ ಸಾಮ್ರಾಟರ ಪ್ರತಿಮೆಗಳ ಸಾಲುಗಳು. ಭರತನಿಗೆ ಏನನ್ನಿಸಿತೋ ಏನೊ ಶತ್ರುಘ್ನ ಬಂದದ್ದೇ ಇದೆ ಪೂರ್ವಿಕರಿಗೊಮ್ಮೆ ನಮಸ್ಕರಿಸಿ ಹೊರಡೋಣ ಎಂದ. ಕಾವಲುಗಾರ ದೊಂದಿ ತಂದ. ಸೋದರರು ಭವನ ಹೊಕ್ಕರು. ಉದ್ದಕ್ಕೆ ನಿಂತ ಇತಿಹಾಸಪುರುಷರು. ಅಣ್ಣತಮ್ಮರು ಕೊನೆಯಿಂದ ಅಜ್ಜಂದಿರನ್ನು ನೋಡುತ್ತಾ ಬಂದರು. ಪ್ರತಿಮೆಗಳನ್ನು ನೋಡುತ್ತಾ ಶತ್ರುಘ್ನ ಮೆಲುದನಿಯಲ್ಲಿ ಹೆಸರೆಣಿಸತೊಡಗಿದ, ಅಜ, ರಘು, ದಿಲೀಪ… ಅಷ್ಟರಲ್ಲಿ ಭರತ, ಅಲ್ಲಲ್ಲ ತಪ್ಪುಎಂದು ಮತ್ತೆ ಎಣಿಸಿ ನೋಡಿದ ಆತನೂ ತಪ್ಪಿದ. ದಶರಥನೂ ಕಾಲವಾಗಿ ಪ್ರತಿಮೆಯಾಗಿ ನಿಂತುಬಿಟ್ಟಿದ್ದಾನೆ ಎಂದು ಎಂದು ತಿಳಿಯದ ರಾಜಕುಮಾರರು ಮತ್ತೆ ಮತ್ತೆ ಲೆಕ್ಕ ತಪ್ಪಿದರು. ದೊಂದಿಯೂ ಇತ್ತು, ಬೆಳಕೂ ಇತ್ತು, ಆ ಭವನವನ್ನು ಅವರು ಎಷ್ಟೋ ಭಾರಿ ನೋಡಿದ್ದರು ಕೂಡಾ. ಆದರೂ ಲೆಕ್ಕ ತಪ್ಪಿದರು!

ಈ ಜಿಜ್ಞಾಸೆಯನ್ನು ಬಿಚ್ಚಿಟ್ಟವರು ಆನಂದ ಕೆಂಟಿಶ್ ಕುಮಾರಸ್ವಾಮಿಯವರು ಎಂದರು ಆ ಭಾಷಣಕಾರರು. ಅಂದರೆ ಸನಾತನ ಪರಂಪರೆಯಲ್ಲಿ ಮಾನವ ತದ್ರೂಪನ್ನು ಪ್ರತಿಮೆಯಾಗಿ ಕೆತ್ತುವ ಪರಂಪರೆ ಇರಲಿಲ್ಲ ಎಂಬುದನ್ನು ಆನಂದ ಕುಮಾರಸ್ವಾಮಿಯವರು ಶೋಧಿಸಿದ್ದರು.

ಮತ್ತಷ್ಟು ಓದು »