ವಿಷಯದ ವಿವರಗಳಿಗೆ ದಾಟಿರಿ

Posts tagged ‘ದ.ರಾ ಬೇಂದ್ರೆ’

18
ಫೆಬ್ರ

ಅಂಬಿಕಾತನಯದತ್ತರ “ ಬೆಳಗು” – ಶ್ರೀ ಅರವಿಂದರ “ ಚಿನ್ಮಯದ ಆತ್ಮದೀಪ ”

– ಪುಟ್ಟು ಕುಲಕರ್ಣಿ,ಕುಮಟಾ

ಬೇಂದ್ರೆ ಮತ್ತು ಅರಬಿಂದೋವರಕವಿ ಅಂಬಿಕಾತನಯದತ್ತರು , ಜ್ಞಾನಪೀಠ ಪ್ರಶಸ್ತಿ ಸ್ವೀಕರಿಸುವ ಮುನ್ನ ಮಾಡಿದ ಭಾಷಣದಲ್ಲಿ ಒಂದು ಸಾಲು ಹೀಗಿದೆ, ‘ ನನ್ನ “ಬೆಳಗು” ಮತ್ತು “ಹಕ್ಕಿ ಹಾರುತಿದೆ” ಕವನಗಳನ್ನು ಮುಗ್ಧ ವಿದ್ಯಾರ್ಥಿಗಳಿಗೆ ಕಲಿಸಿ ಕೊಡಲಾಗುತ್ತಿದೆ. ಆದರೆ ಅದನ್ನು ಕಲಿಸುತ್ತಿರುವ ಶಿಕ್ಷಕರು ಆ ವಿದ್ಯಾರ್ಥಿಗಳಿಗಿಂತ ಮುಗ್ಧರಾಗಿದ್ದಾರೆ….. “ . ಈ ಸಾಲುಗಳನ್ನು ಓದಿದಾಗ , ಇಲ್ಲಿಯವರೆಗೂ “ಬೆಳಗು” ಕವನದ ಬಗೆಗೆ ಬಂದ ವಿಶ್ಲೇಷಣೆಗಳ ಕುರಿತು ಕವಿಗೆ ತೃಪ್ತಿ ಇಲ್ಲವೆಂದು ತೋರುತ್ತಿದೆ. ಹಾಗಾದರೆ ಈ “ಬೆಳಗು” ಮತ್ತು “ಹಕ್ಕಿ ಹಾರುತಿದೆ ನೋಡಿದಿರಾ” ಕವನಗಳನ್ನು ಬೇರೊಂದು ಆಯಾಮದಿಂದ ವಿಶ್ಲೇಷನೆ ಮಾಡಬೇಕೆ? ಹಾಗಿದ್ದಲ್ಲಿ ಅದಕ್ಕೆ ಇರುವ ಮಾನಕಗಳೇನು? ಯಾವ ಅಥವಾ ಯಾರ ಪ್ರಭಾವದಲ್ಲಿ ಈ ಕವನಗಳು ರೂಪಿತಗೊಂಡಿವೆ? ಬೌದ್ಧಿಕ ಹಂತದ ಶಬ್ದಜಾಲದ ಹೊರತಾಗಿಯೂ , ಪ್ರಜ್ಞಾ ವಲಯದ ಆಚೆಯಲ್ಲಿ ಸಾಗಿ ಅನಂತಾನಂತದ ಜೊತೆಗೆ ಜೋಡಣೆಯಾಗಬಲ್ಲ ಅನೂಹ್ಯವಾದದು ಏನಾದರೂ ಇಲ್ಲಿ ಹೇಳಲ್ಪಡುತ್ತಿದೆಯೋ?

ಇಲ್ಲಿರುವ ಶಬ್ದಮಾಧುರ್ಯದ ಆಚೆ ಇರುವ “ ಏನನ್ನೋ” ಕವಿ ಈ “ಬೆಳಗು” ಕವನದಲ್ಲಿ ಅಡಗಿಸಿದ್ದಾನೆ. ಈ “ಬೆಳಗು” ಕೇವಲ ನಾಮಪದವೋ, ಕ್ರಿಯಾಪದವೋ ಅಥವಾ ವಿಶೇಷಣವೋ ಅಥವಾ ಎಲ್ಲವೂ ಆಗಿ ಅರ್ಥಗರ್ಭಿತವಾಗಿದೆಯೋ?

“ಬೆಳಗು” ನಾಮಪದವಾಗಿ ಉಷೆಯ ಕಾಲವೆಂದು ಸರ್ವವಿದಿತ. ಆದರೆ ಅದೇ ಬೆಳಗು ಕ್ರಿಯಾಪದವಾಗಿ ಹೊಳೆ, ಆರತಿಯೆತ್ತು ಎನ್ನುವ ಅರ್ಥವನ್ನೂ ಹೇಳುತ್ತಿದೆ. ಹೊಳೆಯುವ , ಮಿನುಗುವ ವಿಶೇಷಣದಲ್ಲೂ ಸಹಿತ ಮಿಂಚುತ್ತಿದೆ. ಹಾಗಾದರೆ ಇಲ್ಲಿರುವ ಬೆಳಗು ಯಾವುದು? ಚುಮುಚುಮು ಬೆಳಗೇ? ಪೆರ್ವೆಳಗೆ ? ಬಳ್ಳಿವೆಳಗೆ ? ಬೆರಕೆವೆಳಗೆ? ಬೆಳ್ವೆಳಗೆ? ಹೀಗೆ ಹತ್ತಾರು ಹಂತದ ಪ್ರಶ್ನೆಗಳನ್ನು ನಿಲ್ಲಿಸುತ್ತಿದೆ. ಬೆಳಗೊಂದಿಸು ಎನ್ನುವದಕ್ಕೆ ಕಾಂತಿಗೊಳಿಸು ಎನ್ನುವ ಅರ್ಥವೂ ಇದೆ ಈ ಎಲ್ಲ ಹಂತದ ಸ್ವಾನುಭವವನ್ನು ಆ ಉಷೆಯ ಸಮಯದ ತೋಷದಲ್ಲಿ ಕಂಡೇ ಅನುಭವಿಸಬೇಕು. ಯಾವ ಶಬ್ದದದಲ್ಲಿ ಹೇಳಿದರೂ ಆ ಅನುಭಾವ ಸಿಕ್ಕಲಾರದು.

ಮತ್ತಷ್ಟು ಓದು »

31
ಜನ

ಕುಚ್ಚಿನ ಟೋಪಿಯ ಬೆಚ್ಚನೆ ಬೇಂದ್ರೆ, ನೆನಪುಗಳ ಗುಂಗಿನಲ್ಲಿ…

– ಅಶೋಕ ಶೆಟ್ಟರ್

Bendre(ಇಂದು, ಅಂದರೆ ಜನವರಿ ಮೂವತ್ತೊಂದು., ದ.ರಾ ಬೇಂದ್ರೆ ಜನಿಸಿದ ದಿನ. ಬೇಂದ್ರೆ ಕಾವ್ಯ ಒಂದು ಕಣಜ. ಮೊಗೆದಷ್ಟೂ ಒಸರುವ ಒರತೆ. ಜಗತ್ತಿನ ಶ್ರೇಷ್ಠ ಕವಿಗಳ ಸಾಲಿನಲ್ಲಿ ನಿಲ್ಲಬಲ್ಲ ಪ್ರತಿಭೆ.ಅವರು ಕನ್ನಡ ಕಾವ್ಯದ ಬಹುಮುಖ್ಯ ಧ್ವನಿ.ಅವರ ಕುರಿತಾಗಿ ಅಶೋಕ್ ಶೆಟ್ಟರ್ ಅವರು ೨ ವರ್ಷದ ಹಿಂದೆ ಬರೆದ ಈ ಲೇಖನ ಈಗ ಇಲ್ಲಿ, “ನಿಲುಮೆ”ಯ ಓದುಗರಿಗಾಗಿ – ನಿಲುಮೆ)

“ಅಲ್ಲಿ ಸಂಪಿಗೆಯಿತ್ತು ಪಾರಿಜಾತಕವಿತ್ತು
ಮಾವು ಮಲ್ಲಿಗೆಯಿತ್ತು ಮನೆಯಿದುರು
ಮುಗಿಲ ಮಲ್ಲಿಗೆಯಿತ್ತು ತೆಂಗಿತ್ತು ಹಲಸಿತ್ತು
ನಿಂಬಿಯ ಇಂಬಿತ್ತು ಎಡೆಎಡೆಗೆ
ಹೊಂಗೆಯ ಸಾಲಿತ್ತು ಕಣ್ಮುಂದೆ ಕೆರೆಯಿತ್ತು
ಗುಡ್ಡದ ನೆರೆಯಿತ್ತು ಅದರಾಚೆಗೆ… …..”

“ಸಖಿಗೀತ”ದಲ್ಲಿ ಬರುವ ಈ ಸಾಲುಗಳು ಬೇಂದ್ರೆ ಕಂಡ ಸಾಧನಕೇರಿಯ ಶಬ್ದಚಿತ್ರಗಳು.ನಿನ್ನೆ ಅಂದರೆ ೨೯ ಜನವರಿ ೨೦೧೧ ರಂದು ಮಧ್ಯಾಹ್ನ ಒಂದೆರಡು ತಾಸು ಧಾರವಾಡದ ಬೇಂದ್ರೆ ಭವನದಲ್ಲಿ ಇದ್ದೆ. ಬೇಂದ್ರೆ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಶಾಮಸುಂದರ ಬಿದರಕುಂದಿಯವರೊಂದಿಗೆ ಮಾತಾಡಿ ಆಮೇಲೆ ಬೇಂದ್ರೆಯವರ ಮೂಲನಿವಾಸ “ಶ್ರೀಮಾತಾ”ದಲ್ಲೇ ಇರುವ ಅವರ ಪುತ್ರ ವಾಮನ ಬೇಂದ್ರೆಯವರ ಜೊತೆ ಸ್ವಲ್ಪ ಹೊತ್ತು ಕಳೆದೆ. ಬೇಂದ್ರೆ ಭವನದ ಮೇಲಂತಸ್ತಿನ ಬಾಲ್ಕನಿಯಿಂದ ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ನವೀಕೃತ ಸಾಧನಕೆರೆಗೆ ಹೋಗುವ ದಾರಿ,ಉದ್ದಕ್ಕೂ ಕಟಾಂಜನ ಇವನ್ನೆಲ್ಲ ನೋಡುತ್ತಿದ್ದಾಗ ನನ್ನ ಮನಸಿನಲ್ಲಿ ಅಚ್ಚೊತ್ತಿದಂತಿರುವ ಆ ಪರಿಸರದ ಬೇರೆಯದೇ ಚಿತ್ರದ ಮೇಲೆ ನಾನು ಇವುಗಳನ್ನು ಸುಪರಿಂಪೋಸ್ ಮಾಡಬೇಕಾಗಿ ಬಂತು.ನನ್ನ ಮನಸಿನಲ್ಲಿ ಸುಳಿಯುತ್ತಿದ್ದುದು ೩೦-೩೫ ವರ್ಷಗಳ ಹಿಂದೆ ಬೇಂದ್ರೆ ಮನೆ ಇರುವ ಸಾಲಿಗೆ ಎದುರಾಗಿ,ಗೋವಾಕ್ಕೆ ಹೋಗುವ ಮುಖ್ಯರಸ್ತೆಯಾಚೆ, ಸಾಧನಕೆರೆಯ ಒಂದು ಮೇರೆಯಾಗಿರುವ, ನಾನು ಪೋಲಿಸ್ ವಸತಿಗೃಹಗಳಿಗೆ ಸಾಗಿ ಹೋಗುತ್ತಿದ್ದ, ಕಿರಿದಾದ ಮಣ್ಣ ರಸ್ತೆ, ಸಾಧನಕೆರೆಯ ಇನ್ನೊಂದು ಮೇರೆಯಾಗಿ ಆ ಕೆರೆಯ ಏರಿ, ಅದರಾಚೆ ಭತ್ತದ ಗದ್ದೆ, ತೋಟ ಪಟ್ಟಿಗಳು,ಆಗೊಂದು ಈಗೊಂದರಂತೆ ಗೋವಾಕ್ಕೆ ಹೋಗುತ್ತಿದ್ದ ಖಾಸಗಿ ಅಥವಾ ಸರಕಾರಿ ವಾಹನಗಳು,ಕೆಲಗೇರಿ ಹಾಗು ಮುಗದ ಗ್ರಾಮಗಳ ನಡುವಿನ ಕುರುಚಲು ಕಾಡುಗಳಲ್ಲಿ ಸಂಗ್ರಹಿಸಿದ ಕಟ್ಟಿಗೆಗಳ ಹೊರೆ ಹೊತ್ತು ಓಟದ ನಡಿಗೆಯಲ್ಲಿ ಧಾರವಾಡದತ್ತ ಹೋಗುತ್ತಿದ್ದ ಬಡಪಾಯಿ ಹೆಂಗಳೆಯರು, ಮುಕ್ತಾಯಗೊಳ್ಳಬೇಕು ಎಂಬ ಯಾವ ಧಾವಂತವೂ ಇಲ್ಲದೇ ನಿಷ್ಕಾರಣವೆಂಬಂತೆ ನಿಷ್ಕರುಣೆಯಿಂದ ಸುರಿಯುತ್ತಿದ್ದ ಜಿಡ್ಡುಮಳೆ,ಅಂಚಿನಲ್ಲೆಲ್ಲ ಜೊಂಡು ಬೆಳೆದಿದ್ದ ಚಿಕ್ಕದೂ ಅಲ್ಲದ ಬಹಳ ವಿಸ್ತಾರವೂ ಅಲ್ಲದ ಸಾದನಕೆರೆ..ಹಳೆ ಕಾಲದ ಕೆಂಪು ಹಂಚಿನ ಮನೆಗಳು,ಸುಶಿಕ್ಷಿತ ಜನ..ಆ ಪರಿಸರದಲ್ಲಿದ್ದಷ್ಟೂ ಹೊತ್ತು ಮನಸಿನಲ್ಲಿ ನೆನಪುಗಳ ಸಂತೆ ನೆರೆದಿತ್ತು. “ಸಾಧನಕೇರಿಯ ಸಂಜೆ ಮಳೆ ಸೆಳಕುಗಳು” ಎಂಬ ನನ್ನದೊಂದು ಕವಿತೆಯಲ್ಲಿ ಸಾದನಕೇರಿಯ ಇತರೆ ಚಿತ್ರಗಳೊಂದಿಗೆ ಬೇಂದ್ರೆ ನನ್ನ ಮನಸಿನಲ್ಲಿ ಮೂಡಿದ್ದು ಹೀಗೆ:
ಮತ್ತಷ್ಟು ಓದು »