ನಂಬಿಕೆ
– ಗೀತಾ ಹೆಗಡೆ
ಬದುಕೆಂಬ ಪಯಣದಲ್ಲಿ ಸಾವಿರಾರು ಜನರ ಪರಿಚಯ ಒಡನಾಟ ನಮಗಾಗುವುದು ಸಹಜ. ಈ ಸಹಜತೆಯಲ್ಲಿ ಎದುರಾಗುವ ಘಟನೆಗಳು ಹಲವಾರು. ಈ ಘಟನೆಗಳು ಮಹತ್ವ ಪಡೆಯುವುದು ಆಳವಾಗಿ ಮನಸ್ಸಿಗೆ ನಾಟಿದರೆ ಮಾತ್ರ ಸಾಧ್ಯ. ಅದಿಲ್ಲವಾದರೆ ಅದಲ್ಲಿಗೆ ಮರೆತು ಹೋಗುತ್ತದೆ. ಹಾಗಾದರೆ ಈ ಘಟನೆಗಳ ಹಿಂದೆ ಇರುವ ವಿಷಗಳಿಗೆಗೆ ಕಾರಣರಾದವರ ಮೇಲಿನ ನಂಬಿಕೆ ಎಲ್ಲರ ಬಗ್ಗೆ ಯಾಕೆ ಉಂಟಾಗುವುದಿಲ್ಲ? ಕೇವಲ ಕೆಲವು ಮನುಷ್ಯರ ಬಗ್ಗೆ ಮಾತ್ರ ಏಕೆ ನಂಬಿಕೆ ಉಂಟಾಗುತ್ತದೆ? ಕಾರಣ ಏನು? ಏಕೆ ಹೀಗೆ? ಆ ಭಾವನೆ ಯಾವ ಹಂತದಲ್ಲಿ ಮನಸ್ಸನ್ನು ಕಾಡುತ್ತದೆ? ಮತ್ತಷ್ಟು ಓದು
ನಾವು, ನಮ್ಮ ಹರಕೆ, ನಮ್ಮ ಸೇವೆ!
– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ದಿನಾಂಕ 19-04-2015 ರಂದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ “ಮಾದಪ್ಪನ ಸನ್ನಿಧಿಯಲ್ಲಿ ಸಣ್ಣ ಸ್ವಚ್ಛಭಾರತ್” ಲೇಖನ ಪ್ರಕಟವಾಯಿತು. ಇದರಲ್ಲಿ ಜಾಗದ ಮಿತಿಯಿಂದಲೋ ಸೈದ್ಧಾಂತಿಕ ಮಿತಿಯಿಂದಲೋ ಲೇಖನದ ಬಹುತೇಕ ಭಾಗಗಳಿಗೆ ಕತ್ತರಿ ಪ್ರಯೋಗವಾಗಿತ್ತು. ಅದರ ಪೂರ್ಣಪಾಠ ಇಲ್ಲಿದೆ.
ಮಲೆ ಮಹದೇಶ್ವರ ಬೆಟ್ಟ. ಬೆಳಿಗ್ಗೆ ಆರು ಗಂಟೆಯ ಸಮಯ. ದೇವಾಲಯದ ಮುಂಭಾಗ ರಾತ್ರಿ ಬಂದ ಯಾತ್ರಿಗಳು ಅನುದ್ದೇಶಪೂರ್ವಕ ಚೆಲ್ಲಿದ ಕಸಕಡ್ಡಿಗಳು ಅಲ್ಲಲ್ಲಿ ಹರಡಿದ್ದವು. ಹರಕೆ ತೀರಿಸಲು ಬಂದ ಭಕ್ತಾದಿಗಳಿಂದ ಬಗೆಬಗೆಯ ಆಚರಣೆಗಳು ಸುತ್ತಲೂ ನಡೆಯುತ್ತಿದ್ದವು. ಮುಖ್ಯ ದೇಗುಲದ ಮುಂಭಾಗದಲ್ಲಿರುವ ಕಲ್ಯಾಣಿ ಪಕ್ಕದ ಜಡೆ ಮಾದೇಶ್ವರ ಗುಡಿಯ ಮುಂದೆ ಹತ್ತಾರು ಹೆಂಗಸರು ಮಕ್ಕಳು ಸೇರಿಕೊಂಡಿದ್ದರು. ಒಬ್ಬ ಹುಡುಗ “ಹಾಲುಮಲೆ ಏಳುಮಲೆ, ಜೇನುಮಲೆ, ಎಪ್ಪತ್ತೇಳುಮಲೆ ನಮ್ಮ ಮುದ್ದು ಮಾದೇಶ್ವರನಿಗೆ ಉಘೇ ಅನ್ರಪ್ಪಾ” ಅನ್ನುತ್ತಿದ್ದಂತೆ ಸುತ್ತ ನೆರೆದಿದ್ದವರು ಒಕ್ಕೊರಲಲ್ಲಿ “ಉಘೇ ಉಘೇ” ಅನ್ನುತ್ತಿದ್ದರು. ಗುಡಿಯ ಮುಂದೆ ಕತ್ತೆಯೊಂದು ತರಬೇತಿ ನೀಡಿದ್ದಾರೇನೋ ಎಂಬಂತೆ ಸ್ತಬ್ದವಾಗಿ ನಿಂತಿತ್ತು. ಕೆಲವು ಹೆಂಗಸರು ಅದರ ಕಾಲು ತೊಳೆದರು. ಮತ್ತೆ ಕೆಲವರು ಅದಕ್ಕೆ ಮಲ್ಲಿಗೆ ಹಾರ ತೊಡಿಸಿದರು. ಮತ್ತೆ ಹಲವರು ಅರಿಶಿಣ ಕುಂಕುಮ ಹಾಕಿ ಅದರ ಕಾಲಿಗೆ ಅಡ್ಡ ಬಿದ್ದರು. ಇನ್ನು ಕೆಲವರು ಆರತಿ ಬೆಳಗಿದರು.
ಕತ್ತೆಯ ಪಕ್ಕದಲ್ಲಿ ಹೊಚ್ಚ ಹೊಸ ತೆಂಗಿನ ಗರಿಯಿಂದ ತಯಾರಿಸಿದ ಒಂದಿಷ್ಟು ಪೊರಕೆಗಳನ್ನು ಸಾಲಾಗಿ ಜೋಡಿಸಿದ್ದರು. ಈ ಪೊರಕೆಗಳಿಗೆ ಅರಿಶಿನ ಕುಂಕುಮ ಹಾಕಿ, ಹೂವು ಏರಿಸಿ ಎಲ್ಲರೂ ಕೈ ಮುಗಿದರು. ಒಬ್ಬೊಬ್ಬರೂ ಒಂದೊಂದು ಪೊರಕೆಯನ್ನು ಕೈಗೆತ್ತಿಕೊಂಡರು. ಹುಡುಗ “ಹಾಲುಮಲೆ ಏಳುಮಲೆ, ಜೇನುಮಲೆ, ಎಪ್ಪತ್ತೇಳುಮಲೆ ನಮ್ಮ ಮುದ್ದು ಮಾದೇಶ್ವರನಿಗೆ ಉಘೇ ಅನ್ರಪ್ಪಾ” ಅನ್ನುತ್ತಿದ್ದ. ಉಳಿದವರು “ಉಘೇ ಉಘೇ” ಅನ್ನುತ್ತ ಸುತ್ತಲ ಕಸ ಕಡ್ಡಿಗಳನ್ನು ಗುಡಿಸಿ ಸ್ವಚ್ಛಮಾಡತೊಡಗಿದರು. ಅರ್ಧಗಂಟೆಯಲ್ಲಿ ಸುತ್ತಲ ಪರಿಸರ ತೊಳೆದಿಟ್ಟಂತೆ ಕಂಗೊಳಿಸತೊಡಗಿತು.
ತುಳುನಾಡ ನಂಬಿಕೆಗಳು…
– ಭರತೇಶ ಆಲಸಂಡೆಮಜಲು
ಬಾಳಿಗೊಂದು ನಂಬಿಕೆ ಎಂಬಂತೆ, ಈ ಬಾಹ್ಯ ಜಗತ್ತು ನಂಬಿಕೆಯ ತಲೆದಿಂಬುನಿಟ್ಟು ಮಲಗಿದೆ. ಈ ನಂಬಿಕೆಯಲ್ಲಿ ಎಲ್ಲವೂ ಶೂನ್ಯ ಆಕಾಶ ಅನಂತವಾದರೆ, ಅಣು ಪರಮಾಣುಗಳು ಎನೋ ಕತ್ತಲಲ್ಲಿ ತೇಲುವ ಸೂಕ್ಷ್ಮ ಜೀವಿ, ಆ ಆಗಾಧ ಶಕ್ತಿಯ ಕೊಲ್ಮಿಂಚು ಎಲ್ಲೋ ಹುಟ್ಟಿ ಶಕ್ತಿಯ ಅದುಮಿದ ಶೂನ್ಯ, ಸತ್ಯದ ಜಗದಲ್ಲಿ ನಾವೊಂದು ಭ್ರಾಮರಕ ನಿರ್ಮಿತಿಗಳು ಅದೇ ನಿರಾಕಾರ, ನಿರ್ಗುಣ, ನಿರಾಮಯ, ಆಗೋಚರ ಬ್ರಹ್ಮಾಂಡದ ಸ್ವರೂಪಗಳು ನಮ್ಮ ನಮ್ಮ ಜ್ಞಾನದ ಅಳತೆಯೊಳಗೆ…. “ನೈಜ ಜಗತ್ತಿನಲ್ಲಿ ಬಣ್ಣಗಳೇ ಇಲ್ಲ, ವಾಸನೆಯೂ ಇಲ್ಲ, ಮೃದುತ್ವ ಕಾಠೀಣ್ಯಗಳು ಇಲ್ಲ, ಅವೆಲ್ಲ ಏನಿದ್ದರೂ ನಮ್ಮ ನಿಮ್ಮ ಮಿದುಳಿನಲ್ಲಿ ನಮ್ಮ ನಿಮ್ಮ ಜ್ಞಾನದಲ್ಲಿ” ಎಂದು ಪ್ರಸಿದ್ಧ ನರ ವಿಜ್ಞಾನಿ ನೋಬೆಲ್ ವಿಜೇತ ಸರ್ ಜಾನ್ ಐಕೆಲ್ಸ್ ಹೇಳಿದ್ದಾರೆ.
ನಮ್ಮ ಯೋಚನಾ ಲಹರಿಯ ಶೂನ್ಯ ಜಾಗಗಳಲ್ಲಿ ಈ ನಂಬಿಕೆಗಳು ಅಚ್ಚಳಿದು ನಿಂತಿದೆ ನಮ್ಮ ನಂಬಿಕೆಗಳೇ ಹಾಗೆ ಅದು ಪ್ರಕೃತಿಯ ಅರಾಧನೆಯಿಂದ ಹಿಡಿದು ಗುರು ಹಿರಿಯರ ಪೂಜನೆಯವರೆಗೆ ಅದರಲ್ಲೂ ಕರಾವಳಿ ಇವೂಗಳ ಗೂಡು, ಬೀಡು. ಹಲವಾರು ವೈಶಿಷ್ಟ, ವಿಶೇಷ, ಆಚರಣೆ, ಅರಾಧನೆ, ಪಾಲನೆ ಇವುಗಳಿಂದಾಗಿ ವಿಶ್ವವ್ಯಾಪ್ತಿಯಲ್ಲಿ ಛಾಪನ್ನು ಮೂಡಿಸಿದೆ. ಎಲ್ಲರ ಮಂದ ದೃಷ್ಠಿ ಇತ್ತ ಕಡೆ ನೆಡುವಂತೆ ಮಾಡಿದೆ. ಇಲ್ಲಿನ ಆಚರಣೆ ಒಂದನ್ನು ಮೀರಿಸುವ ಇನ್ನೊಂದು ಪ್ರಬುದ್ಧವಾದದ್ದು. ಪ್ರಪಂಚದ ಬೇರೆ ಯಾವೂದೇ ಕೋಣೆಯಲ್ಲೂ ಅರಸಿ ಹುಡುಕಿದರೂ ಬಯಸಿ ಸಿಗಲಾರದು. ಯಾವುದೋ ಪೂವಾಗ್ರಹದ ನೆಲೆಯಲ್ಲಿ ತುಳುನಾಡು ತನ್ನ ಭವ್ಯ ಸಂಸ್ಕೃತಿಯ ಕಣಜದ ನೆಲೆಯಲ್ಲಿ ಇನ್ನೂ ಆಚರಣೆಗಳು ಉಳಿದು ನಡೆಯುತಿದೆ. ಒಂದಷ್ಟು ಜಿಜ್ಞಾಸೆ, ವಿಮರ್ಶೆಗಳಿಂದ ಮತ್ತಷ್ಟು ಪ್ರಚಾರವಾಗಿ ಇನ್ನಷ್ಟು ಗಟ್ಟಿಯಾಗಿ ತುಳುವರ ಮನಗಳಲ್ಲಿ ಅಗೆಲುಗಳ ರೂಪದಲ್ಲಿ ಭಾವುಕವಾಗಿ ಬೆಚ್ಚಗೆ ಕುಳಿತಿದೆ.
ವಿಜ್ಞಾನಿಗಳೇಕೆ ಪೂಜೆ ಮಾಡಬಾರದು?
– ಡಾ. ಪ್ರವೀಣ್ ಟಿ. ಎಲ್
ಉಪನ್ಯಾಸಕರು, ಕುವೆಂಪು ವಿಶ್ವವಿದ್ಯಾನಿಲಯ
ಮಂಗಳಯಾನದ ಯಶಸ್ವೀ ಕಾರ್ಯಾಚರಣೆ ಬಗ್ಗೆ ಇಡೀ ದೇಶವೇ ಸಂತಸಪಟ್ಟಿದೆ. ಇಡೀ ವಿಶ್ವವೇ ಭಾರತದ ಕಡೆಗೆ ನೋಡುವಂತರ ಸಾಧನೆಯನ್ನು ಭಾರತೀಯ ವಿಜ್ಞಾನಿಗಳು ಮಾಡಿರುವುದು ಮಹಾನ್ ಸಾಧನೆಯೇ ಸರಿ. ಆದರೆ ಕೆಲವು ‘ಚಿಂತಕರು’ ಈ ಇಡೀ ಕಾರ್ಯಾಚರಣೆಯ ಮುಖ್ಯಸ್ಥರಾಗಿದ್ದ ವಿಜ್ಞಾನಿ ರಾಧಾಕೃಷ್ಣನ್ರವರ ನಡೆಯ ಕುರಿತು ತಮ್ಮ ಕುಹಕ, ತಕರಾರುಗಳನ್ನು ಅಂತರ್ಜಾಲ, ಮತ್ತಿತರ ಕಡೆಗಳಲ್ಲಿ ಹರಿಯಬಿಡುತ್ತಿದ್ದಾರೆ. ರಾಧಾಕೃಷ್ಣನ್ರವರು ‘MOM’ ನ ಸಣ್ಣ ಮಾದರಿಯೊಂದನ್ನು ತಿರುಪತಿಗೆ ತಂದು, ತಮ್ಮ ಧರ್ಮಪತ್ನಿಯೊಡನೆ ಪೂಜಾ ಕಾರ್ಯಗಳನ್ನು ನೇರವೇರಿಸಿದ್ದು ಅವರ ಟೀಕೆಗೆ ಕಾರಣ.
ಉಡಾವಣೆಗೊಂಡ ‘MOM’ ಮಂಗಳನ ತಲುಪುವ ಮುಂಚೆಯೇ ಇದೊಂದು ವಿಫಲಯತ್ನವೇನೋ ಎಂಬಂತೆ ಕೆಲವರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿದ್ದರು. ಇನ್ನೂ ಕೆಲವರು ವಿಫಲವಾಗಿದೆ ಎಂಬ ತೀರ್ಮಾನಕ್ಕೂ ಬಂದಿದ್ದರು. ಅಷ್ಟೇ ಅಲ್ಲದೇ ಈ ವಿಫಲತೆಗೆ ವಿಜ್ಞಾನಿಗಳು ತಿರುಪತಿಗೆ ತೆರಳಿ ‘ತಲೆಬೋಳಿಸಿ’ಕೊಳ್ಳದೇ ವಾಪಾಸಾದುದೇ ಪ್ರಮುಖ ಕಾರಣ ಎಂಬಂತೇ ಕುಹಕವಾಡಲು ಶುರುಮಾಡಿದರು. ಕುಹಕಗಳಿಗೆಲ್ಲಾ ಉತ್ತರವನ್ನು ವಿಜ್ಞಾನಿಗಳು ಈಗಾಗಲೇ ನೀಡಿದ್ದಾರೆ.
ಈ ‘ವೈಜ್ಞಾನಿಕ’ ಚಿಂತಕರ ಪ್ರಮುಖ ತಕರಾರೆಂದರೆ, ವಿಜ್ಞಾನಿಗಳು ದೇವಸ್ಥಾನಗಳಿಗೆ ತೆರಳಿ ತಾವು ತಯಾರಿಸಿದ ಆಯುಧದ ಪೂಜೆ ನೆರವೇರಿಸಿರುವುದು ಎಷ್ಟು ಸರಿ. ವಿಜ್ಞಾನಿಗಳಿಗೆ ವಿಶ್ವದ ಸೃಷ್ಟಿಯ ಕುರಿತು ವೈಜ್ಞಾನಿಕ ಕಾರಣಗಳು ತಿಳಿದಿದ್ದರೂ ಸಹಾ ದೇವರ ಅಸ್ತಿತ್ವವನ್ನು ನಂಬುತ್ತಾರೆ ಮತ್ತು ತಮ್ಮ ವೈಜ್ಞಾನಿಕ ಪ್ರಯೋಗಗಳಲ್ಲಿ ದೇವರ ಕೈವಾಡ ಇದೆ ಎಂದುಕೊಳ್ಳುವುದು ಅಜ್ಞಾನ/ ಮೂಢತೆ ಎಂಬುದವರ ವಾದ. ISRO ಒಂದು ಸರ್ಕಾರಿ ಸಂಸ್ಥೆಯಾಗಿದ್ದು, ಭಾರತ ಒಂದು ಜಾತ್ಯಾತೀತ ರಾಷ್ಟ್ರ ಎಂಬುದನ್ನು ರಾಧಾಕೃಷ್ಣನ್ರವರು ನೆನಪಿಡಬೇಕು ಎಂದು ಅಪ್ಪಣೆ ಹೊರಡಿಸುತ್ತಾರೆ.
ಮೇಲಿನ ತಕರಾರುಗಳು ಭಾರತದ ಕುರಿತ ಈ ಚಿಂತಕರ ಅಜ್ಞಾನವನ್ನೂ, ಅವೈಜ್ಞಾನಿಕತೆಯನ್ನೂ, ಮೌಢ್ಯತೆಯನ್ನೂ ಪ್ರದರ್ಶಿಸುತ್ತಿವೆ. ಈ ಚಿಂತಕರುಗಳು ತಪ್ಪಾದ ‘ಯೂರೋಪಿನ ಗ್ರಹಿಕೆ’ಗಳಿಂದ ಕೂಡಿದ ತಮ್ಮ ವಿವರಣೆಗಳನ್ನೇ ವೈಜ್ಞಾನಿಕ ಎಂದು, ತಾವೇ ವಿಜ್ಞಾನದ ಪಿತಾಮಹರೆಂಬ ತೀರ್ಮಾನಕ್ಕೆ ಬಂದಿದ್ದಾರೆ. ಜೊತೆಗೆ ಯೂರೋಪಿನ ಸೆಕ್ಯುಲರ್ ಚಿಂತನೆಯ ನಕಲನ್ನು ಭಾರತದಲ್ಲಿ ವೈಜ್ಞಾನಿಕತೆಯ ಹೆಸರಲ್ಲಿ ವ್ಯಾಪಾರ ಮಾಡುತ್ತಿರುವುದು ಕಂಡುಬರುತ್ತದೆ. ವಿಜ್ಞಾನಿಗಳ ಈ ನಡೆಯನ್ನು ಅವೈಜ್ಞಾನಿಕ, ಮೌಢ್ಯ ಎನ್ನಲು ಕಾರಣ ಅವರ ಆಚರಣೆ ಮತ್ತು ನಂಬಿಕೆಗಳ ನಡುವಿನ ಸಂಬಂಧ. ಅಂದರೆ ಬಾಹ್ಯಾಕಾಶ ನೌಕೆಯ ಉಡಾವಣೆಗೂ ದೇವರ ಮೇಲಿನ ನಂಬಿಕೆಗೂ ಸಂಬಂಧ ಇದೆ ಎಂಬುದು. ದೇವರೇ ಬಂದು ಕ್ಷಿಪಣಿಯನ್ನು ಉಡಾವಣೆ ಮಾಡುತ್ತಾನೆ ಎಂದೇನೂ ವಿಜ್ಞಾನಿಗಳು ನಂಬಿಲ್ಲವಲ್ಲ. ಹಾಗಿದ್ದರೆ ಅವರು ವರ್ಷಗಟ್ಟಲೇ ಶ್ರಮಪಟ್ಟು ತಯಾರಿಸುವ ಅವಶ್ಯಕತೆಯಾದರೂ ಏನಿತ್ತು. ಅಲ್ಲದೇ ಅದಕ್ಕೆ ನಿರ್ದಿಷ್ಟ ಕಾಲಕ್ಕೆ ಬೇಕಾಗುವಷ್ಟು ಇಂಧನವನ್ನು, ಆಧುನಿಕ ತಂತ್ರಜ್ಞಾನವನ್ನು ಬಳಸುವ ಅಗತ್ಯವಾದರೂ ಏಕೆ?
ತೀರಾ ತುಘಲಕ್ ದರ್ಬಾರ್ ಬೇಡ್ರೀ ಸಿಧ್ಧರಾಮಣ್ಣ…
– ಕೆ.ಎಸ್ ರಾಘವೇಂದ್ರ ನಾವಡ
ತೀರಾ ಬೇಸರಗೊ೦ಡು ರಾಜ್ಯದ ಮುಖ್ಯ ಮ೦ತ್ರಿಗಳಿಗೆ ಈ ಮಾತನ್ನು ಹೇಳಿತಿದ್ದೇನೆ ! ಸಮಾಜವಾದಿ ಹಿನ್ನೆಲೆ.. ಹೋರಾಟದ ಹಿನ್ನೆಲೆ.. ಎಲ್ಲದ್ದಕ್ಕಿ೦ತಲೂ ಕರ್ನಾಟಕದ ಗ್ರಾಮೀಣ ಸೊಗಡಿನಿ೦ದ ಮೇಲೆದ್ದು ಬ೦ದವರು ಸಿಧ್ಧರಾಮಯ್ಯ. ಆದರೆ ಹಿ೦ದಿನ ಸಮಾಜವಾದಿ ಹಿನ್ನೆಲೆಗಳಿ೦ದ ಬ೦ದ ಮುಖ್ಯಮ೦ತ್ರಿಗಳಿಗೂ (ಮಾನ್ಯ ಹೆಗಡೇಜಿ, ಬ೦ಗಾರಪ್ಪನವರು, ಜೆ.ಹೆಚ್ ಪಟೇಲರು)ನಮ್ಮ ಸಿಧ್ಧರಾಮಯ್ಯನವರಿಗೂ ಅಜಗಜಾ೦ತರ ವ್ಯತ್ಯಾಸ…ಇವರು ಇದೇ ಥರ ಮು೦ದುವರಿದಲ್ಲಿ ಮು೦ಬರುವ ಲೋಕಸಭಾ ಚುನಾವಣೆಯಲ್ಲಿ ಕಾ೦ಗ್ರೆಸ್ ಕರ್ನಾಟಕದಲ್ಲಿ ನೆಲಕಚ್ಚುವುದ೦ತೂ ಖಚಿತ!
ಪಾಪ.. ಏನೂ ಮಾಡೋದಕ್ಕಾಗೋದಿಲ್ಲ.. ನಮಗೆ ಸಿಧ್ಧರಾಮಯ್ಯನವರ ಅಸಹಾಯಕತೆಯ ಅರಿವು ಇದೆ.ಆದರೆ ಕೈಯಲ್ಲಿ ಆಗದಿದ್ದವರ ಪರಿಸ್ಥಿತಿ ಏನೂ ಸಿಧ್ಧರಾಮಯ್ಯನವರದಲ್ಲ! ಹಾಗ೦ತ ತೀರಾ ಸಾರಾಸಗಟಾಗಿ ತಳ್ಳಿ ಹಾಕುವ೦ತಹ ವ್ಯಕ್ತಿತ್ವವೂ ಸಿಧ್ಧರಾಮಯ್ಯನವರದಲ್ಲ.ಆದರೆ ಒ೦ದ೦ತೂ ಖಚಿತ! ಏನೋ ಆಗಿದೆ… ಒ೦ದರ ಮೇಲೊ೦ದು ಎಡವಟ್ಟುಗಳನ್ನೇ ಸೃಷ್ಟಿಸಿಕೊಳ್ಳುತ್ತಿರುವ ಸಿಧ್ಧರಾಮಯ್ಯನವರು ಕೊನೇ ಪಕ್ಷ ತಮ್ಮ ನಿರ್ಧಾರಗಳಿಗೆ ಜೋತು ಬೀಳುವ೦ತಹ ಯಡಿಯೂರಪ್ಪನವರ ಛಾತಿಯನ್ನೂ ತೋರಿಸುತ್ತಿಲ್ಲ!
ಆರ೦ಭದಲ್ಲೇನೋ ಶೂರತನ ಮೆರೆದ ಅಶ್ವವೀರ.. ಕುದುರೆಗೆ ಸುಸ್ತಾದ೦ತೆ ತಾನೂ ನಡೆಯುತ್ತ ಸಾಗಿದ.. ಎನ್ನುವ ಹಳೇ ಮಾತೀಗ ಸಿಧ್ಧರಾಮಯ್ಯನವರ ವಿಚಾರದಲ್ಲಿ ಖಚಿತವಾಗುತ್ತಿದೆ! ಚುನಾವಣಾ ಪ್ರಣಾಳಿಕೆಯ ಅರ್ಧದಷ್ಟು ಅ೦ಶಗಳನ್ನು ಅನುಷ್ಠಾನಕ್ಕೆ ತರುವುದು ಹೆಚ್ಚುಗಾರಿಕೆಯೇ ಆದರೂ ಕೊಟ್ಟ ಮಾತುಗಳಾದರೂ ಎ೦ಥಾದ್ದಾಗಿದ್ದವು ಎನ್ನುವುದು ಬಹಳ ಮುಖ್ಯ!
ಯಾವುದು ನಂಬಿಕೆ?ಯಾವುದು ಮೂಢನಂಬಿಕೆ?
-ಡಾ.ಕಿರಣ್ ಎಂ ಗಾಜನೂರು
ಕರ್ನಾಟಕ ಸರ್ಕಾರ ಮೂಢನಂಬಿಕೆಗಳ ಕುರಿತು ವಿಧೇಯಕ ಮಂಡಿಸಲು ಮುಂದಾಗಿರುವುದು ನಿಜಕ್ಕೂ ಸ್ವಾಗತಾರ್ಹ ಕ್ರಮ. ಏಕೆಂದರೆ ಭಾರತ ಸಮಾಜದಲ್ಲಿ ಬಹಳ ಹಿಂದಿನಿಂದಲೂ ಸೋ-ಕಾಲ್ಡ್ ನಂಬಿಕೆಗಳ ಹೆಸರಿನಲ್ಲಿ ಶೋಷಣೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ.ಅದರಲ್ಲಿಯೂ ಯಾವುದೇ ಜನ-ಚಳುವಳಿಯಿಲ್ಲದೆ,ನಮ್ಮ ಘನಸರ್ಕಾರ ಸ್ವತಃ ಈ ನಿರ್ಧಾರಕ್ಕೆ ಮುಂದಾಗಿರುವುದು ಪ್ರಶಂಸನೀಯ.ಪಕ್ಕದ ಮಹಾರಾಷ್ಟ್ರದಲ್ಲಿ ಈ ಮಾದರಿಯ ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಳ್ಳಬೇಕಾದರೆ,ಒಂದು ದೊಡ್ಡ ಜನಚಳುವಳಿಯೆ ನಡೆಯಬೇಕಾಯಿತು ಮತ್ತು ಈ ಕುರಿತು ಹೋರಾಟ ಮಾಡುತ್ತಿದ್ದ ವ್ಯಕ್ತಿಯ ಹತ್ಯೆಯು ಆಯಿತು.ಈ ನೆಲೆಯಲ್ಲಿ ಕರ್ನಾಟಕ ಸರ್ಕಾರ ಜನಪರವಾಗಿದೆ ಎಂಬುದನ್ನು ನಾವು ಒಪ್ಪಬಹುದು.ಆದರೆ, ಭಾರತದಂತಹ ಬಹುಸಂಸ್ಕೃತಿಯ ದೇಶದಲ್ಲಿ ಈ ಕ್ರಮ ಕೇವಲ ಪ್ರಗತಿಪರ ಮತ್ತು ಕಾನೂನಾತ್ಮಕ ಅಂಶವಾಗಿರದೆ ಸಮುದಾಯ ಸತ್ವದ ಪ್ರಶ್ನೆಯು ಆಗಿರುತ್ತದೆ ಎಂಬುದನ್ನು ನಾವು ಅರಿತುಕೊಳ್ಳಬೇಕು.ಅದೂ ಅಲ್ಲದೆ ಸದರಿ ವಿಧೇಯಕದ ಕುರಿತು ನಡೆಯುತ್ತಿರುವ ಚರ್ಚೆ ಪರ-ವಿರೋಧವೆಂಬ ಸಂಕುಚಿತ ಅರ್ಥದಲ್ಲಿ ನಡೆಯುತ್ತಿದೆ.ಒಂದು ಸಂಶೋಧನೆ ಅಥವಾ ಚರ್ಚೆಯಲ್ಲಿ ಸಂಶೋಧನೆ/ಚರ್ಚೆಗೆ ಒಳಪಡಿಸಬೇಕಾದ ವಿದ್ಯಾಮಾನದ ಕುರಿತು ಸಂಶೋಧಕನಿಗೆ ಪರ ಅಥವಾ ವಿರೋಧ ಅಭಿಪ್ರಾಯಗಳು ಇರಬೇಕು ಎಂದು ನೀರಿಕ್ಷಿಸುವುದೇ ಸಂಶೋಧನೆ/ಚರ್ಚೆಯ ಲಕ್ಷಣವಲ್ಲ. ಉದಾಹರಣೆಗೆ : ಕರ್ನಾಟಕದ ಮೂಢನಂಬಿಕೆ ವಿರೋಧಿ ವಿಧೇಯಕ ಕುರಿತು ನೀವು ಇದರ ಪರವೂ ವಿರೋಧವೂ ಎಂದು ಕೇಳಿದರೆ ನಾನು ನನಗೆ ಗೊತ್ತಿಲ್ಲ ಎಂದಷ್ಟೆ ಉತ್ತರಿಸಬಲ್ಲೆ. ಏಕೆಂದರೆ ನಿಜಕ್ಕೂ ನನಗೆ ಅದು ಸರಿಯೋ/ತಪ್ಪೋ ಗೊತ್ತಿಲ್ಲ ಅಥವಾ ಪ್ರಸ್ತುತ ಚರ್ಚೆ ಮತ್ತು ಮಾಹಿತಿಯ ಆಧಾರದಲ್ಲಿ ಒಂದು ನಿರ್ಣಯಕ್ಕೆ ಬರಲೂ ಸಾಧ್ಯವಾಗುತ್ತಿಲ್ಲ. ಆದರೆ,ಒಬ್ಬ ಸಮಾಜ ಸಂಶೋಧಕನಾಗಿ ನನ್ನ ಸಮಸ್ಯೆ ಇರುವುದು ಪರವಾಗಿ ಮತ್ತು ವಿರೋಧವಾಗಿ ಮಾತನಾಡುತ್ತಿರುವ ಎರಡೂ ಗುಂಪಿನ ವಾದ ಆ ವಿದ್ಯಮಾನವನ್ನು ಸಮರ್ಥಿಸಲು ಅಥವಾ ವಿರೋಧಿಸಲು ಶಕ್ತವಾಗಿಲ್ಲ ಮತ್ತು ಆದನ್ನು ಆಚರಿಸುತ್ತಿರುವ ಜನರಿಗೆ ಅರ್ಥವಾಗುತ್ತಿಲ್ಲ ಎಂಬುದು.
ಜಾತ್ಯಾತೀತರೆನಿಸಿಕೊಳ್ಳಲು “ಹಿಂದೂ ನಂಬಿಕೆ”ಗಳ ಜೊತೆ ಸರಸವಾಡಲೇಬೇಕೆ?
– ನರೇಂದ್ರ ಕುಮಾರ ಎಸ್.ಎಸ್
“ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ – 2013” ಅನ್ನು ಜಾರಿಗೆ ತರಲಾಗುವುದೆಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದಕ್ಕಿದ್ದಂತೆ ಘೋಷಿಸಿದೆ. ಕರ್ನಾಟಕದಲ್ಲಿ ಆಗಬೇಕಾದ ಅನೇಕ ತುರ್ತಾದ ಕೆಲಸಗಳಿವೆ. ಈ ಹಿಂದೆ ಅಧಿಕಾರದಲ್ಲಿದ್ದ ಭಾಜಪದ ಒಳಜಗಳದಿಂದ ಬೇಸೆತ್ತ ಜನರು, ಈ ಎಲ್ಲಾ “ತುರ್ತಾಗಿ ಆಗಬೇಕಾದ ಕೆಲಸ”ಗಳನ್ನೂ ಮಾಡಲಿಕ್ಕೆಂದೇ ಕಾಂಗ್ರೆಸ್ ಕೈಯ್ಯಲ್ಲಿ ಮತ್ತೊಮ್ಮೆ ಅಧಿಕಾರ ಕೊಟ್ಟರು. ಆದರೆ, ಇವೆಲ್ಲವನ್ನೂ ಬದಿಗೊತ್ತಿ, “ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ – 2013” ಅನ್ನು ಜಾರಿಗೆ ತರುತ್ತಿರುವುದು ಕಾಂಗ್ರೆಸ್ ಪಕ್ಷದವರಿಂದ ಹಿಡಿದು ಎಲ್ಲರನ್ನೂ ದಿಗ್ಭ್ರಮೆಗೊಳಪಡಿಸಿದೆ. ಈ ವಿದೇಯಕದ ಅಗತ್ಯ ಈಗೇನಿತ್ತು, ಎನ್ನುವುದು ಎಲ್ಲ ಪ್ರಜ್ಞಾವಂತರ ಪ್ರಶ್ನೆಯಾಗಿದೆ. ಇದರ ಹಿಂದೆ ಏನಾದರೂ “Hidden Agenda” ಇರಬಹುದೆಂದು ಎಲ್ಲರಿಗೂ ಅನಿಸತೊಡಗಿದೆ.
ಸಿದ್ದರಾಮಯ್ಯನವರು “ಜಾತ್ಯಾತೀತ” ಪಕ್ಷಕ್ಕೆ ಸೇರಿದವರು. ಅವರಿಗೆ “ಪ್ರಗತಿಶೀಲ ವಿಚಾರವಂತರ” ಒಡನಾಟವಿದೆ. ಈ ವಿದೇಯಕದ ಹಿಂದೆ ಕೆಲಸ ಮಾಡಿರುವುದೂ ಈ “ಪ್ರಗತಿಶೀಲ”ರ ತಲೆಯೇ ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ, ಕರ್ನಾಟಕದಲ್ಲಿ ತುರ್ತಾಗಿ ಆಗಬೇಕಿರುವ ಎಲ್ಲಾ ಕಾರ್ಯಗಳಿಗಿಂತಲೂ ಈ ವಿದೇಯಕವು ಹೇಗೆ ಆದ್ಯತೆವುಳ್ಳದ್ದಾಯಿತು ಎಂಬುದಕ್ಕೆ ಅವರ ಬಳಿ ಉತ್ತರ ಇರಲಾರದು. ತಮ್ಮ “Hidden Agenda” ಅನುಷ್ಠಾನಕ್ಕಾಗಿ ಸಿದ್ದರಾಮಯ್ಯನವರ ಅಧಿಕಾರವನ್ನು ಈ “ಪ್ರಗತಿಶೀಲ”ರು (ದು)ಉಪಯೋಗಿಸಿಕೊಳ್ಳುತ್ತಿದ್ದಾರೆಯೇ ಎಂಬ ಅನುಮಾನ ಹುಟ್ಟುತ್ತಿದೆ.
ವಿಜ್ನಾನವೂ ಒಂದು ನಂಬಿಕೆಯೇ ಅಲ್ಲವೇ?
– ಬಾಲಚಂದ್ರ ಭಟ್
ಈ ತಲೆಬರಹವನ್ನು ನೋಡಿದ ಬಹಳಷ್ಟು ಜನ ಇದೊಂದು ಮೂರ್ಖತನದ ಮಾತು ಎಂದುಕೊಳ್ಳುವದರಲ್ಲಿ ಸಂಶಯವಿಲ್ಲ. ಇಷ್ಟೆಲ್ಲ ನಾನು ಯಾಕೆ ಬರೆಯಲು ಪ್ರಾರಂಭಿಸಬೇಕಾಯಿತೆಂದರೆ ಇವತ್ತು ರಾಜಕೀಯ, ಸಾಮಜಿಕ ಹಾಗೂ ಇತ್ಯಾದಿ ವಲಯಗಳಲ್ಲಿ ನಂಬಿಕೆ, ಮೂಢನಂಬಿಕೆ ಹಾಗೂ ವಿಜ್ನಾನಗಳು ಬಹುಮಟ್ಟದಲ್ಲಿ ಚರ್ಚೆಯಾಗುತ್ತಿರುವದು. ಹೀಗೆ ಚರ್ಚೆಯಾದಾಗಲೆಲ್ಲ ನಂಬಿಕೆಯ ಬಗ್ಗೆ ಬೇರೆ ಬೇರೆ ಹಿನ್ನೆಲೆಯಲ್ಲಿ ಪರ/ವಿರೋಧ ವ್ಯಾಖ್ಯಾನಗಳನ್ನು ನೀಡಿದರೂ
ವಿಜ್ನಾನಕ್ಕೆ ಅವಿರೊಧ ಅನುಮೋದನೆ ಇರಬೇಕೆಂಬ ಇಂಗಿತ ಚರ್ಚೆಯ ಮೂಲ ತತ್ವವೇ ಆಗಿರುತ್ತದೆ.
ವೈಜ್ನಾನಿಕ ಚಿಂತಕರು ಜಡ್ಜ್ ಸ್ಥಾನದಲ್ಲಿಯೂ, ನಂಬಿಕೆ/ಮೂಢನಂಬಿಕೆಗಳ ಪರ/ವಿರೋಧಿಗಳು ಕಟೆಕಟೆಯಲ್ಲಿ ನಿಂತಿರುವಂತೆ ಅನಿಸುತ್ತದೆ. ಅಂತೆಯೆ ವಿಜ್ನಾನ ಇವತ್ತು ಜಡ್ಜ್ ಸ್ಥಾನವನ್ನು ಆಕ್ರಮಿಸಿದೆಯೆಂದರೆ ಮನುಕುಲದ ಬೌದ್ಧಿಕತೆ ಒಂದೇ ತಳಪಾಯದಡಿ ನಿರ್ಮಾಣವಾಗುತ್ತಿದೆ ಎನ್ನುವದರ ಅರ್ಥವೇನೊ! ಹಾಗೆಂದ ಮಾತ್ರಕ್ಕೆ ಎಲ್ಲರೂ ವಿಜ್ನಾನದ ಅಧ್ಯಯನದ ಬಗ್ಗೆ ಆಸ್ಥೆಯನ್ನು ತೋರಿಸುತ್ತಿದ್ದಾರೆಂದು ಅರ್ಥವಲ್ಲ. ಬದಲಿಗೆ ವಿಜ್ನಾನ ಇವತ್ತು ಜಡ್ಜ್ ಆಗಿರುವ ಕಾರಣ ಜನರು ತಮ್ಮ ತಮ್ಮ ಬದುಕಿನ ದೃಷ್ಟಿಕೋನಗಳನ್ನು ವಿಜ್ನಾನದ ಮೂಲಕ ಸಮರ್ಥಿಸಿಕೊಳ್ಳುತ್ತಿದ್ದಾರಷ್ಟೆ.
ಅಗೋಚರ….!
ಹೆಚ್ಚಾಗಿ ಪವಾಡಗಳು… ಪುರುಷರು… ಮಾಯಾ-ಮಂತ್ರ, ಭವಿಷ್ಯ ಮನುಷ್ಯರಿಗೆ ಇಷ್ಟ. ಯಾವ ಭಾಷೆಯಲ್ಲಿ ನೋಡಿದರು ಇಂತಹ ವಿಷಯಗಳಿಗೆ ಸಂಬಂಧಿಸಿದ ಕಥೆಗಳು , ಧಾರಾವಾಹಿಗಳು ಇದ್ದೆ ಇರುತ್ತದೆ. ಅದೊಂತರ ಸೀರಿಯಸ್ ವಿಷಯದ ಚರ್ಚೆ ಮಧ್ಯೆ ಸಣ್ಣ ಜಾಹಿರಾತು ಇದ್ದಂತೆ. ಬೇಕಾದವರು ನೋಡಬಹುದು ಬೇಡದೆ ಇದ್ದವರು ಬಿಸಾಡ ಬಹುದು.
ಹೆಚ್ಚು ಜನಪ್ರಿಯ ವ್ಯಕ್ತಿಗಳಲ್ಲಿ ಸಾಧು ಸಂತರು, ಬಾಬಗಳು ಸೇರುತ್ತಾರೆ. ಕಳೆದವಾರ ಅಣ್ಣ ಹಜಾರೆ ಅವರ ವಿಷಯದ ಜೊತೆಗೆ ಹೆಚ್ಚು ಚಾಲ್ತಿಯಲ್ಲಿ ಕಂಡ ಸಂಗತಿ ಪುಟ್ಟಪರ್ತಿ ಸಾಯಿ ಬಾಬ. ಅತ್ಯಂತ ಜನಪ್ರಿಯ ಬಾಬ ಅವರು, ಜೊತೆಗೆ ಅತ್ಯಂತ ವಿವಾದಿತ ಬಾಬ.
ಬಹುಸಂಖ್ಯಾತ ಉತ್ತರ ಭಾರತೀಯರು ಅವರ ಮನೆಯಲ್ಲಿ ಇರುವ ಒಂದು ಚಂಬು ಪಕ್ಕದ ಮನೆಗೆ ಕೊಡಬೇಕಾದ್ರೂ ಸಾಯಿ ಬಾಬ ಅನುಮತಿ ಕೇಳ್ತಾರೆ ,ತಮಾಷೆ ಅಲ್ಲ ಕಣ್ರೀ ಅಷ್ಟೊಂದು ನಂಬಿಕೆ .ಏನೇ ಸಂಗತಿಗಳು ಇರಲಿ ಅವರು ಅತ್ಯಂತ ಹೆಚ್ಚು ಗಮನ ಸೆಳೆಯುವುದು ಸಮಾಜಮುಖಿ ಕೆಲಸಗಳಿಂದ.ಭಜನ್ ಮಾಡುವಾಗ ಸದಾ ಶಾಂತ ಸ್ಥಿತಿಯಲ್ಲಿರುವ ವದನ, ಆ ಮೌನ ಎಲ್ಲವೂ ಹೆಚ್ಚು ಆಕರ್ಷಣೆಯ ಅಂಶ. ಅವರ ಭಜನ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರು ಸಂತೋಷದಿಂದ ಹೊರ ಬರುತ್ತಾರೆ.