ವಿಷಯದ ವಿವರಗಳಿಗೆ ದಾಟಿರಿ

Posts tagged ‘ನಕ್ಸಲ್’

19
ಸೆಪ್ಟೆಂ

ದ್ವೇಷ ಕಾರುವುದನ್ನೇ ವಿಚಾರವಾದ ಎನ್ನುವುದಾದರೆ…

– ಅಜಿತ್ ಶೆಟ್ಟಿ ಹೆರಾಂಜೆ

ಗೌರಿ ಲಂಕೇಶ್ ಕೊಲೆಯಾದಾಗ ನಾನು ಮುಖಪುಟದಲ್ಲಿ ಒಂದು ಸ್ಟೇಟಸ್ ಹಾಕಿದ್ದೆ.. ಅಕಾಲಿಕ ಮರಣ ಯಾರದ್ದೇ ಆಗಿರಲಿ ಅದು ಘೋರ. ಅದು ಗೌರಿ ಲಂಕೇಶರಂತಾ ಖ್ಯಾತ ನಾಮರದ್ದೆ ಆಗಿರಲಿ ಅಥವಾ ಶರತ್, ರುದ್ರೇಶ್, ಕಟ್ಟಪ್ಪ, ರವಿಯರಂತ ಶ್ರೀ ಸಾಮಾನ್ಯರದ್ದೇ ಆಗಿರಿಲಿ..!! ಮತ್ತಷ್ಟು ಓದು »

14
ಸೆಪ್ಟೆಂ

ಕಳೆದ ಒಂದು ವಾರದಿಂದ ನಾನು ಕೇಳಲ್ಪಟ್ಟ ಐದು ಸುಳ್ಳುಗಳು

– ರಾಜೇಶ್ ನರಿಂಗಾನ.

೧) ಗೌರಿ ಲಂಕೇಶ್ ವಿಚಾರವಾದಿ

ಗೌರಿ ಲಂಕೇಶ್ ಯಾವ ರೀತಿಯ ವಿಚಾರವಾದಿ ಎಂದೇ ತಿಳಿಯುತ್ತಿಲ್ಲ. ತನ್ನ ಸಂಪಾದಕತ್ವದ ‘ಗೌರಿ ಲಂಕೇಶ್ ಪತ್ರಿಕೆ’ಯಲ್ಲಿ ಭಿನ್ನ ವಿಚಾರಧಾರೆಯ ನಿಲುವನ್ನು ಹೊಂದಿರುವ ಆಕೆಗಿಂತ ವಯಸ್ಸಿನಲ್ಲಿ ಅದೆಷ್ಟೇ ಹಿರಿಯರಿದ್ದರೂ ಏಕವಚನದಲ್ಲಿ ಹೀನಮಾನವಾಗಿ ನಿಂದಿಸುತ್ತಿದ್ದರು. ರಂಜನೆ, ಪ್ರಲೋಭನೆಯ ಹೆಸರಿನಲ್ಲಿ ಭಿನ್ನ ವಿಚಾರಧಾರೆಯವರ ವೈಯಕ್ತಿಕ ಸ್ವಾತಂತ್ರ್ಯವನ್ನು ಹರಣಗೈಯುತ್ತಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಶಿಕ್ಷೆಯನ್ನೂ ವಿಧಿಸಿತ್ತು. ಆದ್ದರಿಂದ ಭಿನ್ನ ವಿಚಾರಧಾರೆಯಿರುವ ವ್ಯಕ್ತಿಗಳ ತೇಜೋವಧೆ ಮಾಡುವುದನ್ನೇ ‘ವಿಚಾರವಾದ’ ಎನ್ನುವುದಾದರೆ ಅಂಥ ವಿಚಾರವಾದಕ್ಕೆ ನನ್ನ ಧಿಕ್ಕಾರವಿದೆ. ಮತ್ತಷ್ಟು ಓದು »

13
ಸೆಪ್ಟೆಂ

ಶವದ ಮೇಲಿನ ರಣಹದ್ದುಗಳು

– ಮಹೇಶ್ ಮಾತೃಭೂಮಿ

ದೇಶದಲ್ಲಿ ಎಲ್ಲೇ ಬುದ್ಧಿಜೀವಿಗಳ ಹತ್ಯೆ ನಡೆದರೂ ಮೊದಲು ಆರೋಪ ಹೊರಿಸುವುದು ಬಲಪಂಥೀಯ ವಿಚಾರಧಾರೆ ಹೊಂದಿರುವವರ ಮೇಲೆ, ಸಂಘಪರಿವಾರದವರ ಮೇಲೆ. ಎಲ್ಲಾ ಹತ್ಯೆಯ ಹಿಂದಿನ ಮರ್ಮ ಒಂದೇ, ದೇಶದಲ್ಲಿ ಕಮ್ಮಿ ನಿಷ್ಟರ ಹಾಗೂ ತಮ್ಮ ಎಡಪಂಥೀಯ ಚಿಂತನೆ ಗಳಿಗೆ ಸ್ಪಂದಿಸುವ ಮನೋಭಾವನೆ ಹೊಂದಿರುವಂತವರದ್ದೆ ಕೈ ಇರಬೇಕೆನ್ನುವ ಹಿಡನ್ ಅಜೆಂಡ ಇದ್ದಂತಿದೆ.

ಮತ್ತಷ್ಟು ಓದು »

2
ಡಿಸೆ

ಮೋದಿ ಭಾರತದಲ್ಲಿ ತೀವ್ರಗೊಂಡ ನಿರುದ್ಯೋಗ ಸಮಸ್ಯೆ : ಚಿಂತಾಜನಕ ಮಾಹಿತಿ (ಸುಳ್ಸುದ್ದಿ)

ಪ್ರವೀಣ್ ಕುಮಾರ್, ಮಾವಿನಕಾಡು

sulsuddi-2ನವದೆಹಲಿ, ಡಿಸೆಂಬರ್ 2 : ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹಿಂದೆಂದಿಗಿಂತಲೂ ತೀವ್ರವಾಗಿದೆ. ಕಳೆದ ಹನ್ನೆರಡು ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದೇಶದಲ್ಲಿ ತಾಂಡವವಾಡುತ್ತಿರುವುದು ಸಮೀಕ್ಷೆಯೊಂದರಿಂದ ಬಹಿರಂಗವಾಗಿದೆ.

ಕಳೆದ ನವೆಂಬರ್.8 ನೇ ತಾರೀಕಿನಿಂದ ದೇಶದಲ್ಲಿ ಇಲ್ಲಿಯವರೆಗೆ 15 ರಿಂದ 65 ರ ವಯಸ್ಸಿನ ಸುಮಾರು 8% ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಸೆಂಟ್ರಲ್‌ ಗಂಜಿ ಬ್ಯೂರೋ ನಡೆಸಿದ ಉದ್ಯೋಗ-ನಿರುದ್ಯೋಗ ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ. ಮತ್ತಷ್ಟು ಓದು »

25
ಸೆಪ್ಟೆಂ

ಮದ್ದರೆಯದಿದ್ದರೆ ಈ ಮಾವೋವ್ಯಾಧಿ ನಿದ್ದೆಗೆಡಿಸಲಿದೆ ಎಚ್ಚರ!

– ರೋಹಿತ್ ಚಕ್ರತೀರ್ಥ

naxals-1457757541ಎರಡು ಸುದ್ದಿಗಳಿವೆ. ಒಂದು – ಉರಿ ಸೇನಾನೆಲೆಯ ಮೇಲೆ ನಾಲ್ಕು ಮಂದಿ ಮುಸ್ಲಿಂ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 17 ಸೈನಿಕರು ಹತರಾಗಿದ್ದಾರೆ. ಎರಡು – ಭಾರತದ ನಕ್ಸಲ್ ಉಗ್ರರು ಜಗತ್ತಿನ ಭಯೋತ್ಪಾದನೆಯ ಪಟ್ಟಿಯಲ್ಲಿ ಕಂಚಿನ ಪದಕವನ್ನು ಜಸ್ಟ್ ಮಿಸ್ ಮಾಡಿಕೊಂಡು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಇವೆರಡರಲ್ಲಿ, ನಕ್ಸಲರ ಸಮಸ್ಯೆಯೇ ದೊಡ್ಡದು ಅನಿಸಿದ್ದರಿಂದ ಅದನ್ನು ಈ ವಾರದ ಅಂಕಣಕ್ಕೆ ಆಯ್ದುಕೊಂಡಿದ್ದೇನೆ. ಯಾಕೆಂದರೆ ಹೊರಗಿನ ಶತ್ರುಗಳನ್ನು ಪ್ರತಿದಾಳಿ ಮಾಡಿಯೋ ಯುದ್ಧ ಘೊಷಿಸಿಯೋ ತಹಬದಿಗೆ ತರಬಹುದೆನ್ನೋಣ; ಆದರೆ, ತಾಯ್ನಾಡಿನ ಒಳಗೇ ಇದ್ದುಕೊಂಡು ಒರಲೆಯಂತೆ ದೇಶವನ್ನು ಕೊರೆದು ಪುಡಿಗುಟ್ಟುವ ಆಂತರಿಕ ಶತ್ರುಗಳನ್ನು ಬಗ್ಗುಬಡಿಯುವುದು ಹೇಗೆ? 2015ರಲ್ಲಿ ಭಾರತದಲ್ಲಿ ನಡೆದ 791 ಭಯೋತ್ಪಾದನಾ ಕೃತ್ಯಗಳಲ್ಲಿ 43% ಅನ್ನು ನಕ್ಸಲೈಟ್ ಸಂಘಟನೆಗಳೇ ಮಾಡಿವೆ ಎಂದು ಅಂತಾರಾಷ್ಟ್ರೀಯ ವರದಿಯೊಂದು ಹೇಳುತ್ತಿದೆ. ಒಂದೇ ವರ್ಷದಲ್ಲಿ ಇವರು ನಡೆಸಿರುವ ದಾಳಿಗಳು 343; ಇವರ ಅಟ್ಟಹಾಸಕ್ಕೆ ಬಲಿಯಾಗಿ ಶವವಾಗಿ ಮಲಗಿದ ಅಮಾಯಕರ ಸಂಖ್ಯೆ 176. 2010ರಿಂದ 2015ರವರೆಗಿನ ಅವಧಿಯಲ್ಲಿ ದೇಶದೊಳಗೆ ನಡೆದ ಭಯೋತ್ಪಾದನಾ ಕೃತ್ಯಗಳಲ್ಲಿ 2162 ನಾಗರಿಕರು, 802 ಭದ್ರತಾ ಸಿಬ್ಬಂದಿ ಹತರಾಗಿದ್ದಾರೆಂದು ಕೇಂದ್ರದ ಗೃಹಸಚಿವಾಲಯದ ವರದಿ ಹೇಳುತ್ತಿದೆ. ಜಗತ್ತಿನಲ್ಲಿ ತಾಲಿಬಾನ್, ಐಸಿಸ್ ಮತ್ತು ಬೊಕೋ ಹರಾಮ್ ಎಂಬ ಉಗ್ರಗಾಮಿ ಸಂಘಟನೆಗಳ ನಂತರದ ಸ್ಥಾನವನ್ನು ಭಾರತದ ನಕ್ಸಲ್ ಚಳವಳಿ ತನ್ನ ಮುಡಿಗೇರಿಸಿಕೊಂಡಿದೆ. ಭಾರತ ಪ್ರಪಂಚದೆದುರು ತಲೆ ತಗ್ಗಿಸುವಂಥ ವಿಚಾರವಿದು. ಕರ್ನಾಟಕದ ಸಂದರ್ಭದಲ್ಲಿ ನಕ್ಸಲೈಟ್ ಚಳವಳಿಯ ನೆಲೆ-ಬೆಲೆಗಳೇನು ಎಂಬುದನ್ನು ವಿಮರ್ಶಿಸುವುದೇ ಪ್ರಸ್ತುತ ಲೇಖನದ ಉದ್ದೇಶ. ಮತ್ತಷ್ಟು ಓದು »