ನಮ್ಮೂರ ಹಬ್ಬ – ಕೆಡ್ಡಸ (ಭೂಮಿ ಋತುಮತಿಯಾಗುವುದು)
– ಭರತೇಶ ಅಲಸಂಡೆಮಜಲು
ಪುತ್ತೂರು ತಾಲೂಕು, ದಕ್ಷಿಣ ಕನ್ನಡ
ತುಳುನಾಡು ಅಂದ ಕೂಡಲೇ ಅಲ್ಲಿನ ಆಚರಣೆ, ಕ್ರಮ, ನಿಲುವುಗಳಲ್ಲಿ ಒಂದಷ್ಟು ಬಿನ್ನ ವಿಶೇಷತೆಯಿಂದಲೇ ಕೂಡಿರುತ್ತದೆ. ಇಲ್ಲಿ ಪಂಚಭೂತಗಳನ್ನು ವಿವಿಧ ರೀತಿಯಿಂದ ವಿಶೇಷವಾಗಿ ಆಚರಿಸುವುದು ವಾಡಿಕೆ. ಹೌದು, ಇಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ ಹಿಂದಿನಿಂದಲೂ ಅಕ್ಕನೇ ಮನೆಯೊಡತಿ, ಆಳಿಯಕಟ್ಟು ಪದ್ಧತಿಯೇ ಇದಕ್ಕೆ ಮೊಹರು… ಹೌದು ಅದುದರಿಂದಲೇ ಇಲ್ಲಿ ಭೂಮಿಯನ್ನು ಹೆಣ್ಣು ಎಂದು ಸಂಕಲ್ಪಿಸಿ ಮಾನುಷಿಕವಾಗಿ ಸಾಮಾನ್ಯ ಸ್ತ್ರಿಯಲ್ಲಾಗುವ ಪ್ರಕೃತಿ ಸಹಜ ಬದಲಾವಣೆಯನ್ನು ಭೂತಾಯಿಯಲ್ಲಿ ಸಂಭೂತ ಮಿಲಿತವಾಗಿಸಿ ಅವಳನ್ನು ದೇವಿಯೆಂದು ಅರಾಧಿಸುವುದು, ಅವಳ ಮೊದಲ ಋತುಸ್ರಾವವನ್ನು ಸಂಭ್ರಮಿಸುವುದು, ಹೇಗೆ ಮನೆ ಹುಡುಗಿ ದೊಡ್ಡವಳಾದಳೆಂದು ಮನೆಯವರೆಲ್ಲಾ ಸಂಭ್ರಮಿಸುತ್ತಾರೋ, ಮದಿಮಾಲ್ ಮದಿಮೆ ಮಾಡಿ ಊರವರನ್ನೆಲ್ಲಾ ಕರೆದು ಪುಟ್ಟ ಮಗಳಿಗೆ ಸೀರೆ ಉಡಿಸಿ ಮದುವೆ ಮಾಡುತ್ತರೋ… ಮತ್ತಷ್ಟು ಓದು
ನಮ್ಮೂರ ಹಬ್ಬ- ನುಡಿ ಮತ್ತು ಭೇಟಿ
– ಪ್ರಮೋದ್ ಜತ್ಕರ
ನನ್ನದು ಗುಮ್ಮಟ ನಗರಿ ವಿಜಯಪುರ. ತನ್ನದೇ ಆದ ಕಲಾ ಸ್ವಂತಿಕೆ ಹೊಂದಿರುವಂತಹದ್ದು. ಇಲ್ಲಿ ತಾಲುಕಿಗೊಂದು ಭಾಷೆ, ವಲಯಕ್ಕೊಂದು ಆಚರಣೆ, ಊರಿಗೊಂದು ದೈವ.. ಹೀಗೆ ವೈಶಿಷ್ಟ್ಯವಾದದ್ದು. ಇದು ಕೇವಲ ನಮ್ಮ ಜಿಲ್ಲೆಯ ವೈಶಿಷ್ಟ್ಯವಲ್ಲ ಇಡೀ ಭಾರತದ ವೈಶಿಷ್ಟ್ಯ, ಅದಕ್ಕೆಂದೇ ನಾವು ವಿವಿಧತೆಯನ್ನು ಪ್ರದರ್ಶಿಸುವವರು… (ಏಕತೆ ಎಂದು ಹೇಳಲಾರೆ!).
ನನ್ನೂರು ವಿಜಯಪುರದ ಇಂಡಿ ತಾಲ್ಲೂಕಿನ ಚಡಚಣ ವಲಯದಲ್ಲಿ ಬರುತ್ತದೆ. ನನ್ನೂರು ಒಂದು ಚಿಕ್ಕ ಹಳ್ಳಿ, ನಿವರಗಿ ಅಂತ ಅದರ ಹೆಸರು, ಭೀಮೆಯ ತಂಪಿನಲ್ಲಿ ಬೆಳೆದ ಊರು. ಅವಳೇ ನಮಗೆ ದೈವಗಳ ದೈವ.. ಭೀಮೆ ದಾಟಿದರೆ ಮಹಾರಾಷ್ಟ್ರ. ನಮ್ಮ ಸಂಪ್ರದಾಯಗಳು ಸಾಮಾನ್ಯವಾಗಿ ಮಹಾರಾಷ್ಟ್ರದ ಸಂಪ್ರದಾಯಗಳಿಗೆ ಹೋಲುತ್ತವೆ.
ನಮ್ಮಲ್ಲಿನ ಪ್ರಮುಖ ಸಂಪ್ರದಾಯಗಳಲ್ಲಿ “ನುಡಿ” ಮತ್ತು “ಭೇಟಿ” ಎಂಬ ಎರಡು ಸಂಪ್ರದಾಯಗಳು ಬಹು ಮುಖ್ಯವಾದವು. ಮತ್ತಷ್ಟು ಓದು
ನಮ್ಮೂರ ಹಬ್ಬ – ಋಷ್ಯಶೃಂಗೇಶ್ವರನ ರಥೋತ್ಸವ
– ಅಪರ್ಣ ಜಿ. ಸಿರಿಮನೆ
ಹಬ್ಬಗಳು ಸಾಮಾಜಿಕ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅದರಲ್ಲೂ ಪಾರಂಪರಿಕವಾಗಿ ನಡೆದುಕೊಂಡು ಬರುವ ಊರ ಹಬ್ಬಗಳು ಸಾಮಾಜಿಕ ಒಗ್ಗಟ್ಟನ್ನು ಪ್ರತಿನಿಧಿಸುವುದರಲ್ಲಿ ಎರಡು ಮಾತಿಲ್ಲ. ಮಲೆನಾಡಿನ ದಟ್ಟ ಹಸಿರಿನ ನಡುವೆ ರಮಣೀಯತೆಯನ್ನೇ ಹಾಸಿ ಹೊದ್ದಿರುವ ಒಂದು ಪುಟ್ಟ ಗ್ರಾಮ ‘ಕಿಗ್ಗಾ’ ನಮ್ಮೂರು. ಪ್ರಾಕೃತಿಕ ಸೌಂದರ್ಯದಿಂದಲೇ ಜನರನ್ನು ತನ್ನೆಡೆಗೆ ಸೆಳೆಯುವ ನಮ್ಮೂರು ಮಳೆದೇವರೆಂದೇ ಹೆಸರಾಗಿರುವ ಋಷ್ಯಶೃಂಗೇಶ್ವರ ನೆಲೆಸಿರುವ ಪುಣ್ಯಕ್ಷೇತ್ರ. ಪ್ರತಿವರ್ಷವೂ ನಡೆಯುವ ಋಷ್ಯಶೃಂಗೇಶ್ವರನ ರಥೋತ್ಸವ ನಮ್ಮೂರಿನ ಪ್ರಮುಖ ಹಬ್ಬ. ಮತ್ತಷ್ಟು ಓದು
ನಮ್ಮೂರ ಹಬ್ಬ – ಹೊಸ ಹುರುಪಿನ ಹೊಸ್ತು
– ಸ್ವಾತಿ ಶೆಟ್ಟಿ
ಬೆಳಗಾಗಿ ನಾನೆದ್ದು ಯಾರ್ಯಾರ ನೆನೆಯಲಿ
ಎಳ್ಳು ಜೀರಿಗೆ ಬೆಳೆಯೋಳ ಭೂಮಿತಾಯಿ
ಎದ್ದೊಂದುಗಳಿಗೆ ನೆನೆದೇನು…
ಮೋಡ ಮಳೆಗೆ ಮೂಲ, ಮಕ್ಕಳಿಗೆ ತಾಯಿ ಮೂಲ, ಬೆಳಕಿಗೆ ಸೂರ್ಯ ಮೂಲ, ಭೂಮಿತಾಯಿ ಬೆಳೆಗೆ ಮೂಲ. ಹೌದು, ನಮ್ಮದು ಕೃಷಿ ಪ್ರದಾನವಾದ ವ್ಯವಸ್ಥೆ ರೈತರಿಗೆ ಅನ್ನ ನೀಡುವ ಭೂಮಿ ತಾಯಿ ಹಾಗೂ ಕೃಷಿಯೊಂದಿಗೆ ಅವಿನಾಭಾವ ಸಂಭಂದವಿದೆ. ಭೂಮಿಯನ್ನು ಹಾಗೂ ಕೃಷಿಯನ್ನು ಈ ಹಿನ್ನೆಲೆಯಲ್ಲಿ ಪೂಜ್ಯ ಭಾವನೆಯಿಂದ ಆರಾಧಿಸಿಕೊಂಡು ಬಂದಿದ್ದೇವೆ. ನಮ್ಮ ಕರಾವಳಿಯ ಹೆಚ್ಚಿನ ಎಲ್ಲಾ ಆಚರಣೆಗಳು ಕೃಷಿ ಸಂಬಂಧಿತವಾದ ಆಚರಣೆಗಳಾಗಿ ರೂಢಿಯಲ್ಲಿದೆ. ಮತ್ತಷ್ಟು ಓದು
ನಮ್ಮೂರ ಹಬ್ಬ ( ಮೈಸೂರು )
– ವಿಜಯ ನಂಜುಂಡಯ್ಯ
ಭಾರತೀಯರಿಗೆ ಹಬ್ಬ, ಹರಿದಿನಗಳು ಹೊಸದೇನೂ ಅಲ್ಲ. ಹಬ್ಬಗಳು ಹೆಸರೇ ಸೂಚಿಸುವಂತೆ, ಸಂತೋಷ, ಸಡಗರದ ಸಂಕೇತ ವಾಗಿದೆ. ಈ ಹಬ್ಬ, ಸಂತೋಷವನ್ನುಂಟು ಮಾಡುತ್ತದೆ ಎಂದರೆ ನೀವೇ ನೋಡಿ.
ಕೆಲವು ವಸ್ತುಗಳೂ, ವಿಷಯಗಳೂ ಮನಸ್ಸಿಗೆ ಹತ್ತಿರವಾಗಿ ಖುಷಿ ತಂದರೆ,,ಸೌಂದರ್ಯ, ಶೃಂಗಾರ ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತದೆ.ಹಾಗೇ ಇಂಪಾದ, ತಂಪಾದ ಪ್ರೀತಿಯ ಮಾತುಗಳು, ಮಧುರವಾದ ಸ್ವರ, ಸಂಗೀತಗಳು ಕಿವಿಗೆ ಹಬ್ಬವನ್ನುಂಟು ಮಾಡುವುದರಲ್ಲಿ ಆಶ್ಚರ್ಯವಿಲ್ಲ. ರುಚಿ, ರುಚಿಯಾದ ತಿಂಡಿ ತೀರ್ಥಗಳು ಬಾಯಿಗೆ ಹಬ್ಬವನ್ನುಂಟು ಮಾಡುತ್ತದೆ.. ಮತ್ತಷ್ಟು ಓದು
ನಮ್ಮೂರ ಹಬ್ಬ.. ( ಶ್ರೀ ರಂಗನಾಥ ಸ್ವಾಮಿಯ ರಥೋತ್ಸವ )
ಯೋಗಾನಂದಾರಾಧ್ಯ
ನೇರಲವಾಡಿ, ಮಾಗಡಿ ತಾಲ್ಲೂಕು
ರಾಮನಗರ ಜಿಲ್ಲೆ
ಹಬ್ಬಗಳೆಂದರೆ ಸಾಮಾನ್ಯವಾಗಿ ಸಡಗರ ಸಂಭ್ರಮದಿಂದ ಕೂಡಿದ್ದು, ಬಂಧು ಬಾಂಧವರು, ಗೆಳೆಯರು, ಆಯಾ ಸಮುದಾಯದವರು ಒಟ್ಟಿಗೇ ಸೇರಿ ಆಚರಿಸುವ ಮನಶ್ಶಾಂತಿಯ ಮಹತ್ಕಾರ್ಯ..
ಇಂದು ಪ್ರಪಂಚದ ನಾನಾ ಭಾಗಗಳಲ್ಲಿ ಅವರದೇ ಆದ ಸಂಸ್ಕೃತಿಯ ವೈಶಿಷ್ಟ್ಯಗಳಿಂದ ಕೂಡಿದ ಹಲವಾರು ಹಬ್ಬಗಳನ್ನು ಆಚರಿಸುವುದನ್ನು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಾವು ಕಂಡಿದ್ದೇವೆ.. ಕೆಲವು ಹಬ್ಬಗಳನ್ನು ಜಾಗತಿಕ ಮಟ್ಟದಲ್ಲಿ ಆಚರಿಸಿದರೆ, ಮತ್ತೆ ಕೆಲವು ರಾಷ್ಟ್ರೀಯ ಮಟ್ಟದಲ್ಲಿ, ಇನ್ನೂ ಕೆಲವು ರಾಜ್ಯಮಟ್ಟದಲ್ಲಿ ಹಾಗೆಯೇ ಸಂಪ್ರದಾಯ, ಸಂಸ್ಕೃತಿಗಳ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲೂ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸುವುದು ಸರ್ವೇ ಸಾಮಾನ್ಯ… ಮತ್ತಷ್ಟು ಓದು