ವಿಷಯದ ವಿವರಗಳಿಗೆ ದಾಟಿರಿ

Posts tagged ‘ನಿಲುಮೆ_ಸುಳ್ಸುದ್ದಿ’

4
ಜೂನ್

ಕಾಗೆ ಮೇಲೆ ಎಸ್ಮಾಸ್ತ್ರ!

– ರಾಕೇಶ್ ಶೆಟ್ಟಿ

FB_IMG_1464857174666ಮೊನ್ನೆ ಮಟ ಮಟ ಮಧ್ಯಾಹ್ನ ಮುಖ್ಯಮಂತ್ರಿಗಳ ಕಾರಿನ ಮೇಲೆ ಕಾಗೆ ಕುಳಿತಿದ್ದು ಬ್ರೇಕಿಂಗ್ ನ್ಯೂಸ್ ಆಗಿ ಚಾನೆಲ್ಲುಗಳು ಕಾಕಾ ಪಂಡಿತರು,ತಜ್ಞರನ್ನೆಲ್ಲ ಕರೆಸಿ ಪಾನೆಲ್ ಡಿಸ್ಕಶನ್ನುಗಳನ್ನು ಮಾಡಿದರು.ಈ ಬಗ್ಗೆ ನಮ್ಮ ಸುಳ್ಸುದ್ದಿ ತಂಡ ಗಣ್ಯರ ಅಭಿಪ್ರಾಯ ಕೇಳಿದಾಗ ಸಿಕ್ಕಿದ್ದಿಷ್ಟು…

ಸುಳ್ಸುದ್ದಿ ತಂಡ ಮೊದಲಿಗೆ ಮುಖ್ಯಮಂತಿಗಳ ಬಳಿಯೇ ಅಭಿಪ್ರಾಯ ಕೇಳಿತು.
ಸುಳ್ಸುದ್ದಿ ಟೀಂ : ಸರ್, ನಿಮ್ಮ ಕಾರಿನ ಮೇಲೆ ಕಾಗೆ ಕುಳಿತಿದ್ದರ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಮುಮಂ : ಆ ಕಾಗೆಗೆ ಮಾನ ಮರ್ಯಾದೆ ಇದೆಯೇನ್ರಿ? ಅದು ಪದ್ಮನಾಭನಗರದ ಹೆಡ್ಡಾಫೀಸಿನಿಂದ ಬಂದಿದ್ದೋ,ಮಲ್ಲೇಶ್ವರದ ಆಫೀಸಿನವರು ಹಾರಿಸಿದ್ದೋ ಎಂಬ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದೇನೆ.

ಸುಳ್ಸುದ್ದಿ ಟೀಂ : ತನಿಖೆ ನಡೆಸುವವರು ಯಾರು ಸರ್? ಅವರೇ ಪ್ರತಿಭಟನೆಗೆ ಇಳಿಯುವವರಿದ್ದರಲ್ಲಾ? ಇನ್ನು ಕಾಗೆ ಕೇಸ್ ಗತಿ ಏನು?
ಮುಮಂ : ಯಾರು ಪ್ರತಿಭಟನೆ ಮಾಡಲ್ಲ ಕಣ್ರಿ.ಅವರ ಮೇಲೆ ಎಸ್ಮಾಸ್ತ್ರ ಪ್ರಯೋಗಿಸಲು ಅಪ್ಪಣೆ ಕೊಡಿಸಿಲ್ವೇನ್ರಿ.ಈಗ ಅದನ್ನು ಕಾಗೆಯ ಮೇಲೂ ಬಳಸುವಂತೆ ಹೇಳುತ್ತೇನೆ.ಇಷ್ಟು ದಿನ ನೀವೆಲ್ಲ ವೈದಿಕರಿಂದ ಕಲಿತ “ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ” ಅಂತ ಬಳಸ್ತಾ ಇದ್ರಿ.ಇನ್ಮುಂದೆ “ಕಾಗೆ ಮೇಲೆ ಎಸ್ಮಾಸ್ತ್ರ” ಅಂತ ಬಳಸ್ಕೊಳ್ರಿ.

ಸುಳ್ಸುದ್ದಿ : ಸರ್,ಕಾಗೆ ಮೇಲೆ ಎಸ್ಮಾಸ್ತ್ರನಾ!?
ಮುಮಂ : ಜಾಸ್ತಿ ಹಾರಾಡಿದ್ರೆ,ನಿಮ್ ಮೇಲೆ ಲೋಕಾಯುಕ್ತದ ಮೇಲೆ ಪ್ರಯೋಗಿಸಿದ “ಭಸ್ಮಾಸ್ತ್ರ” ಪ್ರಯೋಗಿಸಲಾಗುವುದು.

ಮತ್ತಷ್ಟು ಓದು »

15
ಫೆಬ್ರ

ಸುಳ್ಸುದ್ದಿ : ಭಯೋತ್ಪಾದಕಿಯನ್ನು ವರಿಸಲಿರುವ ರಾಷ್ಟ್ರೀಯ ಪಕ್ಷದ ಉಪಾಧ್ಯಕ್ಷ!

– ಪ್ರವೀಣ್ ಕುಮಾರ್ ಮಾವಿನಕಾಡು

Nilume Sulsuddi - Terro Supporting Politicsಕಳೆದ ಹಲವು ದಶಕಗಳಿಂದ ಭಾರತದ ಮೋಸ್ಟ್ ಎಲಿಜೆಬಲ್ ಬ್ಯಾಚುಲರ್ ಎನಿಸಿಕೊಂಡಿದ್ದ ರಾಷ್ಟ್ರೀಯ ಪಕ್ಷದ ಉಪಾಧ್ಯಕ್ಷರೊಬ್ಬರು ಭಯೊತ್ಪಾದಕಿಯೊಬ್ಬಳನ್ನು ವಿವಾಹವಾಗಲಿರುವುದಾಗಿ ಆ ಪಕ್ಷದ ಹಿರಿಯ ವಕ್ತಾರರೊಬ್ಬರು ತಿಳಿಸಿದ್ದಾರೆ. ಇತ್ತೀಚಿಗೆ ಪಕ್ಷ ಕೈಗೊಂಡ ಸಮೀಕ್ಷೆಯ ಪ್ರಕಾರ ದೇಶದಲ್ಲಿ ಭಯೋತ್ಪಾದಕರು ಅಥವಾ ಭಯೋತ್ಪಾದಕರ ಬೆಂಬಲಿಗರು ಸುಮಾರು 15 ರಿಂದ 20 ಪ್ರತಿಶತ ಇದ್ದು,ಅವರೆಲ್ಲರೂ ಈ ಮೊದಲು ನಮ್ಮ ಪಕ್ಷದ ಖಾಯಂ ಮತದಾರರಾಗಿದ್ದರು,ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ಪಕ್ಷದಂತೆಯೇ ಹಲವು ಮೂಲಭೂತವಾದೀ ಪಕ್ಷಗಳು ಉದಯಿಸಿದ್ದು, ಇನ್ನು ಕೆಲವು ಪಕ್ಷಗಳು ವೋಟಿಗಾಗಿ ತಮ್ಮ ತತ್ವ-ಸಿದ್ದಾಂತ ಗಳನ್ನು ಬದಲಾಯಿಸಿಕೊಂಡಿದ್ದು,ಇದರಿಂದಾಗಿ ಭಯೋತ್ಪಾದಕರ ಓಟಿಗಾಗಿ ದೇಶದಲ್ಲಿ ತೀವ್ರ ಸ್ಪರ್ದೆ ಏರ್ಪಟ್ಟಿದೆ.ಆದ ಕಾರಣ ಆಂಧ್ರ,ಪಶ್ಚಿಮ ಬಂಗಾಳ,ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಹರಿದು ಹಂಚಿ ಹೋಗಿರುವ ನಮ್ಮ ಸಾಂಪ್ರದಾಯಿಕ ಭಯೋತ್ಪಾದಕರ ಮತಗಳನ್ನು ಮತ್ತೆ ಬುಟ್ಟಿಗೆ ಹಾಕಿಕೊಳ್ಳುವ ದೃಷ್ಠಿಯಿಂದಾಗಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಕಳೆದ ತಿಂಗಳು ಹೈದರಾಬಾದ್ ನಲ್ಲಿ ಬಾಂಬ್ ಇಟ್ಟಿದ್ದ ಯಾಕೂಬ್ ಮೆಮನ್ ಎನ್ನುವ ಉಗ್ರವಾದಿಯ ಬೆಂಬಲಿಗರ ಪರವಾಗಿ ಹೋರಾಟ ನಡೆಸಿದ ಆ ಯುವರಾಜನಿಗೆ ಸಿಕ್ಕ ಅಭೂತಪೂರ್ವ ಬೆಂಬಲವನ್ನು ಕಂಡು ಪುಳಕಗೊಂಡ ಪಕ್ಷದಿಂದ ನೇಮಿಸಲ್ಪಟ್ಟ ಹಲವು ಸಲಹೆಗಾರರು,ಆತನ ತಾಯಿಯೂ ಆದ ಪಕ್ಷದ ಅಧ್ಯಕ್ಷೆಯ ಮುಂದೆ ಈ ರೀತಿಯ ಸಲಹೆಯನ್ನಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.ನಂತರ ಪಕ್ಷಾಧ್ಯಕ್ಷೆ ಈ ಬಗ್ಗೆ ಸಕಾರಾತ್ಮಕ  ತೀರ್ಮಾನವನ್ನು ಕೈಗೊಂಡು ಪಕ್ಷದ ನೀತಿ ನಿರೂಪಣಾ ಸಮಿತಿಯ ಮುಂದೆ ಮಂಡಿಸಿದ್ದು, ಸಮಿತಿ ತನ್ನ ಸರ್ವಾನುಮತದ ಒಪ್ಪಿಗೆ ಸೂಚಿಸಿದ ಬಳಿಕ ಪಕ್ಷ ಈ ಕುರಿತು ಅಂತಿಮ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.

ಮತ್ತಷ್ಟು ಓದು »

26
ಜನ

ಸುಳ್ಸುದ್ದಿ : ರಾಜ್ಯದಲ್ಲಿ “ಶಂಕಿತ ಭಯೋತ್ಪಾದಕರ ಹಿತರಕ್ಷಣಾ ವೇದಿಕೆ” ಅಸ್ತಿತ್ವಕ್ಕೆ

– ಪ್ರವೀಣ್ ಕುಮಾರ್ ಮಾವಿನಕಾಡು

Nilume Sulsuddi - Secular Terror Politicsದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ”ಶಂಕಿತ ಭಯೋತ್ಪಾದಕರ ಹಿತರಕ್ಷಣಾ ವೇದಿಕೆ”ಅಸ್ತಿತ್ವಕ್ಕೆ ತರಲಾಗಿದ್ದು, ವೇದಿಕೆಗೆ ನೂತನ ಪದಾಧಿಕಾರಿಗಳನ್ನೂ ಸಹಾ ಆಯ್ಕೆ ಮಾಡಲಾಗಿದೆ.ಶಂಕಿತ ಭಯೋತ್ಪಾದಕರರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಹಾಗೂ ಕೆಲ ಸುಧಾರಣೆಗಳ ಉದ್ದೇಶದಿಂದ ರಾಜ್ಯದಲ್ಲಿ “ಶಂಕಿತ ಭಯೋತ್ಪಾದಕರ ಹಿತರಕ್ಷಣಾ ವೇದಿಕೆ” ಯನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಶ್ರೀಯುತ.ಕಾಣೇಶ್ ಜಲ್ಲಿಕಟ್ಟು ಹೇಳಿದರು.ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ವೇದಿಕೆಯ ಪ್ರಥಮ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಭಾರತ ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡ ರಾಷ್ಟ್ರವಾಗಿದ್ದು ಆ ವೈವಿಧ್ಯತೆಯಲ್ಲಿ ಭಯೋತ್ಪಾದನೆಯೂ ಒಂದು ಸಂಸ್ಕೃತಿಯಾಗಿದೆ. ಆದರೆ ಇತ್ತೀಚಿಗೆ ಕೆಲವು ಪರಿವಾರಗಳು ಈ ದೇಶದಲ್ಲಿ ಏಕಸಂಸ್ಕೃತಿ ಹೇರುವ ಹುನ್ನಾರ ನಡೆಸಿದ್ದು ಭಯೋತ್ಪಾದಕರ ಮೂಲ ಸಂಸ್ಕೃತಿಯನ್ನು ನಾಶಪಡಿಸಲು ಯತ್ನಿಸುತ್ತಿವೆ ಎಂದು ಕಿಡಿಕಾರಿದರು.ಇಂತಹಾ ಸಂದರ್ಭದಲ್ಲಿ ಶಂಕಿತ ಭಯೋತ್ಪಾದಕರಿಗೆ ನೈತಿಕ ಬೆಂಬಲ ಅತ್ಯಗತ್ಯವಾಗಿದ್ದು ಅವರಿಗೆ ಬೆಂಬಲವಾಗಿ ವೇದಿಕೆ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದರು.ಮುಂದಿನ ತಿಂಗಳು ವೇದಿಕೆಯವತಿಯಿಂದ ಶಂಕಿತ ಉಗ್ರಗಾಮಿಗಳನ್ನು ಸನ್ಮಾನಿಸುವ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮತ್ತಷ್ಟು ಓದು »

24
ಆಕ್ಟೋ

ಸುಳ್ಸುದ್ದಿ – ಪ್ರಶಸ್ತಿ ವಾಪಸ್ ಪ್ರಹಸನ : ಬೇಸ್ತುಬಿದ್ದ ಸಾಹಿತಿಗಳು

– ಪ್ರವೀಣ್ ಕುಮಾರ್,ಮಾವಿನಕಾಡು

Nilume Sulsuddi - Award Returning Politicsಘಟನೆ ಒಂದು:
ಅವರೊಬ್ಬ ಹಳೆಯ ಸಾಹಿತಿ.ಹಲವಾರು ವರ್ಷಗಳ ಹಿಂದೆ ಅವರಿಗೆ ಎರಡು ಲಕ್ಷ ನಗದಿನ ಜೊತೆಗೆ ಅಕಾಡೆಮಿ ಪ್ರಶಸ್ತಿ ಕೂಡಾ ದೊರಕಿತ್ತು.ಕೆಲ ದಿನಗಳ ಹಿಂದೆ ಟೌನ್ ಹಾಲ್ ಬಳಿ ಅವರನ್ನು ಭೇಟಿಯಾದ ವ್ಯಕ್ತಿಯೊಬ್ಬ,ವಿಚಾರವಾದಿಗಳ ಹತ್ಯೆಯನ್ನು ಖಂಡಿಸಿ, ಅರವತ್ತು ವರ್ಷದಲ್ಲಿ ದೇಶದಲ್ಲಿ ಎಂದೂ ಇಂತಹಾ ಘಟನೆ ನಡೆದಿಲ್ಲ ಎಂದು ಬಿಂಬಿಸುವ ಸಲುವಾಗಿ ಅದೇ ಕಾರಣವನ್ನು ನೀಡಿ ನಿಮಗೆ ನೀಡಲಾದ ಪ್ರಶಸ್ತಿ ಮತ್ತು ಪ್ರಶಸ್ತಿಯ ಜೊತೆ ದೊರೆತ ಹಣವನ್ನು ಅಕಾಡೆಮಿಗೆ ಮರಳಿಸಿದರೆ ಮುಂದೆ ರಚಿಸಲ್ಪಡುವ “ಗಂಜಿ ಗಿರಾಕಿಗಳ ಉದ್ಧಾರ ಸಮಿತಿ”ಗೆ  ನಿಮ್ಮನ್ನೇ ಅಧ್ಯಕ್ಷರಾಗಿಸಲಾಗುವುದು ಮತ್ತು ಕ್ಯಾಬಿನೆಟ್ ದರ್ಜೆಯ ಸ್ಥಾನ ಮಾನ ನೀಡಲಾಗುವುದು ಎಂದು ಪುಸಲಾಯಿಸಿದ್ದಾನೆ.ಪ್ರಮುಖ ಪಕ್ಷವೊಂದರ ಹಿರಿಯ ನಾಯಕನೆಂದು ಹೇಳಿಕೊಂಡಿದ್ದ ಆತನ ಮಾತು ಕೇಳಿ 5 ಪರ್ಸೆಂಟ್ ಬಡ್ಡಿಗೆ ಹಣ ತಂದು ತಮ್ಮ ಬ್ಯಾಂಕ್ ಖಾತೆಗೆ ತುಂಬಿ ಚೆಕ್ ನ ಜೊತೆಗೆ ಪ್ರಶಸ್ತಿಯನ್ನೂ ತೆಗೆದುಕೊಂಡು ಹೋಗಿ ಅಕಾಡೆಮಿಗೆ ಮರಳಿಸಿ ಇಂದಿಗೆ ಹದಿನೈದು ದಿನವಾಯಿತು.ಇದುವರೆಗೂ ಆತನ ಕಡೆಯಿಂದ ಯಾವುದೇ ಸುದ್ದಿಯೂ ಇಲ್ಲ! ಆ ನಾಯಕನ ಮಾತು ಕೇಳಿ ಸಾಲ ಮಾಡಿ ಪ್ರಶಸ್ತಿ ಮರಳಿಸಿದ ಸಾಹಿತಿ ಈಗ,ಅತ್ತ ಹುದ್ದೆಯೂ ಇಲ್ಲ,ಇತ್ತ ಪ್ರಶಸ್ತಿ ಮತ್ತು ಹಣವೂ ಇಲ್ಲ ಎಂದು ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ!!
ಮತ್ತಷ್ಟು ಓದು »

10
ಸೆಪ್ಟೆಂ

ಸುಳ್ಸುದ್ದಿ : ಉದ್ಯಮಿಗಳಿಬ್ಬರ ದೇವರ ಕೋಣೆಗಳು ಇನ್ನು ಮುಜರಾಯಿ ಇಲಾಖೆಯ ವಶಕ್ಕೆ!!

– ಪ್ರವೀಣ್ ಕುಮಾರ್ ಮಾವಿನಕಾಡು

Nilume Sulsuddi - Mujarayi Ilakheಹೂವು,ಹಣ್ಣು,ಅಗರಬತ್ತಿ,ಕರ್ಪೂರ ಮುಂತಾದ ಪೂಜಾ ಸಾಮಗ್ರಿಗಳ ಖರೀದಿಯ ಲೆಕ್ಕ ಪತ್ರಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ನೀಡಿ ಬೆಂಗಳೂರಿನ ಇಬ್ಬರು ಉದ್ಯಮಿಗಳ ಪೂಜಾ ಗೃಹಗಳನ್ನು ಮುಜರಾಯಿ ಇಲಾಖೆಯ ವಶಕ್ಕೆ ಪಡೆಯುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ! ಉದ್ಯಮಿಗಳ ವಿರುದ್ದ ಅವರ ಹೆಂಡತಿ ಹಾಗೂ ಮಕ್ಕಳಿಂದ ಸಲ್ಲಿಕೆಯಾಗಿರುವ ದೂರುಗಳ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಮಟ್ಟದಲ್ಲಿ ಪರಿಶೀಲನೆ ನಡೆಸಿದ ನಂತರ ಮುಂದಿನ ಕ್ರಮಗಳು ಜರುಗಲಿವೆ.ಈ ಬಗ್ಗೆ ಈಗಾಗಲೇ ಇಲಾಖೆಯ ಕಾನೂನು ತಜ್ಞರಿಂದ ಅಭಿಪ್ರಾಯ ನಿರೀಕ್ಷಿಸಲಾಗುತ್ತಿದ್ದು,ಅವರಿಂದ ಶಿಫಾರಸು ಬಂದ ನಂತರ ಇಲಾಖೆಯ ಆಯುಕ್ತರು ಅಗತ್ಯ ಕಾನೂನು ಕ್ರಮಕೈಗೊಳ್ಳುತ್ತಾರೆ ಎಂದು ಮುಜರಾಯಿ ಸಚಿವರು ತಿಳಿಸಿದರು.
ಇದಕ್ಕೂ ಮುನ್ನ ಒಬ್ಬ ಉದ್ಯಮಿಯ ಪತ್ನಿ,ತನ್ನ ಪತಿ ನನ್ನನ್ನು ತುಂಬಾ ಹಣ ಖರ್ಚಾಗುತ್ತದೆ ಎನ್ನುವ ಕಾರಣವೊಡ್ಡಿ ಶಾಪಿಂಗ್ ಗೆ ಕರೆದು ಕೊಂಡು ಹೋಗುವುದಿಲ್ಲ, ಆದರೆ ಪ್ರತೀ ತಿಂಗಳೂ ಸಂಕಷ್ಟ ಹರ ಗಣಪತಿ ವ್ರತಕ್ಕಾಗಿ ಸಾವಿರಾರು ರೂ.ಖರ್ಚು ಮಾಡುತ್ತಾರೆ.ಜೊತೆಗೆ ಖರ್ಚು ಮಾಡಿದ ಹಣದ ಲೆಕ್ಕ ಕೊಡಿ ಎಂದರೆ ಅದನ್ನೂ ಕೊಡುತ್ತಿಲ್ಲ ಎಂದು ದೂರು ದಾಖಲಿಸಿದ್ದರು.

ಇನ್ನೊಬ್ಬ ಉದ್ಯಮಿಯ ಪುತ್ರ,ನನ್ನ ತಂದೆ ತುಂಬಾ ಹಣ ಖರ್ಚಾಗುತ್ತದೆ ಎಂದು ನನ್ನ ಬಹು ದಿನದ ಬೇಡಿಕೆಯಾದ ಸೈಕಲ್ ಕೊಡಿಸಿರಲಿಲ್ಲ.ಆದರೆ ಮೊನ್ನೆ ಮೊನ್ನೆ ವರಮಹಾ ಲಕ್ಷ್ಮಿ ಹಬ್ಬಕ್ಕೆ ಸುಮಾರು ಹತ್ತು ಸಾವಿರ ರೂ.ಗಳಿಗಿಂತಾ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಮತ್ತು ಇದ್ಯಾವುದಕ್ಕೂ ಸರಿಯಾದ ಲೆಕ್ಕ ಪತ್ರವನ್ನೂ ಇಟ್ಟಿಲ್ಲ ಎಂದು ದೂರು ದಾಖಲಿಸಿದ್ದನು.
ಮತ್ತಷ್ಟು ಓದು »

3
ಸೆಪ್ಟೆಂ

ಸುಳ್ಸುದ್ದಿ : ಹಿಂದೂಪರ ಸಂಘಟನೆಗಳಿಂದಲೇ ಇನ್ನು ಬುದ್ಧಿಜೀವಿಗಳ ರಕ್ಷಣೆ !!

– ಪ್ರವೀಣ್ ಕುಮಾರ್ ಮಾವಿನಕಾಡು

ಖಾಲಿ ತಲೆರಾಜ್ಯದಲ್ಲಿ ವಿಚಾರವಾದಿಯೆಂದು ಹೇಳಿಕೊಳ್ಳುವ ಯಾವುದೇ ವ್ಯಕ್ತಿಗೆ ಏನೇ ಆದರೂ ಅದಕ್ಕೆ ಯಾವುದೇ ಆಧಾರವಿಲ್ಲದೆಯೂ ಹಿಂದೂಪರ ಸಂಘಟನೆಗಳೇ ನೇರ ಹೊಣೆ ಹೊರಬೇಕಾಗಿದ್ದು, ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಹಿಂದೂಪರ ಸಂಘಟನೆಗಳೇ ನೇರವಾಗಿ ಅವರುಗಳ ರಕ್ಷಣೆಯ ಹೊಣೆಯನ್ನು ಹೊರಲು  ಮುಂದಾಗಿವೆ!

ಎಲ್ಲಿ ಯಾರಿಗೆ ಏನೇ ಆಗಲೀ,ಸ್ಥಳಕ್ಕೆ ಪೊಲೀಸರು ಬರುವ ಮುನ್ನವೇ ಉಳಿದ ಬುದ್ಧಿಜೀವಿಗಳು ಮತ್ತು ಕೆಲವು ಪಕ್ಷಗಳು ಹಿಂದೂಪರ ಸಂಘಟನೆಗಳನ್ನೇ ಹೊಣೆ ಮಾಡಿ ಅವರನ್ನು ಅಪರಾಧಿ ಎಂದು ತೀರ್ಮಾನಿಸಿ ಶಿಕ್ಷೆಯ ಪ್ರಮಾಣವನ್ನೂ ಪ್ರಕಟಿಸಿಯಾಗಿರುತ್ತದೆ! ಆದ್ದರಿಂದ ಹಿಂದೂ ಸಂಘಟನೆಗಳಿಗೆ ಈ ಬುದ್ಧಿಜೀವಿಗಳು ‘ಬದುಕಿದ್ದರೂ ಕಷ್ಟ-ಸತ್ತರೂ ಕಷ್ಟ’ ಎಂಬಂತಾಗಿದೆ. ಈ ಸಂಕಟದಿಂದ ಪಾರಾಗಲು ಈ ಬೇಜವಬ್ದಾರಿ ಅವರುಗಳ ಒಂದು ಕೂದಲೂ ಕೊಂಕದಂತೆ ರಕ್ಷಣೆ ಮಾಡುವ ಜವಾಬ್ಧಾರಿಯನ್ನು ಇನ್ನು ಮುಂದೆ ನಮ್ಮ ಸಂಘಟನೆಗಳೇ ಹೊರಲಿವೆ ಎಂದು ಹೆಸರು ಹೇಳಲಿಚ್ಚಿಸದ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಬ್ಬರು ತಿಳಿಸಿದರು.

“ವಿಚಾರವಾದಿಗಳ ರಕ್ಷಣಾ ಪಡೆ” ಎನ್ನುವ ಗಟ್ಟಿಮುಟ್ಟಾದ ಯುವಕರ ತಂಡವೊಂದನ್ನು ರಚಿಸಿದ್ದು,ಸುಮಾರು 2000 ಯುವಕರಿಗೆ ಈ ಬಗ್ಗೆ ಈಗಾಗಲೇ ತರಬೇತಿಯನ್ನು ನೀಡಲಾಗುತ್ತಿದೆ.ಇನ್ನು ಕೆಲವೇ ದಿನಗಳಲ್ಲಿ ಅವರನ್ನು ವಿಚಾರವಾದಿಗಳ ರಕ್ಷಣೆಗೆ ನೇಮಿಸಲಾಗುತ್ತದೆ.ಹಿರಿಯ “ಮಾಜಿ ಪತ್ರಕರ್ತ,ಹಾಲಿ ಬುದ್ದಿಜೀವಿ ಕಮ್ ರಾಜಕಾರಣಿ”ಯೊಬ್ಬರು ನೀಡಿದ, ಪ್ರಾಣಾಪಾಯವನ್ನೆದುರಿ -ಸುತ್ತಿರುವ ವಿಚಾರವಾದಿಗಳ ಜ್ಯೇಷ್ಠತಾ ಪಟ್ಟಿಯನ್ನಾಧರಿಸಿ ಮೇಲ್ವರ್ಗದ ಬುದ್ಧಿಜೀವಿಗಳಿಂದ ಹಿಡಿದು ಅತ್ಯಂತ ಕೆಳ ಹಂತದ ಬುದ್ಧಿಜೀವಿಗಳವರೆಗೂ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಮತ್ತಷ್ಟು ಓದು »

20
ಆಗಸ್ಟ್

ಮಲ್ಟಿಪ್ಲೆಕ್ಸ್ ಗಳಲ್ಲಿನ್ನು ಕನ್ನಡ ರೀ-ಮೇಕ್ ಚಿತ್ರಗಳ ಪ್ರದರ್ಶನ ಕಡ್ಡಾಯ!

– ಪ್ರವೀಣ್ ಕುಮಾರ್ ಮಾವಿನಕಾಡು

Nilume Sulsuddi - Kannada Film Dubbingರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ರೀ ಮೇಕ್ ಚಿತ್ರಗಳ ಪ್ರದರ್ಶನ ಮಾಡಲೇಬೇಕು ಎಂದು ಮಲ್ಟಿಪ್ಲೆಕ್ಸ್ ಮಾಲೀಕರಿಗೆ ಸಿ.ಎಂ.ತಾಕೀತು ಮಾಡಿದ್ದಾರೆ.ಅಲ್ಲದೇ ಟಿಕೆಟ್ ದರ ಕೂಡ ಕಡಿಮೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.ಅಷ್ಟೇ ಅಲ್ಲದೇ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ರೀಮೇಕ್ ಚಿತ್ರ ಪ್ರದರ್ಶನ ಮತ್ತು ಅದರ ದರ ನಿಗದಿ ಮಾಡುವ ಸಂಬಂಧ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವರವರ ನೇತೃತ್ವದಲ್ಲಿ ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳು ನಿರ್ಮಾಪಕರಿಗೆ ಭರವಸೆ ನೀಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಡಬ್ಬಿಂಗ್ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ತಮ್ಮ ಇನ್ನೂ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕನ್ನಡ ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಕಳೆದ ೧೦ ದಿನಗಳಿಂದ ಸರಣಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ನೂರಾರು ನಿರ್ಮಾಪಕರನ್ನು ಖುದ್ದು ಮುಖ್ಯಮಂತ್ರಿಗಳೇ ಭೇಟಿ ಮಾಡಿ ತುರ್ತುಸಭೆ ನಡೆಸಿದ ಸಂದರ್ಭದಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.ಇದರಿಂದ ಕನ್ನಡಿಗರೂ ಮಲ್ಟಿಪ್ಲೆಕ್ಸ್ ಗಳಿಗೆ ಹೋಗಬಹುದು” ಎಂದು ಚಲನಚಿತ್ರ ನಿರ್ಮಾಪಕರ ಸಂಘದ ಸದಸ್ಯ R.S.ಬಾಬು ಹರ್ಷ ವ್ಯಕ್ತಪಡಿಸಿದರು.

ಮತ್ತಷ್ಟು ಓದು »

6
ಆಗಸ್ಟ್

ಯಾಕೂಬ್ ಮೆಮನ್ ಗಲ್ಲಿಗೆ ಕಂಬನಿ ಮಿಡಿದ ಜೀವಪರ ಮನಸ್ಸುಗಳು

– ಪ್ರವೀಣ್ ಕುಮಾರ್,ಮಾವಿನಕಾಡು

Nilume Sulsuddi - Yakoob Menonಗಲ್ಲಿಗೇರಿ ಸತ್ತ 1993 ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ,ನತದೃಷ್ಟ ಭಯೋತ್ಪಾದಕ ಯಾಕೂಬ್ ಮೆಮನ್ ನ ಸ್ಮರಣಾರ್ಥ ಹಾಳ್ ಟೌನ್ ನಲ್ಲಿ ಇಂದು ನಡೆದ ಸಂತಾಪ ಸೂಚಕ ಸಭೆಯಲ್ಲಿ ಭಾರತದ ನ್ಯಾಯ ವ್ಯವಸ್ಥೆಯ ವಿರುದ್ಧ ರಾಜ್ಯದ ಹಲವು ಪ್ರಮುಖ ಜೀವಪರ ಮನಸ್ಸುಗಳ ಆಕ್ರೋಶ ಸ್ಫೋಟಗೊಂಡಿತು.

ಆತನನ್ನು 257 ಜನರ ಸಾವಿಗೆ ಕಾರಣನೆನ್ನಲಾಗುತ್ತಿದೆ.ಒಂದು ವೇಳೆ ಅಂದು ಸ್ಥಳದಲ್ಲಿ ಆ 257 ಜನ ಇಲ್ಲದಿರುತ್ತಿದ್ದರೆ ಆತ ಕೊಲೆಗಾರನಾಗಲು ಹೇಗೆ ಸಾಧ್ಯವಾಗುತ್ತಿತ್ತು?ಆದ್ದರಿಂದ ಆ ಘಟನೆಗೆ ಆ 257 ಜನ ಮತ್ತು ಗಾಯಗೊಂಡ ವ್ಯಕ್ತಿಗಳೇ ಕಾರಣವೇ ಹೊರತೂ ಯಾಕೂಬ್ ಮೆಮನ್ ಅಲ್ಲ.257 ಜನ ಮಾಡಿದ ತಪ್ಪಿಗೆ ಅಮಾಯಕನೊಬ್ಬನನ್ನು ನಮ್ಮ ವ್ಯವಸ್ಥೆಯೇ ನೇಣು ಬಿಗಿದು ಕೊಂದು ಹಾಕಿತು ಎಂದು ಕರ್ನಾಟಕ ರಾಜ್ಯದ ಹಿರಿಯ ಬುದ್ಧಿಜೀವಿ ಬಾಯ್ಕಟ್ ಬೀಬಿ ಆಕ್ರೋಶ ವ್ಯಕ್ತಪಡಿಸಿದರು.

ಆತನಿಗೆ ಕ್ಷಮಾದಾನ ನೀಡಿದ್ದರೆ ಈ ರಾಷ್ಟ್ರ ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬ ಶಕ್ತಿಯುತ ಸಂದೇಶವನ್ನು ಜಗತ್ತಿಗೆ ಸಾರುವ ಅವಕಾಶವಿತ್ತು!ಅನ್ಯಾಯವಾಗಿ ಭಾರತ ಅಂತಹಾ ಸುವರ್ಣಾವಕಾಶವನ್ನು ಕಳೆದುಕೊಂಡಿತು ಎಂದು ಕರ್ನಾಟಕ ರಾಜ್ಯ ಕಾರ್ಯಮರೆತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಾಗೂ ಸದ್ಯದ ಪ್ರಗತಿಪರಬುದ್ಧಿಜೀವಿಪತ್ರಕರ್ತರಾಜಕಾರಣಿಯೊಬ್ಬರು ವ್ಯಾಖ್ಯಾನಿಸಿದರು.”ಮನುಷ್ಯರನ್ನು ಗಲ್ಲಿಗೇರಿಸುವುದು ಈ ದೇಶವನ್ನು ಸುರಕ್ಷಿತವಾಗಿಸುವುದಿಲ್ಲ ಬದಲಾಗಿ ನಮ್ಮನ್ನು ಕೆಳಕ್ಕೆ ನೂಕುತ್ತದೆ” ಎಂದು ಅವರು ಪ್ರತಿಪಾದಿಸಿದರು. ಕೇಂದ್ರದಲ್ಲಿ ನಾವು ಬೆಂಬಲಿಸುತ್ತಿರುವ ಸರ್ಕಾರವಿದ್ದಿದ್ದರೆ ಖಂಡಿತಾ ಇಂತಹಾ ಘಟನೆಗಳು ನಡೆಯಲು ಬಿಡುತ್ತಿರಲಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಮತ್ತಷ್ಟು ಓದು »

5
ಆಗಸ್ಟ್

ಸುಳ್ಸುದ್ದಿ : ಎಲ್ಲಾ ಡಿ-ದರ್ಜೆಯ ಹುದ್ದೆಗಳನ್ನು ರದ್ದು ಮಾಡಲು ಸರ್ಕಾರದ ಮಹತ್ವದ ನಿರ್ಧಾರ

– ರಾಘವೇಂದ್ರ ಸುಬ್ರಹ್ಮಣ್ಯ

dantavillada_kathegalu_nilumeಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ಸಲಹೆಕಾರರು ಇತ್ತೀಚೆಗೆ ಕೊಟ್ಟ ಸಲಹೆಯೊಂದನ್ನು ಅಗತ್ಯಕ್ಕಿಂತ ಗಂಭೀರವಾಗಿ ಪರಿಗಣಿಸಿರುವ,ಘನಸರ್ಕಾರವು,ಎಲ್ಲಾ ಡಿ-ದರ್ಜೆಯ ಗುಮಾಸ್ತರ ಹುದ್ದೆಗಳನ್ನು ರದ್ದು ಮಾಡಲು ನಿರ್ಧರಿಸಿದ್ದಾರೆ.ಇತ್ತೀಚೆಗೆ ಸಮಾರಂಭವೊಂದರಲ್ಲಿ ಸಲಹೆಕಾರರು,”ಜಮೀನ್ದಾರರು ಹೆಚ್ಚಿನ ಜಮೀನಿನ ಹಿಡುವಳಿಯಿಟ್ಟುಕೊಂಡು, ಕೂಲಿ ಕಾರ್ಮಿಕರಿಲ್ಲ ಎಂದು ಗೋಳಾಡುವ ಬದಲು, ಎಷ್ಟೋ ಬೇಕೋ ಅಷ್ಟಿಟ್ಟುಕೊಂಡು, ಉಳಿದ ಹೆಚ್ಚಿನ ಜಮೀನಿದ್ದರೆ ಬಡವರಿಗೆ ಕೊಟ್ಟರೆ, ಕೂಲಿಕಾರ್ಮಿಕರ ಸಮಸ್ಯೆ ಬರುವುದಿಲ್ಲ. ಬಡವರು ಕೂಲಿ ಕೆಲಸಕ್ಕೆ ಬರಬೇಕೆಂಬ ಧೋರಣೆಯೇ ಅಮಾನುಷ ಮತ್ತು ಅಮಾನವೀಯವಾದದ್ದು” ಎಂದಿದ್ದರು.

ಈ ಸುದ್ಧಿಯನ್ನು ಕೇಳಿ, ಅದೇ ಮಟ್ಟದಲ್ಲಿ ಯೋಚಿಸುತ್ತಿದ್ದ ಮು.ಮಂಗಳಿಗೆ ಸದನದಲ್ಲಿ ತೂಕೂಡಿಸುತ್ತಿದ್ದಾಗ ಹೊಳೆದ ಆಲೋಚನೆಯ ಪ್ರಕಾರ, “ಸರ್ಕಾರ ಎಲ್ಲರನ್ನೂ ಸಮನಾಗಿ ನೋಡಬೇಕು. ಸಿ ದರ್ಜೆ, ಡಿ ದರ್ಜೆ ಎಂದು ವಿಂಗಡಿಸುವುದೇ ಅಮಾನುಷ ಹಾಗೂ ಅಮಾನವೀಯ. ಸರ್ಕಾರವೇ ಹೀಗೆ ಮಾಡಿದರೆ, ಪ್ರಜೆಗಳಿನ್ನೆಷ್ಟರ ಮಟ್ಟಿಗೆ ಅಮಾನವೀಯವಾಗಿ ವರ್ತಿಸಬಹುದು!? ಆದ್ದರಿಂದ ಎಲ್ಲಾ ಡಿ-ದರ್ಜೆಯ ನೌಕರರನ್ನೂ ತಕ್ಷಣವೇ ಸಿ-ದರ್ಜೆಗೆ, ಎಲ್ಲಾ ಸಿ-ದರ್ಜೆಯ ನೌಕರರನ್ನು ಬಿ-ದರ್ಜೆಗೆ, ಹಾಗೇ ಮುಂದುವರಿದು ಎಲ್ಲಾ ಸೂಪರಿಂಟೆಂಡೆಂಟುಗಳನ್ನು ಕೆ.ಎ.ಎಸ್ ದರ್ಜೆಗೆ ಏರಿಸುವ ಆಲೋಚನೆಯನ್ನು ಗಂಭೀರವಾಗಿ ಪರಿಗಣಿಸುತ್ತಿದೆಯೆಂದು, ಮು.ಮಂಗಳ ವಕ್ತಾರ ತಿಳಿಸಿದ್ದಾರೆ. ಇದರ ಪರಿಣಾಮವಾಗಿ, ಈ ವರ್ಷದಿಂದ ಡಿ-ದರ್ಜೆಯ ನೌಕರರೇ ಇಲ್ಲದಂತಾಗುತ್ತಾರೆ. ಸರ್ಕಾರ ಮತ್ತು ಸಮಾಜದಲ್ಲಿ ಜನರು ಒಂದು ಹೆಜ್ಜೆ ಮೇಲೇರಿದಂತಾಗುತ್ತದೆ. ಈ ಯೋಜನೆಯ ಮುಂದಿನ ಹಂತವಾಗಿ ಎಲ್ಲಾ ಸಿ-ದರ್ಜೆಯವರನ್ನು ಬಿ-ದರ್ಜೆಗೇರಿಸಿ, ಬಿ-ದರ್ಜೆಯನ್ನು ಎ-ದರ್ಜೆಗೇರಿಸಿ, ಕೊನೆಯ ಹಂತವಾದ ಕೆ.ಎ.ಎಸ್ ಅಧಿಕಾರಿಗಳನ್ನು ಐ.ಎ.ಎಸ್ ಅಧಿಕಾರಿಗಳನ್ನಾಗಿ ಮಾಡಲಾಗುವುದು. ಇದಕ್ಕೆ ಕೇಂದ್ರ ಸರ್ಕಾರ ಅಡ್ಡಿಬಂದಲ್ಲಿ ಸುಗ್ರೀವಾಜ್ಞೆಯೊಂದನ್ನು ಹೊರಡಿಸಿ, ಕೇಂದ್ರಸರ್ಕಾರವನ್ನೇ ಅಮಾನ್ಯಗೊಳಿಸುವ ಬಗ್ಗೆಯೂ, ಸರ್ಕಾರಿ ವಕೀಲರು ಅಸಂವಿಧಾನಾತ್ಮಕ ಮಾರ್ಗಗಳನ್ನು ಹುಡುತಿದ್ದಾರೆ. ಈ ರೀತಿ ಸಮಾಜದಲ್ಲಿನ ಎರಡು ಹಂತನ ಅಸಮಾನತೆಯನ್ನು ತೊಡೆದುಹಾಕಿದ ಕೀರ್ತಿ ನಮ್ಮ ಸರ್ಕಾರಕ್ಕೆ ಸೇರಲಿದೆಯೆಂದು ವಕ್ತಾರರು ತಿಳಿಸಿದ್ದಾರೆ.”
ಮತ್ತಷ್ಟು ಓದು »

29
ಜುಲೈ

ಬಿಸಿಯೂಟದಲ್ಲಿ ಕೇಸರೀಬಾತು: ಮುಖ್ಯ ಶಿಕ್ಷಕ ಅಮಾನತು!

– ಪ್ರವೀಣ್ ಕುಮಾರ್,ಮಾವಿನಕಾಡು

Nilume Sulsuddi - Kesari Baatuಕೋಮಿನಕೋಟೆ: ಕೋಮಿನಕೋಟೆ ತಾಲೂಕಿನ ಊಟೇನಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟದಲ್ಲಿ ಕೇಸರೀಬಾತು ಪತ್ತೆಯಾಗಿದೆ.ಅನಾಮಧೇಯ ಕರೆಯೊಂದರ ಸ್ಪಷ್ಟ ಮಾಹಿತಿಯ ಮೇರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳು ಶಾಲೆಯ ಮೇಲೆ ದಾಳಿ ನಡೆಸಿ ಸುಮಾರು 8KG ಗೂ ಹೆಚ್ಚು ಕೇಸರೀ ಬಾತನ್ನು ವಶಪಡಿಸಿಕೊಂಡಿದ್ದಾರೆ.ಘಟನೆ ಖಂಡಿಸಿ ಮಕ್ಕಳ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.ಅಲ್ಲದೆ ತಮಗೆ ನೀಡಲಾಗುತ್ತಿರುವ ಊಟ ಉತ್ತಮ ಗುಣಮಟ್ಟದ್ದೇ ಆಗಿದ್ದರೂ,ಊಟದಲ್ಲಿ ಪದೇ ಪದೇ ಕೇಸರೀಬಾತು ದೊರೆಯುತ್ತಿತ್ತು ಎಂದು ವಿದ್ಯಾರ್ಥಿಗಳು ಆರೋಪಿದ್ದಾರೆ.ಪ್ರಕರಣದ ರೂವಾರಿಗಳನ್ನು ಆದಷ್ಟೂ ಬೇಗ ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸ್ಥಳೀಯ ಆಡಳಿತ ಹಾಗೂ ಶಾಲಾ ಆಡಳಿತ ಮಂಡಳಿ ಭರವಸೆ ನೀಡಿವೆ.ರಾಜ್ಯ ಕೋಮುವೇದಿಕೆಯ ಪ್ರಮುಖರಾದ ಗಂಜಿ ಕೋಮ್ಲೇಶ್ ಮತ್ತವರ ತಂಡ ಶಾಲೆಯಲ್ಲೇ ಬೀಡುಬಿಟ್ಟಿದ್ದು ಪರಿಸ್ಥಿತಿಯ ಮೇಲೆ ತೀವ್ರ ನಿಗಾ ವಹಿಸಿದೆ.

ಮತ್ತಷ್ಟು ಓದು »