ವಿಷಯದ ವಿವರಗಳಿಗೆ ದಾಟಿರಿ

Posts tagged ‘ನೆಹರೂ’

22
ಆಗಸ್ಟ್

ನೆಹರೂ,ಗಾಂಧಿಗೊಂದು ನ್ಯಾಯ, ಸಾವರ್ಕರ್’ರಿಗೊಂದು ನ್ಯಾಯವೇ?

  • ರಾಕೇಶ್ ಶೆಟ್ಟಿ

ಸಾವರ್ಕರ್ ಅವರ ಹೆಸರು ಕೇಳಿದರೆ ದ್ವೇಷಕಾರುವ ಸಿದ್ದರಾಮಯ್ಯನವರು, ಸುಳ್ಳುಗಳೇ ತುಂಬಿರುವ ಲೇಖನವೊಂದನ್ನು ಬರೆದು ಮುಖ್ಯಮಂತ್ರಿಗಳನ್ನು ಚರ್ಚೆಗೆ ಕರೆದಿದ್ದಾರೆ. ಮಾಜಿ ಮುಖ್ಯಮಂತ್ರಿಯೊಬ್ಬರು ಹೀಗೆ ಆಧಾರ ರಹಿತ ಸುಳ್ಳುಗಳ ಸರಮಾಲೆಯನ್ನು ಹೇಗೆ ಬರೆಯಲು ಸಾಧ್ಯ? ಅವರ ಲೇಖನದ ಕೆಲವು ಪ್ರಶ್ನೆಗಳು, ಸುಳ್ಳುಗಳ ಬಗ್ಗೆ ಮಾತನಾಡುತ್ತಲೇ, ಸಾವರ್ಕರ್, ಗಾಂಧಿ, ನೆಹರೂ ಅವರ ಜೈಲುವಾಸಗಳ ಬಗ್ಗೆ ಒಂದಿಷ್ಟು ವಿಷಯಗಳನ್ನು ಹಂಚಿಕೊಳ್ಳಬೇಕು.

10 ಡಿಸೆಂಬರ್ 1934 – ಬ್ರಿಟಿಷ್ ಪಾರ್ಲಿಮೆಂಟಿನಲ್ಲಿ ಜವಹರಲಾಲ್ ನೆಹರೂ ಅವರ ಜೈಲುವಾಸದ ಬಗ್ಗೆಯೊಂದು ಚರ್ಚೆಯಾಗುತ್ತದೆ. ಸದಸ್ಯರಾದ ಹಾರಾಲ್ದ್ ಹೇಲ್ಸ್ ಅವರು, ನೆಹರೂ ಅವರ ಪತ್ನಿ ಕಮಲಾ ನೆಹರೂ ಅವರ ಅನಾರೋಗ್ಯದ ಸ್ಥಿತಿಯನ್ನು ಗಮನಿಸಿ, ಜವಹರಲಾಲ್ ನೆಹರೂ ಅವರನ್ನು ಶೀಘ್ರ ಬಿಡುಗಡೆ ಮಾಡುವ ಬಗ್ಗೆ ಪರಿಶೀಲಿಸುವಂತೆ ಆಗ್ರಹಿಸುತ್ತಾರೆ.

ಅದಕ್ಕೆ ಉತ್ತರವಾಗಿ, ಅಂದಿನ ಬ್ರಿಟಿಷ್ ಭಾರತದ ಅಧೀನ ಕಾರ್ಯದರ್ಶಿಯಾಗಿದ್ದ ಬಟ್ಲರ್ ಉತ್ತರಿಸುತ್ತಾ : ಅವರ ಹೆಂಡತಿಯನ್ನು ನೋಡಿಕೊಳ್ಳಲಿ ಎನ್ನುವ ಕಾರಣಕ್ಕಾಗಿಯೇ, ಕಳೆದ ಬೇಸಿಗೆಯಲ್ಲಿಯೇ ಅವರನ್ನು ಕೆಲವು ದಿನಗಳ ಕಾಲ ಬಿಡುಗಡೆ ಮಾಡಿದ್ದೆವು. ಈಗ ಅವರನ್ನು ಆಸ್ಪತ್ರಗೆ ಹತ್ತಿರ ಇರುವ ಜೈಲಿಗೆ ವರ್ಗಾವಣೆ ಮಾಡಲಾಗಿದ್ದು, ವಾರದಲ್ಲಿ ಒಂದು ಅಥವಾ ಎರಡು ದಿನ ವೈದ್ಯರ ಸಲಹೆಯಂತೆ ಅವರು ಹೋಗಿ ನೋಡಿಕೊಂಡು ಬರಲು ಅನುಮತಿ ನೀಡಲಾಗಿದೆ.

ಸರ್ಕಾರದ ವಿರುದ್ಧದ ಪಿತೂರಿಯ ಆರೋಪದಲ್ಲಿ ನೆಹರೂ ಎರಡು ವರ್ಷಗಳ ಸಾಮಾನ್ಯ ಶಿಕ್ಷೆಗೆ ಗುರಿಯಾಗಿದ್ದರು. ಆ ಜೈಲು ಶಿಕ್ಷೆಯ ಅವಧಿಯ ಕುರಿತು ನಡೆದ ಚರ್ಚೆಯಿದು. ಕೇಸ್ ದಾಖಲಾಗಿ ಬಂಧನವಾದ ನಂತರ, ನೆಹರೂ ಅವರ ಭಾವನೆಗಳಿಗೆ ಘಾಸಿ(!)ಯಾಗುವುದಾದರೆ ಪ್ರಕರಣದ ವಿಚಾರಣೆಯನ್ನು ಖಾಸಗಿಯಾಗಿಯೇ ಮಾಡುವ ಆಫರ್ ಅನ್ನು ಬ್ರಿಟಿಷ್ ಅಧಿಕಾರಿ ನೀಡುತ್ತಾರೆ! ಕಡೆಗೆ, 6 ತಿಂಗಳ ಮೊದಲೇ ಬಿಡುಗಡೆ ಮಾಡುತ್ತದೆ ಬ್ರಿಟಿಷ್ ಸರ್ಕಾರ. ನೆಹರೂ ಅವರ ಮೇಲೆ ಇಂತಹ ಪ್ರೀತಿಯನ್ನು ಇದೇ ಮೊದಲ ಬಾರಿಯೇನೂ ಬ್ರಿಟಿಷ್ ಸರ್ಕಾರ ತೋರಿಸಿದ್ದಲ್ಲ.

ಅಕ್ಟೋಬರ್ 24 ,1930 ರಂದು ಕೂಡ ಎರಡು ವರ್ಷಗಳ ಸಾಮಾನ್ಯ ಶಿಕ್ಷೆಗೆ ಗುರಿಯಾದಗಲೂ, ಅವರನ್ನು ಕೇವಲ 97 ದಿನಗಳಲ್ಲೇ ಬಿಡುಗಡೆ ಮಾಡಿತ್ತು ಬ್ರಿಟಿಷ್ ಸರ್ಕಾರ. ಬ್ರಿಟಿಷರಿಗೆ ನೆಹರೂ ಅವರ ಮೇಲೆ ಅದಿನ್ನೆಂತಹ ಪ್ರೀತಿ! ಅಥವಾ ನೆಹರೂ ಅವರು ಜೈಲಿನ ಒಳಗಿದ್ದರೂ, ಹೊರಗಿದ್ದರೂ ಬ್ರಿಟಿಷ್ ಸಾಮ್ರಾಜ್ಯಕ್ಕೆ ಅಪಾಯಕಾರಿಯಲ್ಲ ಅಂತಲೇ? ನೆಹರೂ ಅವರ ರಾಜಕೀಯ ಜೀವನದಲ್ಲಿ, ಒಂದೇ ಕೇಸಿನಲ್ಲಿ ಗರಿಷ್ಟ ಜೈಲು ವಾಸ ಅಂತ ಅವರಿಗೆ ಆಗಿದ್ದು ಕ್ವಿಟ್ ಇಂಡಿಯಾ ಎಂಬ Failed ಚಳವಳಿಯಲ್ಲಿ. 2 ವರ್ಷ 8 ತಿಂಗಳ ಸೆರೆವಾಸವದು. ಹಾಗೆಂದು ನೆಹರೂ ಅವರ ಸೆರೆವಾಸಗಳೇನು ಸೆಲ್ಯುಲಾರ್ ಜೈಲಿನಂತೆ ಒಂಟಿಯಾಗಿ, ಕತ್ತಲೆ ಹಾಗೂ ಕೆಟ್ಟ ಸೆಲ್ಲಿನೊಳಗಿನ ವಾಸವೇನು ಆಗಿರಲಿಲ್ಲ. ಮೇಲಿನ ಉದಾಹರಣೆಯಂತೆ ಬ್ರಿಟಿಷರ ಉದಾರತೆ ಹೇಗಾದರೂ ನೆಹರೂ ಅವರಿಗೆ ಸಿಗುತ್ತಿತ್ತು. ಉದಾಹರಣೆಗೆ, ದಂಡಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ನಂತರ ನೆಹರೂ ಅವರನ್ನು ನೈನಿಯಲ್ಲಿ ಜೈಲಿಗೆ ಹಾಕಿದರು. ಜೈಲಿನಲ್ಲಾದರೂ ಬಡಪಾಯಿ ನೆಹರೂ ಅವರಿಗೆ ಹೆಚ್ಚೇನು ಸೌಲಭ್ಯ ಸಿಗಲಿಲ್ಲ. ಅಬ್ಬಬ್ಬಾ ಎಂದರೆ ಒಬ್ಬ ಖೈದಿಯನ್ನು ಅವರ ಅಡುಗೆಯವನನ್ನಾಗಿ ನೇಮಿಸಲಾಯಿತು, ಗಾಳಿ ಬೀಸಲು ಮತ್ತೊಬ್ಬ ಖೈದಿ ನಿಯುಕ್ತಿಯಾದ. ಜೈಲಿನ ಊಟ ತಿಂದು ನಾಲಗೆ ಜಡ್ಡುಗಟ್ಟದಿರಲೆಂದು ಮನೆಯ ಊಟ, ಹಣ್ಣು ಹಂಪಲು ತರಿಸಿಕೊಳ್ಳುವ ಅವಕಾಶ ನೀಡಲಾಗಿತ್ತು.ನೆಹರೂ ಅವರ ದರ್ಶನಕ್ಕೆಂದು ಬರುತ್ತಿದ್ದ ಖೈದಿಗಳು ಬೇಕಾದ ಸಣ್ಣಪುಟ್ಟ ಸೇವೆಗಳನ್ನು ಮಾಡಿಕೊಡುತ್ತಿದ್ದರು. ತೀರಾ ನೆಹರೂ ಅವರ ಭಾಷೆಯಲ್ಲಿಯೇ ಹೇಳುವುದಾದರೆ, ಶೇ.95 ರಾಜಕೀಯ ಖೈದಿಗಳಿಗೆ ಇಂತಹ ಸೌಲಭ್ಯಗಳು ಸಿಗುತ್ತಿರಲಿಲ್ಲ. ನೆಹರೂ-ಗಾಂಧಿಯಂತವರು 5% ನೊಳಗಿದ್ದವರು. ಬ್ರಿಟಿಷರ ಪಾಲಿಗೆ ನಿರುಪದ್ರವಿಗಳಾಗಿರಬಹುದೇ?

ಮತ್ತಷ್ಟು ಓದು »
29
ಮಾರ್ಚ್

2019 : ನವಭಾರತ Vs ಬ್ರಿಟಿಷ್ ಇಂಡಿಯಾ ನಡುವಿನ ಚುನಾವಣೆ

– ರಾಕೇಶ್ ಶೆಟ್ಟಿ

೨೦೧೯ ಚುನಾವಣೆಯ ದಿನಾಂಕ ಘೋಷಣೆಯಾಗಿ ಮೊದಲ ಹಂತದ ಚುನಾವಣೆಯೂ ಇನ್ನೇನು ಕೆಲವೇ ದಿನಗಳಲ್ಲಿ ಮುಗಿದೂ ಹೋಗಲಿದೆ. ಈ ಬಾರಿಯ ಚುನಾವಣೆಯ ಮೇಲೆ ಇಡೀ ದೇಶ ಮಾತ್ರವಲ್ಲ ಜಗತ್ತಿನ ಕಣ್ಣೂ ಇದೆ. ೨೦೧೪ರ ಚುನಾವಣೆಯೂ ಹೀಗೆಯೇ ಇತ್ತು.೨೦೧೪ರ ಚುನಾವಣೆ ಭಾರತದ ರಾಜಕೀಯದಲ್ಲಿ ಢಾಳಾಗಿ ಮಿಳಿತವಾಗಿರುವ  ಜಾತಿ,ಹಣ,ರಿಲಿಜಿಯನ್,ಓಲೈಕೆ ಇತ್ಯಾದಿಗಳನ್ನು ಜನತೆಯೇ ನಿವಾಳಿಸಿ ಬಿಸಾಡಿದ,ದೇಶದ ಚಿಂತನೆಯ ದಿಕ್ಕನ್ನು ಬದಲಿಸಿದ ಚುನಾವಣೆ ಎನ್ನಬಹುದು.

ಸ್ವತಂತ್ರ ಭಾರತದ ರಾಜಕೀಯ ಇತಿಹಾಸದ ಚುನಾವಣಾ ರಾಜಕೀಯವನ್ನು ಬಹುಶಃ ನಾಲ್ಕು ಭಾಗಗಳಾಗಿ ವಿಂಗಡಿಸಬಹುದು.ಮೊದಲನೆಯದು ೪೭ ರಿಂದ ೭೦ರ ದಶಕದವರೆಗಿನ ನೆಹರೂ ಕುಟುಂಬದ ರಾಜಕಾರಣ (ಶಾಸ್ತ್ರೀಜಿಯವರ ಸಮಯ ಬಿಟ್ಟು). ೭೦ರ ದಶಕದ ಆದಿಯಿಂದ ೯೦ರ ದಶಕದವರೆಗಿನ ಇಂದಿರಾ ಕಾಂಗ್ರೆಸ್ಸಿನ ಸರ್ವಾಧಿಕಾರಿ ತುರ್ತುಪರಿಸ್ಥಿತಿ ವಿರೋಧಿ ಹಾಗೂ ರಾಮಜನ್ಮಭೂಮಿ ಚಳವಳಿಯರವರೆಗಿನ ರಾಜಕಾರಣ. ೯೦ರ ದಶಕದ ಆದಿಯಿಂದ – ೨೦೧೩ರ ಕೊನೆಯವರೆಗಿನ ಸೆಕ್ಯುಲರಿಸಂ-ಹಿಂದುತ್ವದ ರಾಜಕಾರಣ. ಈ  ನಾಲ್ಕು ಭಾಗಗಳಲ್ಲಿ ನಿಚ್ಚಳ ಬಹುಮತದ ಸರ್ಕಾರಗಳು ರೂಪುತಳೆದಿದ್ದು ನೆಹರೂ ಕಾಲದ ಸ್ವಾತಂತ್ರ್ಯ ಹೋರಾಟದ ಹ್ಯಾಂಗ್ ಓವರ್ ಹಾಗೂ ವಿರೋಧ ಪಕ್ಷಗಳಿಲ್ಲದ ಕಾಲದಲ್ಲಿ,ಇಂದಿರಾ  ಹತ್ಯೆಯ ನಂತರದ ಚುನಾವಣೆಯಲ್ಲಿ ಹಾಗೂ ಕಳೆದ ೨೦೧೪ ರ ಚುನಾವಣೆಯಲ್ಲಿ.

ಮೊದಲ ಎರಡು ಚುನಾವಣೆಯ ವಿಷಯಗಳೇನೂ ಚರ್ಚಿಸ ಬೇಕಾದ ವಿಷಯಗಳೇನೂ ಅಲ್ಲ. ಇನ್ನುಳಿಯುವುದು ೨೦೧೪ರ ಚುನಾವಣೆಯ ವಿಷಯ. ಯಾಕೆ ೨೦೧೪ರ ಚುನಾವಣೆಯ ವಿಷಯ ಮುಖ್ಯವಾಗುತ್ತದೆ ಎಂದರೇ,ಯಾವುದೇ ಜಾತಿ-ರಿಲಿಜಿಯನ್-ಓಲೈಕೆ-ಬಿಟ್ಟಿ ಭಾಗ್ಯ ಯೋಜನೆಗಳಿಲ್ಲದೇ, ಗುಜರಾತಿನಲ್ಲಿ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತದಾರರ ಮುಂದೆ ಅಭಿವೃದ್ಧಿಯ,ನವಭಾರತದ ಕನಸು ಕಟ್ಟಿಕೊಟ್ಟಿದ್ದರು ನರೇಂದ್ರ ಮೋದಿಯವರು.ಆದರೆ ವಿಪಕ್ಷಗಳಿಗೆ ಮೋದಿಯವರ ಅಭಿವೃದ್ಧಿ ಅಜೆಂಡದ ಅಸ್ತ್ರ್ರಕ್ಕೆ ಪ್ರತಿಯಾಗಿ ವಿಭಿನ್ನವಾದ ಅಥವಾ ಅದಕ್ಕಿಂತಲೂ ಉತ್ತಮವಾದ ಅಜೇಂಡಾವನ್ನು ಸೆಟ್ ಮಾಡಲಾಗಲೇ ಇಲ್ಲ. ಅವರು ೨೦೦೨ರ ಗುಜಾರಾತಿನಲ್ಲೇ ಉಳಿದುಹೋದರು. ಇತ್ತ ಮೋದಿಯವರು ನವಭಾರತದ ಅಲೆಯಲ್ಲಿ ೨೦೧೪ರ ಮೇ ತಿಂಗಳಲ್ಲಿ ಸಂಸತ್ತಿಗೆ ಭರ್ಜರಿಯಾಗಿ ಎಂಟ್ರಿ ಕೊಟ್ಟರು. ಮತ್ತಷ್ಟು ಓದು »

11
ಮೇ

ಮುಧೋಳ ನಾಯಿಯ ಜೊತೆಯ ಹೋಲಿಕೆಗೆ ಇವರು ಅರ್ಹರೇ?

– ಸಂತೋಷ್ ತಮ್ಮಯ್ಯ 
ಚುನಾವಣೆ ಸಮೀಪಿಸಿದಾಗಲೆಲ್ಲಾ ಕಾಂಗ್ರೆಸಿಗರು, “ನಮ್ಮ ಇತಿಹಾಸ ತೆರೆದ ಪುಸ್ತಕವಿದ್ದಂತೆ’,‘ದೇಶಕ್ಕೆ ಕಾಂಗ್ರೆಸಿನ ಕೊಡುಗೆಯೇನೆಂಬುದನ್ನು ಯಾರಿಗೂ ನಿರೂಪಿಸುವ ಆವಶ್ಯಕತೆಯಿಲ್ಲ’ಎಂದು ಆಲಾಪಿಸತೊಡಗುತ್ತಾರೆ. ಅವರ ತೆರೆದ ಪುಸ್ತಕದ ಕೆಲವೇ ಪುಟಗಳನ್ನು ನೋಡಿದರೆ ಅಲ್ಲಿ ವಿಚಿತ್ರಗಳೇ ಕಾಣಿಸುತ್ತವೆ. ಇದು ಅಂಥ ಒಂದು ಸ್ಯಾಂಪಲ್.
ಲಾಲ್ ಬಹೂದ್ದೂರ್ ಶಾಸ್ತ್ರಿಗಳ ಬಾಯಿಂದ ಭಾರತ್ ಕೀ ಆಯೂಬ್ ಎಂದು ಬೆನ್ನು ತಟ್ಟಿಸಿಕೊಂಡ ಒರ್ವ ಯೋಧ ಕ್ಯಾ.ಆಯೂಬ್ ಖಾನ್. ವೀರ ಚಕ್ರ ಪುರಷ್ಕೃತ ಕ್ಯಾ.ಖಾನ್‌ಗೆ ಶಾಸ್ತ್ರಿ ಮೇಲೆ ಅದೆಷ್ಟು ಅಭಿಮಾನವಿತ್ತೆಂದರೆ ನಿವೃತ್ತಿಯ ನಂತರ ಅವರು ಕಾಂಗ್ರೆಸ್‌ಗೆ ಸೇರಿದರು. ಎರಡು ಬಾರಿ ರಾಜಾಸ್ಥಾನದ ಜುಂಜುನು ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸಿ ಸಂಸದರೂ ಆದರು. ಆದರೆ ಆಯೂಬ್ ಖಾನರಿಗೆ ಶಾಸ್ತ್ರಿಗಳ ನಿಧನಾನಂತರ ಯಾಕೋ ತನ್ನ ಆಯ್ಕೆ ತಪ್ಪಿದೆ ಎನಿಸತೊಡಗಿತು. ಇಂದಿರಾ ಸರ್ವಾಧಿಕಾರ ಮತ್ತು ರಾಜೀವ್ ಗಾಂಧಿ ಪಟಾಲಮ್ಮಿನ ಸೈನಿಕ ವಿರೋಧಿ ನೀತಿಗಳನ್ನು ಸಹಿಸುವಷ್ಟು ದಿನ ಸಹಿಸಿದರು. ಕೊನೆಗೆ ಶಾಸ್ತ್ರಿಗಳಿಗಾದ ಸ್ಥಿತಿ ನರಸಿಂಹರಾಯರಿಗೂ ಬಂದಾಗ ಹಿಂದೆ ಮುಂದೆ ನೋಡದೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ರಾಜಕೀಯ ಸಂನ್ಯಾಸ ಸ್ವೀಕರಿಸಿದರು. ಕೊನೆ ಕಾಲದಲ್ಲಿ ಆಯೂಬ್ ಖಾನರಿಗೆ ಕಾಂಗ್ರೆಸ್ ಸೇರಿದ್ದ ಬಗ್ಗೆ ಎಷ್ಟು ಪಾಪಪ್ರಜ್ಞೆ ಕಾಡುತ್ತಿತ್ತೆಂದರೆ ಆರೋಗ್ಯ ವಿಚಾರಿಸಲು ಬಂದ ವಾಜಪೇಯಿಯವರ ಪಾದಸ್ಪರ್ಶಕ್ಕೆ ಅನುಮತಿಯನ್ನೂ ಆ ಯೋಧ ಕೇಳಿದ್ದರು. ಏಕೆಂದರೆ ಒಬ್ಬ ದೇಶಭಕ್ತ ಯೋಧ ಮತ್ತು ಕಾಂಗ್ರೆಸಿಗ ಏಕಕಾಲಕ್ಕೆ ಆಗಲು ಸಾಧ್ಯವಿಲ್ಲ ಎಂಬ ಸತ್ಯ ಆಯೂಬ್ ಖಾನರಿಗೆ ತಮ್ಮ ಕೊನೆಕಾಲದಲ್ಲಿ ಅರ್ಥವಾಗಿತ್ತು.
ಹಾಗಾಗಿಯೋ ಏನೋ ಸ್ವಾತಂತ್ರ್ಯಾನಂತರ ರಾಜಕಾರಣಕ್ಕೆ ಬಂದ ಶೇ.೯೯ರಷ್ಟು ಮಾಜಿ ಯೋಧರು ಕಾಂಗ್ರೆಸಿಗೆ ಸೇರಲಿಲ್ಲ. ಕ್ಯಾ.ಅಮರೀಂದರ್ ಸಿಂಗರನ್ನೇ ನೋಡಿ. ಅವರೋರ್ವ ಕಾಂಗ್ರೆಸಿಗ ಎಂಬುದಕ್ಕಿಂತ ಹೆಚ್ಚಾಗಿ ಸಿಕ್ಖ್ ನಾಯಕನಾಗೇ ದೇಶಕ್ಕೆ ಕಾಣುತ್ತಾರೆ. ಇತ್ತೀಚೆಗೆ ಕೆನಡಾದ ಪ್ರಧಾನಿ ಭಾರತಕ್ಕೆ ಬಂದಾಗ ಅವರು ನಡೆದುಕೊಂಡ ರೀತಿಯಿಂದ ಹಿಡಿದು ಕಾರ್ಗಿಲ್ ಯುದ್ಧ, ಉರಿ ಆಕ್ರಮಣ, ಪಟಾನ್‌ಕೋಟ್ ದಾಳಿಗಳ ಸಂದರ್ಭದಲ್ಲೆಲ್ಲಾ ಅವರು ಮುಖ್ಯಮಂತ್ರಿಯಾಗಿ ಕಂಡದ್ದಕ್ಕಿಂತಲೂ ಮಾಜಿ ಯೋಧನಾಗಿಯೇ ಕಂಡರು. ರಾಜೇಶ್ ಪೈಲೆಟ್ ಎಂಬ ಸೋನಿಯಾ ಮನೆಯ ನಿಯತ್ತಿನ ಪ್ರಾಣಿಯೊಂದನ್ನು ಬಿಟ್ಟರೆ ಅಣ್ಣಾ ಹಜಾರೆ, ರಾಜ್ಯವರ್ಧನ ಸಿಂಗ್ ರಾಥೋಡ್, ಜ. ವಿಕೆ ಸಿಂಗ್, ಬಿ.ಸಿ ಖಂಡೂರಿ, ಜೆಎಫ್‌ಆರ್ ಜೆಕಬ್, ಕುಂಜ್ಞಿರಾಮನ್ ಪಾಲಟ್ ಕಂಡೇತ್, ಜಸ್ವಂತ್ ಸಿಂಗ್, ಕ್ಯಾ.ಜಗತ್ ರ್ ಸಿಂಗ್ ದ್ರೋಣ, ಅಡ್ಮಿರಲ್ ವಿಷ್ಣು ಭಾಗ್ವತ್‌ರಂಥಾ ನೂರಾರು ಮಾಜಿ ಯೋಧರು ರಾಜಕಾರಣದಲ್ಲಿದ್ದರೂ ಅವರಾರೂ ಕಾಂಗ್ರೆಸಿದ್ದೆಡೆ ಮಗ್ಗುಲು ಕೂಡಾ ಬದಲಿಸಿಲ್ಲ!
ಯಾಕೆಂದರೆ ಸೈನಿಕನನ್ನ್ನು ಗೌರವಿಸಿದ ಒಂದೇ ಒಂದೇ ಒಂದು ಉದಾಹರಣೆ ಕಾಂಗ್ರೆಸಿನಲ್ಲಿ ಕಾಣಸಿಕ್ಕುವುದಿಲ್ಲ. ಕಾಂಗ್ರೆಸಿನ ಮನೆದೇವರು ನೆಹರೂ ಪ್ರತಿಷ್ಠಾಪನೆಯಾದಂದಿನಿಂದಲೂ ಆ ಗುಣ ಅವರ ‘ತೆರೆದ ಪುಸ್ತಕ ’ದಲ್ಲಿ ಕಂಡುಬರುತ್ತವೆ. ಏಕೆಂದರೆ ದೇಶ ಸ್ವಾತಂತ್ರ್ಯದ ಆನಂದದಲ್ಲಿ ತೇಲುತ್ತಿದ್ದರೆ ಅತ್ತ ಸೇನೆಗಿನ್ನೂ ಸ್ವಾತಂತ್ರ್ಯ ಸಿಕ್ಕಿರಲಿಲ್ಲ! ೧೯೪೭ರ ಆಗಸ್ಟ್ ೧೫ರಂದು ಮೌಂಟ್ ಬ್ಯಾಟನ್ ಜಾಗಕ್ಕೆ ನೆಹರೂ ಬಂದು ಕೂತಾಗ ನೆಹರೂಗೆ ಸೇನಾ ಮುಖ್ಯಸ್ಥ ಕೂಡಾ ಭಾರತೀಯನೇ ಆಗಿರಲಿ ಎಂಬ ಮನಸ್ಸು ಬಂದಿರಲಿಲ್ಲ. ಯಾವ ಹಿಂಜರಿಕೆಯೂ ಇಲ್ಲದೆ ನೆಹರೂ ಅದೇ ದಿನ ರಾಬ್ ಲೊಖಾರ್ಟ್ ಎಂಬವನನ್ನು ಸೇನಾ ದಂಡನಾಯಕನನ್ನಾಗಿ ನೇಮಿಸಿದರು. ಕೊನೆಗೆ ಈ ಲೊಖಾರ್ಟನಿಗೇ ನಾಚಿಕೆಯಾಗಿ ಇಂಗ್ಲೆಂಡಿಗೆ ಹೊರಟುಹೋದ. ನಂತರ ಕೂಡಾ ನೆಹರೂ ಸ್ವತಂತ್ರ ತೀರ್ಮಾನ ತೆಗೆದುಕೊಳ್ಳುವ ಗುಣ ಭಾರತೀಯರಿಗೆಲ್ಲಿದೆ ಎನ್ನುತ್ತಾ ಮತ್ತೊಬ್ಬ ಬಿಳಿಯ ರಾಯ್ ಬುಷರ್ ನನ್ನು ನೇಮಕ ಮಾಡಿದರು. ಒಂದು ವರ್ಷದವರೆಗೆ ಸೇನಾ ಮುಖ್ಯಸ್ಥನಾಗಿದ್ದ ಬುಷರ್ ಮತ್ತಷ್ಟು ವರ್ಷ ಮುಂದುವರಿಯುತ್ತಿದ್ದನೋ ಏನೋ. ಆದರೆ ದೇಶೀ ಸೇನಾ ನಾಯಕನ ಕೂಗು ಸೈನ್ಯದೊಳಗೆ ಗಟ್ಟಿಯಾಗುತ್ತಿತ್ತು. ಆಗ ನೆಹರೂ ಅಂದಿನ ರಕ್ಷಣಾ ಸಚಿವ ಬಲವಂತ್ ಸಿಂಗ್ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಒಲ್ಲದ ಮನಸ್ಸಿನಿಂದ ಕೆ.ಎಂ ಕಾರ್ಯಪ್ಪನವರನ್ನು ಸೇನಾ ಮಹಾದಂಡನಾಯಕನನ್ನಾಗಿ ನೇಮಕ ಮಾಡಿದರು. ಮತ್ತು ಕಾರ್ಯಪ್ಪರ ಮೇಲೆ ಒಂದು ಕಣ್ಣಿಡಲಾರಂಭಿಸಿದರು. ಸರಿಯಾಗಿ ಅದೇ ಹೊತ್ತಲ್ಲಿ ಪಾಕಿಸ್ಥಾನದ ಆಕ್ರಮಣದ ಸೂಚನೆಯೂ ಇದ್ದುದರಿಂದ ನೆಹರೂಗೆ ಹಾಗೆ ಮಾಡದೆ ಬೇರೆ ದಾರಿ ಇರಲಿಲ್ಲ. ಕಾಶ್ಮೀರ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕಾರ್ಯಪ್ಪ ಕಳುಹಿಸಿದ ಮತ್ತೊಬ್ಬ ಅಧಿಕಾರಿ ತಿಮ್ಮಯ್ಯ ಕೆಲವೇ ದಿನಗಳಲ್ಲಿ ಕಾಶ್ಮೀರಿಗಳ ಮನಸ್ಸು ಗೆದ್ದಿದ್ದು ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಜನರು ತಿಮ್ಮಯ್ಯ ಆಳಿದರೆ ನಾವು ಭಾರತ ಒಕ್ಕೂಟಕ್ಕೆ ಸೇರುವೆವು ಎಂದದ್ದೆಲ್ಲವೂ ನೆಹರೂಗೆ ನಡುಕ ಹುಟ್ಟಿಸಿ ಕಾರ್ಯಪ್ಪ ಮತ್ತು ತಿಮ್ಮಯ್ಯರಿಬ್ಬರನ್ನೂ ತಣ್ಣಗೆ ದ್ವೇಷಿಸತೊಡಗಿದರು. ಇವೆಲ್ಲವನ್ನೂ ಜಾರಿಗೆ ತರುತ್ತಿದ್ದವನು ಹಿಟ್ಲರನ ಹಿಂದಿದ್ದ ಹಿಮ್ಲರ್ ನಂಥ ಸರ್ದಾರ್ ಬಲವಂತ್ ಸಿಂಗ್. ಅಂದರೆ ‘ಕಾರ್ಯಪ್ಪ-ತಿಮ್ಮಯ್ಯರನ್ನು ನೆಹರೂ-ಮೆನನ್‌ಗಳು ಸರಿಯಾಗಿ ನಡೆಸಿಕೊಳ್ಳಲಿಲ್ಲ’ ಎಂಬ ಮೋದಿ ಹೇಳಿಕೆ ಕಾಂಗ್ರೆಸಿನ ‘ತೆರೆದ ಪುಸ್ತಕ’ದಲ್ಲೇ ಇವೆ ಎಂದಂತಾಯಿತು!

ಮತ್ತಷ್ಟು ಓದು »

11
ಮೇ

ಹಿಟ್ಲರನ ಗೊಬೆಲ್ಸ್ ಮತ್ತು ನೆಹರೂವಿನ ಗಂಜಿಗಿರಾಕಿಗಳು

 – ರಾಕೇಶ್ ಶೆಟ್ಟಿ

‘ಸುಳ್ಳನ್ನೇ ಪದೇ ಪದೇ ಜನರ ಕಿವಿಗೆ ಬೀಳುವಂತೆ ಬೊಬ್ಬೆ ಹೊಡೆಯುತ್ತಾ ಹೋದರೆ ಅದೇ ಸತ್ಯವಾಗುತ್ತ ಹೋಗುತ್ತದೆ’ ಹೀಗೊಂದು ಮಾತನ್ನು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಸರ್ಕಾರದಲ್ಲಿ Public Enlightenment & Propaganda ಸಚಿವನಾಗಿದ್ದ ಗೊಬೆಲ್ಸ್ ಹೇಳಿದ್ದನೆಂಬ ಮಾತಿದೆ.ಈ ಮಾತನ್ನು ಗೊಬೆಲ್ಸ್ ಹೇಳಿದ್ದನೋ ಇಲ್ಲವೋ,ಆದರೆ ಈ ಮಾತು ಪ್ರಾಕ್ಟಿಕಲಿ ಸತ್ಯವಂತೂ ಹೌದು.ಬೇಕಿದ್ದರೆ ಗೊಬೆಲ್ಸ್ ಹೇಳಿಕೊಟ್ಟ ಈ ಸೂತ್ರವನ್ನು ಬಳಸುತ್ತಿರುವ ಭಾರತದ ಗಂಜಿಗಿರಾಕಿಗಳನ್ನು ಈ ಬಗ್ಗೆ ಕೇಳಿ ನೋಡಿ. ಉದಾಹರಣೆಗೆ, ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ಸಮಾವೇಶವೊಂದರಲ್ಲಿ ನರೇಂದ್ರ ಮೋದಿಯವರು ಮಾತನಾಡುತ್ತ ‘ ಲೂಟಿಕೋರ-ಕಳ್ಳರು ವಿದೇಶದ ಬ್ಯಾಂಕುಗಳಲ್ಲಿ ಎಷ್ಟು ಪ್ರಮಾಣದ ಕಪ್ಪು ಹಣವಿಟ್ಟಿದ್ದಾರೆಂದರೆ,ಅದನ್ನು ವಾಪಸ್ ತಂದರೆ ಭಾರತದ ಪ್ರತಿ ಬಡವನಿಗೆ ೧೫ ಲಕ್ಷದಷ್ಟು ಹಣವನ್ನು ಉಚಿತವಾಗಿ ಕೊಡುವಷ್ಟಿದೆ’ ಎಂದಿದ್ದರು(ಈ ವಿಡಿಯೋ ಈಗಲೂ ಅಂತರ್ಜಾಲದಲ್ಲಿ ಲಭ್ಯವಿದೆ).ಇದೇ ಮಾತನ್ನು ಈಗ ಗಂಜಿಗಿರಾಕಿಗಳೆಂಬ ಗೊಬೆಲ್ಸ್ ಗಳು ‘ಮೋದಿ ಅಧಿಕಾರಕ್ಕೆ ಬಂದ ಮೇಲೆ ನಮ್ಮ ಅಕೌಂಟಿಗೆ ೧೫ ಲಕ್ಷ ಹಣ ಹಾಕ್ತಿನಿ ಅಂದಿದ್ರು.ಹಾಕಿಯೇ ಇಲ್ಲ’ ಎಂದು ಊರಿಡಿ ಬೊಬ್ಬೆ ಹೊಡೆಯಲು ಶುರುವಿಟ್ಟುಕೊಂಡರು. ಈಗ ಈ ಸುಳ್ಳು ಯಾವ ಪರಿ ಹರಡಿದೆಯೆಂದರೆ,ಮೋದಿಯನ್ನು ವಿರೋಧಿಸಲು ಕಾರಣವೇ ಸಿಗದವರು ಎಲ್ರಿ ನಮ್ಮ ೧೫ ಲಕ್ಷ ಎಂದು ಕೇಳುವಷ್ಟು. ವಿಚಿತ್ರವೆಂದರೆ,ಇದು ಗಂಜಿಗಿರಾಕಿಗಳ ಅಪಪ್ರಚಾರದ ಕ್ಯಾಮ್ಪೇನು ಎಂದು ಹೇಳಬೇಕಾದವರೇ ತಡಬಡಾಯಿಸುವಂತಾಗಿದೆ.ಇದೇ ನೋಡಿ GGG Lying Formula (ಗಂಜಿ ಗಿರಾಕಿ ಗೊಬೆಲ್ಸ್ ಸುಳ್ಳಿನ ಸೂತ್ರ)ದ ತಾಕತ್ತು.

ಭಾರತದ ಗಂಜಿಗಿರಾಕಿಗಳ ಗೊಬೆಲ್ಸ್ ಕಾರ್ಯಾಚರಣೆಯ ಬಗ್ಗೆ ಮಾತನಾಡುವ ಮುನ್ನ, ಜರ್ಮನಿಯ ಗೊಬೆಲ್ಸ್ ಪರಿಚಯ ಮಾಡಿಕೊಳ್ಳಬೇಕು,ಆಗ ಅವರಿಬ್ಬರ ಸಾಮ್ಯತೆ ಅರ್ಥವಾದೀತು. ಜರ್ಮನಿಯಲ್ಲಿ National Socialist German Workers’ (Nazi) Party ಹಿಟ್ಲರನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಾಗ, ಪ್ರಪೋಗ್ಯಾಂಡ ಸಚಿವನಾಗಿ ಬಂದವನು ಗೊಬೆಲ್ಸ್. ಹೈಡಲ್ ಬರ್ಗ್ ವಿವಿಯಿಂದ ಸಾಹಿತ್ಯದಲ್ಲಿ ಪಿಹೆಚ್ಡಿ ಪದವಿ ಪಡೆದಿದ್ದ ಚಾಣಾಕ್ಷ ಈತ. ಈತನಿಗೆ ಯಾವುದೇ ಸುಳ್ಳನ್ನು ಸತ್ಯವೆಂದು ಓದುಗರನ್ನು ಮರುಳು ಮಾಡುವ ಬರವಣಿಗೆ ಒಲಿದಿತ್ತು. ಇದರ ಜೊತೆಗೆ ಸಾಹಿತ್ಯ,ಸಿನಿಮಾ,ಕಲೆ ಇವನ ಆಸಕ್ತಿಕರ ಕ್ಷೇತ್ರಗಳು. ಇಷ್ಟೆಲ್ಲಾ ಆಸಕ್ತಿ ಮತ್ತು ಸಾಮರ್ಥ್ಯವಿದ್ದ  ವ್ಯಕ್ತಿ ದೇಶದ ಸಾಂಸ್ಕೃತಿಕ ರಾಜಕಾರಣವನ್ನು ತನ್ನ ಕಪಿಮುಷ್ಟಿಯಲ್ಲಿಟ್ಟುಕೊಳ್ಳಲು ಸಮರ್ಥ ವ್ಯಕ್ತಿಯಾಗಿ ಹಿಟ್ಲರನಿಗೆ ಅನ್ನಿಸಿದ್ದು ಸಹಜವೇ. ಅಧಿಕಾರಕ್ಕೆ ಬಂದ ಗೊಬೆಲ್ಸ್ ಕೂಡ ಹಿಟ್ಲರ್ ಸುತ್ತ ನಕಲಿ ಪ್ರಭಾವಳಿಯನ್ನು ಸೃಷ್ಟಿಸುವಲ್ಲಿ ಸಫಲನಾಗಿದ್ದ,  ಇವನಿಲ್ಲದಿದ್ದರೆ ಜರ್ಮನಿ ಮತ್ತೊಮ್ಮೆ ಗೌರವಯುತವಾಗಿ ತಲೆ ಎತ್ತಲಾರದು ಎಂದ, ಜನರು ನಂಬಿದರು.

ಮತ್ತಷ್ಟು ಓದು »

25
ಡಿಸೆ

ಪ್ರಶ್ನೆ ರಾಹುಲ್ ಪಟ್ಟಾಭಿಷೇಕದ್ದಲ್ಲ; ಕಾಂಗ್ರೆಸ್ಸಿನ ನಿಗೂಢ ನಡೆಗಳದ್ದು

– ರಾಕೇಶ್ ಶೆಟ್ಟಿ

ಸೋನಿಯಾ ಗಾಂಧಿಯವರನ್ನು ಅಧ್ಯಕ್ಷೆಯನ್ನಾಗಿಸುವಾಗ,ವಯೋವೃದ್ಧ ಕೇಸರಿಯವರನ್ನು ಹೇಗೆ ನಡೆಸಿಕೊಳ್ಳಲಾಗಿತ್ತು ಎನ್ನುವುದು ಈಗ ಇತಿಹಾಸ. ಆದರೆ ಕೇಸರಿಯವರ ರಾಜಕೀಯ ಅಧ್ಯಾಯ ತೀರಾ,ಇಂದಿರಾ ಗಾಂಧಿಯವರ ಕಾಲದಲ್ಲಿ ದಲಿತ ನಾಯಕ ಜಗಜೀವನ್ ರಾಮ್ ಅವರ ರಾಜಕೀಯ ಜೀವನವನ್ನು ಮುಗಿಸಿದಷ್ಟು ಕ್ರೂರವಾಗಿರಲಿಲ್ಲವೆಂಬುದೇ ಸಮಾಧಾನ!

ದೇವೇಗೌಡರ ನೇತೃತ್ವದ ಸರ್ಕಾರವನ್ನು ವಿನಾಕಾರಣ ಬೀಳಿಸಿದ್ದ ಕಾಂಗ್ರೆಸ್ಸಿಗೆ ಮುಂದಿನ ಚುನಾವಣೆ ಗೆಲ್ಲಲು ನಾಯಕರೇ ಇರಲಿಲ್ಲವೆಂಬ ನೆಪವೊಡ್ಡಿ ಸೋನಿಯಾ ಅವರನ್ನು ಮುನ್ನೆಲೆಗೆ ತರಲಾಯಿತು. ರಾಜೀವ್ ಗಾಂಧಿಯವರ ಕೊಲೆಯ ನಂತರ ದೇಶವನ್ನು,ಪಕ್ಷವನ್ನು ಸಮರ್ಥವಾಗಿ ಮುಂದುವರೆಸಿದ್ದ ಪಿವಿ ನರಸಿಂಹರಾವ್ ಕಾಂಗ್ರೆಸ್ಸಿನಲ್ಲಿ ಯಾರಿಗೂ ಆಗ ಬೇಡವಾಗಿದ್ದರು. ಕಾರಣ ಸ್ಪಷ್ಟ, ನೆಹರೂ ಕುಟುಂಬದ ಸುತ್ತ ಸುತ್ತುವ ಕ್ಷುದ್ರ ಗ್ರಹಗಳಿಗೆ, ನಕಲಿ ಗಾಂಧಿ ಕುಟುಂಬದ ಮುಖ ಸ್ತುತಿ ಮಾಡುವ ಗುಲಾಮರು ಇಷ್ಟವಾಗುತ್ತಾರೆಯೇ ಹೊರತು ಸ್ವಂತ ಬುದ್ಧಿಶಕ್ತಿ,ಚಿಂತನೆಯುಳ್ಳ ನಾಯಕರಲ್ಲ. ಇಂದಿರಾ ಕಾಲದಲ್ಲಿ ಜಗಜೀವನ್ ರಾಮ್,ಮೊರಾರ್ಜಿ ದೇಸಾಯಿಯಂತವರನ್ನು ಹಣಿಯಲಾಗಿತ್ತು. ಸೋನಿಯಾ ಕಾಲಕ್ಕೆ ನರಸಿಂಹರಾವ್,ಕೇಸರಿಯವರು ನೆಹರೂ ಕುಟುಂಬದ ರಾಜಕೀಯ ಬೇಟೆಗೆ ಬಲಿಯಾದರು.ಕೇಸರಿಯವರನ್ನು ಕಾಂಗ್ರೆಸ್ ಪಕ್ಷದ ಸಂವಿಧಾನಕ್ಕೆ ವ್ಯತಿರಿಕ್ತವಾಗಿ ಅಧ್ಯಕ್ಷ  ಹುದ್ದೆಯಿಂದ ಇಳಿಸಿ, ಸೋನಿಯಾ ಅವರಿಗೆ ಪಟ್ಟ ಕಟ್ಟಲು,ಸೋನಿಯಾರ ಟೀಮು ಸೇರಿಕೊಂಡಿದ್ದ ಪ್ರಣಬ್ ಮುಖರ್ಜಿ,ಶರದ್ ಪವಾರ್ ಅವರಂತವರಿಗೂ ಮುಂದೊಂದು ದಿನ ಕೇಸರಿಯವರಿಗೆ ಸಿಕ್ಕ ಅದೇ ರುಚಿಯ ಸ್ವಾದವೂ ಸಿಕ್ಕಿತು. ಶರದ್ ಪವಾರ್, ಸಂಗ್ಮಾ, ತಾರೀಖ್ ಅನ್ವರ್ ಅವರನ್ನು ಪಕ್ಷದಿಂದ ಹೊರಹಾಕಿದರು. ಮುಂದೊಂದು ದಿನ ಅಡ್ಡಿಯಾಗಬಹುದಾಗಿದ್ದ ರಾಜೇಶ್ ಪೈಲಟ್,ಮಾಧರಾವ್ ಸಿಂಧಿಯಾ ರಸ್ತೆ ಮತ್ತು ವಿಮಾನಾಪಘಾತಗಳಲ್ಲಿ ಸತ್ತರು.ಈ ರೀತಿ ವಿಮಾನಾಪಘಾತ/ರಸ್ತೆ ಅಪಘಾತಗಳಲ್ಲಿ ಸಾಯುವವರ ಪಟ್ಟಿ ಭಾರತದ ರಾಜಕೀಯ ಇತಿಹಾಸದಲ್ಲಿ ಅಲ್ಲಲ್ಲಿ ಸಿಗುತ್ತದೆ.ಆದರೆ ಹಾಗೆ ಸಿಗುವ ಪಟ್ಟಿ ಇದೇ ನೆಹರು ಕುಟುಂಬದ ಆಸುಪಾಸಿನಲ್ಲಿ ಸುತ್ತುತ್ತದೆ. ನಿಗೂಢತೆ ಮತ್ತು ನೆಹರೂ ಕುಟುಂಬಕ್ಕೂ ಅದೇನೋ ಒಂದು ನಂಟು.

ಮತ್ತಷ್ಟು ಓದು »

26
ಫೆಬ್ರ

ಪ್ರೀತಿಯ ನೆಹರೂಜಿ,ನೆಮ್ಮದಿಯಾಗಿರಬೇಕಲ್ಲ? ಕಂಗ್ರಾಜುಲೇಷನ್ಸ್!

– ಪಲ್ಲವಿ ರಾವ್

ನೆಹರೂಅಂತೂ ಭಾರತದ ಯುವ ಜನತೆಗೆ ದೇಶವೆಂದರೆ ಭೌಗೋಳಿಕ ಇರುವಿಕೆಯೇ ಅರ್ಥಹೀನ, ಇಲ್ಲಿನ ನಂಬಿಕೆಗಳೆಲ್ಲವೂ ಅವೈಜ್ನಾನಿಕ, ಆಚರಣೆಗಳೆಲ್ಲ ತುಚ್ಚ , ಹೆಮ್ಮೆ ಪಡುವಂತದ್ದೂ ಇಲ್ಲೇನೂ ಇಲ್ಲ , ದೇಶವೆಂದರೆ ತಾಯಿ ಅನ್ನುವ ಕಲ್ಪನೆಯೇ ಬುಲ್ಶಿಟ್ ಅನ್ನುವ ಮನೋಭಾವವನ್ನು ನಿಮ್ಮ ಕನಸಿನ ವೈಜ್ನಾನಿಕ ಆಧುನಿಕ ಪಾಶ್ಚಾತ್ಯ ಶಿಕ್ಷಣ ಬಹಳ ಯಶಸ್ವಿಯಾಗಿ ಬಿತ್ತಿದೆ. ನೀವು ಬಹಳವಾಗಿ ಆರಾಧಿಸಿದ ಇತಿಹಾಸ ತಜ್ನರಿಂದ ಬರೆಸಿದ ಇತಿಹಾಸ ಈ ದೇಶದ ತರುಣರಲ್ಲಿ ಸಿನಿಕತೆಯನ್ನು,ದೇಶ ಕಾಯುವ ಸೈನಿಕರ ಬಗ್ಗೆ ತಿರಸ್ಕಾರವನ್ನೂ ಪ್ರಜಾಪ್ರಭುತ್ವದ ಬುನಾದಿಯ ಮೇಲೆ ದಾಳಿ ನಡೆಸಿದವರನ್ನೂ ಆರಾಧಿಸುವ ಮಟ್ಟಕ್ಕೆ ಬೆಳೆಸಿದೆ. ನೀವು ಇದನ್ನೇ ಬಯಸಿದ್ದೀರಿ ಅಲ್ವ? ಪ್ರತಿಯೊಂದನ್ನೂ ಪ್ರಶ್ನಿಸುವ, ತಿರಸ್ಕರಿಸುವ ಎಡಬಿಡಂಗಿ ಮನೋಭಾವವನ್ನೇ ವೈಜ್ನಾನಿಕ ಎಂದು ಅರ್ಥೈಸಿದ್ದವರಿಗೆ ಇಂದಿನ ವಿಶ್ವವಿದ್ಯಾನಿಲಯಗಳ ದಿಕ್ಕುದೆಶೆ ಇಲ್ಲದ ಭವಿಷ್ಯದ ಬಗ್ಗೆ ಕನಸು, ದೇಶದ ಬಗ್ಗೆ ಕಾಳಜಿ ಎರಡೂ ಇಲ್ಲದ ಸಿನಿಕ ಯುವಭಾರತ ಹೆಮ್ಮೆ ತಂದಿರಬೇಕು ,

ಕಂಗ್ರಾಜ್ಯುಲೇಷನ್ಸ್!

ನೀವು ಮತ್ತು ನಿಮ್ಮ ಕುಟುಂಬದ ಸ್ವತ್ತಾಗಿ ಹೋದ ಪಕ್ಷಕ್ಕೆ ಭಾರತದ ಬಗ್ಗೆ ಪ್ರೀತಿ, ಹೆಮ್ಮೆ ಹುಟ್ಟುವುದಾದರೂ ಹೇಗೆ? ಸದಾ ಪಾಶ್ಚಾತ್ಯ ಚಿಂತನೆ, ಅಲ್ಲಿನ ವಿದ್ಯಾಲಯಗಳ ಓದು, ಅಲ್ಲಿನದೇ ಬದುಕನ್ನು ಕಂಡ ನಿಮ್ಮವರಿಗೆ ಈ ದೇಶ ಬರಿಯ ಮೂಢನಂಬಿಕೆಗಳ , ಜಾತಿಗಳ, ತಾರತಮ್ಯದ ಆಡೊಂಬೊಲವಾಗಿಯೇ ಕಂಡಿತ್ತು. ನೀವೇನೋ ಡಿಸ್ಕವರಿ ಆಫ್ ಇಂಡಿಯ ಬರೆದುಬಿಟ್ಟಿರಿ. ಆದರೆ ನಿಮ್ಮ ಮರಿ ಮಕ್ಕಳಿಗೆ ಅದರ ಕಲ್ಪನೆಯಾದರೂ ಇದೆ ಅಂದು ಕೊಂಡಿದ್ದೀರ? ನೀವು ಅಷ್ಟೆಲ್ಲ ಕಾಳಜಿಯಿಂದ ಜತನವಾಗಿ ಅತ್ಯಂತ ಚಾಣಾಕ್ಶತನದಿಂದ ಅಡೆತಡೆಗಳನ್ನು ನಿವಾರಿಸಿ , ಕಾದಿಟ್ಟ ದೇಶಾಡಳಿತದ ಕಿರೀಟ ಕೈ ತಪ್ಪಿದ ಸಂಕಟದಲ್ಲಿ ನಿಮ್ಮದೇ ವಂಶದ ಕುಡಿ ದೇಶದ್ರೋಹಿಗಳಿಗೂ ಜೈಕಾರ ಹಾಕುತ್ತಾನೆ. ನಮಗವನ ಬಗ್ಗೆ ನಿರೀಕ್ಶೆಗಳೇನೂ ಇಲ್ಲ ಬಿಡಿ. ಎಷ್ಟಾದರೂ ಏನೂ ಬೆಳೆಯದ ಹಿಮದ ಮರುಭೂಮಿಯನ್ನೂ ಬೇರೆ ದೇಶಕ್ಕೆ ಕೊಟ್ಟರೇನೂ ತೊಂದರೆ ಇಲ್ಲ ಅಂದವರಲ್ಲವೆ ನೀವೂ? ನಿಮ್ಮ ವಾರಸುದಾರರು ನಿಮ್ಮ ಜೀನ್ಗಳಿಗೆ ನ್ಯಾಯ ಸಲ್ಲಿಸುತ್ತಿದ್ದಾರೆ ಬಿಡಿ. ಭಾರತದ ಸಾರ್ವಭೌಮತೆ ವಿಚ್ಛಿದ್ರವಾದರೂ ಚಿಂತೆ ಇಲ್ಲ, ಅವರ ಆಡಳಿತ ನಡೆಸಲು ತುಂಡು ಉಳಿದರೆ ಸಾಕು ಅನ್ನುತ್ತ ಭಾರತವನ್ನು ತುಂಡಾಗಿಸಲು ಹೋರಾಡುವವರ ಜತೆ ಧರಣಿ ಕೂರುತ್ತಿದ್ದಾರೆ. ನೀವು ಮಗಳನ್ನು ಪಟ್ಟಕ್ಕೇರಿಸಿದಾಗ ಇದನ್ನೇ ನಿರೀಕ್ಷಿಸಿದ್ದಿರೇನೋ ಅಲ್ವ?

ಮತ್ತಷ್ಟು ಓದು »

31
ಆಕ್ಟೋ

ಉಕ್ಕಿನ ಮನುಷ್ಯನಿಗೆ ಸಿಗಲಿ ತಕ್ಕ ಗೌರವ

– ರೋಹಿತ್ ಚಕ್ರತೀರ್ಥ

ಸರ್ದಾರ್ ವಲ್ಲಭಾಯ್ ಪಟೇಲ್1909ರ ಒಂದು ದಿನ. ನ್ಯಾಯಾಲಯದಲ್ಲಿ ಕ್ರಾಸ್ ಎಕ್ಸಾಮಿನೇಶನ್ ನಡೆಯುತ್ತಿದೆ. ನಿರಪರಾಧಿಯೊಬ್ಬ ಅಪರಾಧಿ ಸ್ಥಾನದಲ್ಲಿ ನಿಂತಿದ್ದಾನೆ. ವಕೀಲರು ಪಾಟೀಸವಾಲು ಹಾಕುತ್ತಿರುವಾಗಲೇ ಮಧ್ಯದಲ್ಲಿ ಅವರಿಗೊಂದು ಟೆಲಿಗ್ರಾಂ ಬಂತು. ಆ ಕಾಲದಲ್ಲಿ ಯಾರಿಗಾದರೂ ತಂತಿ ಸಂದೇಶ ಬಂತೆಂದರೆ ಅದು ಸಾವಿನ ಸುದ್ದಿಯೆಂದೇ ಲೆಕ್ಕ. ಚೀಟಿಯತ್ತ ಒಮ್ಮೆ ಕಣ್ಣುಹಾಯಿಸಿ, ಕ್ಷಣಕಾಲ ಕಣ್ಣುಮುಚ್ಚಿ ದೀರ್ಘವಾಗಿ ಉಸಿರೆಳೆದು, ಅವರು ಆ ಚೀಟಿಯನ್ನು ತನ್ನ ಕೋಟಿನ ಜೇಬಿನೊಳಗಿಳಿಸಿ ವಾದ ಮುಂದುವರಿಸಿದರು. ಕೊನೆಗೆ ಕಟಕಟೆಯಲ್ಲಿ ನಿಂತಿದ್ದ ವ್ಯಕ್ತಿ ನಿರಪರಾಧಿಯೆಂದು ಸಾಬೀತಾಯಿತು. ಕೋರ್ಟಿನ ಕಲಾಪಗಳು ಮುಗಿದ ನಂತರ ನ್ಯಾಯಮೂರ್ತಿಗಳು ಟೆಲಿಗ್ರಾಂ ವಿಷಯ ಪ್ರಸ್ತಾಪಿಸಿದಾಗ ವಕೀಲರು, “ಅದು ನನ್ನ ಪತ್ನಿಯ ಸಾವಿನ ಸುದ್ದಿ. ನಾನು ಆ ಕೂಡಲೇ ನ್ಯಾಯಾಲಯದಿಂದ ಹೊರಟುಬಿಡುತ್ತಿದ್ದರೆ ಇಲ್ಲಿ ನಿರಪರಾಧಿಯ ಪರವಾಗಿ ವಾದಿಸುವವರು ಯಾರೂ ಇಲ್ಲದೆ ಅವನು ಶಿಕ್ಷೆಗೆ ಗುರಿಯಾಗುತ್ತಿದ್ದನೇನೋ. ಒಂದು ಪ್ರಾಣ ಹೇಗೂ ಹೋಗಿಯಾಗಿದೆ. ಇಲ್ಲಿಂದ ಹೊರನಡೆದಿದ್ದರೆ ಈ ದಿನ ನಾನು ಎರಡನೇ ಸಾವನ್ನೂ ನೋಡಬೇಕಾಗಿತ್ತಲ್ಲ” ಎಂದರು. ಸರ್ದಾರ್ ವಲ್ಲಭಭಾಯಿ ಪಟೇಲರನ್ನು ಉಕ್ಕಿನ ಮನುಷ್ಯ ಎಂದು ಕರೆಯುವುದು ಸುಮ್ಮನೇ ಅಲ್ಲ ಎನ್ನುವುದಕ್ಕೆ ಇದೊಂದು ದೃಷ್ಟಾಂತ ಸಾಕು.

ಪಟೇಲರು 1875ನೇ ಇಸವಿ ಅಕ್ಟೋಬರ್ 31ರಂದು ಗುಜರಾತ್‍ನಲ್ಲಿ ಜನಿಸಿದರು. ಪಟೇಲ್ ಸಮುದಾಯದ ಸಂಪ್ರದಾಯದಂತೆ ಹುಡುಗನಿಗೆ 18ರ ಹರೆಯದಲ್ಲೇ ಮದುವೆಯಾಯಿತು. ಕುಟುಂಬ ದೊಡ್ಡದು. ಜೀವನ ನಿರ್ವಹಣೆಗೆ ಶಕ್ತಿಮೀರಿ ದುಡಿಯುವುದು ಅನಿವಾರ್ಯ ಕರ್ಮವಾಗಿದ್ದ ಕಾಲ. ಪಟೇಲರು ಸ್ವಂತ ಪರಿಶ್ರಮದಿಂದ ಓದಿ, ಪದವಿ ಪಡೆದು, ಉನ್ನತ ವ್ಯಾಸಂಗಕ್ಕೆ ಇಂಗ್ಲೆಂಡಿಗೆ ಹೋಗುವ ಕನಸು ಕಂಡಿದ್ದರು. ಅವರ ಕನಸಿಗೆ ನೀರೆರೆಯುವಂತೆ ಇಂಗ್ಲೆಂಡಿನಿಂದ ವಕೀಲಿ ವ್ಯಾಸಂಗದ ಪ್ರವೇಶಾತಿಯ ಕಾಗದಪತ್ರಗಳೂ ಪ್ರಯಾಣದ ಟಿಕೇಟೂ ಬಂದವು. ಆ ಎಲ್ಲ ದಾಖಲೆಗಳಲ್ಲೂ ಪಟೇಲರ ಹೆಸರನ್ನು ವಿ.ಜೆ. ಪಟೇಲ್ ಎಂದು ನಮೂದಿಸಲಾಗಿತ್ತು. ಆಗ, ಇಂಗ್ಲೆಂಡಿಗೆ ಹೋಗಿ ಕಲಿಯಲು ತನಗೂ ಆಸೆಯಿದೆ ಎಂದು ಸೋದರ ವಿಠಲಭಾಯಿ ಝಾವೆರ್‍ಬಾಯಿ ಪಟೇಲ್ ಮುಂದೆ ಬಂದು ಅಣ್ಣನ ಬಳಿ ಹೇಳಿಕೊಂಡ. ಅಣ್ಣ ವಲ್ಲಭಭಾಯಿ ತಮ್ಮನ ಆಸೆ ಮನ್ನಿಸಿ ಆತನಿಗೆ ವಿದೇಶಕ್ಕೆ ಹೋಗಲು ಅವಕಾಶ ಮಾಡಿಕೊಟ್ಟು ತಾನು ಭಾರತದಲ್ಲೆ ಉಳಿದರು. ವಜ್ರದಂಥ ವ್ಯಕ್ತಿಯ ಮನಸ್ಸು ಹೂವಿನಷ್ಟು ಮೃದುವೂ ಆಗಿತ್ತೆನುವುದಕ್ಕೆ ಈ ಘಟನೆ ಸಾಕ್ಷಿ.

ಮತ್ತಷ್ಟು ಓದು »

28
ಆಕ್ಟೋ

ಹಿಂದೂ-ವಿರೋಧಿ ಮಾಧ್ಯಮ: ಸೃಷ್ಟಿ ಮತ್ತು ಸ್ಥಿತಿ

– ಪ್ರೇಮಶೇಖರ

ಪೇಯ್ಡ್ ಮೀಡಿಯಾಪ್ರಕರಣ ೧: ಪ್ರಮುಖ ಕನ್ನಡ ದೈನಿಕವೊಂದರಲ್ಲಿ ಸೌದಿ ಅರೇಬಿಯಾದ ಬಗ್ಗೆ ಪರಿಚಯಾತ್ಮಕ ಲೇಖನವೊಂದು ಪ್ರಕಟವಾಗುತ್ತದೆ. ಅಚ್ಚರಿಯೆಂದರೆ ಮರುದಿನವೂ ಅದೇ ಲೇಖನ ಮತ್ತೆ ಕಾಣಿಸಿಕೊಳ್ಳುತ್ತದೆ!  ಅದರ ಕೆಳಗೆ ಹೀಗೊಂದು ವಿವರಣೆ: “ನಿನ್ನೆಯ ದಿನ ಸೌದಿ ಅರೇಬಿಯಾವನ್ನು ಕುರಿತು ನೀಡಿದ ವಿವರಣೆಯಲ್ಲಿ ಮಹಮದ್ ಪೈಗಂಬರ್ ಮೆಕ್ಕಾದಿಂದ ಮದೀನಾಕ್ಕೆ ಕ್ರಿ.ಶ. ೬೨೨ರಲ್ಲಿ ಓಡಿಹೋದರು. ಅಂದಿನಿಂದ ಹಿಜ್ರಾ ಶಕೆ ಪ್ರಾರಂಭವಾಗುತ್ತದೆ ಎಂದು ಪ್ರಕಟವಾಗಿತ್ತು.ಇದರಿಂದ ಅನೇಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ತಿಳಿದುಬಂದಿದೆ. ಅದಕ್ಕಾಗಿ ಪತ್ರಿಕೆ ಕ್ಷಮೆ ಯಾಚಿಸುತ್ತದೆ ಹಾಗೂ ಇಂದು ಅದೇ ಲೇಖನವನ್ನು ತಿದ್ದಿ ಪ್ರಕಟಿಸಲಾಗಿದೆ.” ಮರುಪ್ರಕಟವಾಗಿದ್ದ ಲೇಖನದಲ್ಲಿ ಪೈಗಂಬರರು ಮದೀನಾಗೆ ಓಡಿಹೋದ ಬಗೆಗಿನ ಒಂದು ಸಾಲು ಮಾಯವಾಗಿರುತ್ತದೆ.

ಪ್ರಕರಣ ೨: ಕೆಲದಿನಗಳ ನಂತರ ಅದೇ ಪತ್ರಿಕೆಯಲ್ಲಿ ಸ್ವಾಮಿ ವಿವೇಕಾನಂದರ ಬಗ್ಗೆ ಲೇಖನವೊಂದು ಪ್ರಕಟವಾಗುತ್ತದೆ.ವಿವೇಕಾನಂದರ ದೈಹಿಕ ಸಮಸ್ಯೆಗಳು,ಬಲಹೀನತೆಗಳ ಬಗ್ಗೆ ಅದರಲ್ಲಿನ ವಿಷಯಗಳಾವುವೂ ಹೊಸದಾಗಿರುವುದಿಲ್ಲ.  ಅವೆಲ್ಲವೂ ಕೊಲ್ಕತಾದ ರಾಮಕೃಷ್ಣ ಮಿಶನ್ ಮತ್ತು ಅಲ್ಮೋರಾದ ಅದ್ವೈತಾಶ್ರಮಗಳ ಪ್ರಕಟಣೆಗಳಲ್ಲೇ ಇವೆ.ಆದರೆ ಲೇಖನದ ಭಾಷೆ, ಕೆಲ ಪದಗಳು ಅಕ್ಷೇಪಾರ್ಹವಷ್ಟೇ ಅಲ್ಲ, ಪತ್ರಿಕೆಯ ಘನತೆಗೂ ಶೋಭೆ ತರುವಂತಿರುವುದಿಲ್ಲ.ಇದರಿಂದಾಗಿ ಹಲವರ ಭಾವನೆಗಳಿಗೆ ಧಕ್ಕೆಯಾಗುತ್ತದೆ.ಅದು ರಾಜ್ಯದ ವಿವಿಧೆಡೆ ಸಾರ್ವಜನಿಕವಾಗಿಯೂ ವ್ಯಕ್ತವಾಗುತ್ತದೆ.ಅದಕ್ಕೆ ಪತ್ರಿಕೆಯ ಪ್ರತಿಕ್ರಿಯೆ? ಒಂದಕ್ಷರದ ಕ್ಷಮಾಯಾಚನೆಯೂ ಇಲ್ಲ!

ಮತ್ತಷ್ಟು ಓದು »

18
ಆಗಸ್ಟ್

ಬುದ್ಧಿಜೀವಿಗಳ ಬ್ರಾಹ್ಮಣ ಥಿಯರಿಗಳು ಬರುತ್ತಿರುವುದೆಲ್ಲಿಂದ? – ಭಾಗ ೨

– ರೋಹಿತ್ ಚಕ್ರತೀರ್ಥ

ಬುದ್ಧಿಜೀವಿಗಳ ಬ್ರಾಹ್ಮಣ ಥಿಯರಿಗಳು ಬರುತ್ತಿರುವುದೆಲ್ಲಿಂದ? – ಭಾಗ ೧

ಬ್ರಾಹ್ಮಣಎಲ್ಲ ವಿಷಯಗಳಲ್ಲೂ, ಇಪ್ಪತ್ತೊಂದನೆ ಶತಮಾನದ ಸಂದರ್ಭವನ್ನು ನೋಡಿ ಎನ್ನುವ ನಾವು ಬ್ರಾಹ್ಮಣ ಮತ್ತು ಉಳಿದ ಜಾತಿಗಳ ನಡುವಿನ ಸಂಬಂಧಗಳ ವಿಷಯ ಬಂದಾಗ ಮಾತ್ರ ಇತಿಹಾಸಕ್ಕೆ ಹಾರುವುದು ಯಾಕೆ ಎನ್ನುವುದು ಸದ್ಯದ ಯುಗದಲ್ಲಿ ಬದುಕುತ್ತಿರುವ ನನ್ನಂಥವರಿಗೆ ಬಿಡಿಸಲಾರದ ಒಗಟಾಗಿದೆ. ಇಪ್ಪತ್ತೊಂದನೆ ಶತಮಾನದ ಬ್ರಾಹ್ಮಣ, ಉಳಿದ ಜಾತಿ-ಪಂಥದ ಜನರಿಗಿಂತ ಯಾವ ವಿಷಯದಲ್ಲೂ ಹೆಚ್ಚಿನ ಸವಲತ್ತುಗಳನ್ನು ಪಡೆದು ಹುಟ್ಟಿಬಂದ ಸೂಪರ್‍ಮ್ಯಾನ್ ಅಲ್ಲ. ನಿಜಕ್ಕಾದರೆ, ಅವನು ನೂರಾರು ಹರಿತಖಡ್ಗಗಳನ್ನು “ಬ್ರಾಹ್ಮಣ”ನೆಂಬ ತನ್ನ ಮೊಂಡುಗತ್ತಿಯಿಂದ ಎದುರಿಸಬೇಕಾಗಿದೆ. ತನ್ನ ಬಾಲ್ಯ, ಶಾಲೆ, ಕಾಲೇಜುಗಳಲ್ಲಿ ಒಂದು ದಿನವೂ ಜಾತೀಯತೆ ಆಚರಿಸದ ಬ್ರಾಹ್ಮಣನಿಗೆ ಕೂಡ ಅಂಥದೊಂದು ವಿಷಸರ್ಪದ ಮೊದಲ ಕಡಿತದ ಅನುಭವವಾಗುವುದು, ಕಾಲೇಜಿನ ಫೀಸ್ ಕಟ್ಟುವಾಗ. ಪ್ರವಾಸಿಸ್ಥಳಗಳಲ್ಲಿ, “ಭಾರತೀಯರಿಗೆ 5 ರುಪಾಯಿ ಟಿಕೇಟು; ವಿದೇಶಿಯರಿಗೆ 50 ರುಪಾಯಿ” ಎಂದು ಬೋರ್ಡ್ ಬರೆದಿರುವಂತೆ, ಬೇರೆ ಜಾತಿಯವನು ಕಟ್ಟಿದ ಫೀಸಿಗೆ ಎರಡೋ ಮೂರೋ ಸೊನ್ನೆ ಸೇರಿಸಿ ವಿಧಿಸುವ ದೊಡ್ಡಮೊತ್ತವನ್ನು ತಾನು ಕಟ್ಟಬೇಕಾಗಿ ಬಂದಾಗ, ಅವನಿಗೆ ಜಾತೀಯತೆಯ ಮೊದಲ ಮುಖದರ್ಶನವಾಗುತ್ತದೆ. ಆದರೆ, ಈ ಸರಕಾರೀ ಜಾತೀಯತೆಯ ಬಗ್ಗೆ ಎಲ್ಲಾದರೂ ಆತ ಪ್ರತಿಭಟಿಸಲು ಅವಕಾಶ ಇದೆಯೆ?

ಭಾರತೀಯ ವಿಜ್ಞಾನ ಸಂಸ್ಥೆಯಂತಹ ಸರಕಾರೀ ಸಂಸ್ಥೆಗಳಲ್ಲಿ, ಪದವಿ/ಪಿಎಚ್‍ಡಿ ಕೋರ್ಸುಗಳ ಸಂದರ್ಶನಕ್ಕೆ ಆಯ್ಕೆಯಾದ ಕೆಲವೊಂದು ಜಾತಿಯ ವಿದ್ಯಾರ್ಥಿಗಳು ಸಂದರ್ಶನಕ್ಕೆ ಎರಡು ದಿನ ಮೊದಲು ಸಂಸ್ಥೆಗೆ ಬಂದು, “ತರಬೇತಿ” ಪಡೆಯುವ ಅವಕಾಶ ಇದೆ. ಪ್ರತಿಭೆಯೊಂದೇ ಮಾನದಂಡವೆಂದು ಪರಿಗಣಿಸಬೇಕಿದ್ದ ಇಂತಹ ಉನ್ನತ ಸಂಸ್ಥೆಗಳಲ್ಲಿ ಕಾಣಸಿಗುವ ಈ ಜಾತೀಯತೆಯನ್ನು ಬ್ರಾಹ್ಮಣವಟು ಎಂದಾದರೂ ಪ್ರಶ್ನೆ ಮಾಡಿದ್ದಿದೆಯೆ? ಇನ್ನು ಉದ್ಯೋಗದ ವಿಷಯಕ್ಕೆ ಬಂದಾಗ ನಮ್ಮ ದೇಶದಲ್ಲಿ ನಡೆಯುವ “ಸರಕಾರೀ ಜಾತೀಯತೆ”ಯ ಅಂದಾಜು ಮಾಡುವುದು ಯಾವ ಬ್ರಹ್ಮನಿಗೂ ಸಾಧ್ಯವಿಲ್ಲದ ಮಾತು. ಮೀಸಲಾತಿ, ವಿಶೇಷ ಸವಲತ್ತು, ಸಬಲೀಕರಣಗಳ ಹೆಸರಿನಲ್ಲಿ ಹುಟ್ಟುಹಾಕಿದ ಈ ಯಾವ ವ್ಯವಸ್ಥೆಯನ್ನೂ ನಾವು ಜಾತೀಯತೆ ಎಂದು ಪರಿಗಣಿಸದೇ ಇರುವಾಗ, ಶತಶತಮಾನಗಳ ಹಿಂದೆ ಬ್ರಾಹ್ಮಣ ಮಾಡಿದ್ದಾನೆನ್ನಲಾದ ತಾರತಮ್ಯ ಮಾತ್ರ “ಜಾತೀಯತೆ” ಆಗುವುದು ಹೇಗೆ? ನನಗಂತೂ ಗೊತ್ತಿಲ್ಲದ ರಹಸ್ಯ ಇದು!
ಮತ್ತಷ್ಟು ಓದು »

17
ಆಗಸ್ಟ್

ಬುದ್ಧಿಜೀವಿಗಳ ಬ್ರಾಹ್ಮಣ ಥಿಯರಿಗಳು ಬರುತ್ತಿರುವುದೆಲ್ಲಿಂದ? – ಭಾಗ ೧

– ರೋಹಿತ್ ಚಕ್ರತೀರ್ಥ

ಬ್ರಾಹ್ಮಣ!

ಬ್ರಾಹ್ಮಣಕಳೆದ ಎರಡೂವರೆ ಸಾವಿರ ವರ್ಷಗಳಲ್ಲಿ ಇತ್ತೋ ಇಲ್ಲವೋ ಗೊತ್ತಿಲ್ಲ; ಆದರೆ ಕಳೆದ ಹತ್ತು-ಹದಿನೈದು ವರ್ಷಗಳಿಂದ ಇದೊಂದು ಶಬ್ದ ಬಹಳ ಶಬ್ದ ಮಾಡುತ್ತಿದೆ! ಸೊಳ್ಳೆ ಕಡಿದು ಕಾಲು ಕೆಂಪಾಯಿತು ಎನ್ನುವುದರಿಂದ ಹಿಡಿದು ಗ್ರೀಸ್ ದೇಶದ ದಿವಾಳಿತನದವರೆಗೆ ಈ ಜಗತ್ತಿನಲ್ಲಿ ನಡೆದುಹೋದ ಯಾವ ಸಮಸ್ಯೆಯ ಬಗ್ಗೆ ನಮ್ಮ ಬುದ್ಧಿಜೀವಿಗಳನ್ನು ಕೇಳಿದರೂ, ಅವರ ಉತ್ತರ ಶುರುವಾಗುವುದು ಹೀಗೆ: “ಹಸಿವು! ಈ ದೇಶದ ಶೋಷಿತ ಸಮುದಾಯದ ಹಸಿವನ್ನು ತುಳಿದು ಅವರ ಬೆವರ ಹನಿಗಳ ಮೇಲೆ ಅರಮನೆ ಕಟ್ಟಿಕೊಂಡವರು ವೈದಿಕರು. ಇವರ ಉದರದ ಉರಿ ಇಂದುನಿನ್ನೆಯದಲ್ಲ! ಆಳದಲ್ಲಿ ಅಡಗಿ ಸಿಂಬೆ ಸುತ್ತಿಕೊಂಡು ಮಲಗಿರುವ ಈ ಅಸಹನೆಯ ದಂತಗಳಲ್ಲಿ ಪುರಾತನ ಕಾಲದ ವಿಷವಿದೆ. ನೊಂದವನ, ಹಸಿದವನ, ಕೆಳಗೆ ಬಿದ್ದು ಧೂಳಾದವನ ಗೋಳಿಗೆ ಕರಗದೆ ನುಲಿಯದೆ ಸೆಟೆದು ಬಿದ್ದ ಆರ್ಯಪುತ್ರರ ಕರುಳುಗಳಲ್ಲಿ ಕ್ರೌರ್ಯವಿದೆ…” ಈ ಮಾತುಗಳನ್ನು ಹಾಗೇ ಒಂದು ಸಿನೆಮಾದೃಶ್ಯದಂತೆ ಕಲ್ಪಿಸಿನೋಡಿ. ನಿಮಗೆ ಕಾಣುವುದೇನು? ಒಬ್ಬ ಬಳಲಿ ಬೆಂಡಾದ, ಕಡಿದುಹಾಕಿದ ಬಾಳೆಗಿಡದಂತೆ ನೆಲಕ್ಕೆ ಚೆಲ್ಲಿಬಿದ್ದ “ಶೋಷಿತ” ಮತ್ತು ಅವನನ್ನು ಹಿಗ್ಗಾಮುಗ್ಗಾ ಥಳಿಸುವ; ಒದೆಯುವ; ತುಚ್ಛಮಾತುಗಳಿಂದ ಹೀಯಾಳಿಸುವ ರಾಕ್ಷಸರೂಪೀ ಘೋರ “ಆರ್ಯಪುತ್ರ”! ಆ ದಲಿತ ಜೀವ ಉಳಿಸೆಂದು ದಯನೀಯವಾಗಿ ಬೇಡಿಕೊಳ್ಳುತ್ತಿದ್ದಾನೆ; ಆದರೆ ಅವನ ಜೀವ ತೆಗೆದೇ ಸಿದ್ಧ ಎಂದು ಶಪಥ ಹಾಕಿದಂತೆ ಈ ಬ್ರಾಹ್ಮಣ ಅವನಿಗೆ ಬಾರಿಸುತ್ತಿದ್ದಾನೆ! ಜನಿವಾರದ ಈ ಹಾರುವನಿಗೆ ಹುಲಿಗಿರುವಂತಹ ವಿಕಾರ ಕೋರೆಹಲ್ಲುಗಳು! ಅದರಂಚಿನಿಂದ ಕೀವಿನಂತೆ ಒಸರುತ್ತಿರುವ ಅಸಹನೆಯ ವಿಷ! ಅಬ್ಬಾ!

ಮತ್ತಷ್ಟು ಓದು »