ಮೋದಿಯವರನ್ನು ಪ್ರಶ್ನಿಸುವ ನೈತಿಕತೆ ಸಿದ್ಧರಾಮಯ್ಯನವರಿಗೆ ಇದೆಯೇ?
– ರಾಕೇಶ್ ಶೆಟ್ಟಿ
ನೈತಿಕತೆ ಎಂದರೆ ಕೇಜಿಗೆಷ್ಟು ಎಂದು ಬದುಕುವ ಜನರು ಯಾರನ್ನು ಬೇಕಾದರೂ, ಏನನ್ನೂ ಬೇಕಾದರೂ ನಾಚಿಕೆ ಬಿಟ್ಟು ಪ್ರಶ್ನಿಸಬಲ್ಲರು. ಉದಾಹರಣೆಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಮೊನ್ನೆ ಟ್ವಿಟರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು “ಲೋಕಪಾಲ್’ ಯಾಕ್ರೀ ನೇಮಕ ಮಾಡಿಲ್ಲ ಅಂತ ಪ್ರಶ್ನಿಸುತ್ತಿದ್ದಿದ್ದು! ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಲೋಕಾಯುಕ್ತವನ್ನು ನುಂಗಿ ನೀರು ಕುಡಿದ ಸಿಎಂ ಸಾಹೇಬರು ಪ್ರಧಾನಿಯವರನ್ನು ಆ ಪರಿ ಅಧಿಕಾರವಾಣಿಯಲ್ಲಿ ಪ್ರಶ್ನಿಸುವುದನ್ನು ನೋಡಿದಾಗ, ಇವರಿಗೆ ಪಾಪ ಪ್ರಜ್ಞೆಯೇ ಇಲ್ಲವೇನೋ ಎನ್ನಿಸುತ್ತಿತ್ತು. ಮತ್ತಷ್ಟು ಓದು