ದಲಿತರ ಹೆಗಲ ಮೇಲೆ ಬಂದೂಕಿಟ್ಟಿರುವ ಕೈಗಳು ಯಾರದ್ದು?
– ರಾಕೇಶ್ ಶೆಟ್ಟಿ
‘ಅಧಿಕಾರದಲ್ಲಿರುವ ಕಾಂಗ್ರೆಸ್ಸಿಗಿಂತಲೂ, ಅಧಿಕಾರದಲ್ಲಿರದ ಕಾಂಗ್ರೆಸ್ಸ್ ದೇಶಕ್ಕೆ ಅಪಾಯಕಾರಿ’ ಅಂತ ಗೆಳೆಯನೊಬ್ಬ ಆಗಾಗ್ಗೆ ಹೇಳ್ತಾ ಇರ್ತಾನೆ. 2014ರ ಮೇ 16 ರಂದು ಬಿಜೆಪಿ ಅಧಿಕಾರ ಹಿಡಿದ ದಿನದಿಂದ ಇವತ್ತಿನವರೆಗೂ ಕಾಂಗ್ರೆಸ್ಸ್ ಪಕ್ಷದವರ ಆರ್ಭಟಗಳನ್ನು ನೋಡಿದರೇ, ಗೆಳೆಯನ ಮಾತು ನಿಜವೆನಿಸುತ್ತದೆ. 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಹಿಂದಿನ ಯಾವುದೇ ಚುನಾವಣೆಗಳಂತಿರಲಿಲ್ಲ. ಕಾಂಗ್ರೆಸ್ ಎಂಬ ಪುರಾತನ ಪಕ್ಷ ಮಕಾಡೆ ಮಲಗಿದರೇ, ಉಳಿದ ಅವಕಾಶವಾದಿ ಪ್ರಾದೇಶಿಕ, ಕೌಟುಂಬಿಕ, ಸೆಕ್ಯುಲರ್, ಕಮ್ಯುನಿಸ್ಟ್ ಪಕ್ಷಗಳು ಹೇಳ ಹೆಸರಿಲ್ಲದಂತಾದವು. ಮತ್ತಷ್ಟು ಓದು