ವಿಷಯದ ವಿವರಗಳಿಗೆ ದಾಟಿರಿ

Posts tagged ‘ಪುಸ್ತಕ’

12
ಮಾರ್ಚ್

“ಯೇಗ್ದಾಗೆಲ್ಲಾ ಐತೆ ” (ಪುಸ್ತಕ ಪರಿಚಯ)

– ನಾಗೇಶ ಮೈಸೂರು

4046ಕನ್ನಡದಲ್ಲಿ ಪುಸ್ತಕಗಳು ಒಂದು ಮುದ್ರಣ ಕಾಣುವುದೇ ಕಷ್ಟ. ಹೆಚ್ಚು ಪುಸ್ತಕಗಳು ಅಚ್ಚಿನ ಮನೆಯ ಮುಖವನ್ನೆ ಕಾಣುವುದಿಲ್ಲ. ಅಂತದ್ದರಲ್ಲಿ ಪುಸ್ತಕವೊಂದು ಹತ್ತು ಬಾರಿಗೂ ಮೀರಿ ಮುದ್ರಣ ಭಾಗ್ಯ ಕಂಡಿದೆಯೆಂದರೆ ? ಖಂಡಿತ ಅದರಲ್ಲೇನೊ ವಿಶೇಷ ಇರಲೇಬೇಕು. ಹಾಗೆಂದುಕೊಂಡೇ ಬೆಂಗಳೂರಿಗೆ ಭೇಟಿಯಿತ್ತಾಗ ಕೊಂಡು ತಂದ ಪುಸ್ತಕ – ‘ಯೇಗ್ದಾಗೆಲ್ಲಾ ಐತೆ’. ೨೫ ಸಾವಿರಕ್ಕೂ ಅಧಿಕ ಪ್ರತಿಗಳು ಅಚ್ಚಾಗಿದ್ದೇ ಅಲ್ಲದೆ ಇತರ ನಾಲ್ಕು ಭಾಷೆಗಳಿಗೂ ಅನುವಾದವಾಗಿದ್ದು, ನಾಟಕದ ರೂಪದಲ್ಲು ಜನಮನ ತಲುಪಿದ್ದು – ಇದೆಲ್ಲಾ ನೋಡಿದರೆ ಚಾಪೆಯಡಿ ನುಸುಳುವ ನೀರಂತೆ ಹರಿದು ಜನಪ್ರಿಯವಾಗುವುದು ಈ ಪುಸ್ತಕದ ‘ಯೇಗ್ದಾಗೇ’ ಇರುವಂತೆ ಕಾಣುತ್ತಿದೆ.

ಒಂಬತ್ತಿಂಚಿನ ಪೀಜಾಗು ೩೦೦ ರಿಂದ ೬೦೦ ರೂಪಾಯಿ ಪೀಕುವ ಈ ಕಾಲದಲ್ಲಿ, ೧೪೦ ಪುಟಗಳ ಈ ಪುಸ್ತಕ, ಎಷ್ಟೋ ಕಡೆ   ತೆರುವ  ಕಾಫಿಯ  ಕಾಸಿಗಿಂತಲು   ಅಗ್ಗವಾಗಿ  ೬೦  ರೂಪಾಯಿಗೆ ಸಿಕ್ಕಿತ್ತು ! ರೆಸ್ಟೋರೆಂಟಿನಲ್ಲಿ ಹಿಂದೆಮುಂದೆ ನೋಡದೆ ಸಾವಿರಾರು ಸುರಿವ ನಮಗೆ – ವರ್ಷಕ್ಕೊಂದು  ಸಾರಿಯಾದರು ಕನ್ನಡ ಪುಸ್ತಕ ಕೊಳ್ಳುವುದು ‘ ಯೇಗ್ದಾಗೆ ಬರ್ದಿಲ್ಲ’ ಅಂತ ಕಾಣುತ್ತೆ. ಆದರು ಪ್ಲೀಸ್ – ಓದಲಿ, ಬಿಡಲಿ ಛಾನ್ಸ್ ಸಿಕ್ಕಿದ್ರೆ ಈ ಪುಸ್ತಕ ಮಾತ್ರ ಕೊಂಡುಕೊಂಡು ಬಿಡಿ. ಯಾಕೇಂದ್ರೆ ಈ ಪುಸ್ತಕ ಮಾರಿ ಬಂದ ಆದಾಯವೆಲ್ಲ ನೇರವಾಗಿ ಹೋಗೋದು ಬೆಳಗೆರೆಯ ಶ್ರೀ ಶಾರದಾಮಂದಿರ ವಿದ್ಯಾಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳಿಗೆ. ಓದದೇ ಇದ್ದರೂ ನಿಮ್ಮಿಂದ ಪುಕ್ಕಟೆಯಾಗಿ ಸಮಾಜ ಸೇವೆ ಮಾಡಿಸುತ್ತೆ ಈ ಪುಸ್ತಕ – ಅದೂ ತೀರಾ ಅಗ್ಗವಾಗಿ!

ಈ ಪುಸ್ತಕ ಮೂಲತಃ ಶ್ರೀ ಸಾಮಾನ್ಯನಂತಿದ್ದೂ ಅದ್ಭುತ ಯೋಗಿಯ ಬಾಳು ಬದುಕಿದ ಶ್ರೀ ಮುಕುಂದೂರು ಸ್ವಾಮಿಗಳ ‘ಪವಾಡ’ ವನ್ನು ಕುರಿತದ್ದು. ಪವಾಡವೆಂದರೆ ಇದು ಯಾವುದೊ ‘ಛೂ ಮಂತ್ರಕಾಳಿ’ಯ ತರದ ಬೂಟಾಟಿಕೆಯ ಪುಸ್ತಕವೆಂದು ಮೂಗು ಮುರಿಯಬೇಡಿ ತಾಳಿ… ಈ ಸ್ವಾಮಿಗಳನ್ನು ಹತ್ತಿರದಿಂದ ಕಂಡು ಅಲ್ಲೇನಾದರು ಢೋಂಗಿತನವಿತ್ತೆ ಎಂದು ಸ್ವತಃ ತಾವೇ ಅಳೆದು ನೋಡಲೆತ್ನಿಸಿದ ಶ್ರೀ ಬೆಳಗೆರೆ ಕೃಷ್ಣಶಾಸ್ತ್ರಿಗಳು, ವಿಜ್ಞಾನದ ನಿಲುಕಿಗೆ ಸಿಗದ ನೂರಾರು ಘಟನೆ, ಅನುಭವಗಳಿಂದ ವಿಸ್ಮಿತರಾಗಿ ನೆನಪಿನ ಕೋಶದಿಂದ ಸಿಕ್ಕಷ್ಟನ್ನು ಹೆಕ್ಕಿ ಕೊನೆಗೆ ಈ ಪುಸ್ತಕರೂಪದಲ್ಲಿ ಕಟ್ಟಿಕೊಟ್ಟಿದ್ದಾರೆ. ಒಂದು ವೇಳೆ ಬರೆಯುವ ಉದ್ದೇಶದಿಂದಲೇ ಅಭ್ಯಸಿಸಿ ಬರೆದಿದ್ದರೆ ಈ ಪುಸ್ತಕ ಇನ್ನೂ ಹೇಗಿರುತ್ತಿತ್ತೊ ?!
ಮತ್ತಷ್ಟು ಓದು »

24
ಫೆಬ್ರ

ಇಲ್ಲಿ ಅಸಹಿಷ್ಣುತೆಯಿದೆ!

Dedicated to our purva paksha and uttara- paksha debating tradition. With gratitude to the purva-pakshins (opponents) I have learned from. May we engage in this intellectual yajna, with mutual respect.

-ನವೀನ ಗಂಗೋತ್ರಿ

ದಿ ಬ್ಯಾಟಲ್ ಫಾರ್ ಸಂಸ್ಕೃತ್ರಾಜೀವ್ ಮಲ್ಹೋತ್ರಾ ತಮ್ಮ ಇತ್ತೀಚಿನ ಹೊಸ ಪುಸ್ತಕ, ‘ದಿ ಬ್ಯಾಟಲ್ ಫಾರ್ ಸಂಸ್ಕೃತ್’ ನ ಅರ್ಪಣೆಯಲ್ಲಿ ಈ ರೀತಿ ಬರೆಯುತ್ತಾರೆ. ಈ ನೆಲದಲ್ಲಿ ಒಂದು ಕಾಲಕ್ಕೆ ಉತ್ತುಂಗ ತಲುಪಿದ್ದ ಮತ್ತು ಮಹತ್ತರ ಗೌರವಕ್ಕೆ ಪಾತ್ರವಾಗಿದ್ದ ’ವಾಕ್ಯಾರ್ಥ’ ಪರಂಪರೆ ಅಥವಾ ವಾದ ಪ್ರತಿವಾದದ ಸಂಸ್ಕೃತಿಯ ಕುರಿತು ಆ ಪುಸ್ತಕ ಧ್ವನಿಯೆತ್ತುತ್ತದೆ. ಹಾಗೆ ದನಿಯಾಗಲೇ ಬೇಕಾದ ಕಾಲಖಂಡದಲ್ಲಿ ನಾವಿದ್ದೇವೆಂಬುದು ವಿಷಯ.

ನಮ್ಮ ವೇದಗಳು, ಸ್ಮೃತಿಗಳು, ನಮ್ಮ ಕಥೆ, ಪುರಾಣ, ಕಾವ್ಯ, ಶಾಸ್ತ್ರ, ಕಲಾಪ್ರಕಾರ ಮತ್ತು ಸಮಾಜದ ವ್ಯವಸ್ಥೆಯನ್ನೆಲ್ಲ ನಾವು ಸರಿಯಾಗಿ ಅರ್ಥ ಮಾಡಿಕೊಳ್ಳುವ ಅಗತ್ಯವೇ ಇಲ್ಲ ಅನ್ನುವ ಭರದಲ್ಲಿ ನಾವಿದ್ದರೆ ನಮ್ಮದೆಲ್ಲವನ್ನೂ ತಮ್ಮ ಸಮಾಜ ಮತ್ತು ತಮ್ ತಮ್ಮ ನಾಗರಿಗಕತೆಯ ಅರಿವಿನ ಪರಿಧಿಯಲ್ಲಿ ಅರ್ಥವಿಸಿಕೊಂಡು ವ್ಯಾಖ್ಯಾನ ಬರೆಯುವ ಹುಕಿಯೊಂದು ಪಶ್ಚಿಮ ರಾಷ್ಟ್ರಗಳ ವಿದ್ವಾಂಸರಲ್ಲಿ ಬಹುಕಾಲದಿಂದ ಚಾಲ್ತಿಯಲ್ಲಿದೆ. ಭಾರತದ ಬಗ್ಗೆ ತಿಳಿದುಕೊಳ್ಳುವ ಅಗತ್ಯ ನಮಗೆ ಕಾಣಿಸಿದಾಗೆಲ್ಲ ಈ ಪಶ್ಚಿಮದ ವಿದ್ವಾಂಸರು ಬರೆದದ್ದನ್ನು ಓದದೇ ಇರಲು ಸಾಧ್ಯವೇ ಇಲ್ಲ ಅನ್ನುವಷ್ಟು ಸಂಗತಿಗಳನ್ನೀಗಾಗಲೇ ಅವರು ಬರೆದಾಗಿದೆ. ಜಗತ್ತು ಮುನ್ನೂರರವತ್ತು ಡಿಗ್ರಿ ತೆರೆದುಕೊಳ್ಳುತ್ತಿರುವ ಹೊತ್ತಿನಲ್ಲಿ ನಮ್ಮ ಕುರಿತಾಗಿ ಜಗತ್ತಿನೆಲ್ಲ ಮೂಲೆಗಳಿಂದ ಬರುವ ಚಿಂತನೆಗಳಿಗೆ ನಾವು ಕಿವಿಯಾಗಲೇ ಬೇಕಾಗುತ್ತದೆನ್ನಿ. ಆದರೆ ಅದೇ ಹೊತ್ತಿನಲ್ಲಿ ನಮ್ಮ ಕುರಿತಾದ ವಿಮರ್ಶೆಗಳಿಗೆ ಉತ್ತರವನ್ನು ಕಂಡುಕೊಳ್ಳುವುದೂ ಮತ್ತು ಅವರ ಕುರಿತಾದ ಆಮೂಲಾಗ್ರ ಅಧ್ಯಯನಮಾಡುವುದೂ ನಮಗೆ ಮುಖ್ಯವಾಗಬೇಕಿತ್ತು. ದುರದೃಷ್ಟವಶಾತ್ ನಾವು ಆ ಹಾದಿಯಲ್ಲಿ ತುಂಬಾ ತುಂಬಾ ಹಿಂದಿದ್ದೇವೆ. ಭಾರತೀಯವಲ್ಲದ ಆಬ್ರಹಾಮಿಕ್ ರಿಲಿಜನ್ನುಗಳ ಒಳಸುಳಿ ಮತ್ತು ಹುಳುಕುಗಳ ಬಗ್ಗೆ ತಾತ್ತ್ವಿಕವಾದ ಮರುಪ್ರಶ್ನೆಯನ್ನು ಹುಟ್ಟುಹಾಕುವುದಂತಿರಲಿ, ನಮ್ಮ ಕುರಿತಾಗಿಯೂ ಸರಿಯಾದ ಅವಗಾಹನೆಯೇ ಇಲ್ಲದಂಥಾ ಸ್ಥಿತಿಯಲ್ಲಿ  ನಾವಿದ್ದೇವೆ.

’ದಿ ಬ್ಯಾಟಲ್ ಫಾರ್ ಸಂಸ್ಕೃತ್’- ಪುಸ್ತಕವು ಬರಿಯ ಸಂಸ್ಕೃತ ಭಾಷೆಯೊಂದರ ಬಗ್ಗೆ ಮಾತ್ರವೇ ಕಾಳಜಿಯ ದನಿಯೆತ್ತದೆ, ಸಮಗ್ರವಾಗಿ ನಮ್ಮ ಚಿಂತನ ಪರಂಪರೆಯ ಸಧ್ಯದ ಅವಸ್ಥೆಯನ್ನೂ ಚರ್ಚಿಸುತ್ತದೆ. ಅದನ್ನು ಕಳಕೊಂಡ ನಾವು ಇವತ್ತಿಗೆದುರಿಸುತ್ತಿರುವ ಬೌದ್ಧಿಕ ಅಪಾಯಗಳನ್ನು ವಿಶ್ಲೇಷಿಸುತ್ತದೆ. ನಮ್ಮ ಸುತ್ತಲೂ ಸುದ್ದಿ ಮಾಡುವ ಕನ್ನಡದ ಬೌದ್ಧಿಕ ಲೋಕವನ್ನು ಪ್ರಸ್ತುತ ಪುಸ್ತಕದ ಹಿನ್ನೆಲೆಯಲ್ಲಿ ನೋಡೋಣ.

ಮತ್ತಷ್ಟು ಓದು »

16
ಆಗಸ್ಟ್

ವಿಜಯವಾಣಿಯಲ್ಲಿ ’ಬುದ್ಧಿಜೀವಿಗಳ ಮೂಢನಂಬಿಕೆಗಳು’ ಪುಸ್ತಕ ಪರಿಚಯ

ಬುದ್ಧಿಜೀವಿಗಳ ಮೂಢನಂಬಿಕೆಗಳು - ವಿಜಯವಾಣಿ

22
ಜೂನ್

ನಾಡು-ನುಡಿ ಮರುಚಿಂತನೆ : ಅಕ್ಷರಕ್ಕೂ,ಶಿಕ್ಷಣಕ್ಕೂ,ವಿದ್ಯೆಗೂ,ಜ್ಞಾನಕ್ಕೂ ಏನು ಸಂಬಂಧ?

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಜ್ಞಾನಸಾಧಾರಣವಾಗಿ ಪ್ರಾಚೀನ ಭಾರತೀಯ ಶಿಕ್ಷಣ ಪದ್ಧತಿಯ ಕುರಿತು ಒಂದು ಆರೋಪವನ್ನು ಪದೇ ಪದೇ ಮಾಡಲಾಗುತ್ತದೆ: ಅದೆಂದರೆ  ಬ್ರಾಹ್ಮಣರು ಶೂದ್ರರನ್ನು ಹಾಗೂ ಅಸ್ಪೃಶ್ಯರನ್ನು ಅಕ್ಷರ ಜ್ಞಾನದಿಂದ ವಂಚಿಸಿದ್ದಾರೆ. ಆಕಾರಣದಿಂದಾಗಿ ಅವರಿಗೆ ಜ್ಞಾನವನ್ನೂ, ವಿದ್ಯೆಯನ್ನೂ ನಿರಾಕರಿಸಿದ್ದರು ಅಂತ. ನಮ್ಮ ಜಾತಿ ವ್ಯವಸ್ಥೆಯಲ್ಲಿ ಶೋಷಣೆಯ ಒಂದು ಲಕ್ಷಣ ಎಂಬಂತೆ ಕೆಲವು ಹಿತಾಸಕ್ತಿ ಪೀಡಿತ ಗುಂಪುಗಳು ಈ ಸಂಗತಿಯನ್ನು ತಪ್ಪದೇ ಹೇಳುತ್ತಿರುತ್ತವೆ.

ಹೀಗೆ ಹೇಳುವವರು ಇಂದಿನ ಶಿಕ್ಷಣ ವ್ಯವಸ್ಥೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿರುತ್ತಾರೆ. ಆಧುನಿಕ ಶಿಕ್ಷಣವು ಅಕ್ಷರಾಭ್ಯಾಸಕ್ಕೂ ಶಿಕ್ಷಣಕ್ಕೂ ಒಂದು ಅವಿನಾಭಾವಿಯಾದ ಸಂಬಂಧ ಕಲ್ಪಿಸುತ್ತದೆ. ಆ ಕಾರಣದಿಂದಲೇ ಸಂಪೂರ್ಣ ಸಾಕ್ಷರತೆಯ ಕಾರ್ಯಕ್ರಮವನ್ನು ನಮ್ಮ ಸರ್ಕಾರವು ಹಮ್ಮಿಕೊಂಡಿದೆ ಹಾಗೂ ವಿಶ್ವಸಂಸ್ಥೆ ಕೂಡಾ ಅಕ್ಷರವನ್ನು ಅಭಿವೃದ್ಧಿಯ ಮಾನದಂಡವನ್ನಾಗಿ ಸ್ವೀಕರಿಸಿದೆ. ವಯಸ್ಕರಿಗೆ ಕೂಡಾ ಅವರು ಸಾಯುವುದರ ಒಳಗೆ ಒಮ್ಮೆಯಾದರೂ ಅಕ್ಷರಾಭ್ಯಾಸವನ್ನು ಮಾಡಿಸುವುದು ನಿರ್ಣಾಯಕ ಎಂದು ಭಾವಿಸಲಾಗಿದೆ. ಈ ರೀತಿಯ ಶಿಕ್ಷಣ ಪದ್ಧತಿಯಲ್ಲಿ ಜ್ಞಾನವನ್ನು ಪುಸ್ತಕವನ್ನು ಓದುವ ಮೂಲಕವೇ ಪಡೆಯುವುದು ಅತ್ಯವಶ್ಯ. ಇದು ಪಾಶ್ಚಾತ್ಯ ಸಂಸ್ಕೃತಿಯ ಕ್ರಮ. ಅಲ್ಲಿ ಸತ್ಯದೇವನ ವಾಣಿಯು ಅಂತಿಮವಾದ ಸತ್ಯವಾಗಿದ್ದು ಅದು ಬರೆಹದ ಮೂಲಕವೇ ಲಭ್ಯವಿರುವುದರಿಂದ ಬರೆಹವನ್ನು ಕಲಿಯುವುದು ನಿರ್ಣಾಯಕ.

ಮತ್ತಷ್ಟು ಓದು »