ವಿಷಯದ ವಿವರಗಳಿಗೆ ದಾಟಿರಿ

Posts tagged ‘ಪ್ರಗತಿಪರರು’

22
ಫೆಬ್ರ

ಭಾರತದ ಎಡಪಂಥೀಯರು ದೇಶವಿರೋಧದತ್ತೇಕೆ ಸಾಗುತ್ತಾರೆ?

– ವಿನಾಯಕ್ ಹಂಪಿಹೊಳಿ

ಕಮ್ಯುನಿಸ್ಟ್ಭಾರತದಲ್ಲಿ ಇಂದು ಎಡಪಂಥವು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಸರ್ಕಾರದಿಂದ ಎಲ್ಲ ಸವಲತ್ತುಗಳನ್ನು ಪಡೆದರೂ, ಶಿಕ್ಷಣ ಕ್ಷೇತ್ರದ ಎಲ್ಲ ಆಯಕಟ್ಟಿನ ಜಾಗಗಳನ್ನು ಆವರಿಸಿದರೂ, ಸೋಶಿಯಲ್ ಮೀಡಿಯಾ ಹೊರತುಪಡಿಸಿ ಬಹುತೇಕ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಎಡಪಂಥೀಯ ಚಿಂತನೆಯನ್ನೇ ಪ್ರಸಾರ ಮಾಡಿದ್ದರೂ, ಸರ್ಕಾರೀ ಪ್ರಶಸ್ತಿಗಳಲ್ಲಿ ಬಹುತೇಕ ಪಾಲನ್ನು ಎಡಪಂಥೀಯರಿಗೆ ಮೀಸಲಿಟ್ಟಿದ್ದರೂ, ಹಲವಾರು ಜನಪರ ಸರ್ಕಾರೀ ಯೋಜನೆಗಳು ಎಡಪಂಥೀಯ ಚಿಂತನೆಯನ್ನೇ ಅವಲಂಬಿಸಿಕೊಂಡಿದ್ದರೂ ಅದೇಕೋ ಬಹುತೇಕ ಭಾರತೀಯರು ಮಾತ್ರ ಎಡಪಂಥವನ್ನು ಒಪ್ಪಿಕೊಂಡೇ ಇಲ್ಲ.

ಎಡಪಂಥ ಶಬ್ದವು ಫ್ರೆಂಚ್ ಕ್ರಾಂತಿಯ ಅವಧಿಯಲ್ಲಿ ಹುಟ್ಟಿರುವ ಶಬ್ದವಾದರೂ ಕಾಲಕ್ರಮದಲ್ಲಿ, ಸೋಶಿಯಾಲಿಸಂ, ಕಮ್ಯುನಿಸಂ ಮುಂತಾದ ಕಲ್ಪನೆಗಳನ್ನು ಒಳಗೊಳ್ಳುತ್ತ ಹೋಯಿತು. ಸಮಾಜದಿಂದ ಹೆಚ್ಚು ಪ್ರಯೋಜನ ಪಡೆಯಲಾಗದವರ ಕುರಿತು ವಿಶೇಷ ಕಾಳಜಿಯನ್ನು ತೋರಿಸುವದು ಎಡಪಂಥದ ತತ್ತ್ವ. ಬಹುಸಂಖ್ಯಾತ ರಿಲಿಜನ್ನಿನವರಿಂದ ತುಳಿತಕ್ಕೊಳಗಾಗುವ ಅಲ್ಪಸಂಖ್ಯಾತ ರಿಲಿಜನ್ನಿನ ಜನರ ಕುರಿತು ಕಾಳಜಿ ತೋರಿಸುತ್ತದೆ. ಶ್ರೀಮಂತರಿಂದ ಅನ್ಯಾಯಕ್ಕೊಳಗಾದ ಬಡವರ ಪರವಾಗಿ ನಿಲ್ಲುತ್ತದೆ. ಒಟ್ಟಿನಲ್ಲಿ ಸಮಾಜದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಎಂಬ ಆದರ್ಶ ಸ್ಥಾಪಿಸುವದೇ ಇದರ ಉದ್ದೇಶ.

ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗೆ ಕಾರಣವಾಗುವ ಪ್ರತಿಯೊಂದನ್ನೂ ಎಡಪಂಥವು ವಿರೋಧಿಸುತ್ತದೆ. ಬಹುಸಂಖ್ಯಾತರಿರುವ ರಿಲಿಜನ್ನಿನ ಜನರಿಂದ ಅಲ್ಪಸಂಖ್ಯಾತರ ರಿಲಿಜನ್ನಿನ ಜನರಿಗೆ ಸಾಮಾಜಿಕ ಅನ್ಯಾಯಗಳಾಗುವದರಿಂದ ರಿಲಿಜನ್ನುಗಳನ್ನು ವಿರೋಧಿಸುತ್ತದೆ. ಖಾಸಗೀ ಉದ್ಯಮಗಳಿಂದಾಗಿ ಆರ್ಥಿಕ ಸಂಪತ್ತುಗಳು ಉದ್ದಿಮೆದಾದರಲ್ಲಿಯೇ ಕ್ರೋಢೀಕರಣಗೊಳ್ಳುವದರಿಂದ ಖಾಸಗೀಕರಣವನ್ನು ವಿರೋಧಿಸುತ್ತದೆ. ರೈತರು ಬೆಳೆಯುವ ಬೆಳೆಯನ್ನು ಸಂಗ್ರಹಿಸಿಟ್ಟುಕೊಳ್ಳುವ ಜಮೀನುದಾರರನ್ನು ವಿರೋಧಿಸುತ್ತದೆ.

ಮತ್ತಷ್ಟು ಓದು »

27
ಜುಲೈ

“ವಿಧ್ವಂಸಕತೆ”ಯೆಂಬುದು ಪ್ರಗತಿಪರರ ಹುಟ್ಟುಗುಣವೇ?

– ರಾಕೇಶ್ ಶೆಟ್ಟಿ

ವಿಧ್ವಂಸಕತೆಎಲ್ಲಾ ಚುನಾವಣಾ ಸಮೀಕ್ಷೆಗಳನ್ನು ತಲೆಕೆಳಗು ಮಾಡಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿಯೇ ಬಹುಮತ ಪಡೆದಾಗ,ದಶಕಗಳಿಂದ ನಡೆಸಿಕೊಂಡು ಬರಲಾಗಿದ್ದ “ಮೋದಿ ವಿರೋಧಿ ಕ್ಯಾಂಪೇನ್”ನ ಶವ ಪೆಟ್ಟಿಗೆಗೆ ಅಂತಿಮ ಮೊಳೆ ಬಿದ್ದಿತ್ತು.ಆದರೆ ಅತೃಪ್ತ ಆತ್ಮಗಳೇನು ಸುಮ್ಮನಿರುವ ಪೈಕಿಯೇ? ಅವುಗಳು ಶವಪೆಟ್ಟಿಗೆಯೊಳಗಿಂದಲೂ ಸದ್ದು ಮಾಡುತಿದ್ದವು.ಬಿಜೆಪಿಯ ವೋಟ್ ಶೇರ್ ಇರುವುದು ೩೧% ಮಾತ್ರ,ಇನ್ನು ೬೯% ಎಲ್ಲಿ ಅಂತ.ಪ್ರಗತಿಪರರ ಈ ಲೆಕ್ಕಾಚಾರವನ್ನು,ಕಷ್ಟಪಟ್ಟು ೩೫ ಅಂಕ ಪಡೆದು ಪಾಸ್ ಆದ ವಿದ್ಯಾರ್ಥಿಯೊಬ್ಬನ ಮುಂದೆ ನಿಂತು, “ನೋಡಪ್ಪಾ ನೀನು ತೆಗೆದಿರುವುದು ೩೫ ಮಾತ್ರ,ಇನ್ನು ೬೫ ತೆಗೆದಿಲ್ಲವಾದ್ದರಿಂದ ನೀನು ಪಾಸಾದರೂ,ಫೇಲ್ ಆದಂತೆ ಲೆಕ್ಕ” ಹೇಳಿದರೆ ಕೆನ್ನೆಯೂದುವುದು ಖಚಿತ.ಮೋದಿ ಸರ್ಕಾರದ ವಿರುದ್ಧ ಹೀಗೆ ಶುರುವಾದ ನರಳಾಟ ಮುಂದುವರೆಯುತ್ತಲೇ ಇದೆ.

Of course ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನ ಧ್ವನಿಗಳಿಗೆ ಮನ್ನಣೇ ನೀಡಲೇಬೇಕು.ಕೇಂದ್ರ ಸರ್ಕಾರವನ್ನು ವಿರೋಧಿಸಲೇ ಬಾರದೂ ಅಂತಲೂ ಏನಿಲ್ಲ.ಟೀಕೆ-ಟಿಪ್ಪಣಿಗಳಿರಲೇಬೇಕು.ಆದರೆ ಅವು ಸಕಾರಾತ್ಮಕವಾಗಿದ್ದರೆ ಸಮಾಜದ ಆರೋಗ್ಯಕ್ಕೂ ಒಳ್ಳೆಯದು.ಆದರೆ ನಮ್ಮ ಪ್ರಗತಿಪರರು ತಮ್ಮ “ಪುರಾತನ ಪದ್ಧತಿ”ಯಾದ ನಕಾರಾತ್ಮಕ ಟೀಕಾ ಶೈಲಿಯನ್ನೇ ಮುಂದುವರೆಸಿದ್ದಾರೆ.ಪುರಾತನ ಪದ್ಧತಿ ಎನ್ನಲು ಕಾರಣವಿದೆ.

ಮದರಾಸಿನ ಭಾಷಣವೊಂದರಲ್ಲಿ ಸ್ವಾಮಿ ವಿವೇಕಾನಂದರು,ಅಂದಿನ ಕಾಲದ ಸಮಾಜ ಸುಧಾರಕರ ಕುರಿತು ಅವರದು ಧ್ವಂಸ ಮಾರ್ಗ.ನನ್ನದು ನಿರ್ಮಾಣ ಮಾರ್ಗ ಎಂದಿದ್ದರು.

ಮತ್ತಷ್ಟು ಓದು »

27
ಜೂನ್

ನಕಾರಾತ್ಮಕ ಸಾಮಾಜಿಕ ವಿಮರ್ಶಾ ಸಮೂಹ

– ಡಾ.ಸಂಗಮೇಶ ಸವದತ್ತಿಮಠ

ನಕಾರಾತ್ಮಕಬೆಂಗಳೂರಿನಲ್ಲಿ ಸುಪ್ರೀಮ್‍ಕೋರ್ಟ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎಂ.ಎನ್.ವೆಂಕಟಾಚಲಯ್ಯ ಅವರು,ದಿನಾಂಕ 29-7-2012 ರಂದು ಮಾಜಿ ಕೇಂದ್ರ ಸಚಿವ ಹಾಗೂ ಪತ್ರಕರ್ತ ಅರುಣ ಶೌರಿ ಅವರ ನಾಲ್ಕು ಪುಸ್ತಕಗಳ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತ ಈಚೆಗೆ ನಮ್ಮ ದೇಶದಲ್ಲಿ `ನಕಾರಾತ್ಮಕ ಸಾಮಾಜಿಕ ವಿಮರ್ಶಾ ಸಮೂಹ’ದ (Negetive Social Critical mass) ಮಟ್ಟಕ್ಕೆ ನಾವು ಬಂದು ನಿಂತಿದ್ದೇವೆ ಎಂದು ಹೇಳಿದ್ದು ನಮ್ಮನ್ನು  ಯೋಚಿಸುವಂತೆ ಮಾಡಿದೆ. ಅವರು ಹೇಳಿದ ’Social Critical mass’, ಎಂಬುದು ಎಲ್ಲ ವಲಯಗಳಲ್ಲಿ ತನ್ನ ಕಬಂಧ ಬಾಹುಗಳನ್ನು ಹಬ್ಬಿಸುತ್ತಲಿದೆ. ಸಾಮಾಜಿಕ ಸಮೂಹ ಎಂಬುದು ಒಂದು ಜಾತಿ ಅಥವಾ ಒಂದು ಧರ್ಮ ಇಲ್ಲವೆ ರಾಜಕೀಯ ಪಕ್ಷದ ಒಬ್ಬ ಮುಖಂಡನ ಸುತ್ತ ಗಿರಕಿಹೊಡೆಯುತ್ತ ಇರುತ್ತದೆ. ಮುಖಂಡನು ತನ್ನ ಸುತ್ತಮುತ್ತಣದವರ ಸ್ವಾರ್ಥ ಲಾಲಸೆಗಳನ್ನು ಪೂರೈಸಲೋಸುಗ ಒಂದು ಅಥವಾ ಹಲವು ಸಮಾನ ಮನಸ್ಕ ಜನತಾಗುಂಪುಗಳನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿರುತ್ತಾನೆ. ಅಂಥ ಗುಂಪಿನ ಜನ ಹತ್ತಾರು ಸಾವಿರವಿದ್ದರೂ ಆಯಿತು, ಆತನು ಮೊದಲು ಕೈಹಾಕುವುದು ಆಡಳಿತದಲ್ಲಿದ್ದ ಸರ್ಕಾರದ ಕುತ್ತಿಗೆಗೆ. ನನಗೆ ಇಷ್ಟು ಜನಬೆಂಬಲವಿದೆ, ನಮ್ಮ ಸಮುದಾಯವನ್ನು ಸರ್ಕಾರ ನಿರ್ಲಕ್ಷಿಸಿದೆ. ಅದಕ್ಕೆ ಇಂತಿಂಥ ಸೌಲಭ್ಯಗಳು ನಮ್ಮವರಿಗೆ ಬೇಕು ಎಂದು ಒಂದು ದೊಡ್ಡ ಪಟ್ಟಿಯನ್ನು ಮುಂದಿಡುತ್ತಾನೆ. ಇಂಥ ಮುಖಂಡರು ಭಸ್ಮಾಸುರರಿದ್ದಂತೆ. ಒಂದು ಪಕ್ಷವು ಆಡಳಿತದಲ್ಲಿ ಇದ್ದಾಗ ಆ ಪಕ್ಷದಿಂದ ಏನು ಬೇಕೋ ಅದನ್ನೆಲ್ಲ ವಾಮಮಾರ್ಗದಿಂದಾದರೂ ಸರಿಯೆ, ಇನ್ನಿತರರಿಗೆ ಕಷ್ಟವಾದರೂ ಸರಿಯೆ ಬಾಚಿಕೊಳ್ಳುವುದು. ನಂತರ  ಮತ್ತೊಂದು ಪಕ್ಷವು ಆಡಳಿತಕ್ಕೆ ಬಂದರೆ ಅಲ್ಲಿಯೂ ಅವನು ಅದೇ ಬಗೆಯ ತಂತ್ರಗಾರಿಕೆಯನ್ನು ಉಪಯೋಗಿಸುತ್ತಾನೆ. ಅವನಿಗೆ ಯಾರು ಅಧಿಕಾರದಲ್ಲಿ ಇದ್ದರೇನು? ತನ್ನ ಮತ್ತು ತನ್ನವರ ಕಾರ್ಯ ಸುಲಭವಾಗಿ ಸಾಗುವಂತಿದ್ದರೆ ಆಯಿತು. ಇದೀಗ ಮಠಾಧೀಶರೂ ಅದೇ ಪ್ರವೃತ್ತಿಯನ್ನು ಬೆಳೆಸಿಕೊಳ್ಳುತ್ತಿದ್ದಾರೆ. ಅದಕ್ಕಾಗೆ ಜಾತಿಗೊಂದು ಮಠಗಳು ಹುಟ್ಟಿಕೊಳ್ಳುತ್ತಿವೆ. ಮಠಾಧೀಶರಿಗೆ ರಾಜಕಾರಣಿಗಳಿಗೆ ಈಗ ವ್ಯತ್ಯಾಸ ಕಡಿಮೆಯಾಗುತ್ತಿದೆ. ತಮ್ಮ ತಮ್ಮ ಜಾತಿ ಗುಂಪುಗಳ ಅನುಕೂಲಸಿಂಧು ಚಟುವಟಿಕೆಗಳೇ ತಮತಮಗೆ ಮುಖ್ಯ ಎಂಬುದನ್ನು ಬಹಿರಂಗವಾಗಿಯೇ ಅವರು ತೋರ್ಪಡಿಸಿಕೊಳ್ಳುತ್ತಿದ್ದಾರೆ. ಇದು ಭಾರತವನ್ನು ಧರ್ಮ-ಜಾತಿ-ಪಕ್ಷ ಆಧಾರಿತ ಗುಂಪುಗಳಲ್ಲಿ ಛಿದ್ರಗೊಳಿಸುವ ಬಹು ಕೆಟ್ಟ ಬೆಳವಣಿಗೆ.
ಮತ್ತಷ್ಟು ಓದು »

14
ಮೇ

ನಾಡು-ನುಡಿ : ಮರುಚಿಂತನೆ – ಮೂಲಭೂತವಾದದ ಒಂದು ಸೆಕ್ಯುಲರ್ ಅವತಾರ

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಮೂಲಭೂತವಾದಿ ಸೆಕ್ಯುಲರಿಸಂಪ್ರಗತಿಪರರು ಕ್ರೈಸ್ತ ಹಾಗೂ ಮುಸ್ಲಿಂ ಸಮಾಜಗಳನ್ನು ಟೀಕಿಸುವ ಕ್ರಮಕ್ಕೂ ಹಿಂದೂ ಸಮಾಜವನ್ನು ಟೀಕಿಸುವ ಕ್ರಮಕ್ಕೂ ಒಂದು ಮೂಲಭೂತ ವ್ಯತ್ಯಾಸವಿದೆ. ಆ ಸಮಾಜಗಳಲ್ಲಿ ಯಾವುದಾದರೂ ತಪ್ಪು ಆಚರಣೆಯ ಕುರಿತು ಚರ್ಚೆ ಎದ್ದರೆ ಅವನ್ನು ಅವರ ಪವಿತ್ರಗ್ರಂಥಗಳು ಸಮರ್ಥಿಸಲು ಸಾಧ್ಯವೇ ಇಲ್ಲ ಎಂಬುದು ಇವರ ಧೃಡ ನಂಬಿಕೆ. ಅವು ಏನಿದ್ದರೂ ಇಂದಿನ ಅನುಯಾಯಿಗಳ ಅಜ್ಞಾನಕ್ಕೆ ಸಂಬಂಧಿಸಿದ್ದು ಅಷ್ಟೆ. ಉದಾಹರಣೆಗೆ, ಇಂದು ಭಯೋತ್ಪಾದನೆಯ ಕುರಿತು ನಡೆಯುವ ಚರ್ಚೆಗಳನ್ನು ಗಮನಿಸಿ. ಪ್ರತಿಯೊಬ್ಬರೂ ಕೂಡ ಅವು ಇಸ್ಲಾಂನ ಪವಿತ್ರಗ್ರಂಥಗಳಿಗೆ ವಿರುದ್ಧವಾಗಿವೆ ಎಂಬ ತರ್ಕವನ್ನಿಟ್ಟೇ ಅವುಗಳನ್ನು ಖಂಡಿಸುತ್ತಾರೆ. ಅಂದರೆ ಅವರ ಕೃತ್ಯಗಳನ್ನು ಇಸ್ಲಾಂನ ನಿರ್ದೇಶನಗಳಲ್ಲ ಎಂಬುದಾಗಿ ನೋಡುವುದು ಅತ್ಯಂತ ನಿರ್ಣಾಯಕವಾಗಿದೆ. ಜಿಹಾದಿಗೆ ಸಂಬಂಧಿಸಿದಂತೆ, ಬುರ್ಖಾಕ್ಕೆ ಸಂಬಂಧಿಸಿದಂತೆ, ತಲಾಖ್‍ಗೆ ಸಂಬಂಧಿಸಿದಂತೆ, ಹೀಗೆ ಇದುವರೆಗೆ ಎಷ್ಟು ಚರ್ಚೆಗಳು ಎದ್ದಿವೆಯೋ ಅವುಗಳಲ್ಲೆಲ್ಲ ಎಲ್ಲೂ ಕೂಡ ಪವಿತ್ರ ಗ್ರಂಥದ ನಿಂದನೆ ಆಗದಂತೇ ಎಚ್ಚರವಹಿಸಿ ವಾದಗಳನ್ನು ಬೆಳೆಸಲಾಗುತ್ತದೆ. ಅಂದರೆ ಇಸ್ಲಾಂ ರಿಲಿಜನ್ನು ಮೂಲತಃ ಒಳ್ಳೆಯದು, ಇಂದಿನ ದುಷ್ಪರಿಣಾಮಕ್ಕೆ ಅದು ಹೊಣೆಯಲ್ಲ ಎಂಬುದು ಇವರ ವಾದ.

ಇದರಲ್ಲೇನು ಸ್ವಾರಸ್ಯ? ಎಂದು ನೀವು ಹುಬ್ಬೇರಿಸಬಹುದು. ಪ್ರತಿಯೊಂದು ಮತಾನುಯಾಯಿಗಳಿಗೂ ತಮ್ಮ ಮತದ ಕುರಿತು ನಂಬಿಕೆ ಇರುವುದು ಸ್ವಾಭಾವಿಕ. ಆದರೆ ನಾನು ಹೇಳುತ್ತಿರುವುದು ಶ್ರದ್ಧಾವಂತ ಮುಸ್ಲಿಮರ ಕಥೆಯಲ್ಲ, ಬದಲಾಗಿ ತಾವು ಪ್ರಗತಿಪರರೆಂದು, ಸೆಕ್ಯುಲರ್‍ವಾದಿಗಳು ಅಥವಾ ಬುದ್ಧಿಜೀವಿಗಳೆಂದು ಕರೆದುಕೊಂಡ ಮುಸ್ಲಿಮರ ಕಥೆ. ಇದು ಮುಸ್ಲಿಂ ಬುದ್ಧಿಜೀವಿಗಳದೊಂದೇ ಕಥೆಯಲ್ಲ, ಸೆಕ್ಯುಲರ್ ಎಂದು ಕರೆದುಕೊಂಡ ಹಿಂದೂ ಬುದ್ಧಿಜೀವಿಗಳ ಕಥೆ ಕೂಡಾ ಹೌದು.  ಅಂದರೆ ಯಾವ ರಿಲಿಜನ್ನುಗಳಿಗೂ ಸೇರದೇ ತಟಸ್ಥವಾಗಿ ಚಿಂತನೆ ನಡೆಸಬೇಕೆಂದು ಪ್ರತಿಪಾದಿಸುವವರು. ಇದುವರೆಗೆ ಮುಸ್ಲಿಮರ ಪವಿತ್ರಗ್ರಂಥವೇ ಸರಿಯಿಲ್ಲ ಎಂದು ಯಾವ ಮುಸ್ಲಿಂ ಅಥವಾ ಹಿಂದೂ ಸೆಕ್ಯುಲರ್ ಬುದ್ಧಿಜೀವಿ ಕೂಡ ಹೇಳಿದ್ದು ನಾನು ಕೇಳಿಲ್ಲ. ಹಾಗಂತ ಅವರು ಹಾಗೆ ಹೇಳಬೇಕಿತ್ತು ಅಂತಾಗಲೀ, ಯಾರದಾದರೂ ಪವಿತ್ರಗ್ರಂಥವನ್ನು ನಿಂದಿಸುವುದು ಸರಿಯೆಂದಾಗಲೀ ನಾನಿಲ್ಲಿ ಸೂಚಿಸುತ್ತಿಲ್ಲ ಎಂಬುದನ್ನು ಸ್ಪಷ್ಟೀಕರಿಸುತ್ತೇನೆ. ನಾನು ನಿಮ್ಮ ಗಮನ ಸೆಳೆಯಲೆತ್ನಿಸುವುದು ನಮ್ಮ ಬುದ್ಧಿಜೀವಿಗಳ ಈ ಧೋರಣೆಯ ಕುರಿತು. ಅವರು ಅಪ್ರಾಮಾಣಿಕರು ಅಂತ ನನ್ನ ಹೇಳಿಕೆಯಲ್ಲ. ಅವರಿಗೆ ನಿಜವಾಗಿಯೂ ಹಾಗೇ ಅನಿಸುತ್ತದೆ ಅಂತಲೇ ಇಟ್ಟುಕೊಳ್ಳೋಣ.
ಮತ್ತಷ್ಟು ಓದು »

28
ಏಪ್ರಿಲ್

ಮಾನ ಕಳೆದುಕೊಂಡ ಸನ್ಮಾನಗಳು

– ರೋಹಿತ್ ಚಕ್ರತೀರ್ಥ

ಪ್ರಶಸ್ತಿನಾನು ಮಾಡಿದ ಕೆಲಸ ಸರಿಯಿದೆ ಎಂದು ಒಪ್ಪಿದರೆ ಸಾಕು. ಅದೇ ನನಗೆ ಬಹುದೊಡ್ಡ ಪ್ರಶಸ್ತಿ. ಬೇರೆ ಬಹುಮಾನ ಏಕೆ? – ಎಂದ ಗ್ರೆಗೊರಿ ಪೆರೆಲ್ಮನ್. ಅವನ ಕೆಲಸದ ಔನ್ನತ್ಯವನ್ನು ಮೆಚ್ಚಿ ಒಂದು ಮಿಲಿಯ ಡಾಲರ್‍ಗಳನ್ನು (ಅಂದರೆ, ಆರು ಕೋಟಿ ರುಪಾಯಿ!) ಹಿಡಿದು ನಿಂತಿದ್ದವರಿಗೆ ಬಾಗಿಲು ಕೂಡ ತೆರೆಯಲಿಲ್ಲ ಆ ಮಹರಾಯ! ನಿಮ್ಮನ್ನು ಒಳಬಿಟ್ಟೆನೆಂದರೆ, ಹಿಂದೆಯೇ ಪತ್ರಕರ್ತರು ತೂರಿಕೊಂಡು ಒಳಸೇರುತ್ತಾರೆ. ನೂರೆಂಟು ಪ್ರಶ್ನೆ ಕೇಳಿ ತಲೆ ತಿನ್ನುತ್ತಾರೆ. ಇನ್ನು ಪತ್ರಿಕೆಗಳಲ್ಲಿ, ಟಿವಿಯಲ್ಲಿ ನನ್ನ ಮುಖ ಕಂಡರೆ ಸಾಕು, ಬೀದಿಯಲ್ಲಿ ಆರಾಮಾಗಿ ನಡೆದುಹೋಗಲಿಕ್ಕೂ ತೊಂದರೆ. ಪ್ರಶಸ್ತಿ ಬಂತು ಅಂತ ಕೈಗೊಂದು-ಕಾಲಿಗೊಂದು ಗೆಳೆಯರು, ನೆಂಟರು ಹುಟ್ಟಿಕೊಳ್ಳುತ್ತಾರೆ. ಇದೆಲ್ಲ ಬೇಕಾ? ಪ್ರಶಸ್ತಿಯೂ ಬೇಡ, ಅದು ತರುವ ನೂರೆಂಟು ತಾಪತ್ರಯಗಳೂ ಬೇಡ ಎಂದು ಎಲ್ಲರನ್ನೂ ಗೇಟ್‍ಪಾಸ್ ಮಾಡಿದ್ದ ಜಗತ್ತಿನ ಶ್ರೇಷ್ಠ ಗಣಿತಜ್ಞರಲ್ಲಿ ಒಬ್ಬನಾದ ಪೆರೆಲ್ಮನ್.

“ದುಡ್ಡೇ ಎಲ್ಲ ತೊಂದರೆಗಳಿಗೆ ಬೇರು” ಎಂದು ಸ್ವಾಮೀಜಿಗಳು ಹೇಳಿದಾಗ ಭಕ್ತರೆಲ್ಲ ಒಂದೇ ಧ್ವನಿಯಲ್ಲಿ “ನಮಗೆ ಆ ಬೇರು ಬೇಕು!” ಎಂದು ಕೂಗಿದ್ದರಂತೆ. ಬಹುಶಃ ಈಗ, “ಪ್ರಶಸ್ತಿಯೇ ಎಲ್ಲ ತಾಪತ್ರಯಗಳಿಗೂ ಮೂಲ” ಎಂದು ಹೇಳಿದರೆ, ಸರಕಾರ ಕೊಟ್ಟ ಗೆಡ್ಡೆಗೆಣಸುಗಳಲ್ಲೇ ಉಸಿರು ಹಿಡಿದುಕೊಂಡಿರುವ ಬುದ್ಧಿಜೀವಿಗಳು ನಮಗೂ ಆ ಕಂದಮೂಲ ಬೇಕು ಎಂದು ಪಟ್ಟುಹಿಡಿದಾರು. ಅರ್ಹರನ್ನು ಅನ್ಯರು ಗುರುತಿಸಿ ಪ್ರಶಸ್ತಿಯ ಕಿರೀಟ ತೊಡಿಸಿ ಶಾಲುಹೊದಿಸಿ ಒಂದಷ್ಟು ದುಡ್ಡೋ ಸ್ಮರಣಿಕೆಯೋ ಕೈಯಲ್ಲಿಟ್ಟು ಕೃತಾರ್ಥರಾಗುವ ಕಾಲ ಒಂದಿತ್ತು. ಆದರೆ, ಈಗ ಪ್ರಶಸ್ತಿಗಳನ್ನು ಕೂಡ ಬಿಕರಿಗಿಡಲಾಗಿದೆ. ರಾಜ್ಯ ಅಥವಾ ಕೇಂದ್ರದಲ್ಲಿ ಸರಕಾರ ಬದಲಾದ ಕೂಡಲೇ, ಆಯಾಯಾ ಪಕ್ಷಗಳನ್ನು ಬೆಂಬಲಿಸುವ ಪ್ರತಿಭಾವಂತರು ಚುರುಕಾಗುತ್ತಾರೆ. ಇಷ್ಟು ವರ್ಷ ಆಗದೇ ನೆನೆಗುದಿಗೆ ಬಿದ್ದ ಕೆಲಸವನ್ನು ಈಗ ಹೇಗಾದರೂ ಮಾಡಿಸಿಕೊಳ್ಳಬೇಕು ಎಂದು ಸರಕಾರವೆಂಬ ವೃಂದಾವನಕ್ಕೆ ಸುತ್ತುಬರುತ್ತಾರೆ. ಕಾಯಿ ಒಡೆಯುತ್ತಾರೆ. ಹಣ್ಣು ನೈವೇದ್ಯ ಸಮರ್ಪಣೆ ಮಾಡುತ್ತಾರೆ. ಅಷ್ಟಶತೋತ್ತರ ನಾಮಾವಳಿಯೂ ನಡೆಯುತ್ತದೆ. ಇಷ್ಟೆಲ್ಲ ಪಾಡುಪಟ್ಟ ಭಕ್ತನನ್ನು ಸಂಪ್ರೀತಗೊಳಿಸಲು ಸರಕಾರ ಅವನಲ್ಲಿ ಯಾವ ಪ್ರಶಸ್ತಿ ಬೇಕು ವತ್ಸಾ ಎಂದು ಕೇಳಲೇಬೇಕಾದ ಪರಿಸ್ಥಿತಿ ಬರುತ್ತದೆ. ಪೂಸಿ ಹೊಡೆದು ಗಾಳಿ ಖಾಲಿಯಾದವರು ಯಾವುದಾದರೂ ನಡೆದೀತು ಎಂಬ ಹಂತಕ್ಕೆ ಬಂದಿರುತ್ತಾರೆ. ಆದರೆ, ಕೆಲವು ಜಗಜಟ್ಟಿಗಳು ಇಂಥದ್ದೇ ಬೇಕು, ಅದು ಕೊಡೋದಿಲ್ಲವಾದರೆ ಯಾವುದೂ ಬೇಡ ಎಂದು ರಚ್ಚೆ ಹಿಡಿಯುತ್ತಾರೆ. ಇಂತಹ ಕಂದಮ್ಮಗಳನ್ನು ರಮಿಸಿ ಮುದ್ದಿಸಿ ಹಾಲುಕೊಟ್ಟು ತಣ್ಣಗಾಗಿಸುವ ಹೊತ್ತಿಗೆ ಕೆಲವು ಸಲ ಸರಕಾರಕ್ಕೆ ಹೆಣ ಬಿತ್ತೆನ್ನಿಸುವಷ್ಟು ಸುಸ್ತು ಹೊಡೆಯುವುದೂ ಉಂಟು. ಆದರೇನು ಮಾಡೋಣ? ಸರಕಾರಕ್ಕೆ ತನ್ನ ಪರಾಕುಪಂಪು ಒತ್ತಿಸಿಕೊಳ್ಳಲು ಈ ವಂಧಿಮಾಗಧರ ಗಡಣ ಬೇಕು. ಮತ್ತು ಈ ಗಡಣಕ್ಕೆ ತನ್ನಗಂಟಲನ್ನು ಸದಾ ತೇವವಾಗಿಟ್ಟುಕೊಳ್ಳಲು ನೆರವು ನೀಡುವ ರಾಜಾಶ್ರಯ ಬೇಕು. ಇದು ಸಾರ್ವಜನಿಕ ತೆರಿಗೆ ದುಡ್ಡಿನ ಕೃಪಾಪೋಷಿತ ಪರಸ್ಪರ ಸಹಕಾರ ಸಂಘ.

ಮತ್ತಷ್ಟು ಓದು »

5
ಫೆಬ್ರ

ಬೌದ್ದಿಕ ಚರ್ಚೆ ಮತ್ತು ಪ್ರಗತಿಪರರ ಅಸಹನೆ

– ಎಂ. ಎಸ್. ಚೈತ್ರ

ನಿರ್ದೇಶಕರು, “ಆರೋಹಿ” ಸಂಶೋಧನಾ ಸಂಸ್ಥೆ, ಬೆಂಗಳೂರು

freedomofspeechಸಾಮಾಜಿಕ ಜಾಲತಾಣ ಮತ್ತು ಮಟ್ಟು ಪ್ರಕರಣ

ಕರ್ನಾಟಕದ ಮಾನ್ಯ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟುರವರು, ಸಾಮಾಜಿಕ ಜಾಲತಾಣವೊಂದರಲ್ಲಿ ತಮ್ಮನ್ನು ಟೀಕಿಸಿದ ಕೆಲವರ ಮೇಲೆ ಪೊಲೀಸರಿಗೆ ದೂರು ನೀಡಿದ್ದು, ವಿಶೇಷವಾಗಿ ನಿಲುಮೆ ಗುಂಪಿನ ನಿರ್ವಾಹಕರಾದ ರಾಕೇಶ್ ಶೆಟ್ಟರನ್ನು ಅದಕ್ಕೆ ಜವಾಬ್ದಾರರೆಂದು ದೂರಿನಲ್ಲಿ ಸೇರಿಸಿದ್ದಾರೆ. ಈ ಕುರಿತು ಇತ್ತೀಚೆಗೆ ನಮ್ಮ ರಾಜ್ಯದಾದ್ಯಂತ ಬಿಸಿ ಚರ್ಚೆ ನಡೆಯುತ್ತಿದೆ. ಇದರ ಪರ ಮತ್ತು ವಿರೋಧವಾಗಿ ಅನೇಕರು ತಮ್ಮ ವಾದಗಳನ್ನು ಮಂಡಿಸುತ್ತಿದ್ದಾರೆ. ಈ ಕುರಿತ ವಿಷ್ಲೇಷಣೆಯಲ್ಲಿ ತೊಡಗಿರುವವರು ತಮಗರಿವಿಲ್ಲದೆಯೆ ಅನೇಕ ದ್ವಂದಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಉದಾಹರಣೆಗೆ ಪ್ರಜಾವಾಣಿಯಲ್ಲಿ “ಅಭಿವ್ಯಕ್ತಿಯ ಪಾವಿತ್ರ್ಯಕ್ಕೆ ಹಿಂಸಾರಸಿಕತೆಯ ಮಸಿ” ಎಂಬ ಲೇಖನವನ್ನು ನಾವು ಗಮನಿಸೋಣ. (ದಿನಾಂಕ 2 ಫೆಬ್ರವರಿ 2015 ಇಸ್ಮಾಯಿಲ್ ಅವರ ಅಂಕಣ ಬರಹ; ಇದು ಪ್ರಜಾವಾಣಿಯ ವೆಬ್ ತಾಣದಲ್ಲೂ ಲಭ್ಯ). ತಮ್ಮ ಲೇಖನದ ಪ್ರಾರಂಭದಲ್ಲಿ ಲೇಖಕರು ಇಂಟರ್‍ನೆಟ್ ಜಗತ್ತು ಮತ್ತು ಇತರ ಪತ್ರಿಕಾ ಮಾಧ್ಯಮಗಳ ಕುರಿತು ಈ ರೀತಿ ಹೇಳುತ್ತಾರೆ:

“`ಸಮೂಹ ಮಾಧ್ಯಮ’ ಎಂಬುದರ ವ್ಯಾಖ್ಯೆಯನ್ನೇ ಇಂಟರ್‍ನೆಟ್ ಬದಲಾಯಿಸಿಬಿಟ್ಟಿದೆ. ನಿರ್ದಿಷ್ಟ ಸಂಪಾದಕ, ಪ್ರಕಾಶಕ, ಮುದ್ರಕ ಅಥವಾ ಪ್ರಸಾರಕನಿರುವ ಹಳೆಯ ಮಾಧ್ಯಮಗಳ ಸ್ವರೂಪಕ್ಕೂ ಇಂಟರ್‍ನೆಟ್ ಸಾಧ್ಯಮಾಡಿರುವ ಸಮೂಹ ಮಾಧ್ಯಮದ ಸ್ವರೂಪಕ್ಕೂ ಪರಸ್ಪರ ಹೋಲಿಕೆ ಸಾಧ್ಯವಿಲ್ಲ.”

ಅಂದರೆ ಯಾವ ಮಾನದಂಡಗಳಿಂದ ನಾವು ಪ್ರಿಂಟ್ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ಅಳೆಯುತ್ತೇವೆಯೊ ಅದೇ ಮಾನದಂಡಗಳಿಂದ ಇಂಟರ್‍ನೆಟ್‍ನಿಂದ ಹುಟ್ಟಿದ ಸಾಮಾಜಿಕ ಜಾಲತಾಣಗಳನ್ನು ನೋಡಲು ಸಾಧ್ಯವಿಲ್ಲ ಎಂಬ ಸ್ಪಷ್ಟವಾದ ತೀರ್ಮಾನಕ್ಕೆ ಲೇಖಕರು ಬರುತ್ತಾರೆ. ಇದನ್ನು ಎಲ್ಲರೂ ಒಪ್ಪುತ್ತಾರೆನ್ನಬಹುದು. ಸ್ವಲ್ಪ ಮುಂದುವರೆದ ಅವರು ಹೀಗೆ ಹೇಳುತ್ತಾರೆ:

“ಈ ಗುಂಪಿನ ಗೋಡೆಯ (Wall) ಮೇಲೆ ಪ್ರಕಟವಾಗುವ ಬರಹಗಳಿಗೆ ಈ ನಿರ್ವಾಹಕರು ಜವಾಬ್ದಾರರೇ? ತಾಂತ್ರಿಕವಾಗಿ ಹಾಗೂ ತಾತ್ವಿಕವಾಗಿ ಅವರ ಮೇಲೆ ಜವಾಬ್ದಾರಿ ಇದೆ. ಕೇವಲ ಆಸಕ್ತಿಯ ಕಾರಣಕ್ಕಾಗಿ ಸಾರ್ವಜನಿಕ ಗುಂಪೊಂದನ್ನು ರೂಪಿಸುವಾತ ಅದರಲ್ಲಿರುವ ಸಾವಿರಾರು ಸಂಖ್ಯೆಯ ಸದಸ್ಯರ ಚಟುವಟಿಕೆಗಳ ಮೇಲೆ ಕಣ್ಣಿಡಲು ಸಾಧ್ಯವೇ ಎಂಬ ಪ್ರಶ್ನೆಯನ್ನು ಹಲವರು ಕೇಳುತ್ತಾರೆ. ಹಾಗೆ ನೋಡಿದರೆ ನೂರಾರು ಸಂಖ್ಯೆಯ ವರದಿಗಾರರು, ಅಷ್ಟೇ ಸಂಖ್ಯೆಯ ಉಪ ಸಂಪಾದಕರು ಇತ್ಯಾದಿಗಳನ್ನು ಹೊಂದಿರುವ ಪತ್ರಿಕಾ ಸಂಸ್ಥೆಯೊಂದರ ಸಮಸ್ಯೆಯೂ ಇದುವೇ ತಾನೆ. ಓದುಗರ ಪತ್ರ ವಿಭಾಗದಲ್ಲಿ ನಿಂದನಾತ್ಮಕ ಪತ್ರವೊಂದು ಪ್ರಕಟವಾದರೆ ಅದಕ್ಕೂ ಸಂಪಾದಕ, ಪ್ರಕಾಶಕ, ಮುದ್ರಕ ಎಲ್ಲರೂ ಜವಾಬ್ದಾರರಾಗುತ್ತಾರಲ್ಲವೇ? ಇದೇ ತರ್ಕವನ್ನು ಸಾಮಾಜಿಕ ಜಾಲತಾಣಕ್ಕೂ ಅನ್ವಯಿಸಬೇಕಲ್ಲವೇ ಎಂಬ ಪ್ರಶ್ನೆಯೂ ಇಲ್ಲಿದೆ.”

ಈ ಹೇಳಿಕೆಯನ್ನೊಮ್ಮೆ ಗಂಭೀರವಾಗಿ ಪರಿಶೀಲಿಸಲು ಪ್ರಯತ್ನಿಸೋಣ. ತಮ್ಮ ಗೋಡೆಗಳ ಮೇಲೆ ಬರೆದದ್ದಕ್ಕೆ ನಿರ್ವಾಹಕರೇ ತಾಂತ್ರಿಕ ಮತ್ತು ತಾತ್ವಿಕವಾಗಿ ಜವಾಬ್ದಾರರಾಗುತ್ತಾರೆ ಎಂಬುದು ಲೇಖಕರ ಸ್ಪಷ್ಟ ಅಭಿಪ್ರಾಯ. ಮೊದಲಿಗೆ ಈ ತಾಂತ್ರಿಕ ಜವಾಬ್ದಾರಿ ಏನೆಂದು ಗುರುತಿಸಲು ಪ್ರಯತ್ನಿಸೋಣ. ಉದಾಹರಣೆಗೆ ತಮ್ಮ ಗೋಡೆಯ ಮೇಲೆ ಬರೆಯುವವರಿಗೆ ಎಚ್ಚರಿಕೆ ಕೊಡುವುದು ಮತ್ತು ಅದನ್ನು ತೆಗೆದು ಹಾಕುವ ಅಥವಾ ಬ್ಲಾಕ್ ಮಾಡುವ ಅಧಿಕಾರ ನಿರ್ವಾಹಕರಿಗೆ ಇರುವುದನ್ನು ತಾಂತ್ರಿಕ ಜವಾಬ್ದಾರಿ ಎಂದು ಒಪ್ಪಿಕೊಳ್ಳಬಹುದು. ಈಗ ಮಟ್ಟು ಮತ್ತು ರಾಕೇಶ್ ಶೆಟ್ಟರ ವಿವಾದವನ್ನು ತೆಗೆದುಕೊಳ್ಳೋಣ. ನಿಲುಮೆಯ ಗುಂಪಿನಲ್ಲಿ ಮಟ್ಟು ಅವರ ವಿರುದ್ಧ ಬರೆದ ಹೇಳಿಕೆಯನ್ನು ರಾಕೇಶ್ ಶೆಟ್ಟರು ಬರೆದದ್ದಲ್ಲ. ಎರಡನೆಯದಾಗಿ ಆ ಗುಂಪಿನ ಮುಖಪುಟದಲ್ಲೇ ಆ ಗುಂಪಿನ ಸದಸ್ಯರುಗಳು ಹೇಗೆ ವ್ಯವಹರಿಸಬೇಕು ಎಂಬುದನ್ನು ವಿವರಿಸಲಾಗಿದೆ ಜೊತೆಗೆ ಮಟ್ಟುರವರ ಪ್ರಕರಣವಲ್ಲದೆ, ಯಾವಾಗಲಾದರೂ ನಿರ್ವಾಹಕರಿಗೆ ನಿಲುಮೆ ಗುಂಪಿನಲ್ಲಿ ಬಂದ ಹೇಳಿಕೆಗಳು ಅಷ್ಟು ಸಮಂಜಸವಾದವುಗಳಲ್ಲ ಎಂಬುದನ್ನು ಗಮನಕ್ಕೆ ತಂದ ತಕ್ಷಣ ಅವುಗಳನ್ನು ತೆಗೆದು ಹಾಕಲಾಗುತ್ತದೆ ಇಲ್ಲವೆ ಸಂಬಂಧಿಸಿದವರಿಗೆ ಅದನ್ನು ಸರಿಪಡಿಸಿಕೊಳ್ಳಲು ಎಚ್ಚರಿಕೆ ನೀಡಲಾಗುತ್ತದೆ. ಮೇಲೆ ತಿಳಿಸಿದ್ದು ತಾಂತ್ರಿಕ ಜವಾಬ್ದಾರಿ ಎಂದು ಹೇಳಿದಲ್ಲಿ ಅದನ್ನು ನಿಲುಮೆಯ ನಿರ್ವಾಹಕರು ನಿರ್ವಹಿಸಿದ್ದಾರೆ.

ಮತ್ತಷ್ಟು ಓದು »

6
ಜೂನ್

ಬುದ್ಧಿಜೀವಿಗಳೇ, ಕಾದು ನೋಡುವುದಲ್ಲದೆ ನಿಮಗೆ ಅನ್ಯ ಮಾರ್ಗವಿಲ್ಲ!

– ಸಹನಾ ವಿಜಯ್ ಕುಮಾರ್

ಪ್ರಗತಿಪರರು ಹಾಗೂ ಬುದ್ಧಿಜೀವಿಗಳುAction and reaction are equal and opposite. ಕ್ರಿಯೆ ಮತ್ತು ಪ್ರತಿಕ್ರಿಯೆಗಳು ವಿರುದ್ಧ ದಿಕ್ಕಿನಲ್ಲಿದ್ದರೂ ಸಮಬಲದಿಂದಿರುತ್ತವೆ. ಇದು ನ್ಯೂಟನ್ನ ಮೂರನೆಯ ನಿಯಮ. ಸುಮಾರು ಮೂರು ಶತಕಗಳಿಗೂ ಹಿಂದೆ, ಅಂದರೆ ಕ್ರಿ.ಶ. 1687ರಲ್ಲಿ ನ್ಯೂಟನ್ ಜಗತ್ತಿಗೆ ಸಾಬೀತುಪಡಿಸಿದ್ದು. ಈಗ 2014ರಲ್ಲಿ ನಾವು ಭಾರತೀಯರು ಈ ನಿಯಮದ ಸತ್ಯಾಸತ್ಯತೆಯನ್ನು ಮತ್ತೆ ಸಾಬೀತುಪಡಿಸಿದ್ದೇವೆ! ಇಲ್ಲಿ ಕ್ರಿಯೆ – ಚುನಾವಣಾ ಪೂರ್ವದಲ್ಲಿ ಇಡೀ ದೇಶದಲ್ಲಿ ಒಂದು ವ್ಯವಸ್ಥಿತ ಜಾಲವು ಮೋದಿಯವರ ಕುರಿತ ಭಯವನ್ನು ಹುಟ್ಟುಹಾಕಿದ್ದು. ಪ್ರತಿಕ್ರಿಯೆ – ಜನಸಾಮಾನ್ಯರು ಆ ಭಯದ ಹುಟ್ಟಡಗಿಸಿ ಮೋದಿಯವರಿಗೆ ಐತಿಹಾಸಿಕ ವಿಜಯ ದೊರಕಿಸಿಕೊಟ್ಟಿದ್ದು. ಒಂದು ವಿಶೇಷವೆಂದರೆ ಪ್ರತಿಕ್ರಿಯೆಯು ಕ್ರಿಯೆಗಿಂತ ಬಹಳ ಪಟ್ಟು ಹೆಚ್ಚಿದೆ, ತೀಕ್ಷ್ಣವಾಗಿದೆ ಹಾಗೂ ಮುಟ್ಟಿ ನೋಡಿಕೊಳ್ಳುವ ಹಾಗಿದೆ! ಈಗ ನ್ಯೂಟನ್ ಬದುಕಿದ್ದರೆ ಬಹಳ ಖುಷಿಪಡುತ್ತಿದ್ದ!

ಹೀಗೆ ಮಾಡುವ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಿತ್ತು. ಏಕೆಂದರೆ ಈ ಕ್ರಿಯೆಯನ್ನು ಹುಟ್ಟುಹಾಕಿದವರು ಅಂತಿಂಥವರಲ್ಲ, ಮೂರು ವರ್ಗಗಳಾಗಿ ವಿಂಗಡಿಸಬಹುದಾದ ಘಟಾನುಘಟಿಗಳು. ಒಂದು ವರ್ಗ ರಾಜಕಾರಣಿಗಳದ್ದಾದರೆ ಮತ್ತೊಂದು ಸುದ್ದಿ ಮಾಧ್ಯಮಗಳದ್ದು. ಮೂರನೆಯ ಹಾಗೂ ಅತ್ಯಂತ ಕುಲೀನ(?) ವರ್ಗ ಪ್ರಗತಿಪರರು ಹಾಗೂ ಬುದ್ಧಿಜೀವಿಗಳದ್ದು. ರಾಜಕಾರಣಿಗಳು ಸಿದ್ಧಾಂತ ಭೇದ ಮರೆತು ಒಂದಾದರು. ಮೋದಿಯವರನ್ನು ರಾಕ್ಷಸನೆಂದು ಬಿಂಬಿಸಿ ತಮ್ಮ ಕ್ರಿಯೆಗೆ ಮೊದಲಿಟ್ಟುಕೊಂಡರು. ಇನ್ನು ಸುದ್ದಿ ಮಾಧ್ಯಮದವರು ಹಿಂದೆ ಬೀಳುತ್ತಾರೆಯೇ? ಅಪಸ್ಮಾರ ಇರುವವರಿಗಿಂತ ಹೆಚ್ಚಾಗಿ ದೇಹ ಮನಸಿನ ಸ್ಥಿಮಿತ ಕಳೆದುಕೊಂಡು ಆ ಕ್ರಿಯೆಗೆ ಶಕ್ತಿ ಹಾಗೂ ವೇಗ ತುಂಬಿದರು. ಯಾವ ರಾಷ್ಟ್ರೀಯ ಚಾನೆಲ್ ನೋಡಿದರೂ ಮೋದಿ ಎಂಬ ನರಹಂತಕನ ಗೋಧ್ರಾ ಕಥೆಯೇ. ಇನ್ನುಳಿದವರು ಪ್ರಗತಿಪರರು ಹಾಗೂ ಬುದ್ಧಿಜೀವಿಗಳು. ಇದೊಂಥರಾ ವಿಚಿತ್ರ ತಳಿ. ತಮಗೆ ತಲೆಯಿಂದ ಕಾಲಿನವರೆಗೂ ರಕ್ತ ಮಾಂಸಗಳ ಬದಲು ಬುದ್ಧಿಯೇ ತುಂಬಿಕೊಂಡಿದೆಯೆಂಬ ಭ್ರಾಂತಿಯ ಜನ. ಉಳಿದವರು ಕೇವಲವೆಂಬ ಉದ್ಧಟತನ. ಜೊತೆಗೆ ಇವರ ಆವುಟವನ್ನು ಎಲ್ಲರೂ ಸಹಿಸ ಲೇಬೇಕೆಂಬ ತಿಕ್ಕಲುತನ. ಇವರೂ ಗುಂಪುಕಟ್ಟಿಕೊಂಡು ತಮ್ಮ ಕೈಲಾದಷ್ಟು ‘ಭಯೋತ್ಪಾದನೆ'(ಭಯ+ಉತ್ಪಾದನೆ) ಮಾಡಿದರು.

ಈಗ ಇವರೆಲ್ಲರಿಗೂ ತಕ್ಕ ಪ್ರತಿಕ್ರಿಯೆ ನೀಡಿದ್ದೇವೆ ನೋಡಿ, ಬಾಲ ಮುದುರಿಕೊಂಡು ಸುಮ್ಮನಾಗಿದ್ದಾರೆ. ರಾಜಕಾರಣಿಗಳು ಪರಸ್ಪರ ದೋಷಾರೋಪಣೆಯ ಕೆಸರೆರಚಾಟದಲ್ಲಿ ನಿರತರಾಗಿದ್ದಾರೆ. ರಾಜ್‍ದೀಪ್ ಸರ್‍ದೇಸಾಯಿ, ಬರ್ಖಾ ದತ್ ಹಾಗೂ ಅರ್ಣಬ್ ಗೋಸ್ವಾಮಿಯರು ಇಂಗು ತಿಂದ ಮಂಗನ ಮುಖ ಮಾಡಿಕೊಂಡು ವಿಧಿಯಿಲ್ಲದೆ ಮೋದಿ ಸರ್ಕಾರದ ಮೊದಲ ದಿಟ್ಟ ಹೆಜ್ಜೆಗಳ ಸಮಾಚಾರ ಬಿತ್ತರಿಸುತ್ತಿದ್ದಾರೆ. ಕಡೇಪಕ್ಷ ಇವರು ಜನರಿಂದ ಓಡಿಹೋಗುತ್ತಿಲ್ಲ. ತಮ್ಮ ಲೆಕ್ಕಾಚಾರ ತಪ್ಪಾದುದನ್ನು ಮುಕ್ತವಾಗಿ ಒಪ್ಪಿಕೊಳ್ಳುತ್ತಿದ್ದಾರೆ. ಆದರೆ ಈ ಬುದ್ಧಿಜೀವಿಗಳು ಹಾಗೂ ಪ್ರಗತಿಪರರ ದಂಡಿದೆಯಲ್ಲ, ಇವರ ಪಾಡು ಯಾರಿಗೂ ಬೇಡ. ಅತ್ತ ತಪ್ಪನ್ನು ಒಪ್ಪಿಕೊಳ್ಳಲಾಗದೆ, ಇತ್ತ ಸತ್ಯವನ್ನು ಅಲ್ಲಗಳೆಯಲೂ ಆಗದೆ ಕಾದ ಹೆಂಚಿನ ಮೇಲೆ ಕುಳಿತಂತೆ ಚಡಪಡಿಸುತ್ತಿದ್ದಾರೆ.

ಮತ್ತಷ್ಟು ಓದು »

6
ಜನ

ಬೆನ್ನಿ ಹಿನ್ ಕಂಡರೆ ಪ್ರಗತಿಪರರಿಗೇಕೆ ಅಷ್ಟೊಂದು ಭಯ!?

– ನರೇಂದ್ರ ಕುಮಾರ್ ಎಸ್.ಎಸ್

ಬೆನ್ನಿ ಹಿನ್ಬೆನ್ನಿ ಹಿನ್ ಮತ್ತೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. 2005ರಲ್ಲಿ ಬೆನ್ನಿ ಹಿನ್ ಬೆಂಗಳೂರಿಗೆ ಆಗಮಿಸಿದ್ದಾಗ ಬಹಳ ವಿರೋಧ ವ್ಯಕ್ತವಾಗಿತ್ತು. ಆದರೆ, ರಾಜ್ಯ ಸರಕಾರದ ಸಹಕಾರದಿಂದಾಗಿ, ಆತನ “ಕಣ್ ಕಟ್ ಪ್ರದರ್ಶನ ಮತ್ತು ಮತಾಂತರ” ನಿರಾತಂಕವಾಗಿ ನಡೆಯಿತು. ಆ ನಂತರ ಆನೇಕ ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಿಂದ ಹೊರಗುಳಿಯಬೇಕಾಯಿತು (ಆತನ ಕಣ್ ಕಟ್ನ ಪ್ರಭಾವವೂ ಇರಬಹುದೇ?). ಇದೀಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಮತ್ತು ಕೂಡಲೇ “ಬೆನ್ನಿ ಹಿನ್ ಅವರ ಕಣ್ ಕಟ್ ಕಾರ್ಯಕ್ರಮ” ಆಯೋಜಿತವಾಗಿದೆ! ಇದು ಕೇವಲ ಕಾಕತಾಳೀಯವಿರಲಾರದು ಅಲ್ಲವೇ!?

ಬೆನ್ನಿ ಹಿನ್ ಇಸ್ರೇಲಿನ ಜೆರೂಸೆಲಂನಲ್ಲಿ ಜನಿಸಿ, ಮುಂದೆ ಅಮೆರಿಕದ ಪ್ರಜೆಯಾದರು. ಅವರೊಬ್ಬ ಕ್ರೈಸ್ತ ಮತ ಪ್ರಚಾರಕ. ಅವರು ಹೋದಲ್ಲೆಲ್ಲಾ ಪ್ರಾರ್ಥನಾ ಸಭೆಗಳನ್ನು ನಡೆಸುತ್ತಾರೆ. ತನ್ನ ಸಭೆಗಳಲ್ಲಿ ಹಾಜರಿದ್ದು, ತನ್ನೊಡನೆ ಪ್ರಾರ್ಥನೆ ಮಾಡಿದವರಿಗೆ ಮತ್ತು ತನ್ನನ್ನು ಸ್ಪರ್ಶಿಸಿದವರಿಗೆ ಯಾವುದೇ ರೋಗವಿದ್ದರೂ ಗುಣವಾಗುತ್ತದೆ, ಎಂದು ಅವರು ಹೇಳಿಕೊಳ್ಳುತ್ತಾರೆ. “ಕ್ಯಾನ್ಸರ್/ ಏಡ್ಸ್ ನಂತಹ ಕಾಯಿಲೆಗಳನ್ನೂ ಕೇವಲ ಸ್ಪರ್ಶದ ಮೂಲಕವೇ ವಾಸಿ ಮಾಡುತ್ತೇನೆ” ಎಂದು ಹೇಳಿ ಜನರನ್ನು ಯಾಮಾರಿಸಲು ಪ್ರಯತ್ನಿಸುತ್ತಾರೆ! 3 ರಿಂದ 5 ದಿನಗಳ ಕಾಲ ನಡೆಯುವ ಇವರ ಕಾರ್ಯಕ್ರಮಗಳಲ್ಲಿ, ಕೊನೆಯ ದಿನಗಳು ಹತ್ತಿರ ಬಂದಂತೆ, ವೇದಿಕೆಯ ಮೇಲೆ ನಡೆಯುವ ನಾಟಕವೂ ಹೆಚ್ಚುತ್ತದೆ. ಇದ್ದಕ್ಕಿದ್ದಂತೆ ಮೈಮೇಲೆ ಏನೋ ಬಂದಂತೆ, ಕಣ್ಣೀರು ಸುರಿಸುತ್ತಾ ಕೆಲವರು ನುಗ್ಗುತ್ತಾರೆ. ತಮಗೆ ಯಾವುದೇ ಔಷಧದಿಂದಲೂ ಗುಣವಾಗದ ಖಾಯಿಲೆಯಿತ್ತು ಮತ್ತು ಇಲ್ಲಿ ಪ್ರಾರ್ಥಿಸಿದ ನಂತರ ಖಾಯಿಲೆ ವಾಸಿಯಾಗಿಬಿಟ್ಟಿತು; ಬೆನ್ನಿ ಹಿನ್ ಅವರೇ ಪ್ರತ್ಯಕ್ಷ ದೇವರು; ಎಂದೆಲ್ಲಾ ಕುಣಿದಾಡುತ್ತಾರೆ. ಇದೆಲ್ಲಾ ಪೂರ್ವನಿಯೋಜಿತ ನಾಟಕ ಎಂಬುದು ಹಲವು ಬಾರಿ ನಿರೂಪಿತವಾಗಿದ್ದರೂ, ಮುಂದಿನ ಬಾರಿಯೂ ಇದೇ ರೀತಿಯ ನಾಟಕ ಇದ್ದೇ ಇರುತ್ತದೆ. ಈ ರೀತಿಯ ನಾಟಕ ನಡೆಯದಿದ್ದರೆ, ಇವರ ಸಭೆಗೆ ಜನರೇ ಬರುವುದಿಲ್ಲವಲ್ಲ; ಹೀಗಾಗಿ ನಾಟಕ ನಿಲ್ಲಿಸುವಂತಿಲ್ಲ!

ಮತ್ತಷ್ಟು ಓದು »

21
ಆಕ್ಟೋ

ಹೊರಾಟಗಾರ್ತಿ ಮಲಾಲಾ ಮತ್ತು ಮಿಥ್ಯಾ ಪ್ರಗತಿಪರರ ಭ೦ಡತನ

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

Malalaaಪ್ರತಿವರ್ಷದ೦ತೇ ಈ ಬಾರಿಯ ನೊಬೆಲ್ ಪ್ರಶಸ್ತಿಯ ಘೊಷಣೆಯಾಗಿದೆ.ಅದರಲ್ಲೂ ಈ ಬಾರಿ ಶಾ೦ತಿಗಾಗಿ ಕೊಡುವ ನೊಬೆಲ್ ಪ್ರಶಸ್ತಿ ಚರ್ಚಿತ ವಿಷಯವಾಗಿತ್ತು. .ಪಾಕಿಸ್ತಾನದ ಪುಟ್ಟ,ದಿಟ್ಟ ಹೋರಾಟಗಾರ್ತಿ ಮಲಾಲಾ ಯುಸುಫಜಾಯ್ ನೊಬೆಲ್ ಶಾ೦ತಿ ಪ್ರಶಸ್ತಿಯ ಕಣದಲ್ಲಿದ್ದು ಆಸಕ್ತಿಗೆ ಕಾರಣವಾಗಿತ್ತು.ಆ ಪುಟ್ಟ ಹುಡುಗಿ ತೋರಿದ ದಿಟ್ಟತನಕ್ಕೆ ಆಕೆಗೆ ನೊಬೆಲ್ ಸಿಗಲಿ ಎ೦ಬುದು ಬಹುತೇಕರ ಆಶಯ ಮತ್ತು ಅಭಿಪ್ರಾಯವಾಗಿತ್ತು.ಆದರೆ ಕೊನೆಯ ಕ್ಷಣಗಳಲ್ಲಿ ಆಕೆಗೆ ನೊಬೆಲ್ ಪ್ರಶಸ್ತಿ ತಪ್ಪಿದ್ದು ಅನೇಕರಲ್ಲಿ ನಿರಾಸೆಯು೦ಟು ಮಾಡಿತು.ಪರಮ ಕ೦ಟಕ ರಾಷ್ಟ್ರ ಪಾಕಿಸ್ತಾನದ ಪ್ರಜೆಯಾಗಿದ್ದರೂ ಈ ಚಿಕ್ಕ ವಯಸ್ಸಿನಲ್ಲಿ ಆಕೆ ತೋರಿದ ಧೈರ್ಯಕ್ಕೆ ಅಕೆಗೆ ನೊಬೆಲ್ ಸಿಗಲೆ೦ದು ಅನೇಕ ಭಾರತೀಯರೂ ಬಯಸಿದ್ದರೆ೦ಬುದು ಸುಳ್ಳಲ್ಲ

ಈಗಾಗಲೇ ಮಲಾಲಾ ವಿಶ್ವದಾದ್ಯ೦ತ ಮನೆಮಾತಾಗಿದ್ದರೂ ಆಕೆಯ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲದಿದ್ದವರಿಗೆ ಕೊ೦ಚ ಮಾಹಿತಿ ನೀಡುತ್ತಿದ್ದೇನೆ.ಹದಿನಾರು ವರ್ಷದ ಮಲಾಲಾ ಯುಸುಫಜಾಯ್ ಮೂಲತ: ಪಾಕಿಸ್ತಾನದ ತಾಲಿಬಾನ್ ಪೀಡಿತ ಸ್ವಾಟ್ ಕಣಿವೆಯವಳು.ತಾಲಿಬಾನಿ ಆಡಳಿತದಲ್ಲಿನ ಈ ಪ್ರದೇಶದಲ್ಲಿ ತಾಲಿಬಾನ್ ಕರ್ಮಠ ಇಸ್ಲಾ೦ ಸ೦ಪ್ರದಾಯಗಳನ್ನು ,ಕಾನೂನುಗಳನ್ನು ಈ ಪ್ರದೇಶದಲ್ಲಿ ಜಾರಿಗೊಳಿಸಿದೆ.ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸವಿಲ್ಲ ಎ೦ಬ ಕಾನೂನನ್ನು ಈ ಪ್ರದೇಶದಲ್ಲಿ ಜಾರಿಗೊಳಿಸಿದ್ದರು.ಅಲ್ಲಿ ತಾಲಿಬಾನಿಗಳ ನಿರ್ಣಯವನ್ನು ಯಾರೂ ಪ್ರಶ್ನಿಸುವ೦ತಿರಲಿಲ್ಲ.ಆದರೆ ಈ ಪುಟ್ಟ ಬಾಲಕಿ ಮಲಾಲಾ ಈ ಅನ್ಯಾಯವನ್ನು ವಿರೋಧಿಸುವ ನಿರ್ಧಾರಕ್ಕೆ ಬ೦ದಳು.ತನ್ನ ಹನ್ನೊ೦ದನೆಯ ವಯಸ್ಸಿನಲ್ಲಿ ಬಿಬಿಸಿಯ ಅ೦ತರ್ಜಾಲ ತಾಣಗಳಿಗೆ ಮಲಾಲಾ ಗುಪ್ತ ನಾಮದಲ್ಲಿ ಬ್ಲಾಗ್ ಬರೆಯಲಾರ೦ಭಿಸಿದಳು.ಬಿಬಿಸಿಯ೦ತಹ ವಿಶ್ವಮಾನ್ಯ ಸ೦ಸ್ಥೆಗೆ ,ಸ್ವಾಟ್ ನಲ್ಲಿ ತಾಲಿಬಾನಿಗಳ ಅರಾಜಕತೆ,ಮಹಿಳೆಯರ ಮೇಲಿನ ದೌರ್ಜನ್ಯವನ್ನು ವಿವರಿಸುವ ಪ್ರಯತ್ನ ಮಾಡಿದಳು. ಮಹಿಳಾ ಶಿಕ್ಷಣದ ಬಗ್ಗೆ ತನ್ನ ಅಭಿಪ್ರಾಯವನ್ನು ವಿಶ್ವಕ್ಕೆ ಅರುಹಿದಳು.ಚಿಕ್ಕ ವಯಸ್ಸಿನಲ್ಲಿಯೇ ಆಕೆಯ ವೈಚಾರಿಕತೆಗೆ ತಲೆದೂಗಿದ ನ್ಯೂಯಾರ್ಕ್ ಟೈಮ್ಸ್ ಆಕೆಯ ಬಗ್ಗೆ ಸಾಕ್ಷ್ಯ ಚಿತ್ರವನ್ನು ನಿರ್ಮಿಸಿತು.ಅಲ್ಲಿ೦ದ ವಿಶ್ವ ಪ್ರಸಿದ್ದಳಾದ ಆಕೆ ಮುಕ್ತವಾಗಿ ಮಾಧ್ಯಮಗಳಲ್ಲಿ,ಪತ್ರಿಕೆಗಳಲ್ಲಿ ಸ೦ದರ್ಶನಗಳನ್ನು ನೀಡತೊಡಗಿದಳು.ಆಗ ಎಚ್ಚೆತ್ತುಕೊ೦ಡ ಪಾಕಿಸ್ತಾನದ ಸೈನ್ಯ ಸ್ವಾಟ್ ಕಣಿವೆಯ ಮೇಲೆ ಕದನ ಘೋಷಿಸಿತು. ’ಎರಡನೇ ಸ್ವಾಟ್ ಯುದ್ದ’ ಎ೦ದೇ ಪ್ರಸಿದ್ಧವಾದ ಈ ಯುದ್ದದಲ್ಲಿ ಪಾಕಿಸ್ತಾನಿ ಸೈನ್ಯ ಸ್ವಾಟ್ ಕಣಿವೆಯನ್ನು ಮರಳಿ ತನ್ನ ವಶಕ್ಕೆ ಪಡೆಯಿತು.ಅನೇಕ ತಾಲಿಬಾನಿ ಕಮಾ೦ಡರಗಳ ಬ೦ಧನವಾಯ್ತು.

ಮತ್ತಷ್ಟು ಓದು »

10
ಜೂನ್

CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ

CSLC– ರಾಕೇಶ್ ಶೆಟ್ಟಿ

ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸಿದವರು ಗೆಲಿಲಿಯೋ ಮತ್ತು ಬ್ರುನೋ.ಈ ಮೂವರು ಬರುವವರೆಗೂ ಸೂರ್ಯನೇ ಭೂಮಿಯ ಸುತ್ತ ಸುತ್ತುತ್ತಾನೆ ಅಂತಲೇ ಜನರು ನಂಬಿದ್ದರು.ಅದೇ ಜನರ ಮಧ್ಯದಿಂದ ಎದ್ದು ಬಂದು,’ಇಲ್ಲ ಸ್ವಾಮಿ ಭೂಮಿಯೇ ಸುತ್ತೋದು’ ಅಂದಿದ್ದ ಕೋಪರ್ನಿಕಸ್ ಅದೇ ಜನರಿಂದ ಹುಚ್ಚ ಅನ್ನಿಸಿಕೊಂಡಿದ್ದ.ಅವನ ನಂತರ ಬಂದ ಗೆಲಿಲಿಯೋ ಮತ್ತು ಬ್ರುನೋ ಸಹ ಕೋಪರ್ನಿಕಸ್ ವಾದಕ್ಕೆ ಸೈ ಅಂದರು.

ಸಮಾಜದ ನಂಬಿಕೆಯ ಬುಡವನ್ನು ಅಲುಗಾಡಿಸುವ ಯಾವುದೇ ಪ್ರಯತ್ನಕ್ಕೆ ದೊಡ್ಡ ಮಟ್ಟದಲ್ಲೇ ಅಡೆ-ತಡೆಗಳು ಎದುರಾಗಬೇಕಲ್ಲವೇ? ಗೆಲಿಲಿಯೋ,ಬ್ರೂನೋಗು ಅದೇ ಆಯಿತು. ಇವರ ಸಂಶೋಧನೆಯಿಂದ ಕನಲಿ ಕೆಂಡವಾದ ಪೋಪ್ ಎಂಟನೇ ಅರ್ಬನ್,“Heliocentric System” ಅನ್ನುವುದೇ ಸುಳ್ಳು ಎಂದು ಸಾರ್ವಜನಿಕವಾಗಿ ಗೆಲಿಲಿಯೋ ಮತ್ತು ಬ್ರೂನೋನನ್ನು ಖಂಡಿಸಿ, ಅವರಿಬ್ಬರ ಸಂಶೋಧನೆಗೂ ನಿರ್ಬಂಧವನ್ನೂ ಹೇರಿದರು.

ಗೆಲಿಲಿಯೋನನ್ನು ಜೈಲಿಗೂ ತಳ್ಳಲಾಯಿತು, ಸಾಯುವವರೆಗೂ ಗೃಹ ಬಂಧನದಲ್ಲಿರಿಸಲಾಯಿತು.1642ರಲ್ಲಿ ಗೆಲಿಲಿಯೋ ಮರಣವನ್ನಪ್ಪಿದಾಗ ಆತನನ್ನು ಕ್ರೈಸ್ತರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಬಿಡಲಿಲ್ಲ.ಇನ್ನು ಬಾಹ್ಯಾಕಾಶವೆಂಬುದು Finite ಅಲ್ಲ, Infinite. ಅದಕ್ಕೆ ಕೊನೆಯೇ ಇಲ್ಲ ಎಂದು ವಾದಿಸುವ ಧೈರ್ಯ ತೋರಿದ ಬ್ರೂನೋನನ್ನಂತೂ,೧೫೯೨ರಲ್ಲಿ ಬಂಧಿಸಿ ರೋಮನ್ ಕ್ಯಾಥೋಲಿಕ್ ಚರ್ಚ್‌ನ ನ್ಯಾಯಾಲಯದ(The Inquisition) ಮುಂದೆ 7 ವರ್ಷಗಳ ಕಾಲ ವಿಚಾರಣೆ ಗೊಳಪಡಿಸಿ, ಕೊನೆಗೆ ಉರಿವ ಜ್ವಾಲೆಯಲ್ಲಿ ಸುಡುವ ಮರಣದಂಡನೆಯನ್ನು ವಿಧಿಸಿದರು.

ಮತ್ತಷ್ಟು ಓದು »