ವಿಷಯದ ವಿವರಗಳಿಗೆ ದಾಟಿರಿ

Posts tagged ‘ಪ್ರೊ ಬಾಲು’

18
ಡಿಸೆ

ಭಾರತದಲ್ಲಿ ಯಾವ ರೀತಿಯ ಅಸಹಿಷ್ಣುತೆ ಬೆಳೆಯುತ್ತಿದೆ?

ಮೂಲ: ಪ್ರೊ. ಎಸ್.ಎನ್ ಬಾಲಗಂಗಾಧರ
ಕನ್ನಡಕ್ಕೆ : ಇಂಚರ

ಪ್ರೊ.ಬಾಲಗಂಗಾಧರಇತ್ತೀಚೆಗೆ ಭಾರತದ ಸಾಮಾಜಿಕ ವಾತಾವರಣದಲ್ಲಿ ಅಸಹಿಷ್ಣುತೆ ಹೆಚ್ಚಿದೆ ಎಂಬ ಧ್ವನಿ ಭಾರತದ ಹಲವು ಕಡೆಗಳಿಂದ ಜೋರಾಗಿ ಕೇಳಿಬರುತ್ತಿವೆ. ಪಾಶ್ಚಾತ್ಯ ಮಾಧ್ಯಮಗಳು ಈ ಕೀರಲು ಕೂಗುಗಳನ್ನೇ ಹಿಗ್ಗಿಸಿ, ಬೂದುಗಾಜಿನಿಂದ ನೋಡುತ್ತಿರುವುದೂ ಅಲ್ಲದೆ, ಪ್ರಧಾನಿ ಮೋದಿಯವರ ಬ್ರಿಟನ್ ಭೇಟಿಯ ವಿಚಾರವನ್ನು ಕೂಡ ಇದೇ ನೆಲೆಗಟ್ಟಿನಲ್ಲಿ ವ್ಯಂಗ್ಯ ಮಾಡಲು ಬಳಸುತ್ತಿವೆ. ಭಾರತೀಯರ ಈ ಅಸಹಿಷ್ಣುತೆಯ ಮಂತ್ರವನ್ನು ಒಂದು ಪಕ್ಷ ಅರ್ಥ ಮಾಡಿಕೊಂಡರೂ, ಯುರೋಪಿಯನ್ನರು ಏಕೆ ಇದೇ ಮಂತ್ರವನ್ನು ಪುನರುಚ್ಛರಿಸುತ್ತಿದ್ದಾರೆ? ಎಂಬದನ್ನು ಯೋಚಿಸಬೇಕು. ಈ ಘಟನೆಯನ್ನು ಅವಲೋಕಿಸಿದಾಗ, ಇಲ್ಲಿ ಕಾಡುತ್ತಿರುವ ಅಸಹಿಷ್ಣುತೆಯ ಕುರಿತು ಇರುವ ಅಸ್ಪಷ್ಟತೆ! ಇವೆಲ್ಲವೂ ಒಂದು ಒಗಟಿನ ಹಾಗೆಯೇ ಕಾಣುತ್ತದೆ.

ಬಹುಶಃ ಇಲ್ಲಿ ನಡೆದಿರುವ ಕೆಲವಾರು ಕೊಲೆಗಳ ಕುರಿತು ಪ್ರತಿಭಟಿಸಲು ಅಸಹಿಷ್ಣುತೆಯ ಕೂಗನ್ನು ಒಂದಷ್ಟು ಜನರು ಎಬ್ಬಿಸಿರಬಹುದು. ಹಾಗೆಯೇ ಒಂದಷ್ಟು ಜನರ ಕೊಲೆಗಳಾಗಲು, ಆ ವ್ಯಕ್ತಿಗಳು ಒಂದಷ್ಟು ಜನರ ಅಸಹಿಷ್ಣುತೆಗೆ ಗುರಿಯಾಗಿದ್ದದು ಕೂಡ ಕಾರಣವಿರಬಹುದು. ಆದರೆ ಜನರು ಮಾತ್ರ ಭಾರತದಲ್ಲಿ ಹೆಚ್ಚುತ್ತಿರುವ ಅಪರಾಧಗಳ ಕುರಿತು ಪ್ರತಿಭಟಿಸುತ್ತಿಲ್ಲವೆಂಬುದು ಹಾಗೂ ಭಾರತ ಇಂತಹ ಅಪರಾಧಗಳಲ್ಲಿ ಪ್ರಪಂಚದಲ್ಲಿ ಮುಂಚೂಣಿಯಲ್ಲಿಲ್ಲ ಎಂಬುದು ಕೂಡ ಅಷ್ಟೇ ಸತ್ಯ ಸಂಗತಿ.

ನಿರ್ದಿಷ್ಟ ವ್ಯಕ್ತಿಗಳ ಕೊಲೆಗಳಾದಾಗ ಮಾತ್ರ ದೇಶದಲ್ಲಿ ಅಸಹಿಷ್ಟುತೆ ಹೆಚ್ಚುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ. ಉದಾ: ಕಲ್ಬುರ್ಗಿ ಅವರ ಕೊಲೆ ಈ ಅಸಹಿಷ್ಟುತೆಯ ಕೂಗನ್ನು ಹುಟ್ಟುಹಾಕಿತು. ಆದರೆ ಕಲ್ಬುರ್ಗಿಯವರು ಕೂಡ ಅನೇಕ ವಿಷಯಗಳಲ್ಲಿ ಅಸಹಿಷ್ಣುತೆ ಹೊಂದಿದ್ದವರು. ಸೆಮೆಟಿಕ್ ಥಿಯಾಲಜಿ ಪ್ರಕಾರ ಮೂರ್ತಿ ಪೂಜೆ ಎಂಬ ಪದದ ಅರ್ಥವನ್ನು ತಿಳಿದುಕೊಳ್ಳದೆ ಅಥವಾ ಅದು ಪಾಪ ಹೇಗೆ? ಎಂಬುದನ್ನುಅರ್ಥ ಮಾಡಿಕೊಳ್ಳದೆಯೇ ಮೂರ್ತಿ ಪೂಜೆಯ ವಿರುದ್ಧ ಭಾರತದ ಅನೇಕ ಬುದ್ಧಿಜೀವಿಗಳಿಗಿರುವ ಅಸಹಿಷ್ಣುತೆ / ಪೂರ್ವಗ್ರಹ ಕಲ್ಬುರ್ಗಿಯವರಿಗೂ ಇತ್ತು. ಅವರ ಸಿದ್ದಾಂತಗಳಿಗಿಂತ ಭಿನ್ನವಾದ ಸಿದ್ದಾಂತಗಳನ್ನು ಒಪ್ಪದಿರುವಷ್ಟು ಅಸಹಿಷ್ಣುತೆ / ಅಸಹನೆ ಅವರಲ್ಲಿತ್ತು. ಅವರಂತಹುದೇ ಮನಸ್ಥಿತಿಯುಳ್ಳ ಒಂದಷ್ಟು ಜನರನ್ನೊಳಗೊಂಡ ತಂಡದ ಮುಂದಾಳತ್ವ ವಹಿಸಿ ಕಲ್ಬುರ್ಗಿಯವರು, ಕನ್ನಡ ದಿನಪತ್ರಿಕೆಯ ಮಾಲೀಕರನ್ನು ಭೇಟಿ ಮಾಡಿ ಅದರಲ್ಲಿ ಬರುತ್ತಿದ್ದ ಅಂಕಣವನ್ನು ನಿಲ್ಲಿಸಿದ್ದರು!

ಮತ್ತಷ್ಟು ಓದು »

2
ಏಪ್ರಿಲ್

“ಧರ್ಮ”ದ ದಾರಿ ತಪ್ಪಿಸುತ್ತಿರುವ ಹಿರಿಯರು;ಇಲ್ಲದ ಹಿಂದೂ ರಿಲಿಜನ್ನಿನ ಭ್ರಮೆಯಲ್ಲಿ ಕಿರಿಯರು

 – ರಾಕೇಶ್ ಶೆಟ್ಟಿ

Chimu Kalburgiಕಳೆದ ಜೂನ್ ೯ರಂದು ನಡೆದಿದ್ದ ಮೌಢ್ಯಮುಕ್ತ ಸಮಾಜ,ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ.ಕಲ್ಬುರ್ಗಿಯವರು,ದೇವರ ವಿಗ್ರಹಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗದುಎಂದು ಹೇಳಿ ಸುದ್ದಿಯಾಗಿದ್ದರು. ಈಗ ಮತ್ತೆ, ಗದುಗಿನಲ್ಲಿ ಆಯೋಜಿಸಲಾಗಿದ್ದ ’ಸಮಾಜಶಾಸ್ತ್ರ,ಕನ್ನಡಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಚಾರಗೋಷ್ಠಿ’ಯಲ್ಲಿ, ಹಿಂದುಗಳಿಗೆ ಧರ್ಮಗ್ರಂಥವೇ ಇಲ್ಲ.ಭಗವದ್ಗೀತೆ ಹಿಂದುಗಳ ಧರ್ಮ ಗ್ರಂಥವಲ್ಲ,ಅದೊಂದು ವಚನ ಸಾಹಿತ್ಯರಾಜ್ಯ ಸರ್ಕಾರ ನಡೆಸಲು ತೀರ್ಮಾನಿಸಿರುವ ಜಾತಿಜನಗಣತಿಯ ಪ್ರಶ್ನಾವಳಿಯಲ್ಲಿ ಧರ್ಮ,ಜಾತಿ,ಉಪಜಾತಿಗೊಂದು ಪ್ರತ್ಯೇಕ ಕಾಲಂ ನಿಗದಿಪಡಿಸಲಾಗಿದೆ.ಜಾತಿ ಜನಗಣತಿಯಲ್ಲಿ ಧರ್ಮ ಯಾಕೆ ಬೇಕು.ಏಕೆಂದರೆ ಧರ್ಮ ಮತ್ತು ಜಾತಿ ಎರಡೂ ಒಂದೇ.ಜೈನ ಧರ್ಮವೂ ಹೌದು,ಜಾತಿಯೂ ಹೌದು.ಅದರಂತೆ ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಬೌದ್ಧ ಧರ್ಮವೂ ಹೌದು,ಜಾತಿಯೂ ಹೌದು.ಹೀಗಿದ್ದಾಗ ಇಂತಹ ಅನವಶ್ಯಕ ಕಾಲಂಗಳು ಏಕೆ ಬೇಕು?” ಎಂದು ಪ್ರಶ್ನಿಸಿದ್ದಾರೆಂದು ವರದಿಯಾಗಿತ್ತು.

ಡಾ.ಕಲ್ಬುರ್ಗಿಯವರ ಹೇಳಿಕೆಯನ್ನು ವಿರೋಧಿಸಿ,ಹಿರಿಯ ಸಂಶೋಧಕರಾದ ಡಾ.ಎಂ ಚಿದಾನಂದ ಮೂರ್ತಿಗಳು ವಿಜಯವಾಣಿಯ ಜನಮತ ವಿಭಾಗದಲ್ಲಿ ಪತ್ರವೊಂದನ್ನು ಬರೆದು ಕಲ್ಬುರ್ಗಿಯವರು ಗದುಗಿನಲ್ಲಿ ಮಾತನಾಡುತ್ತ ಹಿಂದೂ ಎಂಬ ಧರ್ಮವೇ ಇಲ್ಲಎಂದು ವಿತಂಡವಾದ ಮಾಡಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆಎನ್ನುತ್ತಾ ಮುಂದುವರೆದೂ ಧರ್ಮ ಎಂಬ ಶೀರ್ಷಿಕೆಯಡಿಯಲ್ಲಿ ಹಿಂದೂ ಎಂದು ದಾಖಲಿಸಲು ಸುಪ್ರೀಂ ಕೋರ್ಟ್ ಅವಕಾಶ ಮಾಡಿಕೊಟ್ಟಿದೆ.’ಹಿಂದೂ ವಿವಾಹ ಕಾನೂನುಎಂಬ ಕಾನೂನು ಕೂಡ ಇದೆ.ಕಲ್ಕತ್ತೆಯ ಮಠವೊಂದು ತಾನು ಹಿಂದು ವ್ಯಾಪ್ತಿಗೆ ಬರುವುದಿಲ್ಲವೆಂದಾಗ,೧೯೯೫ರಲ್ಲಿ ಸರ್ವೋಚ್ಚ ನ್ಯಾಯಾಲಯದ ಪೂರ್ಣಪೀಠವು ಅದು ಹಿಂದು ಧರ್ಮಕ್ಕೆ ಸೇರಿದ ಮಠಎಂದು ತೀರ್ಪು ನೀಡಿದೆ.ಗಾಂಧೀಜಿ ತಮ್ಮನ್ನು ಸನಾತನಿ ಹಿಂದೂಎನ್ನುತ್ತಾರೆ.ಸ್ವಾಮಿ ವಿವೇಕಾನಂದರು ಶಿಕಾಗೋದಲ್ಲಿ ತಮ್ಮನ್ನು ಹಿಂದುಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ… ” ಇತ್ಯಾದಿ ಉದಾಹರಣೆಗಳನ್ನು ನೀಡಿದ್ದಾರೆ.

ಮತ್ತಷ್ಟು ಓದು »

3
ಆಕ್ಟೋ

ಪ್ರೊ.ಬಾಲು ಅವರಿಗೆ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

Prof Balu2ಕರ್ನಾಟಕದಲ್ಲಿ ಈಗ ಗೌರವ ಡಾಕ್ಟರೇಟ್ ಪದವಿ ಎನ್ನುವುದು ಮಾರುಕಟ್ಟೆಯಲ್ಲಿ ದೊರೆಯುವ ವಸ್ತುವಾಗಿರುವುದು ನಮಗೆಲ್ಲ ಗೊತ್ತಿರುವ ವಿಚಾರವೇ. ಆದರೆ ಯುರೋಪಿನ ವಿಶ್ವವಿದ್ಯಾಲಯಗಳಲ್ಲಿ ಇದು ಇನ್ನೂ ತನ್ನ ಘನತೆ ಹಾಗೆ ಉಳಿಸಿ ಕೊಂಡಿದೆ. ಉದಾಹರಣೆಗೆ, ಪ್ರೊಫೆಸರ್ ಎಸ್. ಎನ್. ಬಾಲಗಂಗಾಧರ ರಾವ್ ಅವರಿಗೆ ೩೦/೯/೨೦೧೩ರಂದು  ಗೌರವ ಡಾಕ್ಟರೇಟ್ ಪದವಿ ಮತ್ತು ಬಂಗಾರದ ಪದಕದೊಂದಿಗೆ ಸನ್ಮಾನ ಮಾಡಿದ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯ ತನ್ನ ೧೫ ವರ್ಷಗಳ ಇತಿಹಾಸದಲ್ಲಿ ಕೊಟ್ಟಿದ್ದು ಕೇವಲ ಬೆರಳೆಣಿಕೆಯಷ್ಟು ಗೌರವ ಡಾಕ್ಟರೇಟ್ ಪದವಿಗಳನ್ನು ಮಾತ್ರ.

ಈ ಸಂದರ್ಭದಲ್ಲಿ ಎಸ್. ಎನ್. ಬಾಲಗಂಗಾಧರ ರಾವ್ ಅವರ ಸಾಧನೆಗಳ ಕುರಿತು ಅಲ್ಲಿನ ಸಮಾಜ ವಿಜ್ಞಾನಗಳ ಡೀನ್ ಮಾಡಿದ ಭಾಷಣದ ಕನ್ನಡ ಅವತರಣಿಕೆಯನ್ನು ನಾವಿಲ್ಲಿ ಕೊಡುತ್ತಿದ್ದೇವೆ.

–      ನಿಲುಮೆ

 

ಮತ್ತಷ್ಟು ಓದು »

22
ಆಗಸ್ಟ್

ರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು” ಪುಸ್ತಕದ ಕುರಿತು

– ಮು . ಅ . ಶ್ರೀರಂಗ  ಯಲಹಂಕ  ಬೆಂಗಳೂರು

ನಮಗೆ ನಾವೇ ಪರಕೀಯರುರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು ” (ನ. ನಾ. ಪ) (ಪ್ರಕಾಶಕರು : ರಾಷ್ಟ್ರೋತ್ಹಾನ ಸಾಹಿತ್ಯ ಬೆಂಗಳೂರು -೧೯ )ಪುಸ್ತಕ ಓದುವ ಮುನ್ನ ನಾನು ಪ್ರೊ .ಎಸ್ .ಎನ್. ಬಾಲಗಂಗಾಧರ (ಬಾಲು)ಅವರ ವಿಚಾರಗಳನ್ನು ಆಧರಿಸಿದ ಕನ್ನಡಕ್ಕೆ ಅನುವಾದವಾಗಿರುವ ಮೂರುಪುಸ್ತಕಗಳನ್ನು ಓದಿದ್ದೆ (ಪೂರ್ವಾವಲೋಕನ ,ಭಾರತದಲ್ಲಿ ಜಾತಿ ವ್ಯವಸ್ಥೆ ಇದೆಯೆ? ಮತ್ತು ಹುಡುಕಾಟವನ್ನು ನಿಲ್ಲಿಸದಿರೊಣ). ಸ್ಮೃತಿ-ವಿಸ್ಮೃತಿ ;ಭಾರತೀಯ ಸಂಸ್ಕೃತಿ ತನ್ನ ವಿಚಾರ ಮತ್ತು ಗಾತ್ರದಲ್ಲಿ ತುಂಬಾ ಘನವಾಗಿದೆ ಹೀಗಾಗಿ ನಿಧಾನವಾಗಿ ಓದಿ ಅರ್ಥಮಾಡಿಕೊಳ್ಳಬೇಕಾಗಿದೆ. ಇದುವರೆಗೆ ಸುಮಾರು ಇನ್ನೂರು ಪುಟಗಳನ್ನು ಓದಿದ್ದೆನೆ. ರಮಾನಂದರ ಪ್ರಸ್ತುತ ಪುಸ್ತಕ ಮೇಲೆ ಹೇಳಿದ ಬಾಲು ಅವರ ನಾಲ್ಕು ಪುಸ್ತಕಗಳ ಅದರಲ್ಲೂ ಮುಖ್ಯವಾಗಿ ಸ್ಮೃತಿ-ವಿಸ್ಮೃತಿ ಪುಸ್ತಕದಲ್ಲಿರುವ ವಿಷಯಗಳನ್ನು ನೇರವಾಗಿ ಭಟ್ಟಿ ಇಳಿಸಿರುವುದರ ಪ್ರತಿಫಲ! ಇದಕ್ಕೆ ಪುರಾವೆಗಳು ರಮಾನಂದರ ನ.ನಾ.ಪ.. ಪುಸ್ತಕದಲ್ಲೇ ಇವೆ.

,         ೧. ಬಾಲು ಅವರೇ ತಮ್ಮ ಮುನ್ನುಡಿಯಲ್ಲಿ—ರಮಾನಂದರ ಎಲ್ಲಾ ಲೇಖನಗಳು ಈ ವಿಷಯಗಳ ಕುರಿತಾಗಿ ಬೆಲ್ಜಿಯಂ ಹಾಗೂ ಭಾರತದಲ್ಲಿ ಕುವೆಂಪು ವಿ. ವಿ. ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳಿಂದ ಪ್ರಭಾವಿತವಾಗಿವೆ ಎಂದ್ದಿದ್ದಾರೆ (ಪುಟxii)

೨. ಲೇಖಕರ ಮಾತಿನಲ್ಲಿ ಸ್ವತಃ ರಮಾನಂದ ಐನಕೈ ಅವರೇ ಮೇಲೆ ಹೇಳಿದ ಬಾಲು ಅವರ ಮಾತುಗಳನ್ನೇ ಅನುಮೋದಿಸಿದ್ದಾರೆ—ಬಾಲು ಅವರ ಮೂಲ ಸಿದ್ಧಾಂತಕ್ಕೆ ಚ್ಯುತಿ ಬಾರದ ಹಾಗೆ ಅವರ ವಿಚಾರಗಳನ್ನು ನನ್ನ ಅನುಭವಗಳ ಮೂಲಕ ಸರಳವಾಗಿ ನಿರೂಪಿಸುವ ಕೆಲಸ ಮಾಡಿದ್ದೇನೆ (ಪುಟ xvi )(ರಮಾನಂದರ ಅನುಭವಗಳ ಪ್ರಮಾಣ ಈ ಪುಸ್ತಕದ ವಿಚಾರದಲ್ಲಿ ತೀರಾ ಕಡಿಮೆ ಎಂಬುದು ಓದುಗರಿಗೆ ಮನವರಿಕೆಯಾಗುತ್ತದೆ!)

೩. ರಮಾನಂದರ ಪ್ರಸ್ತುತ ಪುಸ್ತಕ್ಕಕ್ಕೆ (ನ.ನಾ.ಪ) ಹಿನ್ನೆಲೆ ಬರೆದಿರುವ ದಾ॥ ರಾಜಾರಾಮ ಹೆಗಡೆಯವರು ಸಹ ರಮಾನಂದರದು ಸ್ವತಂತ್ರ ಲೇಖನಗಳಾದರೂ ಕೂಡ ಭಾರತೀಯ ಸಂಸ್ಕೃತಿಯ ಕುರಿತು ಎಸ್ . ಎನ್ . ಬಾಲಗಂಗಧರ ಅವರ ಹೊಸ ವಾದಗಳಿಂದ ಪ್ರಭಾವಿತವಾಗಿವೆ. (ಪುಟ xviii)

ಮತ್ತಷ್ಟು ಓದು »

31
ಮಾರ್ಚ್

ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ ಚರ್ಚೆಯ ಸುತ್ತ

Nilume-CSLC - 4