ವಿಷಯದ ವಿವರಗಳಿಗೆ ದಾಟಿರಿ

Posts tagged ‘ಬರ’

2
ಮೇ

ಮರವನ್ನು ಮರೆತರೆ ಬರ ಬಾರದ್ದು ಬಂದೀತು!

fresh_nature-1280x720

– ರೋಹಿತ್ ಚಕ್ರತೀರ್ಥ

ಅವೊತ್ತು ಶುಕ್ರವಾರ. ಆಫೀಸಿನಿಂದ ಹೊರಟು ನಗರದ ಮುಖ್ಯರಸ್ತೆಯೊಂದಕ್ಕೆ ಬಂದು ಸೇರಿದಾಗ, ಆ ಸಾಗರದಲ್ಲಾಗಲೇ ಸಾವಿರಾರು ದೋಣಿಗಳು ಹುಟ್ಟುಹಾಕಲಿಕ್ಕೂ ಜಾಗ ಸಿಗದಂತೆ ತುಂಬಿಕೊಂಡಿದ್ದವು. ಯಾಕೆ ಇಷ್ಟೊಂದು ಟ್ರಾಫಿಕ್‍ಜಾಮ್ ಆಗಿದೆ ಎಂದು ಬಾತುಕೋಳಿಗಳಂತೆ ಕತ್ತು ಎತ್ತರಿಸಿ ನಿರುಕಿಸುತ್ತಿದ್ದವರಿಗೆ ದೂರದಲ್ಲಿ ಮಳೆಯ ರಭಸಕ್ಕೆ ಮರವೊಂದು ಮಾರ್ಗಶಾಯಿಯಾಗಿರುವುದು ಕಾಣಿಸಿತು. ಹತ್ತಾರು ಅಡಿಗಳ ರೆಂಬೆಕೊಂಬೆಗಳನ್ನು ದಶದಿಕ್ಕುಗಳಿಗೂ ಚಾಚಿ ಇಷ್ಟುದಿನ ರಸ್ತೆಯ ಬದಿಯಲ್ಲಿ ಗತ್ತಿನಿಂದ ನಿಂತು ನಮಗೆಲ್ಲ ಹಾಯ್ ಹೇಳುತ್ತ ಕೈಬೀಸುತ್ತಿದ್ದ ಈ ಮರ, ಇವೊತ್ತು ಹೃದಯಾಘಾತವಾದಂತೆ ಮಳೆಯ ಹೊಡೆತಕ್ಕೆ ನೆಲಕ್ಕೆ ಬಿದ್ದಿದೆಯಲ್ಲ ಅಂದುಕೊಂಡೆ. ಮರದ ಶವ ಬಿದ್ದಲ್ಲಿ ಹತ್ತಾರು ಅಧಿಕಾರಿಗಳು ನಿಂತು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದರು. ಅದರ ಕೈಕಾಲುಗಳನ್ನು ಆದಷ್ಟು ಬೇಗ ಕತ್ತರಿಸಿ ಎಲ್ಲಿಗಾದರೂ ಸಾಗಿಸಿಬಿಟ್ಟರೆ ಸಾಕು ಎಂಬ ಧಾವಂತ ಅವರ ಮುಖಗಳಲ್ಲಿ ಕುಣಿದಾಡುತ್ತಿತ್ತು. ಗ್ಯಾಂಗ್ರಿನ್ ಆದ ಕಾಲು ಕತ್ತರಿಸುವ ನಿರ್ಭಾವುಕ ವೈದ್ಯನಂತೆ, ನಾಲ್ಕು ಜನ ಕೆಲಸಗಾರರು ಶಕ್ತಿಮೀರಿ ಬಲಪ್ರಯೋಗಿಸಿ ಅದರ ದೇಹವಿಚ್ಛೇದನದಲ್ಲಿ ನಿರತರಾಗಿದ್ದರು. ಶೋಕೇಸಿನ ಹಲವಾರು ಶೋಪೀಸುಗಳ ನಡುವೆ ಕೈಮೇಲೆತ್ತಿ ನಗುವ ಪುಟ್ಟ ಬುದ್ಧನ ಮೂರ್ತಿಯಂತೆ; ಈ ನಗರದ ಸಾಫ್ಟ್‍ವೇರ್ ತಜ್ಞರು ಬರೆಯುವ ಧೀರ್ಘ ಪ್ರೋಗ್ರಾಮಿನ ಒಂದೇ ಒಂದು ಪುಟ್ಟ ಸಾಲಿನಂತೆ, ಅಥವಾ ಬೀದಿಬದಿಯಲ್ಲಿ ಹುಡುಗ ಮಾರುವ ನೂರಾರು ಪೋಸ್ಟರುಗಳ ನಡುವೆ ತಣ್ಣಗೆ ನಗುತ್ತ ಕೂತ ಹೃತಿಕ್ ರೋಷನ್ನಿನಂತೆ ಇಷ್ಟುದಿನ ಧ್ಯಾನಾಸಕ್ತನಾಗಿ ನಿಂತಿದ್ದ ವೃಕ್ಷ ಇನ್ನು ಅಲ್ಲಿ ಇರುವುದಿಲ್ಲವಲ್ಲ ಅಂತ ಸಂಕಟವಾಯಿತು. ಅದನ್ನು ತುಂಡುತುಂಡಾಗಿ ಕತ್ತರಿಸಿ ತೆಗೆದು ಸ್ಥಳಾವಕಾಶ ಮಾಡಿಕೊಡುತ್ತಲೇ ಅಸಹನೆಯಿಂದ ಕುದಿಯುತ್ತಿದ್ದ ಸವಾರರು ನಿರಾಳತೆಯಿಂದ ನಿಟ್ಟುಸಿರು ಬಿಟ್ಟರು. ಅಣೆಕಟ್ಟಿನ ಬಾಗಿಲು ತೆರೆದಾಗ ಹೊರಹಾರುವ ನೀರಿನ ಧಾರೆಯಂತೆ ಬೈಕು-ಕಾರುಗಳು ಧಿಮ್ಮನೆ ಚಿಮ್ಮಿದವು. ಮತ್ತಷ್ಟು ಓದು »

26
ಆಗಸ್ಟ್

ಬರ-ಜೋಳಿಗೆ

– ಅಕುವ

ಬಾನು ನೋಡುತಿದ್ದ ಉಳುವಾತ
ಹನಿಯಾದರೂ ಉದುರಲೆಂದೆ
ಮತ್ತೆ ಬಿಡದ ಗರ
ನಾಡಿಗೆಲ್ಲಾ ಬರ !

ಹೊರಟು ನಿಂತಿಹರು ನಮ್ಮವರು
ವಿದೇಶ ಯಾತ್ರೆಗೆ
ಪ್ರಾಯಶ: ಸೊರಗಿದವರಿಗೆ ತರಲೆಂದು
ಹಸಿವಾಗದ ಮಾತ್ರೆ !
ಮತ್ತಷ್ಟು ಓದು »