ಕಳೆದ ಒಂದು ವಾರದಿಂದ ನಾನು ಕೇಳಲ್ಪಟ್ಟ ಐದು ಸುಳ್ಳುಗಳು
– ರಾಜೇಶ್ ನರಿಂಗಾನ.
೧) ಗೌರಿ ಲಂಕೇಶ್ ವಿಚಾರವಾದಿ
ಗೌರಿ ಲಂಕೇಶ್ ಯಾವ ರೀತಿಯ ವಿಚಾರವಾದಿ ಎಂದೇ ತಿಳಿಯುತ್ತಿಲ್ಲ. ತನ್ನ ಸಂಪಾದಕತ್ವದ ‘ಗೌರಿ ಲಂಕೇಶ್ ಪತ್ರಿಕೆ’ಯಲ್ಲಿ ಭಿನ್ನ ವಿಚಾರಧಾರೆಯ ನಿಲುವನ್ನು ಹೊಂದಿರುವ ಆಕೆಗಿಂತ ವಯಸ್ಸಿನಲ್ಲಿ ಅದೆಷ್ಟೇ ಹಿರಿಯರಿದ್ದರೂ ಏಕವಚನದಲ್ಲಿ ಹೀನಮಾನವಾಗಿ ನಿಂದಿಸುತ್ತಿದ್ದರು. ರಂಜನೆ, ಪ್ರಲೋಭನೆಯ ಹೆಸರಿನಲ್ಲಿ ಭಿನ್ನ ವಿಚಾರಧಾರೆಯವರ ವೈಯಕ್ತಿಕ ಸ್ವಾತಂತ್ರ್ಯವನ್ನು ಹರಣಗೈಯುತ್ತಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಶಿಕ್ಷೆಯನ್ನೂ ವಿಧಿಸಿತ್ತು. ಆದ್ದರಿಂದ ಭಿನ್ನ ವಿಚಾರಧಾರೆಯಿರುವ ವ್ಯಕ್ತಿಗಳ ತೇಜೋವಧೆ ಮಾಡುವುದನ್ನೇ ‘ವಿಚಾರವಾದ’ ಎನ್ನುವುದಾದರೆ ಅಂಥ ವಿಚಾರವಾದಕ್ಕೆ ನನ್ನ ಧಿಕ್ಕಾರವಿದೆ. ಮತ್ತಷ್ಟು ಓದು
ಅಸಹಿಷ್ಣುತೆ, ಅನೈತಿಕತೆ ಮತ್ತು ನಮ್ಮ ಬೌದ್ಧಿಕ ಜಗತ್ತು
– ಎಂ. ಎಸ್. ಚೈತ್ರ
ನಿರ್ದೇಶಕರು, ಆರೋಹಿ ಸಂಶೋಧನಾ ಸಂಸ್ಥೆ.
ಬೆಂಗಳೂರು.
ಧಾರವಾಡದ ಸಾಹಿತ್ಯ ಸಂಭ್ರಮದ ಗೋಷ್ಠಿಯೊಂದರಲ್ಲಿ ಕಲಬುರ್ಗಿಯವರ ಹತ್ಯೆಯನ್ನು ಕುರಿತು ಅಜ್ಜಂಪುರ ಮಂಜುನಾಥ್ರವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಗತಿಪರರ ದಾಂಧಲೆಯನ್ನು ಎದುರಿಸಬೇಕಾಯಿತು. ಈ ಕುರಿತು ಪ್ರಜಾವಾಣಿಯಲ್ಲಿ ಪದ್ಮರಾಜ್ ದಂಡಾವತಿಯವರು (ದಿನಾಂಕ 29 ಜನವರಿ 2017), ನಮ್ಮ ಕನ್ನಡದ ಪ್ರಗತಿಪರ ಬುದ್ಧಿಜೀವಿಗಳು, ಕಲ್ಬುರ್ಗಿಯವರ ಹತ್ಯೆ ಬಲಪಂಥೀಯರಿಂದಲೇ ನಡೆದದ್ದು ಎಂಬ ಬಿಂಬವೊಂದನ್ನು ಕಾಯ್ದಿಟ್ಟುಕೊಳ್ಳುವ ಭರದಲ್ಲಿ ಘಟನೆಯೊಂದರ ಸತ್ಯಾಸತ್ಯತೆ ಮತ್ತು ಅದಕ್ಕೆ ಇರಬಹುದಾದ ವಿವಿಧ ಆಯಾಮಗಳನ್ನು ಮಾತನಾಡಲೂ ಅವಕಾಶ ಕೊಡದೆ, ಅಸಹಿಷ್ಣುಗಳಾಗುತ್ತಿದ್ದಾರೆಂದು ಟೀಕಿಸಿದ್ದರು. ಈ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಸಾಮಾಜಿಕ ಜಾಲತಾಣವೊಂದರಲ್ಲಿ (ಮಾಧ್ಯಮನೆಟ್.ಕಾಂ) ರಾಜೇಂದ್ರ ಚೆನ್ನಿಯವರು ದಂಡಾತಿಯವರ ಮೇಲೆ ತೀವ್ರವಾಗಿ ಹರಿಹಾಯ್ದಿದ್ದಾರೆ. ಚೆನ್ನಿಯವರ ಪ್ರತಿಕ್ರಿಯೆಯು ಕನ್ನಡದ ಬೌದ್ಧಿಕ ಜಗತ್ತಿನ ಕುರಿತು ಏನನ್ನು ಹೇಳುತ್ತಿದೆ ಎಂಬುದನ್ನು ಈ ಲೇಖನ ಅರ್ಥೈಸಿಕೊಳ್ಳಲು ಪ್ರಯತ್ನಿಸುತ್ತದೆ. ಮತ್ತಷ್ಟು ಓದು
ಸೈದ್ಧಾಂತಿಕ ಸಂಘರ್ಷದಡಿಯಲ್ಲಿ ಸಾಹಿತ್ಯಿಕ ಭಯೋತ್ಪಾದನೆ..?
– ಸಂತೋಷಕುಮಾರ ಮೆಹೆಂದಳೆ.
( ಇವತ್ತು ಅರ್ಜೆಂಟಿಗೆ ಬಿದ್ದು ಸ್ಟೇಟಸ್ ಅಪ್ಡೇಟ್ ಮಾಡುವವರು ಅದನ್ನು ಪೂರೈಸಿ ಎದ್ದು ಹೋಗಿಬಿಡುತ್ತಿದ್ದಾರೆ. ಕೆಲವರಿಗದು ತಮ್ಮ ಟಿ.ಆರ್.ಪಿ. ಯ ಮಾನದಂಡವೂ ಆಗಿರುವುದರಿಂದ ಲಿಂಗ, ಧರ್ಮ ಸೇರಿದಂತೆ ವರ್ಗಬೇಧದ ವ್ಯತ್ಯಾಸವಿಲ್ಲದೆ, ಕಾಮ, ಕರ್ಮಗಳ ಅಭ್ಯಂತರವಿಲ್ಲದೆ ನಾಲ್ಕು ಸಾಲು ಬರೆಯುತ್ತಾರೆ ಇಲ್ಲಾ ಜಗತ್ತಿನ ಯಾವ ಮೂಲೆಯದ್ದೋ ಶೇರು ಮಾಡಿ ಚು.. ಚು.. ಎಂದು ಹಲ್ಲಿ ಲೊಚಗುಟ್ಟಿದಂತೆ ತಾವೊಂದೆರಡು ಸಾಲು ಸೇರಿಸಿಬಿಡುತ್ತಾರೆ. ಆದರೆ ಅದರ ಕೆಳಗೆ ಮುಖ ಮೂತಿ, ಪರಿಚಯವೇ ಇಲ್ಲದವರೂ, ಜಾತಿ ಪಂಥದ ಹೊರತಾಗಿ ಪರಮ ದ್ವೇಷಿಗಳಾಗಿ ಬದಲಾಗಿ, ನಿರಂತರ ಸಂಘರ್ಷಗಳಿಗಿಳಿದು ಉಳಿದುಬಿಡುತ್ತಾರಲ್ಲ ಅದರ ಹೊಣೆಗಾರಿಕೆ ಯಾರದ್ದು…? ) ಮತ್ತಷ್ಟು ಓದು