ಒಂದು ಪ್ರೇತದ ಕತೆ! (ಭಾಗ 6)
– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಪ್ರೇತದ ಆತ್ಮ ಚರಿತೆ! (ಭಾಗ 3)
ಪ್ರೇತದ ಆತ್ಮ ಚರಿತೆ! (ಭಾಗ ೪)
ಪ್ರೇತದ ಆತ್ಮ ಚರಿತೆ! (ಭಾಗ ೫)
ಒಂದೆಡೆ ಕುಸಿಯುತ್ತಿರುವ ಆಡಳಿತ ವ್ಯವಸ್ಥೆ, ಬಂಡೇಳುತ್ತಿರುವ ಪಾಳೇಗಾರರು, ಪ್ರಧಾನರ ಒಳಜಗಳ… ನಾಲ್ದಿಕ್ಕುಗಳಲ್ಲೂ ಮರಾಠಾ ಸಾಮ್ರಾಜ್ಯವನ್ನು ಕುಟಿಲನೀತಿಯ ಮೂಲಕ ಆಕ್ರಮಿಸಿಕೊಳ್ಳಲು ಹವಣಿಸುತ್ತಿರುವ ಕೆಂಪು ಮುಸುಡಿಗಳ ಈಸ್ಟ್ ಇಂಡಿಯಾ ಕಂಪನಿ. ಅದರಿಂದ ಬಿಡಿಸಿಕೊಳ್ಳಲು ಬಾಜಿರಾವ್ ಪಂಡರಾಪುರದಲ್ಲಿ ಸಾಕಷ್ಟು ಧರ್ಮ ಕಾರ್ಯಗಳನ್ನು ನಡೆಸಿದ. ಭೀಮಾ ನದಿಯ ತೀರದಲ್ಲಿ ಭಾರಿ ಹೋಮಗಳನ್ನಿಟ್ಟು ನಾರಾಯಣನ ಪ್ರೇತವನ್ನು ಉಚ್ಛಾಟನೆ ಮಾಡಲಾಯಿತು. ಆದರೆ ಯಾವುದೂ ಉಪಯೋಗವಾಗಲಿಲ್ಲ. ಕೇವಲ ಪೇಶ್ವಾಗಳ ಸಾಮ್ರಾಜ್ಯ ನಾಶವಾಗಲಿ… ಪೇಶ್ವಾಗಳಿಗೆ ಸಂತಾನವಿಲ್ಲದೆ ಹೋಗಲಿ… ಪೇಶ್ವಾಗಳು ಕೈ ಹಿಡಿದ ಮಡದಿಯರನ್ನು ಮುಟ್ಟಿದರೆ ಸಾಕು ಅವರು ಸತ್ತು ಹೋಗುವಂತಾಗಲಿ… ಪೇಶ್ವಾಗಳ ಅರಮನೆಗೆ ಬೆಂಕಿ ಬೀಳಲಿ. ಇದು ನಾರಾಯಣನ ಪ್ರೇತ ಬಾಜಿರಾಯನ ಕಿವಿಯಲ್ಲಿ ಪ್ರತೀ ದಿನ ಉಸುರುತ್ತಿದ್ದ ಮಾತುಗಳು.. ಬಾಜಿರಾಯ ಮದುವೆಯಾದ. ಮಕ್ಕಳನ್ನು ಪಡೆಯಬೇಕು ಎಂದು ಪ್ರಯತ್ನ ಪಟ್ಟ ಕೆಲವೇ ದಿನದಲ್ಲಿ ಪತ್ನಿ ನಿಗೂಡವಾಗಿ ಸಾವನ್ನಪ್ಪಿದಳು.!! ಮತ್ತೊಬ್ಬಳನ್ನು ಮದುವೆಯಾದ ಅವಳೂ ಇದೇ ರೀತಿ ನಿಗೂಢವಾಗಿ ಸತ್ತು ಹೋದಳು. ಹೀಗೆ ನಾಲ್ಕು ಜನರನ್ನು, ನಾರಾಯಣ ಪೇಶ್ವೆಯ ಪ್ರೇತ ಬಲಿ ಪಡೆದುಕೊಂಡಿತು. ಬಾಜಿರಾಯನಿಗೆ ಹೆಣ್ಣು ಕೊಡಲು ಜನ ಹಿಂದೇಟು ಹಾಕತೊಡಗಿದರು. ಮತ್ತಷ್ಟು ಓದು
ಬಾಜಿರಾಯನ ಉತ್ತರದ ದಂಡಯಾತ್ರೆ
-ರಂಜನ್ ಕೇಶವ
ಬಾಜಿರಾಯನ ಅಶ್ವದಳ ತಲ್ಕತೋರಾ ಎಂಬಲ್ಲಿ ಕೆಂಪುಕೋಟೆ ತೋರುವಲ್ಲೇ ಡೇರೆ ಹಾಕಿತ್ತು. ಮರಾಠರ ಖಡ್ಗಗಳನ್ನು ಹೊತ್ತ ಈ ಅಶ್ವಬಲ ದಿನಕ್ಕೆ ನಲವತ್ತು ಕಿಲೋಮೀಟರ್ ವೇಗದಲ್ಲಿ ಒಂದೇ ಸಮನೇ ಯಾವ ಮುನ್ಸೂಚನೆಯಿಲ್ಲದೇ ಒಂದೇ ರಭಸಕ್ಕೆ ದೆಹಲಿಯ ಸರಹದ್ದನ್ನು ತಲುಪಿತ್ತು. ಇದರ ಸುದ್ದಿ ಹಬ್ಬಿದಂತೆ ಮೊಘಲ್ ಸಿಂಹಾಸನ ಗಡ ಗಡ ನಡುಗಿ ಅಲ್ಲಿಂದ ಕಾಲ್ಕೀಳಲು ದೋಣಿಗಳನ್ನು ಸಿದ್ಧಪಡಿಸಿದರು. ಅದರಲ್ಲೂ ಬಾಜಿರಾಯನ ಸೋಲಿಲ್ಲದ ಜಯಭೇರಿ ಭಾರತದುದ್ದಗಲಕ್ಕೂ ಹಬ್ಬಿತ್ತು. ಅವನ ಪರಾಕ್ರಮವನ್ನೆದುರಿಸುವ ಧೈರ್ಯ ಇವರಿಗೆಲ್ಲಿಂದ ಬರಬೇಕು ಪಾಪ. ಸಾವಿರ ವರ್ಷದ ಹಿಂದೆ ಇಮ್ಮಡಿ ಪುಲಕೇಶಿ ದಕ್ಷಿಣದಿಂದ ಉತ್ತರಕ್ಕೆ ಜಯಭೇರಿ ಬಾರಿಸಿದ್ದ. ಅದರ ನಂತರ ಈಗ ಬಾಜಿರಾಯ ಎರಡನೆಯ ಬಾರಿ ಉತ್ತರ ಭಾರತವನ್ನು ರಕ್ಷಿಸಲು ಕುದುರೆಯೇರಿ ಬಂದಿದ್ದ. ಮತ್ತಷ್ಟು ಓದು