ವಿಷಯದ ವಿವರಗಳಿಗೆ ದಾಟಿರಿ

Posts tagged ‘ಬುದ್ಧ’

14
ಏಪ್ರಿಲ್

ಕಮ್ಯುನಿಸಂ ಎಂಬ ಕಾಡಿನ ಬೆಂಕಿಗೆ ಅಂಬೇಡ್ಕರ್ ಸುಟ್ಟು ಹೋಗಬೇಕೆ?

ಡಾ. ರೋಹಿಣಾಕ್ಷ ಶಿರ್ಲಾಲು,ಸಹಾಯಕ ಪ್ರಾಧ್ಯಾಪಕ
  ಕನ್ನಡ ವಿಭಾಗ, ವಿವೇಕಾನಂದ ಕಾಲೇಜು,ಪುತ್ತೂರು.

ಒಂದೆಡೆ ರಕ್ತಕ್ರಾಂತಿಯನ್ನು ಆಹ್ವಾನಿಸುವ ಕಮ್ಯುನಿಸಂ, ಇನ್ನೊಂದಡೆ ರಕ್ತರಹಿತ ಬದಲಾವಣೆಯನ್ನು ನಿರೀಕ್ಷಿಸುವ ಬೌದ್ಧ ತತ್ವ. ಒಂದೆಡೆ ನೂರಾರು ವರ್ಷಗಳಿಂದ ಶೋಷಣೆ, ಅನ್ಯಾಯಗಳಿಗೆ ಒಳಗಾದ ದಲಿತ ಸಮಾಜ, ಇನ್ನೊಂದೆಡೆ ದಲಿತರೊಳಗೆ ಕಾಣಿಸಿಕೊಳ್ಳಲಾರಂಭಿಸಿದ  ಎಚ್ಚರ , ಆವೇಶಗಳು ಸುಲಭದಲ್ಲಿ ಕಮ್ಯೂನಿಸಂನ ತೋಪಿಗೆ ಸಿಡಿಮದ್ದಾಗುವ ಅಪಾಯ, ಇದು ಅಂಬೇಡ್ಕರ್ ಮುಂದಿದ್ದ ಸನ್ನಿವೇಶದ ಕಿರು ಚಿತ್ರಣ. ಒಂದು ಬುದ್ಧನ ಮಾರ್ಗ , ಇನ್ನೊಂದು ಕಾರ್ಲ್ ಮಾರ್ಕ್ಸ್ ನ ಮಾರ್ಗ. ವಿಶ್ವ ತನ್ನ ಮಾರ್ಗವನ್ನು ಈಗ ಆಯ್ಕೆ ಮಾಡಿಕೊಳ್ಳಬೇಕು ಎನ್ನುತ್ತಲೇ ಬೌದ್ಧಧರ್ಮದ ಮಾರ್ಗದಲ್ಲೇ ಉನ್ನತಿಯನ್ನು ಸಾಧಿಸಲು ಸಾಧ್ಯವೆಂದು ಆತ್ಮವಿಶ್ವಾಸದಿಂದ ನುಡಿದ, ನಡೆದ ಅಂಬೇಡ್ಕರ್. ಇದು ಅಂಬೇಡ್ಕರ್ ಮುಂದಿದ್ದ ಕವಲು ದಾರಿ ಮಾತ್ರವಲ್ಲ, ವರ್ತಮಾನದಲ್ಲಿನ ದಲಿತ ಚಳವಳಿಗಳ, ವಿಚಾರವಾದಿಗಳ ಮುಂದಿನ ಕವಲು ದಾರಿಯೂ ಹೌದು. ಅಂಬೇಡ್ಕರ್ ಅವರ ಅಂತಿಮ ಆಯ್ಕೆ ಬುದ್ಧನೋ? ಕಾರ್ಲ್‍ಮಾಕ್ರ್ಸೋ? ಈ ಪ್ರಶ್ನೆ ಬಹಳ ಮುಖ್ಯವಾದುದು ಕೂಡ. ಒಂದೆಡೆ ಮಾರ್ಕ್ಸ್ ವಾದಿಗಳು ಮರೆಯಿಂದ ಅಂಬೇಡ್ಕರ್ ವಿಚಾರಗಳನ್ನು ಮಾತನಾಡುತ್ತಾ , ಕಾರ್ಲ್ ಮಾರ್ಕ್ಸ್ನ ವಿಚಾರಗಳೇ ಅಂಬೇಡ್ಕರ್ ವಿಚಾರವೂ ಆಗಿತ್ತು ಎಂಬಂತೆ ತೋರಿಸುತ್ತಿದ್ದಾರೆ. ಇನ್ನೊಂದೆಡೆ ಕರ್ನಾಟಕವೂ ಸೇರಿದಂತೆ ದೇಶದೆಲ್ಲೇಡೆ ದಲಿತ ಚಳವಳಿಗಳು ಹುಟ್ಟಿ , ಉತ್ಕರ್ಷಕ್ಕೆ ತಲುಪಿ , ಹತ್ತಾರು ಚೂರುಗಳಾಗಿ ಒಡೆದು ಈ ಚಳವಳಿಗಳ ಮುಖ ಅಂಬೇಡ್ಕರ್ ಬದಲು ಮಾರ್ಕ್ಸ್, ಲೆನಿನ್‍ಗಳಾಗಿ, ಕ್ರಾಂತಿ, ಬೆಂಕಿಯ ವಿಚಾರಕ್ಕೆ ಅಂಬೇಡ್ಕರ್ ಮುಖವಾಡವನ್ನು ತೊಡಿಸುತ್ತಿದ್ದಾರೆ.  ಹಾಗಾದರೆ ಸ್ವತಃ ಅಂಬೇಡ್ಕರ್ ಕಾರ್ಲ್ ಮಾರ್ಕ್ಸ್, ಕಮ್ಯುನಿಸಂ ಬಗೆಗೆ ತಳೆದಿದ್ದ  ನಿಲುವು ಏನು? ಎನ್ನುವುದನ್ನು ಪರಿಶೀಲಿಸುತ್ತಾ, ನಮ್ಮ ಬೌದ್ಧಿಕ ವಲಯ ಅಂಬೇಡ್ಕರ್ ಅವರನ್ನು ಅರ್ಥೈಸಿಕೊಂಡ ಬಗೆಯನ್ನು ಚರ್ಚಿಸುವುದೇ ಈ ಬರವಣಿಗೆಯ ಉದ್ದೇಶ.

ಮತ್ತಷ್ಟು ಓದು »

3
ಸೆಪ್ಟೆಂ

ಅಂಬೇಡ್ಕರ್, ಮಾರ್ಕ್ಸ್ ಮತ್ತು ಬುದ್ಧ…..

– ಗುರುರಾಜ ಕೋಡ್ಕಣಿ. ಯಲ್ಲಾಪುರ
buddha_or_karl_marx“ಅದೊಮ್ಮೆ ಬುದ್ಧನ ಅಗ್ರಗಣ್ಯ ಶಿಷ್ಯರಲ್ಲಿ ಒಬ್ಬನಾದ ಅನಾಥಪಿಂಡಿಕನು ಬುದ್ದನಿರುವಲ್ಲಿಗೆ ಆಗಮಿಸುತ್ತಾನೆ. ಹಾಗೆ ಬಂದವನೇ ಬುದ್ಧನಿಗೆ ವಂದಿಸಿ, ಪಕ್ಕದಲ್ಲಿದ್ದ ಆಸನದಲ್ಲಿ ಕುಳಿತುಕೊಳ್ಳುತ್ತ ‘ಹೇ ಮಹಾಜ್ಞಾನಿಯೇ, ಗೃಹಸ್ತನೆನಿಸಿಕೊಂಡವನಿಗೆ ತುಂಬ ಆಸಕ್ತಿದಾಯವೆನ್ನಿಸುವ ಹಿತನೀಡುವ, ಆದರೆ ಅಷ್ಟೇ ಕಷ್ಟವೆನಿಸುವ ಕಾರ್ಯ ಯಾವುದೆಂದು ನಿನಗನ್ನಿಸುತ್ತದೆ .’? ಎಂದು ಪ್ರಶ್ನಿಸುತ್ತಾನೆ. ಹೀಗೊಂದು ಪ್ರಶ್ನೆಯನ್ನು ಕೇಳಿ ಮುಗುಳ್ನಕ್ಕ ಗೌತಮ, ‘ಅಂತಹ ಹಲವಾರು ಕೆಲಸಗಳಿವೆ ಶಿಷ್ಯೋತ್ತಮನೇ. ನ್ಯಾಯಬದ್ಧವಾಗಿ ಸಂಪತ್ತನ್ನು ಗಳಿಸುವುದು ಅಂಥದ್ದೊಂದು ಬಹುಮುಖ್ಯ ಕಾರ್ಯ. ಮೊದಲು ವ್ಯಕ್ತಿ ತಾನು ಧರ್ಮಯುತವಾಗಿ ಸಂಪತ್ತನ್ನು ಗಳಿಸಿಕೊಳ್ಳಬೇಕು. ನಂತರ ತನ್ನ ಹತ್ತಿರದ ಬಂಧುಗಳೂ ಸಹ ನ್ಯಾಯಸಮ್ಮತವಾಗಿಯೇ ಸಂಪತ್ತಿನ ಗಳಿಕೆ ಮಾಡುವಂತೆ ನೋಡಿಕೊಳ್ಳಬೇಕು. ಮೂರನೆಯದ್ದಾಗಿ ವ್ಯಕ್ತಿಯೊಬ್ಬ ತುಂಬ ಕಾಲ ಬದುಕಿ ದೀರ್ಘಾಯುಷಿಯೆನ್ನಿಸಿಕೊಳ್ಳಬೇಕು. ಇವೆಲ್ಲವೂ ಮನುಷ್ಯನಿಗೆ ಇಷ್ಟವಾಗುವ, ಹಿತವೆನಿಸುವ ಕಾರ್ಯಗಳೇ. ಆದರೆ ಅವುಗಳ ಸಾಧನೆ ಸುಲಭಸಾಧ್ಯವಲ್ಲ. ಇಂಥಹ ಐಹಿಕ ಭೋಗಗಳ ಗಳಿಕೆಗೂ ನಂಬಿಕೆ, ಸಚ್ಚಾರಿತ್ರ್ಯ, ಉದಾರತೆ ಮತ್ತು ವಿವೇಕವೆನ್ನುವ ನಾಲ್ಕು ಮೌಲ್ಯಗಳ ಆಶೀರ್ವಾದ ಬೇಕು. ಸಚ್ಚಾರಿತ್ರ್ಯವೆನ್ನುವುದು ಮನುಷ್ಯನ ಮನಸ್ಸು ಚಂಚಲವಾಗದೇ ಕುಡಿತ, ಕಳ್ಳತನ ಕೊಲೆಗಳಂತಹ ಕೆಟ್ಟ ಕಾರ್ಯಗಳನ್ನು ಮಾಡದಂತೆ ಆತನನ್ನು ತಡೆಯುತ್ತದೆ. ಉದಾರತೆಯ ಭಾವವು ಮನುಷ್ಯನನ್ನು ದುರಾಸೆಯಂತಹ ದುರ್ಗುಣಗಳಿಂದ ಮುಕ್ತವಾಗಿಸಿ ತೆರೆದ ಮನಸ್ಸಿನಿಂದ ದಾನಧರ್ಮಗಳನ್ನು ಮಾಡುವಂತೆ ಪ್ರೋತ್ಸಾಹಿಸುತ್ತದೆ. ವಿವೇಕವೆನ್ನುವುದು ಮನುಷ್ಯನನ್ನು ವಿಮೋಚನೆಯತ್ತ ಕರೆದೊಯ್ಯುವ ಮಾರ್ಗ. ವಿವೇಕವೆನ್ನುವ ಹಾರೈಕೆ, ಮನುಷ್ಯನನ್ನು ಜಡತ್ವ, ಕುಯುಕ್ತಿ, ಆಲಸ್ಯ ಅನುಮಾನದಂತಹ ಅವಗುಣಗಳಿಂದ ದೂರವಿರಿಸುತ್ತದೆ. ಹಾಗಾಗಿ ನೈತಿಕತೆಯಿಂದ, ನ್ಯಾಯಸಮ್ಮತ ದುಡಿಮೆಯಿಂದ ಬೆವರು ಸುರಿಸಿ ಗಳಿಸಿದ ಆಸ್ತಿಯೂ ಸಾಮಾನ್ಯ ಮನುಷ್ಯನಿಗೆ ಒಂದು ವರದಾನವಿದ್ದಂತೆಯೇ ಸರಿ. ಹೀಗೆ ಸಿರಿವಂತನಾಗುವ ಗೃಹಸ್ತ, ಬದುಕಿನುದ್ದಕ್ಕೂ ತಾನು ಸಂತಸವಾಗಿರುವುದಲ್ಲದೇ, ಸದಾಕಾಲ ತನ್ನ ಹೆತ್ತವರು, ಮಡದಿ ಮಕ್ಕಳು ಮತ್ತು ಸ್ನೇಹಿತರನ್ನೂ ಸಹ ಸಂತೋಷವಾಗಿರಸಬಲ್ಲ. ಸಂತಸವೇ ಸಾಮಾನ್ಯನೊಬ್ಬನ ಬದುಕಿನ ಸಾರ್ಥಕತೆ ‘ಎನ್ನುತ್ತ ಉತ್ತರಿಸುತ್ತಾನೆ’ ಎಂದು ಬರೆಯುತ್ತಾರೆ, ಸಂವಿಧಾನ ಶಿಲ್ಪಿ ಡಾ.ಭೀಮರಾವ್ ಅಂಬೇಡ್ಕರ್ ತಮ್ಮ ‘Buddha Or Karl Marx’ಎನ್ನುವ ಕೃತಿಯಲ್ಲಿ. ಮತ್ತಷ್ಟು ಓದು »

9
ಸೆಪ್ಟೆಂ

ಅಂಬೇಡ್ಕರ್ ಮತ್ತು ಮಾರ್ಕ್ ವಾದ

– ಡಾ. ಜಿ. ಭಾಸ್ಕರ ಮಯ್ಯ

ಅಂಬೇಡ್ಕರ್-ಕಾರ್ಲ್ ಮಾರ್ಕ್ಸ್ಬಹಳ ಕಾಲದಿಂದಲೂ ಬುದ್ಧಿಜೀವಿಗಳ ವಲಯದಲ್ಲಿ ಅಂಬೇಡ್ಕರ್ ಮತ್ತು ಮಾರ್ಕ್ಸ್ ವಾದದ ಬಗೆಗೆ ಚರ್ಚೆಯಿದೆ. ಮಾರ್ಕ್ಸ್ ವಾದಿ ಕಮ್ಯೂನಿಸ್ಟ್ ಪಕ್ಷದ ಬುದ್ಧಿಜೀವಿಗಳು ಅಂಬೇಡ್ಕರರ ಕೊಡುಗೆ ಮತ್ತು ಭಾರತದ ಇತಿಹಾಸದಲ್ಲಿ ಅವರ ಸ್ಥಾನಮಾನಗಳ ಕುರಿತು ಸ್ಪಷ್ಟವಾಗಿ ಚರ್ಚಿಸಿದ್ದಾರೆ. ಈ ಕುರಿತು ಬಿ.ಟಿ. ರಣದಿವೆಯವರ “ಜಾತಿ ಮತ್ತು ವರ್ಗ” ಕೃತಿಯನ್ನು ನೋಡಬಹುದು. ಆದರೆ, ಬಹಳಷ್ಟು ಇತರೇ ಬುದ್ಧಿಜೀವಿಗಳಿಗೆ ಅಂಬೇಡ್ಕರ್ ಅವರು ಮಾರ್ಕ್ಸ್ ವಾದಕ್ಕೆ ಅತಿನಿಕಟ ಎಂತಲೊ ಅಥವಾ ಅಂಬೇಡ್ಕರ್‍ರದ್ದೇ ನಿಜವಾದ ಮಾರ್ಕ್ಸ್ ವಾದ ಎಂತಲೊ ಭ್ರಮೆಯಿದೆ.

ಇತ್ತೀಚೆಗೆ ವಿಜಯಕರ್ನಾಟಕದಲ್ಲಿ ಬರಗೂರು ರಾಮಚಂದ್ರಪ್ಪನವರ “ಕೆರಳಿದ ಕರುಳ ಧ್ವನಿ ಅಂಬೇಡ್ಕರ್” ಎಂಬ ಲೇಖನ ಪ್ರಕಟವಾಗಿದೆ. ಇಲ್ಲಿಯೂ ಅಂತಹ ಒಂದು ವಿಲಕ್ಷಣ ಭ್ರಮಾಪ್ರಯತ್ನವನ್ನು ನೋಡಬಹುದು. ಈ ಕುರಿತು ಒಂದು ಚರ್ಚೆ ಪ್ರಸ್ತುತ ಲೇಖನದ ಉದ್ದೇಶ. ಮೊದಲಿಗೆ ಬರಗೂರರು ಅಂಬೇಡ್ಕರರ ಮೂರು ಹೇಳಿಕೆಗಳನ್ನು (ಅವುಗಳಲ್ಲಿ 2, 3 ಮಾರ್ಕ್ಸ್ ವಾದವನ್ನು ಎತ್ತಿ ಹಿಡಿಯುತ್ತವೆ) ಉಲ್ಲೇಖಿಸಿ ಅದರ ಮೇಲೆ ತಮ್ಮ ಚರ್ಚೆಯನ್ನು ಆರಂಭಿಸುತ್ತಾರೆ.

ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರಲ್ಲ
ಗಾಂಧೀಜಿಯವರ ಕುರಿತು ಬರಗೂರು “ಆರಂಭದಲ್ಲಿ ಜಾತಿವರ್ಣಗಳನ್ನು ತಮ್ಮದೇ ವ್ಯಾಖ್ಯಾನದ ಮೂಲಕ ಸಮರ್ಥಿಸುತ್ತಿದ್ದ ಗಾಂಧೀಜಿ ಆನಂತರ ಜಾತಿ ಮತ್ತು ವರ್ಗರಹಿತ ಸಮಾಜದ ನಿರ್ಮಾಣವನ್ನು ಪ್ರತಿಪಾದಿಸಿದರು” ಎಂದಿದ್ದಾರೆ. ಜಗತ್ತಿನ ಯಾವ ಮಾರ್ಕ್ಸ್ ವಾದಿಯೂ ಮೈಮರೆತು ಕೂಡಾ ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರು ಎಂದು ಹೇಳಿಲ್ಲ. ಏಕೆಂದರೆ ಗಾಂಧೀಜಿ ಎಂದೂ ವರ್ಗರಹಿತ ಸಮಾಜ ನಿರ್ಮಾಣದ ಕನಸು ಕಂಡಿಲ್ಲ. ಭಾರತದ ಅತ್ಯುನ್ನತ ಮಟ್ಟದ ಮಾರ್ಕ್ಸ್ ವಾದಿಗಳಾದ ಡಾಂಗೆ, ಯಶ್‍ಪಾಲ್,ಇಎಂಎಸ್ ನಂಬೂದಿರಿ ಪಾಡ್-ಎಲ್ಲರೂ ಗಾಂಧೀಜಿಯ ಒಟ್ಟು ಐತಿಹಾಸಿಕ ಪಾತ್ರ ಬಂಡವಾಳಿಗರ ವರ್ಗವನ್ನು ಹೇಗೆ ಪ್ರತಿನಿಧಿಸುತ್ತಿತ್ತು ಎಂಬುದನ್ನೇ ವಿಶದೀಕರಿಸಿದ್ದಾರೆ. ಗಾಂಧೀಜಿಯವರ ಅತ್ಯಂತ ಯಥಾರ್ಥ
ಮೌಲ್ಯಮಾಪನವನ್ನು ಇಎಂಎಸ್ ತಮ್ಮ “ಗಾಂಧಿ ಎಂಡ್ ಹಿಸ್ ಇಸಮ್” ಕೃತಿಯಲ್ಲಿ ವಿವರವಾಗಿ ದಾಖಲಿಸಿದ್ದಾರೆ. ನನಗನ್ನಿಸುವಂತೆ ಬಹಳಷ್ಟು ಬುದ್ಧಿಜೀವಿಗಳಿಗೆ “ವರ್ಗ” ಎಂಬ ವಿಶೇಷ ಪದದ ಅರ್ಥವೇ ತಿಳಿದಿಲ್ಲ! ಅದರಿಂದಾಗಿಯೇ ಇಂತಹ ಅವಾಂತರಗಳು ಉಂಟಾಗುತ್ತವೆ.

ಮತ್ತಷ್ಟು ಓದು »

11
ಆಗಸ್ಟ್

ನಾಡು-ನುಡಿ ಮರುಚಿಂತನೆ : ಬೌದ್ಧ ಮತ – ಸಂಘ ಮತ್ತು ಸಂಸಾರ

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಬುದ್ಧನಾವು ಇಂದು ಓದುತ್ತಿರುವ ಬೌದ್ಧ ಮತದ ಜನಪ್ರಿಯ ಇತಿಹಾಸದಲ್ಲಿ ಒಂದು ಸಮಸ್ಯೆಯಿದೆ. ಅದೆಂದರೆ ನಾವು ಕ್ರಿಶ್ಚಿಯಾನಿಟಿ ಹಾಗೂ ಇಸ್ಲಾಮಿನ ಮಾದರಿಗಳನ್ನಿಟ್ಟುಕೊಂಡು ಅವುಗಳ ಲಕ್ಷಣಗಳನ್ನು ಆರೋಪಿಸಿಕೊಂಡು ಬೌದ್ಧ ಮತ ಎಂಬುದನ್ನು ಊಹಿಸಿಕೊಳ್ಳುತ್ತಿರುತ್ತೇವೆ. ಅಂದರೆ ಬೌದ್ಧ ಮತವನ್ನು ಒಂದು ರಿಲಿಜನ್ನು ಎಂಬದಾಗಿ ಭಾವಿಸಿಕೊಂಡು ಪಾಶ್ಚಾತ್ಯ ವಿದ್ವಾಂಸರು ಮೊತ್ತಮೊದಲು ಅದನ್ನು ಅಧ್ಯಯನಕ್ಕೊಳಪಡಿಸಿದರು ಹಾಗೂ ಅವರನ್ನನುಸರಿಸಿ ಭಾರತೀಯರೂ ಇಂಥ ಅಧ್ಯಯನಗಳನ್ನು ಮುಂದುವರಿಸಿದರು.

ಬೌದ್ಧ ಮತದ ಕುರಿತು ನಮ್ಮ ಜನಪ್ರಿಯ ಇತಿಹಾಸದ ಪ್ರಕಾರ ಬುದ್ಧನು ಬುದ್ಧಿಸಂ ಎಂಬ ಒಂದು ಹೊಸ ಜಾತ್ಯತೀತ ಸಮಾಜದ ಹುಟ್ಟಿಗೆ ಕಾರಣನಾದನು. ಅವನು ಮಾಡಿದ ಉಪದೇಶಗಳು ಅವನ ಅನುಯಾಯಿಗಳ ಜೀವನವನ್ನು ನಿರ್ದೇಶಿಸುವ ನಿಯಮಗಳಾದವು. ಇಂಥ ನಿಯಮಗಳನ್ನು ತಿಳಿಸುವ ಬೌದ್ಧರ ಪವಿತ್ರ ಗ್ರಂಥವೇ ಪಾಳಿ ತ್ರಿಪಿಟಕ. ಇಂಥ ನಿಯಮಗಳಾದರೂ ಯಾವವು? ನಮಗೆ ಸದ್ಯಕ್ಕೆ ಗೊತ್ತಿರುವುದು ಒಂದೇ ಒಂದು ನಿಯಮ: ಅದೆಂದರೆ ಜಾತಿ ಭೇದವನ್ನು ನಿರಾಕರಿಸಿದ್ದು. ಅಂದರೆ ಬೌದ್ಧರ ಆಚರಣೆಗಳಲ್ಲಿ ಜಾತಿಯನ್ನಾಧರಿಸಿ ತರತಮಗಳನ್ನಾಗಲೀ, ವ್ಯತ್ಯಾಸವನ್ನಾಗಲೀ ಮಾಡುವಂತಿಲ್ಲ. ಬೌದ್ಧ ಸಂಘಗಳೆಂದರೆ ಚರ್ಚುಗಳಂತೇ. ಅವುಗಳ ಕೆಲಸ ಬೌದ್ಧರಲ್ಲದವರನ್ನು ಬೌದ್ಧ ಮತಕ್ಕೆ ಪರಿವರ್ತನೆ ಮಾಡುವುದು. ಬೌದ್ಧ ಮತದ ಜಾತ್ಯತೀತತೆಗೆ ಮನಸೋತು ವರ್ಣ ಸಮಾಜದಲ್ಲಿ ಸಾಮಾಜಿಕ ಸ್ಥಾನಮಾನಗಳನ್ನು ಕಳೆದುಕೊಂಡ ಜಾತಿಗಳೆಲ್ಲವೂ ಬೌದ್ಧರಾಗಿ ಸಮಾನತೆಯನ್ನು ಪಡೆದರು.ಈ ರೀತಿಯಲ್ಲಿ ಬೌದ್ಧ ಮತವು ಭಾರತ ಹಾಗೂ ಪೂರ್ವ ಏಶಿಯಾದಲ್ಲೆಲ್ಲ ಜನಪ್ರಿಯತೆಯನ್ನು ಪಡೆದು ವ್ಯಾಪಿಸಿಕೊಂಡಿತು. ಆದರೆ ಮಧ್ಯಕಾಲದಲ್ಲಿ ಭಾರತೀಯರೆಲ್ಲರೂ ಮತ್ತೆ ಬೌದ್ಧ ಮತವನ್ನು ಬಿಟ್ಟು ಹಿಂದೂಯಿಸಂಗೇ ಸೇರಿಕೊಂಡರು. ಬೌದ್ಧ ಮತವು ಭಾರತದಲ್ಲಿ ಅವನತಿ ಹೊಂದಿತು.  ಆದರೆ ಉಳಿದೆಡೆ ಉಳಿದುಕೊಂಡಿತು.
ಮತ್ತಷ್ಟು ಓದು »

3
ಜೂನ್

ಗಾಂಧಿ ಮತ್ತು ದೇವನೂರ

– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ

ಗಾಂಧಿ ಮತ್ತು ಅಂಬೇಡ್ಕರ್ಮೊನ್ನೆ ಗಾಂಧಿ ನೆನಪಾದರು. ನೆನಪಾದರು ಎನ್ನುವುದು ಅವರು ಮರೆತುಹೋಗಿರಬಹುದು ಎಂದೂ ಧ್ವನಿಸಬಹುದು. ನೆನಪು ಮತ್ತು ಮರೆತುಹೋಗುವಿಕೆ ಈ ಎರಡೂ ಸ್ಥಿತಿಗಳಲ್ಲಿ ಗಾಂಧಿ ಜೀವಂತವಾಗಿದ್ದು ನಮ್ಮನ್ನು ಕಾಡುತ್ತಲೇ ಇರುವರು. ಇದು ಗಾಂಧಿಯಂಥ ಗಾಂಧಿಯಿಂದ ಮಾತ್ರ ಸಾಧ್ಯವಾಗುವಂತಹದ್ದು. ಏಕೆಂದರೆ ಗಾಂಧಿ ಸೂಟು ಬೂಟು ಧರಿಸಿ, ಪಂಚೆ ಉಟ್ಟುಕೊಂಡು ಮತ್ತು ಲಂಗೋಟಿ ಸಿಕ್ಕಿಸಿಕೊಂಡು ಭಾರತೀಯ ಜೀವನಕ್ರಮದ ಎಲ್ಲ ವರ್ಗಗಳನ್ನು ತಮ್ಮೊಳಗೆ ಅಂತರ್ಗತಗೊಳಿಸಿಕೊಂಡವರು. ಒಬ್ಬನೇ ವ್ಯಕ್ತಿ ತನ್ನ ಜೀವಿತಾವಧಿಯಲ್ಲಿ ಭಾರತೀಯ ಜೀವನ ಕ್ರಮದ ಎಲ್ಲ ವರ್ಗಗಳನ್ನು ಪ್ರತಿನಿಧಿಸುವುದು ಅದು ಗಾಂಧೀಜಿಯಂಥ ವ್ಯಕ್ತಿಯಿಂದ ಮಾತ್ರ ಸಾಧ್ಯವಾಗುವ ಬಹುದೊಡ್ಡ ಸಾಮಾಜಿಕ ಪಲ್ಲಟ.

ಇನ್ನು ಗಾಂಧಿ ಏಕೆ ನೆನಪಾದರು ಎನ್ನುವ ವಿಷಯಕ್ಕೆ ಬರುತ್ತೇನೆ. ಆವತ್ತು ದಲಿತ ಸಂಘರ್ಷ ಸಮಿತಿಯವರ ಮೆರವಣಿಗೆ ರಸ್ತೆಯ ಮೇಲೆ ನಡೆದು ಹೋಗುತ್ತಿತ್ತು. ಬುದ್ಧ, ಬಸವ, ಅಂಬೇಡ್ಕರ್ ಎನ್ನುವ ಜಯಘೋಷ ಅಲ್ಲಿ ಮೊಳಗುತ್ತಿತ್ತು. ಜೊತೆಗೆ ಬುದ್ಧ-ಬಸವ-ಅಂಬೇಡ್ಕರರ ಆಳೆತ್ತರದ ಭಾವಚಿತ್ರಗಳು ರಾರಾಜಿಸುತ್ತಿದ್ದವು. ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಶತಮಾನಗಳಿಂದ ಮನೆಮಾಡಿಕೊಂಡಿದ್ದ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಮತ್ತು ಹಿಂದುಳಿದ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಈ ಮೂವರು ಮಾಡಿದ ಪ್ರಯತ್ನ ಮತ್ತು ಹೋರಾಟ ಅದು ಚರಿತ್ರೆಯ ಪುಟಗಳಲ್ಲಿ ಸದಾಕಾಲ ಅಳಿಸಲಾಗದ ಐತಿಹಾಸಿಕ ಪ್ರಯತ್ನವಾಗಿ ದಾಖಲಾಗಿ ಉಳಿದಿದೆ. ಆದರೆ ಆ ಸಂದರ್ಭ ಅಲ್ಲಿನ ಭಾವಚಿತ್ರಗಳಲ್ಲಿ ಮತ್ತು ಅವರು ಮೊಳಗಿಸುತ್ತಿದ್ದ ಜಯಘೋಷಗಳಲ್ಲಿ ಗಾಂಧಿ ಅನುಪಸ್ಥಿತಿ ನನಗೆ ಬಹುಮುಖ್ಯ ಕೊರತೆಯಾಗಿ ಕಾಣಿಸಿತು.

ಮತ್ತಷ್ಟು ಓದು »

9
ಆಕ್ಟೋ

ಇತಿಹಾಸಕಾರರಿ೦ದ ಮರೆಯಾದ ಸಸ್ಯಶಾಸ್ತ್ರದ ಪಿತಾಮಹ, ನಮ್ಮೀ ಭೋಧಿಧರ್ಮ……

– ಶಂಕರ್ ನಾರಾಯಣ್

Bodhi Dharma N Oshoಸ್ವಾಮೀ ವಿವೇಕಾನ೦ದರು, ಚಿಕಾಗೋದಲ್ಲಿದ್ದ ಸಮಯ. ಅವರನ್ನು ಹಣಿಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿತ್ತು. ಮೇಲಿ೦ದ ಮೇಲೆ, ಪ್ರಶ್ನೆಗಳು ತೂರಿಬರುತ್ತಿದ್ದವು. ಅದೊ೦ದು ದಿನ ಒಬ್ಬ ಅಮೇರಿಕಾದ ಪ್ರಜೆಯೊಬ್ಬ, “ಬುದ್ಧನೇಕೆ ಧರ್ಮ ಪ್ರಸರಣೆಗಾಗಿ ಯುರೋಪು, ಅಮೇರಿಕಾಗಳಿಗೆ ಬರಲಿಲ್ಲ..!?” ಎ೦ದು ಕೇಳುತ್ತಾನೆ. ಅದಕ್ಕೆ, ವಿವೇಕಾನ೦ದರು, “ಬುದ್ಧನ ಕಾಲದಲ್ಲಿ ಯುರೋಪ್ ಎಲ್ಲಿತ್ತು..? ನಿನ್ನ ಅಮೇರಿಕಾ ಎಲ್ಲಿತ್ತು..? ಎನ್ನುತ್ತಾರೆ. ಹೌದು. ಚೀನಾವೂ ಸೇರಿ, ಪಾಶ್ಚಿಮಾತ್ಯ ದೇಶಗಳು ಕಣ್ಣುಬಿಡುವ ಮೊದಲೇ ಭಾರತ ಸುಸ೦ಸ್ಕೃತ ದೇಶವಾಗಿತ್ತು. ಭಾರತೀಯರಿಗೆ, ಚಿನ್ನ-ಬೆಳ್ಳಿಗಳ ಪರಿಚಯವಿತ್ತು. ಚಿನ್ನದ ಆಭರಣಗಳನ್ನು ಇಲ್ಲಿನ ಮಹಿಳೆಯರು ತೊಡುತ್ತಿದ್ದರು. ಇದಕ್ಕೆ ಉದಾಹರಣೆ ಎ೦ದರೆ, ಹರಪ್ಪ ಮತ್ತು ಮೊಹೆ೦ಜದಾರೋ ನಗರಗಳು. ನಾಗರೀಕತೆಗಳು. ಪಾಶ್ಚಿಮಾತ್ಯ ದೇಶೀಯರು, ಮರದಲ್ಲಿ ವಾಸಿಸುವ ಸ೦ಧರ್ಭದಲ್ಲಿ, ಒ೦ದು ವ್ಯವಸ್ಥಿತ ನಗರ ಭಾರತದಲ್ಲಿತ್ತು. ಖಗೋಳ ವಿಜ್ನಾನದಲ್ಲಿ ಆರ್ಯಭಟನೂ, ಆಯುರ್ವೇದದಲ್ಲಿ ಚರಕನೂ, ಶಸ್ತ್ರಚಿಕಿತ್ಸೆಯಲ್ಲಿ ಸುಶ್ರುತನೂ, ಅರ್ಥಶಾಸ್ತ್ರದಲ್ಲಿ ಚಾಣಕ್ಯನೂ ಹೀಗೆ ಒ೦ದೊ೦ದು ವಿಭಾಗದಲ್ಲಿ ಒಬ್ಬೊಬ್ಬರು ಪ್ರಖ೦ಡ ಜ್ನಾನಿಗಳಾಗಿದ್ದರು. ಭಾರತ ಬಿಟ್ಟರೆ, ಚೀನಾದಲ್ಲೂ ನಾಗರೀಕತೆಗಳು ಹುಟ್ಟಿಕೊ೦ಡಿದ್ದವು. ಆದರೆ, ಅವುಗಳನ್ನು ಹರಪ್ಪ, ಮೊಹೆ೦ಜದಾರೋಗಳೊ೦ದೆಗೆ ಹೋಲಿಸಲಾಗದು..

ಆದರೆ,

ಮತ್ತಷ್ಟು ಓದು »

17
ಜೂನ್

ಬೌದ್ದರನ್ನು ಓಡಿಸಲು ಶಂಕರರೇನು ಅರಸರಾಗಿದ್ದರೇ?

– ಸಂತೋಶ್ ತಮ್ಮಯ್ಯ

Shankaraacharya1ಕೆಲವರ ಮನಸ್ಸೇ ವಿಚಿತ್ರವಾದುದು. ಅವರದ್ದು ವಿನಾಕಾರಣ ನಿರಾಕರಣವಾದ. ಇದ್ದುದನ್ನು ಇಲ್ಲವೆನ್ನುವುದು, ಇಲ್ಲದ್ದನ್ನು  ಇದೆ ಎನ್ನುವುದು , ವಿನಾಕಾರಣ ಖಂಡಿಸುವುದು, ವಿಪರೀತವನ್ನು ಮಂಡಿಸುವುದು, ವಿಚಿತ್ರ ಸ್ವಭಾವಗಳು. ಉದಾಹರಣೆಗೆ ಎಲ್ಲರಿಗೂ ಇಷ್ಟವಾಗುವ ಸಿನೆಮಾವನ್ನು ಕೆಲವರು ವಿನಾಕಾರಣ ಬಯ್ಯುತ್ತಾರಲ್ಲಾ ಅಂಥವರು.  ಆ ಮನಸ್ಸನ್ನು  ಸಿನಿಕವೆನ್ನಿ, ಪೂರ್ವಗ್ರಹವೆನ್ನಿ, ಅಬದ್ಧವೆನ್ನಿ, ಅಸ್ವಸ್ಥವೆನ್ನಿ ಎಲ್ಲವೂ ಸರಿಯೇ. ನಮ್ಮ ಸಾಹಿತ್ಯಲೋಕದಲ್ಲಿ ಅಂಥವರನೇಕರು ಸಿಗುತ್ತಾರೆ. ಅವರೆಲ್ಲರೂ   ಸಂದರ್ಭ ಸಿಕ್ಕಾಗಲೆಲ್ಲಾ ಹೀಗೆ ಹೇಳಿಕೆಗಳನ್ನು ಕೊಡುತ್ತಿರುತ್ತಾರೆ. ಭೈರಪ್ಪನವರು ಬರೆದಾಗ, ನ್ಯಾಯನೀತಿಯನ್ನು ಇನ್ಯಾರೋ ಎತ್ತಿ ಹಿಡಿದಾಗ, ಚಿದಾನಂದ ಮೂರ್ತಿಗಳು ಏನನ್ನೋ ಶೋಧಿಸಿದಾಗಲೆಲ್ಲಾ   ಅದಕ್ಕೆ ಸಂಪೂರ್ಣ ನೇತ್ಯಾತ್ಮಕವಾದುದನ್ನು ಹಿಡಿದು ಹೇಳಿಕೆಗಳನ್ನು ನೀಡಲಾರಂಭಿಸುತ್ತಾರೆ. ಅದಕ್ಕೆ ಕೆಲವು ಪತ್ರಕರ್ತರು ಕನ್ನಡದ ಮನಸ್ಸು ಎಂಬ ಹೆಸರು ಕೊಟ್ಟುಬಿಡುತ್ತಾರೆ. ಇಂಥ ಸತ್ಯದ ಆವರಣವನ್ನೇ ಕನ್ನಡದ ಮನಸ್ಸು ಎನ್ನುವುದಾದರೆ ಅದು ಕನ್ನಡಕ್ಕೆ ಮುಸುಕಿರುವ ಆವರಣ ಎನ್ನದೆ  ವಿಧಿ ಇಲ್ಲ. ಇಂಥವರ ಗುಂಪಿಗೆ ಈಗ ಮತ್ತೊಬ್ಬರು ಸೇರಿದ್ದಾರೆ.

ಯಾರೋ ಕೇಶವ ಮೂರ್ತಿಯಂತೆ. ಇದುವರೆಗೆ ಅವರ ಮುಖ ನೋಡಿದವರಿಲ್ಲ. ಸಾಹಿತ್ಯ ಓದಿದವರಿಲಿಲ್ಲ. ಈ ಮಧ್ಯೆ ಕಾಂಗ್ರೆಸ್ ಆಡಳಿತಕ್ಕೆ ಬಂತು. ಗುರುತಿಸಿಕೊಳ್ಳುವುದು ಲಾಭದ ದೃಷ್ಟಿಯಿಂದ ಉತ್ತಮ ಎನಿಸಿತ್ತೋ ಏನೋ ಹೇಳಿಕೆಯೊಂದನ್ನು ಕೊಟ್ಟರು.”ನರೇಂದ್ರ  ಮೋದಿಗಿಂತ ಶಂಕರಾಚಾರ್ಯರು ಹೆಚ್ಚು ಕ್ರೂರಿ” ಎಂದರು. ನರೇಂದ್ರಮೋದಿಯವರನ್ನು ನವನವೀನವಾಗಿ ಟೀಕಿಸುವ ಜನರಿಗೆ ಒಮ್ಮೆ ಈ ಮಾದರಿಯ ಟೀಕೆ ಸ್ವಜನಶೀಲವಾಗಿ ಕಂಡಿರಬೇಕು. ಏಕೆಂದರೆ ಅಲ್ಲಿ ಮೋದಿಯೂ ಇದ್ದರೂ, ಶಂಕರಾಚಾರ್ಯರೂ ಇದ್ದರು. ಇತಿಹಾಸವನ್ನೂ ಬಯ್ದಂತಾಯಿತು. ವರ್ತಮಾನವನ್ನೂ ತೆಗಳಿದಂತಾಯಿತು. ವೋಟ್ ಬ್ಯಾಂಕ್‌ ರಾಜಕಾರಣಕ್ಕಂತೂ ಇಂಥ ಹೇಳಿಕೆಗಳ ಆವಶ್ಯಕತೆ ತುಂಬಾ ಇತ್ತು. ಖಂಡಿಸುವ ಈ ಹೇಳಿಕೆಗಳಿಗಾಗಿ ಅವರು ಸಾಕಷ್ಟು  ಶ್ರಮವನ್ನೇ ಪಟ್ಟಿರಬೇಕು.
ಬಹುಶಃ ಕೇಶವಮೂರ್ತಿಯವರಿಗೆ ಈ ಸಂಗತಿಗಳು ತಿಳಿದಿರಲಿಕ್ಕಿಲ್ಲ.

೧೯೮೪ರ ಸಿಕ್ಖ್ ನರಮೇಧದಲ್ಲಿ ಸತ್ತವರು ೨೭೩೩ ಎಂಬುದು ಸರಕಾರದ ದಾಖಲೆ. ಆದರೆ ದಂಗೆಯಲ್ಲಿ  ೨೫,೦೦೦ಕ್ಕೂ ಹೆಚ್ಚು ಜನರು ಸತ್ತರು ಮತ್ತು ಗಾಯಗೊಂಡಿದ್ದರು. ನೂರಾರು ಸಿಕ್ಖ್ ಮಹಿಳೆಯರ ಮೇಲೆ ಅತ್ಯಾಚಾರ ನಡೆಯಿತು. ಸುಮಾರು ೩ ಲಕ್ಷ ಸಿಕ್ಖರು ಮನೆಮಾರುಗಳನ್ನು ಬಿಟ್ಟು ಓಡಿ ಹೋದರು ಮತ್ತು ತಲೆ ಮರೆಸಿಕೊಂಡರು. ನೂರಾರು ಗುರುದ್ವಾರಗಳನ್ನು ಕೆಡವಲಾಯಿತು ಮತ್ತು ಧರ್ಮಗ್ರಂಥವನ್ನು ಸುಡಲಾಯಿತು.  ದೇಶ ಕಾಯುತ್ತಿದ್ದ ೩೦೦ ಜನ ಸಿಕ್ಖ್ ಯೋಧರನ್ನ್ನು  ಕೊಲ್ಲಲಾಯಿತು. ಬೊಕಾರೋ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ೧೨೦ ಜನ  ಸಿಕ್ಖರನ್ನು  ಸಾಮೂಹಿಕವಾಗಿ  ದಹಿಸಲಾಯಿತು. ಖಾನ್‌ಪುರದಲ್ಲಿ ೧೩ ವರ್ಷದ ಸಿಕ್ಖ್ ಬಾಲಕನನ್ನು  ಗ್ಯಾಸ್ ಸ್ಟವ್‌ನಲ್ಲೇ ಕೋಳಿ ಸುಡುವಂತೆ ಸುಡಲಾಯಿತು. ಅಗರ್ತಲಾದಲ್ಲಿ ವಾಸಿಸುತ್ತಿದ್ದ ೩೦ ಸಿಕ್ಖ್ ಕುಟುಂಬಗಳು ಜೀವರಕ್ಷಣೆಗಾಗಿ ಪೊಲೀಸ್ ಠಾಣೆಯ  ಮೆಟ್ಟಲೇರಿದರು. ಪೊಲೀಸರೇ ಅವರೆಲ್ಲರನ್ನು ಸಜೀವವಾಗಿ ಸುಟ್ಟರು. ಮಧ್ಯಪ್ರದೇಶದ ಜಬಲ್‌ಪುರದಲ್ಲಿ ೧೨ ಜನ ಸಿಕ್ಖರನ್ನು ರೈಲು ನಿಲ್ದಾಣದ  ಪ್ಲಾಟ್‌ಫಾರ್ಮ್‌ನಲ್ಲೇ ನೇಣು ಹಾಕಿ ಕೊಲ್ಲಲಾಯಿತು.

ಮತ್ತಷ್ಟು ಓದು »