ವಿಷಯದ ವಿವರಗಳಿಗೆ ದಾಟಿರಿ

Posts tagged ‘ಭಕ್ತ’

23
ಸೆಪ್ಟೆಂ

ವಸಾಹತುಪ್ರಜ್ಞೆಯ ಪ್ರಾಯೋಜಿತ ಪಂದ್ಯಾವಳಿಗಳು – ಭಾಗ ೨

– ವಿನಾಯಕ ಹಂಪಿಹೊಳಿ

ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೧

ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೨

Colonial Consciousnessಇದೇ ಪ್ರಶ್ನೆಯು ಪುರೋಹಿತ ಮತ್ತು ಭಕ್ತನ ನಡುವಿನ ಯುದ್ಧಕ್ಕೂ ಅನ್ವಯವಾಗುತ್ತದೆ. ಹಾಗೊಂದು ವೇಳೆ ಅಷ್ಟೊಂದು ಅಸಹನೆ/ಶೋಷಣೆಗಳು ಇದ್ದರೆ ಜಾತಿಜಾತಿಗಳ ನಡುವೆ ಯುದ್ಧವೇ ಜರುಗಿ ಎಲ್ಲ ಜಾತಿಗಳೂ ನಾಶವಾಗಬೇಕಿತ್ತು. ಆದರೆ ಎಲ್ಲ ಜಾತಿಗಳೂ ಒಂದೇ ಹಳ್ಳಿಯಲ್ಲಿ ತಮ್ಮಷ್ಟಕ್ಕೆ ತಾವಿರುವದು ಏಕೆ? ಈ ಎಲ್ಲ ಪ್ರಕ್ರಿಯೆಗಳನ್ನು ಈ ಸಿದ್ಧಾಂತವು ವಿವರಿಸಿಲ್ಲ.

ಆದರೂ ಬ್ರಿಟೀಷರು ನೀಡಿದ ವಸಾಹತುಪ್ರಜ್ಞೆಯನ್ನು ಶಿರಸಾ ಹೊತ್ತುಕೊಂಡು ಅವರ ಸಿದ್ಧಾಂತಗಳನ್ನು ಒಪ್ಪಿಕೊಂಡಿದ್ದೇವೆ. ಜಾತಿಗೊಂದು, ಕೇರಿಗೊಂದು, ಊರಿಗೊಂದು ಭಾಷಾವೈವಿಧ್ಯತೆಯಿರುವಲ್ಲಿ ಯೂರೋಪಿನಂತೆ ಭಾಷಾವಾರು ಪ್ರಾಂತ್ಯಗಳನ್ನು ಮಾಡಿಕೊಂಡಿದ್ದೇವೆ. ಇಡೀ ಸಹಸ್ರಮಾನದಲ್ಲಿ ಎಂದೂ ನಡೆಯದ ಮಹಾಪ್ರಾಣಗಳ ಅಗತ್ಯತೆಯ ಕುರಿತ ಚರ್ಚೆಗಳು ಈಗೀಗ ನಡೆಯುತ್ತಿವೆ. ಕನ್ನಡಿಗರಿಗೆ ಎಂದಿಗೂ ವಿರುದ್ಧವಾಗಿ ಕಾಣದ, ಕರ್ನಾಟಕದ ೫ ವೀರಶೈವ ಪೀಠಗಳು ಪ್ರಗತಿಪರರ ದೃಷ್ಟಿಯಲ್ಲಿ, ಏಕಾಏಕೀ ಶರಣ ಚಳುವಳಿಗೆ ವಿರುದ್ಧವಾದ ಬೆಳವಣಿಗೆಗಳಾಗಿಬಿಟ್ಟಿವೆ. ಕರ್ನಾಟಕ ಸಂಗೀತವನ್ನು ವಿರೋಧಿಸುವ ಅಂಶಗಳು ಜಾನಪದ ಸಂಗೀತದಲ್ಲಿ ಎಲ್ಲೆಲ್ಲಿ ಕಂಡುಬಂದಿವೆ ಎಂಬ ಚಿತ್ರವಿಚಿತ್ರ ಸಂಶೋಧನೆಗಳು ಬರುತ್ತಿವೆ. ಆರ್ಯ-ದ್ರಾವಿಡ ವಾದದಲ್ಲಿನ ದೋಷಗಳ ಕುರಿತು ಚರ್ಚೆ ಶುರುಮಾಡಿದರೂನೂ, ಅದು ಪುರೋಹಿತಶಾಹಿಯ ಹುನ್ನಾರವಾಗಿಬಿಡುತ್ತದೆ.

ಇವೆಲ್ಲದಕ್ಕೂ ಮುಖ್ಯವಾಗಿ ಪಾಶ್ಚಿಮಾತ್ಯರು ನಮ್ಮಲ್ಲಿ ಯಾವೆಲ್ಲ ವೈರುಧ್ಯಗಳನ್ನು ಕಂಡರೋ, ಅವುಗಳನ್ನು ವಿವರಿಸಲು ಆಧರಿಸಿದ ಆರ್ಯ-ದ್ರಾವಿಡ ಸಿದ್ಧಾಂತದ ಬುಡಕ್ಕೇ ಇಂದು ವಿಜ್ಞಾನ ಕೊಡಲಿ ಪೆಟ್ಟನ್ನು ನೀಡಿದೆ. ಜೈವಿಕವಾಗಿ, ಭೌತಿಕವಾಗಿ ಇಂದು ಸಿಗುವ ಎಲ್ಲ ವೈಜ್ಞಾನಿಕ ಸಾಕ್ಷಿಗಳು ಈ ಸಿದ್ಧಾಂತವನ್ನು ಕಸದ ಬುಟ್ಟಿಗೆ ಎಸೆದಿವೆ. ಸರಸ್ವತಿ ನದಿಯ ಅಸ್ತಿತ್ವ, ದ್ವಾರಕೆಯ ಅವಶೇಷಗಳು, ಮುಂತಾದ ಭೌತಿಕ ಸಾಕ್ಷಿಗಳು ಒಂದೆಡೆಯಾದರೆ, ಡಿ.ಎನ್.ಎ. ಆಧಾರಿತ ವಲಸೆಯ ವರದಿಗಳನ್ನು ಹೇಳುವ ಜೈವಿಕ ಸಾಕ್ಷಿಗಳು ಇನ್ನೊಂದೆಡೆ. ಹೀಗಾಗಿ ವೈಜ್ಞಾನಿಕವಾಗಿ ಸಾಬೀತಾಗದ ಈ ಆರ್ಯರ ವಲಸೆಯಾಗಲೀ, ಅದರ ಆಧಾರದ ಮೇಲೆ ಹೇಳಲಾಗುವ ಅನುಭವಕ್ಕೇ ಬಾರದ ಸಾಮಾಜಿಕ ವೈರುಧ್ಯ, ಚಳುವಳಿಗಳು ಶಾಲೆಗಳಲ್ಲಿ ಕಲಿಯಲೂ ಯೋಗ್ಯವಲ್ಲ. ಕಲಿಸಲೂ ಯೋಗ್ಯವಲ್ಲ.

ಮತ್ತಷ್ಟು ಓದು »

22
ಸೆಪ್ಟೆಂ

ವಸಾಹತುಪ್ರಜ್ಞೆಯ ಪ್ರಾಯೋಜಿತ ಪಂದ್ಯಾವಳಿಗಳು – ಭಾಗ ೧

– ವಿನಾಯಕ ಹಂಪಿಹೊಳಿ

ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೧

Colonial Consciousnessಕ್ರಿ.ಶ. ೧೪೦೦ರ ತನಕ ಬೈಬಲ್ಲಿನ ಹಳೇ ಒಡಂಬಡಿಕೆ ಮತ್ತು ಹೊಸ ಒಡಂಬಡಿಕೆಗಳು ಹಿಬ್ರೂ, ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಇದ್ದವು. ಆಕ್ಸಫರ್ಡ್ ಪ್ರೊಫೆಸರ್ ಆಗಿದ್ದ ಜಾನ್ ವಿಕ್ಲಿಫ್ ಎಂಬಾತನು ೧೩೮೦ರಲ್ಲಿ ಮೊದಲ ಬಾರಿಗೆ ಬೈಬಲ್ಲಿನ ಇಂಗ್ಲೀಷ್ ಭಾಷಾಂತರವನ್ನು ಮಾಡಿದ್ದ ಎಂದು ಹೇಳಬಹುದು. ಇದಕ್ಕಿಂತ ಹಿಂದೆಯೂ ಭಾಷಾಂತರಗಳಾಗಿರಬಹುದಾದರೂ ಐತಿಹಾಸಿಕ ಸಾಕ್ಷ್ಯವಾಗಿ ಇದೊಂದು ದೊರಕುತ್ತದೆ. ಇದು ಪೋಪನ ಕೋಪಕ್ಕೆ ಗುರಿಯಾಗಿ, ವಿಕ್ಲಿಫ್ ತೀರಿಕೊಂಡಾಗ ಆತನ ಎಲುಬುಗಳನ್ನು ಪುಡಿ ಮಾಡಿಸಿ ಪೋಪ್ ನದಿಯಲ್ಲಿ ಹಾಕಿಸಿದ್ದ ಎಂದು ಕಥೆ.

ವಿಕ್ಲಿಫ್ ನಂತರ ಆತನ ಅನುಯಾಯಿಯಾದ ಜಾನ್ ಹಸ್ ಎಂಬಾತನು ವಿಕ್ಲಿಫ್ ಯೋಚನೆಗಳನ್ನು ಇನ್ನಷ್ಟು ಪ್ರಚುರಪಡಿಸಿದನು. ಪ್ರತಿಯೋರ್ವನಿಗೂ ಆತನ ಮಾತೃಭಾಷೆಯಲ್ಲಿ ಬೈಬಲ್ಲನ್ನು ಓದಲು ಅವಕಾಶ ನೀಡಬೇಕು ಎಂಬುದು ಆತನ ಆಗ್ರಹವಾಗಿತ್ತು. ಲ್ಯಾಟಿನ್ನೇತರ ಭಾಷೆಯಲ್ಲಿ ಬೈಬಲ್ಲಿನ ಪ್ರತಿಯನ್ನು ಹೊಂದಿದ್ದರೆ ಮರಣದಂಡನೆ ವಿಧಿಸುವದಾಗಿ ಹೇಳಿದ್ದ ಚರ್ಚಿನ ನಿರ್ಧಾರವನ್ನು ವಿರೋಧಿಸಲು ಜನರಿಗೆ ಕರೆಯಿತ್ತಿದ್ದನು. ೧೪೧೫ರಲ್ಲಿ ಆತನನ್ನು ವಿಕ್ಲಿಫ್ ನ ಇಂಗ್ಲೀಷ್ ಬೈಬಲ್ಲಿನ ಪ್ರತಿಗಳೊಂದಿಗೆ ಜೀವಂತವಾಗಿ ಸುಡಲಾಯಿತು. ಆತನ ಕೊನೆಯ ಮಾತುಗಳು “ಯಾರ ಸುಧಾರಣೆಯ ಕರೆಯನ್ನು ತುಳಿಯಲಾಗದೋ ಅಂತ ಮನುಷ್ಯನೊಬ್ಬನನ್ನು ದೇವನು ಬೆಳೆಸುವನು” ಎಂದು ಪ್ರತೀತಿ.

೧೪೫೦ರಲ್ಲಿ ಪ್ರಿಂಟಿಂಗ್ ಪ್ರೆಸ್ ಕಂಡುಹಿಡಿದ ಜೊಹನ್ ಗುಂಟನ್ಬರ್ಗ್ ಲ್ಯಾಟಿನ್ನಿನಲ್ಲಿದ್ದ ಬೈಬಲ್ಲಿನ ಮೊದಲ ಪ್ರತಿಯನ್ನು ತಂದನು. ಇದು ಪ್ರೊಟೆಸ್ಟಂಟ್ ಸುಧಾರಣೆಗೆ ಮೊದಲ ಅಡಿಗಲ್ಲಾಯಿತು. ನಂತರ ಎರಾಸ್ಮಸ್ ಅದರಲ್ಲಿನ ತಪ್ಪುಗಳನ್ನು ಸರಿಪಡಿಸಿ ಇನ್ನೊಂದು ಮುದ್ರಿತ ಪ್ರತಿಯೊಂದನ್ನು ತಂದನು. ೧೪೯೦ರಲ್ಲಿ ಥೊಮಸ್ ಲಿನೇಕರ್ ಬೈಬಲ್ಲಿನ ಭಾಷಾಂತರದ ಪರವಾಗಿ ವಾದಿಸಿದನು. ೧೪೯೬ರಲ್ಲಿ ಜಾನ್ ಕೋಲೆಟ್ ಎಂಬ ಇನ್ನೊಬ್ಬ ಆಕ್ಸಫರ್ಡ್ ಪ್ರೊಫೆಸರ್ ಹೊಸ ಒಡಂಬಡಿಕೆಯನ್ನು ಇಂಗ್ಲೀಷಿನಲ್ಲಿ ಭಾಷಾಂತರಿಸಲು ಯತ್ನಿಸಲು ಚರ್ಚು ಅದನ್ನು ವಿರೋಧಿಸಿತು. ಅಷ್ಟರೊಳಗಾಗಲೇ ವಿಲಿಯಮ್ ಟಿಂಡೇಲ್ ಎಂಬ ಸುಧಾರಣಾ ಚಳುವಳಿಗಾರರ ಮುಖಂಡ ಮೊದಲ ಬಾರಿಗೆ ಹೊಸ ಒಡಂಬಡಿಕೆಯನ್ನು ಇಂಗ್ಲೀಷಿನಲ್ಲಿ ಮುದ್ರಿಸಿದನು. ಹೀಗಾಗಿ ಆತನನ್ನು ಇಂಗ್ಲೀಷ್ ಭಾಷೆಯ ಆರ್ಕಿಟೆಕ್ಟ್ ಎಂದೂ ಕರೆಯಲಾಗುತ್ತದೆ. ಈ ಎಲ್ಲ ಬೆಳವಣಿಗೆಗಳನ್ನು ಚರ್ಚ್ ವಿರೋಧಿಸುತ್ತಲೇ ಬಂದಿತು.

ಮತ್ತಷ್ಟು ಓದು »