ಮೋದಿರಾಗಾ ಸರಿಸಿ ಮತ ಹಾಕಲು ಮತ್ತೊಂದು ಹೆಸರು ಹೇಳುವಿರಾ?
– ಗೋಪಾಲಕೃಷ್ಣ
ಚಿಕ್ಕಮಗಳೂರು
ಹಾಗೆ ಒಮ್ಮೆ ಕಲ್ಪಿಸಿಕೊಳ್ಳಿ; 2014ರಲ್ಲಿ ನರೇಂದ್ರ ಮೋದಿಯವರಿಗೆ ಬಹುಮತ ಸಿಗದೇ ಇದ್ದಿದ್ದರೆ, 18 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ, 16 ಸದಸ್ಯರನ್ನು ಹೊಂದಿದ್ದ ಚಂದ್ರಬಾಬು ನಾಯ್ಡು, 37 ಸ್ಥಾನ ಹೊಂದಿದ್ದ ಎಐಎಡಿಎಂಕೆ ಹೇಗೆಗೆಲ್ಲಾ ‘ಪೊಲಿಟಿಕಲ್ ಬ್ಲಾಕ್ಮೇಲ್’ ಮಾಡಬಹುದಿತ್ತು! ಅಂದು ಎನ್ಡಿಎ ಮೈತ್ರಿಕೂಟದ 336 ಸದಸ್ಯರಲ್ಲಿ 282 ಸ್ಥಾನಗಳೊಂದಿಗೆ ಬಿಜೆಪಿ ಸ್ಪಷ್ಟ ಬಹುಮತ ಪಡೆದಿತ್ತು. ಬಿಜೆಪಿ ಎನ್ನುವುದಕ್ಕಿಂತಲೂ ನರೇಂದ್ರ ಮೋದಿಯವರಿಗಾಗಿ ದೇಶ ನೀಡಿದ್ದ ಸ್ಪಷ್ಟ ಜನಾದೇಶವದು. ಹೀಗಿದ್ದರೂ ಶಿವಸೇನೆ ಪ್ರತಿಬಾರಿಯೂ ಕಿತಾಪತಿ ಮಾಡುತ್ತಲೇ ಬರುತ್ತಿದೆ. ಚಂದ್ರಬಾಬು ನಾಯ್ಡು ಅತ್ತಲಿಂದ ಇತ್ತ ಇತ್ತಲಿಂದ ಅತ್ತ ಜಿಗಿಯುತ್ತಲೇ ಇದ್ದಾರೆ. ಇನ್ನು ಜಯಲಲಿತಾ ಬದುಕಿದ್ದಿದ್ದರೆ ಅದು ಇನ್ನೊಂದು ರೀತಿಯ ರಾಜಕಾರಣವಾಗುತ್ತಿತ್ತು ಬಿಡಿ. ಮತ್ತಷ್ಟು ಓದು
ದೇವರ ನಾಡಿನಲ್ಲಿ ನಾ ಕಂಡ ಮನುಷ್ಯರು
– ಅನಿಲ್ ಚಳಗೇರಿ
ದೇವರ ನಾಡಿನಲ್ಲಿ ನಾ ಕಂಡ ಮನುಷ್ಯರು – 1
ಕೈಯಲ್ಲಿ ಉದ್ದನೇಯ ಕೋಲು, ಹೆಗಲಿಗೊಂದು ಚೀಲ, ಕಾಲಲ್ಲಿ ಸ್ಪೋರ್ಟ್ಸ್ ಶೂಸ್ ಹಾಕಿಕೊಂಡ ಹಿರಿಯರೊಬ್ಬರು ಆಗಲೇ ನಮ್ಮ ಜೊತೆ 23 ಕಿಲೋ ಮೀಟರಿನಿಂದ ನಡೆದುಕೊಂಡು ಬಂದಿದ್ದರು (ಹತ್ತಾರು ಸಾವಿರ ಕಾರ್ಯಕರ್ತರ ಮಧ್ಯೆ ಅದೆಲ್ಲೋ ಹತ್ತಿಪತ್ತನೇ ಸಾಲಿನಲ್ಲಿ ಯಾರಿಗೂ ಕಾಣದೆ), ನಾವು ಅವರನ್ನು ಕುತೂಹಲದಿಂದ ನೋಡುತ್ತಿರುವದನ್ನು ಗಮನಿಸಿದ ಅವರು, ತಮ್ಮನ್ನು ತಾವು ಪರಿಚಯಿಸಿಕೊಂಡರು. ” I am captain Pillai, retired army officer, I am 71 years young and I have been walking from the day one and covered 150 kms today” ಅಂತ ಹೇಳಿದರು. ನಿಮಗೆ ಪ್ರೇರಣೆಯೇನು ? ನಿಮ್ಮ ಅಥವಾ ಮೇಲೆ ಏನಾದ್ರೂ ಅಟ್ಯಾಕ್ ಆಗಿತ್ತಾ?, ಅಂತ ಕೇಳಿದರೆ, “ನಾನು ದೇಶಕ್ಕೋಸ್ಕರ ದುಡಿದವನು, ನನಗೆ ಕಳ್ಳ ಕಮ್ಯುನಿಸ್ಟರ ನರಿ ಬುದ್ಧಿಯ ಬಗ್ಗೆ ತುಂಬಾ ಚೆನ್ನಾಗಿ ಗೊತ್ತು, ” ನನ್ನ ಕೊನೆಯ ಉಸಿರಿರುವವರೆಗೆ ಅವರನ್ನು ವಿರೋಧಿಸುವೆ” ಅಂದಾಗಲೇ ನೆನಪಾಗಿದ್ದು ಅಕ್ಷಯ್ ಕುಮಾರ್ ನಟಿಸಿದ ” ಹಾಲಿಡೇ” ಚಿತ್ರ. “a soldier never takes rest” ಶೀರ್ಷಿಕೆ…. ಮುಂದೆರಡು ದಿನ ಎಪ್ಪತ್ತರ ಹರೆಯದ ಆ ಮಾಜಿ ಸೈನಿಕನ ದಿಟ್ಟ ಹೆಜ್ಜೆಗಳೇ ನಮ್ಮೆಲ್ಲರ ನಡಿಗೆಗೆ ಪ್ರೇರಣೆಯಾಯಿತು … ಮತ್ತಷ್ಟು ಓದು