ವಿಷಯದ ವಿವರಗಳಿಗೆ ದಾಟಿರಿ

Posts tagged ‘ಭಾರತೀಯ ಸಂಸ್ಕೃತಿ’

25
ಫೆಬ್ರ

ಅಕಟಕಟ ಸಂಸಾರವನು ನೆಚ್ಚಿಕೆಡಬ್ಯಾಡ

ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪಕನ್ನಡಅಧ್ಯಯನಕೇಂದ್ರ,
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

Sri Sripadaruಶ್ರೀಪಾದರಾಜರು (1404-1502) ಹರಿದಾಸ ಸಾಹಿತ್ಯದ ಪ್ರಮುಖ ಕೀರ್ತನಕಾರರಲ್ಲಿ ಒಬ್ಬರು. ಚನ್ನಪಟ್ಟಣ ಬಳಿಯ ಅಬ್ಬೂರಿನವರಾದ ಇವರನ್ನುಪುರಾಣೋಕ್ತ ಹರಿಭಕ್ತಧ್ರುವನ ಅವತಾರ ಎಂದು ಹೇಳಲಾಗುತ್ತದೆ. ವಿಜಯನಗರ ಅರಸರ ರಾಜಗುರುಗಳಾಗಿದ್ದ ಇವರು ಪುರಂದರ, ಕನಕರ ಗುರುಗಳಾಗಿದ್ದ ವ್ಯಾಸತೀರ್ಥರ ಗುರುಗಳೂ ಹೌದು. ಭ್ರಮರಗೀತ, ವೇಣುಗೀತ, ಗೋಪಿಗೀತ, ಮಧ್ವನಾಮ ಇವರ ಪ್ರಮುಖರಚನೆಗಳು. ರಂಗವಿಠಲ ಎಂಬ ಅಂಕಿತದಲ್ಲಿ ಇವರು ಕೀರ್ತನೆಗಳನ್ನೂ ರಚಿಸಿದ್ದಾರೆ. ‘ನೀ ಇಟ್ಟ ಹಂಗೆ ಇರುವೆನೋ ಹರಿಯೇ’;‘ಕಣ್‍ಗಳಿದ್ಯಾತಕೋ ಕಾವೇರಿರಂಗನ ನೋಡದಾ’;‘ಭೂಷಣಕೆ ಭೂಷಣ…’ ಮೊದಲಾದವು ಅವರ ಅತ್ಯಂತ ಜನಪ್ರಿಯ ಕೀರ್ತನೆಗಳಾಗಿ ಜನಮನದಲ್ಲಿ ನೆಲೆನಿಂತಿವೆ. ‘ಅಕಟಕಟ ಸಂಸಾರವನು ನೆಚ್ಚಿಕೆಡಬ್ಯಾಡ’ ಎಂಬುದು ಅವರ ಅನೇಕಾನೇಕ ಕೀರ್ತನೆಗಳಲ್ಲೊಂದು. ಮತ್ತಷ್ಟು ಓದು »

2
ಆಗಸ್ಟ್

ಭಾರತೀಯ ವೈಶಿಷ್ಟ್ಯ ಕಲ್ಪನೆ

ಆಂಗ್ಲಮೂಲ :  ಶ್ರೀ ರಾಜೀವ್ ಮಲ್ಹೋತ್ರಾ

ಕನ್ನಡ ಅನುವಾದ : ಡಾ.ಉದಯನ ಹೆಗಡೆ

(“ಭಾರತೀಯ ಕಲ್ಪನೆ” – ಅಂತಾರಾಷ್ಟ್ರೀಯ ಸಮ್ಮೇಳನ)

ಈ ಭಾಷಣದಲ್ಲಿ, ನಾನು “ಭಾರತೀಯ ವೈಶಿಷ್ಟ್ಯ” ಎಂಬ ಕಲ್ಪನೆಯ ಬಗ್ಗೆ, ಅದರ ತಾತ್ಪರ್ಯ ಮತ್ತು ವಿವಿಧ ಕಾರ್ಯಕ್ಷೇತ್ರಗಳಲ್ಲಿ ಈ ಕಲ್ಪನೆಯು ಹೇಗೆ ಹರಡಿದೆ ಎಂಬುದರ ಬಗ್ಗೆ ಚರ್ಚಿಸಲಿದ್ದೇನೆ. ಅಮೇರಿಕಾ ಸಂಯುಕ್ತ ಸಂಸ್ಥಾನದಲ್ಲಿನ ನನ್ನ  ಜೀವನದ ಅನುಭವಗಳು “ಅಮೇರಿಕಾ ವೈಶಿಷ್ಟ್ಯ” ಎಂಬ ಕಲ್ಪನೆಯನ್ನು ಅರ್ಥ ಮಾಡಿಸಿದವು. ಇದು ಇನ್ನುಳಿದ ದೇಶಗಳ ಜನರಲ್ಲಿ ಇರಬಹುದಾದ ಸಮಾನರೀತಿಯ ಭಾವನೆಗಳನ್ನು ಹುಡುಕಲು ಪ್ರೇರೇಪಿಸಿತು. ಆನಂತರ “ಭಾರತೀಯ ವೈಶಿಷ್ಟ್ಯ” ಎಂಬುದರ ವಿವರಣೆಯ ತಾರ್ಕಿಕ ಹುಡುಕಾಟ ಆರಂಭವಾಯಿತು.

ಅಮೇರಿಕೀಯ ವೈಶಿಷ್ಟ್ಯಭಾವನೆ :

ತಮ್ಮ ಶ್ರೇಷ್ಠತೆ ಮತ್ತು ವಿಭಿನ್ನತೆಯ ಬಗ್ಗೆ ಅಮೆರಿಕನ್ನರಲ್ಲಿರುವ ಸಾಮೂಹಿಕ ಭಾವನೆಯ ಒಂದು ವಿಶಿಷ್ಟ ಸ್ಥಿತಿಯನ್ನು “ಅಮೇರಿಕೀಯ ವೈಶಿಷ್ಟ್ಯ ಭಾವನೆ” ಎನ್ನಬಹುದು. ಈ ಶ್ರೇಷ್ಠತಾಭಾವನೆ ಕ್ರೀಡೆಯಿಂದ ಹಿಡಿದು ವಿಜ್ಞಾನದವರೆಗೆ ಎಲ್ಲಾ ರಂಗಗಳಲ್ಲಿಯೂ ಹರಡಿದೆ. ಬಾಲ್ಯದಿಂದಲೇ ಈ ಭಾವನೆಯು ಜನರಲ್ಲಿ ಪೋಷಿಸಲ್ಪಡುತ್ತದೆ. ಇದರರ್ಥ ಕೆಲವು ಜನರನ್ನು ಅಲ್ಲಲ್ಲಿ ಸೇರಿಸಿ ಶ್ರೇಷ್ಠರನ್ನಾಗಿಸಲಾಗುತ್ತದೆ ಎಂದಲ್ಲ, ಆ “ವ್ಯವಸ್ಥೆಯು” ಶ್ರೇಷ್ಠ ಜನರನ್ನು ಹೇಗೆ ರೂಪಿಸುತ್ತದೆ ಎಂಬ ಭಾವನೆಯ ಬಗ್ಗೆ ಹೇಳುತ್ತಿದ್ದೇನೆ. ಭಾರತದಲ್ಲಿ ಕೆಲವು ಅತಿಶ್ರೇಷ್ಠ ವ್ಯಕ್ತಿಗಳ ಸ್ತುತಿಯನ್ನು ನಾವು ಕಾಣುತ್ತೇವೆ.  ಆದರೆ ಅಮೇರಿಕೀಯ ಭಾವನೆಯು ತನ್ನ ವೈಶಿಷ್ಟ್ಯ ಅಮೇರಿಕದ “ವ್ಯವಸ್ಥೆ”ಯಲ್ಲಿದೆ ಎಂದು ಸಾಧಿಸುತ್ತದೆ, ಈ ಸಂದರ್ಭದಲ್ಲಿ “ವ್ಯವಸ್ಥೆ” ಮತ್ತು ಸಂಸ್ಕೃತಿಗಳನ್ನು ಸಮಾನಾರ್ಥಕಗಳನ್ನಾಗಿ ತೆಗೆದುಕೊಂಡಿದ್ದೇವೆ. ಹಾಗಾಗಿ ಅಮೇರಿಕದ ಸಂಸ್ಕೃತಿಯೇ ಸರ್ವಶ್ರೇಷ್ಠ ಎಂಬ ಭಾವನೆ ಅಮೇರಿಕದ “ವೈಶಿಷ್ಟ್ಯ ಭಾವನೆ” ಎಂದಾಗುತ್ತದೆ.

ಮತ್ತಷ್ಟು ಓದು »

29
ಏಪ್ರಿಲ್

ಅಕ್ಷ ತೃತೀಯ – ವೈಶಿಷ್ಟ್ಯ

ಮಯೂರಲಕ್ಷ್ಮೀ

imagesಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಮನುಷ್ಯನ ಆವಿಷ್ಕಾರದೊಡನೆ ಬದಲಾಗುವ ಋತು ಋತುಗಳೊಡನೆ ಸರ್ವತೋಮುಖ ಅಭಿವೃದ್ಧಿಯಲ್ಲಿ ಪರಿಪೂರ್ಣತೆಯತ್ತ ಕೊಂಡೊಯ್ಯಲು  ಅತ್ಯಂತ ಮಹತ್ತರ ಪಾತ್ರ ವಹಿಸುತ್ತದೆ. ಹೊಸ ಸಂವತ್ಸರದೊಡನೆ  ಯುಗಾದಿಯಿಂದ ಆರಂಭವಾಗಿ ಚೈತ್ರ ಮಾಸ, ಶುಕ್ಲ ಪಕ್ಷ, ವಸಂತ ಋತುವಿನಲ್ಲಿ ದೇಶದಾದ್ಯಂತ ಸಂಭ್ರಮದಿಂದ ಆಚರಿಸಲ್ಪಡುವ  “ಅಕ್ಷ ತೃತೀಯ”  ಅತ್ಯಂತ ಮುಖ್ಯವಾದದು.

ಅಕ್ಷ ತೃತೀಯ ಎಂದರೇನು? ಮತ್ತಷ್ಟು ಓದು »

29
ಸೆಪ್ಟೆಂ

ಸಂಸ್ಕೃತಿ ಸಂಕಥನ – ೭

– ರಮಾನಂದ ಐನಕೈ
ಕ್ರಿಯಾ ಜ್ಞಾನವೇ ಬದುಕಿನ ಶಿಕ್ಷಣ

ನಮ್ಮೂರಿನಲ್ಲೊಬ್ಬ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರಿದ್ದಾರೆ. ಎಂ.ಎಸ್.ಸಿ.ಯಲ್ಲಿ ಬಂಗಾ ರದ ಪದಕ ಪಡೆದವರು. ನಿವೃತ್ತಿಯ ನಂತರ ಊರಿಗೆ ಬಂದು ಕೃಷಿಕರಾಗಿದ್ದಾರೆ. ಅವರಿಗೆ ಗೊತ್ತಿ ಲ್ಲದ ವಿಷಯವಿಲ್ಲ. ಯಾವ ಕ್ಷೇತ್ರದ ಬಗ್ಗಾದರೂ ಘಂಟೆಗಟ್ಟಲೇ ಮಾತನಾಡುತ್ತಾರೆ. ತಮಗೆ ಸಿಕ್ಕಾ ಪಟ್ಟೆ ಜ್ಞಾನವಿದೆಯೆಂಬ ಅಹಂಕಾರವೂ ಇದೆ. ಆದರೆ ಒಂದು ತೊಂದರೆ ಅಂದರೆ ಅವರು ಅಂದು ಕೊಂಡಂತೆ ಒಂದೂ ಆಗುವುದಿಲ್ಲ. ಅವರ ಮಾತಿ ನಲ್ಲಿ ತೋರುವ ಚಾಕಚಕ್ಯತೆ ಕೃತಿಯಲ್ಲಿ ಕಾಣುವು ದಿಲ್ಲ. ಉದಾಹರಣೆಗೆ ಅವರು ಶಕ್ತಿಯ ಮೂಲದ ಬಗ್ಗೆ ಅಮೂಲಾಗ್ರ ತಿಳುವಳಿಕೆ ಹೊಂದಿದ್ದಾರೆ. ವಿದ್ಯುತ್ ಅನ್ವೇಷಣೆಯ ಕುರಿತು ಸವಿವರವಾದ ಮಾಹಿತಿ ನೀಡುತ್ತಾರೆ. ವಿದ್ಯುತ್ ಕಂಡು ಹಿಡಿದ ವರು, ವಿದ್ಯುತ್ ಹೇಗೆ ಉತ್ಪಾದಿಸಲ್ಪಡುತ್ತದೆ; ತಂತಿ ಹೇಗೆ ವಿದ್ಯುತ್ ವಾಹಕವಾಗುತ್ತದೆ; ಬಲ್ಪಿನ ಒಳ ಗಡೆಯಿಂದ ಹೇಗೆ ಪ್ರಕಾಶ ನೀಡುತ್ತದೆ ಇತ್ಯಾದಿ. ಅವರ ನೆಚ್ಚಿನ ಆಳು ಶಂಕರ. ಆತ ಅಕ್ಷರ ಜ್ಞಾನಿಯಲ್ಲ. ಅವನಿಗೆ ಈ ಪ್ರಪಂಚದ ಬಗ್ಗೆ ಕಡಿಮೆ ತಿಳುವಳಿಕೆ ಇದೆ. ಮೇಸ್ಟ್ರು ಹೇಳಿದಷ್ಟು ಮಾಡುವುದು ಅವನ ಕಾಯಕ. ವಿದ್ಯುತ್ತಿನ ಬಗ್ಗೆ ಇಷ್ಟೆಲ್ಲ ಮಾಹಿತಿ ನೀಡುವ ಪ್ರಾಧ್ಯಾಪಕರಿಗೆ ಮನೆಯಲ್ಲಿ ಫ್ಯೂಸ್ ಹೋದರೆ, ಹೋಲ್ಡರಿನಲ್ಲಿ ವಯರ್ ಬಿಟ್ಟರೆ ಹಾಕಲು ಬರುವುದಿಲ್ಲ. ಆ ಕೆಲಸ ಮಾಡುವವನು ಶಂಕರ. ವಿದ್ಯುತ್ತಿಗೆ ಸಂಬಂಧಿಸಿದ ಅಷ್ಟೂ ರಿಪೇರಿ ಕೆಲಸವನ್ನು ಶಂಕರ ಮಾಡುತ್ತಾನೆ. ಆತನನ್ನು ಕೇಳಿ ದರೆ ತನಗೆ ಇದರ ಬಗ್ಗೆ ತಿಳುವಳಿಕೆಯೇನಿಲ್ಲ. ಹೀಗೆ ಮಾಡಿ ಮಾಡಿ ಕಲಿತೆ ಅನ್ನುತ್ತಾನೆ. ಜೀವನದ ಚಿಕ್ಕ ಕೆಲಸಕ್ಕೆ ನೆರವಿಗೆ ಬಾರದ ಪ್ರಾಧ್ಯಾಪಕರ ಪಾಂಡಿತ್ಯವನ್ನು ಏನನ್ನೋಣ? ಪ್ರಾಧ್ಯಾಪಕರದ್ದು ಲೋಕಜ್ಞಾನ, ಶಂಕರನದ್ದು ಕ್ರಿಯಾಜ್ಞಾನ ಅನ್ನೋಣವೇ? ಉತ್ತರ ಗೊತ್ತಿಲ್ಲ. ಹುಡುಕಲು ಪ್ರಯತ್ನಿಸೋಣ.
ಮತ್ತಷ್ಟು ಓದು »

8
ಜುಲೈ

ಸಂಸ್ಕೃತಿ ಸಂಕಥನ – ೧

– ರಮಾನಂದ ಐನಕೈ

ಭಾರತೀಯ ಸಂಸ್ಕೃತಿಯ ವಿಷಯದಲ್ಲಿ ಇಂದಿಗೂ ಕೂಡಾ ಗೊಂದಲವಿದೆ. ನಮ್ಮ ಆಚರಣೆಗಳು ಅರ್ಥವಿಲ್ಲದ್ದು. ಮೌಢ್ಯದಿಂದ ಕೂಡಿದ್ದು…. ಇತ್ಯಾದಿ. ನಮ್ಮ ಸುಶೀಕ್ಷಿತ ಜನರೂ ಕೂಡ ಇದನ್ನೇ ಪುನರುಚ್ಚರಿಸುತ್ತಿದ್ದಾರೆ. ಆದರೆ ಇದು ನಿಜ ಅಲ್ಲ. ಇವು ಕೇವಲ ಪಾಶ್ಚಾತ್ಯರಿಗೆ ನಮ್ಮ ಸಂಸ್ಕೃತಿಯ ಕುರಿತಾದ ಅನುಭವಗಳು. ಅವರ ಅನುಭವಗಳೇ ನಮಗೆ ಆದರ್ಶವಾಗಿದೆ.ಬೆಲ್ಜಿಯಂನ ಗೆರಿಟ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಾಲಗಂಗಾಧರ ಅವರು ಈ ಕುರಿತು ದೀರ್ಘ ಸಂಶೋಧನೆ ಮಾಡಿದ್ದಾರೆ. ಇವರ ಸಂಶೋಧನೆ ಭಾರತೀಯ ಸಂಸ್ಕೃತಿಯ ಮೇಲೆ ಹೊಸ ಬೆಳಕು ಚೆಲ್ಲಲಿದೆ.

ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ತಪ್ಪು ತಿಳುವಳಿಕೆ ಹೇಗೆ ಜೀವನದ ಬೇರೆ ಬೇರೆ ರಂಗದ ಮೇಲೆ ಅಡ್ಡ ಪರಿಣಾಮ ಮಾಡಿದೆ ಎಂಬ ಬಾಲಗಂಗಾಧರರ ವಾದವನ್ನು ಸರಳವಾಗಿ ಅನುಭವಕ್ಕೆ ದಕ್ಕುವಂತೆ ನಿರೂಪಿಸಲಿದ್ದಾರೆ ರಮಾನಂದ ಐನಕೈ. ಹೊಸ ಅಂಕಣ ‘ಸಂಸ್ಕೃತಿ ಸಂಕಥನ’ ಆರಂಭವಾಗಲಿದೆ.

ಇದು ಹೇಳುವಷ್ಟು ಸುಲಭವಲ್ಲ. ಆದರೂ ಒಂದು ಕ್ಷಣ ವರ್ತಮಾನದ ನಮ್ಮ ಸಿದ್ಧ ನಂಬಿಕೆಗಳನ್ನು ಪೂರ್ವಾಗ್ರಹಗಳನ್ನು ಬದಿಗಿಟ್ಟು ಮುಂದುವರಿಯೋಣ.

ಕಳೆದ ೬೦ ವರ್ಷಗಳ ನಮ್ಮ ಸ್ವತಂತ್ರ ಭಾರತದಲ್ಲಿ ನೂರಾರು ರೀತಿಯ ಮನಸ್ಸುಗಳು ಬೆಳೆಯುತ್ತ ಬಂದಿವೆ. ಪ್ರತಿಯೊಂದು ಮನಸ್ಸೂ ತನ್ನದೇ ರೀತಿಯ ವೈಚಾರಿಕ ಹಾಗೂ ಮಾನಸಿಕ ಸಾಮ್ರಾಜ್ಯವನ್ನು ಕಟ್ಟಿಕೊಂಡಿದೆ ಹಾಗೂ ಅದೇ ಅಂತಿಮ ಸತ್ಯ ಎಂದು ಪ್ರತಿಪಾದಿಸುತ್ತಲಿದೆ.ಈ ಕಾರಣಕ್ಕಾಗೇ ದೇಶದಲ್ಲಿ ಅಸಂಖ್ಯಾತ ವೈವಿಧ್ಯಮಯ ಸಮಸ್ಯೆಗಳು ಇನ್ನೂ ಜೀವಂತವಾಗಿವೆ. ಇವುಗಳನ್ನೆಲ್ಲ ಸೇರಿಸಿ ನಾವು ಮುಖ್ಯವಾಗಿ ಎರಡು ರೀತಿಯ ಮನಸ್ಸುಗಳನ್ನು ಗುರುತಿಸೋಣ.

ಮತ್ತಷ್ಟು ಓದು »