ಎತ್ತ ಸಾಗುತ್ತಿದೆ ಕನ್ನಡದ ಬೌದ್ಧಿಕ ಜಗತ್ತು..?
– ಡಾ. ಪ್ರವೀಣ ಟಿ. ಎಲ್
ಉಪನ್ಯಾಸಕರು
ಕುವೆಂಪು ವಿಶ್ವವಿದ್ಯಾನಿಲಯ
ಬೌದ್ಧಿಕವಲಯದಲ್ಲಿ ಮುಕ್ತ ಸಂವಾದಗಳು ಜ್ಞಾನದ ಬೆಳವಣಿಗೆಯ ದೃಷ್ಟಿಯಿಂದ ಅತ್ಯಂತ ಮುಖ್ಯ. ಅವುಗಳು ಹೆಚ್ಚೆಚ್ಚು ನಡೆಯಲೆಂದೇ ಯುಜಿಸಿಯಂತಹ ಸಂಸ್ಥೆಗಳು, ಸರ್ಕಾರಗಳು ಕೋಟಿಗಟ್ಟಲೇ ಹಣವನ್ನು ನೀಡುತ್ತವೆ. ವಿದ್ಯಾರ್ಥಿಗಳ ನಡುವೆ, ಚಿಂತಕರ ನಡುವೆ ಸಂವಾದಗಳು, ಚರ್ಚೆಗಳು ನಡೆದರೆ ಮಾತ್ರವೇ ತಮ್ಮ ತಿಳುವಳಿಕೆಯ ಮಿತಿಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಹಾಗೂ ಹೊಸ ಹೊಸ ಚಿಂತನೆಯ ಉಗಮಕ್ಕೆ ದಾರಿಯಾಗಲಿವೆ. ಆಗ ಅಲ್ಲಿನ ಬೌದ್ಧಿಕ ವಲಯವು ಹೆಚ್ಚು ಕ್ರಿಯಾಶೀಲವಾಗಿದೆ ಎಂದು ತೀರ್ಮಾನಿಸಬಹುದು. ಕರ್ನಾಟಕದ ಸಂದರ್ಭದಲ್ಲಿ ಬುದ್ಧಿಜೀವಿಗಳೆಂದರೆ ಸಾಹಿತಿಗಳು ಎಂಬಂತಾಗಿದೆ. ಕನ್ನಡ ಬೌದ್ಧಿಕ ವಲಯದಲ್ಲಿ ಇಂತಹ ಸಂವಾದಗಳು ನಡೆಯುತ್ತಿವೆಯೇ? ಎಂಬ ಮುಖ್ಯ ಪ್ರಶ್ನೆಯೊಂದನ್ನು ಕೇಳಿಕೊಳ್ಳಬೇಕಾದ ಸುಸಂದರ್ಭದಲ್ಲಿದ್ದೇವೆ. ಮತ್ತಷ್ಟು ಓದು
ಭೈರಪ್ಪನವರ ಬದುಕು ನಮಗೇಕೆ ಮಾದರಿ
– ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯ ಗ್ರಂಥಪಾಲಕರು
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ
ಎಸ್.ಎಲ್. ಭೈರಪ್ಪ ಕನ್ನಡದ ಪ್ರಮುಖ ಬರಹಗಾರರಲ್ಲೊಬ್ಬರು. ಇಪ್ಪತ್ತೈದು ಕಾದಂಬರಿಗಳು, ಆತ್ಮವೃತ್ತಾಂತ, ನಾಲ್ಕು ಸಾಹಿತ್ಯ ಚಿಂತನ ಗ್ರಂಥಗಳು ಮತ್ತು ಎರಡು ಸಂಪಾದಿತ ಕೃತಿಗಳ ಲೇಖಕರಾದ ಎಸ್.ಎಲ್.ಭೈರಪ್ಪನವರು ಕನ್ನಡ ಮಾತ್ರವಲ್ಲದೆ ಇತರ ಭಾಷೆಗಳಲ್ಲೂ ಓದುಗರ ದೊಡ್ಡ ಸಮೂಹವನ್ನು ಹೊಂದಿರುವ ವಿಶಿಷ್ಟ ಬರಹಗಾರ. ಭೈರಪ್ಪನವರ ಕಾದಂಬರಿಗಳು ತೆಲುಗು, ಮರಾಠಿ, ಹಿಂದಿ ಭಾಷೆಗಳೂ ಸೇರಿ ಭಾರತದ ಎಲ್ಲ 14 ಭಾಷೆಗಳಿಗೂ ಅನುವಾದಗೊಂಡಿವೆ. ಭೈರಪ್ಪನವರ ಬದುಕು ಮತ್ತು ಸಾಹಿತ್ಯ ಕುರಿತೇ ಇಪ್ಪತ್ತಕ್ಕೂ ಹೆಚ್ಚು ಕೃತಿಗಳು ಬೇರೆ ಬೇರೆ ಲೇಖಕರಿಂದ ರಚನೆಗೊಂಡಿರುವುದು ಇನ್ನೊಂದು ವಿಶೇಷ. ಕಾಲಕಾಲಕ್ಕೆ ತಮ್ಮ ಬರವಣಿಗೆಯಿಂದ ಭೈರಪ್ಪನವರು ಕನ್ನಡದ ಓದುಗರನ್ನು ಚಿಂತನೆಗೆ ಹಚ್ಚುತ್ತಲೇ ಬಂದಿರುವರು. ಅವರ ಕೃತಿಗಳು ಮನೋರಂಜನೆಗಾಗಿಯೋ ಇಲ್ಲವೇ ಸಮಯ ಕಳೆಯುವುದಕ್ಕಾಗಿಯೋ ಓದುವಂಥ ಪುಸ್ತಕಗಳ ಸಾಲಿನಲ್ಲಿ ನಿಲ್ಲುವ ಕೃತಿಗಳಲ್ಲ. ಭೈರಪ್ಪನವರ ಕಾದಂಬರಿಯೊಂದನ್ನು ಓದಿದ ನಂತರ ಅದು ಓದುಗನ ಮನಸ್ಸನ್ನು ಅನೇಕ ದಿನಗಳವರೆಗೆ ಕಾಡುತ್ತ ಹೊಸ ಚಿಂತನೆಯನ್ನು ಸೃಷ್ಟಿಸಿ ಬದುಕಿನ ಪರಿವರ್ತನೆಗೆ ಕಾರಣವಾಗುತ್ತದೆ. ಮತ್ತಷ್ಟು ಓದು
ಸಾಹಿತ್ಯ ಪರಿಷತ್ ಯಾರೊಬ್ಬರ ಖಾಸಗಿ ಆಸ್ತಿಯಲ್ಲ..!
ಕಿರಣ್ ಕಿಜೋ
ಸಂಶೋಧನಾ ವಿದ್ಯಾರ್ಥಿ
ದ್ರಾವಿಡ ವಿಶ್ವವಿದ್ಯಾಲಯ, ಕುಪ್ಪಂ.
ಆಂಧ್ರ ಪ್ರದೇಶ.
ಮೊದಲಿಗೆ ಭೈರಪ್ಪನವರನ್ನು ಶಿವಮೊಗ್ಗದ ಸಾಹಿತ್ಯ ಸಮ್ಮೇಳನದಿಂದ ದೂರವಿಡುವಲ್ಲಿ ಯಶಸ್ವಿಯಾದ ರಾಜೇಂದ್ರ ಚೆನ್ನಿ ಹಾಗೂ ಅವರ ಪರಮ ಸಹಿಷ್ಣತೆಯ ಎಲ್ಲಾ ಸಂಗಡಿಗರಿಗೂ ಅಭಿನಂದನೆಗಳು! ಕೆಲ ದಿನಗಳ ಹಿಂದಷ್ಟೆ, ಸಾಹಿತ್ಯ ಸಂಭ್ರಮದ ಅಂಗಳದಲ್ಲಿ ಚಪ್ಪಲಿಯ ಮೂಲಕ ತಮ್ಮ ಶಕ್ತಿ ಪಾರಮ್ಯದೊಂದಿಗೆ ಗೆಲುವಿನ ನಗೆ ಬೀರಿದ್ದ ಎಡ ಪಡೆ, ಇದೀಗ ಶಿವಮೊಗ್ಗದಲ್ಲಿ ಮತ್ತೊಂದು ಸುತ್ತಿನ ಯಶಸ್ಸನ್ನು ಸಾಧಿಸಿ, ಗೆಲುವಿನ ಕೇಕೆ ಹಾಕಿದೆ. ಧಾರವಾಡದ ಮ್ಯಾನ್ ಆಫ್ ದಿ ಸೀರಿಸ್ ಚಪ್ಪಲಿ ಚಂದ್ರಶೇಖರ ಹಾಗೂ ಕುಂ.ವೀರಭದ್ರಪ್ಪನವರಾದರೆ, ಶಿವಮೊಗ್ಗೆಯಲ್ಲಿ ರಾಜೇಂದ್ರ ಚೆನ್ನಿ! ಈ ರೀತಿಯ ಗೆಲುವುಗಳು ಅವರಿಗೇನು ಹೊಸದಲ್ಲ ಬಿಡಿ. ದೊಡ್ಡ ದಾಖಲೆಯ ಇತಿಹಾಸವೇ ಅವರ ಬೆನ್ನ ಹಿಂದಿದೆ! ಮತ್ತಷ್ಟು ಓದು
ಉತ್ತರಕಾಂಡದ ಓದು ಮತ್ತು ಜಿಜ್ಞಾಸೆ.
– ನವೀನ ಗಂಗೋತ್ರಿ
ರಾಮಾಯಣವನ್ನಾಗಲೀ ಮಹಾಭಾರತವನ್ನಾಗಲೀ ಅವಲೋಕಿಸುವ ಸಂದರ್ಭ ಆಗಾಗ ಬರುತ್ತಲೇ ಇರುತ್ತದೆ. ಅದೆಷ್ಟು ಬಾರಿಗೆ ಅವಲೋಕಿಸಿದರೂ ರಾಮನೆಂಬಾತ ಮಾತ್ರ ಎಟುಕಿಗೆ ನಿಲುಕದ, ಯಾವುದಕ್ಕೂ ಕಲಕದ, ಅರ್ಥವಾಗದ ಮತ್ತು ಅರ್ಥಮಾಡಿಸಿಕೊಳ್ಳುವ ಬಯಕೆಯೂ ಇಲ್ಲದ ಪಾತ್ರವಾಗಿಯೇ ನನಗೆ ತೋರುತ್ತಾನೆ. ಅವನ ಕೃತ್ಯಗಳ ಪರವಾಗಿ ಜಿಜ್ಞಾಸೆಗೆ ನಿಂತಾಗೆಲ್ಲ ಕೊನೆಯಲ್ಲಿ ಆತನ ನಿರ್ಧಾರಗಳೆಡೆಗೆ ಪ್ರಶ್ನೆಗಳೇ ಉಳಿಯುತ್ತವೆ. ಹಾಗಂತ ಅವನ ಕೃತ್ಯಗಳ ಪರವಲ್ಲದ ಕೋನ ಹಿಡಿದುಕೊಂಡೆನೋ, ಆತನ ‘ಧರ್ಮ’ವು ಎಲ್ಲೋ ಒಂದು ಸಣ್ಣ ಹೊಳಹಿನಲ್ಲಿ ಸುಳಿದು ವಿರೋಧವಾದದ ಬುಡವನ್ನೇ ಕಡಿಯುತ್ತದೆ. ರಾಮ ಇವತ್ತಿಗೂ ನನ್ನ ಅರಿವಿನ ಯಾವ ಅಂಚಿಗೂ ನಿಲುಕದವನು.
ಉತ್ತರಕಾಂಡವನ್ನು ಎತ್ತಿಕೊಂಡಾಗ ಕಾದಂಬರಿಕಾರನು ಕಥೆಯ ಹರಿವಿನಲ್ಲಿ ಒದಗಿಸಬಹುದಾದ ರಸಸೃಷ್ಟಿಯಲ್ಲಿ ಮಿಂದೇಳುವ ಬಯಕೆಯು ಹಿರಿದಾಗಿತ್ತಾದರೂ ರಾಮನನ್ನು ನನಗೆ ಹತ್ತಿರವಾಗಿಸಬಹುದೇನೋ ಅನ್ನುವ ಸಣ್ಣದೊಂದಾಸೆಯೂ ಮನಸಲ್ಲಿತ್ತು. ಮತ್ತಷ್ಟು ಓದು
‘ಯಾನ’ ದಲ್ಲಿ ಒಂದು ಸುತ್ತು
– ಡಾ.ಸಂತೋಷ್ ಕುಮಾರ್ ಪಿ.ಕೆ
‘ಯಾನ’ ಇತ್ತೀಚೆಗಷ್ಟೆ ಬಿಡುಗಡೆಯಾದ ಭೈರಪ್ಪನವರ ಕಾದಂಬರಿಯಾಗಿದೆ.ಹಾಟ್ ಕೇಕ್ ರೀತಿಯಲ್ಲಿ ಮಾರಾಟವಾದ ಪುಸ್ತಕ ಅವರ ಕಿರೀಟಕ್ಕೆ ದಕ್ಕಿದ ಮತ್ತೊಂದು ಗರಿ ಎಂದರೂ ತಪ್ಪಾಗಲಾರದು.ಮಾನವೀಯ ಸಂಬಂಧಗಳ ತಾಕಲಾಟವನ್ನು ಬಿಂಬಿಸುವ ಭೈರಪ್ಪನವರ ಹಲವಾರು ಕಾದಂಬರಿಗಳಲ್ಲಿ ಇದೂ ಸಹ ಒಂದಾಗಿದೆ. ಇಡೀ ಕಾದಂಬರಿ ಉತ್ತರಾ ಮತ್ತು ಸುದರ್ಶನ್ ಎಂಬ ಇಬ್ಬರು ಪ್ರಾಯೋಗಿಕ ಅಥವಾ ಎಕ್ಸ್ಪೆರಿಮೆಂಟ್ ದಂಪತಿಗಳ ಸಂಬಂಧದೊಳಗಿನ ತೊಳಲಾಟವನ್ನು ಅಂದವಾಗಿ ಚಿತ್ರಿಸುತ್ತದೆ. ಬೇರೊಂದು ಗ್ರಹಕ್ಕೆ (ಪ್ರಾಕ್ಸಿಮಾ ಸೆಂಟರ್) ಚಲಿಸುವ ಮತ್ತು ಎಂದೆಂದಿಗೂ ಭೂಮಿಗೆ ಹಿಂದಿರುಗದ ರಾಕೆಟ್ ಒಳಗೆ ಒಂದು ಲೋಕವನ್ನು ಸೃಷ್ಟಿಸಿ ಆಕಾಶ್ ಮತ್ತು ಮೇದಿನಿಯರ ಮೂಲಕ ಅವರ ಪೋಷಕರ ಜೀವನಗಾಥೆಯನ್ನು ಎಳೆಎಳೆಯಾಗಿ ಬಿಡಿಸುವ ಕಾರ್ಯವನ್ನು ಲೇಖಕರು ಮಾಡುತ್ತಾರೆ.
ಯಾನವು ವೈಜ್ಞಾನಿಕ ಪ್ರಯೋಗಕ್ಕಾಗಿ ಭೂಮಿಯಿಂದ ರಾಕೆಟ್ ಮೂಲಕ ಬೇರೊಂದು ನಕ್ಷತ್ರ/ಗ್ರಹಕ್ಕೆ ಪ್ರಯಾಣಿಸುವ ಕತೆಯಾಗಿದೆ. ಯಾನ ಎಂಬುದು ಇಲ್ಲಿ ಎರಡು ಅರ್ಥಗಳನ್ನು ಒಳಗೊಳ್ಳಬಹುದು, ಒಂದು, ಬೇರೆ ಗ್ರಹಕ್ಕೆ ಮಾಡುವ ಪ್ರಯಾಣ ಮತ್ತೊಂದು ಜೀವನದಲ್ಲಿ ಒಂದು ಹಂತದಿಂದ ಮತ್ತೊಂದು ಹಂತಕ್ಕೆ ಮಾಡುವ ಪ್ರಯಾಣ. ವಿಜ್ಞಾನದ ಕುರಿತು ಕೆಲವೊಂದು ಉಪಯುಕ್ತ ಮಾಹಿತಿಗಳನ್ನೂ ಸಹ ಈ ಕಾದಂಬರಿ ಒದಗಿಸುತ್ತದೆ. ಅದರ ಜೊತೆಗೆ ಮನುಷ್ಯರ ಜೀವನದಲ್ಲಿ ಸಹಜವಾಗಿ ನಡೆಯುವ ಸರಸ ಸಲ್ಲಾಪ, ಅನ್ವೇಷಣಾ ಗುಣ, ವಿರಸ, ಆಧ್ಯಾತ್ಮ, ಶರಣಾಗುವಿಕೆ, ಅಹಂ ಇನ್ನೂ ಮುಂತಾದ ಸೂಕ್ಷ್ಮ ಸಂಗತಿಗಳನ್ನು ಹಲವಾರು ಘಟನೆಗಳ ಮೂಲಕ ಕಾದಂಬರಿ ಹೊರಗೆಡಹುತ್ತದೆ. ಒಟ್ಟಿನಲ್ಲಿ ಓದುಗಾಸಕ್ತರಿಗೆ ಎಲ್ಲಿಯೂ ಬೋರ್ ಮಾಡದ ರೀತಿಯಲ್ಲಿ ತನ್ನೊಂದಿಗೆ ಕೊಂಡ್ಯೊಯ್ಯುವ ಗುಣ ಯಾನದ ವೈಶಿಷ್ಟ್ಯವಾಗಿದೆ.
ಯಾನವು ಒಂದು ರೋಚಕ ಕತೆಯಾಗಿದೆ. ಏಕೆಂದರೆ ಓದುಗರಿಗೆ ಎರಡು ಪ್ರಶ್ನೆಗಳನ್ನು ಹಾಕಿಕೊಳ್ಳುವಂತೆ ಮಾಡುವ ಮೂಲಕ ಕೊನೆಯವರೆಗೂ ಉತ್ತರದ ರಹಸ್ಯವನ್ನು ಕಾಪಾಡಿಕೊಳ್ಳುತ್ತದೆ. ಆ ಪ್ರಶ್ನೆಗಳೆಂದರೆ, 1.ಆಕಾಶ್ ಮತ್ತು ಮೇದಿನಿ ಎಂಬ ಸಹೋದರ ಸಹೋದರಿಯರು ವಿವಾಹವಾಗಲು ಹೇಗೆ ಸಾಧ್ಯ? ಹಾಗೂ 2. ಆಕಾಶ್ನ ತಂದೆ ಯಾರು? ಈ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿಯೇ ಕಾದಂಬರಿ ಕೊನೆಯವರೆಗೂ ಕುತೂಹಲವನ್ನು ಉಳಿಸುತ್ತದೆ. ಕಾದಂಬರಿಯನ್ನು ಓದಲು ಪ್ರಾರಂಭಿಸಿದಾಗ, ಮುಂದೆ ಏನಾಗಬಹುದು ಎಂಬ ನಿರೀಕ್ಷೆಗಳೂ ಸಹ ಓದುಗರಿಗೆ ಹುಟ್ಟದೆ ಇರಲಾರದು. ಇದಿಷ್ಟು ಕಾದಂಬರಿಯ ಮೇಲ್ನೋಟದ ವೈಶಿಷ್ಟ್ಯಗಳು. ಈ ಕಾದಂಬರಿಯಲ್ಲಿ ಇನ್ನೊಂದು ವಿಶೇಷವಿದೆ ಅದು ಈ ಕೆಳಗಿನಂತಿದೆ.
ಸಾಮಾನ್ಯ ಓದುಗನ ಗ್ರಹಿಕೆಯಲ್ಲಿ ಭೈರಪ್ಪ
– ಎಸ್ ಎನ್ ಸಿಂಹ. ಮೇಲುಕೋಟೆ.
ಸೃಷ್ಟಿಯ ಆರಂಭದಿಂದ ಇಂದಿನವರೆಗೂ ಮನುಷ್ಯನ ಹೃದಯವನ್ನು ಅನೇಕ ಚಿಂತೆ ಸಂತಾಪಗಳು ಬಾಧಿಸುತ್ತಲೇ ಇವೆ. ಅವುಗಳನ್ನು ನೀಗಿ ಜೀವನವನ್ನು ನೇರ್ಪಡಿಸಿಕೊಳ್ಳುವ ಯತ್ನದಲ್ಲಿ ಆತ ಹಲವು ಸಾಮಗ್ರಿಗಳ ನೆರವನ್ನು ಅಪೇಕ್ಷಿಸುತ್ತಾನೆ. ಅವುಗಳ ನೆರವಿನಿಂದ ಸಂಪೂರ್ಣವಾಗಿ ಅಲ್ಲದಿದ್ದರೂ ತಾತ್ಕಾಲಿಕವಾಗಿಯಾದರೂ ಸಂತಾಪಶಮನವನ್ನು ಪಡೆಯುವಲ್ಲಿ ಸುಖಾಪೇಕ್ಷಿಯಾದ ಮಾನವ ಕೊಂಚಮಟ್ಟಿಗೆ ಯಶಸ್ವಿಯಾಗಿದ್ದಾನೆ.ಇಂತಹ ಸುಖವನ್ನು ಪಡೆಯುವ ನಿಟ್ಟಿನಲ್ಲಿ ಅಗತ್ಯವಾದ ಕನಿಷ್ಠ ಸಾಮಗ್ರಿಗಳು ಯಾವುವೆಂದು ಸೂಫಿ ಸಂತ ಉಮರ್ ಖಯ್ಯಮನು ತನ್ನೊಂದು ರುಬಾಯಿಯಲ್ಲಿ ಹಿಡಿದಿಟ್ಟಿದ್ದಾನೆ. ರಸಋಷಿ ಡಿ.ವಿ.ಜಿ. ಅವರು ಮಾಡಿರುವ ಅದರ ಸುಂದರವಾದ ಅನುವಾದ ಹೀಗಿದೆ..
ಅಲ್ಲಿ ಮರದಡಿಯಲ್ಲಿ ನಲ್ಗಾವ್ಯವೊಂದಿರಲು
ರೊಟ್ಟಿಯೊಂದಿನಿಸೊಂದು ಕುಡಿಕೆಯಲಿ ಮಧುವು |
ಮೇಣ್ ಮುಗುದೆ ನೀನೆನ್ನ ಬಳಿ ಕುಳಿತು ಪಾಡಲಹ
ಕಾಡಾದೊಡೇನದುವೆ ಸಗ್ಗಸುಖವೆನಗೆ ||
ಖಯ್ಯಮನಿಗಿಂತಲೂ ತುಂಬ ಹಿಂದೆಯೇ ನಮ್ಮ ಭರ್ತೃಹರಿ ಹೇಳುವುದಾದರೂ ಇದನ್ನೇ..
ಅಗ್ರೇ ಗೀತಂ ಸರಸ ಕವಯಃ ಪಾರ್ಶ್ವತೋ ದಾಕ್ಷಿಣಾತ್ಯಾಃ
ಪಶ್ಚಾಲ್ಲೀಲಾವಲಯರಣಿತಂ ಚಾಮರಗ್ರಾಹಿಣೀನಾಮ್ |
ಯದ್ಯಸ್ತ್ಯೇವಂ ಕುರು ಭವರಸಾಸ್ವಾದನೇ ಲಂಪಟತ್ವಂ
ನೋಚೇಚ್ಚೇತಃ ಪ್ರವಿಶ ಸಹಸಾ ನಿರ್ವಿಕಲ್ಪೇ ಸಮಾಧೌ ||
ಮತ್ತಷ್ಟು ಓದು
ಸಂಸ್ಕಾರ ಮತ್ತು ವಂಶವೃಕ್ಷ: ಅಪೂರ್ಣದಿಂದ ಪೂರ್ಣದೆಡೆಗೆ
-ಎಸ್.ಎನ್.ಭಾಸ್ಕರ್, ಬಂಗಾರಪೇಟೆ.
ಓದುವ ಮುನ್ನ:
ಸಿದ್ದಾಂತ, ಬದ್ದತೆ, ನಿಷ್ಠೆ ಇವು ಹೆಚ್ಚು ಬಿಗಿಯಾದಷ್ಟೂ ಬೌದ್ದಿಕ ತಿಳುವು ಉಸಿರುಗಟ್ಟುತ್ತದೆ. ಗ್ರಹಿಕೆಯು ಪೂರ್ವಾಗ್ರಹಗಳಿಂದ ಹೊರತಾಗಿದ್ದಷ್ಟೂ ನಿಲುವು ಪರಿಪಕ್ವವಾಗುತ್ತದೆ. ಚಿಂತನೆ ಮತ್ತಷ್ಟು ವಿಕಸಿತವಾಗುತ್ತದೆ. ಸಾಹಿತ್ಯ, ಸೃಷ್ಟಿ ಅಥವಾ ಇಡೀ ಮನುಕುಲವೇ ಆಗಲೀ ಸತ್ಯಾನ್ವೇ಼ಣೆಯ ಹಾದಿಯಲ್ಲಿ, ಸತ್ಯ-ಅಸತ್ಯಗಳ ಪರಾಮರ್ಷೆಯಲ್ಲಿ ನಿತ್ಯ ಚಲನಶೀಲ, ಅಪೂರ್ಣದಿಂದ ಪೂರ್ಣದೆಡೆಗೆ. ಪೂರ್ಣತೆ ಎಂಬುದು ಅಂತ್ಯವಿಲ್ಲದ ಹಾದಿ, ಇದರೆಡೆಗಿನ ಪಯಣ ನಿರಂತರ. ಇಗೋ ಮುಟ್ಟಿದೆ ಇದೇ ಅಂತ್ಯ, ಇದೇ ಸತ್ಯ ಎಂದು ಗ್ರಹಿಸಿದ ಮರುಕ್ಷಣಕ್ಕೆ ಮತ್ತೊಂದು ಹಾದಿ ಕಾಲ ಬುಡದಿಂದ ಹಾಯುತ್ತಾ ಅನಂತದವರೆಗೆ ಹಾಸಿರುತ್ತದೆ. ಧುರ್ಗಮವೋ ಸುಗಮವೋ ಹೆಜ್ಜೆ ಇಟ್ಟ ನಂತರವಷ್ಟೇ ತಿಳಿಯುತ್ತದೆ. ಗ್ರಹಿಕೆಯಿಂದ ಅರಿವು, ಅರಿವಿನಿಂದ ಜ್ಞಾನ, ಹೀಗೆ ಮುಂದೆ ಮುಂದೆ ಸಾಗಿದಷ್ಟೂ ತಾತ್ಕಾಲಿಕವಾಗಿಯಾದರೂ ಪೂರ್ಣತೆಯ ಅನುಭವ ದೊರೆಯುತ್ತದೆ. ಇದೊಂದು ಅಂತ್ಯವಿಲ್ಲದ ಹಾದಿ, ಪರಿಪೂರ್ಣತೆಯ ಗಮ್ಯದೆಡೆಗೆ ಆತ್ಮದ ನಿತ್ಯಪಯಣ. ಇಲ್ಲಿ ಅನುಭೂತಿಯೆಲ್ಲವೂ ಅಮೃತ; ಗಳಿಸಿದ್ದೆಲ್ಲವೂ ಶಾಶ್ವತ.
ಕನ್ನಡ ಸಾಹಿತ್ಯ ಲೋಕದಲ್ಲಿ ಓದುಗರಿಂದ, ವಿಮರ್ಷಕರಿಂದ ಅತೀ ಹೆಚ್ಚು ಚರ್ಚೆಗಳಿಗೆ, ವಾದ ವಿವಾದಗಳಿಗೆ ಕಾರಣವಾದ ಕೃತಿಗಳಲ್ಲಿ ದಿವಂಗತ ಡಾ.ಯು.ಆರ್ ಅನಂತಮೂರ್ತಿಯವರು ಬರೆದಿರುವ ಸಂಸ್ಕಾರ ಕಾದಂಬರಿ ಪ್ರಮುಖವಾದುದು. ಈ ಕಾದಂಬರಿಯ ಕಥಾವಸ್ತುವೇ ವಿವಾದಕ್ಕೆ ಮೂಲವಾಗಿದೆ. ಹಲವಾರು ವೇದಿಕೆಗಳಲ್ಲಿ ಈಗಾಗಲೇ ಚಿಂತನ-ಮಂಥನಗಳಿಗೆ ಸಂಸ್ಕಾರ ಕಾದಂಬರಿ ವಿಷಯ ವಸ್ತುವಾಗಿದೆ. ಇನ್ನು ಎಸ್.ಎಲ್ ಬೈರಪ್ಪ ರವರ ವಂಶವೃಕ್ಷ ಕಾದಂಬರಿಯು ಸಹಾ ಬಹುಚರ್ಚಿತವಾದ ಕಾದಂಬರಿಯಾಗಿದೆ. ಎಸ್.ಎಲ್.ಬೈರಪ್ಪ ರವರ ಅನೇಕ ಕಾದಂಬರಿಗಳ ಪೈಕಿ ಇದುವರೆಗೂ ಸುಮಾರು ಐವತ್ತಕ್ಕೂ ಹೆಚ್ಚು ಮುದ್ರಣಗಳನ್ನು ಕಂಡಿರುವ ಈ ಕಾದಂಬರಿ ಹೆಚ್ಚು ಪ್ರಸಿದ್ದವಾದ ಕೃತಿಯಾಗಿದೆ. ಸಂಸ್ಕಾರ ಮತ್ತು ವಂಶವೃಕ್ಷ ಈ ಎರಡೂ ಕಾದಂಬರಿಗಳು ಕ್ರಮವಾಗಿ ೧೯೬೫ ಮತ್ತು ೧೯೬೬ ರಲ್ಲಿ ಪ್ರಥಮವಾಗಿ ಪ್ರಕಟಗೊಳ್ಳುತ್ತವೆ.
ಸಮ್ಮೇಳನದ ವೇದಿಕೆಯಲ್ಲಿ ಬರಹಗಾರರೋಬ್ಬರನ್ನು ನಿಂದಿಸುವುದು ಕನ್ನಡ ಮತ್ತು ಸಮ್ಮೇಳನದ ಅಪಮಾನವಲ್ಲವೆ ?
– ಅನಿಲ್ ಚಳಗೇರಿ
ಹೌದು, ಅದು ಪ್ರಸಕ್ತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮಹಿಳೆಯರ ಸಮಾನತೆ ಮತ್ತು ಸವಾಲು ಅನ್ನುವ ವಿಷಯದ ಕುರಿತು ಚರ್ಚೆ ನಡೆಯಬೇಕಿತ್ತು. ಆದರೆ ಅಲ್ಲಿ ನಡೆದಿದ್ದು ಮಾತ್ರ ಕರ್ನಾಟಕ ಕಂಡ ಅಧ್ಭುತ ಸಾಹಿತಿಗಳಲ್ಲಿ ಒಬ್ಬರಾದ ಎಸ್ ಎಲ್ ಭೈರಪ್ಪನವರ ಬಗ್ಗೆ ಅಪಪ್ರಚಾರ , ಹಿಂದೂ ವಿರೋಧಿ ಹೇಳಿಕೆಗಳು, ಬ್ರಾಹ್ಮಣರ ಬಗ್ಗೆ ಕೆಳಮಟ್ಟದ ಆರೋಪ , ಪುರೋಹಿತಶಾಹಿಯ ಹೆಸರಿನಲ್ಲಿ ಈಡೀ ಜನಾಂಗವನ್ನೇ ದೂಷಿಸುವ ಪ್ರಯತ್ನ . ಈ ದೂಷಿಸುವ ಭರದಲ್ಲಿ ಮಹಿಳೆಯರ ಹಕ್ಕುಗಳ ಬಗ್ಗೆ, ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಮುಖ್ಯ ವಿಷಯಗಳ ಬಗ್ಗೆ ಚರ್ಚೆಯೇ ಆಗಲಿಲ್ಲ. ನೆರದಿದ್ದ ಅನೇಕ ಕವಿಯತ್ರಿಯರು ಭೈರಪ್ಪನವರನ್ನು ನೇರವಾಗಿ ವೈಯ್ಯಕ್ತಿಕವಾಗಿ ನಿಂದಿಸಿದರು. ಅಷ್ಟೇಯಲ್ಲದೇ ಇಂತಹ ಕೆಳ ಮಟ್ಟದ ಭಾಷಣಗಳು ಮತ್ತು ವ್ಯಕ್ತಿ ನಿಂದನೆಯನ್ನು ಕೇಕೆ, ಶಿಳ್ಳೆ ಮುಖಾಂತರ ಆನಂದಿಸುವ ಜನರು ಆ ಕಾರ್ಯಕ್ರಮಗಳಲ್ಲಿ ಉಪಸ್ತಿತರಿದ್ದರು. ಕನ್ನಡ ಹಿರಿಮೆ, ಕನ್ನಡ ಕಂಪು ಹಾಗು ಮಹಿಳೆಯರ ಪರ ಧ್ವನಿಎತ್ತಬೇಕಾದ ವೇದಿಕೆಯೊಂದರಲ್ಲಿ ಕನ್ನಡದ ಕಣ್ಮಣಿಯನ್ನು ನಿಂದಿಸುವದು ಸಾಹಿತ್ಯ ಸಮ್ಮೇಳನಕ್ಕೆ ಮತ್ತು ಕನ್ನಡಕ್ಕೆ ಮಾಡುವ ಅಪಮಾನವಲ್ಲವೆ??
ಭೈರಪ್ಪನವರ ನಿಂದನೆ ಮುಗಿಸಿ ಮುಂದುವರೆದ ಕವಿಯತ್ರಿಯರು ದೇವರ ಹೆಸರಲ್ಲಿ, ಪುರೋಹಿತಶಾಹಿಯ ಹೆಸರಲ್ಲಿ ಮೇಲ್ವರ್ಗದವರು ಬೇರೆಯವರನ್ನು ಲೂಟಿ ಮಾಡುತ್ತಾರೆಂದು ದೂಷಿಸಿದರು. ಈ ರೀತಿಯ ದೂಷಣೆಯಿಂದ ಮತ್ತು ಮೇಲ್ವರ್ಗದವರನ್ನು ಬಾಯಿಗೆ ಲಗಾಮಿಲ್ಲದೆ ಬಯ್ಯುವುದರಿಂದಲೇ ಕೆಲವರ ಮನೆ ನಡೆದರೆ ಇನ್ನು ಕೆಲವರಿಗೆ ಮಾಧ್ಯಮಗಳಲ್ಲಿ ಸ್ಥಳ ದೊರಕುವುದೆಂದು ಚೆನ್ನಾಗಿ ಅರಿತುಕೊಂಡಿದ್ದಾರೆ. ಬ್ರಾಹ್ಮಣ ವಿರೋಧಿ ಮನೋಭಾವವನ್ನು ಹೆಚ್ಚಿಸಲು ಬ್ರಾಹ್ಮಣ್ಯ ದೇಶಕ್ಕೆ ಅಂಟಿಕೊಂಡ ಒಂದು ದೊಡ್ಡ ಶಾಪ ಅನ್ನುವ ಅರ್ಥರಹಿತ ಮಾತುಗಳನ್ನಾಡಿ ಜೊತೆಗೆ ಬುದ್ಧ ಕೂಡ ಬ್ರಾಹ್ಮಣರಿಂದ ದೂರವಿರಬೇಕಂದು ಎಂದು ಕರೆ ನೀಡಿದ್ದರಂತೆ !.ಅದ್ಯಾವ ಕೃತಿಯಲ್ಲಿ ಬುದ್ದ ಹೀಗೆ ಹೇಳಿದ್ದೆನೆಂದು ಆ ಕವಿಯತ್ರಿಗಳೇ ಬಲ್ಲರು..
ಕಾಡುವ ಹೆಮ್ಮಿ೦ಗ್ವೆಯೂ,ನೆನಪಾಗುವ ತೇಜಸ್ವಿಯೂ
– ಗುರುರಾಜ ಕೊಡ್ಕಣಿ,ಯಲ್ಲಾಪುರ
ಜಗತ್ತಿನ ಪ್ರತಿಯೊಬ್ಬ ಸಾಹಿತ್ಯಪ್ರಿಯನಿಗೂ ತನ್ನದೇ ಆದ ಸಾಹಿತ್ಯಾಭಿರುಚಿ ಇರುತ್ತದೆ.ನೆಚ್ಚಿನ ಬರಹಗಾರರಿರುತ್ತಾರೆ.ಅವರ ನೆಚ್ಚಿನ ಬರಹ ಅವರವರ ಆಸಕ್ತಿಯನ್ನವಲ೦ಬಿಸಿರುತ್ತದೆ ಎ೦ಬುದು ನಿಸ್ಸ೦ಶಯ.ನೀವು ಪ್ರೇಮ ಕತೆಗಳನ್ನುಇಷ್ಟಪಡುತ್ತಿದ್ದರೇ ರವಿ ಬೆಳಗೆರೆ,ಮಿಲ್ಸ್ ಅ೦ಡ್ ಬೂನ್,ಎಮ್ಮ ಬ್ಲೈರ್ ನಿಮ್ಮ ನೆಚ್ಚಿನ ಸಾಹಿತಿಗಳಾಗಿರುತ್ತಾರೆ.ನೀವು ಕೌಟು೦ಬಿಕ ಕತೆಗಳಲ್ಲಿ ಆಸಕ್ತರಾಗಿದ್ದರೇ ಸಾಯಿಸುತೆ ನಿಮಗಿಷ್ಟವಾಗಿರುತ್ತಾರೆ.ಸ್ತ್ರೀ ಪ್ರಧಾನ ಕತೆಗಳು ನಿಮ್ಮ ಫೇವರೇಟ್ ಆಗಿದ್ದರೇ ಎ೦.ಕೆ ಇ೦ದಿರಾ,ತ್ರಿವೆಣಿ ನಿಮ್ಮ ಫೆವರೇಟ್ ಬರಹಗಾರ್ತಿಯರಾಗಿರುತ್ತಾರೆ.ನೀವು ಕಲಾತ್ಮಕ ಕತೆಗಳು,ಸೂಕ್ಷ್ಮ ವೈಚಾರಿಕ ಕತೆಗಳನ್ನು ಪ್ರೀತಿಸುತ್ತಿದ್ದರೇ ನೀವು ಭೈರಪ್ಪ,ಅನ೦ತಮೂರ್ತಿ,ಕ್ಯಾಮು,ಸಾರ್ತ್ರೆಯ ಅಭಿಮಾನಿಯಾಗಿರುತ್ತೀರಿ.ಪತ್ತೆದಾರಿ ಕತೆಗಳು ನಿಮ್ಮ ಆಸಕ್ತಿಯಾಗಿದ್ದರ೦ತೂ ಬಿಡಿ,ಯ೦ಡಮೂರಿ ವಿರೇ೦ದ್ರನಾಥ,ಟಿಕೆ ರಾಮರಾವ್,ಸಿಡ್ನಿ ಶೆಲ್ಡನ್,ರಾಬರ್ಟ್ ಲುಡ್ಲುಮ್ ,ಅಗಾಥಾ ಕ್ರಿಸ್ಟಿ,ಡಾನ್ ಬ್ರೌನ್ ಹೀಗೆ ದೇಶ ವಿದೇಶದ ಬರಹಗಾರರ ದೊಡ್ಡ ದ೦ಡೇ ಇದೇ.ಹಾಸ್ಯ,ವಿಡ೦ಬನೆಗೆ ಬೀಚಿ,ಬರ್ನಾಡ್ ಷಾ.ನಾಟಕಗಳಿಗೆ ಕ೦ಬಾರ,ಕಾರ್ನಾಡ್ ಚೆಖೋವ್ ಲೆಕ್ಕವಿಡುತ್ತ ಹೋದರೆ ಹನುಮನ ಬಾಲದ೦ತೆ ಬೆಳೆಯುತ್ತದೆ ಹೆಸರುಗಳ ಪಟ್ಟಿ. ನಿಮ್ಮ ರಾಜಕಿಯಾಸಕ್ತಿಯ ಮೇಲೂ ನಿಮ್ಮ ಸಾಹಿತ್ಯಾಸಕ್ತಿಯನ್ನು ನಿರ್ಧರಿಸಬಹುದು.ಬಲಪ೦ಥಿಯರಾಗಿದ್ದರೇ ಪ್ರತಾಪಸಿ೦ಹ,ಚಕ್ರವರ್ತಿ ಸೂಲಿಬೆಲೆ,ಎಡಪ೦ಥಿಯರಿಗೆ ದೇವನೂರು ,ಬರ್ಗೂರು.ಇತ್ಯಾದಿ ಇತ್ಯಾದಿ.ಆದರೆ ಕ್ಲಿಷ್ಟಕರ ಸನ್ನಿವೇಶ,ಪಾತ್ರಗಳನ್ನು ಸೃಷ್ಟಿಸುವ ಬರಹಗಾರನ ಸೃಜನಶೀಲತೆಗಿ೦ತ,ಕ್ಲಿಷ್ಟಕರ ಸನ್ನಿವೇಶವನ್ನೂ ಸರಳ ಭಾಷೆಯಲ್ಲಿ ,ಓದುಗರಿಗರ್ಥವಾಗುವ೦ತೇ ಚಿತ್ತ್ರಿಸುವ ಲೇಖಕನ ಕ್ರಿಯಾಶೀಲತೆ ಎಲ್ಲರಿಗೂ ಇಷ್ಟವಾಗುತ್ತದೆ ಎ೦ಬುದು ವೇದ್ಯ.ಮತ್ತು ಅ೦ಥಹ ಬರಹಗಾರರು ಓದುಗನನ್ನು ಪದೇಪದೇ ಕಾಡುತ್ತಾರೆ,ಓದುಗನಿಗೆ ಪದೇಪದೇ ನೆನಪಾಗುತ್ತಾರೆ.ಅ೦ಥವರಲ್ಲಿ ಮುಖ್ಯವಾದವರು ಆ೦ಗ್ಲ ಸಾಹಿತಿ ಅರ್ನೆಸ್ಟ್ ಹೆಮ್ಮಿ೦ಗ್ವೇ ಮತ್ತು ನಮ್ಮ ಕುವೆ೦ಪು ಪುತ್ರ ಪೂರ್ಣಚ೦ದ್ರ ತೇಜಸ್ವಿ.
ಭೈರಪ್ಪನವರ ಆತ್ಮಕಥನ ‘ಭಿತ್ತಿ’ ಓದುತ್ತಾ…
– ಪ್ರಶಸ್ತಿ.ಪಿ, ಸಾಗರ
ಒಂದು ಪುಸ್ತಕ ಇಷ್ಟ ಆಗ್ಬೇಕು ಅಂದ್ರೆ ಆ ಲೇಖಕನ ಪಕ್ಕಾ ಅಭಿಮಾನಿ ಆಗಿರ್ಬೇಕು ಅಂತೇನಿಲ್ಲ. ಲೇಖಕನ ಒಂದು ಪುಸ್ತಕ ಇಷ್ಟ ಆಯ್ತು ಅಂದ್ರೆ ಅವನ ಎಲ್ಲಾ ಪುಸ್ತಕಗಳು ಇಷ್ಟ ಆಗ್ಬೇಕು ಅಂತನೂ ಇಲ್ಲ. ಆ ಲೇಖಕ ಹಾಗೆ ಹೀಗೆ, ಆ ಪಂಥ, ಈ ಪಂಥ ಅಂತೆಲ್ಲಾ ಪೂರ್ವಾಗ್ರಹಗಳನ್ನ ಇಟ್ಕೊಳ್ದೇ ಪುಸ್ತಕವನ್ನು ಎಲ್ಲದರ ತರಹದ ಸುಮ್ನೆ ಒಂದು ಪುಸ್ತಕ ಅನ್ನೋ ಓದೋ ಪ್ರಯತ್ನ ಮಾಡಿದ್ರೆ ಪುಸ್ತಕ ಓದೋ ಸವಿ ಸವಿಯಬಹುದೇನೋ ಅಂತೊಂದು ಅಭಿಪ್ರಾಯ. ಈ ಪೀಠಿಕೆಗಳನ್ನೆಲ್ಲಾ ಬದಿಗಿಟ್ಟು ಹೇಳೋದಾದ್ರೆ , ಇವತ್ತು ಹೇಳೊಕೆ ಹೊರಟಿರೋ ಬುಕ್ಕು ಇತ್ತೀಚೆಗೆ ಎತ್ಕೊಂಡ ಪುಸ್ತಕ ಭೈರಪ್ಪನವರ ಆತ್ಮಕಥನ ಭಿತ್ತಿ.
ಸಂತೇಶಿವರ ಅನ್ನೋ ಊರಲ್ಲಿ ಹುಟ್ಟೋ ಭೈರಪ್ಪನವರಿಗೆ ಹುಟ್ಟಾ ಕಷ್ಟಗಳು.ಶ್ಯಾನುಭೋಗಿಕೆಯ ಮನೆತನ. ಆದರೆ ಅಪ್ಪ ಪಕ್ಕಾ ಆಲಸಿ, ಜವಾಬ್ದಾರಿಯಿಲ್ಲದವ. ಅಮ್ಮ ಊರೆಲ್ಲಾ ಸುತ್ತಿ ಕಷ್ಟಪಟ್ಟು ಲೆಕ್ಕ ಬರೆಯೋದು. ಊರವರು ವರ್ಷಾಂತ್ಯದಲಿ ತಂದು ಕೊಟ್ಟ ರಾಗಿಯನ್ನ ಮಾರಿ ಅದರ ದುಡ್ಡು ಖರ್ಚಾಗೋವರೆಗೂ ಅರಸೀಕೆರೆಯಲ್ಲಿದ್ದು ಹೋಟೆಲಿನಲ್ಲಿ ತಿನ್ನೋಕೆ ಅಲ್ಲಿ, ಇಲ್ಲಿ ಅಂತ ದುಂದು ಮಾಡಿ ಬರುವಂತಹ ಅಪ್ಪ. ಬುಡದಿಂದ ಪುಸ್ತಕದ ಮಧ್ಯಭಾಗದಲ್ಲಿ ಅಪ್ಪನ ದೇಹಾಂತ್ಯವಾಗೋ ತನಕವೂ ಅಪ್ಪನ ಗೋಳು ಹೀಗೆ ಮುಂದುವರೆಯುತ್ತದೆ. ಅವನ ಗೋಳು ಒಂದಲ್ಲಾ ಎರಡಲ್ಲ. ಪ್ರೈಮರಿಯಿಂದ ಮಾಧ್ಯಮಿಕಕ್ಕೆ ಅಂತ ಬೇರೆ ಕಡೆ ಶಾಲೆಗೆ ಹೋಗಬೇಕಾಗಿರತ್ತೆ. ಖರ್ಚಿಗೆ ಅಂತ ಸಂತೆಗೆ ಹೋಗಿ ಶರಬತ್ತು ಮಾರಿ ೨೫ ರೂಪಾಯಿ ಕೂಡಿಸಿರುತ್ತಾನೆ ಮಗ. ಮಗ ಎಲ್ಲೋ ಹೋದ ಸಂದರ್ಭದಲ್ಲಿ ಆ ಇಪ್ಪತ್ತೈದು ರೂಪಾಯಿ ಲಪಟಾಯಿಸಿ ಅದಕ್ಕೆ ಏನೇನೋ ತರ್ಕದ ಸಮರ್ಥನೆ ಕೊಡ್ತಿರ್ತಾನೆ ಅಪ್ಪ. ಮುಂದೆ ಬೇರೆ ಊರಲ್ಲಿ ಭಿಕ್ಷಾನ್ನ ಮಾಡಿ ಶಾಲೆಗೆ ಹೋಗ್ತಿರುತ್ತಾನೆ ಮಗ.ಅಲ್ಲಿಗೂ ಬಂದ ಅಪ್ಪ ದುಡ್ಡು ಕೇಳುತ್ತಾನೆ. ಇದ್ದರೆ ತಾನೆ ಕೊಡುವುದು ? ಮಗ ಭಿಕ್ಷಾನ್ನಕ್ಕೆ ಹೋಗುತ್ತಿದ್ದ ಬೀದಿ ಬೀದಿಗೆ ಹೋಗಿ ಮಗನಿಗೆ ಇನ್ನೂ ಉಪನಯನವಾಗಿಲ್ಲ, ಯಾರೂ ಭಿಕ್ಷೆ ಕೊಡಬೇಡಿ ಅಂತ ಸಾರಿ, ಇಲ್ಲಸಲ್ಲದ್ದನ್ನೆಲ್ಲಾ ಅಪಪ್ರಚಾರ ಮಾಡಿ ಸಿಗೋ ಹೊತ್ತಿನ ಊಟವನ್ನೂ ದಕ್ಕದಂತೆ ಮಾಡುತ್ತಾನೆ. ಮುಂದೆ ಭೈರಪ್ಪನ ತಾಯಿ ಸತ್ತಾಗ ಅದರ ಕರ್ಮ ಮಾಡೋ ಜವಾಬ್ದಾರಿಯನ್ನೂ ವಹಿಸಿಕೊಳ್ಳದೇ ಎಲ್ಲೋ ತಲೆಮೆರೆಸಿಕೊಳ್ಳುತ್ತಾನೆ ಅಪ್ಪ. ಮಗನೇ ಎಲ್ಲೋ ಸಾಲ ಸೋಲ ಮಾಡಿ , ಊರೂರು ಅಲೆದು ಮನೆಗೆ ನಾಲ್ಕು ಕಾಯಿಯಂತೆ ಪಡೆದು, ಅದನ್ನು ಮಾರಿ ದುಡ್ಡು ಕೂಡಿಸಿ ತಾಯಿಯ ಶ್ರಾದ್ದ ಮಾಡುತ್ತಾನೆ. ಎಲ್ಲೂ ಇಲ್ಲದ ಅಪ್ಪ, ಊಟಕ್ಕೆ ಸರಿಯಾಗಿ ಬಂದು ಊಟಕ್ಕೆ ಕೂತುಬಿಡುತ್ತಾನೆ.ಮುಂದೆಯೂ ಅಲ್ಲಿ ದುಡ್ಡು ಕೊಡು, ಇಲ್ಲಿ ಕೊಡು ಅಂತ ಅವಾಚ್ಯ ಶಬ್ದಗಳಲ್ಲಿ ನಿಂದಿಸುತ್ತಿರುವುದೇ ಆ ಪಾತ್ರದ ಕೆಲಸ.