ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಂಗಳೂರು’

12
ಏಪ್ರಿಲ್

ಅವರ ಸಹಕಾರವಿಲ್ಲದೆ ಈ ಮರಳು ದಂಧೆ ನಡೆಯುತ್ತಾ ?

– ನರೇಂದ್ರ ಎಸ್ ಗಂಗೊಳ್ಳಿ, ವಾಣಿಜ್ಯಶಾಸ್ತ್ರ ಉಪನ್ಯಾಸಕರು.

ಕಳೆದ ಭಾನುವಾರ ರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ತಡರಾತ್ರಿ ಅಕ್ರಮ ಮರಳುಗಾರಿಕೆ ದಂಧೆಯ ಕುರಿತಂತೆ ತನಿಖೆ ಮಾಡಲು ತೆರಳಿದ್ದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ತಹಶೀಲ್ದಾರ್ ಶಿಲ್ಪಾ ನಾಗ್ , ಅಂಪಾರು ಗ್ರಾಮಕರಣ ಕಾಂತರಾಜು ಸೇರಿದಂತೆ ಆರು ಜನರ ತಂಡದ ಮೇಲೆ ಈ ಅಕ್ರಮ ದಂಧೆ ನಿರತ ತಂಡ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದು ಖಂಡನೀಯ. ಮೊದಲು ಬಿಹಾರ ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಇಂತಹ ಘಟನೆಗಳು ಕೇಳಿಬರುತ್ತಿದ್ದವು, ಆದರೆ ಇದೀಗ ಬುದ್ಧಿವಂತರ ಜಿಲ್ಲೆ ಎಂದೆನ್ನಿಸಿಕೊಂಡ ಉಡುಪಿಯಲ್ಲೇ ಇಂತಹ ಘಟನೆ ನಡೆದಿರುವುದು ಇಡೀ ಜಿಲ್ಲೆಯ ಜನರೇ ತಲೆ ತಗ್ಗಿಸುವಂತಾಗಿದೆ.

ಮತ್ತಷ್ಟು ಓದು »

7
ನವೆಂ

ಭವಿಷ್ಯತ್ತಿನಲ್ಲಿ ಯಾವ ಹಬ್ಬ ಕೈಬಿಡಲಿದೆಯೋ…?

– ಸಂತೋಷಕುಮಾರ ಮೆಹೆಂದಳೆ. ಕೈಗಾ 

dsc8476_tipu_sultan_m
( ನಾನು ನನ್ನ ಸಮಾಜ ಮತ್ತು ಧರ್ಮಾಧಾರಿತ ವೃತ್ತದಲ್ಲಿ ನನ್ನ ಹಿರಿಮೆಯನ್ನು ಸ್ಥಾಪಿಸಿಕೊಳ್ಳುವುದು ಹೇಗೆ..? ಇನ್ನೊಂದು ಧರ್ಮವನ್ನು ಮುಗಿಸಿ ಹಾಕುವುದರ ಮೂಲಕ. ಇದು ಸುಲಭದ ದಾರಿ ಮತ್ತು ಸರಿಯಾಗಿ ಇನ್ನೂರು ವರ್ಷಗಳ ಹಿಂದೆ ಟಿಪ್ಪು ಮಾಡಿದ್ದೂ ಅದೇ. ಅನಾಮತ್ತಾಗಿ ಲಕ್ಷಗಟ್ಟಲೇ ಹಿಂದೂಗಳನ್ನು ವರ್ಷವಧಿಯೊಳಗೆ ಮುಗಿಸಿ ಹಾಕಿ, ಕೊಡವರ ಒಂದು ತಲೆಮಾರನ್ನೇ ನಿರ್ನಾಮ ಮಾಡಿ, ಅದನ್ನು ಸಾಧನೆ ಎಂಬಂತೆ ಪತ್ರಗಳ ಮೂಲಕ ಪ್ರಚುರಪಡಿಸಿದ ಕೂಡಾ. ಆದರೆ ಇವತ್ತಿಗೂ ಅವನ ಭಜನೆ ಮಾಡುತ್ತಿರುವ ಭಟ್ಟಂಗಿಗಳಿಗೆ ತಾವೂ ಮುಂದೊಮ್ಮೆ ಇಂತಹದ್ದೇ ಪರಿಸ್ಥಿತಿಗೆ ಈಡಾಗಲಿದ್ದೇವೆ ಎನ್ನುವ ಅರಿವಾದರೂ ಬೇಡವಾ…? )   ಮತ್ತಷ್ಟು ಓದು »

19
ನವೆಂ

ನಾನು ನೇತ್ರಾವತಿ

– ಭರತೇಶ ಅಲಸಂಡೆಮಜಲು

ನೇತ್ರಾವತಿನಾನು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಹತ್ತಿರದ ಎಳನೀರು ಘಟ್ಟದ ಬಂಗ್ರಬಾಳಿಗೆಯವಳು, ಪಶ್ಚಿಮ ಘಟ್ಟವೇ ಮೂಲಸ್ಥಾನ, ಬೆಳೆದದ್ದು ದಕ್ಷಿಣ ಕನ್ನಡದ ಉಪ್ಪಿನಂಗಡಿ ಹತ್ತಿರ, ಸೇರಿದ್ದು ಅರಬ್ಬೀ ಸಮುದ್ರವನ್ನು… ನನ್ನ ಜೊತೆ ಎಳನೀರು ಹೊಳೆ, ಬಂಡಾಜೆ ಹೊಳೆ, ಮೃತ್ಯುಂಜಯ ಹೊಳೆ, ನೇರಿಯಾ ಹೊಳೆ, ಕೆಂಪು ಹೊಳೆ, ಹನಿಯೂರು ಹೊಳೆ, ಸುನಾಲ ಹೊಳೆ, ಕಪಿಲಾ ಹೊಳೆ, ಕುಮಾರಧಾರ ಹೀಗೆ ಸೋದರ-ಸೋದರಿಯರು. ನಮ್ಮದು ತುಂಬು ಸಂಸಾರ ಪರ್ವತ ರಾಜ, ಮೇಘರಾಜ, ವಾಯುರಾಜರನ್ನೊಳಗೊಂಡ ಚೊಕ್ಕ ಸಂಸಾರ, ಒಬ್ಬರನೊಬ್ಬರು ಬಿಟ್ಟಿರಲಾರದಷ್ಟು ರಕ್ತಕ್ಕಿಂತಲೂ ಮೀರಿದ ಪಾಕೃತಿಕ ಬಂಧನ. ಹೌದು ಈಗ ಗೊತ್ತಗಿರಬಹುದು ನಿಮಗೆ ನಾನರೆಂದು ಅದೇ ನಿಮ್ಮ ನೇತ್ರಾವತಿ ನಾನು.

ನನ್ನ ಜೀವನವೇ ಹೀಗೆ ಎಲ್ಲಿಯೂ , ಯಾರನ್ನೂ ಕಾಯದೇ ನಿರಂತರವಾಗಿ ಹರಿದು ಅದರಿಂದಲೇ ಪಾವನವಾಗಿ ಜಗತ್ತಿಗೆ ತುಳುನಾಡಿನ ಸೌಂದರ್ಯದ ಬಸಿರ ತೋರಿಸಿ, ನರಳುವವರಿಗೆ ಹಸಿರಿನ ನೆರಳಾಗಿ ಹರಿದು ಹರಿದು ಒಂದು ದಿನ ಮಹಾಸಾಗರದಲ್ಲಿ ಬೆರೆತು ಮರೆಯಾಗುತ್ತೇನೆ. ಚಿನ್ನಾಟ ಆಡುತ್ತಾ ಹಿಂಗಾರು- ಮುಂಗಾರು ಮಾರುತಗಳ ಜೊತೆ ಬರುವ ಮೋಡಗಳನ್ನು ಎದೆಯೊಡ್ಡಿ ನಿಲ್ಲಿಸಿದ ಪಶ್ಚಿಮಘಟ್ಟ ತುಳುನಾಡಿಗೆ, ಮಲೆನಾಡಿಗೆ ವರ್ಷಧಾರೆಯನ್ನು ಸಿಂಪಡಿಸುತ್ತಿದ್ದರೆ, ಹಿಮ್ಮೇಳದಲ್ಲಿ ಮಂದಗಾಳಿಗೆ ನೆಟ್ಟಿ ತೆಗೆಯುವ ಲೆಂಕಿರಿಗಳು, ತಂಗಾಳಿಗೆ ಮೈಯೊಡ್ಡಿ ವ್ಯಾಯಾಮ ಮಾಡುವ ಕೊಂಬೆಗಳು, ಬಿಸಿಲಿಗೆ ಬಾಯಾರಿದ ತರಗೆಳಲೆಗಳು ನೀರು ಕುಡಿಯುವುದು, ತೋಡಿನ ಬದುವಿನ ಕೇದಗೆಯ ಪರಿಮಳ, ಇನಿದನಿ ಪಕ್ಷಿಗಳ ರಸಮಂಜರಿ, ಬಳುಕುತ್ತಾ ನಡೆಯುವ ಪ್ರಾಣಿಗಳು ಹೀಗೆ … ಹೀಗೆ…ಇಂತಹ ಜೀವವೈವಿಧ್ಯದ ಪ್ರಾಕೃತಿಕ ಬಂಗುರವೇ ನನಗೆ ಆಹಾರ, ಕಣ್ಣಿಗೆ ಹಬ್ಬ, ಹೊಟ್ಟೆಗೂ ಖುಷಿ…

ಮತ್ತಷ್ಟು ಓದು »

31
ಜನ

‘ದಾಮಿನಿ’ಗೆ ಮಿಡಿದ ಹೃದಯಗಳು ’ಸೌಜನ್ಯ’ಳಿಗೂ ಮಿಡಿಯಲಾರವೇ?

– ಭುವಿತ್ ಶೆಟ್ಟಿ

ಪ್ರಿಯ ಮಂಗಳೂರಿನ ನಾಗರೀಕರೇ,

Kumari Soujanyaನಾವೇಕೆ ಈ ರೀತಿ? ನಮ್ಮ ಮನೆಯಲ್ಲಿ ಸೂತಕವಿದ್ದರೂ ಪರಮನೆಯ ಸಾವಿಗೆ ಕಣ್ಣೀರು ಸುರಿಸುವ ಹೃದಯ ವೈಶಾಲ್ಯತೆ ನಮಗೇಕೆ? ಊರ ಉಸಾಬರಿ ನಮಗ್ಯಾಕೆ ಅಂತ ಸುಮ್ಮನೆ ಕೂರುವಂಥ ಕಾಲ ಇದಲ್ಲ. ಅದನ್ನು ಒಪ್ಪಲೇ ಬೇಕು. ಆದರೆ, ಇತ್ತೀಚೆಗೆ ನಾವು ತೀರ ಸ್ವಂತಿಕೆಯ ಎಲ್ಲೆ ಮೀರಿ ಹೋಗುತ್ತಿದ್ದೇವೆ. ನೆರೆಮನೆ ಸುಡುತ್ತಿದ್ದರೂ ಮಾತಾಡದೆ, TV ಯಲ್ಲಿ ಕ್ರೈಂ ಸ್ಟೋರಿ ನೋಡಿ ಅಯ್ಯೋ ಪಾಪ ಎನ್ನುತ್ತೇವೆ. ಅಂಥ ಮನೋಸ್ಥಿಥಿ ನಮ್ಮದು. ಮಾನವೀಯತೆ ಎಂಬುದು ಮಾದ್ಯಮಗಳು ಬಿತ್ತರಿಸುವ ಸುದ್ದಿಯನ್ನು ನೋಡಿ ಉಕ್ಕಿ ಹರಿಯುತ್ತದೆ ಹೊರತು ವಾಸ್ತವತೆಯನ್ನರಿತಲ್ಲ. ಮಂಗಳೂರು ಖಂಡಿತವಾಗಿಯೂ ಬದಲಾಗಿದೆ ಎನ್ನಲು ಇತ್ತೀಚೆಗೆ ನಡೆದ Home Stay ಗಲಾಟೆ ಹಾಗೂ  ಸೌಜನ್ಯ ಸಾವಿನ ಪ್ರಕರಣದ ಬಗ್ಗೆ ಮಂಗಳೂರಿನ ಜನತೆ ವ್ಯಕ್ತಪಡಿಸಿದ ಪ್ರತಿಕ್ರಿಯೆಯೇ ಸಾಕು.

ರಾಜಕೀಯ ಪ್ರೇರಿತ ‘ಮಂಗಳೂರು ರೆಸಾರ್ಟ್ ಗಲಾಟೆ’ಯಲ್ಲಿ ಸಿರಿವಂತ ಮನೆಯ ಹೆಣ್ಣುಮಕ್ಕಳಿಗಾದ ಅನ್ಯಾಯಕ್ಕೋಸ್ಕರ ಅದೆಷ್ಟು ಮಂದಿ ಬೀದಿಗಿಳಿಯಲಿಲ್ಲಾ? Facebook ತುಂಬಾ ಅದೇನೂ ಸ್ಟೇಟಸ್ Update ಗಳು, ಅದೇನೂ ಅಕ್ರೋಶ? ದಾಳಿ ಮಾಡಿದವರನ್ನು ಕೈಗೆ ಕೊಟ್ಟಿದ್ದರೆ ಕೊಂದು ಬಿಡುತ್ತಿದ್ದರೋ ಏನೋ… ಆ ರೀತಿ ಇತ್ತು ಪ್ರತಿಭಟನೆಯ ಜೋರು.

ಮತ್ತಷ್ಟು ಓದು »

30
ಜುಲೈ

ಇವರ ಪಾಲಿಗೆ ‘ಹೆಣ್ಣು’ ಟಿ ಆರ್ ಪಿ ಹೆಚ್ಚಿಸುವ ಕ್ಯಟಲಿಸ್ಟ್ ಮಾತ್ರ…

– ಚೇತನಾ ತೀರ್ಥಹಳ್ಳಿ

ಸತ್ತು ಬಿದ್ದಿತ್ತು ಭಾರತ’ – ಇದು ಡಿಸೆಂಬರ್ 2, 2007ರಂದು ಬರೆದು ನನ್ನ ಬ್ಲಾಗ್ ನಲ್ಲಿ ಹಾಕಿಕೊಂಡಿದ್ದ ಲೇಖನ.
ಆ ದಿನ ಅಸ್ಸಾಮಿನ ಬುಡಕಟ್ಟು ಜನಾಂಗವೊಂದು ತನ್ನ ಹಕ್ಕುಗಳಿಗಾಗಿ ಒತ್ತಾಯಿಸಿ ಧರಣಿ ಹೂಡಿತ್ತು. ಅದರಲ್ಲಿ ಹೆಂಗಸರೂ ಇದ್ದರು. ದಿಬ್ರುಗಡ್ ನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿತ್ತು. ಅದೇ ಸಮಯಕ್ಕೆ ಗುವಹಾಟಿಯ ಬೀದಿಯೊಂದರಲ್ಲಿ ಒಬ್ಬ ಟ್ರೈಬಲ್ ಹೆಣ್ಣುಮಗಳು ಪ್ರತಿಭಟನೆಯ ಬೋರ್ಡ್ ಹಿಡಿದು ತನ್ನ ಪಾಡಿಗೆ ನಿಂತಿದ್ದಳು. ತನ್ನ ಜನಾಂಗದ ಹಕ್ಕಿಗಾಗಿ ಶಾಂತಿಯುತ ಪ್ರತಿರೋಧ ತೋರುತ್ತಿದ್ದ ಆ ಹೆಣ್ಣನ್ನು ಗುವಹಾಟಿಯ ಕೆಲವು ಗಂಡಸರು ಅಟ್ಟಾಡಿಬಿಟ್ಟಿದ್ದರು. ಜನಾಂಗೀಯ ದ್ವೇಷ, ಮತ್ತೆಲ್ಲೋ ನಡೆದ ಹಿಂಸೆಗೆ ಪ್ರತಿಯಾಗಿ ಇಲ್ಲಿ ಅಸಹಾಯಕ ಹೆಣ್ಣಿನ ಮೇಲೆ ಮುಗಿಬಿದ್ದಿದ್ದರು. ಆಗಲೂ ಒಬ್ಬ ಮೀಡಿಯಾ ಹುಡುಗ ಫೋಟೋಗಳನ್ನ ತೆಗೆದು “ಭೇಷ್” ಆಗಿದ್ದ!
~
2012ರ ಜುಲೈ 13. ಪಬ್ ನಿಂದ ಹೊರಬಂದು ಸ್ನೇಹಿತರ ಜತೆ ಜಗಳಾಡುತ್ತಿದ್ದ ಹುಡುಗಿಯ ಮೇಲೆ 20 ಜನ ಗಂಡಸರು ಕೈಮಾಡಿದರು. ಕೈಹೋದಲ್ಲೆಲ್ಲ ಮುಟ್ಟಿ ತೆವಲು ತೀರಿಸಿಕೊಂಡರು. ಅವಳ ಬಟ್ಟೆ ಚಿಂದಿಯಾಯ್ತು. ಇದು ಕೂಡ ನಡೆದಿದ್ದು ಗುವಹಾಟಿಯಲ್ಲೇ. ಆಗಲೂ ಒಬ್ಬ ಲೋಕಲ್ ಮೀಡಿಯಾದ ಫೋಟೋಗ್ರಾಫರ್ ಇದ್ದ. ಘಟನೆಯನ್ನ ವಿಡಿಯೋ ಮಾಡಿದ. ನನ್ನಿಂದ ಸಹಾಯ ಅಂತೂ ಮಾಡಲಾಗಲಿಲ್ಲ, ಅದಕ್ಕೆ ಚಿತ್ರೀಕರಣ ಮಾಡಿದೆ ಅಂದ. ಶೂಟ್ ಮಾಡುವಾಗ ವಿಡಿಯೋಗೆ ಬೆಳಕು ಸಾಕಾಗ್ತಿಲ್ಲ, ಅವಳನ್ನ ಈಚೆ ಎಳಕೊಂಡು ಬನ್ನಿ ಅಂತ ಅವನಂದಿದ್ದು ರಟ್ಟಾಯ್ತು.
~
2009ರ ಜನವರಿ 24. ಮಂಗಳೂರಿನ ಪಬ್ ಒಂದರ ಮೇಲೆ ಶ್ರೀರಾಮ ಸೇನೆಯ ವಾನರರು ದಾಳಿ ಮಾಡಿದರು. ಹೆಣ್ಣುಮಕ್ಕಳನ್ನ ಹಿಗ್ಗಾಮುಗ್ಗ ಬಡಿದರು. ಚಾನೆಲ್ ಒಂದು ಅಚ್ಚುಕಟ್ಟಾಗಿ ಚಿತ್ರೀಕರಿಸಿ ಟಿ ಆರ್ ಪಿ ಹೆಚ್ಚಿಸಿಕೊಂಡಿತು. ತಪ್ಪಿಸುವ ಗೋಜಿಗೆ ಹೋಗುವುದು ಹಾಗಿರಲಿ, ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿಯಿತು.
ಮತ್ತಷ್ಟು ಓದು »