ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮತ’

26
ಆಕ್ಟೋ

ಉತ್ತರ ಸಿಗದ ನನ್ನ ಪ್ರಶ್ನೆಗಳು

– ವಿದ್ಯಾ ಕುಲಕರ್ಣಿ

ಜಿಜ್ಞಾಸು, ಪ್ರಬುದ್ಧರ ಚಿಂತನೆ, ಕುಲುಮೆ, ನಿಲುಮೆ ಈ ಗುಂಪುಗಳಲ್ಲಿ ನಾನು ಕೆಲವು ಪ್ರಶ್ನೆಗಳನ್ನು ಕೇಳುತ್ತಲೇ ಬಂದಿದ್ದೇನೆ. ಅವುಗಳಿಗೆ ಯಾರೂ ಸಮರ್ಪಕ ಉತ್ತರ ಕೊಡದೇ ಪುನಃ ಬೇರೆ ಬೇರೆ ಪ್ರಶ್ನೆ ಕೇಳುತ್ತಲೇ ಹೋಗುತ್ತಾರೆ.

ನನ್ನ ಪ್ರಶ್ನೆಗಳಿಗೆ ಉತ್ತರಿಸಿ ಎಂದರೆ “ಉತ್ತರಿಸಿದ್ದೇನೆ. ನಿಮಗೆ ತಿಳಿಯದಿದ್ದರೆ ಏನು ಮಾಡಲಿ??” “ನಿಮಗೆ ಗ್ರಹಿಸುವ ಶಕ್ತಿ ಇಲ್ಲ ಏನು ಮಾಡಲಿ?” ಇತ್ಯಾದಿ ಹಾರಿಕೆಯ ಉತ್ತರ ಕೊಡುತ್ತಾರೆ. ಹಾಗಿದ್ದರೆ ನನ್ನ ಪ್ರಶ್ನೆಗಳಾದರೂ ಏನು??

ಪುನಃ ಅದೇ ಪ್ರಶ್ನೆಗಳನ್ನು ಕ್ರೋಢೀಕರಿಸಿ ನಂಬರ್ ಕೊಟ್ಟು ಕೇಳುತ್ತಿದ್ದೇನೆ. ಈಗಲಾದರೂ ಉತ್ತರಿಸುವ (ನಂಬರ್ ಪ್ರಕಾರ ಉತ್ತರಿಸುವ) ಸೌಜನ್ಯ ಯಾರಾದರೂ  ತೋರಿಸುತ್ತೀರಾ?? ಮತ್ತಷ್ಟು ಓದು »

22
ಆಕ್ಟೋ

ಲಿಂಗಾಯತವೆಂಬುದು ಹೊಸ ಧರ್ಮವೇ? … ಭಾಗ 2

– ದೇವು ಹನೆಹಳ್ಳಿ,
ಬಾರಕೂರು, ಉಡುಪಿ

ಮತ,ಪಂಥ,ಧರ್ಮ,Religion ಇತ್ಯಾದಿ… ಭಾಗ 1

Religion ಅನ್ನು `ಧರ್ಮ’ ವೆಂದು ಅನುವಾದಿಸಿದ್ದು ಶತಮಾನದ ದೊಡ್ಡ ಅಕ್ರಮ-ಸಕ್ರಮ ಯೋಜನೆ.    

ನಾವು ಭಾರತೀಯರು Religion ಎಂಬ ಏಕಸೂತ್ರದಲ್ಲಿ ಇಲ್ಲ ಎಂಬುದು ನಮ್ಮ ಸುಪ್ತಪ್ರಜ್ಞೆಗೆ ಗೊತ್ತು. ಏಕಸೂತ್ರಕ್ಕೆ ಏನೆನ್ನಬೇಕು? ಅದೊಂದು Religion ಅಲ್ಲ, ಜೀವನವಿಧಾನ ಎಂದು ಯಾರೋ ಅಂದರು. (ಎಂ.ಬಿ. ಪಾಟೀಲರೂ ಅದನ್ನೇ ಹೇಳುತ್ತಾರೆ! `ಹಿಂದೂ ಎಂಬುದಿಲ್ಲ; ಇಲ್ಲಿದ್ದುದು ಬರೇ ಜಾತಿಗಳು’ಎಂದು ಕಾಗೋಡು ತಿಮ್ಮಪ್ಪನವರು ಸರಿಯಾಗಿಯೇ ಹೇಳಿದ್ದಾರೆ.) ಜೀವನಧರ್ಮ ಎಂದರು. ಸನಾತನ ಪದ್ಧತಿ ಎಂದರು. ಸನಾತನ ಧರ್ಮ ಎಂದುಬಿಟ್ಟರು. `ಧರ್ಮ’ ಎಂದುಬಿಟ್ಟ ಅಚಾತುರ್ಯವಿದೆಯಲ್ಲಾ, ಅದು ಈ ಶತಮಾನದ ಒಂದು ದೊಡ್ಡ ಅಕ್ರಮ-ಸಕ್ರಮ ಯೋಜನೆ.

ಈ ಅಸ್ಪಷ್ಟವಾದ ‘ಧರ್ಮ’ ಎಂಬ ಪದ ಬಳಕೆಯಾದ ಕಾಲಘಟ್ಟದಲ್ಲಿ ನಡೆದುಹೋದ ಒಂದು ಚಾರಿತ್ರಿಕ ಘಟನೆಯೆಂದರೆ ಚಿಕಾಗೋದಲ್ಲಿ ನಡೆದ Parliament of World’s Religions. ಇದನ್ನು ಭಾರತೀಯ ಭಾಷೆಗಳಿಗೆ, ಕನ್ನಡಕ್ಕೆ ವಿಶ್ವ ಸರ್ವಧರ್ಮ ಸಮ್ಮೇಳನ ಎಂದು ಭಾಷಾಂತರಿಸಲಾಯಿತು. (ಅದಾಗಲೇ ಉತ್ತರಭಾರತದಲ್ಲಿ ಹಲವಾರು ಭಾಷೆಗಳ ಪದಗಳನ್ನು ಎರವಲು ಪಡೆದು ‘ಹಿಂದಿ’ ಎಂಬ ಹೊಸ ಭಾಷೆಯನ್ನು ತಯಾರಿಸುತ್ತಿದ್ದ  ಕಾಲದಲ್ಲಿ ಮತಕ್ಕೆ (Religion) ಬದಲಾಗಿ, ಧರಮ್ ಎನ್ನುವ ಪರಿಪಾಠ ಬಂದಿತ್ತು.) ಅದುವರೆಗೆ Religionಗೆ ಸಂವಾದಿಯಾಗಿ, ಸಮಾನಾರ್ಥಕವಾಗಿ ಬಳಕೆಯಾಗುತ್ತಿದ್ದ ‘ಮತ’ ಎಂಬ ಶಬ್ದವನ್ನು ಕದಲಿಸಿ ಅಲ್ಲಿ ‘ಧರ್ಮ’ ಎಂಬ ಪದವನ್ನು ಕೂರಿಸಲಾಯಿತು.  ಧರ್ಮ ಎಂಬುದು ಯಾವತ್ತೂ ಋತ, ನ್ಯಾಯ, ನೀತಿ, ಸತ್ಯ, ಋಜುತ್ವ, ದಯೆ, ಕರುಣೆ, ಕರ್ತವ್ಯ, ನ್ಯಾಯಸಮ್ಮತ ನಡವಳಿಕೆ ಮುಂತಾದ ಮಾನವೀಯ ಮೌಲ್ಯಗಳ ಮೊತ್ತವಾಗಿ ಗ್ರಹಿಸಿದ್ದೇ ವಿನಃ ಸಂಕುಚಿತ ಮತೀಯ ತೀರ್ಮಾನ, ಗ್ರಹಿಕೆಗಳಾಗಿ ಅಲ್ಲ.

ಭಾರತೀಯ ಸಂದರ್ಭದಲ್ಲಿ  Religionಗೆ ಸಂವಾದಿಯಾಗಿ ‘ಮತ’ ಎನ್ನುವುದಕ್ಕಿಂತ ‘ಧರ್ಮ’ಎಂದರೆ ಹೆಚ್ಚು ಸ್ವೀಕಾರಾರ್ಹತೆ, Legitimacy, ಬರುವ ವಾಸನೆ ಬಡಿಯುತ್ತಲೇ ರಕ್ತದಲ್ಲಿ ಮಿಂದೆದ್ದ Religion(ಮತ)ಗಳೆಲ್ಲ ತಮ್ಮನ್ನು ಧರ್ಮ ಎಂದು ಕರೆದುಕೊಳ್ಳಲಾರಂಭಿಸಿದವು. ಮತಪಂಥಗಳ ಕುರಿತಾದ ವಾಗ್ವಾದವನ್ನೇ ಹಾಳುಗೆಡವಿದ ಈ ವಿದ್ಯಮಾನ ಎಲ್ಲ ಭಾರತೀಯ ಭಾಷೆಗಳ ಪದಕೋಶಗಳನ್ನು ಕಲುಷಿತಗೊಳಿಸಿಬಿಟ್ಟಿತು. ಯುರೋಪಿಯನ್ ಭಾಷೆಗಳಲ್ಲಿ Religion ಮತ್ತು Munificence+Benevolence +Values+ Rectitude ಒಂದೇ ಅಲ್ಲ; ಆದರೆ ಭಾರತದಲ್ಲಿ ಮತ ಮತ್ತು ಧರ್ಮ ಎಂದರೆ ಒಂದೇ!

‘ನೂರು ಮತಗಳ ಹೊಟ್ಟ ತೂರಿ…’ ಎಂದು ಹಾಡುವ ಕಾಲದಲ್ಲಿ ಕುವೆಂಪು ಅವರ ಶಬ್ದಕೋಶ ಸರಿಯಿತ್ತು. ಆದರೆ ಅವರೇ `ಇಸ್ಲಾಂ ಧರ್ಮ’ ಎಂಬ ಹೊತ್ತಗೆ ಬರೆದರು! ಆದರೆ ಪಂಪನಿಗೆ ಈ ಗೊಂದಲವಿರಲಿಲ್ಲ. ಧರ್ಮ ಎಂದರೇನು, ಅಧರ್ಮ ಎಂದರೇನು? ಪಂಪ ಸ್ಪಷ್ಟವಾಗಿ ಹೇಳುತ್ತಾನೆ:

ಮತ್ತಷ್ಟು ಓದು »

21
ಆಕ್ಟೋ

ಮತ,ಪಂಥ,ಧರ್ಮ,Religion ಇತ್ಯಾದಿ… ಭಾಗ 1

– ದೇವು ಹನೆಹಳ್ಳಿ,
ಬಾರಕೂರು, ಉಡುಪಿ

 

ಒಂದು ಕಲ್ಲನು ಕಡಿದು ಮತ್ತೊಂದು ಕಲ್ಲಿಗೆ

ಭೋಗವ ಕೊಟ್ಟಿಹೆನೆಂಬ ಅಜ್ಞಾನವಿದೇನೋ?

–  ಅಲ್ಲಮಪ್ರಭು

 

ಲಿಂಗಾಯತ, ವೀರಶೈವ ‘ಸ್ವತಂತ್ರಧರ್ಮ’ ಘೋಷಣೆ, ಮಾನ್ಯತೆ ಇತ್ಯಾದಿಗಳ ಕುರಿತು ವ್ಯಾಪಕ ಚರ್ಚೆ, ಗುದ್ದಾಟಗಳನ್ನು ಪ್ರಸ್ತಾಪಿಸುವ ಮೊದಲು ‘ನಾನು ಯಾರು’ ಎಂಬುದನ್ನು ಸ್ಪಷ್ಟಗೊಳಿಸುವುದು ಅಗತ್ಯ ಮತ್ತು ಒಳಿತು. ಕಳೆದೆರಡು ಸಾವಿರ ವರ್ಷಗಳಿಂದ ‘ನಾನ್ಯಾರು’ ಎಂಬುದು ನನ್ನ ಸಮಸ್ಯೆಯಾಗಿರಲಿಲ್ಲ. ಯಾಕೆಂದರೆ ನಾನು ಅಜ್ಞಾನಿ, ಮೂಢ. ಅದು ಯಾರಿಗೆ ಸಮಸ್ಯೆಯಾಯಿತೋ ಅವರೇ ನೀಡಿದ ವ್ಯಾಖ್ಯೆಗಳನ್ನು ಒಪ್ಪಿಕೊಳ್ಳುತ್ತೇನೆ. ಏಕೆಂದರೆ ಅದು ಅನಿವಾರ್ಯ. ಹೌದು, ನಾನು ಪೇಗನ್,ಕಾಫಿರ, ಹೀದನ್. ಅನಂತರ ಹಿಂದೂ ಎಂದರು. “ಹಿಂದೂ” ಎನ್ನಿಸಿಕೊಳ್ಳುವುದು ಕೂಡಾ ನನ್ನ ಅಗತ್ಯವಾಗಿರಲಿಲ್ಲ, ಕೋರಿಕೆಯಾಗಿರಲಿಲ್ಲ. (ಕುರಿಯನ್ನು ‘ಕುರಿ’ ಎನ್ನುವುದು ಕುರಿಯ ಅಗತ್ಯವೇನೂ ಅಲ್ಲವಲ್ಲ?!) ಆದರೂ ಒಪ್ಪಿಕೊಳ್ಳುತ್ತೇನೆ. ಈಗ ಎಸ್.ಎಂ. ಜಾಮದಾರ್, ಗೊ.ರು.ಚ., ರಂಜಾನ್ ದರ್ಗಾ, ಮಾತೆ ಮಹಾದೇವಿ, ಮೀನಾಕ್ಷಿ ಬಾಳಿ ಮೊದಲಾದ ಶರಣಶರಣೆಯರು, ಅಸಂಖ್ಯ ಮಠಾಧೀಶರು, ಸಿದ್ಧರಾಮಯ್ಯನವರ ಸರಕಾರದ ಮಂತ್ರಿಗಳು, ಚಿಂತಕರು, ಪ್ರಗತಿಪರರು, ಪತ್ರಕರ್ತರು, ವಿಚಾರವಾದಿಗಳು, ಬುದ್ಧಿಜೀವಿಗಳು, liberals ಮುಂತಾದವರು ಒಂದು ಕೈಯಲ್ಲಿ ನನ್ನ ಕತ್ತು ಹಿಡಿದು, ಇನ್ನೊಂದು ಕೈಯಲ್ಲಿ ಕತ್ತಿ ಹಿಡಿದು ‘ಭವಿ’ ಎಂದು ಕರೆಯುತ್ತಿದ್ದಾರೆ. ನಾನು ಅಜ್ಞಾನಿಯಲ್ಲವೇ? ಮಹಾಪ್ರಸಾದವೆಂಬೆನು! (ಭವಿ ಎಂದರೆ ಇಷ್ಟಲಿಂಗವನ್ನು ಪೂಜಿಸದವನು; ಲೌಕಿಕವನ್ನು, ಅಂದರೆ ಭವವನ್ನು ನೆಚ್ಚಿ ಮೋಕ್ಷ ಪಡೆಯಲಾರದವನು; ಪಾಪಿ ಇತ್ಯಾದಿ.)

ಸತ್ಯವೆಂದರೆ ಪೇಗನ್, ಹೀದನ್, ಕಾಫಿರ್, ಹಿಂದೂ, ಭವಿ ಎಂಬೆಲ್ಲಾ ಬಿರುದುಗಳಿಗೂ, ಪಾಪಿ, ಅಜ್ಞಾನಿ, ಅವಿಶ್ವಾಸಿ, ಕಳ್ಳ, ಮೂರ್ತಿಪೂಜೆ ಮಾಡುವ ಮೂರ್ಖ, ಕಂದಾಚಾರಿ, ಮೂಢ, ಅನಾಚಾರಿ, ಮಿಥ್ಯಾರಾಧಕ ಎಂಬೆಲ್ಲಾ ಪದನಾಮಗಳಿಗೂ ಅಂತಹ ವ್ಯತ್ಯಾಸವೇನೂ ಇಲ್ಲ! ಜತೆಗೆ ವೈಯಕ್ತಿಕವಾಗಿ ನಾನು ನಾಸ್ತಿಕ ಮತ್ತು ನಿರೀಶ್ವರಿ. (ನಿರೀಶ್ವರವಾದಿಯಲ್ಲ.) ಅದು ಕೂಡಾ ಕಳೆದ 2-3 ಸಾವಿರ ವರ್ಷಗಳಿಂದ ನಾನು, ನನ್ನಂತಹ ಅಸಂಖ್ಯ ಪೇಗನ್ನರಿಗೆ ಸಮಸ್ಯೆಯಾಗಿರಲಿಲ್ಲ; ಯಾವ ಪೇಗನ್ನರೂ ನನ್ನನ್ನು ಸಾರ್ವಜನಿಕವಾಗಿ ಸುಡಲಿಲ್ಲ.

ನಾವು ನಮ್ಮ ಅಜ್ಞಾನದಲ್ಲಿ ಸುಖವಾಗಿದ್ದರೂ, ನಮಗೆ ಅವು ಸಮಸ್ಯೆಯಾಗಿ ಕಂಡಿಲ್ಲದಿದ್ದರೂ ‘ಇತರರಿಗೆ’ ಯಾಕೆ ಸಮಸ್ಯೆಯಾದವು? ಇವೆಲ್ಲ ಹಲವು ದಿಕ್ಕಿನಿಂದ ಒಂದಾಗಿ, ಒಂದೊಂದಾಗಿ ಆರಂಭಗೊಂಡವು ಎನ್ನಬಹುದು.

ಮತ್ತಷ್ಟು ಓದು »

20
ಜುಲೈ

ಕುವೆಂಪು ಮತ್ತು ಅಧ್ಯಾತ್ಮ

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

ಕುವೆಂಪುಕುವೆಂಪು ಮೂಲತಃ ಒಬ್ಬ ಕವಿ, ಶ್ರೇಷ್ಠ ಕವಿ. “ನಾನೃಷಿಃ ಕುರುತೇ ಕಾವ್ಯಂ” ಎಂಬ ಮಾತಿದೆ. ಋಷಿ ಎಂಬುದಕ್ಕೆ ದ್ರಷ್ಟಾರ ಎಂಬ ಅರ್ಥವಿದೆ. ಅಧ್ಯಾತ್ಮದ ಒಂದು ಮಜಲನ್ನು ದಾಟದಿದ್ದರೆ ದ್ರಷ್ಟಾರನಾಗುವುದು ಸಾಧ್ಯವಿಲ್ಲ. ಅಧ್ಯಾತ್ಮ ಎಂದರೆ ‘Immediate feeling of unity of the self with God’ ಎಂಬ ವ್ಯಾಖ್ಯೆಯನ್ನು ನೀಡಲಾಗಿದೆ. ದೇವರದೊಂದಿಗಿನ ಆತ್ಮದ ಐಕ್ಯವೇ ಅಧ್ಯಾತ್ಮ. ಕಾಯಕ, ನಿಸರ್ಗ, ಅಣುಜೀವ ಪ್ರೇಮ, ಹೀಗೆ ಯಾವುದೇ ಶಾಶ್ವತ ಮೌಲ್ಯವೂ ದೇವರಾಗಬಹುದು. ಇವು ವ್ಯಕ್ತಿಯಲ್ಲಿ ಲೀನವಾಗುವ ಬಗೆ ಅಧ್ಯಾತ್ಮದ ಹಂತಕ್ಕೆ ಒಯ್ಯುತ್ತದೆ.

ತೀವ್ರ ವಿಚಾರವಾದಿ, ಅಧ್ಯಾತ್ಮವಾದಿ, ಅಧ್ಯಾತ್ಮ ಜೀವಿಯಾದ ಕುವೆಂಪು ಸುಲಭಗ್ರಾಹ್ಯರಲ್ಲ. ಅವರು ವಿಚಾರವಾದಿ ನಿಜ, ಆದರೆ ಕೇವಲ ಭೌತವಾದಿಯಲ್ಲ. ಅಧ್ಯಾತ್ಮವಾದಿ ನಿಜ, ಆದರೆ ಕರ್ಮಠರಲ್ಲ. ಅಧ್ಯಾತ್ಮ ಜೀವಿ ನಿಜ, ಆದರೆ ಸಂನ್ಯಾಸಿಯಲ್ಲ. ನಿರಂಕುಶಮತಿಗಾಗಿ ಅವರು ನೀಡುವ ಕರೆ,ಆತ್ಮಶ್ರೀಗಾಗಿಯೇ ವಿನಾ ಭೌತಿಕ ರುಚಿಗಳ ಆರೈಕೆ, ಪೂರೈಕೆಗಳಿಗಾಗಿ ಅಲ್ಲ.

ಯಾವುದೇ ಅಧ್ಯಾತ್ಮ ತತ್ತ್ವದ ಅಂತಿಮ ಬಿಂದು ವ್ಯಕ್ತಿ ನಿಷ್ಠತೆ, ವ್ಯಕ್ತಿ ಉದ್ಧಾರ. ಸಮೂಹವನ್ನು ಇಡಿಯಾಗಿ ಉದ್ಧರಿಸುವ ಆಧ್ಯಾತ್ಮಿಕ ಸೂತ್ರ ಇಲ್ಲವೇ ಇಲ್ಲ. ಭಗವದ್ಗೀತೆಯಲ್ಲಿ ಹೇಳುವ “ಉದ್ಧರೇದಾತ್ಮನಾತ್ಮನಂ” ಎಂಬ ಮಾತು ಅಕ್ಷರಶಃ ನಿಜ. ವ್ಯಕ್ತಿ ಸ್ವತಃ ಉದ್ಧಾರವಾಗಬೇಕು. ವ್ಯಕ್ತಿ ವ್ಯಕ್ತಿಗಳು ಕೂಡಿ ಒಂದು ಸಮಾಜ. ವ್ಯಕ್ತಿಗಳ ಉದ್ಧಾರವೇ ಸಮಾಜದ ಉದ್ಧಾರ. ಕುವೆಂಪು ಅವರ ಕಾವ್ಯ, ಸಾಹಿತ್ಯ ಸೃಷ್ಟಿಯ ಮುಖ್ಯ ಸೂತ್ರವೂ ವ್ಯಕ್ತಿಯ ಆತ್ಮ ಸ್ವಾತಂತ್ರ್ಯಕ್ಕಾಗಿ ತುಡಿಯುವುದೇ ಆಗಿದೆ. ನಮ್ಮ ಉದ್ಧಾರಕ್ಕಾಗಿ ಯಾರೋ ಒಬ್ಬರು ದುಡಿಯುತ್ತಾರೆ ಎಂದು ಬಯಸುವಂತಿಲ್ಲ. ಎಲ್ಲರೂ ದುಡಿಯುತ್ತಲೇ ಅವರವರ ಹಾದಿಯಲ್ಲಿ ನಡೆದು, ಉದ್ಧಾರ ಕಂಡುಕೊಳ್ಳಬೇಕೆಂಬುದು ಅವರ ಕಾಣ್ಕೆ. ಹಾಗಾಗಿಯೇ ಅವರ ಸಾಹಿತ್ಯ ಸರ್ವಸ್ವದ ಸಾರವೇ ಆಗಿರುವ ಸಪ್ತ ಸೂತ್ರಗಳಲ್ಲಿ, “ಮತ ತೊಲಗಿ ಅಧ್ಯಾತ್ಮ ಮಾತ್ರ ವೈಜ್ಞಾನಿಕ ತತ್ತ್ವವಾಗಿ ಮಾನ್ಯತೆ ಪಡೆಯಬೇಕು ಹಾಗೂ ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು, ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾಗುವ ಎಲ್ಲವನ್ನೂ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ಪಡೆಯಬೇಕು” ಎಂದಿದ್ದಾರೆ.

ಮತ್ತಷ್ಟು ಓದು »

12
ಜೂನ್

ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೩

– ವಿನಾಯಕ ಹಂಪಿಹೊಳಿ

ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೧
ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೨

ದರ್ಶನಗಳಲ್ಲಿ ತರ್ಕ:

“ಭಗವಂತನಲ್ಲಿ ತನ್ನನ್ನು ಆರಾಧಿಸುವವರ ಮೇಲೆ ಪ್ರೀತಿ, ತನ್ನನ್ನು ಆರಾಧಿಸದವರ ಮೇಲೆ ಕ್ರೋಧ, ತನಗಿಷ್ಟ ಬಂದ ಹಾಗೆ ಮಾಡುವ ಸ್ವೇಚ್ಛೆ ಇವೆಲ್ಲವೂ ತುಂಬಿಕೊಂಡಿವೆ.” ಎಂಬ ಈ ಸೆಮೆಟಿಕ್ ರಿಲಿಜನ್ನಿನ ವಾಕ್ಯವನ್ನು ಭಾರತೀಯ ದಾರ್ಶನಿಕನೊಬ್ಬನಿಗೆ ಹೇಳಿ ನೋಡಿ. ಆಗ ಆತನ ಪ್ರತಿಕ್ರಿಯೆ ಹೇಗಿರುತ್ತದೆ? “ಛೇ! ಕೋಪ, ಆಸೆಗಳನ್ನು ಇಟ್ಟುಕೊಂಡವನು ಭಗವಂತ ಹೇಗಾದಾನು?” ಎಂದೇ ಪ್ರತಿಕ್ರಿಯೆ ನೀಡುತ್ತಾನಲ್ಲವೇ? ಕಾರಣ ನಮ್ಮ ಭಾರತೀಯ ದರ್ಶನಗಳ ತಳಹದಿಯೇ ಬೇರೆ. ದರ್ಶನಗಳಲ್ಲಿಯೂ ತರ್ಕಕ್ಕೆ ರಿಲಿಜನ್ನುಗಳಂತೆ ಪ್ರಥಮ ಪ್ರಾಶಸ್ತ್ಯವಿಲ್ಲ. ತರ್ಕದಿಂದ ಭಗವತ್ಪ್ರಾಪ್ತಿಯೂ ಇಲ್ಲ, ಮೋಕ್ಷವೂ ಇಲ್ಲ. ಆದರೆ “ಈ ಸಿದ್ಧಾಂತವೇ ಸತ್ಯ” ಎಂದು ಎದ್ದು ನಿಂತು ಒಬ್ಬ ಹೇಳಬೇಕಾದರೆ, ಆತ ಆ ತನ್ನ ಸಿದ್ಧಾಂತವನ್ನು ತರ್ಕಾಗ್ನಿಪರೀಕ್ಷೆಗೆ ದೂಡಿ ಪವಿತ್ರವಾಗಿ ಹೊರತರಬೇಕು. ರಿಲಿಜನ್ನುಗಳಂತೆ ಪುಸ್ತಕವೇ ಪರಮ ಸತ್ಯವಲ್ಲ ಈ ದರ್ಶನಗಳಲ್ಲಿ. ಅನುಭವವೇ ಪ್ರಧಾನ. “ವೇದಗಳು ಅಗ್ನಿ ತಣ್ಣಗಿದೆ ಎಂದು ಸಾವಿರ ಸಾರಿ ಹೇಳಿದರೂ ಅನುಭವವನ್ನೇ ಅನುಸರಿಸಬೇಕು” ಎಂದು ಶಂಕರರು ಹೇಳಿದ್ದಾರೆ. ಉಪನಿಷತ್ತುಗಳೂ ಕೂಡ “ಇಲ್ಲಿ ವೇದಗಳು ವೇದಗಳಾಗಿರುವದಿಲ್ಲ” ಎಂದು ಸಾರುತ್ತವೆ. ಅಂದರೆ ವೇದಕ್ಕಿಂತಲೂ ಅನುಭವಕ್ಕೇ ಪ್ರಥಮ ಪ್ರಾಶಸ್ತ್ಯ. ಸಹಸ್ರಾರು ಅನುಭವಿಗಳ ಅನುಭವದೊಂದಿಗೆ ತಾಳೆಯಾಗುವದರಿಂದಲೇ ವೇದ ಉಪನಿಷತ್ತು, ಗೀತೆಗಳಿಗೆ ನಮ್ಮಲ್ಲಿ ಹೆಚ್ಚು ಗೌರವ.

ಅನೇಕ ದರ್ಶನಗಳು ಅನೇಕ ತರ್ಕಗಳನ್ನನುಸರಿಸಿವೆ. ವೇದವನ್ನೊಪ್ಪದ ಬೌದ್ಧ ಮತ್ತು ಚಾರ್ವಾಕ ದರ್ಶನಗಳು ತಮ್ಮದೇ ತರ್ಕ ವ್ಯವಸ್ಥೆಯನ್ನು ಹಾಕಿಕೊಂಡಿವೆ. ವೇದಗಳನ್ನೊಪ್ಪುವ ಸಾಂಖ್ಯ, ಪೂರ್ವಮೀಮಾಂಸ ಮತ್ತು ವೇದಾಂತ ಮತಗಳೂ ಕೂಡ ವೇದ/ಉಪನಿಷತ್ತುಗಳಲ್ಲಿ ಬರುವ ತರ್ಕವನ್ನು ಆಧಾರವಾಗಿಟ್ಟುಕೊಂಡಿವೆ. ಇಲ್ಲಿ ಭಾರತದಲ್ಲಿ ಅತ್ಯಂತ ಜನಪ್ರಿಯವಾದ ಮತ್ತು ದೇಶಾದ್ಯಂತ ಅನೇಕ ವಿದ್ವಜ್ಜನರು ಒಪ್ಪಿರುವ ಅದ್ವೈತ ವೇದಾಂತ ದರ್ಶನವನ್ನು ತೆಗೆದುಕೊಳ್ಳೋಣ. ಮುಖ್ಯವಾಗಿ ವೇದಾಂತಗಳಲ್ಲಿ ಕಾಣುವ ತರ್ಕ ಅತ್ಯಂತ ಜಟಿಲ. ಕಾರಣ ಉಪನಿಷತ್ತುಗಳು ಅನುಸರಿಸುವ ತರ್ಕ ರೋಮಾಂಚನಗೊಳಿಸುವಂಥದ್ದು. ಏಕೆಂದರೆ ಅದು ಮನುಷ್ಯನ ಮೂಲಭೂತ ನಂಬಿಕೆಗಳನ್ನೇ ಪ್ರಶ್ನಿಸುತ್ತದೆ. “ಆತ್ಮದ ವಿಷಯದಲ್ಲಿ, ಇದೆ ಎಂದು ಕೆಲವರು ಇಲ್ಲ ಎಂದು ಕೆಲವರು” ಎಂಬುದರೊಂದಿಗೆ ಆರಂಭವಾಗುವ ಕಠೋಪನಿಷತ್ತು, “ಆತ್ಮನು ಇದ್ದಾನೆ” ಎಂಬುದನ್ನು ತಾರ್ಕಿಕವಾಗಿ ಸಾಧಿಸಿ ಮುಕ್ತಾಯಗೊಳ್ಳುತ್ತದೆ. ಹಾಗೆಯೇ, ಶಂಕರರು “ಮನುಷ್ಯನಿಗೆ ಇಷ್ಟವಾದದ್ದನ್ನು ಪಡೆದುಕೊಳ್ಳುವದು ಮತ್ತು ಅನಿಷ್ಟವಾದದ್ದನ್ನು ಕಳೆದುಕೊಳ್ಳುವದು ಸ್ವಾಭಾವಿಕವಾಗಿದೆ. ಈ ಇಷ್ಟಪ್ರಾಪ್ತಿ-ಅನಿಷ್ಟಪರಿಹಾರವೆಂಬುದು ಜೀವಿಗಳ ಸ್ವಭಾವವು. ಉಪನಿಷತ್ತುಗಳ ಉದ್ದೇಶವೇ ಈ ಸ್ವಭಾವದ ಕಾರಣವನ್ನು ಅರಿಯುವದು” ಎಂದು ಹೇಳಿದ್ದಾರೆ. ಹೀಗೆ ಮನುಷ್ಯನ ಮೂಲ ನಂಬಿಕೆಯನ್ನೇ ತರ್ಕಕ್ಕೆ ಒಡ್ಡುವಲ್ಲಿ ಉಪನಿಷತ್ತುಗಳು ತೋರಿದ ಧೈರ್ಯ ಯಾವ ರಿಲಿಜನ್ನುಗಳಲ್ಲೂ ಕಂಡು ಬಂದಿಲ್ಲ.

ಮತ್ತಷ್ಟು ಓದು »

5
ಜೂನ್

ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೨

– ವಿನಾಯಕ ಹಂಪಿಹೊಳಿ

ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೧

ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ ರಿಲಿಜನ್ನುಗಳಲ್ಲಿ ತರ್ಕ:

ರಿಲಿಜನ್ನುಗಳಲ್ಲಿ ತರ್ಕಕ್ಕೆ ನಂಬಿಕೆಯ ನಂತರದ ಸ್ಥಾನವಿದೆ. ನಂಬಿಕೆಗೆ ಪ್ರಥಮ ಪ್ರಾಶಸ್ತ್ಯ. ನಂಬಿಕೆಗೂ ತರ್ಕಕ್ಕೂ ವಿರೋಧಾಭಾಸವಿದ್ದಲ್ಲಿ ನಂಬಿಕೆಯೇ ಸತ್ಯ. ತರ್ಕಕ್ಕೆ ಅಲ್ಲಿ ಜಾಗವಿಲ್ಲ. ತರ್ಕದಿಂದ ಭಗವಂತನ ದರ್ಶನವೂ ಆಗುವದಿಲ್ಲ ಮತ್ತು ತರ್ಕದಿಂದ ಸ್ವರ್ಗಪ್ರಾಪ್ತಿಯೂ ಇಲ್ಲ. ತರ್ಕವೇನಿದ್ದರೂ, ಉಳಿದ ರಿಲಿಜನ್ನುಗಳಿಗಿಂತ ತಮ್ಮ ರಿಲಿಜನ್ನು ಹೇಗೆ ಶ್ರೇಷ್ಠ ಎಂಬುದನ್ನು ತೋರಿಸಲು, ಮತ್ತು ತಮ್ಮ ರಿಲಿಜನ್ನುಗಳ ಮೂಲ ಕಲ್ಪನೆಗಳು ಮಾತ್ರ ಪರಮ ಸತ್ಯ ಎಂದು ಸಾಬೀತು ಪಡಿಸಲು ಅಷ್ಟೇ. ಉದಾಹರಣೆಗಾಗಿ ದೇವನು ಒಬ್ಬನೇ ಎಂಬುದನ್ನು ಸೆಮೆಟಿಕ್ ರಿಲಿಜನ್ನುಗಳು ನಂಬುತ್ತವೆ. ಮತ್ತು ಅದಕ್ಕೆ ಸಾಕಷ್ಟು ತರ್ಕಗಳನ್ನೂ ನೀಡುತ್ತವೆ. ಆದರೆ ದೇವನ ನಾಮ ಮತ್ತು ಗುಣಗಳ ಬಗ್ಗೆ ವಿರೋಧಾಭಾಸಗಳಿವೆ. ಪ್ರತಿಯೊಂದು ರಿಲಿಜನ್ನೂ ತಮ್ಮ ಪ್ರವಾದಿಗಳೇ ಸತ್ಯ ಎಂದು ಸಾರುತ್ತವೆ. ಮತ್ತು ಉಳಿದ ರಿಲಿಜನ್ನುಗಳ ಮುಂದೆ ಅದನ್ನೇ ತರ್ಕಬದ್ಧವಾಗಿ ಸಾಧಿಸುತ್ತವೆ.

ಆದರೂ ರಿಲಿಜನ್ನಿನ ಅನುಯಾಯಿಗಳು ತರ್ಕವನ್ನು ತಮ್ಮ ರಿಲಿಜನ್ನಿನ ಗ್ರಂಥಗಳ ಮೇಲೆ ಬಿಟ್ಟುಕೊಳ್ಳುವದಿಲ್ಲ. ಉದಾಹರಣೆಗೆ ಹಳೇ ಒಡಂಬಡಿಕೆಯೇ ಸತ್ಯ ಎಂಬುದು ಯಹೂದಿಗಳು ನಂಬುತ್ತಾರೆ ಅದಕ್ಕೆ ಅವರು ತರ್ಕವನ್ನು ಬೇಡುವದಿಲ್ಲ. ಆದರೆ ಹೊಸ ಒಡಂಬಡಿಕೆಯನ್ನು ಒಪ್ಪಿಕೊಳ್ಳಲು ತರ್ಕದ ಸಾಧನೆಯನ್ನು ಅಪೇಕ್ಷಿಸುತ್ತಾರೆ. ಮೊಹಮದ್ ಪೈಗಂಬರ್ ಅಂತಿಮ ಪ್ರವಾದಿ ಎಂಬುದನ್ನು ಮುಸ್ಲಿಮರು ತಮ್ಮ ಗ್ರಂಥದಿಂದಲೇ ಒಪ್ಪಿರುತ್ತಾರೆ. ಆದರೆ ಉಳಿದ ರಿಲಿಜನ್ನಿನವರಿಗೂ ಅದನ್ನು ಮನವರಿಕೆ ಮಾಡಲು ತರ್ಕವನ್ನಾಶ್ರಯಿಸುತ್ತಾರೆ. ಉಳಿದ ಗ್ರಂಥಗಳಲ್ಲಿನ ಇತಿಮಿತಿಗಳನ್ನು ತೋರಿಸಲು ತರ್ಕವನ್ನು ಹಿಡಿಯುತ್ತಾರೆ. ಆದರೆ ತಮ್ಮ ಗ್ರಂಥಗಳ ಇತಿಮಿತಿಗಳನ್ನು ತೋರಿಸುವ ಅದೇ ತರ್ಕವನ್ನು ಅಲ್ಲಗೆಳೆದು ತಮ್ಮ ಗ್ರಂಥವು ತರ್ಕಾತೀತವೆಂದು ಸಾರುತ್ತಾರೆ.

ಮತ್ತಷ್ಟು ಓದು »

29
ಮೇ

ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೧

– ವಿನಾಯಕ ಹಂಪಿಹೊಳಿ

ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನತರ್ಕ ಮನುಷ್ಯನಿಗಿರುವ ಒಂದು ಅತ್ಯುತ್ತಮ ಸಾಧನ. ಇದನ್ನು ಆಧರಿಸಿ ಮಾನವ ತನ್ನ ಜೀವನದಲ್ಲಿ ಅನೇಕ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ. ವಿಜ್ಞಾನವಂತೂ ತರ್ಕದ ಆಧಾರದ ಮೇಲೆಯೇ ಬೆಳೆದಿರುವಂಥದ್ದು. ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕಕ್ಕೆ ವಿಜ್ಞಾನದಂತೆ ಮೊದಲನೇ ಪ್ರಾಶಸ್ತ್ಯವಿಲ್ಲವಾದರೂ, ತರ್ಕವನ್ನು ಸಂಪೂರ್ಣವಾಗಿ ಬಿಟ್ಟು ನಿಂತಿಲ್ಲ. ಪಾಶ್ಚಿಮಾತ್ಯ ರಿಲಿಜನ್ನುಗಳಿಗೂ ಭಾರತೀಯ ದರ್ಶನಗಳಿಗೂ ಇರುವ ಮುಖ್ಯ ವ್ಯತ್ಯಾಸ ಈಗಾಗಲೇ ನಿಲುಮೆಯಲ್ಲಿ ಸಾಕಷ್ಟು ಚರ್ಚೆಯಾಗಿದೆ. ಹೀಗಾಗಿ ಅವುಗಳ ವ್ಯತ್ಯಾಸದ ಕಡೆಗೆ ಹೆಚ್ಚು ಗಮನ ಕೊಡದೇ ಇವೆರಡರಲ್ಲೂ ತರ್ಕದ ಸ್ಥಾನವೇನು ಎಂಬುದರ ಬಗ್ಗೆ ಚರ್ಚಿಸೋಣ.

ವಿಜ್ಞಾನದಲ್ಲಿ ತರ್ಕ:

ಗಣಿತೀಯ ತರ್ಕ ಪದ್ಧತಿಯನ್ನು ವಿಜ್ಞಾನ ಅಳವಡಿಸಿಕೊಂಡಿದೆ. ಗಣಿತೀಯ ತರ್ಕದಲ್ಲಿ ’ಅಥವಾ’, ’ಮತ್ತು’, ’ಆದರೆ’ ಮುಂತಾದ ಸಂಬಂಧಗಳು ಮುಖ್ಯವಾಗಿರುತ್ತವೆ. ಎಲ್ಲ ವೈಜ್ಞಾನಿಕ ಸಿದ್ಧಾಂತಗಳೂ ಒಂದು ಗಣಿತೀಯ ತರ್ಕವೊಂದನ್ನು ಸಾಧಿಸಲು ಪ್ರಯತ್ನಿಸುತ್ತವೆ. ಕಾರಣ ಗಣಿತೀಯ ತರ್ಕದಿಂದ ಸಾಧಿಸಲ್ಪಟ್ಟ ಸಿದ್ಧಾಂತಗಳಲ್ಲಿ ಮೂಲ ಊಹೆಯು ತಪ್ಪಾಗಿಲ್ಲದಿದ್ದ ಪಕ್ಷದಲ್ಲಿ ಸಿದ್ಧಾಂತವು ಎಂದಿಗೂ ಸುಳ್ಳಾಗದು. ಐನ್ಸ್ಟೈನರ ಮಾತುಗಳಲ್ಲಿ ಹೇಳುವದಾದರೆ “ವೈಜ್ಞಾನಿಕ ಸಿದ್ಧಾಂತವೆಂಬುದು ಕೇವಲ ಕೆಲವೇ ಊಹೆಗಳನ್ನಾಧರಿಸಿ ನಿರ್ಮಿಸಿದ ಗಣಿತೀಯ ಮಾದರಿ”. ಉದಾಹರಣೆಗಾಗಿ ಅವರ ಸಾಪೇಕ್ಷತಾ ಸಿದ್ಧಾಂತವನ್ನೇ ತೆಗೆದುಕೊಳ್ಳೋಣ. ಅದರಲ್ಲಿ ಅವರು ಮಾಡಿದ ಊಹೆಗಳು ಎರಡೇ. ಮೊದಲನೇಯದು ಭೌತಿಕ ಕ್ರಿಯೆಗಳು ಎಲ್ಲ ರೀತಿಯ ಕಲ್ಪಿತ ಚೌಕಟ್ಟುಗಳಲ್ಲಿ ಒಂದೇ ತೆರನಾಗಿ ಅನ್ವಯವಾಗುತ್ತವೆ. ಎರಡನೇಯದು ಬೆಳಕಿನ ವೇಗ ಆ ಎಲ್ಲ ರೀತಿಯ ಕಲ್ಪಿತ ಚೌಕಟ್ಟುಗಳಲ್ಲಿ ಒಂದೇ ಆಗಿರುತ್ತದೆ. ಎಲ್ಲಿಯವರೆಗೆ ಈ ಊಹೆಗಳನ್ನು ನಿರಾಕರಿಸುವ ಪ್ರಕರಣಗಳು ಬೆಳಕಿಗೆ ಬರುವದಿಲ್ಲವೋ ಅಲ್ಲಿಯವರೆಗೂ ಸಾಪೇಕ್ಷತಾ ಸಿದ್ಧಾಂತ ಸತ್ಯವೇ.

ಮತ್ತಷ್ಟು ಓದು »

2
ಏಪ್ರಿಲ್

“ಧರ್ಮ”ದ ದಾರಿ ತಪ್ಪಿಸುತ್ತಿರುವ ಹಿರಿಯರು;ಇಲ್ಲದ ಹಿಂದೂ ರಿಲಿಜನ್ನಿನ ಭ್ರಮೆಯಲ್ಲಿ ಕಿರಿಯರು

 – ರಾಕೇಶ್ ಶೆಟ್ಟಿ

Chimu Kalburgiಕಳೆದ ಜೂನ್ ೯ರಂದು ನಡೆದಿದ್ದ ಮೌಢ್ಯಮುಕ್ತ ಸಮಾಜ,ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ.ಕಲ್ಬುರ್ಗಿಯವರು,ದೇವರ ವಿಗ್ರಹಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗದುಎಂದು ಹೇಳಿ ಸುದ್ದಿಯಾಗಿದ್ದರು. ಈಗ ಮತ್ತೆ, ಗದುಗಿನಲ್ಲಿ ಆಯೋಜಿಸಲಾಗಿದ್ದ ’ಸಮಾಜಶಾಸ್ತ್ರ,ಕನ್ನಡಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಚಾರಗೋಷ್ಠಿ’ಯಲ್ಲಿ, ಹಿಂದುಗಳಿಗೆ ಧರ್ಮಗ್ರಂಥವೇ ಇಲ್ಲ.ಭಗವದ್ಗೀತೆ ಹಿಂದುಗಳ ಧರ್ಮ ಗ್ರಂಥವಲ್ಲ,ಅದೊಂದು ವಚನ ಸಾಹಿತ್ಯರಾಜ್ಯ ಸರ್ಕಾರ ನಡೆಸಲು ತೀರ್ಮಾನಿಸಿರುವ ಜಾತಿಜನಗಣತಿಯ ಪ್ರಶ್ನಾವಳಿಯಲ್ಲಿ ಧರ್ಮ,ಜಾತಿ,ಉಪಜಾತಿಗೊಂದು ಪ್ರತ್ಯೇಕ ಕಾಲಂ ನಿಗದಿಪಡಿಸಲಾಗಿದೆ.ಜಾತಿ ಜನಗಣತಿಯಲ್ಲಿ ಧರ್ಮ ಯಾಕೆ ಬೇಕು.ಏಕೆಂದರೆ ಧರ್ಮ ಮತ್ತು ಜಾತಿ ಎರಡೂ ಒಂದೇ.ಜೈನ ಧರ್ಮವೂ ಹೌದು,ಜಾತಿಯೂ ಹೌದು.ಅದರಂತೆ ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಬೌದ್ಧ ಧರ್ಮವೂ ಹೌದು,ಜಾತಿಯೂ ಹೌದು.ಹೀಗಿದ್ದಾಗ ಇಂತಹ ಅನವಶ್ಯಕ ಕಾಲಂಗಳು ಏಕೆ ಬೇಕು?” ಎಂದು ಪ್ರಶ್ನಿಸಿದ್ದಾರೆಂದು ವರದಿಯಾಗಿತ್ತು.

ಡಾ.ಕಲ್ಬುರ್ಗಿಯವರ ಹೇಳಿಕೆಯನ್ನು ವಿರೋಧಿಸಿ,ಹಿರಿಯ ಸಂಶೋಧಕರಾದ ಡಾ.ಎಂ ಚಿದಾನಂದ ಮೂರ್ತಿಗಳು ವಿಜಯವಾಣಿಯ ಜನಮತ ವಿಭಾಗದಲ್ಲಿ ಪತ್ರವೊಂದನ್ನು ಬರೆದು ಕಲ್ಬುರ್ಗಿಯವರು ಗದುಗಿನಲ್ಲಿ ಮಾತನಾಡುತ್ತ ಹಿಂದೂ ಎಂಬ ಧರ್ಮವೇ ಇಲ್ಲಎಂದು ವಿತಂಡವಾದ ಮಾಡಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆಎನ್ನುತ್ತಾ ಮುಂದುವರೆದೂ ಧರ್ಮ ಎಂಬ ಶೀರ್ಷಿಕೆಯಡಿಯಲ್ಲಿ ಹಿಂದೂ ಎಂದು ದಾಖಲಿಸಲು ಸುಪ್ರೀಂ ಕೋರ್ಟ್ ಅವಕಾಶ ಮಾಡಿಕೊಟ್ಟಿದೆ.’ಹಿಂದೂ ವಿವಾಹ ಕಾನೂನುಎಂಬ ಕಾನೂನು ಕೂಡ ಇದೆ.ಕಲ್ಕತ್ತೆಯ ಮಠವೊಂದು ತಾನು ಹಿಂದು ವ್ಯಾಪ್ತಿಗೆ ಬರುವುದಿಲ್ಲವೆಂದಾಗ,೧೯೯೫ರಲ್ಲಿ ಸರ್ವೋಚ್ಚ ನ್ಯಾಯಾಲಯದ ಪೂರ್ಣಪೀಠವು ಅದು ಹಿಂದು ಧರ್ಮಕ್ಕೆ ಸೇರಿದ ಮಠಎಂದು ತೀರ್ಪು ನೀಡಿದೆ.ಗಾಂಧೀಜಿ ತಮ್ಮನ್ನು ಸನಾತನಿ ಹಿಂದೂಎನ್ನುತ್ತಾರೆ.ಸ್ವಾಮಿ ವಿವೇಕಾನಂದರು ಶಿಕಾಗೋದಲ್ಲಿ ತಮ್ಮನ್ನು ಹಿಂದುಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ… ” ಇತ್ಯಾದಿ ಉದಾಹರಣೆಗಳನ್ನು ನೀಡಿದ್ದಾರೆ.

ಮತ್ತಷ್ಟು ಓದು »

12
ಫೆಬ್ರ

ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೨

– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ

Social Science Column Logoನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧

ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು:
1960 ಹಾಗೂ 70ರ ದಶಕದಲ್ಲಿ ಪ್ರಾರಂಭವಾದ ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು ಮಾರ್ಕ್ಸ್ ವಾದಿ ನಿಲುವುಗಳಿಗಿಂತ ಭಿನ್ನವಾದ ನಿಲುವನ್ನು ಮುಂದಿಡಲು ಯಶಸ್ವಿಯಾದವು. ವರ್ಗಾದಾರಿತವಲ್ಲದ ಅಸ್ಮಿತೆಯ ರಾಜಕೀಯ ಕೇವಲ ಸಾಂಕೇತಿಕ ಎನ್ನುವ ಮಾರ್ಕ್ಸ್ ವಾದಿ ನಿಲುವನ್ನು ಇವು ಅಲ್ಲಗಳೆಯುತ್ತವೆ. ಈ ಸಿದ್ಧಾಂತವು ಅಸ್ಮಿತೆ ರಾಜಕೀಯವನ್ನು ಒಂದು ವಿಶಿಷ್ಟ ಬಗೆಯ ರಾಜಕೀಯ ಎಂದೇ ಪ್ರತಿಪಾದಿಸುತ್ತದೆ. ಅಸ್ಮಿತೆಯಾದಾರಿತ ಚಳುವಳಿಗಳನ್ನು ಆಧುನಿಕತೆಯ ಪರಿಣಾಮವಾಗಿ ಆರ್ಥಿಕ ಮತ್ತು ಸಾಮಾಜಿಕ ವಲಯದ ಉನ್ನತ ಸ್ಥರದಲ್ಲಿ ಆದ ರಾಚನಿಕ ಬದಲಾವಣೆ ಅಸ್ಮಿತೆ ರಾಜಕೀಯವನ್ನು ಹುಟ್ಟು ಹಾಕಿದೆ ಮತ್ತು ಇದೊಂದು ಐತಿಹಾಸಿಕವಾದ ಸಾಮೂಹಿಕ ಪ್ರತಿಕ್ರಿಯೆ ಎಂದು ಈ ಸಿದ್ಧಾಂತದ ಪ್ರತಿಪಾದನೆಯಾಗಿದೆ. ಕೆಲವು ವಿದ್ವಾಂಸರು ಹೇಳುವಂತೆ ಅಸ್ಮಿತೆ ರಾಜಕೀಯವು ಕೈಗಾರಿಕೋತ್ತರ ಸಮಾಜದಲ್ಲಾಗುತ್ತಿರುವ ಒಂದು ಬಗೆಯ ಸ್ಥಿತ್ಯಂತರ (ಟೌರಿನ್ 1981).  ಹಬರ್ಮಾಸ್ರವರ ಅಭಿಪ್ರಾಯದಲ್ಲಿ ಅಸ್ಮಿತೆ ಚಳುವಳಿಗಳು ಪ್ರಭುತ್ವದ ನಿಯಂತ್ರಣ ಹಾಗೂ ಅದರ ನಿರ್ಣಯಗಳ ಒತ್ತಡಕ್ಕೆ ಹೆಚ್ಚು ಹೆಚ್ಚಾಗಿ ಒಳಗಾಗುತ್ತಿರುವ ಸಮುದಾಯಗಳು ಅಂತಹ ಹಿಡಿತದಿಂದ ತಪ್ಪಿಸಿಕೊಳ್ಳುವ ಪ್ರಯತ್ನದ ಫಲವಾಗಿವೆ (ಹಬರ್ಮಾಸ್ 1985).

ಮತ್ತಷ್ಟು ಓದು »