ಫ್ರಾನ್ಸಿನ ಸೆಕ್ಯುಲರಿಸಂ ಮತ್ತು ಇಸ್ಲಾಮಿನ ಜಗಳದಲ್ಲಿ ಭಾರತಕ್ಕೇನು ಪಾಠ?
– ವಿನಾಯಕ ಹಂಪಿಹೊಳಿ
ಸದ್ಯಕ್ಕೆ ಫ್ರಾನ್ಸಿನಲ್ಲಿ ಬುರ್ಕ ಬ್ಯಾನ್ ಕುರಿತು ಚರ್ಚೆ ನಡೆಯುತ್ತಿದೆ. ಬುರ್ಕಾ ಬ್ಯಾನ್ ತುಂಬಾ ಹಿಂದೆಯೇ ಆಗಿದೆ. ಈ ರೀತಿಯ ನಿಷೇಧಗಳಿಗೆ ಫ್ರಾನ್ಸ್ ಕೊಡುತ್ತಿರುವ ಕಾರಣ ರಿಲಿಜನ್ನುಗಳು ಪ್ರತಿಪಾದಿಸುವ ವಸ್ತ್ರಸಂಹಿತೆಯನ್ನು ಪಬ್ಲಿಕ್ ವಲಯದಲ್ಲಿ ಪಾಲಿಸುವುದು ಅಲ್ಲಿನ ಸೆಕ್ಯುಲರಿಸಂ ಐಡಿಯಾಲಜಿಯೊಂದಿಗೆ ಸರಿಹೊಂದದಿರುವದು. ಫ್ರಾನ್ಸಿನಲ್ಲಿ ಪ್ರಜಾಪ್ರಭುತ್ವದ ಆಡಳಿತವನ್ನು ಚರ್ಚಿನಿಂದ ಪ್ರತ್ಯೇಕಿಸುವ ಪ್ರಕ್ರಿಯೆ ತುಂಬ ಕಟ್ಟುನಿಟ್ಟಾಗಿತ್ತು. ಫ್ರಾನ್ಸಿನ ಸೆಕ್ಯುಲರಿಸಂ ರಿಲಿಜನ್ನನ್ನು ಕೇವಲ ರಾಜಕೀಯದಿಂದಷ್ಟೇ ಪ್ರತ್ಯೇಕಿಸುವದಷ್ಟೇ ಅಲ್ಲ, ಫ್ರಾನ್ಸ್ ದೇಶವು ಯಾವ ರಿಲಿಜನ್ನಿನೊಂದಿಗೂ ಗುರುತಿಸಿಕೊಳ್ಳಬಾರದು ಎನ್ನುವದು ಅದರ ಆಶಯ. ಆದ್ದರಿಂದ ಫ್ರಾನ್ಸ್ ದೇಶವು ತನ್ನನ್ನು ತಾನು ರಿಪಬ್ಲಿಕ್ ಮತ್ತು ಸೆಕ್ಯುಲರ್ ದೇಶವೆಂದು ಘೋಷಿಸಿಕೊಂಡಿತ್ತು. ಈ ರೀತಿಯ ಲಿಬರಲ್ ಸೆಕ್ಯುಲರಿಸಂ ಅನ್ನು ಬರೀ ಕ್ರಿಶ್ಚಿಯನ್ನರೇ ತುಂಬಿಕೊಂಡಿದ್ದ ದೇಶದಲ್ಲಿ ಈ ರೀತಿಯ ಸೆಕ್ಯುಲರಿಸಂ ಅನ್ನು ಜಾರಿಗೆ ತರುವದು ಅಷ್ಟು ಕಷ್ಟವಾಗಿರಲಿಲ್ಲ. ಮತ್ತಷ್ಟು ಓದು
ಬೀಭತ್ಸ (ಭಾಗ ೨)
ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಭಾಗ 1 ರಿಂದ ಮುಂದುವರೆದ ಕತೆ
“ಎಷ್ಟು ಬೇಗ ಈ ಆಚರಣೆ ಮರುಕಳಿಸಿತು ಅಲ್ಲವಾ..”? ಎಂದವಳು ಶ್ರೀಮತಿ ಡೆಲಾಕ್ರೋಕ್ಸ್. ಅವಳ ಮಾತಿಗೆ ಸಮ್ಮತಿಸುವಂತೆ ತಲೆಯಾಡಿಸಿದ ಶ್ರೀಮತಿ ಗ್ರೇವ್ಸ್, “ಹೌದು, ಮೊನ್ನೆಮೊನ್ನೆಯಷ್ಟೇ ಕಳೆದ ವರ್ಷದ ಚೀಟಿಯೆತ್ತುವಿಕೆಯ ಆಚರಣೆ ಮುಗಿದಿತ್ತೇನೋ ಎಂದು ಭಾಸವಾಗುತ್ತಿದೆ. ಕಾಲ ಎಷ್ಟು ಬೇಗ ಸರಿದು ಹೋಗುತ್ತದಲ್ಲವಾ..’?”ಎಂದು ನುಡಿದಳು. ಅಷ್ಟರಲ್ಲಿ ಕ್ಲಾರ್ಕ್ ನ ಸರದಿ ಮುಗಿದು ಡೆಲಾಕ್ರೋಕ್ಸ್ ತನ್ನ ಪಾಳಿಗಾಗಿ ಕಾಯುತ್ತ ನಿಂತಿದ್ದ. “ಅಲ್ನೋಡು ನನ್ನ ಗಂಡನ ಸರದಿ ಬಂದೇ ಬಿಟ್ಟಿತು” ಎಂದ ಅವನ ಮಡದಿಗೆ ಒಂದು ಕ್ಷಣ ಉಸಿರು ನಿಂತ ಅನುಭವ. ಡೆಲಾಕ್ರೊಕ್ಸ್ ಚೀಟಿಯನ್ನೆತ್ತಿಕೊಂಡು ಸ್ವಸ್ಥಾನಕ್ಕೆ ಮರಳಿದ. “ಡನ್ಬರ್” ಎಂಬ ಹೆಸರು ಕೇಳುತ್ತಲೇ ಕಾಲು ಮುರಿದುಕೊಂಡು ಮನೆಯಲ್ಲಿಯೇ ಮಲಗಿದ್ದ ಡನ್ಬರನ ಮಡದಿ ನಿಧಾನವಾಗಿ ಕಪ್ಪುಪೆಟ್ಟಿಗೆಯ ಬಳಿ ನಡೆಯಲಾರಂಭಿಸಿದಳು. ಆಕೆಯನ್ನು ಗಮನಿಸಿದ ಮಹಿಳೆಯೊಬ್ಬಳು “ಧೈರ್ಯವಾಗಿ ಹೋಗು ಜೇನಿ, ಭಯ ಬೇಡ” ಎನ್ನುತ್ತ ಆಕೆಯನ್ನು ಹುರಿದುಂಬಿಸಿದಳು. “ನಮ್ಮದು ಮುಂದಿನ ಸರದಿ” ಎನ್ನುತ್ತ ಕೊಂಚ ಗಂಭೀರಳಾದಳು ಶ್ರೀಮತಿ ಗ್ರೇವ್ಸ್. ತನ್ನ ಪತಿ ಗಡಿಬಿಡಿಯಾಗಿ ಕರಿಪೆಟ್ಟಿಗೆಯತ್ತ ತೆರಳಿ ಸಮ್ಮರ್ಸನಿಗೊಂದು ನಮಸ್ಕಾರ ಹೇಳಿ, ಚೀಟಿಯನ್ನು ಎತ್ತಿದ್ದನ್ನು ದೂರದಿಂದಲೇ ಗಮನಿಸಿದಳಾಕೆ. ಸಾಕಷ್ಟು ಸಮಯ ಕಳೆದಿತ್ತು. ಅದಾಗಲೇ ಚೀಟಿಯನ್ನು ಎತ್ತುಕೊಂಡಿದ್ದ ಜನ ಚೀಟಿಯನ್ನು ತೆರೆದು ನೋಡಲಾಗದೆ, ಕುತೂಹಲವನ್ನು ತಡೆದುಕೊಳ್ಳಲಾಗದೆ ನಿಂತಲ್ಲೆ ಸಣ್ಣಗೆ ಕಂಪಿಸುತ್ತಿದ್ದರು. ಡನ್ಬರನ ಮಡದಿ ಸಹ ಕೊಂಚ ಆತಂಕದಿಂದಲೇ ತನ್ನೆರಡು ಮಕ್ಕಳೊಡಗೂಡಿ ಮೂಲೆಯೊಂದರಲ್ಲಿ ನಿಂತಿದ್ದಳು. ಅಷ್ಟರಲ್ಲಿ ಹರ್ಬರ್ಟನ ಸರದಿ ಮುಗಿದು, ಹಚ್ಚಿಸನ್ನನ ಸರದಿ ಬಂದಿತ್ತು. “ಬೇಗ ಹೋಗಿ ಚೀಟಿ ಎತ್ತು, ಬಿಲ್” ಎಂದ ಟೆಸ್ಸಿಯ ಮಾತಿನ ಶೈಲಿಯೇ ನೆರೆದಿದ್ದ ಕೆಲವರಿಗೆ ನಗು ತರಿಸಿತ್ತು. ಹಚ್ಚಿಸನ್ನನ ನಂತರ ಚೀಟಿಯೆತ್ತುವ ಸರದಿ ಜೋನ್ಸಳದ್ದು. ಮತ್ತಷ್ಟು ಓದು
ಬೆನ್ನಿ ಹಿನ್ ಕಂಡರೆ ಪ್ರಗತಿಪರರಿಗೇಕೆ ಅಷ್ಟೊಂದು ಭಯ!?
– ನರೇಂದ್ರ ಕುಮಾರ್ ಎಸ್.ಎಸ್
ಬೆನ್ನಿ ಹಿನ್ ಮತ್ತೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. 2005ರಲ್ಲಿ ಬೆನ್ನಿ ಹಿನ್ ಬೆಂಗಳೂರಿಗೆ ಆಗಮಿಸಿದ್ದಾಗ ಬಹಳ ವಿರೋಧ ವ್ಯಕ್ತವಾಗಿತ್ತು. ಆದರೆ, ರಾಜ್ಯ ಸರಕಾರದ ಸಹಕಾರದಿಂದಾಗಿ, ಆತನ “ಕಣ್ ಕಟ್ ಪ್ರದರ್ಶನ ಮತ್ತು ಮತಾಂತರ” ನಿರಾತಂಕವಾಗಿ ನಡೆಯಿತು. ಆ ನಂತರ ಆನೇಕ ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಿಂದ ಹೊರಗುಳಿಯಬೇಕಾಯಿತು (ಆತನ ಕಣ್ ಕಟ್ನ ಪ್ರಭಾವವೂ ಇರಬಹುದೇ?). ಇದೀಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಮತ್ತು ಕೂಡಲೇ “ಬೆನ್ನಿ ಹಿನ್ ಅವರ ಕಣ್ ಕಟ್ ಕಾರ್ಯಕ್ರಮ” ಆಯೋಜಿತವಾಗಿದೆ! ಇದು ಕೇವಲ ಕಾಕತಾಳೀಯವಿರಲಾರದು ಅಲ್ಲವೇ!?
ಬೆನ್ನಿ ಹಿನ್ ಇಸ್ರೇಲಿನ ಜೆರೂಸೆಲಂನಲ್ಲಿ ಜನಿಸಿ, ಮುಂದೆ ಅಮೆರಿಕದ ಪ್ರಜೆಯಾದರು. ಅವರೊಬ್ಬ ಕ್ರೈಸ್ತ ಮತ ಪ್ರಚಾರಕ. ಅವರು ಹೋದಲ್ಲೆಲ್ಲಾ ಪ್ರಾರ್ಥನಾ ಸಭೆಗಳನ್ನು ನಡೆಸುತ್ತಾರೆ. ತನ್ನ ಸಭೆಗಳಲ್ಲಿ ಹಾಜರಿದ್ದು, ತನ್ನೊಡನೆ ಪ್ರಾರ್ಥನೆ ಮಾಡಿದವರಿಗೆ ಮತ್ತು ತನ್ನನ್ನು ಸ್ಪರ್ಶಿಸಿದವರಿಗೆ ಯಾವುದೇ ರೋಗವಿದ್ದರೂ ಗುಣವಾಗುತ್ತದೆ, ಎಂದು ಅವರು ಹೇಳಿಕೊಳ್ಳುತ್ತಾರೆ. “ಕ್ಯಾನ್ಸರ್/ ಏಡ್ಸ್ ನಂತಹ ಕಾಯಿಲೆಗಳನ್ನೂ ಕೇವಲ ಸ್ಪರ್ಶದ ಮೂಲಕವೇ ವಾಸಿ ಮಾಡುತ್ತೇನೆ” ಎಂದು ಹೇಳಿ ಜನರನ್ನು ಯಾಮಾರಿಸಲು ಪ್ರಯತ್ನಿಸುತ್ತಾರೆ! 3 ರಿಂದ 5 ದಿನಗಳ ಕಾಲ ನಡೆಯುವ ಇವರ ಕಾರ್ಯಕ್ರಮಗಳಲ್ಲಿ, ಕೊನೆಯ ದಿನಗಳು ಹತ್ತಿರ ಬಂದಂತೆ, ವೇದಿಕೆಯ ಮೇಲೆ ನಡೆಯುವ ನಾಟಕವೂ ಹೆಚ್ಚುತ್ತದೆ. ಇದ್ದಕ್ಕಿದ್ದಂತೆ ಮೈಮೇಲೆ ಏನೋ ಬಂದಂತೆ, ಕಣ್ಣೀರು ಸುರಿಸುತ್ತಾ ಕೆಲವರು ನುಗ್ಗುತ್ತಾರೆ. ತಮಗೆ ಯಾವುದೇ ಔಷಧದಿಂದಲೂ ಗುಣವಾಗದ ಖಾಯಿಲೆಯಿತ್ತು ಮತ್ತು ಇಲ್ಲಿ ಪ್ರಾರ್ಥಿಸಿದ ನಂತರ ಖಾಯಿಲೆ ವಾಸಿಯಾಗಿಬಿಟ್ಟಿತು; ಬೆನ್ನಿ ಹಿನ್ ಅವರೇ ಪ್ರತ್ಯಕ್ಷ ದೇವರು; ಎಂದೆಲ್ಲಾ ಕುಣಿದಾಡುತ್ತಾರೆ. ಇದೆಲ್ಲಾ ಪೂರ್ವನಿಯೋಜಿತ ನಾಟಕ ಎಂಬುದು ಹಲವು ಬಾರಿ ನಿರೂಪಿತವಾಗಿದ್ದರೂ, ಮುಂದಿನ ಬಾರಿಯೂ ಇದೇ ರೀತಿಯ ನಾಟಕ ಇದ್ದೇ ಇರುತ್ತದೆ. ಈ ರೀತಿಯ ನಾಟಕ ನಡೆಯದಿದ್ದರೆ, ಇವರ ಸಭೆಗೆ ಜನರೇ ಬರುವುದಿಲ್ಲವಲ್ಲ; ಹೀಗಾಗಿ ನಾಟಕ ನಿಲ್ಲಿಸುವಂತಿಲ್ಲ!
ತೀರಾ ತುಘಲಕ್ ದರ್ಬಾರ್ ಬೇಡ್ರೀ ಸಿಧ್ಧರಾಮಣ್ಣ…
– ಕೆ.ಎಸ್ ರಾಘವೇಂದ್ರ ನಾವಡ
ತೀರಾ ಬೇಸರಗೊ೦ಡು ರಾಜ್ಯದ ಮುಖ್ಯ ಮ೦ತ್ರಿಗಳಿಗೆ ಈ ಮಾತನ್ನು ಹೇಳಿತಿದ್ದೇನೆ ! ಸಮಾಜವಾದಿ ಹಿನ್ನೆಲೆ.. ಹೋರಾಟದ ಹಿನ್ನೆಲೆ.. ಎಲ್ಲದ್ದಕ್ಕಿ೦ತಲೂ ಕರ್ನಾಟಕದ ಗ್ರಾಮೀಣ ಸೊಗಡಿನಿ೦ದ ಮೇಲೆದ್ದು ಬ೦ದವರು ಸಿಧ್ಧರಾಮಯ್ಯ. ಆದರೆ ಹಿ೦ದಿನ ಸಮಾಜವಾದಿ ಹಿನ್ನೆಲೆಗಳಿ೦ದ ಬ೦ದ ಮುಖ್ಯಮ೦ತ್ರಿಗಳಿಗೂ (ಮಾನ್ಯ ಹೆಗಡೇಜಿ, ಬ೦ಗಾರಪ್ಪನವರು, ಜೆ.ಹೆಚ್ ಪಟೇಲರು)ನಮ್ಮ ಸಿಧ್ಧರಾಮಯ್ಯನವರಿಗೂ ಅಜಗಜಾ೦ತರ ವ್ಯತ್ಯಾಸ…ಇವರು ಇದೇ ಥರ ಮು೦ದುವರಿದಲ್ಲಿ ಮು೦ಬರುವ ಲೋಕಸಭಾ ಚುನಾವಣೆಯಲ್ಲಿ ಕಾ೦ಗ್ರೆಸ್ ಕರ್ನಾಟಕದಲ್ಲಿ ನೆಲಕಚ್ಚುವುದ೦ತೂ ಖಚಿತ!
ಪಾಪ.. ಏನೂ ಮಾಡೋದಕ್ಕಾಗೋದಿಲ್ಲ.. ನಮಗೆ ಸಿಧ್ಧರಾಮಯ್ಯನವರ ಅಸಹಾಯಕತೆಯ ಅರಿವು ಇದೆ.ಆದರೆ ಕೈಯಲ್ಲಿ ಆಗದಿದ್ದವರ ಪರಿಸ್ಥಿತಿ ಏನೂ ಸಿಧ್ಧರಾಮಯ್ಯನವರದಲ್ಲ! ಹಾಗ೦ತ ತೀರಾ ಸಾರಾಸಗಟಾಗಿ ತಳ್ಳಿ ಹಾಕುವ೦ತಹ ವ್ಯಕ್ತಿತ್ವವೂ ಸಿಧ್ಧರಾಮಯ್ಯನವರದಲ್ಲ.ಆದರೆ ಒ೦ದ೦ತೂ ಖಚಿತ! ಏನೋ ಆಗಿದೆ… ಒ೦ದರ ಮೇಲೊ೦ದು ಎಡವಟ್ಟುಗಳನ್ನೇ ಸೃಷ್ಟಿಸಿಕೊಳ್ಳುತ್ತಿರುವ ಸಿಧ್ಧರಾಮಯ್ಯನವರು ಕೊನೇ ಪಕ್ಷ ತಮ್ಮ ನಿರ್ಧಾರಗಳಿಗೆ ಜೋತು ಬೀಳುವ೦ತಹ ಯಡಿಯೂರಪ್ಪನವರ ಛಾತಿಯನ್ನೂ ತೋರಿಸುತ್ತಿಲ್ಲ!
ಆರ೦ಭದಲ್ಲೇನೋ ಶೂರತನ ಮೆರೆದ ಅಶ್ವವೀರ.. ಕುದುರೆಗೆ ಸುಸ್ತಾದ೦ತೆ ತಾನೂ ನಡೆಯುತ್ತ ಸಾಗಿದ.. ಎನ್ನುವ ಹಳೇ ಮಾತೀಗ ಸಿಧ್ಧರಾಮಯ್ಯನವರ ವಿಚಾರದಲ್ಲಿ ಖಚಿತವಾಗುತ್ತಿದೆ! ಚುನಾವಣಾ ಪ್ರಣಾಳಿಕೆಯ ಅರ್ಧದಷ್ಟು ಅ೦ಶಗಳನ್ನು ಅನುಷ್ಠಾನಕ್ಕೆ ತರುವುದು ಹೆಚ್ಚುಗಾರಿಕೆಯೇ ಆದರೂ ಕೊಟ್ಟ ಮಾತುಗಳಾದರೂ ಎ೦ಥಾದ್ದಾಗಿದ್ದವು ಎನ್ನುವುದು ಬಹಳ ಮುಖ್ಯ!
ಯಾವುದು ನಂಬಿಕೆ?ಯಾವುದು ಮೂಢನಂಬಿಕೆ?
-ಡಾ.ಕಿರಣ್ ಎಂ ಗಾಜನೂರು
ಕರ್ನಾಟಕ ಸರ್ಕಾರ ಮೂಢನಂಬಿಕೆಗಳ ಕುರಿತು ವಿಧೇಯಕ ಮಂಡಿಸಲು ಮುಂದಾಗಿರುವುದು ನಿಜಕ್ಕೂ ಸ್ವಾಗತಾರ್ಹ ಕ್ರಮ. ಏಕೆಂದರೆ ಭಾರತ ಸಮಾಜದಲ್ಲಿ ಬಹಳ ಹಿಂದಿನಿಂದಲೂ ಸೋ-ಕಾಲ್ಡ್ ನಂಬಿಕೆಗಳ ಹೆಸರಿನಲ್ಲಿ ಶೋಷಣೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ.ಅದರಲ್ಲಿಯೂ ಯಾವುದೇ ಜನ-ಚಳುವಳಿಯಿಲ್ಲದೆ,ನಮ್ಮ ಘನಸರ್ಕಾರ ಸ್ವತಃ ಈ ನಿರ್ಧಾರಕ್ಕೆ ಮುಂದಾಗಿರುವುದು ಪ್ರಶಂಸನೀಯ.ಪಕ್ಕದ ಮಹಾರಾಷ್ಟ್ರದಲ್ಲಿ ಈ ಮಾದರಿಯ ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಳ್ಳಬೇಕಾದರೆ,ಒಂದು ದೊಡ್ಡ ಜನಚಳುವಳಿಯೆ ನಡೆಯಬೇಕಾಯಿತು ಮತ್ತು ಈ ಕುರಿತು ಹೋರಾಟ ಮಾಡುತ್ತಿದ್ದ ವ್ಯಕ್ತಿಯ ಹತ್ಯೆಯು ಆಯಿತು.ಈ ನೆಲೆಯಲ್ಲಿ ಕರ್ನಾಟಕ ಸರ್ಕಾರ ಜನಪರವಾಗಿದೆ ಎಂಬುದನ್ನು ನಾವು ಒಪ್ಪಬಹುದು.ಆದರೆ, ಭಾರತದಂತಹ ಬಹುಸಂಸ್ಕೃತಿಯ ದೇಶದಲ್ಲಿ ಈ ಕ್ರಮ ಕೇವಲ ಪ್ರಗತಿಪರ ಮತ್ತು ಕಾನೂನಾತ್ಮಕ ಅಂಶವಾಗಿರದೆ ಸಮುದಾಯ ಸತ್ವದ ಪ್ರಶ್ನೆಯು ಆಗಿರುತ್ತದೆ ಎಂಬುದನ್ನು ನಾವು ಅರಿತುಕೊಳ್ಳಬೇಕು.ಅದೂ ಅಲ್ಲದೆ ಸದರಿ ವಿಧೇಯಕದ ಕುರಿತು ನಡೆಯುತ್ತಿರುವ ಚರ್ಚೆ ಪರ-ವಿರೋಧವೆಂಬ ಸಂಕುಚಿತ ಅರ್ಥದಲ್ಲಿ ನಡೆಯುತ್ತಿದೆ.ಒಂದು ಸಂಶೋಧನೆ ಅಥವಾ ಚರ್ಚೆಯಲ್ಲಿ ಸಂಶೋಧನೆ/ಚರ್ಚೆಗೆ ಒಳಪಡಿಸಬೇಕಾದ ವಿದ್ಯಾಮಾನದ ಕುರಿತು ಸಂಶೋಧಕನಿಗೆ ಪರ ಅಥವಾ ವಿರೋಧ ಅಭಿಪ್ರಾಯಗಳು ಇರಬೇಕು ಎಂದು ನೀರಿಕ್ಷಿಸುವುದೇ ಸಂಶೋಧನೆ/ಚರ್ಚೆಯ ಲಕ್ಷಣವಲ್ಲ. ಉದಾಹರಣೆಗೆ : ಕರ್ನಾಟಕದ ಮೂಢನಂಬಿಕೆ ವಿರೋಧಿ ವಿಧೇಯಕ ಕುರಿತು ನೀವು ಇದರ ಪರವೂ ವಿರೋಧವೂ ಎಂದು ಕೇಳಿದರೆ ನಾನು ನನಗೆ ಗೊತ್ತಿಲ್ಲ ಎಂದಷ್ಟೆ ಉತ್ತರಿಸಬಲ್ಲೆ. ಏಕೆಂದರೆ ನಿಜಕ್ಕೂ ನನಗೆ ಅದು ಸರಿಯೋ/ತಪ್ಪೋ ಗೊತ್ತಿಲ್ಲ ಅಥವಾ ಪ್ರಸ್ತುತ ಚರ್ಚೆ ಮತ್ತು ಮಾಹಿತಿಯ ಆಧಾರದಲ್ಲಿ ಒಂದು ನಿರ್ಣಯಕ್ಕೆ ಬರಲೂ ಸಾಧ್ಯವಾಗುತ್ತಿಲ್ಲ. ಆದರೆ,ಒಬ್ಬ ಸಮಾಜ ಸಂಶೋಧಕನಾಗಿ ನನ್ನ ಸಮಸ್ಯೆ ಇರುವುದು ಪರವಾಗಿ ಮತ್ತು ವಿರೋಧವಾಗಿ ಮಾತನಾಡುತ್ತಿರುವ ಎರಡೂ ಗುಂಪಿನ ವಾದ ಆ ವಿದ್ಯಮಾನವನ್ನು ಸಮರ್ಥಿಸಲು ಅಥವಾ ವಿರೋಧಿಸಲು ಶಕ್ತವಾಗಿಲ್ಲ ಮತ್ತು ಆದನ್ನು ಆಚರಿಸುತ್ತಿರುವ ಜನರಿಗೆ ಅರ್ಥವಾಗುತ್ತಿಲ್ಲ ಎಂಬುದು.
ಆಚರಣೆ, ಸಂಪ್ರದಾಯ,ನಂಬಿಕೆ ಮತ್ತು ಕಾಕತಾಳಿಯಗಳು
-ಮು.ಅ ಶ್ರೀರಂಗ,ಬೆಂಗಳೂರು
ಒಬ್ಬ ಬ್ರಾಹ್ಮಣನ ಮನೆಯಲ್ಲಿ ಬೆಕ್ಕೊಂದು ಓಡಾಡಿಕೊಂಡಿತ್ತು. ಹಳೆಯ ಕಾಲದ ಆ ಮನೆಯಲ್ಲಿದ್ದ ಇಲಿ,ಹೆಗ್ಗಣಗಳನ್ನು ತಿಂದುಕೊಂಡು ಅವುಗಳ ಕಾಟ ತಪ್ಪಿಸ್ಸಿದ್ದರಿಂದ ಸಹಜವಾಗಿ ಆ ಬೆಕ್ಕನ್ನು ಕಂಡರೆ ಮನೆಮಂದಿಗೆಲ್ಲಾ ಅಕ್ಕರೆಯಿತ್ತು.ಆ ಕುಟುಂಬದ ಯಜಮಾನನ ತಂದೆಯದೋ ತಾಯಿಯದೋ ತಿತಿ ಮಾಡಬೇಕಾದ ದಿನ ಬೆಕ್ಕು ಮನೆಯೊಳಗೆಲ್ಲಾ ಓಡಾಡಿ ಮೈಲಿಗೆ ಮಾಡುವುದು ಸರಿಯಲ್ಲ ಎಂದು ಅದನ್ನು ಮನೆಯ ಕಂಬವೊಂದಕ್ಕೆ ಕಟ್ಟಿಹಾಕಿದರು. ಆ ದಿನದ ಕೆಲಸ, ಊಟ ಎಲ್ಲಾ ಮುಗಿದ ನಂತರ ಆ ಬೆಕ್ಕಿಗೆ ಬಂಧನದಿಂದ ಬಿಡುಗಡೆಯಾಯ್ತು. ಕಾಲ ಕಳೆದಂತೆ ಆ ಮನೆಯ ಯಜಮಾನ ತೀರಿಕೊಂಡ. ಅವನ ಮಕ್ಕಳು ಅಪ್ಪನ ತಿತಿ ಮಾಡುವ ಸಮಯ ಬಂತು. ಆಗ ಮನೆಯಲ್ಲಿ ಬೆಕ್ಕು ಇರಲಿಲ್ಲ. ಹೀಗಾಗಿ ಅಕ್ಕ ಪಕ್ಕದ ಮನೆಯವರಿಂದ ಕಾಡಿ ಬೇಡಿ ಬೆಕ್ಕೊಂದನ್ನು ತಂದು ಕಂಬಕ್ಕೆ ಕಟ್ಟಿದರು. ಅಂದಿನ ಕೆಲಸ ಮುಗಿದ ನಂತರ ವಾಪಸ್ಸು ಕೊಟ್ಟರು. ಇದು ಹೀಗೆ ಪ್ರತಿ ಸಾರಿ ತಿತಿ ಮಾಡುವಾಗಲೂ ಮುಂದುವರಿಯಿತು. ಇದೊಂದು ಕಾಲ್ಪನಿಕ ಕಥೆ ಎಂಬುದರಲ್ಲಿ ಸಂದೇಹವಿಲ್ಲ. ಹಾಗೆ ನೋಡಿದರೆ ಐತಿಹಾಸಿಕವಾದುದನ್ನು ಬಿಟ್ಟರೆ ನಾವು ಓದುವ ಕತೆ ಕಾದಂಬರಿಗಳೆಲ್ಲ ಕಾಲ್ಪನಿಕವಾದವುಗಳೇ. ಅದರ ಬಗ್ಗೆ ಚರ್ಚೆ ಈಗ ಬೇಡ. ಏಕೆಂದರೆ ಈ ಬರಹ ಸಾಹಿತ್ಯಕ್ಕೆ ಸಂಬಧಿಸಿದ್ದಲ್ಲ. ಈ ಬೆಕ್ಕಿನ ಕತೆಯಲ್ಲಿ ನಾವು ತಿಳಿದುಕೊಳ್ಳಬೇಕಾದ ಅಂಶ ಒಂದಿದೆ. ನಾವುಗಳು ಕೆಲವೊಂದು ಆಚರಣೆಗಳಿಗೆ ಇದು ಏಕೆ? ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುವುದಿಲ್ಲ. ಮಕ್ಕಳೇನಾದರು ಕೇಳಿದರೆ “ನೀನೊಬ್ಬ ಅಧಿಕ ಪ್ರಸಂಗಿ, ತಲೆಹರಟೆ”ಎಂದು ಬೈದು ಅವರನ್ನು ಸುಮ್ಮನಾಗಿಸುತ್ತೇವೆ. ತಂದೆ ತಾಯಿಗೆ ಅಜ್ಜಿ, ತಾತನಿಗೆ ಹೆದರಿದ ಆ ಮಕ್ಕಳು ಸುಮ್ಮನಾಗುತ್ತವೆ. ಅವರು ದೊಡ್ಡವರಾದ ಮೇಲೆ ಹಿಂದಿನವರು ತಮಗೆ ಮಾಡಿದ್ದನ್ನೇ ತಮ್ಮ ಮಕ್ಕಳಿಗೂ ಮಾಡುತ್ತಾರೆ. ಈ ಕೊಂಡಿಗಳು ಒಂದಕ್ಕೊಂದು ಸೇರಿಕೊಳ್ಳುತ್ತಾಹೋಗಿ ಆಚರಣೆಗಳಾಗಿ,ಸಂಪ್ರದಾಯಗಳಾಗಿ ಮುಂದುವರಿಯುತ್ತವೆ.
ಮತ್ತಷ್ಟು ಓದು
ಜಾತ್ಯಾತೀತರೆನಿಸಿಕೊಳ್ಳಲು “ಹಿಂದೂ ನಂಬಿಕೆ”ಗಳ ಜೊತೆ ಸರಸವಾಡಲೇಬೇಕೆ?
– ನರೇಂದ್ರ ಕುಮಾರ ಎಸ್.ಎಸ್
“ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ – 2013” ಅನ್ನು ಜಾರಿಗೆ ತರಲಾಗುವುದೆಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದಕ್ಕಿದ್ದಂತೆ ಘೋಷಿಸಿದೆ. ಕರ್ನಾಟಕದಲ್ಲಿ ಆಗಬೇಕಾದ ಅನೇಕ ತುರ್ತಾದ ಕೆಲಸಗಳಿವೆ. ಈ ಹಿಂದೆ ಅಧಿಕಾರದಲ್ಲಿದ್ದ ಭಾಜಪದ ಒಳಜಗಳದಿಂದ ಬೇಸೆತ್ತ ಜನರು, ಈ ಎಲ್ಲಾ “ತುರ್ತಾಗಿ ಆಗಬೇಕಾದ ಕೆಲಸ”ಗಳನ್ನೂ ಮಾಡಲಿಕ್ಕೆಂದೇ ಕಾಂಗ್ರೆಸ್ ಕೈಯ್ಯಲ್ಲಿ ಮತ್ತೊಮ್ಮೆ ಅಧಿಕಾರ ಕೊಟ್ಟರು. ಆದರೆ, ಇವೆಲ್ಲವನ್ನೂ ಬದಿಗೊತ್ತಿ, “ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ – 2013” ಅನ್ನು ಜಾರಿಗೆ ತರುತ್ತಿರುವುದು ಕಾಂಗ್ರೆಸ್ ಪಕ್ಷದವರಿಂದ ಹಿಡಿದು ಎಲ್ಲರನ್ನೂ ದಿಗ್ಭ್ರಮೆಗೊಳಪಡಿಸಿದೆ. ಈ ವಿದೇಯಕದ ಅಗತ್ಯ ಈಗೇನಿತ್ತು, ಎನ್ನುವುದು ಎಲ್ಲ ಪ್ರಜ್ಞಾವಂತರ ಪ್ರಶ್ನೆಯಾಗಿದೆ. ಇದರ ಹಿಂದೆ ಏನಾದರೂ “Hidden Agenda” ಇರಬಹುದೆಂದು ಎಲ್ಲರಿಗೂ ಅನಿಸತೊಡಗಿದೆ.
ಸಿದ್ದರಾಮಯ್ಯನವರು “ಜಾತ್ಯಾತೀತ” ಪಕ್ಷಕ್ಕೆ ಸೇರಿದವರು. ಅವರಿಗೆ “ಪ್ರಗತಿಶೀಲ ವಿಚಾರವಂತರ” ಒಡನಾಟವಿದೆ. ಈ ವಿದೇಯಕದ ಹಿಂದೆ ಕೆಲಸ ಮಾಡಿರುವುದೂ ಈ “ಪ್ರಗತಿಶೀಲ”ರ ತಲೆಯೇ ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ, ಕರ್ನಾಟಕದಲ್ಲಿ ತುರ್ತಾಗಿ ಆಗಬೇಕಿರುವ ಎಲ್ಲಾ ಕಾರ್ಯಗಳಿಗಿಂತಲೂ ಈ ವಿದೇಯಕವು ಹೇಗೆ ಆದ್ಯತೆವುಳ್ಳದ್ದಾಯಿತು ಎಂಬುದಕ್ಕೆ ಅವರ ಬಳಿ ಉತ್ತರ ಇರಲಾರದು. ತಮ್ಮ “Hidden Agenda” ಅನುಷ್ಠಾನಕ್ಕಾಗಿ ಸಿದ್ದರಾಮಯ್ಯನವರ ಅಧಿಕಾರವನ್ನು ಈ “ಪ್ರಗತಿಶೀಲ”ರು (ದು)ಉಪಯೋಗಿಸಿಕೊಳ್ಳುತ್ತಿದ್ದಾರೆಯೇ ಎಂಬ ಅನುಮಾನ ಹುಟ್ಟುತ್ತಿದೆ.