ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮೋದಿ’

26
ಆಕ್ಟೋ

ಈಗ ರೈತನಿಗೂ ಅನಿಸುತ್ತಿದೆ, ಇದು ೨೦೨೦ರ ಭಾರತ ಎಂದು

– ಅಜಿತ್ ಶೆಟ್ಟಿ ಹೆರಂಜೆ

ಪ್ರಧಾನಿ ಮೋದಿಯವರು ೨೦೨೨ರ ಹೊತ್ತಿಗೆ ದೇಶದ ರೈತರ ಆದಾಯ ದ್ವಿಗುಣ ಮಾಡುವ ಬಗ್ಗೆ ಮಾತನಾಡಿದ್ದರು. ಇದೇ ನಿಟ್ಟಿನಲ್ಲಿ ಮೋದಿ ಸರ್ಕಾರ ಕಳೆದ ಆರು ವರ್ಷಗಳಿಂದ ದೇಶದ ಬಡವರ ಮತ್ತು ಕೃಷಿಕರ ಶ್ರೇಯೋಭಿವೃದ್ಧಿಯತ್ತ ಕೆಲಸಮಾಡಿದೆ. ಆ ಕಾರಣಕ್ಕೆ ಮೋದಿಯವರು ಜಾರಿಗೆ ತಂದ ಯೋಜನೆಗಳಾದ ಯೂರಿಯಾಕ್ಕೆ ಬೇವಿನ ಲೇಪನ ಮಾಡಿದ್ದು, ಜನ್‌ಧನ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಕಿಸಾನ್ ಸಿಂಚಾಯಿ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ, ಆಯುಷ್ಮಾನ್ ಭಾರತ್ ಯೋಜನೆ, ಫಸಲ್ ಭೀಮಾ ಯೋಜನೆ, ಸೋಯ್ಲ್ ಹೆಲ್ತ್ ಕಾರ್ಡ್ ಯೋಜನೆ, ಪಾರಂಪರಿಕ ಕೃಷಿ ಯೋಜನೆ ಅಥವಾ ಇತ್ತೀಚೆಗೆ ಜಾರಿಗೆ ತಂದಿರುವ ಕೃಷಿ ಸುಧಾರಣಾ ಮಸೂದೆ ೨೦೨೦ ಇವೆಲ್ಲವೂ ಮೋದಿಯವರು ರೈತರಿಗೆ ಕೊಟ್ಟ ಮಾತಿಗೆ ಪೂರಕವಾಗಿ ಬಂದ ಯೋಜನೆಗಳು. ಚೀನಿಯರು ಭಾರತದ ಗಡಿಯಲ್ಲಿ ನಿಂತು ನಾವು ನಿಮ್ಮನ್ನು ೬೨ರಂತೆ ಹೊಸಕಿ ಹಾಕುತ್ತೇವೆ ಅಂದಾಗ ಅದಕ್ಕೆ ಅಂದಿನ ರಕ್ಷಣಾ ಮಂತ್ರಿಗಳಾದ ದಿವಂಗತ ಅರುಣ್ ಜೇಟ್ಲಿಯವರು ಮಾರ್ಮಿಕವಾಗಿ ಇದು ೬೨ರ ಭಾರತ ಅಲ್ಲ, ೨೦೨೦ರ ಭಾರತ ಅಂದಿದ್ದರು. ಅವರು ಹೇಳಿದ್ದು ದೇಶದ ಸೈನ್ಯ ಶಕ್ತಿಯ ಮಟ್ಟಿಗೆ ಸರಿಯಾಗೆ ಇತ್ತು. ಆದರೆ ಅಂದು ದೇಶದ ರೈತನಿಗೆ ಬಹುಶಃ ಇದು ೨೦೨೦ರ ಭಾರತ ಅನ್ನಿಸಿರಲಿಕ್ಕಿಲ್ಲ. ಕಾರಣ ಅವನು ಮೋದಿಯವರು ಕೃಷಿ ಸುಧಾರಣಾ ಕಾನೂನು ೨೦೨೦ ತರುವ ತನಕ ಬ್ರಿಟೀಷರ ಕಾಲೋನಿಯಲ್ ಕಾನೂನುಗಳ ಸಂತ್ರಸ್ತನಾಗಿಯೆ ಇದ್ದ. ರೈತ ತನಗೆ ಇಷ್ಟ ಬಂದ ಬೆಳೆಯನ್ನೇನೋ ಬೆಳೆಯುತ್ತಿದ್ದ. ಆದರೆ ಆತ ಅದನ್ನು ತನಗೆ ಇಷ್ಟ ಬಂದ ಜಾಗದಲ್ಲಿ ಇಷ್ಟ ಬಂದ ಬೆಲೆಗೆ, ತನಗೆ ಇಷ್ಟ ಬಂದ ವ್ಯಕ್ತಿಗೆ ಮಾರುವ ಅವಕಾಶದಿಂದ ವಂಚಿತನಾಗಿದ್ದ. ಇವನನ್ನು ದಾಸ್ಯದ ಸಂಕೋಲೆಯಿಂದ ಬಿಡುಗಡೆ ಮಾಡಿದ್ದು ಕೃಷಿ ಮಸೂದೆ-೨೦೨೦. ಮತ್ತಷ್ಟು ಓದು »

30
ಜನ

ಅಬ್ಬಾ..ಈ ದೇಶದಲ್ಲಿ ಅದೆಂತಹ ಅಸಹಿಷ್ಣುತೆ..!

– ವರುಣ್ ಕುಮಾರ್
ಪುತ್ತೂರು

modi-naseer.jpg

  • ಈ ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆಶಾರುಖ್ ಖಾನ್
  • ನನ್ನ ಪತ್ನಿಗೆ ಮತ್ತು ನನಗೆ ಈ ದೇಶದಲ್ಲಿ ಇರಲು ಭಯವಾಗುತ್ತಿದೆ, ಯಾಕೆಂದರೆ ಇಲ್ಲಿ ಅಸಹಿಷ್ಣುತೆ ಇದೆಅಮೀರ್ ಖಾನ್
  • ನನ್ನ ಮೊಮ್ಮಕ್ಕಳಿಗೆ ಈ ದೇಶದಲ್ಲಿರಲು ಭಯವಾಗುತ್ತಿದೆನಾಸೀರುದ್ದಿನ್ ಷಾ

ಹೌದಲ್ಲವೇ, ಇವರು ಹೇಳಿದಂತೆ ಕಳೆದ ನಾಲ್ಕೂವರೆ ವರ್ಷಗಳಿಂದ ಎಷ್ಟೊಂದು ಅಸಹಿಷ್ಣುತೆ ಇದೆಯಲ್ಲವೆ, ಎಲ್ಲ ಕಡೆಗಳಲ್ಲಿ ಗೋವಿನ ಹೆಸರಲ್ಲಿ ಕೊಲೆ,ಸುಲಿಗೆ ಧರ್ಮದ ಹೆಸರಲ್ಲಿ ಗಲಭೆ, ಅಲ್ಪಸಂಖ್ಯಾತರಿಗಂತೂ ಉಸಿರುಗಟ್ಟಿದ ಸ್ಥಿತಿ. ಒಂದೇ ಎರಡೇ, ಇದಕ್ಕೆಲ್ಲ ಯಾರು ಮುಖ್ಯ ಕಾರಣ ಕೇಂದ್ರ ಸರ್ಕಾರ. ಅದರಲ್ಲೂ ಮುಖ್ಯವಾಗಿ ಮೋದಿ. ಈ ಮನುಷ್ಯ ಬಂದ ಮೇಲಂತೂ ಈ ದೇಶದ ಬಗ್ಗೆ ತಾತ್ಸರ ಮೂಡುವಂತೆ ಮಾಡಿದ್ದಾನೆ. ಅಲ್ಲವೇ.. ಅಷ್ಟಕ್ಕೂ‌ ಮೋದಿಯ ಬಗ್ಗೆ ಈ ನಮ್ಮ ದೇಶಭಕ್ತ(?)ರಿಗೆ ಯಾಕೆ ಇಷ್ಟೊಂದು ಕೋಪ ಸ್ವಲ್ಪ‌ ಮೆಲುಕು ಹಾಕೋಣ. ಮತ್ತಷ್ಟು ಓದು »

21
ಜನ

ಮೋದಿ ಸಾಲದ ಶೂಲ – ಗಂಜಿಗಿರಾಕಿಗಳ ಕೋಲಾಹಲ

– ರಾಘವೇಂದ್ರ ಸುಬ್ರಹ್ಮಣ್ಯ

ನಿನ್ನೆ-ಮೊನ್ನೆಯಿಂದಾ ನಮ್ಮ ಮಾಧ್ಯಮಗಳದ್ದು ಒಂದೇ ಗಲಾಟೆ, “ಮೋದಿ ಅಧಿಕಾರವಧಿಯಲ್ಲಿ ಭಾರತದ ಸಾಲದ ಹೊರೆ ಬೃಹತ್ ಪ್ರಮಾಣದಲ್ಲಿ ಹೆಚ್ಚಾಗಿದೆ” ಅಂತಾ ಕೂಗಾಡ್ತಿವೆ. ಇಂಡಿಯಾಟುಡೇ “ಮೋದಿ ಸರ್ಕಾರದ ಅಡಿಯಲ್ಲಿ ಕೇಂದ್ರ ಸಾಲವನ್ನು 50% ಏರಿಕೆಯಾಗಿದೆ” ಅಂತಾ ಶುರುಮಾಡಿದ ಈ ಅರಚಾಟದ ಕಸದಂತಾ ಸುದ್ಧಿಯನ್ನು, ಎಕನಾಮಿಕ್ ಟೈಮ್ಸ್ ಕೂಡಾ ತಾನು ಎರವಲು ಪಡೆದ ಹಾಗೇ ಹಂಚಿತು. ಇವರೆಲ್ಲರೂ ಈ ಸುದ್ಧಿಯನ್ನ ಪಡೆದದ್ದೆಲ್ಲೆಂದಾ? ಕಳೆದ ಶುಕ್ರವಾರ ಕೇಂದ್ರ ಹಣಕಾಸು ಸಚಿವಾಲಯದ “ಸರ್ಕಾರೀ ಸಾಲದ ಸ್ಥಿತಿಪತ್ರದ 8 ನೇ ಆವೃತ್ತಿ” ಬಿಡುಗಡೆಯಾಯಿತು. ಅದರಿಂದ ತಮಗೆ ಬೇಕಾದಷ್ಟೇ ಸುದ್ಧಿಯನ್ನ ಈ ಸುದ್ಧಿಮನೆಗಳು ಹೆಕ್ಕಿತೆಗೆದು, ತಮಗೆ ಬೇಕಾದಂತೆ ತಿರುಚಿ, “ಮೋದಿ ಹೇಗೆ ಭಾರತಕ್ಕೆ ಮಾರಕ” ಎನ್ನುವಂತಾ ತಮ್ಮ ಹಳೇ ಕಥೆಗಳ ದೀಪಕ್ಕೆ ಹೊಂದುವಂತಾ ನಿರೂಪಣೆಯ ಬತ್ತಿಯನ್ನ ಹೊಸೆದರು.

ಈ ಸುದ್ಧಿಗಳು ಬಂದದ್ದೇ ತಡ, ಮೋದಿ ವಿರೋಧಿ ಬಳಗಗಳು ತಮ್ಮ ಮನೆ-ಮನಗಳಲ್ಲಿ ಸದಾಕಾಲ ಉರಿಯುತ್ತಿರುವ ಮೋದಿ ದ್ವೇಷದ ಬೆಂಕಿಗೆ ಇನ್ನೂ ಎರಡು ಲೀಟರ್ ಪೆಟ್ರೋಲ್ ಹೆಚ್ಚೇ ಸುರಿದು, ಈ ಸುದ್ಧಿಯನ್ನು ಎಲ್ಲೆಡೆ ಹರಡಲು ಪ್ರಾರಂಭಿಸಿದರು. “ಮೋದಿನಾಮಿಕ್ಸ್ ನೆಲಕಚ್ಚಿದೆ, ದೇಶದಲ್ಲಿ ಕೆಲಸಗಳೇ ಇಲ್ಲ, ಕೈಗಾರಿಕಾ ಉತ್ಪಾದನೆ ಮೇಲೇಳದಂತೆ ಕುಸಿದಿದೆ, ಇಂತಾ ಸಮಯದಲ್ಲಿ ಮೋದಿ ದೇಶಕ್ಕೆ ಇನ್ನೂ 28ಲಕ್ಷ ಕೋಟಿ ಸಾಲ ಹೆಚ್ಚಿಸಿ ನಮ್ಮನ್ನೆಲ್ಲಾ ಕೊಂದೇಬಿಟ್ಟಿದ್ದಾನೆ. ಚುನಾವಣಾ ಜುಮ್ಲಾಗಳ ಕಾಲ ಮುಗಿಯಿತು, 2019ರಲ್ಲಿ ಜನ ಬಿಜೆಪಿಯನ್ನು ಕಿತ್ತೆಯಸಲಿದ್ದಾರೆ” ಅಂತಾ ಒಂದೇ ಸಮವೆ ಕಿರುಚಾಡುತ್ತಿದ್ದಾರೆ.

ಈ ವಿಚಾರವನ್ನು ಎರಡು ರೀತಿಯಲ್ಲಿ ನಿಭಾಯಿಸಬಹುದು. ಒಂದನೇ ದಾರಿ: “ಜನಕ್ಕೆ ಇದೆಲ್ಲಾ ಅರ್ಥವಾಗೇ ಆಗುತ್ತೆ. ಈ ಕಿರುಚಾಟಗಳೆಲ್ಲಾ ಅರ್ಥಹೀನ ಅಂತಾ ಇವತ್ತಲ್ಲಾ ನಾಳೆ ತಿಳಿದುಕೊಂಡು ಇವನ್ನೆಲ್ಲಾ ನಿವಾಳಿಸಿ ಬದಿಗಿಡ್ತಾರೆ” ಅಂತಾ ಸುಮ್ಮನಾಗುವುದು. ಆದರೆ ಇದನ್ನು ಹಿಂಗೇ ಬಿಟ್ಟರೆ, ಏನೂ ಗೊತ್ತಿಲ್ಲದವರೂ ಇದನ್ನೇ ನಿಜವೆಂದು ನಂಬಿ ಕೂತರೇನು ಕಥೆ? ಇಂಗ್ಲೀಷ್ ಪತ್ರಿಕೆಗಳೇನೋ ಗಾಂಧಿ ಪರಿವಾರದ ಸಂಬಳದಲ್ಲಿವೆ. ತೀರಾ ಉದಯವಾಣಿಯವರೂ ಇದನ್ನೇ ಸತ್ಯವೆಂದು ಬಿಂಬಿಸಿ ಸುದ್ಧಿಪ್ರಕಟಿಸುತ್ತಿದ್ದಾರಲ್ಲಾ! ಅದೂ ದೇಶ ಚುನಾವಣೆಯ ಹೊಸ್ತಿಲಲ್ಲಿರುವಾಗ!! ಆ ಅರ್ಥವಾಗುವ “ಇವತ್ತಲ್ಲಾ ನಾಳೆ” ಅನ್ನೋ ಕಾಲ, ಚುನಾವಣೆ ಮುಗಿದಮೇಲೆ ಬಂದರೇನು ಸುಖ!? ನಾವೇ ದೇಶವನ್ನು ಅವಸಾನದೆಡೆಗೆ ತಳ್ಳಿದಂತಾಯ್ತಲ್ಲಾ! ಹೀಗಿದ್ದಾಗ ಎರಡನೇ ದಾರಿಯೇ ಬೇಕು. ಎರಡನೆಯ ದಾರಿ: “ಇದನ್ನು ಸಾಮಾನ್ಯರಿಗೂ ಅರ್ಥವಾಗುವ ಪದಗಳಲ್ಲಿ ಬಿಡಿಸಿ ಬರೆದು, ಸರಿದಾರಿಗೆಳೆಯುವುದು”. ಈ ಲೇಖನ ಆ ಎರಡನೆಯ ದಾರಿ.

  • ಹಾಗಾದರೆ ಹಣಕಾಸು ಸಚಿವಾಲಯದ ಸಾಲಪತ್ರದಲ್ಲಿ ಹೇಳಿರುವ ವಿಚಾರಗಳು ಸುಳ್ಳೇ?
  • ಈ ಪತ್ರಿಕೆಗಳು ಹೇಳುತ್ತಿರುವ ವಿಚಾರಗಳು ಸುಳ್ಳೇ?
  • ಮೋದಿಯನ್ನು ಸಮರ್ಥಿಸುವ ಭರದಲ್ಲಿ, ನಾನು ಈ ದೇಶದ ಮೇಲೆ ಸಾಲವೇ ಇಲ್ಲ ಅಂತಾ ಹೇಳುತ್ತಿದ್ದೇನೆಯೇ?

ಮತ್ತಷ್ಟು ಓದು »

3
ಜನ

ಮೋದಿರಾಗಾ ಸರಿಸಿ ಮತ ಹಾಕಲು ಮತ್ತೊಂದು ಹೆಸರು ಹೇಳುವಿರಾ?

– ಗೋಪಾಲಕೃಷ್ಣ
ಚಿಕ್ಕಮಗಳೂರು

4CE0D6B8-390C-4E23-889C-7727E2BCC073ಹಾಗೆ ಒಮ್ಮೆ ಕಲ್ಪಿಸಿಕೊಳ್ಳಿ; 2014ರಲ್ಲಿ ನರೇಂದ್ರ ಮೋದಿಯವರಿಗೆ ಬಹುಮತ ಸಿಗದೇ ಇದ್ದಿದ್ದರೆ, 18 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ, 16 ಸದಸ್ಯರನ್ನು ಹೊಂದಿದ್ದ ಚಂದ್ರಬಾಬು ನಾಯ್ಡು, 37 ಸ್ಥಾನ ಹೊಂದಿದ್ದ ಎಐಎಡಿಎಂಕೆ ಹೇಗೆಗೆಲ್ಲಾ ‘ಪೊಲಿಟಿಕಲ್ ಬ್ಲಾಕ್‍ಮೇಲ್’ ಮಾಡಬಹುದಿತ್ತು! ಅಂದು ಎನ್‍ಡಿಎ ಮೈತ್ರಿಕೂಟದ 336 ಸದಸ್ಯರಲ್ಲಿ 282 ಸ್ಥಾನಗಳೊಂದಿಗೆ ಬಿಜೆಪಿ ಸ್ಪಷ್ಟ ಬಹುಮತ ಪಡೆದಿತ್ತು. ಬಿಜೆಪಿ ಎನ್ನುವುದಕ್ಕಿಂತಲೂ ನರೇಂದ್ರ ಮೋದಿಯವರಿಗಾಗಿ ದೇಶ ನೀಡಿದ್ದ ಸ್ಪಷ್ಟ ಜನಾದೇಶವದು. ಹೀಗಿದ್ದರೂ ಶಿವಸೇನೆ ಪ್ರತಿಬಾರಿಯೂ ಕಿತಾಪತಿ ಮಾಡುತ್ತಲೇ ಬರುತ್ತಿದೆ. ಚಂದ್ರಬಾಬು ನಾಯ್ಡು ಅತ್ತಲಿಂದ ಇತ್ತ ಇತ್ತಲಿಂದ ಅತ್ತ ಜಿಗಿಯುತ್ತಲೇ ಇದ್ದಾರೆ. ಇನ್ನು ಜಯಲಲಿತಾ ಬದುಕಿದ್ದಿದ್ದರೆ ಅದು ಇನ್ನೊಂದು ರೀತಿಯ ರಾಜಕಾರಣವಾಗುತ್ತಿತ್ತು ಬಿಡಿ. ಮತ್ತಷ್ಟು ಓದು »

21
ಡಿಸೆ

ಮೋದಿ ಮತ್ತೊಮ್ಮೆ ಎನ್ನುವುದಕ್ಕಿಂತ, ಮೋದಿ ಮತ್ತೆ ಮತ್ತೆ ಎನ್ನಿ!

– ಸಾಗರ ಮುಧೋಳ

4CE0D6B8-390C-4E23-889C-7727E2BCC073ಕಳೆದ ಒಂದು ದಶಕದ ಹಿಂದೆ ಯಾರಾದರೂ ಒಬ್ಬ ವಿದ್ಯಾರ್ಥಿ ಅಥವಾ ಯುವಕ ತಾನೂ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಬೇಕು ಅಂದುಕೊಂಡಿದ್ದರೆ, ಅದು ಅವನ ದೃಷ್ಟಿಯಲ್ಲಿ ವಿಜ್ಞಾನಿ, ಅಧ್ಯಾಪಕ, ಅಧಿಕಾರಿ, ವೈದ್ಯ ಹೀಗೆ ಹಲವು ಬಗೆಯಲ್ಲಿ ಯೋಚಿಸುತ್ತಿದ್ದ. ಆದರೆ, ತಪ್ಪಿಯೂ ನಾನೊಬ್ಬ ರಾಜಕಾರಣಿಯಾಗಬೇಕೆಂದು ಚಿಂತಿಸುತ್ತಿರಲಿಲ್ಲ. ರಾಜಕಾರಣವೆಂದರೆ ಅದೊಂದು ಸಮಾಜದ ಬಹು ಜನರ ಆಶೋತ್ತರಗಳಿಂದ ಅಸ್ಪೃಶ್ಯವಾಗಿಯೇ ಉಳಿದ ಕ್ಷೇತ್ರ. ಅಲ್ಲಿ ಮಾನವೀಯತೆ, ಪ್ರಾಮಾಣಿಕತೆ, ಒಳ್ಳೆಯತನಕ್ಕೆ ಬೆಲೆಯೇ ಇಲ್ಲ. ರಾಜಕಾರಣವಿರುವುದೇ ದುಡ್ಡು ಮಾಡುವುದಕ್ಕೆ, ಜನರನ್ನು ಮೋಸ ಮಾಡುವುದಕ್ಕೆ ಎನ್ನುವುದು ನಾಡಿನ ಹಲವರಿಂದ ಅಸ್ಖಲಿತವಾಗಿ ಹೊಮ್ಮುತ್ತಿದ್ದ ವಾಣಿ. ಯಾರೊಬ್ಬರೂ ಊಹಿಸಿರಲಿಲ್ಲ! 2014 ರ ಸಂದರ್ಭದಿಂದ ಈ ದೇಶದಲ್ಲಿ ಬಾಲಿವುಡ್, ಕ್ರಿಕೆಟ್ ಗಿಂತ ಅತಿ ಹೆಚ್ಚು ಚರ್ಚೆ ಮತ್ತು ಮೆಚ್ಚುಗೆ ಪಡೆದ ವಿಷಯ ರಾಷ್ಟ್ರದ ರಾಜಕೀಯವೇ ಆಯಿತು. ಮೋದಿ ಎಂದರೆ ಅವರೊಬ್ಬ Political leader ಅಲ್ಲ, ಬದಲಾಗಿ ದೇಶದ ಬ್ರಾಂಡ್! ಮೋದಿ ಟೀ,ಮೋದಿ ಕುರ್ತಾ,ಮೋದಿ ಜಾಕೆಟ್ ಎಲ್ಲವೂ ಬ್ರಾಂಡ್. ಮೋದಿಗೆ ಸಂಬಂಧಿಸಿರುವುದೆಲ್ಲವು ಬ್ರಾಂಡ್. ಹಿಂದೆ ಅಪ್ಪ -ಅಮ್ಮ ಮನೆಯಲ್ಲಿ ರಾತ್ರಿ ನ್ಯೂಸ್ ನೋಡುತ್ತಿರಬೇಕಾದರೆ, ತಮ್ಮನ್ನು ಇಂದಿನ ಕ್ರಿಕೆಟ್ ಮ್ಯಾಚನ್ನು ನೋಡುವುದರಿಂದ ತಪ್ಪಿಸಿರುವವರ ಕಡೆ ಮಕ್ಕಳು ಶಪಿಸುತ್ತಾ ಮೂಗು ಮುರಿಯುತ್ತಿದ್ದರು. ಆದರೆ ಮೋದಿ ಎಂಟ್ರಿ ಕೊಟ್ಟ ಮೇಲೆ ಸಕುಟುಂಬ ಸಮೇತರಾಗಿ ಮನೆಯ ಟಿ.ವಿ. ಪರದೆಯ ಮೇಲೆ ಮೋದಿ ಗಾಥೆಯನ್ನು ನೋಡಲು ಶುರುಹಚ್ಚಿದರು. 2014 ರಲ್ಲಿ ಮೋದಿ ಗೆಲ್ಲುವುದು ಅನಿವಾರ್ಯ ಮಾತ್ರವಲ್ಲ, ಅಂತಿಮವಾದ ಪೂರ್ವ ನಿಯೋಜಿತ ತೀರ್ಮಾನವಾಗಿತ್ತು. Breaking news ಗಾಗಿ ಹಪಹಪಿಸುತ್ತಿದ್ದ ನ್ಯೂಸ್ ಚಾನೆಲ್ ಗಳಿಗೆ ಮೋದಿಯಿಂದ ಪ್ರತಿದಿನ Breaking news ಸಿಗುವ ಹಾಗಾಯಿತು. ಕೊನೆಗೆ ಮೋದಿ ಸುನಾಮಿಯ ಎದುರು ಪ್ರತಿಪಕ್ಷಗಳು ಕೊಚ್ಚಿಕೊಂಡು ಹೋದವು. ಅತ್ತ ನಾಯಕತ್ವವುಯಿಲ್ಲದೆ, ಇತ್ತ ಧ್ಯೇಯೋದ್ದೇಶಗಳು ಇಲ್ಲದ ಪ್ರತಿಪಕ್ಷಗಳು ಮೋದಿಯ ವಿಜಯಕ್ಕೆ ತಲೆ ಬಾಗಲೇ ಬೇಕಾಯಿತು. ಮೋದಿ ಈ ದೇಶದ ಪ್ರಧಾನಮಂತ್ರಿ ಎಂದು ಜನ ಹೇಳುತ್ತಿರುವಾಗ, ” ನಾನು ಈ ದೇಶದ ಪ್ರಧಾನಮಂತ್ರಿಯಲ್ಲ, 125 ಕೋಟಿ ಭಾರತೀಯರ ಪ್ರಧಾನ ಸೇವಕ” ಎಂದ ಮೋದಿಯ ಕೃತಜ್ಞತಾ ಭಾವಕ್ಕೆ ಇಡೀ ದೇಶ ಶರಣೆಂದಿತು. ಮತ್ತಷ್ಟು ಓದು »

31
ಜುಲೈ

ರಾಫೆಲ್ ಯುದ್ಧ ವಿಮಾನದ ಸತ್ಯಾಸತ್ಯತೆಗಳು

– ರಾಕೇಶ್ ಶೆಟ್ಟಿ

ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಮುಗಿದ ನಂತರ ಕೇಂದ್ರದ ರಾಜಕೀಯ ವಲಯದಲ್ಲಿ ಅತಿಹೆಚ್ಚು ಸದ್ದು ಮಾಡುತ್ತಿರುವುದು ರಾಫೆಲ್ ಯುದ್ಧ ವಿಮಾನ ಖರೀದಿಯ ವಿವಾದ.ಕಳೆದ ವಾರದ ಅಂಕಣದಲ್ಲಿ ಸಂಸದ ರಾಹುಲ್ ಗಾಂಧೀ ಸಂಸತ್ತಿನಲ್ಲಿ ರಾಫೆಲ್ ಬಗ್ಗೆ ಮಾತನಾಡಿದ್ದನ್ನು ಅದಕ್ಕೆ ಭಾರತ ಹಾಗೂ ಫ್ರಾನ್ಸ್ ಸರ್ಕಾರ ನೀಡಿದ ಸ್ಪಷ್ಟಿಕರಣದ ಬಗ್ಗೆ ಹೇಳಿದ್ದೆ.

ಇದೆಲ್ಲದರ ಮೂಲವಿರುವುದು ೨೦೦೧ರಲ್ಲಿ ಭಾರತೀಯ ವಾಯುಪಡೆ (IAF) ತನಗೆ ೧೨೬ ಮೀಡಿಯಂ ಮಲ್ಟಿ ರೋಲ್ ಕಂಬ್ಯಾಟ್ ಯುದ್ಧ ವಿಮಾನಗಳ ಅವಶ್ಯಕತೆಯಿದೆ ಎನ್ನುವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದಾಗ. ಸಾಧಾರಣವಾಗಿ IAF ಬಳಿ ಕಡಿಮೆಯೆಂದರೂ ೪೫ ಸ್ಕ್ವಾಡ್ರನ್ಸ್ ನಷ್ಟು ಯುದ್ಧವಿಮಾನಗಳು ಇರಬೇಕು ಅಥವಾ ಕನಿಷ್ಟವೆಂದರೂ ೩೯ಸ್ಕ್ವಾಡ್ರನ್ಸ್ ನಷ್ಟು ಇರಬೇಕು ಎನ್ನುವ ನಿಯಮವಿದೆ.ನಮ್ಮ ಬಳಿಯಿದ್ದ ಮಿಗ್ ೨೧ ಮತ್ತು ಮಿಗ್ ೨೭ರ ಜೀವಿತಾವಧಿಗಳು ಮುಗಿಯುತ್ತ ಬಂದಿದ್ದವು ಮೇಲಾಗಿ,ಆ ಯುದ್ಧ ವಿಮಾನಗಳ ಮಿತಿಯನ್ನು ಕಾರ್ಗಿಲ್ ಯುದ್ಧ ಮನಗಾಣಿಸಿತ್ತು ಕೂಡ. ಈ ಹಿನ್ನೆಲೆಯಲ್ಲಿ ಇಂತಹದ್ದೊಂದು ಬೇಡಿಕೆ IAF ನಿಂದ ಬಂದಿತ್ತು. ೨೦೦೭ರಲ್ಲಿ ಈ ಕುರಿತು RFP (request for proposals) ಸಲ್ಲಿಸಿತ್ತು. ೬ ಶಸ್ತ್ರಾಸ್ತ್ರ ತಯಾರಿಕಾ ಕಂಪೆನಿಗಳು ಬಿಡ್ ಸಲ್ಲಿಸಿದ್ದವು. ತೀವ್ರತರನಾದ ಪರೀಕ್ಷೆಗಳ ಮೂಲಕ ಅಂತಿಮವಾಗಿ ರಾಫೆಲ್ ಮತ್ತು ಯುರೋ ಫೈಟರ್ ಟೈಫೂನ್ ವಿಮಾನಗಳು ಅಂತಿಮ ಸುತ್ತಿನಲ್ಲಿ ಉಳಿದಿದ್ದವು.ಇದರಲ್ಲಿ ಅಂತಿಮವಾಗಿ ಆಯ್ಕೆಯಾಗಿದ್ದು ರಾಫೆಲ್.ಇಷ್ಟೆಲ್ಲಾ ಆಗುವಾಗ ೨೦೧೨ ಬಂದಿತ್ತು. ಸರಿ ಸುಮಾರು ಹನ್ನೊಂದು ವರ್ಷಗಳು ವರದಿ,ಪ್ರಪೋಸಲ್ ಹಾಗೂ ಯುದ್ಧ ವಿಮಾನದ ಆಯ್ಕೆಯಲ್ಲಿಯೇ ಕಳೆದು ಹೋಗಿತ್ತು. ಹಾಗೂ ಹೀಗೂ ರಾಫೆಲ್ ಖರೀದಿಯ ಕುರಿತ ವ್ಯಾವಹಾರಿಕ ಚರ್ಚೆಗಳು ಶುರುವಾಗಿದ್ದು ೩೧ ಜನವರಿ ೨೦೧೨ ರ ನಂತರ.

ಮತ್ತಷ್ಟು ಓದು »

19
ಜೂನ್

ಮತಾಂಧರ ಮುಂದೆ ಸಧ್ಭಾವನೆಯ ಕನಸೇ?

-ರಾಕೇಶ್ ಶೆಟ್ಟಿ

images (1)ದಿನಾ ಸಾಯೋರಿಗೆ ಅಳೋರು ಯಾರು ಅನ್ನೋ ಗಾದೆ ಜಮ್ಮುಕಾಶ್ಮೀರ ರಾಜ್ಯದ ದಿನನಿತ್ಯದ ಹಿಂಸಾಚಾರಕ್ಕೆ ಹೇಳಿ ಮಾಡಿಸಿದಂತಿದೆ. ಆದರೆ ಈ ಗಾದೆಗೆ ಅಪವಾದವೆಂಬಂತೆ ಉಗ್ರರು, ಉಗ್ರರ ಸಿಂಪಥೈಸರ್ ಗಳು ಸತ್ತಾಗ ಅಳಲಿಕ್ಕೆ ದೇಶದಾದ್ಯಂತ ಗಂಜಿಗಿರಾಕಿಗಳು, ಸೆಕ್ಯುಲರ್ ಮಾಧ್ಯಮಗಳು ತಯಾರಾಗುತ್ತವೆ. ಆದರೆ ಕಣಿವೆಯಲ್ಲಿ ಪಾಕಿಗಳು ಗಡಿಯಾಚೆಯಿಂದ ನಡೆಸುವ ಅಪ್ರಚೋದಿತ ಗುಂಡಿನ ದಾಳಿಗೆ, ಉಗ್ರರ ದಾಳಿಗೆ ಬಲಿಯಾಗುವ ಭಾರತೀಯ ಯೋಧರಿಗೆ ಮಾತ್ರ ಈ ಭಾಗ್ಯವಿಲ್ಲ. ಇವರ ಸಾವಿನ ಸುದ್ದಿಗಳು ದಿನಪತ್ರಿಕೆಗಳಲ್ಲಿ ಕಾರ್ನರ್ ಸುದ್ದಿಯಾಗಿರುತ್ತದೆ. ಓದುವ ಜನರಿಗೂ ಇದೆಲ್ಲಾ ಅಲ್ಲಿ ಮಾಮೂಲು ಎನಿಸಿಬಿಡುತ್ತದೆ. ಆದರೆ, ಭುಜದೆತ್ತರಕ್ಕೆ ಬೆಳೆದು ನಿಂತ ಮಗನನ್ನು ಕಳೆದುಕೊಂಡ ಹೆತ್ತವರಿಗಷ್ಟೇ ಆ ನೋವಿನ ತೀವ್ರತೆ ತಟ್ಟುವುದು. ಅದೇ ನೋವಿನಲ್ಲಿ ಮಾತನಾಡಿದವರು ಹುತಾತ್ಮ ಯೋಧ ಔರಂಗಜೇಬ್ ತಂದೆ. ದೇಶಕ್ಕಾಗಿ ಪ್ರಾಣ ಕೊಡುತ್ತೇನೆಂದಿದ್ದ ನನ್ನ ಮಗ ತನ್ನ ಮಾತನ್ನು ಉಳಿಸಿಕೊಂಡಿದ್ದಾನೆ, ಅವನ ಸಾವಿಗೆ ತಕ್ಕ ಉತ್ತರವನ್ನು 72 ಗಂಟೆಗಳೊಳಗೇ ನೀಡಿ ಎಂದು ಪ್ರಧಾನಿ ಮೋದಿಯವರನ್ನು ಅವರು ಆಗ್ರಹಿಸಿದ್ದಾರೆ. ಮೊನ್ನೆ ರಂಜಾನ್ ಹಬ್ಬಕ್ಕೆಂದು ರಜೆಯಲ್ಲಿ ಮನೆಗೆ ತೆರಳುತ್ತಿದ್ದ ಯೋಧ ಔರಂಗಜೇಬ್ ರನ್ನು ಅಪಹರಿಸಿದ ಉಗ್ರಗ್ರಾಮಿಗಳು ತಲೆ, ಕತ್ತಿನ ಭಾಗಕ್ಕೆ ಗುಂಡಿಟ್ಟು ಕೊಂದಿದ್ದಾರೆ. ಅದೇ ದಿನ ರೈಸಿಂಗ್ ಕಾಶ್ಮೀರ್ ಎಂಬ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಮತ್ತವರ ಖಾಸಗಿ ಅಂಗರಕ್ಷಕರನ್ನು ಉಗ್ರರು ಕೊಂದಿದ್ದಾರೆ. ಇವೆಲ್ಲಾ ಕೇಂದ್ರ ಸರ್ಕಾರದ ತಲೆಕೆಟ್ಟ ನಿರ್ಧಾರವಾಗಿದ್ದ ಪವಿತ್ರ ತಿಂಗಳಲ್ಲಿ ಭದ್ರತಾಪಡೆಗಳ ಮೇಲೆ ಏಕಪಕ್ಷೀಯ ಕದನವಿರಾಮ ಹೇರಿಕೆಯ ಫಲ. ಮತ್ತಷ್ಟು ಓದು »

20
ಸೆಪ್ಟೆಂ

ಡೋಕ್ಲಾ ಕಾರ್ಮೋಡ ಕರಗಿದ ನಂತರ ಮೋದಿ ಸಮರ್ಥಕರು, ವಿರೋಧಿಗಳು ಮತ್ತದೇ ಗುದ್ದಾಟಕ್ಕಿಳಿದಿದ್ದಾರೆ.

– ಪ್ರಸನ್ನ ಕೆ

ಮೋದಿ ಅಂತದ್ದೇನು ಮಾಡಿದ್ದು ಎಂದು ವಿಶ್ಲೇಷಿಸಲು ಕುಳಿತರೆ ನಮಗೆ ಅಂತ ವಿಶೇಷಗಳು ಸಿಗುವುದಿಲ್ಲ. ಆದರೆ ವಿಷಯ ಇಷ್ಟೇನಾ? ಮೋದಿ ಏನೂ ಮಾಡಲೇ ಇಲ್ವಾ? ಎಂಬ ಪ್ರಶ್ನೆ ಏಳಬಹುದು. ಏನೂ ಮಾಡದೇ ಇಂತಹ ಗೆಲುವುಗಳು, ಯಶಸ್ಸು ಕೇವಲ ಭಕ್ತರ ಹೊಗಳಿಕೆ ವಿರೋಧಿಗಳ ಕೆಸರೆರಚಾಟದಿಂದ ಸಿಗಲು ಸಾಧ್ಯವೆ?

ಮೋದಿಯನ್ನು ಅತಿಯಾಗಿ ಹೊಗಳುವರಾಗಲಿ ಹಿಂದೆ ಮುಂದೆ ತಿಳಿಯದೆ ಕೇವಲ ಸೈದ್ದಾಂತಿಕ ಕಾರಣಕ್ಕಾಗಿ ವಿರೋಧಿಸುವವರು ಅವರ ಕಾರ್ಯಶೈಲಿಯನ್ನು ವಿಮರ್ಷಿಸಲಿಲ್ಲ ಅಥವಾ ಅರ್ಥ ಮಾಡಿಕೊಳ್ಳುವ ಗೋಜಿಗೆ ಹೋಗಲಿಲ್ಲ. ಆದರೆ ಮೋದಿ ಹಾಗೆ ಮಾಡಲಿಲ್ಲ, ತನ್ನ ಕೆಲಸವೇನು, ತನ್ನ ಗುರಿ ಏನು ಎಂಬುದು ಅವರಿಗೆ ಸ್ಪಷ್ಟವಾಗಿ ತಿಳಿದಿದೆ, ಆದನ್ನು ಅವರು ಮುಂದುವರೆಸಿದ್ದಾರಷ್ಟೆ. ಅವರು ಗುರಿ ಒಂದೇ ‘ಉತ್ತಮ ಆಡಳಿತ, ದೇಶದ ಒಳಿತು’. ತನ್ನ ವೈಯಕ್ತಿಕ ವರ್ಚಸ್ಸಿಗಿಂತ ದೇಶದ ಒಳಿತು ಮುಖ್ಯ ಎನ್ನುವುದು ಬಂದಾಗ ಬೇರೆಲ್ಲಾ ದಾರಿಗೆ ಬರುತ್ತವೆ. ಮತ್ತಷ್ಟು ಓದು »

20
ಸೆಪ್ಟೆಂ

ಪ್ರಗತಿಪರ ಫ್ಯಾಸಿಸ್ಟುಗಳಿಂದ ಪ್ರಜಾಪ್ರಾಭುತ್ವವ್ವನ್ನು ರಕ್ಷಿಸಬೇಕಾಗಿದೆ

– ರಾಕೇಶ್ ಶೆಟ್ಟಿ

ದೇಶದಾದ್ಯಂತ ಇಂದು ನಡೆಯುತ್ತಿರುವ Intellectual Intolerance ಹುಟ್ಟಿಕೊಂಡಿದ್ದು 16 May 2014 ರಂದು. ಆ ದಿನ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಎನ್.ಡಿ.ಎ ಪ್ರಚಂಡ ಬಹುಮತಗಳಿಸಿ ಅಧಿಕಾರ ಹಿಡಿಯದೇ ಹೋಗಿದ್ದರೆ ಇವತ್ತು ಭಾರತದ ಹಾದಿ ಬೀದಿಗಳಲ್ಲಿ ಗಂಜಿಗಿರಾಕಿಗಳು ಎದೆಬಡಿದುಕೊಂಡು ಅಳಬೇಕಿರಲಿಲ್ಲ. ಆದರೆ ಏನು ಮಾಡುವುದು ಹೇಳಿ? ಭಾರತದ ಪಾಲಿಗೆ ಅಚ್ಛೇ ದಿನಗಳು ನಿಕ್ಕಿಯಾಗಿದ್ದವಲ್ಲ ಹಾಗಾಗಿ ಮೋದಿಯವರೇ ಗೆದ್ದರು. ಅಷ್ಟಕ್ಕೂ ಮೋದಿಯವರು ಗೆದ್ದಿದ್ದಕ್ಕೆ, ಗೆದ್ದ ನಂತರ ಯಶಸ್ವಿ ಮತ್ತು ಮೂರು ವರ್ಷಗಳ ಜನಪ್ರಿಯ ಆಡಳಿತವನ್ನು ನೀಡಿ ನಾಲ್ಕನೇ ವರ್ಷದತ್ತ ಶರವೇಗದಲ್ಲಿ ಹೊರಟಿರುವಾಗ ಗಂಜಿಗಿರಾಕಿಗಳದೇಕೆ ಈ ಗೋಳು? ಅವರ ಗೋಳಿನ ಕಾರಣವನ್ನು ಸರಳೀಕರಿಸಿ ಮೂರು ಪ್ರಮುಖ ಕಾರಣಗಳನ್ನು ನೀಡಬಹುದು. ಮತ್ತಷ್ಟು ಓದು »

18
ಜುಲೈ

‘ಭಾಗ್ಯ’ವಂತರೇ, “ಒಳ್ಳೆಯ ದಿನಗಳು ಸುಮ್ಮನೆ ಬರುವುದಿಲ್ಲ”

– ಗೋಪಾಲಕೃಷ್ಣ

‘ಭಾಗ್ಯ’ವಂತರೇ, “ಒಳ್ಳೆಯ ದಿನಗಳು ಸುಮ್ಮನೆ ಬರುವುದಿಲ್ಲ”

ಮೂರು ವರ್ಷಗಳಲ್ಲಿ ಮೋದಿಯ ಪುಕ್ಸಟ್ಟೆ ಸಾಧನೆಗಳು “ಹಾಸಿಗೆ ನಿಮ್ಮದು, ನಿದ್ದೆಯೂ ನಿಮ್ಮದು; ಸ್ಮಾರ್ಟ್ ಸಿಟಿ ಕನಸು ನಿಮ್ಮದೇ..”, “ಮಗಳು ನಿಮ್ಮವಳೇ, ಜವಾಬ್ದಾರಿನೂ ನಿಮ್ಮದು; ಭೇಟಿ ಪಡಾವೋ, ಭೇಟಿ ಬಚಾವೋ…” , “ದೇಹ ನಿಮ್ಮದು ಚಾಪೇನೂ ನಿಮ್ಮದು, ಯೋಗ ದಿನವೂ ನಿಮ್ಮದು..” , “ಅಕೌಂಟೂ ನಿಮ್ಮದು, ಧನವೂ ನಿಮ್ಮದು..”, “ಪೊರಕೆ ನಿಮ್ಮದು, ಕಸ ಬೀದಿದು; ಸ್ವಚ್ಛಭಾರತ” ಇದಕ್ಕಿಂತಲೂ ತುಟ್ಟಿ/ಬಿಟ್ಟಿ ಯೋಜನೆಗಳಿವೆಯೇ? ಇತ್ತೀಚಿನ ದಿನಗಳಲ್ಲಿ ಈ ರೀತಿಯ ಪೋಸ್ಟ್ ಗಳು ಫೇಸ್‍ಬುಕ್‍ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.  ದೇಶದ ಅಭಿವೃದ್ಧಿಯನ್ನು ಗಮನಿಸುತ್ತಿರುವವರು ನರೇಂದ್ರ ಮೋದಿಯವರನ್ನು ಬೆಂಬಲಿಸುತ್ತಿರುವುದು ನಿಜ, ಮೋದಿ ಭಕ್ತರಿಗಂತೂ ಮೋದಿ ಹೇಳಿದ್ದು, ಮಾಡಿದ್ದೆಲ್ಲವೂ ಸರಿಯಿರಬಹುದು! ಆದರೆ ಮೋದಿಯನ್ನು ವಿರೋಧಿಸುವವರು ಹಾಗೂ ವಿರೋಧಿಸಲಿಕ್ಕಾಗಿಯೇ ವಿರೋಧಿಸುವವರು ನರೇಂದ್ರ ಮೋದಿಯವರನ್ನು ಪವಾಡ ಪುರುಷನಂತೆ ನೋಡುತ್ತಿರುವುದೇ ಆಶ್ಚರ್ಯ ಉಂಟು ಮಾಡುತ್ತಿದೆ. ಇದಕ್ಕೆ ಮೇಲಿನ ಪೋಸ್ಟ್ ಒಂದು ಚಿಕ್ಕ ನಿದರ್ಶನ ಅಷ್ಟೇ. ಮತ್ತಷ್ಟು ಓದು »