ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮೋದಿ’

9
ಜುಲೈ

ಮರಳುಗಾಡಿನಲ್ಲಿ ಹಸಿರನ್ನೊತ್ತಿಸಿದ ದೇಶವೊಂದು ನಡೆದ ಹಾದಿಯಲ್ಲಿ…

– ಸುಜಿತ್ ಕುಮಾರ್

1947….

ಅರಬ್ಬರ ಹಾಗು ಜ್ಯೂವರ (ಯಹೂದಿ) ಕಿತ್ತಾಟವನ್ನು ನೋಡಲಾರದೆ ವಿಶ್ವಸಂಸ್ಥೆ ಅಂದು ಯಹೂದಿಗಳಿಗೊಂದಷ್ಟು ಹಾಗು ಅರಬ್ಬರಿಗೊಂದಿಷ್ಟು ನೆಲವನ್ನು ಪಾಲುಮಾಡಿ ಕೊಟ್ಟಿತ್ತು. ಇಬ್ಬರ ಕಿತ್ತಾಟದ ನಡುವೆ ಮೂರನೆಯವರ ಉಸಾಬರಿಯನ್ನು ಒಪ್ಪದ ಅರಬ್ ಪಡೆ (ಈಜಿಪ್ಟ್, ಸಿರಿಯಾ, ಜೋರ್ಡನ್, ಲೆಬನಾನ್) ತಮ್ಮ ಪಾಲು ಸಣ್ಣದೆಂದು ಕೊರಗಿ ವಿಶ್ವಸಂಸ್ಥೆ ಗೊತ್ತುಮಾಡಿದ್ದ ಯಹೂದಿಯರ ಅಷ್ಟೂ ನೆಲವನ್ನು ನುಂಗಿ ಹಾಕಲು ರಣತಂತ್ರವೊಂದನ್ನು ರೂಪಿಸಿದವು. ಜಾಗತಿಕ ಮಟ್ಟದಲ್ಲಿ ತನ್ನ ಪಿಳಿ ಪಿಳಿ ಕಣ್ಣುಗಳನ್ನು ಬಿಡುತ್ತಿರುವಷ್ಟರಲ್ಲೇ ವೈರಿ ಸೇನೆ ಯಹೂದಿಯರ ಪ್ರದೇಶವನ್ನು ಮೂರು ದಿಕ್ಕಿನಿಂದಲೂ ಆವರಿಸಿತು. ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿ ತನ್ನೆಲ್ಲಾ ಶಕ್ತಿಯನ್ನು ಬಸಿದು ಹೋರಾಡಿದ ಪಡೆ, ವೈರಿಸೇನೆ ಕನಸ್ಸಿನಲ್ಲಿಯೂ ಊಹಿಸಲಾಗದ ಮಟ್ಟಿಗೆ ಸದೆಬಡಿಯಿತು. ಯುದ್ಧದಲ್ಲಿ ಸೋತು ಓಡತೊಡಗಿದ್ದ ವೈರಿಪಡೆಯ ಒಂದೊಂದೇ ಪ್ರದೇಶಗಳನ್ನು ‘ಗೆದ್ದ’ ಯಹೂದಿಯರು 1948 ರಲ್ಲಿ ಹೊಸ ದೇಶವೊಂದನ್ನು ಹುಟ್ಟುಹಾಕಿ ಪ್ರಪಂಚಕ್ಕೆ ಪರಿಚಯ ಮಾಡಿಕೊಟ್ಟರು. ಇಂದು ಯುದ್ಧ ಸಾಮಗ್ರಿಗಳ ತಯಾರಿ ಹಾಗು ಅವುಗಳ ರಪ್ತಿನಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿರುವ, ಹಾಗು ಅಭಿವೃದ್ದಿ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಝಳಪಿಸುವ ಆ ದೇಶದ ಹೆಸರೇ ಇಸ್ರೇಲ್. ಮತ್ತಷ್ಟು ಓದು »

27
ಏಪ್ರಿಲ್

ದೆಹಲಿ ಪಾಲಿಕೆಯ ಫಲಿತಾಂಶದಲ್ಲಿ ಕರ್ನಾಟಕ ಬಿಜೆಪಿಗೇನು ಪಾಠ?

– ವಿನಾಯಕ ಹಂಪಿಹೊಳಿ

ಕಳೆದ ಹತ್ತು ವರ್ಷಗಳಿಂದ ದೆಹಲಿಯ ಮಹಾನಗರ ಪಾಲಿಕೆಯು ಬಿಜೆಪಿಯ ಕೈಯಲ್ಲಿದೆ. ಇಂದು ಸತತ ಮೂರನೇ ಬಾರಿ ಜಯ ಸಾಧಿಸುವ ಮೂಲಕ ಹ್ಯಾಟ್ರಿಕ್ ನಿರ್ಮಿಸಿದೆ. ಆದರೆ ಹತ್ತು ವರ್ಷಗಳ ಆಡಳಿತದ ಕುರಿತು ಜನರಿಗೇನೂ ಒಳ್ಳೆಯ ಅಭಿಪ್ರಾಯವಿಲ್ಲ. ಮಹಾನಗರ ಪಾಲಿಕೆಗೆ ಆಯ್ಕೆಯಾದ ಬಿಜೆಪಿಗರಲ್ಲಿ ಹತ್ತು ವರ್ಷ ಭ್ರಷ್ಟಾಚಾರವೂ ವ್ಯಾಪಕವಾಗಿಯೇ ನಡೆದಿತ್ತು. ಎರಡು ವರ್ಷಗಳ ಹಿಂದೆ ರಾಜ್ಯ ಚುನಾವಣೆಯಲ್ಲಿ ಆಪ್ ಪಕ್ಷವು ಪ್ರಚಂಡ ಬಹುಮತದಿಂದ ಗೆದ್ದಿತ್ತು. ೨೦೧೩ ಹಾಗೂ ೨೦೧೫ರಲ್ಲಿ ಆಪ್ ಪಕ್ಷಕ್ಕೆ ದೆಹಲಿಯ ಜನತೆ ವೋಟಿನ ಜೊತೆ ಪ್ರೀತಿಯನ್ನೂ ನೀಡಿತ್ತು.

ಇಂಥ ಜನಪ್ರಿಯ ಸರ್ಕಾರದ ಜೊತೆ ಬಿಜೆಪಿಯ ಹಿಡಿತದಲ್ಲಿದ್ದ ಮಹಾನಗರ ಪಾಲಿಕೆಯು ಜಗಳಕ್ಕಿಳಿಯಿತು. ದೆಹಲಿ ಸರ್ಕಾರವು ಪಾಲಿಕೆಗೆ ಹಣ ಬಿಡುಗಡೆ ಮಾಡುವಲ್ಲಿ ನಿಧಾನಗತಿ ತೋರಿಸುತ್ತಿದೆ ಹಾಗೂ ವೇತನ ಬಿಡುಗಡೆ ಮಾಡದೇ ತಡೆಹಿಡಿದಿದೆ ಎಂದು ಪಾಲಿಕೆ ಆರೋಪಿಸಿತು. ಹಾಗೆಯೇ, ಪಾಲಿಕೆಯ ಕೆಲಸಗಾರರು ಕೆಲಸ ನಿಲ್ಲಿಸಿ ಪ್ರತಿಭಟಿಸಿದ್ದರಿಂದ ಇಡೀ ಊರು ಸ್ವಚ್ಛತೆಯನ್ನು ಕಾಣದೇ ದುರ್ನಾತ ಹಿಡಿಯಿತು. ಪಾಲಿಕೆಯು ೧೦ ವರ್ಷಗಳಲ್ಲಿ ಜನರಿಂದ ಪ್ರಶಂಸೆಗೆ ಒಳಗಾಗುವಂತಹ ಶ್ರೇಷ್ಠ ಸಾಧನೆಯನ್ನೇನೂ ಮಾಡಿರಲಿಲ್ಲ. ಪ್ರಗತಿ ಕಾರ್ಯಗಳ ವೇಗ ಅಷ್ಟಕ್ಕಷ್ಟೇ ಇತ್ತು.

ಮತ್ತಷ್ಟು ಓದು »

25
ಏಪ್ರಿಲ್

ಪ್ರಧಾನಿಗಳಿಗೇಕೆ ಭದ್ರತೆ..?

– ಸುರೇಶ್ ಮುಗ್ಬಾಳ್
ತಿಪಟೂರು

ನಾಯಕರ ಭದ್ರತೆಯ ವಿಚಾರದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಡೆದ ಎರಡು ಘಟನೆಗಳು

ಒಂದು “ಪ್ರಧಾನಿಗಳಿಗೇಕೆ ಭದ್ರತೆ..? ಜೀವ ಬೆದರಿಕೆ ಇದ್ದರೆ ಸತ್ತರೆ ಸಾಯಲಿ ಬಿಡಿ” ಎಂದು ಹೇಳಿದ ಬಸವರಾಜ ರಾಯರೆಡ್ಡಿಯವರ ಘಟನೆ. ಮತ್ತೊಂದು ಮಂಡ್ಯ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಎದುರಾಗಿ ಕಪ್ಪು ಬಟ್ಟೆ ಪ್ರದರ್ಶಿಸಿದ ಪ್ರತಿಭಟನಾಕಾರರನ್ನು ಮಂಡ್ಯ ಎಸ್.ಪಿ. ‘ಸುಧೀರ್ ಕುಮಾರ್ ರೆಡ್ಡಿ’ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಕಾರ್ಯಕ್ರಮದ ವೇದಿಕೆಯ ಮೇಲೆ ರೆಡ್ಡಿಯವರನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡ ಘಟನೆ. ಮತ್ತಷ್ಟು ಓದು »

2
ಜನ

ಮೋದಿ ಭಕ್ತರೇನು ಮುಟ್ಟಾಳರೇ..?

– ಸಂತೋಷಕುಮಾರ ಮೆಹೆಂದಳೆ.

2( ತನ್ನ ನಂಬಿ ಹಿಂದೆ ಕರೆದೊಯ್ಯುವವನು ನಾಯಕನಾಗುವುದು ಸಹಜ. ಆದರೆ ಕ್ರಮೇಣ ಸಿದ್ಧಾಂತದಲ್ಲಿ ವೈಪರಿತ್ಯಗಳುಂಟಾಗಿ ಆ ನಾಯಕತ್ವ ಸಹಜವಾಗೇ ಕುಸಿಯುತ್ತದೆ. ಆದರೆ ತನ್ನ ನಂಬಿಕೆಗಳನ್ನು ಸಂಪೂರ್ಣ ಸಮೂಹದ ನಂಬಿಕೆಯನ್ನಾಗಿ ಪರಿವರ್ತಿಸೋದಿದೆಯಲ್ಲ ಅಂಥವನು ಶಾಶ್ವತವಾಗಿ ನಾಯಕನಾಗುತ್ತಾನೆ ಮತ್ತು ಆ ಸ್ಥಾನ ಅಬಾಧಿತ. ಹಾಗೆ ಜನರ ನಂಬುಗೆ ಮತ್ತು ವಿಶ್ವಾಸ ಎರಡನ್ನೂ ಗಳಿಸುವವನು ಮಿತ್ರರಷ್ಟೇ ಶತ್ರುಗಳನ್ನೂ ಗಳಿಸುತ್ತಾನೆ. ಕಾರಣ ಯಶಸ್ಸು ಎನ್ನುವುದು ಎಂಥವನ ನಿಯತ್ತನ್ನೂ ಹಾಳು ಮಾಡಿಬಿಡುತ್ತದೆ ) ಮತ್ತಷ್ಟು ಓದು »

27
ಡಿಸೆ

ಮೋದಿಯಂತವರು ರಾಜಕೀಯಕ್ಕೆ ಬರಬೇಕು..

– ರಾಕೇಶ್ ಶೆಟ್ಟಿ

2ದೇಶದ ಪಾಲಿಗೆ ಮಹತ್ವದ ದಿನಗಳಾಗಿ ಇತಿಹಾಸದ ದಿಕ್ಕು ದೆಸೆಯನ್ನೇ ಬದಲಿಸಿದ ಆಗಸ್ಟ್ ೧೫, ಜನವರಿ ೨೬, ಅಕ್ಟೋಬರ್ ೨, ಜನವರಿ ೨೩ರ ಸಾಲಿಗೆ ನಿಶ್ಚಿತವಾಗಿ ನವೆಂಬರ್ ೮ರ ದಿನವನ್ನು ಸೇರಿಸಬಹುದೆನಿಸುತ್ತದೆ. ನವೆಂಬರ್ ೮ರ ಮಧ್ಯರಾತ್ರಿಯಿಂದ ೫೦೦, ೧೦೦೦ ರೂಪಾಯಿಗಳ ಹಳೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳುವ ಮೂಲಕ ದೇಶದ ಆರ್ಥಿಕ ವ್ಯವಸ್ಥೆಯ ಮಗ್ಗಲು ಬದಲಿಸಲು ಹೊರಟ ದಿನ. ಮತ್ತಷ್ಟು ಓದು »

18
ಮೇ

ನಂಜುಂಡೇಗೌಡರು ಮೋದಿಗೆ ಬರೆದ ಪತ್ರಕ್ಕೊಂದು ಆತ್ಮೀಯ ಪ್ರತಿಕ್ರಿಯೆ

– ವಿಜಯ್ ಪೈ

pvec16may16editmainಸನ್ಮಾನ್ಯ ಹೊನಕೆರೆ ನಂಜುಂಡೇಗೌಡರಿಗೆ ವಂದನೆಗಳು.

ತಾವು ಪ್ರಧಾನ ಮಂತ್ರಿಗಳಿಗೆ ಪ್ರಜಾವಾಣಿ ಪತ್ರಿಕೆಯಲ್ಲಿ ಬರೆದ ‘ಆತ್ಮೀಯ’ ಪತ್ರವನ್ನು ಓದಿದ ನಂತರ ನಿಮಗೊಂದು ಆತ್ಮೀಯ ಪ್ರತಿಕ್ರಿಯೆ ನೀಡಬೇಕಾಯಿತು.

(ನಂಜುಂಡೇಗೌಡರ ಪತ್ರ : www.prajavani.net/columns/ಗೌರವಾನ್ವಿತ-ಪ್ರಧಾನಿಗೆ-ಆತ್ಮೀಯ-ಪತ್ರ )

ಮೋದಿ ಆಡಳಿತದಿಂದ ಈ ದೇಶದಲ್ಲಿ ಬಂದ ಒಂದು ಅತ್ಯುತ್ತಮ ಬದಲಾವಣೆಯೆಂದರೆ, ‘ಬುದ್ಧಿಜೀವಿ’ಗಳೆಂದು / ಪತ್ರಕರ್ತರೆಂಬ ಅಪಾದನೆಗೊಳಲ್ಪಟ್ಟವರು ಆಗಾಗ ಪ್ರಧಾನಿಗೆ ಪತ್ರ ಬರೆಯುವ, ಬುದ್ಧಿವಾದ ಹೇಳುವ/ ಎಚ್ಚರಿಸುವ ಕಾರ್ಯಕ್ರಮದಲ್ಲಿ ತೊಡಗಿಕೊಂಡಿರುವುದು. ದಶಕಗಳ ಕಾಲ ಕೋಮಾಕ್ಕೆ ಒಳಗಾಗಿದ್ದ ಇವರುಗಳು, ಈಗ ಮೋದಿ ಎಂಬ ಸಂಜೀವಿನಿಯಿಂದ ಮತ್ತೆ ಜೀವಂತಗೊಂಡು ಮತ್ತೆ ‘ಸಾಕ್ಷಿ ಪ್ರಜ್ಞೆ’ಗಳಾಗಿದ್ದಾರೆ ಎಂದು ಜನ ಭಾವಿಸಿದರೆ, ನೀವೂ ಕೂಡ ಅಲ್ಲಗೆಳೆಯುವುದಿಲ್ಲ ಅಂದುಕೊಳ್ಳುತ್ತೇನೆ. ಮೊನ್ನೆ-ಮೊನ್ನೆ ಬರವನ್ನು ಹೇಗೆ ನಿರ್ವಹಿಸಬೇಕು, ಈ ವಿಷಯದಲ್ಲಿ ಸರಕಾರದ ನ್ಯೂನತೆಗಳೇನು ಎಂಬ ಬಗ್ಗೆ ನಮ್ಮ ದೇಶ ಕಂಡ ಕೆಲವು ಬಹುಮುಖ್ಯ ಸಾಕ್ಷಿಪ್ರಜ್ಞೆಗಳು ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಈಗ ನೀವು ಕೂಡ ಸರಕಾರದ ಎರಡನೆಯ ವರ್ಷಾಚರಣೆಯ ಸಂದರ್ಭದಲ್ಲಿ ಪತ್ರ ಬರೆದಿದ್ದೀರಿ. ತಮ್ಮ ಕಾಳಜಿಗೆ ವಂದನೆಗಳು. ಮತ್ತಷ್ಟು ಓದು »

5
ಮಾರ್ಚ್

ಸೈನಿಕರೊಂದಿಗೆ ಸದೃಢ ಭಾರತ ಸರಕಾರ

– ಅನಿರುದ್ಧ ಎಸ್.ಆರ್ , ಭದ್ರಾವತಿ

56215932-indian“ಈ ಕ್ಷಣದಿಂದಲೇ ಪಾಕಿಸ್ಥಾನ ಅಪ್ರಚೋದಿತ ದಾಳಿ ನಡೆಸುವುದನ್ನು ನಿಲ್ಲಿಸಬೇಕು, ಭಾರತದ ಕಡೆಯಿಂದ ಎಂದಿಗೂ ಸ್ವಯಂ ಪ್ರೇರಿತವಾಗಿ ಗುಂಡಿನ ದಾಳಿ ನಡೆಯುವುದಿಲ್ಲ. ಆದರೆ ನಿಮ್ಮ ಕಡೆಯಿಂದ ಗುಂಡಿನ ದಾಳಿಯೇನಾದರೂ ನಡೆದರೆ, ಆನಂತರ ನಮ್ಮಿಂದ ಹಾರುವ ಗುಂಡುಗಳನ್ನು ಲೆಕ್ಕ ಹಾಕಲು ನಿಮಗೆ ಸಾಧ್ಯವಿಲ್ಲ ” ಹೀಗೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದು ಸರಕಾರದ ಗೃಹ ಸಚಿವರಾದ ರಾಜನಾಥ್ ಸಿಂಗ್.

ಹೌದು. ಆಡಳಿತರೂಢರಿಂದ ಇಂತಹ ಮಾತುಗಳನ್ನು ಕೇಳಲು ಮೋದಿ ನೇತೃತ್ವದ ಸರ್ಕಾರವೇ ಬರಬೇಕಾಯಿತು. ಕದನ ವಿರಾಮ ಉಲ್ಲಂಘನೆ, ಅಂತರಾಷ್ಟ್ರೀಯ ಗಡಿ ಒಪ್ಪಂದದ ಉಲ್ಲಂಘನೆ, ಗಡಿ ಭಾಗದ ನಾಗರಿಕ ವಸತಿ ಪ್ರದೇಶಗಳ ಮೇಲೆ ಗುಂಡಿನ ದಾಳಿ ಹಾಗೂ ಭಾರತೀಯ ಯೋಧರ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವುದನ್ನೇ ಚಾಳಿಯನ್ನಾಗಿ ಮಾಡಿಕೊಂಡಿರುವ ಪಾಕಿಸ್ತಾನಕ್ಕೆ ಕಲಿಯುಗ ಅಸುರರೆಂಬ ಭಯೋತ್ಪಾದಕರ ಕುಮ್ಮಕ್ಕೂ ಇರುವುದು ಭಂಡ ಧೈರ್ಯಕ್ಕೆ ಕಾರಣ. ಈಗ 125 ಕೋಟಿ ಭಾರತೀಯರು  ಪೂರ್ಣ ಬಹುಮತದ ಶಕ್ತ ಸರಕಾರವನ್ನು ಆಯ್ಕೆ ಮಾಡಿದ ನಂತರ ಪಾಕ್ ಗೆ ಮಾತ್ರವಲ್ಲ ಭಯೋತ್ಪಾದನೆಯನ್ನು ನಡೆಸುತ್ತಿರುವ ಪ್ರತೀ ರಾಕ್ಷಸನಿಗೂ ಒಳಗೊಳಗೇ ನಡುಕ ಶುರುವಾಗಿದೆ. ಅದರ ಒಂದು ಪರಿಣಾಮವೇ ಪಾಕ್ ಸೇನೆಯೊಂದಿಗೆ ಸೇರಿಕೊಂಡು ಭಾರತದ ಗಡಿಯಲ್ಲಿ ನಡೆಸುತ್ತಿರುವ ಅಪ್ರಚೋದಿತ ದಾಳಿಯೆಂಬ ಭಯೋತ್ಪಾದನೆ. ಇಂತಹ ಕುತಂತ್ರಿಗಳನ್ನು ಗಡಿಯಲ್ಲಿ ಬಗ್ಗು ಬಡಿಯಲು ನಮ್ಮ ಸೈನಿಕರಿಗೆ ಮನಸ್ಸಿದ್ದರೂ ಹಿಂದಿನ ಸರ್ಕಾರದ ಅವಧಿಯಲ್ಲಿ ತಣ್ಣಗೆ ಕೂರಬೇಕಿತ್ತು. ಶತ್ರುಗಳಿಗೆ ದಿಟ್ಟ ಉತ್ತರ ನೀಡುವುದಿರಲಿ, ಕನಿಷ್ಟ ಹಿಮ್ಮೆಟ್ಟಿಸುವ ಕಾರ್ಯಕ್ಕೂ ಕೇಂದ್ರದ ಆದೇಶಕ್ಕಾಗಿ ಕಾಯಬೇಕಿತ್ತು.
ಮಾತೃಭೂಮಿಯ ರಕ್ಷಣೆಗಾಗಿ ಪ್ರಾಣತ್ಯಾಗಕ್ಕೆ ಸಿದ್ಧರಾಗಿದ್ದರೂ, ಬೇಕಾದರೆ ಪ್ರಾಣ ಬಿಡಿ, ಪ್ರತಿದಾಳಿ ನಡೆಸಬೇಡಿ ಎನ್ನುವುದು ನಮ್ಮ ಸೇನೆಗೆ ಹಿಂದಿನ ಸರ್ಕಾರ ನೀಡುತ್ತಿದ್ದ ಅಲಿಖಿತ ಮೌನ ಸಂದೇಶವಾಗಿತ್ತು. ಇದನ್ನರಿತೇ ಪಾಕ್ ಸೈನಿಕರು ಹಾಗೂ ಪಾಕ್ ಕೃಪಾಪೋಷಿತ ಉಗ್ರರು ಗಡಿಯಲ್ಲಿ ತೀವ್ರವಾಗಿ ದಾಳಿಗಳನ್ನು ನಡೆಸುತ್ತಿದ್ದರು. ನಮ್ಮ ಯೋಧರ ತಲೆ ಕತ್ತರಿಸಿಕೊಂಡು ಹೋದರೂ ಶತ್ರುಗಳಿಗೆ ದಿಟ್ಟ ಉತ್ತರ ನೀಡುವಲ್ಲಿ ಅಂದಿನ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಸೋತು ಜಗತ್ತಿನ ಮುಂದೆ ತಲೆ ತಗ್ಗಿಸಿನಿಂತಿದ್ದರೆ ಹೊಟ್ಟೆಯೆಲ್ಲಾ ಉರಿಯುತ್ತಿತ್ತು. ಆದರೆ, ಈಗ ಕಾಲ ಕೊಂಚ ಬದಲಾಗಿದೆ. ಮಾಹಿತಿಯೊಂದರ ಪ್ರಕಾರ ನಮ್ಮ ರಕ್ಷಣಾ ಬಜೆಟ್ 3.25 ಲಕ್ಷ ಕೋಟಿ, 13 ಲಕ್ಷ ಸೈನಿಕರು, 1905 ಯುದ್ಧ ವಿಮಾನಗಳು ನಮ್ಮಲ್ಲಿವೆ. ಇವೆಲ್ಲದರ ಜೊತೆಗೆ ಸೇನೆಗೆ ನಿರ್ಧಾರವನ್ನು ಕೈಗೊಳ್ಳೊ ಸ್ವಾತಂತ್ರ್ಯವನ್ನು ನೀಡಿ, ಅವರಿಗೆ ನೈತಿಕ ಸ್ಥೈರ್ಯ ತುಂಬುವ ಮೂಲಕ ಭಾರತದ ರಕ್ಷಣೆಗೆ ಸಮರ್ಥ ಪ್ರಧಾನಿಯ ನೇತೃತ್ವದಲ್ಲಿ ಯೋಗ್ಯ ರಕ್ಷಣಾ ಸಚಿವರು ಹಾಗು ಗೃಹ ಮಂತ್ರಿಗಳಿರುವುದು ನೆಮ್ಮದಿಯ ವಿಷಯ.
ಮೋದಿಯವರ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಗಡಿಯಲ್ಲಿ ದಾಳಿಗಳು ನಡೆದೇ ಇಲ್ಲವೆಂದು ಹೇಳುತ್ತಿಲ್ಲ. ವಾಸ್ತವವಾಗಿ ನೋಡುವುದಾದರೆ, ಮೋದಿ ಸರಕಾರ ಬಂದ ನಂತರ ಗಡಿಯಲ್ಲಿ ಪಾಕಿಗಳ ಉಪಟಳ ಹೆಚ್ಚಾಗಿದೆ ಎಂದೇ ಹೇಳಬೇಕು. ಅದಕ್ಕಿರುವ ಕಾರಣ ಮೋದಿ ಸರಕಾರದ ಮೇಲಿರುವ ಭಯವಷ್ಟೇ. ಅಂದರೆ ಗಡಿಯಲ್ಲಿ ದಾಳಿ ನಡೆಸಿದ ವೇಳೆ ಹಿಂದಿನಂತೆ ಪ್ರತಿದಾಳಿಗಾಗಿ ಆದೇಶಕ್ಕೆ ಈಗ ಕಾಯಬೇಕಿಲ್ಲ. ಇದಕ್ಕೆ ಸಾಕ್ಷಿಯಾಗಿ ರಕ್ಷಣಾ ಸಚಿವರಾದ ಮನೋಹರ್ ಪರಿಕ್ಕರ್ ಅವರ ಹಿಂದಿನ ಹೇಳಿಕೆಯೊಂದನ್ನು ನೋಡೋಣ. ಕಳೆದ ವರ್ಷ ಜಮ್ಮುವಿನ ಗಡಿಭಾಗದಲ್ಲಿ ಪಾಕ್ ಸೈನಿಕರು ನಡೆಸಿದ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದ.
ಈ ದುಷ್ಕೃತ್ಯಕ್ಕೆ ಪ್ರತಿಯಾಗಿ ನಾಲ್ವರು ಪಾಕಿಸ್ತಾನದ ಸೈನಿಕರನ್ನು ನಮ್ಮ ಸೈನಿಕರು ಕ್ಷಣ ಮಾತ್ರದಲ್ಲಿ ಹೊಡೆದುರುಳಿಸಿದ್ದರು. ಪರಿಣಾಮ, ಬೆಚ್ಚಿದ ಪಾಕ್ ಸೇನೆ ಬಿಳಿ ಬಾವುಟ ತೋರಿಸಿ ದಾಳಿ ನಿಲ್ಲಿಸುವಂತೆ ಭಿಕ್ಷೆ ಬೇಡಿತ್ತು. ಹೀಗಾಗಿ ನಮ್ಮ ಕಡೆಯಿಂದ ಗುಂಡಿನ ದಾಳಿ ನಿಂತಿತ್ತು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ತನ್ನ ನರಿ ಬುದ್ದಿಯನ್ನು ಪ್ರದರ್ಶಿಸಿದ ಪಾಕ್, ಭಾರತೀಯ ಪೋಸ್ಟಗಳ ಮೇಲೆ ಪುನಃ ದಾಳಿ ಆರಂಭಿಸಿತ್ತು. ಈ ಘಟನೆಗಳನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಿದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ” ಪಾಕ್ಗೆ ಸರಿಯಾದ ಬುದ್ದಿ ಕಲಿಸಿ, ಪಾಕ್ ಕಡೆಯಿಂದ ಒಂದು ಗುಂಡು ಬಂದರೆ ಅದಕ್ಕೆ ಪ್ರತಿಯಾಗಿ ನಮ್ಮಿಂದ ನಾಲ್ಕು ಗುಂಡು ಹಾರಲಿ. ಅವರು ಒಮ್ಮೆ ಟ್ರಿಗರ್ ಒತ್ತಿದರೆ, ನಮ್ಮ ಕಡೆಯಿಂದ ನಿರಂತರವಾಗಿ ಗುಂಡಿನ ಮಳೆಗರೆಯಲಿ” ಎಂದಿದ್ದರು. ಎಲ್ಲಕ್ಕೂ ಮಿಗಿಲಾಗಿ ಅವರು ಹೇಳಿದ್ದ ಒಂದು ಮಾತು ” ನಿಮ್ಮೊಂದಿಗೆ ನಾವಿದ್ದೇವೆ” ಎಂದು.
ಇಂತಹ ಮಾತನ್ನು ಭಾರತೀಯ ಸೈನಿಕರು ಕೇಳಲು ಮೋದಿಯವರ ನೇತೃತ್ವದಲ್ಲಿ ಸರಕಾರ ಬರಬೇಕಾಯಿತು ಎಂದರೆ ನಾಚಿಕೆಯಾಗಬೇಕು ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ಸಿಗರಿಗೆ. ಈಗ ಪರಿಕ್ಕರ್ ರವರ ರೀತಿಯಲ್ಲಿಯೇ ಗೃಹ ಸಚಿವ ರಾಜನಾಥ್ ಸಿಂಗ್ ರವರು  ಕೂಡ ಮಾತನಾಡಿದ್ದು, ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸುವುದನ್ನು ನಿಲ್ಲಿಸಬೇಕು. ಭಾರತದ ಕಡೆಯಿಂದ ಯಾವತ್ತೂ ಸ್ವಯಂ ಪ್ರೇರಿತವಾಗಿ ಗುಂಡಿನ ದಾಳಿ ನಡೆಯುವುದಿಲ್ಲ. ಆದರೆ, ನಿಮ್ಮ ಕಡೆಯಿಂದ ಗುಂಡಿನ ದಾಳಿಯೇನಾದರೂ ನಡೆದರೆ, ಆನಂತರ ನಮ್ಮಿಂದ ಹಾರುವ ಗುಂಡುಗಳನ್ನು ಲೆಕ್ಕ ಹಾಕಲು ನಿಮಗೆ ಸಾಧ್ಯವಿಲ್ಲ ಎಂದಿದ್ದಾರೆ. ಇಲ್ಲಿ ಈ ಮಾತಿಗೆ ಹೆದರಿ ಪಾಕ್ ಸೇನೆ ಹಿಂಜರಿಯುತ್ತದೆ ಎಂಬ ಭ್ರಮೆ ನಮ್ಮದಲ್ಲ. ಆದರೆ, ಆಡಳಿತಾರೂಢರಿಂದ ಇಂತಹ ಮಾತುಗಳು ಸೇನೆಗೆ ನೈತಿಕ ಬಲವನ್ನು ತುಂಬುತ್ತದೆ. ಆ ಮೂಲಕ ದೇಶಕ್ಕಾಗಿ ಪ್ರಾಣತ್ಯಾಗಕ್ಕೂ ಸಿದ್ಧರಾಗಿರುವ ಯೋಧರ ಕಾರ್ಯವನ್ನು ಗೌರವಿಸಿದಂತಾಗುತ್ತದೆ ಎನ್ನುವುದು ವಾಸ್ತವ. ಇದರೊಂದಿಗೆ ಪಾಕಿಸ್ತಾನದ ಈ ಭಯೋತ್ಪಾದನಾ ಚಟುವಟಿಕೆಯನ್ನು ಮಟ್ಟ ಹಾಕಲು ನೈತಿಕ ಸ್ಥೈರ್ಯ ತುಂಬುವ ಜೊತೆಯಲ್ಲಿ, ಸೇನೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರಾಗಳನ್ನು ಒದಗಿಸುವುದರ ಜೊತೆಗೆ ರಾಫೆಲ್ ಜೆಟ್ನಂತಹ ಯುದ್ಧ ವಿಮಾನದ ಖರೀದಿಗೆ ಭಾರತ ಸರಕಾರ ಒಪ್ಪಂದ ಮಾಡಿಕೊಂಡಿರುವುದು ನಿಜಕ್ಕೂ ಸೇನೆಗೆ ನೂರಾನೆ ಬಲ ಬಂದಂತಾಗಿದೆ. ಹೀಗಿದ್ದಾಗ, ಪ್ರತಿ ಯೋಧನೂ ಒಂದೊಂದು ಅಸ್ತ್ರವಾಗಿ ದೇಶಕ್ಕಾಗಿ ಹೋರಾಡಬಲ್ಲ. ಇವರೊಂದಿಗೆ ನಿಜವಾದ ದೇಶಪ್ರೇಮಿಗಳೂ ಸೇನೆಯೊಂದಿಗಿದ್ದಾರೆ. ಪಾಪಿಗಳೇ ಬಾಲ ಮುದುರಿ, ಇಲ್ಲವೇ ಹೆಡೆಮುರಿ ಕಟ್ಟುತ್ತೇವೆ. ಇಲ್ಲವೇ, ಬಾಂಗ್ಲಾ ಗಡಿಯಲ್ಲಿ ನುಗ್ಗಿ, ನಾಗಾ ಉಗ್ರರನ್ನು ಅಟ್ಟಾಡಿಸಿಕೊಂಡು ಬೇಟೆಯಾಡಿದಂತೆ, ಭಾರತೀಯ ಯೋಧರು ಪಿಒಕೆಯಲ್ಲಿ ನಿಮ್ಮನ್ನು ಬೇಟೆಯಾಡುವ ದಿನ ದೂರವಿಲ್ಲ. ಎಚ್ಚರ !.
ಕೊನೆಯಲ್ಲಿ…
ಪರಮವೀರ ಚಕ್ರ ವಿಜೇತ ಸುಬೇದಾರ್ ಯೋಗೀಂದ್ರ ಸಿಂಗ್ ಅವರೊಂದಿಗೆ ಮಾತನಾಡುತ್ತಿದ್ದಾಗ ಅವರು ಹೇಳಿದ ಮಾತು ನೆನಪಿಗೆ ಬರುತ್ತಿದೆ.
“ಶತ್ರುಗಳು ಎಷ್ಟೇ ಪ್ರಬಲರಾಗಿದ್ದರೂ ಅವರನ್ನು ಎದುರಿಸಿ ಜಯಭೇರಿ ಬಾರಿಸುವಷ್ಟು ಸಾಮರ್ಥ್ಯ ನಮ್ಮ ಭಾರತೀಯ ಸೇನೆಗೆ ಇದೆ. ಅಸ್ತ್ರ, ಅಣ್ವಸ್ತ್ರಕ್ಕಿಂತಲೂ ಭಾರತೀಯ ಸೇನೆಯಲ್ಲಿರುವ ಪ್ರತಿಯೊಬ್ಬ ಯೋಧನೂ ಶಕ್ತಿಶಾಲಿಯಾದ ಒಂದೊಂದು ಪ್ರಬಲ ಅಸ್ತ್ರ “

ಮತ್ತಷ್ಟು ಓದು »

6
ಫೆಬ್ರ

ಇವರದ್ದು ಅಭಿವೃದ್ಧಿ! ಅವರದ್ದು ವ್ಯಾಪಾರ!?

ರಾಜ್ಯದಲ್ಲಿ ೯೬೩೨ ಕಿಮೀ ರಾಷ್ಟ್ರೀಯ ಹೆದ್ದಾರಿಯಿದ್ದು, ರಾಜ್ಯ ಸರ್ಕಾರ ಭೂಮಿ ನೀಡಿದರೆ, ಕೇಂದ್ರದಿಂದ ೧ ಲಕ್ಷ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಿಕೊಡಲು ಸಿದ್ಧರಿದ್ದೇವೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎನ್ನುತ್ತಿದ್ದ ಕಾಂಗ್ರೆಸ್ಸಿಗರೇ, ಕೇಂದ್ರ ಈ ತೀರ್ಮಾನಕ್ಕೆ ಈಗೇನು ಹೇಳುತ್ತೀರಿ? ಕೇಂದ್ರದಲ್ಲಿ ನಿಮ್ಮ ಸರ್ಕಾರವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ಸೇತರ ಸರ್ಕಾರವಿದ್ದ ವೇಳೆ ಇಂತಹ ವಿಶಾಲ ಮನಸ್ಥಿತಿಯನ್ನು ಪ್ರದರ್ಶಿಸಿದ್ದಿರೇ? ನಾಚಿಕೆಯಾಗಬೇಕು ನಿಮ್ಮ ಮನಸ್ಥಿತಿಗೆ.

– ಎಸ್.ಆರ್ ಅನಿರುದ್ಧ ವಸಿಷ್ಠ,ಭದ್ರಾವತಿ

ಇನ್ವೆಸ್ಟ್ ಕರ್ನಾಟಕಬನ್ನಿ, ಕರ್ನಾಟಕದಲ್ಲಿ ಬಂಡವಾಳ ಹೂಡಿ: ರಾಜ್ಯದ ಪರವಾಗಿ ಉದ್ಯಮಿಗಳ ಕರೆ…
ಎಷ್ಟಾದರೂ ಭೂಮಿ ಕೊಡಲು ಸಿದ್ಧರಿದ್ದೇವೆ: ಸಿದ್ಧರಾಮಯ್ಯ…
ಇದು ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆಯೋಜಿಸಿರುವ ಇನ್ವಸ್ಟ್ ಕರ್ನಾಟಕ ಸಮಾವೇಶದ ಪ್ರಮುಖ ನುಡಿಮುತ್ತುಗಳು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ಬಂಡವಾಳ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದ್ದು, ಇದರಲ್ಲಿ ಪಾಲ್ಗೊಂಡ ಗಣ್ಯೋದ್ಯಮಿಗಳು ರಾಜ್ಯದ ಹಲವೆಡೆ ವಿವಿಧ ರೀತಿಯಲ್ಲಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದು, ಮೊದಲ ದಿನವೇ ಈ ಕುರಿತ ೯೫ ಸಾವಿರ ಕೋಟಿ ಹೂಡಿಕೆಯ ೧೦೦ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.ದೇಶದ ಉದ್ಯಮ ಕ್ಷೇತ್ರದಲ್ಲಿ ದಿಗ್ಗಜರು ನಿನ್ನೆಯ ವೇದಿಕೆಯಲ್ಲಿ ಉಪಸ್ಥಿತರಿದ್ದು, ಇವರಿಗೆಲ್ಲಾ ರಾಜ್ಯ ಕಾಂಗ್ರೆಸ್ ಸರ್ಕಾರ ಕೆಂಪು ಹಾಸು ಹಾಕಿ ಬರಮಾಡಿಕೊಂಡಿದೆ. ಈ ಮೂಲಕ ಸಮಾಜವಾದ ಹಾಗೂ ಬಡವರ ಪರ ಮಾತನಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ, ಬಂಡವಾಳಶಾಹಿಗಳಿಗೆ ಮಣೆ ಹಾಕಿದೆ!!

ಹೌದು, ತಮ್ಮದು ಬಡವರ ಪರ ಸರ್ಕಾರ, ಅಹಿಂದ ಪರವಾಗಿಯೇ ನಮ್ಮ ಯೋಜನೆಗಳು, ದೀನ ದ..ರ ಅಭಿವೃದ್ಧಿಯೇ ನಮ್ಮ ಗುರಿ. ಆದರೆ, ಬಿಜೆಪಿ ಹಾಗೂ ನರೇಂದ್ರ ಮೋದಿ ಕಾರ್ಪೊರೇಟ್ ಸಂಸ್ಕೃತಿಯವರು. ಮೋದಿ ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿದ್ದಾರೆ. ದೇಶದ ಬಡ ರೈತನಿಂದ ಹಿಡಿದು, ಜನ ಸಾಮಾನ್ಯರ ಹಿತವನ್ನು ಕಡೆಗಣಿಸಿರುವ ಮೋದಿ, ಉದ್ಯಮಿಗಳಿಗೆ ಹಾಗೂ ಬಂಡವಾಳಶಾಹಿಗಳಿಗೆ ರತ್ನಗಂಬಳಿ ಹಾಸುವ ಮೂಲಕ ದೇಶವನ್ನು ಮಾರಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಯುವರಾಜ ರಾಹುಲ್‌ಗಾಂಧಿಯಿಂದ ಮೊದಲ್ಗೊಂಡು, ಕಾಂಗ್ರೆಸ್‌ನ ಕೆಲ ಹಂತದ ಕಾರ್ಯಕರ್ತನವರೆಗೂ ಹೀಗಳೆದಿದ್ದರು. ಮತ್ತಷ್ಟು ಓದು »

21
ಆಕ್ಟೋ

ಪ್ರಶಸ್ತಿ ಹಿಂತಿರುಗಿಸುವಿಕೆ ಮತ್ತು ಸೆಕ್ಯುಲರ್ ಸಮೂಹ ಸನ್ನಿ

– ರಾಕೇಶ್ ಶೆಟ್ಟಿ

ಸಮೂಹ ಸನ್ನಿದೇಶದಲ್ಲಿ ಪ್ರಶಸ್ತಿ ಹಿಂತಿರುಗಿಸುವಿಕೆಯ ಪರ್ವ ಭರ್ಜರಿಯಾಗಿ ಶುರುವಾಗಿದೆ.ಕಲ್ಬುರ್ಗಿ ಹತ್ಯೆಯನ್ನು ಖಂಡಿಸಿ ಚಂಪಾ ಅವರಿಂದ ರಾಜ್ಯದಲ್ಲಿ ಶುರುವಾಗಿದ್ದು ಈಗ ನಯನತಾರಾ ಸೆಹಗಲ್ ಅವರು ಹಿಂದಿರುಗಿಸುವ ಮೂಲಕ ಸಾಮೂಹಿಕ ಸನ್ನಿಯಂತೆ ಹರಡಲಾರಂಭಿಸಿದೆ.ಇವರೆಲ್ಲಾ ನೀಡುತ್ತಿರುವ ಕಾರಣ “ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ.ತುರ್ತು ಪರಿಸ್ಥಿತಿಗಿಂತಲೂ ಭೀಕರವಾದ ಸನ್ನಿವೇಶವಿದೆ.ದಾದ್ರಿ ಹತ್ಯೆಯನ್ನು ವಿರೋಧಿಸಿ,ಕಲ್ಬುರ್ಗಿ ಕೊಲೆ ಪ್ರಕರಣದಲ್ಲಿ ಸಾಹಿತ್ಯ ಅಕಾಡೆಮಿಯ ಮೌನವನ್ನು ವಿರೋಧಿಸಿ,ಮೋದಿಯ ಮೌನವನ್ನು ವಿರೋಧಿಸಿ,’ ಇತ್ಯಾದಿ ಇತ್ಯಾದಿ ಕಾರಣಗಳನ್ನು ನೀಡಿದ್ದಾರೆ.

ನಿಜಕ್ಕೂ ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ಗಂಭೀರ ಸನ್ನಿವೇಶ ಸೃಷ್ಟಿಯಾಗಿದೆಯಾ? ಅಥವಾ ಸೆಕ್ಯುಲರ್ ಗುಂಪು ಸಮೂಹ ಸನ್ನಿಗೊಳಗಾಗಿದೆಯೇ? ಊಹೂಂ.ಸನ್ನಿಗೊಳಗಾಗುವಷ್ಟು ಮುಗ್ದರೇನಲ್ಲ ಇವರು. Mass Hysteria ಸೃಷ್ಟಿಸುವಷ್ಟು ಸಾಮರ್ಥ್ಯವುಳ್ಳ ಜನರಿವರು.2002ರ ಗುಜರಾತ್ ಗಲಭೆಯನ್ನು ನೆನಪು ಮಾಡಿಕೊಳ್ಳಿ.ಆಗ ಜನರು ಈ ಹುಟ್ಟು ಹಾಕಿದ ಸಮೂಹ ಸನ್ನಿಯೇನೂ ಕಡಿಮೆಯದೇ,ಒಬ್ಬ ಮುಖ್ಯಮಂತ್ರಿಯ ಮಿತಿಯಲ್ಲಿ ಏನೆಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕಿತ್ತೋ ಅದನ್ನೆಲ್ಲಾ ಮಾಡಿಯೂ ನರೇಂದ್ರ ಮೋದಿಯವರಿಗೆ ನರಹಂತಕ ಪಟ್ಟ ಕಟ್ಟಿಸಿ,ಆಗಿನ ಪ್ರಧಾನಿ ವಾಜಪೇಯಿಯವರಿಂದಲೂ ’ರಾಜಧರ್ಮ ಪಾಲನೆ’ಯ ಮಾತನ್ನೂ ಆಡಿಸಿಬಿಟ್ಟಿತ್ತು ಈ ಸೆಕ್ಯುಲರ್ ಸಮೂಹ ಸನ್ನಿ. ಹಾಗೆಂದು ಗುಜರಾತ್ ಗಲಭೆಯನ್ನೂ ಸಮರ್ಥಿಸುತ್ತಿಲ್ಲ.ಅದಕ್ಕೂ ಮೊದಲು ಈ ದೇಶ ಅಂತ ಗಲಭೆಯನ್ನೇ ನೋಡಿರಲಿಲ್ಲವಾ ಎಂಬ ಪ್ರಶ್ನೆಯನ್ನು ಕೇಳಿಕೊಳ್ಳಿ. ಮತ್ತಷ್ಟು ಓದು »

9
ಆಕ್ಟೋ

ಪಾಕಿಸ್ತಾನ್, ಹುರಿಯತ್ ಮತ್ತು ನಮ್ಮ ಬುದ್ಧಿಜೀವಿಗಳು!!

– ಪ್ರದೀಪ್ ತ್ಯಾಗರಾಜ

ಎನ್.ಎಸ್.ಎಬಹುಶಃ ಭಾರತದ ಜನ ಸಾಮಾನ್ಯರೆಲ್ಲರೂ ಒಕ್ಕೊರಲಿನಿಂದ ಹೇಳುವ ಮಾತೊಂದೇ, ಅದೇ ಪಾಕಿಸ್ತಾನ್ ಎನ್ನುವುದು ಒಂದು ದೊಡ್ಡ ದುರಂತ. ಈ ಪಾಕಿಸ್ತಾನ ಎಂಬುದು ಒಂದು ಭಿಕ್ಷುಕರ ದೇಶ ಅಂದರೂ ತಪ್ಪಲ್ಲ. ಯಾವುದೇ ದೇಶ ಕೂಡ ಪಾಕಿಸ್ತಾನದೊಂದಿಗೆ ಸಂಬಂಧ ಹೊಂದಿ ಉದ್ಧಾರ ಆದ ಉದಾಹರಣೆಗಳಿಲ್ಲ. ಇಷ್ಟಕ್ಕೂ ಭಯೋತ್ಪಾದನೆಯೊಂದನ್ನು ಬಿಟ್ಟರೆ, ಆ ದೇಶಕ್ಕೆ ತಮ್ಮನ್ನು ಮಾರ್ಕೆಟ್ ಮಾಡಿಕೊಳ್ಳುವಂಥ ಇನ್ನೊಂದು ವಸ್ತುವಿಲ್ಲ. ಈ ದೇಶದ ಪರಿಸ್ಥಿತಿ ಹೇಗಿದೆಯಂದರೆ, ಪ್ರಜಾಪ್ರಭುತ್ವವನ್ನು ಹೇರಿಕೆಯೆಂಬ ರೀತಿ ಒಪ್ಪಿಕೊಳ್ಳುವ ವಿಷಮ ಸ್ಥಿತಿ ತಲುಪಿದ್ದಾರೆ. ಮಾತು ಮಾತಿಗೂ, ಪಶ್ಚಿಮ ರಾಷ್ಟ್ರಗಳ ಬಳಿಹೋಗಿ, ತಮ್ಮ ದೇಶಕ್ಕೆ ಸಹಾಯ ಹಸ್ತ ಚಾಚಿ ಎಂದು ಅಂಗಲಾಚುವುದರಲ್ಲೇ ಇವರು ಬರೋಬ್ಬರಿ ೬೫ ವರ್ಷಗಳನ್ನು ನಮ್ಮ ಭಾರತ ದೇಶದೊಂದಿಗೆ ಸವೆಸಿದ್ದಾರೆ. ನಮ್ಮ ದೇಶದಲ್ಲಿ ರಾಹುಲ್ ಗಾಂಧಿ ಎಂಬೋ ಮಹಾನ್ ಬುದ್ಧಿವಂತನಿಗೆ ಎಷ್ಟು ಮರ್ಯಾದೆ ಇದೆಯೋ, ಅಷ್ಟೇ ಮರ್ಯಾದೆ ಆ ನವಾಜ್ ಷರೀಫ್ ಎಂಬ ವ್ಯಕ್ತಿಗೆ ಪಾಕಿಸ್ತಾನದಲ್ಲಿ ಇದೆ. ಆ ದೇಶದ ನಿಜವಾದ ಆಡಳಿತವಿರುವುದೇ ಅವರ ಸೈನ್ಯಕ್ಕೆ. ೧೯೪೭ ರಿಂದಲೂ ಇದೆ ರೀತಿ ನಡೆದು ಬರುತ್ತಿದೆ. ಈ ಸಂಧರ್ಭದಲ್ಲಿ, ಈ ಹುರಿಯತ್ ಎನ್ನುವ ಸಂಘಟನೆ ಕೂಡ, ತನ್ನ ಬೇಳೆ ಬೇಯಿಸಿಕೊಳ್ಳಲು ಶುರು ಮಾಡಿದೆ. ಇದರ ಪರಿಣಾಮ ಭಾರತ ದೇಶದ ಹಲವಾರು ಬುದ್ಧಿಜೀವಿಗಳು ತಮ್ಮ ಅತಿ-ಬುದ್ಧಿವಂತಿಕೆಯನ್ನು ಪ್ರದರ್ಶಿಸಲು ಮುಂದಾಗಿರುವುದೇ ನಮ್ಮ ದೇಶದ ದುರಂತ.

ಇಷ್ಟೆಲ್ಲಾ ಹುಳುಕು ತುಂಬಿರುವ ಪಾಕಿಸ್ತಾನ ಎಂಬ ದೇಶದ ಬಗ್ಗೆ, ನಮ್ಮ ಬುಜೀಗಳ ಕಲ್ಪನೆ ನಿಜಕ್ಕೂ ಅದ್ಭುತ. ನಿಜಕ್ಕೂ ಆ ದೇಶದೊಂದಿಗೆ ಮಾತುಕತೆ ನಡೆಸಬೇಕಂಬ ಇವರ ಆಲೋಚನೆ ನಿಜಕ್ಕೂ ಆಘಾತಕಾರಿ. ಇಷ್ಟಕ್ಕೂ ಏನೂ ಸರಿಯಿಲ್ಲದ ಆ ದೇಶದ ಜೊತೆ ಮಾತನಾಡಲು ಏನಿದೆ? ಒಂದು ಪ್ರಜಾಪ್ರಭುತ್ವ ಸರ್ಕಾರದ ಮಾತನ್ನು ಕೇಳುವ ತಾಳ್ಮೆಯಾಗಲಿ, ಅಥವಾ ಸಂಯಮವಾಗಲಿ ಇಲ್ಲ. ಒಂದು ಸರ್ಕಾರ ಕೊಟ್ಟ ನಿರ್ಧಿಷ್ಟ ಅಂಶಗಳ ಬಗ್ಗೆ ಮಾತುಕತೆ ನಡೆಸುವಲ್ಲಿ ತಯಾರಿಲ್ಲ.

ಮತ್ತಷ್ಟು ಓದು »