ಯಕ್ಷಗಾನ ಕರಾವಳಿಯ ಜನರ ತಲೆಕೆಡಿಸಿ ವಾತಾವರಣ ಕಲುಷಿತಗೊಳಿಸಿದೆಯೇ?
ದೀಕ್ಷಿತ್ ಶೆಟ್ಟಿಗಾರ್ ಕೊಣಾಜೆ
ಈ ಪ್ರಶ್ನೆ ಬಂದಿದ್ದು ತಮ್ಮನ್ನು ತಾವು ಮಹಾನ್ ಲೇಖಕ ಎಂದು ಬಿಂಬಿಸಿಕೊಂಡು ಪ್ರಚಾರಕ್ಕಾಗಿ ಹಾತೊರೆಯುವ ವ್ಯಕ್ತಿಯೊಬ್ಬನ ಪೇಸ್ಬುಕ್ ಗೋಡೆ ಬರಹದಿಂದಾಗಿ. ಕೆಲವರು ತಾನು ಬರೆದ ಕೆಲ ಪುಸ್ತಕಗಳಿಗೆ ಬಿಟ್ಟಿ ಪ್ರಚಾರಕೊಡಲು ಅಥವಾ ಅವಾರ್ಡು ಬಾಚಿಕೊಳ್ಳಲು ಮುಖ್ಯ ಅಸ್ತ್ರವಾಗಿ ಬಳಸುವುದು ಹಿಂದೂ ಧರ್ಮ ಅಥವಾ ಈ ನೆಲದ ಕಲೆ, ಸಂಸ್ಕೃತಿಯ ಅವಹೇಳನ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ ಅದೇ ರೀತಿ ಅದಕ್ಕೆ ಪೂರಕವಾದ ಧೋರಣೆ ಹೊಂದಿರುವ ಸರಕಾರವೂ ಇರುವುದರಿಂದ ಇದು ಅವರನ್ನು ಮೆಚ್ಚಿಸುತ್ತೆ . ಧಾರ್ಮಿಕ ಭಾವನೆಯನ್ನು ಕೆರಳಿಸಿ ಪ್ರಚಾರ ಪಡೆಯುವುದು ಬಹಳ ಸುಲಭದ ದಾರಿ .ಯಾಕೆಂದರೆ ಮೊನ್ನೆ ತಾನೆ ಪ್ರೊಫೆಸರ್ ಭಗವಾನರು ಮಾಡಿದ್ದು ಇದನ್ನೇ ,ಇಲ್ಲದೇ ಹೋದಲ್ಲಿ ಅತ್ಯಂತ ಕೆಟ್ಟದಾಗಿ ಅನುವಾದ ಮಾಡಿದ ಲೇಖಕನೊಬ್ಬನಿಗೆ ಪ್ರಶಸ್ತಿ ಬರುವುದು ಸಾಧ್ಯವಿತ್ತೇ? ಇರಲಿ ಬಿಡಿ ಇಲ್ಲಿ ಋಣಾತ್ಮಕ ವಿಚಾರಗಳಿಗೆ ಮಹತ್ವ ಜಾಸ್ತಿನೇ ಸಿಗೋದು ಆದರೆ ಕರಾವಳಿಯ ಗಂಡುಕಲೆ ಯಕ್ಷಗಾನದ ಬಗೆಗಿನ ಮೂರ್ಖತನದ ಹೇಳಿಕೆಗೆ ಪ್ರತಿಕ್ರಿಯೆ ಕೊಡಬೇಕೆನಿಸಿತು.ಯಾಕೆಂದರೆ ನಾನೊಬ್ಬ ಯಕ್ಷಗಾನದ ಅಭಿಮಾನಿ.
ನನ್ನ ಊರು ಕೊಣಾಜೆ, ನನ್ನ ಮನೆಯ ಪಕ್ಕದಲ್ಲಿ ವರ್ಷಂಪ್ರತಿ ಯಕ್ಷಗಾನ ನಡೆಯುತ್ತೆ. ಅದನ್ನು ನಡೆಸುವುದು ದುರ್ಗಾಪರಮೇಶ್ವರಿ ಸೇವಾ ಸಮಿತಿಯವರು ಅಲ್ಲಿರುವ ಸದಸ್ಯರು ಎಲ್ಲರೂ ಸೇರಿ ದುಡ್ಡು ಹಾಕಿ ಆ ಯಕ್ಷಗಾನ ನಡೆಸುವಂತದ್ದು. ಆ ಸಮಿತಿಯಲ್ಲಿ ೬೦ ಜನ ಹಿಂದೂಗಳ ಜೊತೆ ಮೂರು ಮಂದಿ ಮುಸ್ಲಿಂ ಸದಸ್ಯರು ಸೇರಿ, ನಮ್ಮ ಜೊತೆ ಕೂಡಿಕೊಂಡು ಕೆಲಸ ಮಾಡಿ ಯಕ್ಷಗಾನ ಮಾಡಿಸುವುದು ಹಲವು ವರ್ಷದಿಂದ ನಡೆದುಕೊಂಡು ಬಂದದ್ದು .ಇದೇ ರೀತಿ ಮಂಗಳೂರು ನಗರಭಾಗದಲ್ಲಿ ಕ್ರಿಶ್ಚನ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ವರು ಅತೀ ವೈಭವಯುತವಾಗಿ ನಡೆಸುವ ಯಕ್ಷಗಾನವು ಕೂಡಾ ಕರಾವಳಿಯ ಸೌಹಾರ್ದತೆಗೆ ಹಿಡಿದ ಕನ್ನಡಿ. ಆಟ ನಡೆಯುವ ಬಯಲಿನಲ್ಲಿ ವ್ಯಾಪಾರಿಗಳು ನಡೆಸುವ ಬುರ್ಜಿ ,ಸುಕುನಪ್ಪ ,ನೈಯಪ್ಪ ,ಸೋಜಿ ,ಕುರ್ಲಾರಿ ಮಾರಾಟದಲ್ಲಿ ಅನ್ಯಮತೀಯರೇ ಜಾಸ್ತಿ .ಇಲ್ಲಿ ಯಾವ ವಾತಾವರಣ ಹೇಗೆ ಕಲುಷಿತ ವಾಯಿತು ? ಎಂದು ಆ ‘ಲೇಖಕ’ರೇ ಹೇಳಬೇಕು
ತುಳುನಾಡ ನಂಬಿಕೆಗಳು…
– ಭರತೇಶ ಆಲಸಂಡೆಮಜಲು
ಬಾಳಿಗೊಂದು ನಂಬಿಕೆ ಎಂಬಂತೆ, ಈ ಬಾಹ್ಯ ಜಗತ್ತು ನಂಬಿಕೆಯ ತಲೆದಿಂಬುನಿಟ್ಟು ಮಲಗಿದೆ. ಈ ನಂಬಿಕೆಯಲ್ಲಿ ಎಲ್ಲವೂ ಶೂನ್ಯ ಆಕಾಶ ಅನಂತವಾದರೆ, ಅಣು ಪರಮಾಣುಗಳು ಎನೋ ಕತ್ತಲಲ್ಲಿ ತೇಲುವ ಸೂಕ್ಷ್ಮ ಜೀವಿ, ಆ ಆಗಾಧ ಶಕ್ತಿಯ ಕೊಲ್ಮಿಂಚು ಎಲ್ಲೋ ಹುಟ್ಟಿ ಶಕ್ತಿಯ ಅದುಮಿದ ಶೂನ್ಯ, ಸತ್ಯದ ಜಗದಲ್ಲಿ ನಾವೊಂದು ಭ್ರಾಮರಕ ನಿರ್ಮಿತಿಗಳು ಅದೇ ನಿರಾಕಾರ, ನಿರ್ಗುಣ, ನಿರಾಮಯ, ಆಗೋಚರ ಬ್ರಹ್ಮಾಂಡದ ಸ್ವರೂಪಗಳು ನಮ್ಮ ನಮ್ಮ ಜ್ಞಾನದ ಅಳತೆಯೊಳಗೆ…. “ನೈಜ ಜಗತ್ತಿನಲ್ಲಿ ಬಣ್ಣಗಳೇ ಇಲ್ಲ, ವಾಸನೆಯೂ ಇಲ್ಲ, ಮೃದುತ್ವ ಕಾಠೀಣ್ಯಗಳು ಇಲ್ಲ, ಅವೆಲ್ಲ ಏನಿದ್ದರೂ ನಮ್ಮ ನಿಮ್ಮ ಮಿದುಳಿನಲ್ಲಿ ನಮ್ಮ ನಿಮ್ಮ ಜ್ಞಾನದಲ್ಲಿ” ಎಂದು ಪ್ರಸಿದ್ಧ ನರ ವಿಜ್ಞಾನಿ ನೋಬೆಲ್ ವಿಜೇತ ಸರ್ ಜಾನ್ ಐಕೆಲ್ಸ್ ಹೇಳಿದ್ದಾರೆ.
ನಮ್ಮ ಯೋಚನಾ ಲಹರಿಯ ಶೂನ್ಯ ಜಾಗಗಳಲ್ಲಿ ಈ ನಂಬಿಕೆಗಳು ಅಚ್ಚಳಿದು ನಿಂತಿದೆ ನಮ್ಮ ನಂಬಿಕೆಗಳೇ ಹಾಗೆ ಅದು ಪ್ರಕೃತಿಯ ಅರಾಧನೆಯಿಂದ ಹಿಡಿದು ಗುರು ಹಿರಿಯರ ಪೂಜನೆಯವರೆಗೆ ಅದರಲ್ಲೂ ಕರಾವಳಿ ಇವೂಗಳ ಗೂಡು, ಬೀಡು. ಹಲವಾರು ವೈಶಿಷ್ಟ, ವಿಶೇಷ, ಆಚರಣೆ, ಅರಾಧನೆ, ಪಾಲನೆ ಇವುಗಳಿಂದಾಗಿ ವಿಶ್ವವ್ಯಾಪ್ತಿಯಲ್ಲಿ ಛಾಪನ್ನು ಮೂಡಿಸಿದೆ. ಎಲ್ಲರ ಮಂದ ದೃಷ್ಠಿ ಇತ್ತ ಕಡೆ ನೆಡುವಂತೆ ಮಾಡಿದೆ. ಇಲ್ಲಿನ ಆಚರಣೆ ಒಂದನ್ನು ಮೀರಿಸುವ ಇನ್ನೊಂದು ಪ್ರಬುದ್ಧವಾದದ್ದು. ಪ್ರಪಂಚದ ಬೇರೆ ಯಾವೂದೇ ಕೋಣೆಯಲ್ಲೂ ಅರಸಿ ಹುಡುಕಿದರೂ ಬಯಸಿ ಸಿಗಲಾರದು. ಯಾವುದೋ ಪೂವಾಗ್ರಹದ ನೆಲೆಯಲ್ಲಿ ತುಳುನಾಡು ತನ್ನ ಭವ್ಯ ಸಂಸ್ಕೃತಿಯ ಕಣಜದ ನೆಲೆಯಲ್ಲಿ ಇನ್ನೂ ಆಚರಣೆಗಳು ಉಳಿದು ನಡೆಯುತಿದೆ. ಒಂದಷ್ಟು ಜಿಜ್ಞಾಸೆ, ವಿಮರ್ಶೆಗಳಿಂದ ಮತ್ತಷ್ಟು ಪ್ರಚಾರವಾಗಿ ಇನ್ನಷ್ಟು ಗಟ್ಟಿಯಾಗಿ ತುಳುವರ ಮನಗಳಲ್ಲಿ ಅಗೆಲುಗಳ ರೂಪದಲ್ಲಿ ಭಾವುಕವಾಗಿ ಬೆಚ್ಚಗೆ ಕುಳಿತಿದೆ.
ಹಿಮ್ಮೇಳ – ಪಳಿಯುಳಿಕೆ ಒಂದರ ಉಳಿವಿಗೆ ಒಂದು ಪ್ರಯತ್ನ
– ರಾಗು ಕಟ್ಟಿನಕೆರೆ,ಯಕ್ಷಮಿತ್ರ
“ಹೋರಾಟ ಅಂದ್ರೆ ಹೊಡೆದಾಟ ಅಲ್ಲ ಕಾಣ್ರೋ” ಅಂತ ನಮ್ಮ ಮಾಸ್ತರು ಒಬ್ರು ಹೇಳ್ತಾ ಇದ್ರು. ನಮ್ಮ ಕನ್ನಡ ಸಂಸ್ಕೃತಿ ಉಳಿಬೇಕು ಅಂತ ನಾವು ಕಲ್ಲು ತೂರಾಡ್ಲೂ ಬಹುದು ಅಥವಾ ನಮ್ಮ ಸಂಸ್ಕೃತಿ ಯಾವುದು, ನಾವು ದಿನನಿತ್ಯ ಅದನ್ನ ಪಾಲಿಸ್ತಾ ಇದೀವಾ ಅಂತ ಗಂಭೀರವಾಗಿ ಆತ್ಮಾವಲೋಕನ ಮಾಡಿಕೊಳ್ಳಲೂ ಬಹುದು. ಕನ್ನಡದಲ್ಲಿ ಬೋರ್ಡೇ ಹಾಕಲ್ಲ ಅನ್ನೋ ನಾವು, ಹಾಕಿರೋ ಬೋರ್ಡಗಳಲ್ಲಿ ಎಷ್ಟು ಕೆಟ್ಟದಾಗಿ ಕನ್ನಡ ಬರಿತೀವಿ, ಎಷ್ಟು ತಪ್ಪು ತಪ್ಪಾಗಿ ಬರಿತೀವಿ ಅಂತ ನೋಡ್ತೀವಾ, ಪ್ರತಿಭಟಿಸ್ತೀವಾ? ಬೆಂಗಳೂರು ಬಸ್ ನಿಲ್ದಾಣಗಳಲ್ಲೇ ನೋಡಿ: ಅಲ್ಸಸೂರು, ಹೊಯ್ಸಸಳ, ವಟರ್ ಟ್ಯಾಂಕ್ ಇತ್ಯಾದಿ. ನಮ್ಮ ಕನ್ನಡದ ಕಲೆಗಳು ನಮ್ಮ ಸಂಸ್ಕೃತಿಯ ಮೂರ್ತರೂಪಗಳು. ಈ ಕಲೆ ರೂಪದಲ್ಲಾದ್ರು ನಮ್ಮ ಸಂಸ್ಕೃತಿ ಉಳಿಬಹುದು ಅಂದ್ಕೋಬಹುದು. ಆದ್ರೆ ನಮ್ಮದೇ ಆದ ಕಲೆಗಳು ನಾಶ ಆಗ್ತಾ ಇದ್ರೂ ನಾವು ಫಿಲ್ಮ್ ನೋಡ್ಕೊಂಡು ಅರಾಮಿದ್ರೆ ನಮ್ಮ ಸಂಸ್ಕೃತಿ ಉಳಿಯತ್ತಾ? ಉಳಿಯತ್ತೋ ಇಲ್ವೋ ಆದ್ರೆ ಎನ್ ಕಳ್ಕೊಳ್ತಾ ಇದೀವಿ ಎನಾದ್ರು ಮಾಡ್ಲಿಕ್ಕೆ ಸಾದ್ಯನಾ ಅಂತಾದ್ರೂ ನೋಡ್ಬೇಕಲ್ವಾ?
ಕಲೆಗಳು ಅಂದ ತಕ್ಷಣ ನಮ್ಮ ಕನ್ನಡದ ಕಲೆಗಳಲ್ಲಿ ಎದ್ದು ಕಾಣೋದು ಯಕ್ಷಗಾನ ಬಯಲಾಟ. ಯಕ್ಷಗಾನ ಬಯಲಾಟ ಕೇವಲ ಕಲೆಯಷ್ಟೇ ಅಲ್ಲ ಇದು ನಮ್ಮ ಸಂಸ್ಕೃತಿಯ ಪಳಿಯುಳಿಕೆನೂ ಹೌದು. ಯಕ್ಷಗಾನದಲ್ಲಿ ಮಾತಾಡೋ ತರಾನೇ ಬೇರೆ – ಒಂದು ರೀತಿ ಚಂದ, ಶೃತಿ ಬದ್ಧ. ಇವತ್ತಿಗೂ ಹಳ್ಳಿಕಡೆ ಹೋದ್ರೆ ನಮ್ಮ ಈಡಿಗ ಸಮುದಾಯದವರು, ಹವ್ಯಕರು ಎಲ್ಲರೂ ಒಂತರಾ ಹಾಡಿದಾಗೆ ಶೃತಿಗೆ ಸರಿಯಾಗಿ ಮಾತಾಡ್ತಾರೆ. ಅದು ನಮ್ಮ ಮೂಲ ಕನ್ನಡ ಮಾತಾಡೊ ರೀತಿ ಇದ್ದಿರಬಹುದು. ಅದು ಯಕ್ಷಗಾನದಲ್ಲಿ ಉಳ್ಕೊಂಡಿದೆ ಅಂತ ಅನ್ನಿಸುತ್ತೆ. ಈಗ ತಮಿಳುನಾಡಿನಲ್ಲೇ ಹೆಚ್ಚು ಪ್ರಸಿದ್ಧವಾಗಿ ಇರೋ ನಮ್ಮ ಕರ್ನಾಟಕ ಸಂಗೀತದಲ್ಲಿನ ತಾಳಗಳ ಮೂಲರೂಪ ನಮ್ಮ ಯಕ್ಷಗಾನದಲ್ಲಿ ಇದೆ ಅಂತ ಡಾ.ರಾಘವ ನಂಬಿಯಾರ್ ಅಂತ ಒಬ್ಬ ಯಕ್ಷಗಾನ ಸಂಶೋಧಕರು ಪ್ರತಿಪಾದಿಸಿದಾರೆ. ಎಷ್ಟೋ ತಾಳಗಳು, ಕುಣಿತದ ಶೈಲಿ, ಹಾಡಿನ ಧಾಟಿ ಎಲ್ಲಾ ಕಳದು ಹೋಗಿದೆ ಅಂತೆ. ನಮ್ಮ ಬಾಡಿ ಲಾಂಗ್ವೇಜೇ ಬದಲಾಗಿಲ್ವಾ? ಇವನ್ನೇಲ್ಲಾ ನಂಬಿಯಾರರು ತಮ್ಮ ಪುಸ್ತಕ “ಹಿಮ್ಮೇಳ” ಅನ್ನೋದ್ರಲ್ಲಿ ಬರೆದಿಟ್ಟು ನಮ್ಮ ಯಕ್ಷಾಗನ ಮೂಲರೂಪ ಹಾಳಾಗದಹಾಗೆ ಉಳಿಬೇಕು ಅಂತ ಪ್ರಯತ್ನ ಮಾಡ್ತಾ ಇದಾರೆ.
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 4 – ಐದು ವರ್ಷಗಳಲ್ಲಿ ಆಸ್ತಿ ಅಡವು
1931ರ ಆರ್ಥಿಕ ಮುಗ್ಗಟ್ಟಿನ ದಿನಗಳ ನೆನಪಿರುವವರು ಬಹಳ ಮಂದಿ. ನಮ್ಮ ನಾಟಕ ಮಂಡಳಿಯಿಂದಾಗಿ ನನಗೂ ಆ ದಿನಗಳ ನೆನಪು ಉಳಿದಿದೆ; ಅಂದಿನ ಮತ್ತು ಇಂದಿನ ಪರಿಸ್ಥಿತಿಗಳ ವ್ಯತ್ಯಾಸವನ್ನು ಜ್ಞಾಪಿಸಿಕೊಳ್ಳುವ ಹಾಗಾಗಿದೆ.
ಆಗ ಊರಿಂದೂರಿಗೆ ಸಾಮಾನು ಸಾಗಿಸುವ ಲಾರಿಗಳ ಸೌಕರ್ಯವಿರಲಿಲ್ಲ. ಸಾಗಾಟಕ್ಕೆ ಸಿಗುತ್ತಿದ್ದುದು ಎತ್ತಿನ ಗಾಡಿಗಳು ಮಾತ್ರ.
ದಶಾವತಾರದ ಮೇಳಗಳಲ್ಲಿ ಇರುತ್ತಿದ್ದ ಸಾಮಾನುಗಳನ್ನು ಸಾಗಿಸಲು ಬಹಳ ಕಷ್ಟವಾಗುತ್ತಿರಲಿಲ್ಲ. ಪರದೆ ಇತ್ಯಾದಿಗಳ ತೊಡಕು ಇಲ್ಲದ ಕಾರಣ, ಕೆಲವು ಪೆಟ್ಟಿಗೆಗಳನ್ನು ತಲೆ ಹೊರೆಯಲ್ಲಿ ಸಾಗಿಸಲು ಸಾಧ್ಯವಾಗುತ್ತಿತ್ತು. ಸಂಚಾರಕ್ಕೆ ರಸ್ತೆಯ ಅನುಕೂಲವಿದ್ದರೆ ಒಂದು ಗಾಡಿಯನ್ನು ಬಾಡಿಗೆಗೆ ಹಿಡಿದರೆ ಸಾಕಾಗುತ್ತಿತ್ತು. ಊರು ಸೇರಿದ ತರುವಾಯ ಡೇರೆಯ ವ್ಯವಸ್ಥೆಯೂ ಬೇಕಾಗುತ್ತಿರಲಿಲ್ಲ. ಹೆಚ್ಚಾಗಿ ಬಯಲಾಟಗಳೇ ಅಂದು ನಡೆಯುತ್ತಿದ್ದುವು.
ಆದರೆ ಯಕ್ಷಗಾನ ನಾಟಕ ಕಂಪೆನಿಯ ಹೊಣೆ ಹೊತ್ತ ನಮ್ಮ ಪರಿಸ್ಥಿತಿ ಅದಕ್ಕೆ ತೀರಾ ವ್ಯತಿರಿಕ್ತವಾಗಿತ್ತು.
ದೃಶ್ಯಾವಳಿಗಳಿಗಾಗಿ ಪರದೆಗಳು, ‘ಪಕ್ಕದ ರೆಕ್ಕೆ’ಗಳು, ಆಸನ- ಪೀಠೋಪಕರಣಗಳು, ಕಿರೀಟ-ಆಯುಧ, ಅಲಂಕಾರಗಳು ಇವೆಲ್ಲವುಗಳ ಜೊತೆಗೆ ಸಾಕಷ್ಟು ಫರ್ನಿಚರ್ಗಳನ್ನು ಸಾಗಿಸಲು ಎಂಟು ಹತ್ತು ಗಾಡಿಗಳನ್ನು ಅನುವು ಮಾಡಿಕೊಳ್ಳಬೇಕಾಗುತ್ತಿತ್ತು. ಎಷ್ಟೇ ಜನಪ್ರಿಯತೆ ಗಳಿಸಿದರೂ, ಕೆಲವು ದಿನಗಳ ತರುವಾಯ ಊರು ಬದಲಾಯಿಸಲೇಬೇಕಾಗುವುದಷ್ಟೇ.
ಊರಿಂದೂರಿಗೆ
ಬಟ್ಟೆಯ ಡೇರೆಗೆ ಬೇಕಾದ ಅನುಕೂಲ ನಮಗೆ ಇರಲಿಲ್ಲ. ಆದುದರಿಂದ ಪ್ರತಿಯೊಂದು ಊರಿನಲ್ಲೂ ”ಥಿಯೇಟರ್” ಕಟ್ಟಿಸಬೇಕಾಗುತ್ತಿತ್ತು. ಸರಾಸರಿ ಒಂದು ಸಾವಿರ ರೂ. ಅದಕ್ಕಾಗಿ ವೆಚ್ಚವಾಗುತ್ತಿತ್ತು.
ಮತ್ತಷ್ಟು ಓದು
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ: ತಲೆಗೆ ಬಿದ್ದ ತಾಳ
“ನನ್ನಿಂದಾದಷ್ಟು ಸಮಯ… ಈ ಜೀವನ ನನ್ನನ್ನು ಕುಣಿಸಿದಷ್ಟು ದಿನವೂ ಕುಣಿಯುತ್ತೇನೆ…. ಕುಣಿಯುತ್ತಲಿರುತ್ತೇನೆ…” ಎಂದು ತೀರ್ಮಾನಿಸಿ ಯಕ್ಷಗಾನ ಕಲೆಗಾಗಿ ಅವಿರತವಾಗಿ ದುಡಿದು 18.11.1972 ರಂದು ಬಣ್ಣ ಕಳಚಿ ಯಕ್ಷಗಾನ ರಂಗವನ್ನು ತಬ್ಬಲಿಯನ್ನಾಗಿ ಮಾಡಿ ಯಕ್ಷಮಾತೆಯ ಪಾದವನ್ನು ಸೇರಿದ ಕುರಿಯ ವಿಠಲ ಶಾಸ್ತ್ರಿಯವರು ಜನಿಸಿದ್ದು ಕಳೆದ ಶತಮಾನದ ದಿನಾಂಕ 8.9.1912 ರಂದು .ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು ತಮ್ಮ ವಯಸ್ಸಿನ ನೂರನೇ ಸಂವತ್ಸರಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪದ್ಯಾಣ ಎಂದೊಡನೆ ತಕ್ಷಣ ನೆನಪಿಗೆ ಬರುವುದು ಯಕ್ಷಗಾನ .ಕನ್ನಡ ನಾಡಿನ ರಾಜಧಾನಿ ಬೆಂಗಳೂರು ನಗರದಲ್ಲಿ ಮೊದಲ ಬಾರಿಗೆ ಯಕ್ಷಗಾನದ ಕೇಳಿ ಬಡಿದವರು ಎಂದು 1955ನೇ ಇಸವಿಯಲ್ಲಿ ಗುರುತಿಸಿಕೊಂಡವರು ಕಳೆದ ಶತಮಾನದ ಮಂಗಳೂರಿನ ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ಪದ್ಯಾಣ ಗೋಪಾಲಕೃಷ್ಣ ( ಪ.ಗೋ. 1928 -1997 ).)ರವರರು ನಿರೂಪಣೆ ಗೈದಿರುವ ಕುರಿಯ ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು” ಇಂದು ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆಯಲ್ಲಿ…
—————-