ರಷ್ಯಾ-ಉಕ್ರೇನ್ ಕದನ: ಮಾನವ ಹಕ್ಕು ಹೋರಾಟಗಾರರು ಎಲ್ಲಿ ಅಡಗಿ ಕುಳಿತಿದ್ದಾರೆ?
– ರಾಘವೇಂದ್ರ ಅಡಿಗ ಎಚ್ಚೆನ್.
ಯುದ್ಧ …
ಕಳೆದ ಒಂದು ವಾರದಿಂದ ಭಾರತ ಸೇರಿ ಜಗತ್ತಿನ ನಾನಾ ರಾಷ್ಟ್ರಗಳ ಜನರಲ್ಲಿ ಆತಂಕ, ದುಗುಡಕ್ಕೆ ಕಾರಣವಾಗಿರುವುದು ರಷ್ಯಾ-ಉಕ್ರೇನ್ ಯುದ್ಧ. ಉಕ್ರೇನ್ ನ್ಯಾಟೋ ರಾಷ್ಟ್ರಗಳ ಜತೆ ಕೈಜೋಡಿಸಲಿದೆ, ಯುರೋಪಿಯನ್ ಯೂನಿಯನ್ ಜತೆಯಾಗಿ ತನ್ನ ಕಮ್ಯುನಿಸ್ಟ್ ಸಿದ್ಧಾಂತ ಆಧಾರಿತ ವ್ಯವಸ್ಥೆಯ ಪ್ರಭಾವದಿಂದ ದೂರವಾಗಲಿದೆ ಎಂಬ ಕಾರಣದಿಂದ ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಿದೆ. ರಷ್ಯಾ ಕಳುಹಿಸಿದ ಯುದ್ಧ ವಾಹನಗಳ ಮೇಲೆ *Z* ಸಂಕೇತವನ್ನು ರಷ್ಯಾ ಸೂಚಿಸಿದ್ದು, ಇದರ ಸೂಚನೆ ಎಂದರೆ 8 ಗಣರಾಜ್ಯಗಳನ್ನು ರಷ್ಯಾಕ್ಕೆ ಸೇರಿಸುವ ಮೂಲಕ ರಷ್ಯಾವನ್ನು ವಿಸ್ತರಿಸುವ ದೂರ ದೃಷ್ಠಿ ಹಾಗೂ ಮುಂದಾಲೋಚನೆ ಈ ಸೇನಾ ಕಾರ್ಯಾಚರಣೆಯ ಹಿಂದಿದೆ ಎನ್ನಲಾಗುತ್ತಿದೆ. ಎಂದರೆ ಇದರ ಪರಿಣಾಮ ಭವಿಷ್ಯದಲ್ಲಿ ಜಗತ್ತಿನ ಭೂಪಟವನ್ನೇ ಬದಲಾಯಿಸಲಿದೆ, ಕೆಲವೊಂದು ರಾಷ್ಟ್ರಗಳನ್ನು ಪ್ರಪಂಚದ ನಕಾಶೆಯಿಂದಲೇ ಅಳಿಸಿ ಹಾಕಲಾಗುತ್ತದೆ!
ಆದರೆ ಇದೀಗ ನಮ್ಮ ಮುಂದಿರುವ ಪ್ರಶ್ನೆ ಎಂದರೆ ಜಗತ್ತಿನಲ್ಲಿ ಶಾಂತಿ ನೆಲೆಗೊಳಿಸಿ ಎಲ್ಲವೂ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯೊಂದಿಗೆ ಹುಟ್ಟಿಕೊಂಡ ವಿಶ್ವಸಂಸ್ಥೆ ರಷ್ಯಾ-ಉಕ್ರೇನ್ ಯುದ್ಧ ವಿಷಯದಲ್ಲಿ ಏಕೆ ಗಟ್ಟಿ ನಿರ್ಧಾರವನ್ನು ತಾಳದೆ ಹೋಗಿದೆ? ಹೌದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಉಕ್ರೇನ್-ರಷ್ಯಾ ಯುದ್ಧದ ವಿರುದ್ಧ ನಿರ್ಣಯ ತೆಗೆದುಕೊಳ್ಳಲಾಗಿದೆ. ಉಕ್ರೇನ್ ವಿರುದ್ಧದ ಸೇನಾ ಕಾರ್ಯಾಚರಣೆಯನ್ನು ರಷ್ಯಾ ತಕ್ಷಣವೇ ನಿಲ್ಲಿಸಬೇಕೆಂದು ಆಗ್ರಹಿಸಿ ವಿಶ್ವಸಂಸ್ಥೆ ಕೈಗೊಂಡ ನಿರ್ಣಯದ ಪರ ಒಂದು ಡಜನ್ಗೂ ಹೆಚ್ಚು ದೇಶಗಳ ರಾಯಭಾರಿಗಳು ದನಿ ಎತ್ತಿದ್ದಾರೆ. ಐದು ದಿನಗಳಿಂದ ನಡೆಯುತ್ತಿರುವ ಯುದ್ಧದಲ್ಲಿ ಉಕ್ರೇನ್ ಅಪಾರ ನಷ್ಟ ಅನುಭವಿಸಿದೆ. ಸಾವಿರಾರು ಅಮಾಯಕ ಜೀವಗಳು ಹಾರಿ ಹೋಗಿವೆ. “ಈ ಅನಾಹುತ ಇಲ್ಲಿಗೆ ಕೊನೆಗೊಳಿಸಿ. ಮನುಷ್ಯತ್ವದ ಕಡೆ ಹೆಜ್ಜೆ ಹಾಕಿ” ಎಂದು ವಿಶ್ವಸಂಸ್ಥೆ ಸಲಹೆ ನೀಡಿದೆ. ಅದರೆ ರಷ್ಯಾದಂತಹಾ ಬಲಿಷ್ಟ, ವಿಸ್ತರಣಾದಾಹ್ಹಿ, ಕಮ್ಯುನಿಸ್ಟ್ ಸಿದ್ದಾಂತದ ಪ್ರತಿಪಾದಕ ರಾಷ್ಟ್ರವೊಂದಕ್ಕೆ ಇಂತಹಾ ಕೇವಲ ಸಲಹೆ ಸೂಚನೆಗಳು ಸಾಕಾಗುತ್ತದೆಯೆ? ಒಂದೊಮ್ಮೆ ಈ ಯುದ್ಧದಲ್ಲಿ ಉಕ್ರೇನ್ ಸೋಲೊಪ್ಪಿದ್ದಾದರೆ ಭವಿಷ್ಯದಲ್ಲಿ ನ್ಯಾಟೋ ರಾಷ್ಟ್ರಗಳೂ ಸಹ ರಷ್ಯಾವನ್ನು ಎದುರಿಸಲಾರವು. ಅಲ್ಲದೆ ವಿಶ್ವಸಂಸ್ಥೆ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಅಪಾಯವೂ ಇದೆ. ಒಟ್ತಾರೆ ಜಗತ್ತಿನ ಯಾವುದೇ ರಾಷ್ಟ್ರ ರಷ್ಯಾವನ್ನು ಮುಖಾಮುಖಿಯಾಗಿ ಎದುರಿಸಲು ವಿಫಲವಾಗಲಿದೆ.
ಇದಷ್ಟೇ ಅಲ್ಲದೆ ಜಗತ್ತಿನಾದ್ಯಂತ ಇರುವ ಮಾನವ ಹಕ್ಕು ಹೋರಾಟ(ಹಾರಾಟ)ಗಾರರು, ಬುದ್ದಿಜೀವಿಗಳು ರಷ್ಯಾ-ಉಕ್ರೇನ್ ನಡುವಿನ ಈ ಯುದ್ಧದ ಬಗ್ಗೆ ಏಕೆ ಯಾವ ಹೇಳಿಕೆಯನ್ನು ನೀಡುತ್ತಿಲ್ಲ? ಪ್ರತಿಭಟನೆ ನಡೆಸುತ್ತಿಲ್ಲ? ಭಾರತದಂತಹಾ ಸರ್ವಮತ ಸಹಬಾಳ್ವೆ ಇರುವ ದೇಶದಲ್ಲಿ ಅದೆಲ್ಲೋ ಒಂದು ಗುಂಪು ಹತ್ಯೆ ನಡೆದಿದೆ, ಇನ್ನೆಲ್ಲೋ ಗುಂಪುಗಳ ನಡುವೆ ಸಂಘರ್ಷ ನಡೆದಿದೆ ಎನ್ನುವ ಕಾರಣಕ್ಕೆ ಮಾನವ ಹಕ್ಕು ಉಲ್ಲಂಘನೆ, ಭಾರತದಲ್ಲಿ ಯಾವುದೂ ಸರಿಯಿಲ್ಲ ಎಂದು ಬೊಬ್ಬಿಡುವ ಜಗತ್ತಿನ ಪ್ರಚಂಡ ಮಾನವ ಹಕ್ಕು ಪ್ರತಿಪಾದಕರು ಇಂದು ಎಲ್ಲಿ ಹೋಗಿದ್ದಾರೆ? ರಷ್ಯಾ ಉಕ್ರೇನ್ ನ ಹಲವಾರು ಸೈನಿಕರನ್ನು ಮಾತ್ರವಲ್ಲದೆ ಅಮಾಯಕ ನಾಗರಿಕರ ಮೇಲೆ ಸಹ ದಾಳಿ ಮಾಡುತ್ತಿದೆ. ಈ ದಾಳಿಯ ನಡುವೆ ಕರ್ನಾಟಕದ ಹಾವೇರಿಯ ವೈದ್ಯ ವಿದ್ಯಾರ್ಥಿ ನವೀನ್ ಎನ್ನುವವ ಸಹ ದುರಂತ ಸಾವಿಗೆ ಈಡಾಗಿದ್ದಾನೆ. ಇಷ್ಟೆಲ್ಲಾ ಘಟಸುತ್ತಿದ್ದರೂ ಬುದ್ದಿಜೀವಿಗಳೆನಿಸಿಕೊಂಡವರು ಯಾರೂ ರಷ್ಯಾ ನಡೆಯನ್ನು ಟೀಕಿಸುವ ಮಾತನಾಡುತ್ತಿಲ್ಲ ಏಕೆ? ಕೇವಲ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಮಾತ್ರ ಈ ಬಗ್ಗೆ ಪ್ರತಿಕ್ರಿಯಿಸಬೇಕಿದೆಯೆ?
ಕಳೆದ ವರ್ಷಗಳಲ್ಲಿ “ಟೂಲ್ ಕಿಟ್” ಮೂಲಕ ಭಾರತದಲ್ಲಿ ಅಸಮಾನತೆ ಇದೆ, ಅಸಹಿಷ್ಣುತೆ, ಮಾನವ ಹಕ್ಕು ಉಲ್ಲಂಘನೆ ಸತತ ಆಗುತ್ತಿದೆ ಎನ್ನುತ್ತಿದ್ದ ಜಾಗತಿಕ ಹೋರಾಟಗಾರ್ತಿಯರಾರೂ ಇದೀಗ ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ತುಟಿ ಪಿಟಿಕೆನ್ನುತ್ತಿಲ್ಲ. ಇದಷ್ಟೇ ಅಲ್ಲ ಕಳೆದ ತಿಂಗಳಲ್ಲಿ ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಕುರಿತು ವಿವಾದ ಏರ್ಪಟ್ಟ ಸಮಯದಲ್ಲಿ ಅಮೆರಿಕಾ, ಪಾಕಿಸ್ತಾನ ಸೇರಿ ಜಗತ್ತಿನ ನಾನಾ ರಾಷ್ಟ್ರಗಳ ನಾಯಕರು ಅಲ್ಲದೇ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮಲಾಲಾಳಂತಹಾ ವ್ಯಕ್ತಿಗಳು ಭಾರತದಲ್ಲಿ ಪರಿಸ್ಥಿತಿ “ಭಯಂಕರವಾಗಿದೆ” ಅಂತ ಅಂದಿದ್ದರು. ಆದರೆ ಇದೀಗ ಅವರಾರೂ ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ ಹಾಗೂ ಅದರಿಂದಾಗುತ್ತಿರುವ ಜೀವಹಾನಿ ಬಗ್ಗೆ ಪ್ರತಿಕ್ರಿಯೆ ನೀಡುತ್ತಿಲ್ಲ.
ಇದೆಲ್ಲದರಿಂದ ತಿಳಿದುಬರುತ್ತಿರುವುದೇನೆಂದರೆ ವಿಶ್ವದ ಬಲಾಡ್ಯ ರಾಷ್ಟ್ರಗಳು ತಾವೇನು ಮಾಡಿದರೂ ಅದೆಲ್ಲವೂ ಸರಿಯಾಗಿಯೇ ಇರುತ್ತದೆ. ಆದರೆ ಭಾರತದಂತ ಕೆಲವು ರಾಷ್ಟ್ರಗಳು ಮಾತ್ರ ಅವರ ಅಣತಿಯ ಪ್ರಕಾರವೇ ನಡೆಯಬೇಕು! ಉದಾಹರಣೆಗಾಗಿ ಹೇಳುವುದಾದರೆ ರಷ್ಯಾ-ಉಕ್ರೇನ್ ಮೇಲೆ ದಾಳಿ ನಡೆಸಿದ್ದಂತೆ ಭಾರತವೇನಾದರೂ ಪಾಕಿಸ್ತಾನದ ಕರಾಚಿ, ಲಾಹೋರ್ ಮೇಲೆ ದಾಳಿ ನಡೆಸಿದ್ದರೆ ಆಗ ಅಮೆರಿಕಾ ಸೇರಿ ಜಾಗತಿಕ ಶಕ್ತಿಗಳು ಹೀಗೆಯೇ ಸುಮ್ಮನೆ ಕುಳಿತಿರುತ್ತಿದ್ದವೆ? ಖಂಡಿತಾ ಇಲ್ಲ. ಭಾರತದ ವಿರುದ್ಧ ವಿಷ ಕಾರುತ್ತಿದ್ದವು.
ಇನ್ನು ಇಂದಿನ ಯುದ್ಧ ಪರಿಸ್ಥಿತಿಯಲ್ಲಿ ಭಾರತ ತಟಸ್ಥ ಧೋರಣೆ ತಾಳಿದೆ. ಇದಕ್ಕೆ ಕಾರಣ ಕೂಡ ಇದೆ. ರಷ್ಯಾ ನಮ್ಮ ಅನಾದಿ ಕಾಲದ ಮಿತ್ರರಾಷ್ಟ್ರ. ಅಂತಹಾ ದೇಶದ ವಿರುದ್ಧ ನಿಲುವು ತೆಗೆದುಕೊಳ್ಳುವುದು ಅಷ್ಟೇನೂ ಸುಲಭವಲ್ಲ. ಇನ್ನೊಂದು ಸಂಗತಿ ಎಂದರೆ ಭಾರತಕ್ಕೆ ಅಮೆರಿಕಾ ಸಹ ಮಿತ್ರರಾಷ್ಟ್ರವೇ ಆಗಿದ್ದರೂ ಅಮೆರಿಕಾದ ಭಾರತ ಪರ ನಿಲುವು ಎಲ್ಲಾ ಕಾಲದಲ್ಲಿ ಏಕಪ್ರಕಾರವಾಗಿ ಇರುವುದಿಲ್ಲ. ಹಾಗಾಗಿ ಇಂದು ಅಮೆರಿಕಾ ಮಾತುಕೇಳಿ ರಷ್ಯಾ ವಿರುದ್ಧ ಹೋದರೆ ನಾವು ಒಬ್ಬ ಆಪ್ತಮಿತ್ರನನ್ನೇ ಕಳೆದುಕೊಳ್ಳುತ್ತೇವೆ. ಹಾಗೆಂದ ಮಾತ್ರಕ್ಕೆ ರಷ್ಯಾ ನಡೆಸಿರುವ ಈ ಯುದ್ಧಕ್ಕೆ ಭಾರತದ ಸಮ್ಮತಿ ಇದೆ ಎಂದೂ ಅರ್ಥವಲ್ಲ. ಭಾರತ ಪ್ರಧಾನಿ ರಷ್ಯಾ ಅಧ್ಯಕ್ಷ ಪುಟಿನ್ ಗೆ ಪದೇ ಪದೇ ಕರೆ ಮಾಡಿ ಯುದ್ಧ ನಿಲ್ಲಿಸುವ ಮನವಿ ಮಾಡುತ್ತಿದ್ದಾರೆ. ಅಲ್ಲದೆ ಉಕ್ರೇನ್ ನಲ್ಲಿ ಸಿಲುಕಿದ್ದ ನಮ್ಮ ದೇಶವಾಸಿಗಳನ್ನು ಮರಳಿ ಕರೆತರುತ್ತಿದ್ದಾರೆ. ಆದರೆ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುವಂತೆ ರಷ್ಯಾ ಮೇಲೆ ಭಾರತ ಒತ್ತಡ ಹಾಕುವುದು ಸಾಧ್ಯವಿಲ್ಲ. ಮತ್ತು ವಿಶ್ವಸಂಸ್ಥೆಯಲ್ಲಿಯೂ ಸಹ ಯುದ್ಧದ ವಿರುದ್ಧ ಮತ ಚಲಾವಣೆ ಅಸಾಧ್ಯ. ಏಕೆಂದರೆ ರಷ್ಯಾದಂತೆ ಉಕ್ರೇನ್ ನಮಗೆ ಹಳೇ ಮಿತ್ರನಲ್ಲ. ಇದೀಗ ತನ್ನ ಮೇಲೆ ರಷ್ಯಾ ಎಲ್ಲಾ ದಿಕ್ಕುಗಳಿಂದ ಆಕ್ರಮಣ ನಡೆಸಿದೆ. ನನ್ನ ಪರವಾಗಿ ರಷ್ಯಾ ಅಧ್ಯಕ್ಷರೊಂದಿಗೆ ಮಾತನಾಡಿ ತಕ್ಷಣವೇ ಯುದ್ಧ ನಿಲ್ಲಿಸಲು ಮಧ್ಯ ಪ್ರವೇಶಿಸುವಂತೆ ಹಾಗೂ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ಬೆಂಬಲಿಸುವಂತೆ ಉಕ್ರೇನ್ ಸರ್ಕಾರವು ಭಾರತವನ್ನು ಅಂಗಲಾಚುತ್ತಿದೆ. ಆದರೆ ಇದೇ ದೇಶ ಈ ಹಿಂದೆ ಹಲವು ಬಾರಿ ಭಾರತದ ವಿರುದ್ಧ ನಿರ್ಣಯ ತೆಗೆದುಕೊಂಡ ಉದಾಹರಣೆಗಳು ನಮ್ಮ ಮುಂದಿದೆ. 1998ರಲ್ಲಿ ಅಂದಿನ ಆಟಲ್ ಬಿಹಾರಿ ವಾಜಪೇಯಿ ಸರ್ಕಾರ ‘ಆಪರೇಷನ್ ಶಕ್ತಿ’ ಹೆಸರಿನಲ್ಲಿ ಅಣ್ವಸ್ತ್ರ ಪರೀಕ್ಷೆ ನಡೆಸಿದಾಗ, ಪಾಕಿಸ್ತಾನ-ಭಾರತ ಯುದ್ಧ ಸಮಯದಲ್ಲಿ, ವಿಶ್ವಸಂಸ್ಥೆಯ ಭದ್ರಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಪಡೆಯಲು ಭಾರತ ಪ್ರಯತ್ನಿಸುತ್ತಿದ್ದ ಸಮಯ, ಕಾಶ್ಮೀರ ವಿಷಯದಲ್ಲಿ ಸಹ ಉಕ್ರೇನ್ ಭಾರತದ ವಿರುದ್ಧ ನಿರ್ಣಯ ತೆಗೆದುಕೊಂಡಿದೆ. ಹೀಗಿರುವಾಗ ಇಂದು ಉಕ್ರೇನ್ ಪರ ಭಾರತ ನಿರ್ನಯ ತೆಗೆದುಕೊಳ್ಳಲಾಗುತ್ತದೆಯೆ?
ಒಟ್ಟಾರೆಯಾಗಿ ಹೇಳುವುದಾದರೆ ಯುದ್ಧ ಎಂದಿಗೂ ಒಳ್ಳೆಯದಲ್ಲ. ಮಾನವ ವಿಕಾಸದ ಇತಿಹಾಸದಲ್ಲಿ ಅಳಿಸಲಾಗದ ಕಠೋರ ಕಪ್ಪು ಕಲೆ ಎಂದರೆ ಅವು ಯುದ್ಧದ ಕಲೆಗಳು. ಹಾಗಾಗಿ ಇಂದೂ ಸಹ ಕೋಟ್ಯಾಂತರ ಜೀವಹಾನಿಗೆ ಪ್ರೇರಣೆಯಾಗಿರುವ ಯುದ್ಧ ತಕ್ಷಣ ನಿಲ್ಲಲೇಬೇಕು, ಜಗತ್ತು ಶಾಂತಿ ಸೌಹಾರ್ದತೆಯಿಂದ ನಡೆಯುವಂತಾಗಬೇಕು ರಷ್ಯಾ-ಉಕ್ರೇನ್ ಕದನ ಶೀಘ್ರವೇ ಮುಕ್ತಾಯವಾಗಲಿ, ಅದಕ್ಕಾಗಿ ನಮ್ಮೆಲ್ಲರ ಪ್ರಾರ್ಥನೆ ಇರಲಿ.
ಶೃಂಗೇರಿ ಮಠದ ಮೇಲೆ ಮರಾಠರು ದಾಳಿ ಮಾಡಿದ್ದರೇ?
ಮೂಲ ಲೇಖಕ : ಉದಯ್ ಕುಲಕರ್ಣಿ
ಅನುವಾದ : ರಾಕೇಶ್ ಶೆಟ್ಟಿ
ಹೈದರಾಲಿ,ಟಿಪ್ಪು ಸುಲ್ತಾನನಿಂದ ದೇವಾಲಯಗಳ ನಾಶದ ಬಗ್ಗೆ ಮಾತನಾಡಿದ ತಕ್ಷಣ ಶೃಂಗೇರಿ ಮಠದ ಮೇಲೆ ಮರಾಠರು ದಾಳಿ ಮಾಡಿದ್ದರು, ಟಿಪ್ಪು ಸ್ವಾಮೀಜಿಯವರ ಸಹಾಯಕ್ಕೆ ಬಂದಿದ್ದ ಎಂದು ಕಮ್ಯುನಿಸ್ಟರು ಮುಂದೆ ನಿಲ್ಲುತ್ತಾರೆ.ಹಾಗಿದ್ದರೆ ಈ ದುರ್ಘಟನೆಯ ಸತ್ಯವೇನು? ಈ ಘಟನೆಯ ಇನ್ನೊಂದು ಮಗ್ಗುಲನ್ನು ತಿಳಿಸುವ ಇತಿಹಾಸ ತಜ್ಞ ಉದಯ್ ಕುಲಕರ್ಣಿಯವರು ಸ್ವರಾಜ್ಯ ಮ್ಯಾಗಜಿನ್ನಿನಲ್ಲಿ ಬರೆದ ಲೇಖನ ನಿಲುಮಿಗರಿಗಾಗಿ – ನಿಲುಮೆ
ಟಿಪ್ಪುವಿನ ಮತಾಂಧತೆಯನ್ನು ತಮ್ಮ ರೆಡ್ ಕಾರ್ಪೆಟಿನ ಅಡಿಯಲ್ಲಿ ತೂರಿಸುವ ಅಭ್ಯಾಸವುಳ್ಳ ಕಮ್ಯುನಿಸ್ಟ್ ಇತಿಹಾಸಕಾರರು ಆತ ಸೆಕ್ಯುಲರ್ ಆಗಿದ್ದ ಎಂದು ತೋರಿಸಲು ಪದೇ ಪದೇ ಬಳಸುವದು ಮರಾಠರ ಸೈನ್ಯ ಶೃಂಗೇರಿ ಮಠದ ಮೇಲೆ ದಾಳಿ ಮಾಡಿ ಕೊಳ್ಳೆ ಹೊಡೆದ ನಂತರ ಟಿಪ್ಪು ಅದರ ಜೀರ್ಣೋದ್ಧಾರಕ್ಕೆ ಸಹಾಯ ಮಾಡಿದ ಎನ್ನುವುದಾಗಿದೆ. ಆದರೆ ಆ ದಿನ ನಿಜವಾಗಿಯೂ ನಡೆದಿದ್ದೇನು ಎನ್ನುವುದನ್ನು ‘Solstice at Panipat’ ಪುಸ್ತಕ ಲೇಖಕರು ಮತ್ತು ಇತಿಹಾಸಕಾರರಾದ ಉದಯ್ ಕುಲಕರ್ಣಿಯವರು ಲಭ್ಯವಿರುವ ಪುರಾವೆಗಳ ಸಹಿತ ವಿವರಿಸುತ್ತಾರೆ.
“ಟಿಪ್ಪುವಿನ ನಡೆಗಳು ಸರಿಯಿಲ್ಲ. ಅಹಂಕಾರವೇ ತುಂಬಿರುವ ಆತ ಇತ್ತೀಚಿಗೆ ನೂರ್ ಮುಹಮ್ಮದನಿಗೆ ಬರೆದ ಪಾತ್ರದಲ್ಲಿ ತಾನು 50,000 ಹಿಂದುಗಳನ್ನು, ಮಹಿಳೆಯರು ಮಕ್ಕಳನ್ನು ಒಳಗೊಂಡಂತೆ ಇಸ್ಲಾಮ್ ಗೆ ಮತಾಂತರಿಸಿದ್ದೇನೆ. ಹಿಂದಿನ ಯಾವುದೇ ಪಡಿಶಾಹ್ ಅಥವಾ ವಜೀರ್ ಮಾಡಲಾಗದ್ದನ್ನು ನಾನು ಅಲ್ಲಾಹ್ ಕೃಪೆಯಿಂದ ಮಾಡಿದ್ದೇನೆ . ಹಳ್ಳಿಗೆ ಹಳ್ಳಿಯನ್ನೇ ಮತಾಂತರಿಸಿದ್ದೇನೆ ಎನ್ನುತ್ತಾನೆ” – ನಾನಾ ಫಡ್ನವಿಸ್ ಅವರು ಮಹಾಡ್ಜಿ ಸಿಂಧಿಯಾಗೇ ಬರೆದ ಪತ್ರ 5 September 1784.
ಥಾಮಸ್ ಡೇನಿಯಲ್ ಮತ್ತು ಜೇಮ್ಸ್ ವೇಲ್ಸ್ ಅವರು ಬಿಡಿಸಿರುವ ಚಿತ್ರವೊಂದು ಪುಣೆಯ ಶನಿವಾರ್ ವಾಡದಲ್ಲಿ ಗಮನ ಸೆಳೆಯುತ್ತದೆ.ಬ್ರಿಟಿಷರ ಚಾರ್ಲ್ಸ್ ಎಂ ಮಾಲೆಟ್ ಮತ್ತು ಮರಾಠರ ನಡುವಿನ ಒಪ್ಪಂದದ ಚಿತ್ರವದು. ಮಾಲೆಟ್ ವಿಶೇಷ ಆಸಕ್ತಿಯಿಂದ ಮಾಡಿಸಿದ ಈ ಚಿತ್ರವು, ಮರಾಠರು,ನಿಜಾಮರನ್ನು ಬ್ರಿಟಿಷ್ ಪಡೆಯೊಂದಿಗೆ ಸೇರಿಕೊಳ್ಳುವಂತೆ ಆತ ನಡೆಸಿದ ರಾಜತಾಂತ್ರಿಕತೆಯ ಪ್ರಾಮುಖ್ಯತೆಯನ್ನು ಹತ್ತು ವರ್ಷಗಳ ಹಿಂದೆ ಬ್ರಿಟಿಷರು ಹೊಂದಿದ್ದ ಮಿತ್ರ ಪಡೆಯನ್ನು ನೋಡುವ ಮೂಲಕ ಗಮನಿಸಬೇಕು. ಆ ಸಮಯದಲ್ಲಿ ಹೈದರಾಲಿಯ ಮರಾಠರ ಮಿತ್ರನಾಗಿದ್ದ. 1790 ರ ಸಮಯಕ್ಕಾಗಲೇ ಟಿಪ್ಪು ತನ್ನ ತಂದೆಯ ಹಳೆಯ ಮಿತ್ರಪಡೆಗಳಲ್ಲಿ ಅದೆಷ್ಟು ಆಕ್ರೋಶ ಮೂಡಿಸಿದ್ದನೆಂದರೆ ಅವರು ಬ್ರಿಟಿಷರೊಂದಿಗೆ ಕೈ ಜೋಡಿಸಿಬಿಟ್ಟಿದ್ದರು.
1790-1792ರ ನಡುವೆ ಟಿಪ್ಪುವಿನ ಮೇಲೆ ನಡೆದ ಯುದ್ಧದ ಸಮಯದಲ್ಲಿ, ಮರಾಠರ ಸೇನಾ ಮುಖ್ಯಸ್ಥ ರಘುನಾಥ ರಾವ್ ‘ದಾದಾ’ ಕುರುಂದ್ವಾಡ್ಕರ್ ಅವರ ಮೇಲ್ವಿಚಾರಣೆಯಲ್ಲಿದ್ದ ಸೇನೆಯ ತುಕಡಿಯೊಂದು ಶೃಂಗೇರಿಯ ಶಂಕರಾಚಾರ್ಯ ಮಠದ ಮೇಲೆ ದಾಳಿ ಮಾಡಿ, ಲೂಟಿಗೈದು ಹಾಳುಗೆಡವಿತ್ತು. ಇಂದಿಗೂ ಮಾಗದ ಗಾಯದಂತಿರುವ ಈ ದಾಳಿಯ ಹೊಣೆಯನ್ನು ಮರಾಠರು ಮತ್ತು ಪರಶುರಾಮ್ ಭಾವ್ ಪಟವರ್ಧನ್ ಅವರ ಮೇಲೆಯೇ ಹೊರಿಸಲಾಗಿದೆ.1791ರ ಸಮಯದಲ್ಲಿ ಮರಾಠರ ನಡುವೆ ಈ ಅನಾಹುತದ ಸುತ್ತ ನಡೆದಿರುವ ಪತ್ರ ವಿನಿಮಯಗಳ ಮೇಲೆ ಭಾಷಾ ಸಮಸ್ಯೆಯಿಂದಲೋ ಅಥವಾ ಉದ್ದೇಶಪೂರ್ವಕವಾಗಿಯೋ ಬೆಳಕು ಚೆಲ್ಲಲಾಗಿಲ್ಲ.
ಶೂರ್ಪನಖಿ, ಆಹಾ! ಎಂಥಾ ಸುಖಿ!
– ನಾಗೇಶ ಮೈಸೂರು
ನಮ್ಮ ಟೀವಿ ಸೀರಿಯಲ್ಗಳಲ್ಲಿ ಬರುವ ಹೆಣ್ಣು ವಿಲನ್ ಪಾತ್ರಗಳಿಗೆಲ್ಲ ಈ ಶೂರ್ಪನಖಿ ಪಾತ್ರವೂ ಸ್ಪೂರ್ತಿಯಿರಬಹುದೇ?
ಬಹುಶಃ ರಾಮಾಯಣದ ಪಾತ್ರಗಳನ್ನು ವಿಶ್ಲೇಷಣೆಗೆ ಪರಿಗಣಿಸಿದಾಗ, ಅದರಲ್ಲೂ ಮಹಿಳೆಯ ಪಾತ್ರದ ವಿಷಯಕ್ಕೆ ಬಂದರೆ ಸೀತೆ, ಕೈಕೆ, ಮಂಡೋದರಿ, ಮಂಥರೆ ಹೀಗೆ ಎಷ್ಟೋ ಪಾತ್ರಗಳು ಕಣ್ಮುಂದೆ ಬಂದು ನಿಲ್ಲುತ್ತವೆ. ಆದರೆ ಅವುಗಳ ನಡುವೆ ಸಾಮಾನ್ಯವಾಗಿ ಯಾರೂ ಪರಿಗಣಿಸದ ಒಂದು ವಿಶೇಷ ಪಾತ್ರವೆಂದರೆ ಶೂರ್ಪನಖಿಯದು. ತೀರಾ ಪ್ರಖರವಾಗಿ ಎದ್ದು ಕಾಣದೆ, ತೆಳುವಾದ ಮೇಲುಸ್ತರದಲ್ಲೇ ಮುಲುಗಾಡುವ ಈ ಪಾತ್ರ ಇಡೀ ರಾಮಾಯಣದಲ್ಲಿ ಬಂದು ಹೋಗುವ ಆವರ್ತಗಳ ಗಣನೆಯಲ್ಲಿ ಕೆಲವೇ ಕೆಲವಾದರೂ, ಆ ಪಾತ್ರ ಇಡೀ ರಾಮಾಯಣ ಕಥನದಲ್ಲುಂಟುಮಾಡುವ ಪರಿಣಾಮ ನೋಡಿದರೆ, ಈ ಪಾತ್ರದ ಕುರಿತು ಅಷ್ಟಾಗಿ ಪರಿಶೀಲನೆ, ವಿಶ್ಲೇಷಣೆ ನಡೆದಿಲ್ಲವೆಂದೇ ಕಾಣುತ್ತದೆ. ಮತ್ತಷ್ಟು ಓದು
ತಿರುಚಿ ಬರೆದ ಮಾತ್ರಕ್ಕೆ ಇತಿಹಾಸ ಬದಲಾದೀತೆ…?
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
‘ಭಾರತವೆನ್ನುವುದು ವಿಶ್ವದ ಅತ್ಯ೦ತ ಅಪಾಯಕಾರಿ ರಾಷ್ಟ್ರ.ಅದು ಮನುಷ್ಯತ್ವದ ಶತ್ರುರಾಷ್ಟ್ರಗಳಲ್ಲೊ೦ದು.ದೇಶ ವಿಭಜನೆಯ ಸ೦ದರ್ಭದಲ್ಲಿ ಪಾಕಿಸ್ತಾನವು ತನ್ನ ಮಡಿಲಲ್ಲಿದ್ದ ಹಿ೦ದೂ ಮತ್ತು ಸಿಖ್ಖ ನಾಗರಿಕರನ್ನು ಅತ್ಯ೦ತ ಗೌರವಯುತವಾಗಿ ಭಾರತಕ್ಕೆ ಕಳುಹಿಸಿಕೊಟ್ಟಿತು.ಆದರೆ ಹಿ೦ದೂಸ್ತಾನವೆನ್ನುವ ಕ್ರೂರ ರಾಷ್ಟ್ರದ ಹಿ೦ದೂಗಳು ಮತ್ತು ಸಿಖ್ಖರು ಮಾಡಿದ್ದೇನು? ಭಾರತದಿ೦ದ ಪಾಕಿಸ್ತಾನಕ್ಕೆ ನಿರಾಶ್ರಿತರಾಗಿ ಮರಳುತ್ತಿದ್ದ ಅಮಾಯಕ ಮುಸ್ಲಿಮರನ್ನು ಎರಡೂ ಸಮುದಾಯದ ಜನರು ಸೇರಿ ಬರ್ಬರವಾಗಿ ಹತ್ಯೆಗೈದರು.ಮುಸಲ್ಮಾನರು ಸಾಗುತ್ತಿದ್ದ ರೈಲು ,ಬಸ್ಸುಗಳನ್ನು ಲೂಟಿಗೈದರು.ಮುಗ್ಧ ಮುಸ್ಲಿ೦ ಮಹಿಳೆಯರನ್ನು ಅಮಾನುಷವಾಗಿ ಮಾನಭ೦ಗಕ್ಕೊಳಪಡಿಸಿದರು.ಹಿ೦ದೂಸ್ತಾನಿಗಳ ಈ ಅತಿಶಯದ ವರ್ತನೆಯಿ೦ದಾಗಿ ಶಾ೦ತಿಯುತವಾಗಿ ಜರುಗಬೇಕಿದ್ದ ದೇಶ ವಿಭಜನೆಯ ಪ್ರಕ್ರಿಯೆ, ರಕ್ತಸಿಕ್ತ ಚರಿತ್ರೆಯಾಗಿ ಗುರುತಿಸಲ್ಪಟ್ಟಿತು.ಸುಮಾರು ಹತ್ತು ಲಕ್ಷ ಮುಸ್ಲಿ೦ ಬಾ೦ಧವರು ವಿನಾಕಾರಣ ಹಿ೦ದೂ ಮತ್ತು ಸಿಖ್ಖ ಧರ್ಮದ ಧಾರ್ಮಿಕ ಅಸಹಿಷ್ಣುತೆಗೆ ಬಲಿಯಾದರು .ಹಿ೦ದೂಸ್ತಾನವೆನ್ನುವ ಭಯಾನಕ ರಾಷ್ಟ್ರದ ಚರ್ಯೆಯೇ ಅ೦ಥದ್ದು.ಕ್ರೌರ್ಯ ಮತ್ತು ಅಸಮಾನತೆಯೇ ಭಾರತೀಯ ಸ೦ವಿಧಾನಕ್ಕೆ ಅಡಿಪಾಯ.ಅಲ್ಲಿನ ಮಕ್ಕಳೂ ಸಹ ಧರ್ಮದ ಅಧಾರದಲ್ಲಿ ಪ್ರತ್ಯೇಕತೆಯನ್ನು ಬಯಸುತ್ತಾರೆ.ನಮಗ೦ತೂ ಅದು ಅತ್ಯ೦ತ ಕಡು ದ್ವೇಷಿ ರಾಷ್ಟ್ರ.ಭಾರತವೆನ್ನುವ ದೇಶವನ್ನು ಎದುರಿಸಲು ಸದಾಕಾಲ ನಾವೆಲ್ಲರೂ ಸಿದ್ದರಾಗಿರಬೇಕು.’
ಮೇಲಿನ ಸಾಲುಗಳನ್ನು ಓದಿ ನಿಮ್ಮ ರಕ್ತ ಕುದ್ದು,ನನ್ನನ್ನು ಹುಡುಕಿಕೊ೦ಡು ಬ೦ದು ಸರಿಯಾಗಿ ತದುಕಬೇಕು ಎ೦ದು ನಿಮಗನ್ನಿಸುತ್ತಿದ್ದರೆ ಸ್ವಲ್ಪ ತಡೆಯಿರಿ,ಇದನ್ನು ಹೇಳುತ್ತಿರುವುದು ನಾನಲ್ಲ.ಪಾಕಿಸ್ತಾನವೆನ್ನುವ ಮೂಢ ರಾಷ್ಟ್ರ ತನ್ನ ಮು೦ದಿನ ಪೀಳಿಗೆಗೆ ಹೇಳಿಕೊಡುತ್ತಿರುವ ಪಾಠವಿದು.ಅರ್ಥವಾಗಲಿಲ್ಲವೇ?ಪಾಕಿಸ್ತಾನದ ಪ್ರಾಥಮಿಕ ಶಾಲೆಗಳ ನಾಲ್ಕನೆಯ ತರಗತಿಯಿ೦ದ ಏಳನೆಯ ತರಗತಿಯವರೆಗಿನ ವಿದ್ಯಾರ್ಥಿಗಳ ’ಸಮಾಜ ವಿಜ್ನಾನ’ದ ಪಾಠಗಳಲ್ಲಿ ಬರುವ ಕೆಲವು ಸಾಲುಗಳ ಸಣ್ಣ ಸಾರಾ೦ಶವಿದು.ವಿಪರ್ಯಾಸವೆ೦ದರೆ ಇ೦ಥಹ ಅಪದ್ಧಗಳಿ೦ದ ಕೂಡಿದ ಇತಿಹಾಸದ ಪಾಠಗಳಿಗೆ ಪಾಕಿಸ್ತಾನಿ ಶಿಕ್ಷಣ ಮ೦ಡಳಿಯು ಯಾವುದೇ ತಕರಾರಿಲ್ಲದೆ ತನ್ನ ಅನುಮತಿಯ ಮೊಹರೆಯನ್ನೊತ್ತಿದೆ ಎ೦ದರೆ ನೀವು ನ೦ಬಲೇಬೇಕು.ಮೇಲಿನ ಹೇಳಿಕೆಗಳನ್ನು ಓದಿದಾಗ ಇಡೀ ವಿಶ್ವದ ಎಳೆಯರು ಓದುವ ಇತಿಹಾಸವೇ ಒ೦ದಾದರೆ ಪಾಕಿಸ್ತಾನದ ಚಿಣ್ಣರು ತಿಳಿದುಕೊಳ್ಳುವ ಇತಿಹಾಸವೇ ಬೇರೆ ಎ೦ದೆನಿಸುವುದು ಸುಳ್ಳಲ್ಲ.ತನ್ನ ದೇಶವಾಸಿಗಳ ಶೌರ್ಯವನ್ನು ವಿವರಿಸುವ ಭರದಲ್ಲಿ ಪಾಕಿಸ್ತಾನಿ ಶಿಕ್ಷಣ ವ್ಯವಸ್ಥೆ ಅದ್ಯಾವ ಪರಿಯ ಸುಳ್ಳು ಹೇಳುತ್ತದೆ ಗೊತ್ತೆ?
ಸಿಂಧುರಕ್ಷಕ್ ಮುಳುಗಿತೆಂದರೆ ಹಿಂದೂಸ್ಥಾನವೂ ಮುಳುಗಿದಂತೆ!
– ರಾಜೇಶ್ ರಾವ್
ಭಾರತೀಯ ನೌಕೋದ್ಯಮಕ್ಕೆ ಸಹಸ್ರಾರು ವರ್ಷಗಳ ಇತಿಹಾಸವಿದೆ. ಋಗ್ವೇದದಲ್ಲಿ ನೌಕೆಗಳ ಉಲ್ಲೇಖವಿದೆ. ವೇದಕಾಲದಲ್ಲಿ ನೌಕೆಗಳ ಬಗ್ಗೆ, ಅವುಗಳನ್ನು ತಯಾರಿಸುವ, ಬಳಸುವ ಬಗ್ಗೆ ಜನತೆಗೆ ಅರಿವು ಇತ್ತು. ಅಂದರೆ ಸಾಗರ ಗರ್ಭದೊಳಗಡಗಿರುವ ಅಪಾರ ಸಂಪನ್ಮೂಲಗಳ ಬಗ್ಗೆ ಜನ ತಿಳಿದಿದ್ದರು. ಆಧುನಿಕ ವಿಜ್ಞಾನದ ಅರಿವಿಗೆ ದೊರಕಿದ ಮಾಹಿತಿಯನ್ನು ಆಧರಿಸಿದರೂ ಭಾರತವೇ ನೌಕೋದ್ಯಮದ ತವರು. ಕ್ರಿ.ಪೂ 2300ರ ಸುಮಾರಿಗೆ ಗುಜರಾತಿನ ಲೋಥಲ್ ಎಂಬ ಪ್ರದೇಶದಲ್ಲಿರುವ ಮಾಂಗ್ರೋಲ್ ಬಂದರಿನ ಬಳಿ ಸಿಂಧೂ ನಾಗರೀಕತೆಯ ಸಮಯದಲ್ಲಿ ಮೊದಲ ಉಬ್ಬರವಿಳಿತದ ಹಡಗು ನಿರ್ಮಾಣವಾಯಿತು. ಮೌರ್ಯರ ಆಳ್ವಿಕೆಯ ಸಮಯದಲ್ಲಿ ಜಲಮಾರ್ಗದ ಸಮಸ್ತ ಆಗು ಹೋಗುಗಳು ನವಾಧ್ಯಕ್ಷನ ನಿಯಂತ್ರಣದಲ್ಲಿತ್ತು. ಕೌಟಿಲ್ಯನ ಅರ್ಥ ಶಾಸ್ತ್ರದಲ್ಲಿ ನೌಕೆಗಳ ಬಗೆಗಿನ ಅಗಾಧ ಮಾಹಿತಿಯಿದೆ. ಮೌರ್ಯರಲ್ಲದೆ ಚೋಳ, ಶಾತವಾಹನ, ಗುಪ್ತ, ಪಾಲ, ಪಾಂಡ್ಯ, ವಿಜಯನಗರ, ಕಳಿಂಗ, ಮರಾಠರ ಆಳ್ವಿಕೆಯ ಕಾಲದಲ್ಲೂ ನೌಕೋದ್ಯಮ ಪ್ರಸಿದ್ದಿ ಪಡೆದಿತ್ತು. ಪಾಶ್ಚಿಮಾತ್ಯ ದೇಶಗಳೊಡನೆ ವ್ಯಾಪಾರ ವಹಿವಾಟು ಬಹು ಹಿಂದಿನಿಂದಲೂ ಸಾಗರ ಮಾರ್ಗವಾಗಿಯೇ ನಡೆದಿತ್ತು. ಮರಾಠ ನೌಕಾ ಪಡೆಯಂತೂ ಮೂರು ಶತಮಾನಗಳ ಕಾಲ ತನ್ನ ಪಾರುಪತ್ಯ ಸ್ಥಾಪಿಸಿತ್ತು. ಯೂರೋಪಿನ ನೌಕಾಪಡೆಗಳು ಅನೇಕ ಸಲ ಮರಾಠರ ನೌಕಾಪಡೆಗಳೆದುರು ನಿಲ್ಲಲಾರದೆ ಓಡಿ ಹೋಗಿದ್ದವು. ಕನ್ಹೋಜಿ ಆಂಗ್ರೇಯಂತಹ ಸಾಗರ ವೀರ ಎಂದೆಂದಿಗೂ ಅಮರ.
ಭಾರತೀಯ ನೌಕಾಪಡೆ ಜಗತ್ತಿನ ಐದನೇಯ ಅತಿ ದೊಡ್ಡ ನೌಕಾಪಾಡೆಯಾಗಿದ್ದು, ಇದರಲ್ಲಿ ಸುಮಾರು 55,000 ಜನರು ಕಾರ್ಯನಿರತರಾಗಿದ್ದಾರೆ. ಇವರಲ್ಲಿ ಸುಮಾರು 5,000 ಜನ ನೌಕಾ ವಾಯುಪಡೆಗೆ ಸೇರಿದ್ದು ಮತ್ತು ಸುಮಾರು 2೦೦೦ ಜನ ನೌಕಾ ಕಮಾಂಡೋಗಳಾಗಿದ್ದಾರೆ. ಭಾರತೀಯ ನೌಕಾಪಡೆ 155 ನೌಕೆಗಳನ್ನು ಹೊಂದಿದ್ದು, ಐ.ಎನ್.ಎಸ್.ವಿರಾಟ್ ಎಂಬ ವಾಯು ಯುದ್ಧ ನೌಕೆಯನ್ನು ಹೊದಿದೆ. ಸಂಪೂರ್ಣ ಏಷ್ಯಾ ಖಂಡದಲ್ಲಿರುವ ಎರಡು ವಾಯು ಯುದ್ಧ ನೌಕೆಗಳಲ್ಲಿ ಇದು ಒಂದು. ಸ್ವತಂತ್ರ ಭಾರತದ ನೌಕಾಪಡೆ ಇತಿಹಾಸದಲ್ಲಿ ಹಡಗಿನೊಂದಿಗೇ ಜಲಸಮಾಧಿಯಾದ ಹಾಗೂ ಸಾಯುವ ಮೊದಲು 67 ಜನರ ಜೀವ ರಕ್ಷಣೆ ಮಾಡಿದ್ದ ಮೊದಲ ಹಾಗೂ ಏಕೈಕ ಕ್ಯಾಪ್ಟನ್ ಮಹೇಂದ್ರನಾಥ್ ಮುಲ್ಲಾರಂತಹ ವೀರರನ್ನು ಹೊಂದಿದ್ದ ನೌಕಾಪಡೆ ನಮ್ಮದ್ದು.
ಸಿರಿಯಾದಲ್ಲಿ ಶಬ್ದವಿಲ್ಲದ ಯುದ್ಧವಂತೂ ನಡೆಯಲಿದೆ
– ಎಸ್.ಸುನಿಲ್ ಕುಮಾರ್
ರಾಷ್ಟೀಯ ಪ್ರಧಾನ ಕಾರ್ಯದರ್ಶಿ, YOUTH FOR NATION
ಈ ಬಾರಿ ಸಿರಿಯಾ ಮೇಲೆ ಕ್ಷಿಪಣಿ ಯುದ್ಧವೇರ್ಪಟ್ಟರೂ, ಕ್ಷಿಪಣಿ ಬಳಸದೇ ಇದ್ದರೂ ಸೈಬರ್ ಯುದ್ಧವಂತೂ ನಿಶ್ಚಿತವಾಗಿ ನಡೆಯಲಿದೆ. ಇದಕ್ಕೆ ಯಾರ ಅಪ್ಪಣೆಯೂ ಬೇಕಿಲ್ಲ. ಯಾರ ಸಮ್ಮತಿಗೂ ಕಾಯಬೇಕಿಲ್ಲ. ಏಕೆಂದರೆ ಇದೊಂದು ಮಾಯಾಯುದ್ಧ. ಇಲ್ಲಿ ಶತ್ರು ಎಲ್ಲಿರುವನು ಎಂದು ತಿಳಿಯುವುದೇ ಇಲ್ಲ. ದಾಳಿ ನಡೆಯುವುದೆ ಗೊತ್ತಾಗುವುದಿಲ್ಲ, ದಾಳಿ ಎಂದು ಶುರುವಾತು, ಎಲ್ಲಿ ಮುಗಿತು ಒಂದೂ ತಿಳಿಯುವುದಿಲ್ಲ. ತಿಳಿಯುವುದೊಂದೆ ಅದರಿಂದಾಗುವ ಹಾನಿ ಮಾತ್ರ, ಸೈಬರ್ ಯುದ್ಧದ ಪರಿಣಾಮ ಅತ್ಯಂತ ಅಪಾಯಕಾರಿ.
ಜೂನ್ ೨೦೧೦ ರಲ್ಲಿ ಇರಾನಿನ ಅಣುಸ್ಥಾವರಗಳು ಸ್ಟಕ್ಸ್ನೆಟ್ ಎಂಬ ಕಂಪ್ಯೂಟರ್ ವೈರಸ್ ದಾಳಿಂದ ನಿಷ್ಕ್ರಿಯಗೊಳ್ಳುತ್ತದೆ. ನಿರ್ದಿಷ್ಟವಾಗಿ ಅಣುಸ್ಥಾವರದ ಸೆಂಟ್ರಿಫ್ಯೂಜ್ಗಳನ್ನೆ ಗುರಿಯಾಗಿರಿಸಿ ಇರಾನಿನ ಅಣುಶಕ್ತಿ ಉತ್ಪಾದನಾ ಸಾಮರ್ಥ್ಯವನ್ನು ಕುಂಠಿತಗೊಳಿಸಿದ ಸ್ಟಕ್ಸ್ನೆಟ್ ಅಮೆರಿಕಾ ಮತ್ತು ಇಸ್ರೇಲ್ ಸೇರಿ ಇರಾನಿನ ವಿರುದ್ಧ ಬಳಸಲು ತಯಾರಿಸಿದ ಸೈಬರ್ ಅಸ್ತ್ರ ಎಂದು ಜೂನ್ ೧. ೨೦೧೨ ರಂದು “ನ್ಯೂಯಾರ್ಕ್ ಟೈಮ್ಸ್” ವರದಿ ಮಾಡುತ್ತದೆ. ಹಾಗೆಯೆ ಈ ಕಾರ್ಯಾಚರಣೆಯ ಹೆಸರು “ಆಪರೇಷನ್ ಒಲಂಪಿಕ್ ಗೇಮ್ಸ್” ಎಂಬುದನ್ನು ಉಲ್ಲೇಖಿಸುತ್ತದೆ.
ದೇಶವೊಂದು ಯಾವುದೇ ಸೈನಿಕರನ್ನು ಕಳುಹಿಸದೆ, ವಾಯುಪಡೆ ನೌಕಾಪಡೆಗಳನ್ನು ನಿಯೋಜಿಸದೆ ಗುಂಡಿನ ಆರ್ಭಟವೂ ಇಲ್ಲದೆ ಹೇಗೆ ಯುದ್ಧ ಮಾಡಬಹುದು ಹಾಗೂ ಇದರಿಂದ ಹೇಗೆ ಶತ್ರು ರಾಷ್ಟ್ರವನ್ನು ಹಣೆಯಬಹುದೆಂಬ ಪಾಠವನ್ನು ಅಮೆರಿಕಾ ಮತ್ತು ಇಸ್ರೇಲ್ ಜಗತ್ತಿಗೆ ಹೇಳಿಕೊಟ್ಟವು.
“ಕೈ”ಲಾಗದ ಸರ್ಕಾರ ಮತ್ತು ನಮ್ಮ ಕಾಶ್ಮೀರ
– ರಾಕೇಶ್ ಶೆಟ್ಟಿ
ಬಡ ಬೆಸ್ತನೊಬ್ಬನ ಕತ್ತನ್ನು ಸೀಳಿ ಅವನದೇ ಬೋಟನ್ನೇರಿ ೧೦ ಜನರ ಪಾಕಿಸ್ತಾನದ ಸೈತಾನರ ತಂಡ ಗೇಟ್ ವೇ ಆಫ್ ಇಂಡಿಯಾ ಮೂಲಕ ಮುಂಬೈಗೆ ವಕ್ಕರಿಸಿಕೊಳ್ಳುತ್ತದೆ.೧೦ ಜನರಿಂದ ಬೇರ್ಪಟ್ಟ ಇಬ್ಬರು ಮೊದಲಿಗೆ ದಾಳಿಯಿಡುವುದು ’ಲಿಯೋಫೋಲ್ಡ್ ಕೆಫೆ”ಗೆ ಅಲ್ಲಿ ಕಂಡ ಕಂಡಂತೆ ಗುಂಡಿನ ಮಳೆ ಸುರಿಸಿದ ಆ ಇಬ್ಬರು ಪಾಕಿ ಉಗ್ರರು ಅಲ್ಲಿಂದ ರಾಜಾರೋಷವಾಗಿ ಹೊರಡುತ್ತಾರೆ.ಉಗ್ರರ ಕಣ್ಣಿಗೆ ಬೀಳದೆ ಅವಿತು ಕುಳಿತಿದ್ದವನೊಬ್ಬ ಮೆಲ್ಲಗೆ ಬಾಗಿಲ ಸಂದಿಯಿಂದ ರಾಕ್ಷಸರು ಇದ್ದಾರೋ ಅನ್ನುವುದನ್ನು ಖಾತ್ರಿ ಮಾಡಿಕೊಳ್ಳಲು ಇಣುಕಿದಾಗ ಬಾಗಿಲಿಗೆ ಕಲ್ಲೊಂದು ಬಡಿಯುತ್ತದೆ.ಮತ್ತೆ ನೋಡುತ್ತಾನೆ ಊಹೂಂ “ಗುಂಡಲ್ಲ… ಕಲ್ಲು…!”
ಉಗ್ರರು ಅಮಾಯಕರ ರಕ್ತ ಹರಿಸಿ ಅಲ್ಲಿಂದ ರಾಜಾರೋಷವಾಗಿ ಹೊರಟ ಮೇಲೆ ಬೀಟ್ ನಲ್ಲಿದ್ದ ಪೋಲಿಸ್ ಕಾನ್ಸ್ಟೇಬಲ್ ಗಳು ಒಂದು ಕೈಯಲ್ಲಿ ಲಾಠಿ ಹಿಡಿದು ಇನ್ನೊಂದು ಕೈಯಲ್ಲಿ ಕಲ್ಲು ಎಸೆದು ಒಳಗಿನಿಂದ “ಗುಂಡು” ಬರುತ್ತಿಲ್ಲ ಅನ್ನುವುದನ್ನು ಕನ್ಫರ್ಮ್ ಮಾಡಿಕೊಂಡು ಒಳಬರುತ್ತಾರೆ. ಹೇಗಿದೆ ನೋಡಿ ಉಗ್ರನ ಕೈಯಲ್ಲಿ “ಎ.ಕೆ ೪೭” ಅವನೆದುರಿಸಲು ಬಂದ ಪೋಲಿಸಣ್ಣನ ಕೈಯಲ್ಲಿ “ಕಲ್ಲು”…! ಇದು ನಮ್ಮ ಭಾರತದ ಆಂತರಿಕ ರಕ್ಷಣಾ ವ್ಯವಸ್ಥೆಯ ಸ್ಥಿತಿ.ಭಾರತದ ಬಂಡವಾಳವನ್ನು ಸರಿಯಾಗಿಯೇ ಅರಿತಿದ್ದ ಪಾಪಿ ಪಾಕಿಗಳು ಆ ೧೦ ಜನರ ತಂಡವನ್ನು ನುಗ್ಗಿಸಿ ಒಂದಿಡಿ ಭಾರತವನ್ನು ದಿನಗಳ ಮಟ್ಟಿಗೆ ಗಾಬರಿ ಬೀಳಿಸಿದ್ದರು. ಮುಂಬೈ ಮಾರಣ ಹೋಮದ ನಂತರ ಆಗಿದ್ದಾದರೂ ಏನು? ಭಾರತ-ಪಾಕಿಸ್ತಾನಗಳು ಸಮರದಂಚಿಗೆ ಬಂದು ನಿಂತವು.ನಮ್ಮ ಸರ್ಕಾರ “ಹೊಡಿಬೇಡಿ.ಹೊಡೆದ್ರೆ ನೋವಾಗುತ್ತೆ” ಅನ್ನುವಂತೆಯೇ ವರ್ತಿಸಿದ್ದಲ್ಲವೇ? ಅದಕ್ಕಿಂತ ಹೆಚ್ಚೆಂದರೆ “ಹೋಗಿ.ನಾವು ನಿಮ್ಮೊಂದಿಗೆ ನಾವು ಕ್ರಿಕೆಟ್ ಆಡುವುದಿಲ್ಲ” ಅಂದರು ಅಷ್ಟೇ…!
ಇನ್ನು10 ತಿಂಗಳಲ್ಲಿ ಭಾರತ ಚೀನಾ ನಡುವೆ ಸಂಭವನೀಯ ಯುದ್ಧ?
– ಗಣೇಶ್ ಕೆ ದಾವಣಗೆರೆ
ಚೀನಾದ ತಗಾದೆ ಶುರುವಾದಮೇಲೆ ಭಾರತ ೬೪ ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸೇನೆಗೆ ಹೊಸ ಆಯಾಮ ನೀಡುವ ಯೋಜನೆಗೆ ಅಸ್ತು ಎಂದಿದೆ. ಸಾವಿರಾರು ಸೇನೆಯ ತುಕಡಿಗಳನ್ನ ಹೊಂದಿದ ಸ್ಟ್ರೈಕಿಂಗ್ ಕಾರ್ಪ್ ನಿಯೋಜಿಸಲು ಉದ್ದೇಶಿಸಿದೆ. ಹಿಂದಿನ ವಾರದ ದಿ ವೀಕ್ ಪ್ರಕಟಿಸಿರುವ ಸೇನಾ ವಲಯದ ಅಭಿಮತದ ಪ್ರಕಾರ ಚೀನಾ ನಮ್ಮ ಮೇಲೆ ಎರಗಿ ಬರುವುದು ಅಷ್ಟೇನೂ ಸುಲಭದ ಕೆಲಸವೇನಲ್ಲ. ಚೀನೀಯರು ಆಕ್ರಮಣ ಮಾಡಿದರೆ, ಭಾರತವು ಚೀನಾದ ದುರ್ಬಲ ವಲಯಗಳ ಮೇಲೆ ಆಕ್ರಮಣ ಮಾಡಲಿದೆ. ಟಿಬೆಟ್ ಮೂಲಕ ಸಾವಿರಾರು ಕಿಲೋಮೀಟರ್ ಉದ್ದದ ರೈಲು ಮಾರ್ಗ ನಿರ್ಮಿಸಿ ಸೇನೆಯನ್ನ, ಜನರನ್ನ ವಾಯುಪುತ್ರನ ವೇಗದಲ್ಲಿ ಸಾಗಿಸುತ್ತೇವೆ ಎಂದು ಬೀಗುತ್ತಿರುವ ಚೀನಾ ಅದೇ ಕಾರಣಕ್ಕಾಗಿ ಕಳವಳಗೊಂಡಿದೆ. ಟಿಬೆಟ್ನಲ್ಲಿರುವ ರೈಲು ಮಾರ್ಗ ಹಲವಾರು ಸೇತುವೆಗಳನ್ನ ಒಳಗೊಂಡಿದೆ. ಜೊತೆಗೆ ಅಲ್ಲಿ ಬೆಂಗಾಡು. ಎಷ್ಟೇ ಎತ್ತರದಿಂದ ನೋಡಿದರೂ ನೆಲ ಕಾಣುತ್ತದೆ. ನಾಲ್ಕು ಸೇತುವೆಗಳನ್ನ ಒಡೆದು ಹಾಕಿದರೆ ಚೀನೀಯರು ಸೇನೆಯನ್ನ ಜಮಾವಣೆ ಮಾಡಲಿಕ್ಕೆ ರೈಲನ್ನ ಬಳಸಲಿಕ್ಕೆ ಸಾಧ್ಯವೇ ಇಲ್ಲ. ಅವನ್ನ ಮರು ನಿರ್ಮಿಸಿ ರೈಲು ಚಲಿಸುವ ಹೊತ್ತಿಗೆ ವಾರಗಳೇ ಬೇಕಾಗುತ್ತವೆ. ಜೊತೆಗೆ, ಟಿಬೆಟಿನಲ್ಲಿ ಹರಿಯುವ ನದಿಗಳಿಗೆ ರಾತ್ರೋ ರಾತ್ರಿ ಸೇತುವೆಗಳನ್ನ ಕಟ್ಟಿಕೊಡುವ ಕಠಿಣ ಪರಿಶ್ರಮದ, ಚಾಣಾಕ್ಷ, ಸಮರ್ಥ ಎಂಜಿನಿಯರುಗಳ ಬಳಗವಿದೆ ಭಾರತಕ್ಕೆ. ನಮ್ಮ ಸೇನೆಯ ಎಂಜಿನಿಯರುಗಳ ಈ ಎಲ್ಲ ವಿಶೇಷಣಗಳೂ ಮೊನ್ನೆ ಮೊನ್ನೆ ಸಂಭವಿಸಿದ ಉತ್ತರಾಖಂಡದ ಪ್ರಾಕೃತಿಕ ಅವಗಢದ ಸಮಯದಲ್ಲಿ ಸಾಬೀತಾಗಿದೆ.
ಚೀನಿಗಳೊಂದಿಗಿನ ಯುದ್ಧ ಸೈನಿಕ ಕಾರ್ಯಾಚರಣೆಯೇ ಆಗಬೇಕಿಲ್ಲ
– ರಾಕೇಶ್ ಶೆಟ್ಟಿ
ಮೂರುವರೆ ವರ್ಷಗಳ ಹಿಂದಿನ ಮಾತು.ಬಹುಷಃ ೨೦೦೯ರ ನವೆಂಬರ್ ತಿಂಗಳಿರಬಹುದು.ಪ್ರಧಾನಿ ಮ(ಮೌ?)ನಮೋಹನ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.ಅದನ್ನು ಚೀನಾ ಖಡಕ್ ಆಗಿ ವಿರೋಧಿಸಿ, ’ನೀವು ಭಾರತೀಯರು ೧೯೬೨ ರ ಅನುಭವವನ್ನ ಮರೆತಿದ್ದಿರ!’ ಅಂತ ಬಹಿರಂಗವಾಗೇ ಹೇಳುವ ದಾರ್ಷ್ಟ್ಯ ತೋರಿತ್ತು.ಅಂದು ಅದು ಕ್ಯಾತೆ ತೆಗೆದಿದ್ದು ’ತವಾಂಗ್’ ನ ಕುರಿತಾಗಿ.
ಚೀನಿಗಳ ಬೆದರಿಕೆ ಬಗ್ಗೆ ಮಾತಡುವುದಕ್ಕಿಂತ ಮೊದಲು, ಏನಿದು ‘ತವಾಂಗ್’ ಅದಕ್ಕಾಗಿ ಯಾಕಿಷ್ಟು ಕಿತ್ತಾಟ? ಇದು ಯಾರಿಗೆ ಸೇರಿದ್ದು? ಭಾರತೀಯರಿಗೋ? ಚೀನಿಗಳಿಗೋ? ಈ ಮೊದಲು ಇದು ಯಾರಿಗೆ ಸೇರಿತ್ತು? ಅಂತ ನೋಡ ಹೊರಟರೆ, ಐತಿಹಾಸಿಕಾವಾಗಿ ಅಂದರೆ ೧೯೧೪ರಲ್ಲಿ ಬ್ರಿಟಿಷರು ಮೆಕ್-ಮಹೂನ್ ರೇಖೆಯನ್ನ ಗುರುತಿಸುವವರೆಗೂ ಅದು ಆಗಿನ ‘ಟಿಬೆಟ್’ ಗೆ ಸೇರಿತ್ತು. ೧೯೧೪ರಲ್ಲಿ ತವಾಂಗ್ ಅನ್ನು ೧೩ನೆ ಲಾಮ ಭಾರತಕ್ಕೆ ಬಿಟ್ಟು ಕೊಟ್ಟರು.ಆ ನಂತರ ಬಂದ ೧೪ನೆ ಅಂದರೆ ಈಗಿನ ‘ದಲೈ ಲಾಮ’ ಕೂಡ ತವಾಂಗ್ ಅನ್ನು ಭಾರತದ ಅಂಗವೆಂದೇ ಮಾನ್ಯ ಮಾಡಿದರು.
ಆದರೆ ೧೯೫೦ ರ ದಶಕದಲ್ಲಿ ಚೀನಿಗಳು ‘ಟಿಬೆಟ್’ ಅನ್ನು ಆಕ್ರಮಿಸಿಕೊಂಡರಲ್ಲ. ಈಗ ಅವರು ಹೇಳುವುದು , ‘ಒಂದು ಕಾಲದಲ್ಲಿ ತವಾಂಗ್ ಟಿಬೆಟ್ಗೆ ಸೇರಿತ್ತು, ಈಗ ಟಿಬೆಟ್ ನಮಗೆ ಸೇರಿದೆ, ಹಾಗಾಗಿ ಈ ತವಾಂಗ್ ನಮಗೆ ಸೇರಬೇಕು’ ಅಂತ (ಅದರ ಜೊತೆಗೆ ಇರಲಿ ಅಂತ ಇಡಿ ಅರುಣಾಚಲ ಪ್ರದೇಶವನ್ನು ಕೊಡಿ ಅನ್ನುತಿದ್ದಾರೆ).