ಯೋಗದ ಮಹತ್ವ ಹಾಗೂ ಅರಿವು
– ಗೀತಾ ಹೆಗ್ಡೆ
ಈ ದಿನ ಅಂತಃರಾಷ್ಟ್ರೀಯ ಯೋಗ ದಿನ. ಇತ್ತೀಚಿನ ದಿನಗಳಲ್ಲಿ ಈ ಯೋಗದ ಬಗ್ಗೆ ತುಂಬಾ ಪ್ರಚಾರ ಹಾಗೂ ಕಲಿಯುವವರು ಕೂಡಾ ಹೆಚ್ಚಾಗುತ್ತಿರುವುದು ಸಂತೋಷದ ಸಂಗತಿ. ಮತ್ತು ಪುರಾತನ ಕಾಲದ ಈ ವಿದ್ಯೆ ಜನ ಮೈಗೂಡಿಸಿಕೊಂಡು ಯೋಗದ ಮಹತ್ವ ತಿಳಿಯುವತ್ತ ದಾಪುಗಾಲು ಹಾಕುತ್ತಿದ್ದಾರೆ. ಹಾಗೂ ದಿನ ಹೋದಂತೆ ಆರೋಗ್ಯದತ್ತ ಕಾಳಜಿ, ಆಸ್ತೆ, ಔಷಧಿಗಳಿಂದ ಆಗುವ ದುಷ್ಪರಿಣಾಮಗಳು, ಅಯ್ಯೋ! ಹೀಗೆ ಇದ್ದರೆ ಮುಂದೇನಾಗುತ್ತದೊ ಅನ್ನುವ ಮನದೊಳಗಿನ ಗಾಬರಿ ಜನ ಆಹಾರ, ವ್ಯಾಯಾಮ, ವಾಕಿಂಗು, ಯೋಗದ ಕಡೆ ಹೆಚ್ಚು ಹೆಚ್ಚು ವಾಲುತ್ತಿರುವುದು ಹಾಗೂ ತಿಳಿದುಕೊಳ್ಳುವ ಆಸಕ್ತಿ ಅಧಿಕವಾಗುತ್ತಿರುವುದನ್ನು ಕಾಣಬಹುದು. ಮತ್ತಷ್ಟು ಓದು
ಯೋಗದಿನಕ್ಕಾಗಿ ಮೋದಿ ಸರಕಾರದ ವಿಶೇಷ ಶವಾಸನ
– ರೋಹಿತ್ ಚಕ್ರತೀರ್ಥ
ನಮ್ಮ ದೇಶ ಜಾತ್ಯತೀತ ದೇಶ. ಆದರೆ ಹೆಜ್ಜೆಹೆಜ್ಜೆಗೂ ನಿಮಗಿಲ್ಲಿ ನಿಮ್ಮ ಜಾತಿಯ ನೆನಪು ಅಳಿಯದಂತೆ ನೋಡಿಕೊಳ್ಳಲಾಗುತ್ತದೆ. ಶಾಲೆಗೆ ಸೇರುವ ಮೊದಲ ದಿನ ಅಡ್ಮಿಷನ್ ಮಾಡಿಕೊಳ್ಳುವ ಮುಖ್ಯೋಪಾಧ್ಯಾಯರು ಹೆಸರು, ಅಪ್ಪನ ಹೆಸರು, ಜಾತಿ ಎಂದು ಬರೆದ ಅಪ್ಲಿಕೇಶನ್ನನ್ನು ಕಣ್ಣಮುಂದೆ ಹಿಡಿಯುತ್ತಾರೆ. ಪರೀಕ್ಷೆ ಬರೆಯಲು ಅರ್ಜಿ ತುಂಬುವಾಗ ಯಾವ ಜಾತಿ ಎಂದು ಕೆದಕಿ ವಿಚಾರಿಸಿಕೊಂಡು ನೀವು ಕಟ್ಟಬೇಕಾದ ಫೀಸು ನಿರ್ಧರಿಸುತ್ತಾರೆ. ಕೆಲಸಕ್ಕೆ ಹೋಗುವಾಗ ನಿಮ್ಮ ಪದವಿ ಸರ್ಟಿಫಿಕೇಟು ಯಾರಿಗೆ ಬೇಕು ಸ್ವಾಮಿ! ನಾಯಿಯೂ ಮೂಸುವುದಿಲ್ಲ ಅದನ್ನು! ನೀವು ಯಾವ ಜಾತಿ ಹೇಳಿ, ಅದರ ಆಧಾರದ ಮೇಲೆ ನಿಮಗೆ ಕೆಲಸ ಸಿಗುತ್ತದೋ ಇಲ್ಲವೋ ಎನ್ನುವುದು ನಿರ್ಧಾರಿತವಾಗುತ್ತದೆ. ಈ ದೇಶದಲ್ಲಿ ಶಿಕ್ಷಣ, ಉದ್ಯೋಗ, ಮದುವೆ, ಮುಂಜಿ, ಸಾವು, ತಿಥಿಗಳೆಲ್ಲ ನಿರ್ಧಾರವಾಗುವುದು ನಿಮ್ಮ ಜಾತಿಯ ಮೇಲೆ. ಯಾಕೆಂದರೆ ನಾವು ಬದುಕುತ್ತಿರುವುದು ಜಾತ್ಯತೀತ ದೇಶದಲ್ಲಿ ನೋಡಿ!
ಜೂನ್ 21ರಂದು ವಿಶ್ವ ಯೋಗದಿನ ಆಚರಿಸಬೇಕು ಎಂದು ನಮ್ಮ ದೇಶದ ಪ್ರಧಾನಿ ಕರೆಕೊಟ್ಟರು. ಅವರು ಅಲ್ಲಿ ಅದನ್ನು ಹೇಳಿ ಮುಗಿಸಿದ್ದರೋ ಇಲ್ಲವೋ ಇತ್ತ ಜಾತ್ಯತೀತ ಕೋಮುಸೌಹಾರ್ದ ಬಳಗದ ಬುಜೀಗಳಿಗೆ ಕಡಿತ ಶುರುವಾಯಿತು. ಈ ಮೋದಿ ಮಹಾ ಜಾತೀವಾದಿ. ಹಿಂದೂಗಳ ಯೋಗವನ್ನು ಸನಾತನಿಗಳಂತೆಯೇ ಜಾತಿಧರ್ಮಗಳಿಗೆ ಅತೀತರಾದ ಪ್ರಗತಿಪರ ಅಲ್ಪಸಂಖ್ಯಾಕ ಪಂಗಡಗಳಿಗೂ ವಿಸ್ತರಿಸುವ ಯೋಜನೆ ಹಾಕಿದ್ದಾರೆ ಎಂದು ಅವರಿಗೆ ಗುಮಾನಿ ಬಂತು. ಅಷ್ಟಲ್ಲದೆ ಜೂನ್ ಇಪ್ಪತ್ತೊಂದು – ಮುಸ್ಲಿಮರ ಹಬ್ಬ ಬೇರೆ. ಹೋಗಿಹೋಗಿ ಆ ದಿನ ಯೋಗ ಮಾಡುವುದೇ? ಸಾಧ್ಯವೇ ಇಲ್ಲ ಎಂದು ಈ ಅಲ್ಪಸಂಖ್ಯಾತ ಮತದ ನಾಯಕ ಓವೈಸಿ ಕೂಗಿದ. ಅವನ ಹಿಂದೆ ಅವನ ಇಡೀ ಗಾಂಪರ ಗುಂಪೇ ಎದ್ದುನಿಲ್ಲುವ ಸೂಚನೆ ಸಿಕ್ಕಿತು. ಕೇಂದ್ರ ಸರಕಾರ ಈಗ ನಿಜವಾಗಿಯೂ ಇಲ್ಲದ ಇಕ್ಕಳದಲ್ಲಿ ತಲೆ ಸಿಕ್ಕಿಸಿಕೊಂಡಿದ್ದೇನೆಂದು ಸುಳ್ಳೇ ಭಾವಿಸಿ ನಡುಗಿತು. ಯೋಗದಿನ ಮಾಡೋಣ, ಆದರೆ ಸೂರ್ಯನಮಸ್ಕಾರ ಕೈಬಿಡೋಣ ಎಂದು ಠರಾವು ಮಂಡಿಸಿತು. ಮೋದಿ ಹೇಳಿಕೊಟ್ಟಂತೆ ಅವರ ಸರಕಾರದ ಎಲ್ಲ ಮಂತ್ರಿಗಳೂ “ಸೂರ್ಯನಮಸ್ಕಾರ ಕಠಿಣ ಆಸನ. ಹಾಗಾಗಿ, ಅದನ್ನು ಬಿಟ್ಟು ಮಿಕ್ಕಿದ್ದನ್ನು ಮಾಡಲು ಚಿಂತನೆ ನಡೆಸಿದ್ದೇವೆ” ಎಂದು ತಿಪ್ಪೆ ಸಾರಿಸಿದರು.
ಮತ್ತಷ್ಟು ಓದು
ಇಪ್ಪತ್ತನೇ ಶತಮಾನದ ಭಾರತದಲ್ಲಿ ಯೋಗದ ಪುನರುತ್ಥಾನ
– ಶರತ್ ಹರಿಹರಪುರ ಸತೀಶ್
ಪದ್ಮಾಸನದಲ್ಲಿ (ಸಾಧ್ಯವಾದರೆ) ಕುಳಿತು, ಕಣ್ಣು ಮುಚ್ಚಿ ‘ಯೋಗ’ ಎಂಬುದನ್ನು ಮನಸಿನಲ್ಲೇ ಕಲ್ಪಿಸಿಕೊಂಡರೆ ನಿಮ್ಮ ಕಣ್ಣು ಮುಂದೆ ಬರುವ ಚಿತ್ರ ಯಾವುದು? ಟಿವಿಯಲ್ಲಿ ಬರುವ ಒಬ್ಬ ಭಾರತದ ವ್ಯಕ್ತಿಯಾಗಿರಬಹುದು (ಬಾಬಾ ರಾಮದೇವ್, ಫಿಲಂ ತಾರೆ, ಇತ್ಯಾದಿ) ಅಥವಾ ಒಬ್ಬ ಪಾಶ್ಚಾತ್ಯ ದೇಶದ ವ್ಯಕ್ತಿಯೇ ಆಗಿರಬಹುದು ……. ಅಲ್ಲವೇ? ಭಾರತದ ಓರ್ವ ಮಹಾನ್ ವ್ಯಕ್ತಿಯ ಮುಖಚಿತ್ರ ಯಾರಿಗೂ ಕಾಣಿಸುವುದಿಲ್ಲ. ಏಕೆಂದರೆ ಅಂತಹ ಮನುಷ್ಯ ಇದ್ದರು ಎನ್ನುವುದು ಅನೇಕರಿಗೆ ಗೊತ್ತೆಇಲ್ಲ.
ಪತಂಜಲಿ ಮಹರ್ಶಿಗಳು ಯೋಗ ಸೂತ್ರಗಳನ್ನು ಬರೆದು ಸುಮಾರು 2400 ವರ್ಷಗಳೇ ಆಗಿರಬಹುದು. ಮೊದಲಿಗೆ ಮುಸ್ಲಿಮರು, ನಂತರ ಬ್ರಿಟಿಷರ ದಬ್ಬಾಳಿಕೆಯಲ್ಲಿ ನಮ್ಮ ಗುರುಕುಲ ಶಿಕ್ಷಣ ಪದ್ಧತಿ ನಾಶವಾಯಿತು. ಇದರ ಜೊತೆಗೆ ಯೋಗಾಸನದ ವಿದ್ಯೆಯು ಕ್ಷೀಣವಾಯಿತು. ಇಪ್ಪತ್ತನೇ ಶತಮಾದಲ್ಲಿ ಅದಕ್ಕೆ ಪುನರ್ಜೀವ ನೀಡಿದವರೇ ‘ಶ್ರೀ ತಿರುಮಲೈ ಕೃಷ್ಣಮಾಚಾರ್ಯ’. ಇಡೀ ವಿಶ್ವದಲ್ಲಿ ಕೋಟ್ಯಾಂತ ಜನರು ವಿವಿಧ ಶೈಲಿಗಳಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಮೂಲ 125ಕ್ಕೂ ಹೆಚ್ಚು ವರುಷಗಳ ಹಿಂದೆ ಜನಿಸಿದ ಕೃಷ್ಣಮಾಚಾರ್ಯರು.
ಚಿತ್ರದುರ್ಗದಲ್ಲಿ ಜನಿಸಿದ ಕೃಷ್ಣಮಾಚಾರ್ಯರು (18 ನವೆಂಬರ್ 1888 – 28 ಫೆಬ್ರುವರೀ 1989) ಸಂಸ್ಕೃತ ಮತ್ತು ವೇದಗಳ ಜೊತೆಗೆ, ತಮ್ಮ ತಂದೆಯವರಾದ ‘ಶ್ರೀ ತಿರುಮಲೈ ಶ್ರೀನಿವಾಸ ತಾತಾಚಾರ್ಯ’ ಅವರಿಂದ ಯೋಗ ಹಾಗೂ ಪ್ರಾಣಾಯಾಮವನ್ನು ಕಲಿತರು. ಮೈಸೂರು, ಪಟ್ನಾ ಹಾಗೂ ಕಾಶಿಯಲ್ಲಿ ಶಡ್ದರ್ಶನಗಳಲ್ಲಿ ಪಾಂಡಿತ್ಯ ಪಡೆದರು. ಮಾನಸ ಸರೋವರದ ಬಳಿ ಒಂದು ಗುಹೆಯಲ್ಲಿ ವಾಸವಾಗಿದ್ದ ‘ರಾಮ ಮೋಹನ ಬ್ರಹ್ಮಚಾರಿ’ ಅವರಿಂದ ಕೂಡ ವಿದ್ಯೆ ಸ್ವೀಕರಿಸಿದರು.
ನಂತರ ಮೈಸೂರಿಗೆ ಹಿಂದುರಿಗಿ ಶ್ರೀಕೃಷ್ಣ ರಾಜ ಒಡೆಯರ್-೪ ಅವರ್ ಆಸ್ಥಾನ ವಿದ್ವಾಂಸರಾದರು. ಮಹಾರಾಜರ ಪ್ರೋತ್ಸಾಹದಲ್ಲಿ ಭಾರತದಾದ್ಯಂತ ಉಪನ್ಯಾಸಗಳನ್ನು ನೀಡುವುದರ ಜೊತೆಗೆ ಯೋಗಾಸವನ್ನೂ ಪ್ರದರ್ಶಿಸಿದರು. ಇದರ ಮಧ್ಯೆ ಆಚಾರ್ಯರು ಅನೇಕ ಪುಸ್ತಕಗಳನ್ನು ಬರೆದರು. ಅದರಲ್ಲಿ ಮುಖೈವಾದುದು ‘ಯೋಗ ಮಕರಂದ’, ‘ಯೊಗಾಸನಗಳು’, ‘ಯೋಗ ರಹಸ್ಯ’ ಮತ್ತು ‘ಯೋಗವಲ್ಲಿ’. 1933ರಲ್ಲಿ ಜಗನ್ಮೋಹನ ಅರಮನೆಯಲ್ಲಿ ಯೋಗಾಶಾಲೆಯೊಂದನ್ನೂ ಆರಂಭಿಸಿದರು. ದುರಾದ್ರುಷ್ಟವಶ ಈ ಯೋಗಾಶಾಲೆಯನ್ನು ಸ್ವಾತಂತ್ರ ಭಾರತದ ಮೈಸೂರಿನ ಮೊದಲ ಮುಖ್ಯ ಮಂತ್ರಿಯಾದ ಕೆ.ಸಿ.ರೆಡ್ಡಿಯವರು ಮುಚ್ಚಿಸಿದರು. ಅದರ ಕಾರಣ ಆಚಾರ್ಯರು ಮೈಸೂರಿನಿಂದ ಬೆಂಗಳೂರಿಗೆ ಅನಂತರ ಮದ್ರಾಸಿಗೆ ತೆರಳಿದರು. ಮದ್ರಾಸಿನಲ್ಲಿ ಕೆಲ ಕಾಲ ವಿವೇಕಾನಂದ ಕಾಲೆಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದರು. 1989ರಲ್ಲಿ ತಮ್ಮ ಪಾರ್ಥಿವ ಶರೀರವನ್ನು ತ್ಯಜಿಸಿದರು.
ದೇಹಾಂತರದ ಪಯಣ
– ರಾಜ್ ಕುಮಾರ್
ನನ್ನ ಬಾಲ್ಯದ ಒಂದು ಘಟನೆ. ನಮ್ಮ ಊರಿನ ದೊಡ್ಡ ಮನೆಯಲ್ಲಿ ಬಾವಿಯೊಂದನ್ನು ತೊಡುವ ಬಗ್ಗೆ ಹಿರಿಯರು ನಿರ್ಧರಿಸಿಬಿಟ್ಟರು. ಇನ್ನೇನು ನೀರು ತೋರಿಸುವುದಕ್ಕೊಸ್ಕರ ಒಬ್ಬರು ಬಂದೇ ಬಿಟ್ಟು ಕೈಯಲ್ಲಿ ಬೆತ್ತವೊಂದನ್ನು ಹಿಡಿದುಕೊಂಡು ಕೈ ಅತ್ತಿತ್ತ ತಿರುಗಿಸುತ್ತಾ ಗುಡ್ಡೆ ಎಲ್ಲ ತಿರುಗಿ ತಿರುಗಿ ಪಾದೆ ಕಲ್ಲಿನ ಮೇಲೆ ನಿಂತು ಅಲ್ಲೇ ಗುರುತು ಮಾಡಿಬಿಡುವಂತೆ ಹೇಳಿದರು. ಕರ್ರಗಿನ ಪಾದೆ ಆ ಬೇಸಿಗೆ ಕಾಲದ ಬಿಸಿಲಿಗೆ ಕಾದು ಬರಿ ಕಾಲಲ್ಲಿ ನಿಲ್ಲುವ ಹಾಗಿರಲಿಲ್ಲ. ಸುಡುತ್ತಿತ್ತು. ನಮಗೆಲ್ಲ ಅಶ್ಚರ್ಯ. ಇಲ್ಲಿ ಈ ಕಲ್ಲಿನಲ್ಲಿ ನೀರು ಸಿಗುವುದೇ? ಮಣ್ಣಿನ ಅಂಶ ಲವಲೇಶವೂ ಇಲ್ಲದ ಈ ಬರಡು ಜಾಗದಲ್ಲಿ ನೀರು ಸಿಗಬಹುದೇ? ಆಶ್ಚರ್ಯ. ನಮಗೆಲ್ಲಿ ಅರಿವಿತ್ತು. ಪ್ರಕೃತಿ ಇಂತಹ ಹಲವು ವಿಸ್ಮಯ ನಿಗೂಢತೆಗಳನ್ನು ಬಸಿರಲ್ಲಿರಿಸಿದೆ ಎಂದು.
ಬಾವಿ ತೋಡುವ ಕೆಲಸ ಆರಂಭವಾಯಿತು. ಅಲ್ಲಿ ನೆಲವನ್ನು ಸಾಕಷ್ಟು ಸಜ್ಜುಗೊಳಿಸಿ ವೃತ್ತಾಕಾರದಲ್ಲಿ ಆಕಾರವನ್ನು ಒಂದೆರಡು ಆಳುಗಳು ಅಗೆಯುವುದಕ್ಕೆ ಆರಂಭಿಸಿದರು.ನಾಲ್ಕು ಸಲ ಗುದ್ದಲಿ ಎತ್ತಿ ಅಗೆದಾಗ ಸಣ್ಣ ಚಿಪ್ಪು ಹಾರಿ ಬರುತ್ತಿತ್ತು. ಇಂತಹ ಕಠಿಣ ಸ್ಥಳದಲ್ಲಿ ನೀರು ಸಿಗಬಹುದೇ ನಮಗೆಲ್ಲ ಆಶ್ಚರ್ಯವಾಗುತ್ತಿತ್ತು. ಪ್ರಕೃತಿಯ ವಿಸ್ಮಯಕ್ಕೆ ಕುತೂಹಲವಾಗುತ್ತಿತ್ತು. ದಿನವಿಡೀ ಅಗೆದರೂ ಅರ್ಧ ಅಡಿಗಿಂತ ಹೆಚ್ಚು ಅಗೆಯಲು ಸಾಧ್ಯವಾಗದ ಸ್ಥಳದಲ್ಲಿ ನೀರಿದೆ ! ಎಂತಹ ವಿಸ್ಮಯ. ದಿನ ಕಳೆದಂತೆ ಕಲ್ಲಿನಂಶ ಕಡಿಮೆಯಾಗಿ ಕಲ್ಲು ಮೆತ್ತಗಾಗುವ ಭಾಸವಾಗುತ್ತಿತ್ತು.. ಕಲ್ಲು ಕರಗಿ ಮಣ್ಣಾದಂತೆ ನಿಧಾನವಾಗಿ ಭೂಗರ್ಭದೊಳಗೆ ನೀರಿನ ಗಮ್ಯದೆಡೆಗಿನ ಪಯಣ ಸಾಗುವಂತಿತ್ತು. ಆರಂಭದಲ್ಲಿ ಇರದಿದ್ದ ವಿಶ್ವಾಸ, ವಿಸ್ಮಯ ವಾಸ್ತವದಲ್ಲಿ ಸತ್ಯವಾಗುವ ಭಾವನೆಯನ್ನು ಮೂಡಿಸಿತು. ಕಲ್ಲು ಕರಗಿ ಮಣ್ಣಾಗಿ ಮುಂದೊಂದು ದಿನ ಅಂತರಂಗ ಗಂಗೆಯ ದರ್ಶನವಾದಾಗ ಸಂತಸಕ್ಕೆ ಪಾರವಿರಲಿಲ್ಲ